Subscribe to Updates
Get the latest creative news from FooBar about art, design and business.
- ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
- ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್ ಆರ್ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
- ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
- ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
- ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
- ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
- ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
Author: admin
ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೆ ಮೊದಲು ಅಂದರೆ ನವೆಂಬರ್ 18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದ್ದು, ನಿಷೇಧಿತ ತುರಾಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಲಭ್ಯವಾಗಿದೆ. ನ. 19 ರ ಸಂಜೆ ಮಂಗಳೂರಿನಲ್ಲಿ ಬ್ಲಾಸ್ಟ್ ಆಗಿತ್ತು. 18ರಂದು ಬಂಟ್ವಾಳದ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 2, ಉಡುಪಿಯ ಒಂದು, ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಮಾಡಿರುವ ಲೊಕೇಷನ್ ಅನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿವೆ. ಶಂಕಿತ ಉಗ್ರ ಶಾರೀಕ್ ಕರಾವಳಿಯ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಕದ್ರಿ ಮಂಜುನಾಥ, ಮಂಗಳಾದೇವಿ, ಕುದ್ರೋಳಿ ದೇವಸ್ಥಾನವನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದೂ ಸಂಘಟನೆಗಳು ದೇವಾಲಯದ ಮುಂಭಾಗ ಮುಸ್ಲಿಮರ ವ್ಯಾಪಾರದ ವಿರುದ್ದ ಸಿಡಿದೆದ್ದಿದ್ದರು. ಇದೇ ಕಾರಣಕ್ಕೆ ದೇವಸ್ಥಾನಗಳನ್ನೇ ಉಗ್ರ ಟಾರ್ಗೆಟ್ ಮಾಡಿದನಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕುಕ್ಕರ್…
ಮನೆ ಬಿಟ್ಟು ಬಂದು ಮದುವೆ ಆಗಿದ್ದ ಯುವ ಪ್ರೇಮಿಗಳು ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣದಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಪರಸ್ಪರ ಪ್ರೀತಿಸ್ತಿದ್ದ ಯುವಕ– ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ಸದ್ಯ ಇವರ ಮೃತದೇಹ ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಫೋನ್ ಪೇ, ಗೂಗಲ್ ಪೇ , ಪೇಟಿಎಂ ಸೇರಿದಂತೆ ಯುಪಿಐ ಪಾವತಿ ಆ್ಯಪ್ ವಹಿವಾಟುಗಳಿಗೆ ಮಿತಿ ವಿಧಿಸುವ ಕುರಿತು ಭಾರತದ ರಾಷ್ಟ್ರೀಯ ಪಾವತಿಗಳ ನಿಗಮವು ಭಾರತೀಯ ರಿಸರ್ವ್ ಬ್ಯಾಂಕ್ ಜೊತೆಗೆ ಸಮಾಲೋಚನೆ ನಡೆಸಿದೆ. ವರದಿಗಳ ಪ್ರಕಾರ ಥರ್ಡ್ ಪಾರ್ಟಿ ಆ್ಯಪ್ ಪೂರೈಕೆದಾರರಿಗೆ (ಟಿಪಿಎಪಿ) ಶೇ.30ರಷ್ಟು ವಹಿವಾಟಿನ ಮಿತಿ ವಿಧಿಸುವಂತೆ ಎನ್ ಪಿಸಿಐ ನವೆಂಬರ್ ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಡಿಜಿಟಲ್ ಪಾವತಿ ಆ್ಯಪ್ ವಲಯದಲ್ಲಿ ಗೂಗಲ್ ಪೇ ಹಾಗೂ ಫೋನ್ ಪೇ ಶೇ.80ರಷ್ಟು ಮಾರುಕಟ್ಟೆ ಪಾಲು ಹೊಂದಿವೆ. ಇಲ್ಲಿಯ ತನಕ ಡಿಜಿಟಲ್ ಪಾವತಿ ಆ್ಯಪ್ ಬಳಸಿ ಎಲ್ಲ ಕಡೆ ಪಾವತಿ ಮಾಡಿರೋರಿಗೆ ಮಿತಿ ಹೆಚ್ಚಳದಿಂದ ತೊಂದರೆಯಾಗಲಿದೆ. ಡಿಜಿಟಲ್ ಪಾವತಿ ಆ್ಯಪ್ ವಹಿವಾಟುಗಳಿಗೆ ಗರಿಷ್ಠ ಮಿತಿ ವಿಧಿಸುವ ಸಂಬಂಧ ನಡೆದ ಸಭೆಯಲ್ಲಿ ಭಾರತದ ರಾಷ್ಟ್ರೀಯ ಪಾವತಿಗಳ ನಿಗಮ ಅಧಿಕಾರಿಗಳ ಜೊತೆಗೆ ಹಣಕಾಸು ಸಚಿವಾಲಯ ಹಾಗೂ ಆರ್ ಬಿಐ ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ಮಿತಿ ವಿಧಿಸುವ ಕುರಿತು ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಯುಪಿಐ…
ಮೈಸೂರಿನ ಕೆ.ಆರ್.ನಗರ ತಾಲೂಕಿನ ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಜೊತೆಯಾಗಿದ್ದಾರೆ. ರಾಮೇಗೌಡ(75), ಗೌರಮ್ಮ(70) ಮೃತ ದಂಪತಿ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ರಾಮೇಗೌಡ ಮೃತಪಟ್ಟಿದ್ದಾರೆ. ಪತಿ ಮನೆಗೆ ಬಾರದ ಕಾರಣ ಗೌರಮ್ಮ ಜಮೀನಿಗೆ ಹೋಗಿ ನೋಡಿದಾಗ ಪತಿ ಶವವಾಗಿದ್ದರು. ಇದನ್ನು ಕಂಡು ಆಕೆ ಆಘಾತದಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದ್ರೆ ರಾಮೇಗೌಡ ರ ಅಂತ್ಯಸಂಸ್ಕಾರದ ವೇಳೆ ಗೌರಮ್ಮ ಮೃತಪಟ್ಟಿದ್ದಾರೆ. ಗ್ರಾಮಸ್ಥರು ಅಕ್ಕಪಕ್ಕದಲ್ಲೇ ದಂಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಒಂಟಿಯಾಗಿ ಬರುವ ಮಹಿಳೆಯರಿಗೆ ದಿಲ್ಲಿಯ ಜಾಮಾ ಮಸೀದಿ ಆಡಳಿತ ಪ್ರವೇಶ ನಿರಾಕರಿಸಿದೆ. ಒಂಟಿಯಾಗಿ ಬರುವ ಮಹಿಳೆಯರಿಗೆ ಮಾತ್ರವೇ ನಿರ್ಬಂಧ ಅನ್ವಯವಾಗುತ್ತದೆ. ಕುಟುಂಬದೊಂದಿಗೆ ಅಥವಾ ಪತಿಯೊಂದಿಗೆ ಬರುವ ಮಹಿಳೆಯರಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಜಾಮಾ ಮಸೀದಿ ಪಿಆರ್ಒ ಸಬಿವುಲ್ಲಾ ಖಾನ್ ಸ್ಪಷ್ಟಪಡಿಸಿದ್ದಾರೆ. ಮಸೀದಿ ಆವರಣದಲ್ಲಿ ನಡೆಯುವ ಅನುಚಿತ ವರ್ತನೆಗಳಿಗೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿಸಿದ್ದಾರೆ. ಮಸೀದಿಗೆ ಮಹಿಳೆಯರು ಪ್ರವೇಶಿಸದಂತೆ ನಿಷೇಧ ಹೇರಿಲ್ಲ. ಮಹಿಳೆಯರು ಒಬ್ಬಂಟಿಯಾಗಿ ಬಂದಾಗ ಅನುಚಿತವಾಗಿ ವರ್ತಿಸುವುದು, ಟಿಕ್ ಟಾಕ್ಅಥವಾ ಡಾನ್ಸ್ವಿಡಿಯೊಗಳನ್ನು ಚಿತ್ರೀಕರಿಸುವುದು ವರದಿಯಾಗುತ್ತಿವೆ. ಇವುಗಳಿಗೆ ತಡೆಯೊಡ್ಡುವುದಕ್ಕಾಗಿ ನಿಷೇಧ ಹೇರಲಾಗಿದೆ. ಕುಟುಂಬದೊಂದಿಗೆ ಬರುವವರಿಗೆ ಅಥವಾ ದಂಪತಿಗೆ ಯಾವುದೇ ನಿರ್ಬಂಧ ಇಲ್ಲ. ಧಾರ್ಮಿಕ ತಾಣವನ್ನು ಹುಡುಗರು, ಹುಡುಗಿಯರ ಭೇಟಿ ಸ್ಥಳವನ್ನಾಗಿಸುವುದು ತರವಲ್ಲ ಎಂದು ಹೇಳಿದ್ದಾರೆ. ಮಸೀದಿಯ ಈ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ದಿಲ್ಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಅಧ್ಯಕ್ಷೆ ಸ್ವಾತಿ ಮಲಿವಾಲ್ಅಸಮಾಧಾನ ವ್ಯಕ್ತಪಡಿಸಿದ್ದು, ವಿವರಣೆ ಕೇಳಿ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
30 ವರ್ಷದ ಹಿಂದೆ ಶೈತ್ಯೀಕರಿಸಲಾಗಿದ್ದ ಭ್ರೂಣದಿಂದ ಯುಎಸ್ ನ ರಾಚೆಲ್ ರಿಡ್ಜ್ವೇ ಮತ್ತು ಫಿಲಿಪ್ ರಿಡ್ಜ್ವೇ ದಂಪತಿ ಅವಳಿ ಮಕ್ಕಳನ್ನು ಪಡೆದು ಸುದ್ದಿಯಾಗಿದ್ದಾರೆ. ಅಮೇರಿಕಾದ ಒರೆಗಾನ್ ದಂಪತಿಗೆ ಜನಿಸಿದ ಮಕ್ಕಳು ಈ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಹಿಂದಿನ ದಾಖಲೆಯಲ್ಲಿ ಮೊಲ್ಲಿ ಗಿಬ್ಸನ್ 27 ವರ್ಷ ಸಂಗ್ರಹವಾಗಿದ್ದ ಭ್ರೂಣದಿಂದ 2020 ರಲ್ಲಿ ಅವಳಿ ಮಕ್ಕಳನ್ನು ಪಡೆದಿದ್ದರು. ಸದ್ಯ ಒರೆಗಾನ ದಂಪತಿಗೆ ಜನಿಸಿದ ಮಕ್ಕಳನ್ನು ವಿಶ್ವದ ಅತ್ಯಂತ ಹಳೆಯ ಮಕ್ಕಳು ಎಂದು ಕರೆಯಲಾಗುತ್ತಿದೆ. ಹೆಣ್ಣು ಮಗು ಲಿಡಿಯಾ 5 ಪೌಂಡ್, 11 ಔನ್ಸ್, (2.5 ಕೆಜಿ) ಗಂಡು ಮಗು ತಿಮೋತಿ 6 ಪೌಂಡ್, 7 ಔನ್ಸ್ (2.92 ಕೆಜಿ) ತೂಕವಿತ್ತು. ಈಗಾಗಲೇ 8, 6, 3 ಮತ್ತು 2 ವರ್ಷ ನಾಲ್ಕು ಮಕ್ಕಳನ್ನು ಹೊಂದಿರುವ ರಿಡ್ಜ್ವೇಸ್ ದಾನ ಪಡೆದ ಭ್ರೂಣಗಳನ್ನು ಬಳಸಿಕೊಂಡು ಹೆಚ್ಚಿನ ಮಕ್ಕಳನ್ನು ಪಡೆದಿದ್ದಾರೆ. ದಾನಿಗಳಿಂದ ಭ್ರೂಣಗಳನ್ನು ಏಪ್ರಿಲ್ 22, 1992 ರಂದು ಫ್ರೀಜ್ ಮಾಡಲಾಗಿತ್ತು, 2007 ರವರೆಗೆ ವೆಸ್ಟ್ ಕೋಸ್ಟ್ ಫರ್ಟಿಲಿಟಿ…
ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆತನ ಸೋದರ ತೀವ್ರ ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ನಡೆದ ಆದರ್ಶ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಬೈಕ್ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮುಸ್ಲಿಂ ಸಹೋದರರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಹಲವೆಡೆ ಜನರು ಗುಂಪು ಕಟ್ಟಿಕೊಂಡು ಆಕ್ರೋಶ ಹೊರಹಾಕಲಾರಂಭಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಿಲ್ವಾರಾ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹವಾ ಸಿಂಗ್ ಘುಮಾರಿಯಾ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಅವರ ಸಹೋದರನನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಮಹಾತ್ಮಾ ಗಾಂಧಿ ಕ್ರಾಸಿಂಗ್, ಬದ್ಲಾ ಚೌರಾಹಾ, ಭೀಮಗಂಜ್, ಸಿಟಿ ಕೊತ್ವಾಲಿ ಸೇರಿದಂತೆ ಹಲವೆಡೆ ನಗರದಲ್ಲಿ…
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ರೋಡಲ್ಲಿ ಯಮಗುಂಡಿ, ಬಿದ್ರೆ ಜೀವನ ಬಂಡಿ ಪೋಸ್ಟರ್ ಬಿಡುಗಡೆ ಮಾಡಿದ್ದು, ಪೋಸ್ಟರ್ ನಲ್ಲಿ ಸಿಎಂ ಯಮನಂತೆ ಬಿಂಬಿಸಿದೆ. ಈ ಮೂಲಕ ವಿವಿಧ ಚಿತ್ರಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಅಭಿಯಾನ ನಡೆಸಿದೆ. ಮತ್ತೊಂದು ಪೋಸ್ಟರ್ ನಲ್ಲಿ ಕಿಲಾಡಿ ಜೋಡಿ ಎಂದು ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥನಾರಾಯಣ ಅವರ ಪೋಸ್ಟರ್, ಸರ್ವರ್ ಸೋಮಣ್ಣ ಹೆಸರಲ್ಲಿ ಸಚಿವ ಸೋಮಣ್ಣ, ಚಪಲ ಚನ್ನಿಗರಾಯ ಎಂದು ರಮೇಶ್ ಜಾರಕಿಹೊಳಿ ಪೋಸ್ಟರ್, ಅಡುಗೆ ಭಟ್ಟರಂತೆ ಸಚಿವ ಬಿ.ಸಿ.ನಾಗೇಶ್ ಪೋಸ್ಟರ್ ಪ್ರಕಟಿಸಿದೆ. ಈ ಮೂಲಕ ಕಾಂಗ್ರೆಸ್ ವಿಭಿನ್ನ ರೀತಿಯ ಪೋಸ್ಟರ್ ಅಭಿಯಾನದ ಮೂಲಕ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅಣಕವಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಂಗಳೂರು : ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಕೆನೆಭರಿತ ಹಾಲಿನ ಪುಡಿ ಬದಲಿಗೆ ಟೆಟ್ರಾ ಪ್ಯಾಕೆಟ್ ನಲ್ಲಿ ಹಾಲು ವಿತರಿಸಲು ಕೆಎಂಎಫ್ ನಿರ್ಧರಿಸಿದೆ. ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕೆಟ್ ನಲ್ಲಿನ ಹಾಲು ವಿತರಿಸಲು ಕೆಎಂಎಫ್ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಬಜೆಟ್ ನಲ್ಲಿ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆಗೆ ಹಸಿರು ನಿಶಾನೆ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹಾಲಿನ ಪೌಡರ್ ವಿತರಿಸುವಲ್ಲಿ ಸಾಲು ಸಾಲು ಲೋಪಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಂಗಳೂರು: ನವೆಂಬರ್ 26 ಸಂವಿಧಾನ ಅರ್ಪಣೆ ದಿನ ಹಾಗೂ ಜನವರಿ 26ರ ಸಂವಿಧಾನ ಜಾರಿಯಾದ ದಿನಗಳ ಅಂಗವಾಗಿ ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಹೊಸ ಸಂವಿಧಾನ ಗೀತೆ ಬಿಡುಗಡೆಯಾಗಿದೆ. ಈ ಗೀತೆಯನ್ನು ಸೋಸಲೆ ಗಂಗಾಧರ್ ಅವರು ರಚಿಸಿ ರಾಗ ಸಂಯೋಜನೆ ಮಾಡಿದ್ದಾರೆ. ಡಾ.ಶಿವಕುಮಾರ್, ಸಿದ್ದೇಶ್ ಬದನವಾಳು ಗಾಯನ ಮಾಡಿದ್ದಾರೆ. ಎಂ.ಎಸ್.ಮಾರುತಿ ಸಂಗೀತ ನೀಡಿದ್ದಾರೆ. ಹರಿರಾಮ್ ಎ. ನಿರೂಪಿಸಿದ್ದಾರೆ. ಸುನೀಲ್ ಬಾಫುಲೆ ಆರ್ಥಿಕ ಸಹಕಾರ ನೀಡಿದ್ದಾರೆ. ಅಶ್ವಿನ್ ಚೆಂಡ್ತಿಮಾರ್ ಛಾಯಾಗ್ರಹಣ ಮಾಡಿದ್ದು, ವಿನಯ್ ಕುಮಾರ್ ಎ. ಸಂಕಲನದಲ್ಲಿ ಈ ಹಾಡು ಮೂಡಿ ಬಂದಿದೆ. ಪದ್ಮಪಾಣಿ ಮ್ಯೂಸಿಕ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಈಗಾಗಲೇ ಈ ಗೀತೆ ಬಿಡುಗಡೆಗೊಂಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಈ ಹಾಡಿಗೆ ಹೆಚ್ಚಿನ ಮಹತ್ವ ದೊರೆತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz