Author: admin

ನಾಡಹಬ್ಬ ಮೈಸೂರು ದಸರಾದಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಗಜಪಡೆಯ ಭಾಗವಾಗಿದ್ದ ಗೋಪಾಲಸ್ವಾಮಿ (40) ಆನೆ ಕಾಡಾನೆ ದಾಳಿಗೆ ಬಲಿಯಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಹೋಬಳಿ ಬಳಿ ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಗೋಪಾಲಸ್ವಾಮಿ ಆನೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಇತ್ತೀಚೆಗಷ್ಟೇ ನಡೆದ ದಸರಾ ಮಹೋತ್ಸವದಲ್ಲೂ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ ಎಂಬ ಆನೆ ಎಲ್ಲರ ಗಮನ ಸೆಳೆದಿತ್ತು. ಗೋಪಾಲಸ್ವಾಮಿ ಆನೆಯನ್ನು ಮೇಯಲು ಬಿಟ್ಟಿದ್ದ ವೇಳೆ ಕೊಡಗಿನ ಭಾಗದಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆ (ಅಯ್ಯಪ್ಪ) ನಡುವೆ ಗುದ್ದಾಟ ನಡೆದಿದೆ. ಕಾಲರ್ ಐಡಿ ಅಳವಡಿಸಲಾಗಿದ್ದ ಅಯ್ಯಪ್ಪ ಆನೆಯ ದಾಳಿಗೆ ಸಿಲುಕಿದ ಗೋಪಾಲಸ್ವಾಮಿಗೆ ಕಾಲು ಮುರಿದಿದೆ. ಈ ವೇಳೆ ದಂತದಿಂದ ಅಯ್ಯಪ್ಪ ಮನ ಬಂದಂತೆ ತಿವಿದು ದಾಳಿ ನಡೆಸಿದ್ದರಿಂಧ ತೀವ್ರ ರಕ್ತಸ್ರಾವಕ್ಕೊಳಗಾದ ಆನೆ ಚಿಂತಾಜನಕ ಸ್ಥಿತಿಗೆ ತಲುಪಿತು. ಗೋಪಾಲಸ್ವಾಮಿ ಆನೆಯ ಮಾವುತ ಮಂಜು ಹಾಗೂ ಕಾವಾಡಿ ಆನೆಯನ್ನು ಕರೆತರಲು ಕಾಡಿಗೆ ಹೋದ ವೇಳೆ ಕಾದಾಟವನ್ನು ಕಣ್ಣಾರೆ ಕಂಡು ಆನೆಯನ್ನು ಬೆದರಿಸಲು ಹೋಗುತ್ತಿದ್ದಂತೆ ಅವರ ಮೇಲೆಯೇ…

Read More

ಮಕ್ಕಳಿಲ್ಲದ ಕೊರತೆ ನೀಗಿಸಲು ಹರಕೆ ಹೊತ್ತು ಬರುತ್ತಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದೆ. ನರಗುಂದ ತಾಲ್ಲೂಕಿನ ಬೈರನಹಟ್ಟಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ಸಹದೇವಪ್ಪ ಮತ್ತು ದೀಪಾ ದೇವರಮನೆ (36) ಮೃತಪಟ್ಟ ದುರ್ದೈವಿಗಳು. 15 ವರ್ಷಗಳಿಂದ ಮಕ್ಕಳಿಲ್ಲದ ಕಾರಣಕ್ಕೆ ದೇವರಿಗೆ ಹರಕೆ ಹೊತ್ತು ಬೈಕ್ ನಲ್ಲಿ ಬರುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಭಸ್ಮಗೊಂಡಿವೆ. ಮಕ್ಕಳಿಗಾಗಿ ಹರಕೆ ಹೊರಲು ಸಹದೇವಪ್ಪ ಮತ್ತು ದೀಪಾ ಬೈಕ್ ನಲ್ಲಿ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಬುಧವಾರ ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಮಹಿಂದ್ರಾ TUV-300 ಕಾರು ಸರ್ವಿಸ್‌ಗಾಗಿ ಹುಬ್ಬಳ್ಳಿಗೆ ಹೊರಟಿತ್ತು. ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸಹ ಗಾಯಗೊಂಡಿದ್ದು, ಅವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

Read More

ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕಟ್ಟಿಗೆಯಿಂದ ಬಡಿದು ಪತಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಅವೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅವರೇಹಳ್ಳಿ ಗ್ರಾಮದ ನಿವಾಸಿ ಬೋರಯ್ಯ ಮಂಗಳವಾರ ತಡರಾತ್ರಿ 4ನೇ ಪತ್ನಿ ಭದ್ರಮ್ಮನ ಹತ್ಯೆಗೈದಿದ್ದಾನೆ. ಗ್ರಾಮದ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೋರಯ್ಯ ತಡರಾತ್ರಿ ಪತ್ನಿ ಜೊತೆ ಕುಡಿದು ಜಗಳವಾಡಿದ್ದು, ಕುಡಿದ ಮತ್ತಿನಲ್ಲಿ ಬಡಿಗೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಈ ಮೊದಲು ಬೋರಯ್ಯ ತನ್ನ ಎರಡನೇ ಪತ್ನಿಯನ್ನು ಸಹ 2014ರಲ್ಲಿ ಇದೇ ರೀತಿ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ 6 ವರ್ಷಗಳ ಕಾಲ ಶಿಕ್ಷೆ ಅನುಭವಿಸಿ ಹೊರಬಂದು ಭದ್ರಮ್ಮಳನ್ನು ಮದುವೆಯಾಗಿದ್ದ. ಈ ಮಧ್ಯೆ ಎರಡನೇ ಪತ್ನಿ ಬದುಕಿರುವಾಗಲೇ ಇನ್ನೊಂದು ಮದುವೆ ಆಗಿದ್ದ. ಇದೀಗ ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಈ ಪ್ರೀತಿಯ ಪರಾಕಾಷ್ಠೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ತನ್ನ ಪ್ರಿಯತಮನ ಫೋನ್‌ ಅನ್ನು ಬೇರೆ ಹುಡುಗಿ ರಿಸೀವ್‌ ಮಾಡಿದಳೆಂಬ ಕಾರಣಕ್ಕೆ ಪ್ರೇಯಸಿ ಆತನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಬಿಟ್ಟಿದ್ದಾಳೆ. ಪ್ರಿಯತಮನ ಮನೆಗೆ ಬೆಂಕಿ ಹಚ್ಚಿದ ಸೆನೈಡಾ ಮೇರಿ ಸೋಟೋ ಎಂಬ ಹುಡುಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಗೆ ಬೆಂಕಿ ಹಚ್ಚುವುದಕ್ಕೂ ಮೊದಲು ಗೆಳೆಯನ ಮನೆಯಲ್ಲಿ ಹಲವು ವಸ್ತುಗಳನ್ನು ಮೇರಿ ಸೋಟೋ ಕದ್ದಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ತಾನು ಕರೆ ಮಾಡಿದಾಗ ಬಾಯ್‌ಫ್ರೆಂಡ್‌ ಫೋನ್‌ ಅನ್ನು ಬೇರೆ ಹುಡುಗಿ ಸ್ವೀಕರಿಸಿದ್ದಾಳೆ ಎಂದು ಮೇರಿ ಆತನ ಜೊತೆ ಜಗಳವಾಡಿದ ಬಳಿಕ ಮನೆಗೆ ಬೆಂಕಿ ಹಚ್ಚಿದ್ದಾಳೆ. ಫೋನ್‌ ರಿಸೀವ್‌ ಮಾಡಿದಾಕೆ ಹುಡುಗನ ಸಂಬಂಧಿ ಎಂದು ಪೊಲೀಸರು ತಿಳಿಸಿದ್ದಾರೆ. ಮೇರಿ ಲಿವಿಂಗ್ ರೂಮ್‌ನಲ್ಲಿದ್ದ ಮಂಚಕ್ಕೆ ಬೆಂಕಿ ಹಚ್ಚಿದ್ದಾಳೆ. ಅದು ಬಳಿಕ ಇಡೀ ಮನೆಯನ್ನು ಆವರಿಸಿಕೊಂಡಿದೆ. ಮನೆಗೆ ಬೆಂಕಿ ಹಚ್ಚಿರುವುದನ್ನು ವೀಡಿಯೊ ಮಾಡಿದ್ದು, ಅದರಲ್ಲಿ ಮೇರಿ ಬೆಂಕಿ ಹಚ್ಚುತ್ತಿರುವುದು ರೆಕಾರ್ಡ್‌ ಆಗಿದೆ. ಈ ಕೃತ್ಯದಿಂದ…

Read More

ಹಿಂದೂ ದೇವಾಲಯಗಳಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಅಭಿಯಾನ ಆರಂಭಿಸಿದ್ದು, ಶಿರಸಿ ನಗರದ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ. ಮನರಂಜನೆಗಾಗಿ ಬರುವ ಬಹುತೇಕ ಪ್ರವಾಸಿಗರು ದೇವಸ್ಥಾನಗಳಿಗೂ ಅದೇ ರೀತಿ ಬರುತ್ತಾರೆ. ಆಡಳಿತ ಮಂಡಳಿಯವರು ಈ ಬಗ್ಗೆ ಜಾಗೃತಿ ಮೂಡಿಸಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ. ಪಾಶ್ಚಿಮಾತ್ಯ ಶೈಲಿಯ ಉಡುಪು ಧರಿಸುವುದರಿಂದ, ಕೂದಲು ಬಿಚ್ಚಿಟ್ಟುಕೊಳ್ಳುವುದರಿಂದ ದೇಗುಲದಲ್ಲಿ ಕೆಟ್ಟ ಶಕ್ತಿಗಳಿಗೆ ಆಮಂತ್ರಣ ನೀಡಿದಂತಾಗುತ್ತದೆ. ವಿದೇಶಿ ಸಂಸ್ಕೃತಿಯ ಉಡುಪುಗಳಿಂದ ದೇವಸ್ಥಾನದ ಸಾತ್ವಿಕತೆಗೆ ಭಂಗ ಉಂಟಾಗುವುದು ಎಂದು ಸಮಿತಿ ಹೇಳಿದೆ. ದೇವಸ್ಥಾನ ಆಡಳಿತ ಮಂಡಳಿಯವರು ಮನವಿ ಸ್ವೀಕರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದೆ. ಮಂಡಳಿಯ ಉಪಾಧ್ಯಕ್ಷ ಸುದೇಶ ಜೋಗಳೇಕರ್‌, ಧರ್ಮದರ್ಶಿ ಸುಧೀರ ಹಂದ್ರಾಳ ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಳೆಯಿಂದ ಕೂಡಿರುವ ಈ ಚಳಿಗಾಲದಲ್ಲಿ ಎಷ್ಟೆಲ್ಲ ಎಚ್ಚರಿಕೆ ವಹಿಸಿದರೂ ಶೀತ, ನೆಗಡಿ, ಜ್ವರ ಸೇರಿದಂತೆ ಕೆಲವೊಂದು ಆರೋಗ್ಯ ಸಮಸ್ಯೆಗಳಿಂದ ದೂರವಿರುವುದು ಪ್ರಯಾಸಕರ. ಹೀಗಿರುವಾಗ ಒಮ್ಮೆ ಲಿಂಬೆ ಶುಂಠಿ ರಸಂ ಸೇವಿಸಿ ನೋಡಿ. ನಾವು ಶೀತ ಸಂಬಂಧಿ ಸೋಂಕು, ವೈರಾಣುಗಳನ್ನು ಬರದಂತೆ ತಡೆಯುವ ಹಾಗೂ ಬಂದರೂ ಸುಲಭವಾಗಿ ಅದನ್ನು ಮಣಿಸುವುದಕ್ಕೆ ಅಗತ್ಯವಿರುವಂತೆ ದೇಹವನ್ನು ಸಿದ್ಧವಿರಿಸಿಕೊಂಡರೆ ಉತ್ತಮ. ಸಾಮಾನ್ಯವಾಗಿ ಈ ವಾತಾವರಣದಲ್ಲಿ ಎಲ್ಲರೂ ಬಿಸಿ ಬಿಸಿ ಆಹಾರ, ಪೇಯಗಳನ್ನೇ ಇಷ್ಟಪಡುತ್ತಾರೆ. ಸಾಮಾನ್ಯವಾಗಿ ಬಿಸಿ ಅನ್ನ, ರಸಂ ಈ ಚಳಿ ಹಾಗೂ ಶೀತದ ಮಧ್ಯೆ ವಿಶೇಷ ತೃಪ್ತಿ ಮತ್ತು ರುಚಿ ನೀಡುತ್ತದೆ. ಈ ಶೀತ ಹವಾಮಾನದಲ್ಲಿ ದೇಹವನ್ನು ಬೆಚ್ಚಗಿಡಲು ಲಿಂಬೆ ಮತ್ತು ಶುಂಠಿ ಮಿಶ್ರಿತ ರಸಂ ಬಹಳ ಸಹಕಾರಿ, ಇದು ಸವಿಯುವುದಕ್ಕೂ , ಊಟ ಮಾಡುವುದಕ್ಕೂ ಬಹುಅಚ್ಚುಮೆಚ್ಚಾಗುತ್ತದೆ. ಹುಳಿ, ಸಿಹಿ ಮತ್ತು ಖಾರದ ಮಿಶ್ರಣದ ರಸಂ ಜೊತೆ ಅನ್ನದ ರುಚಿಗೆ ಸಾಟಿಯೇ ಇಲ್ಲ. ಬಿಸಿ ಬಿಸಿ ಕಷಾಯದಂತೆಯೂ ಸೇವಿಸುತ್ತಾ ಎಂಜಾಯ್‌ ಮಾಡಬಹುದು. ಗಂಟಲ ಕೆರತ ಅಥವಾ…

Read More

ಸೂಪರ್ ಟ್ರಾನ್ಸ್‌ಪೋರ್ಟರ್ ಏರ್‌ಬಸ್ ಬೆಲುಗಾ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಸಿಎಸ್‌ಎಂಐಎ) ಬಂದಿಳಿದಾಗ ಸಿಬ್ಬಂದಿ ಮತ್ತು ಪ್ರಯಾಣಿಕರು ಅಚ್ಚರಿಗೊಂಡು ಇದೇನು ತಿಮಿಂಗಿಲ ಆಕಾರದ ವಿಮಾನ ಎಂದು ಹುಬ್ಬೇರಿಸಿದ್ದಾರೆ. ಒಟ್ಟಾರೆ ಈ ವಿಮಾನ ಈ ವಿಮಾನ ಎಲ್ಲರನ್ನೂ ಸೆಳೆಯುವಂತೆ ಮಾಡಿದೆ.ಈ ಏರ್‌ಬಸ್ ಬೆಲುಗಾ ಏರ್ ಕಾರ್ಗೋವನ್ನು ಸಾಗಣೆಗೆ ಬಳಕೆಯಾಗಿದೆ. ಈ ವಿಮಾನಗಳು 1990ರ ದಶಕದ ಮಧ್ಯಭಾಗದಿಂದ ಕಂಪನಿಯ ಸ್ವಂತ ಕೈಗಾರಿಕಾ ಏರ್‌ಲಿಫ್ಟ್ ಅಗತ್ಯಗಳಿಗಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಕ್ರಮೇಣ ಆರು ಹೊಸ ಬೆಲುಗಾಎಕ್ಸ್‌ಎಲ್ ಆವೃತ್ತಿಗಳ ಫ್ಲೀಟ್‌ನಿಂದ ಬದಲಾವಣೆಗೊಂಡಿದೆ ಎಂದು ಅದಕ್ಕೆ ಸಂಬಂಧಿಸಿದ ವೆಬ್‌ ಸೈಟ್‌ ಮಾಹಿತಿ ಒಳಗೊಂಡಿದೆ. ಸಿಎಸ್‌ಎಂಎ ಟ್ವಿಟರ್ ಪೇಜ್ ನಲ್ಲಿ ಈ ಬೃಹತ್ ವಿಮಾನದ ಕೆಲವು ಫೋಟೋ ಪೋಸ್ಟ್ ಮಾಡಿ, ಇದು ಎಲ್ಲರಿಗೂ ವಿಸ್ಮಯ ಎಂದು ಟ್ವೀಟ್​ ಮಾಡಿದೆ. ಏರ್‌ಬಸ್ ಬೆಲುಗಾ ಸೂಪರ್ ಟ್ರಾನ್ಸ್‌ಪೋರ್ಟರ್ ಮುಂಬೈ ಏರ್‌ಪೋರ್ಟ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ನಮ್ಮೆಲ್ಲರನ್ನು ಬೆರಗುಗೊಳಿಸಿದೆ ಎಂದು ಟ್ವೀಟ್​ನಲ್ಲಿ ಹೇಳಿದೆ. ಬೆಲುಗಾ ವಿಮಾನದ ಮೂಗು ತಿಮಿಂಗಿಲದ ಆಕಾರದಲ್ಲಿದೆ, ಇದು…

Read More

ಕೆಲವರಿಗೆ ಯಾವಾಗಲೂ ಏನೇ ತಿಂದರೂ ಅಜೀರ್ಣ, ಗ್ಯಾಸ್ಟ್ರಿಕ್‌ ಸಮಸ್ಯೆ, ಮತ್ತೆ ಕೆಲವರಿಗೆ ಚಳಿಗಾಲದಲ್ಲಿ ಜೀರ್ಣಕ್ರಿಯೆಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಳ್ಳುವುದೂ ಇದೆ. ಜೀರ್ಣಕ್ರಿಯೆ ಉತ್ತಮವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ಒಮ್ಮೆ ಜೀರ್ಣಕ್ರಿಯೆ ಸಮಸ್ಯೆ ಶುರುವಾದರೆ ಸರಿಯಾಗಲು ಹಲವು ದಿನಗಳೇ ಬೇಕು. ಆಗ ಆಹಾರದ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ. ಮತ್ತಷ್ಟು ಹೊಟ್ಟೆಯ ಸಮಸ್ಯೆಗೆ ಕಾರಣಾಗುವ ಆಹಾರಗಳನ್ನು ಸೇವನೆ ಗಂಭೀರ ಕಾಯಿಲೆಗೆ ದಾರಿ ಮಾಡಿಕೊಡಬಹುದು. ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗಿ ಇರಿಸಿಕೊಳ್ಳಲು ಆಹಾರದಲ್ಲಿ ಕೆಲವೊಂದು ಸಲಹೆಗಳನ್ನು ಅನುಸರಿಸಿದರೆ ಒಳ್ಳೆಯದು. ಆಹಾರ ತಯಾರಿಸುವಾಗ ಚಿಟಿಕೆ ಅರಿಶಿನ ಬಳಕೆ ಕಡ್ಡಾಯವಿರಲಿ. ಇದರಲ್ಲಿ ಉರಿಯೂತವನ್ನು ನಿವಾರಿಸುವ ಗುಣವಿದೆ. ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವ ಅರಿಶಿನ ಹೊಟ್ಟೆಯಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಪಡಿಸಿ ಜೀರ್ಣಕ್ರಿಯೆ ಉತ್ತಮಗೊಳಿಸುತ್ತದೆ. ಚಿಯಾ ಬೀಜಗಳು ಅಥವಾ ಕಾಮಕಸ್ತೂರಿ ಕರುಳಿನ ಉರಿಯೂತವನ್ನು ನಿವಾರಿಸಿ ಚಯಾಪಚಯ ಕ್ರಿಯೆ ಸುಗಮಗೊಳಿಸುತ್ತದೆ. ಆಹಾರ ಜೀರ್ಣವಾಗಿ ಮಲವಿಸರ್ಜನೆ ಆಗುವಂತೆ ಮಾಡುವ ಮೂಲಕ ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಹಣ್ಣುಗಳ ಸಲಾಡ್‌ ಜೊತೆ ನೆನೆಸಿದ ಚಿಯಾ ಬೀಜಗಳನ್ನು ತಿನ್ನುವುದು ಉತ್ತಮ. ಹೇರಳವಾದ ಫೈಬರ್‌…

Read More

ಶಹಾಪುರ ಹಾಗೂ ಸುರಪುರ ವಿಭಾಗದ ಅಬಕಾರಿ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ 4 ಕಡೆ ದಾಳಿ ನಡೆಸಿ ಗಾಂಜಾ ಬೆಳೆದಿದ್ದ ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ವಿವಿಧ ಕಡೆ ಗಾಂಜಾ ಬೆಳೆದ ಜಮೀನುಗಳ ಮೇಲೆ ಇಂದು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಉಳ್ಳೇಸುಗುರದಲ್ಲಿ 3 ಕಡೆ, ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ಒಂದು ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ 3 ಕೆಜಿ ಒಣ ಗಾಂಜಾ, 3 ಕೆಜಿ ಹಸಿ ಗಾಂಜಾ ಜಪ್ತಿ ಮಾಡಿ ಇಬ್ಬರನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಟಾಟಾ ಕನ್‌ ಸ್ಯೂಮರ್ ರಮೇಶ್ ಚೌಹಾಣ್ ಅವರ ಬಿಸ್ಲೇರಿ ಇಂಟರ್‌ ನ್ಯಾಷನಲ್ ಕಂಪನಿಯನ್ನು ರೂ. 7 ಸಾವಿರ ಕೋಟಿಗೆ ವಶಪಡಿಸಿಕೊಳ್ಳಲಿದೆ ಎಂದು ‘ದಿ ಎಕನಾಮಿಕ್ ಟೈಮ್ಸ್’ ವರದಿ ಮಾಡಿದೆ. ಚೌಹಾಣ್ ಅವರು ಕಳೆದ ಸ್ವಲ್ಪ ಸಮಯದಿಂದ ಅನಾರೋಗ್ಯಪೀಡಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಬಿಸ್ಲೇರಿ ಕಂಪನಿಯ ಈಗಿನ ಆಡಳಿತ ಇನ್ನೂ ಎರಡು ವರ್ಷಗಳ ಕಾಲ ಅದೇ ರೀತಿ ಮುಂದುವರೆಯಲಿದೆ. ಅವರ ಮಗಳಾದ ಜಯಂತಿ ಅವರಿಗೆ ಇವರ ವ್ಯಾಪಾರವನ್ನು ಮುಂದುವರೆಸಿಕೊಂಡು ಹೋಗುವುದರಲ್ಲಿ ಅಷ್ಟು ಆಸಕ್ತಿ ಇಲ್ಲದಿರುವ ಕಾರಣ, ಅವರಿಗೆ ಬಿಸ್ಲೇರಿ ಕಂಪನಿಯನ್ನು ಮುಂದಿನ ಹಂತಕ್ಕೆ ವಿಸ್ತರಿಸಲು ಸೂಕ್ತ ವಾರಸುದಾರರ ಕೊರತೆ ಇರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಭಾರತದ ಅತೀ ದೊಡ್ಡ ಪ್ಯಾಕೇಜ್ಡ್ ನೀರಿನ ಕಂಪನಿಯ ಮಾಲೀಕರಾಗಿರುವ ರಮೇಶ್ ಚೌಹಾಣ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿರುವಂತೆ ಟಾಟಾ ಸಮೂಹ, “ತಮ್ಮ ಸಂಸ್ಥೆಯು ತಮ್ಮ ವ್ಯಾಪಾರವನ್ನು ತಮಗಿಂತ ಉತ್ತಮವಾಗಿ ಕಾಪಾಡಿಕೊಳ್ಳುತ್ತದೆ,” ಎಂದು ನಂಬಿದ್ದಾರಂತೆ. “ನನಗೆ ಟಾಟಾ ಕಂಪನಿಯವರು ಮೌಲ್ಯಗಳು ಬಹಳ ಇಷ್ಟವಾಗುತ್ತದೆ. ಹಾಗಾಗಿ, ನಾನು ನನ್ನ ಕಂಪನಿಯನ್ನು…

Read More