Subscribe to Updates
Get the latest creative news from FooBar about art, design and business.
- ಕೊಡಿಗೇನಹಳ್ಳಿ: ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್ ಕದ್ದ ಮಹಿಳೆ ಬಂಧನ
- ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
- ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
- ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
- ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
- ತೆರೆ ಮೇಲೆ ರಾಜ್ ಕುಮಾರ್, ಅಂತರಂಗದಲ್ಲಿ ಮುತ್ತುರಾಜ್ ಇದ್ದರು: ಆರ್. ಮಂಜುನಾಥ್ ಚವಾಣ್, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
- ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
- ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
Author: admin
ಬೆಂಗಳೂರು: ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸೊಲ್ಲ, ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು ಎಂದು ಅವರು ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದು ಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು…
ಸುರತ್ಕಲ್: ಇತ್ತೀಚೆಗಷ್ಟೇ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಇದೇ ಸುರತ್ಕಲ್ ನಲ್ಲಿ ವ್ಯಕ್ತಿಯೊಬ್ಬರನ್ನು ಇರಿದು ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ಈ ಘಟನೆ ನಡೆದಿದ್ದು, ಇಬ್ಬರು ದುಷ್ಕರ್ಮಿಗಳ ತಂಡವೊಂದು ಜಲೀಲ್ ಎಂಬ ವ್ಯಕ್ತಿಗೆ ಇರಿದು ಪರಾರಿಯಾಗಿದೆ. ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಾಸನ: ಅಂಗನವಾಡಿ ಆವರಣದಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ. ಯಶವಂತ್ ಹಾಗೂ ಗೌರಿ ದಂಪತಿಯ ಪುತ್ರ 4 ವರ್ಷ ವಯಸ್ಸಿನ ರೋಶನ್ ಹಾವು ಕಡಿತದಿಂದ ಸಾವನ್ನಪ್ಪಿದ ಬಾಲಕನಾಗಿದ್ದು, ಹಾವು ಕಚ್ಚಿದ ವೇಳೆ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದರೆ, ಸರಿಯಾದ ಸಮಯಕ್ಕೆ ಚಿಕಿತ್ಸೆ ಲಭಿಸದ ಹಿನ್ನೆಲೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಮಕ್ಕಳನ್ನು ಕರೆತರಲು ಅಂಗನವಾಡಿ ಕಾರ್ಯಕರ್ತೆ ಹೊರಗೆ ಹೋದ ವೇಳೆ ಅಂಗನವಾಡಿಯ ಆವರಣದಲ್ಲಿದ್ದ ಹಾವು ಬಾಲಕನಿಗೆ ಕಚ್ಚಿದೆ. ತಕ್ಷಣವೇ ಬೈಕ್ ನಲ್ಲಿ ಬಾಲಕನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್ ಮೂಲಕ ಸಾಗಿಸಲಾಗಿದೆ. ಬಳಿಕ ವೈದ್ಯರ ಸಲಹೆಯಂತೆ ಸಕಲೇಶಪುರ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಬೈಕ್ ಅರ್ಧ ದಾರಿ ತಲುಪುವ ವೇಳೆ ಆ್ಯಂಬುಲೆನ್ಸ್ ಬಂದಿದೆ. ಆದರೆ, ಬಾಲಕ ಅಷ್ಟರಲ್ಲಾಗಲೇ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಬಾಗಲಕೋಟೆ: ಜವಾಬ್ದಾರಿ ಸ್ಥಾನದಲ್ಲಿರುವವರು ಯಾರದೋ ಮಾತು ಕೇಳಿ ಬಾಯಿ ಚಪಲಕ್ಕೆ ಮಾತನಾಡಬಾರದು ಎಂದು ಮೀಸಲಾತಿ ಕೈತಪ್ಪಲು ಸಚಿವ ಮುರುಗೇಶ್ ನಿರಾಣಿ ಕಾರಣ ಎಂಬ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮ ಸಮಾಜದ ಒಬ್ಬ ಸಚಿವರಿಂದ ಪಂಚಮಸಾಲಿ 2ಎ ಮೀಸಲಾತಿ ಘೋಷಣೆ ತಪ್ಪಿತು ಎಂಬ ಹೇಳಿಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಪಂಚಮಸಾಲಿ ಮೀಸಲಾತಿ ತಪ್ಪಿಸಿದ್ದೇನೆ. ಮೀಸಲಾತಿ ತಪ್ಪಿಸಲೆಂದು ಇಂಥವರ ಜೊತೆಗೆ ಮಾತನಾಡಿದ್ದೇನೆ. ಇಂಥ ಜಾಗದಲ್ಲಿ ಭಾಷಣ ಮಾಡಿದದ್ದೇನೆ ಎಂದು ಸ್ವಾಮೀಜಿ ಸಾಬೀತು ಮಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಒಂದು ವೇಳೆ ಸಾಕ್ಷಿ ನೀಡಲು, ಸಾಬೀತುಪಡಿಸಲು ಅವರು ವಿಫಲರಾದರೆ ಸನ್ಯಾಸತ್ವ ತ್ಯಜಿಸಿ ರಾಜಕೀಯಕ್ಕೆ ಬರಬೇಕು ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿಗೆ ಸವಾಲು ಹಾಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹುಬ್ಬಳ್ಳಿ : ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆ ನಮ್ಮ ಸರ್ಕಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ನ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದರು. ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಮುಂತಾದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಡಿಐಎಸ್) ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿಯನ್ನು ಪ್ರಕಟಿಸಿದೆ. ಜನವರಿ 15ರವರೆಗೆ ಅರ್ಜಿ ಸಲ್ಲಿಸಬಹುದು. ಪ್ರಧಾನ ಕಛೇರಿ ಮುಂಬೈನಲ್ಲಿದೆ. ಇದು ದುಲ್ಜಾಪುರ, ಗುವಾಹಟಿ ಮತ್ತು ಹೈದರಾಬಾದ್ನಲ್ಲಿ ಕ್ಯಾಂಪಸ್ಗಳನ್ನು ಹೊಂದಿದೆ. ಮುಂಬೈ ಕ್ಯಾಂಪಸ್ ಸಾಮಾಜಿಕ ಕಾರ್ಯದಲ್ಲಿ ಒಂಬತ್ತು ಕೋರ್ಸ್ಗಳನ್ನು ಹೊಂದಿದೆ. ಮಕ್ಕಳು ಮತ್ತು ಕುಟುಂಬಗಳು, ಸಾಮಾಜಿಕ ಸಂಸ್ಥೆ ಮತ್ತು ಅಭಿವೃದ್ಧಿ ಅಭ್ಯಾಸ, ಅಪರಾಧಶಾಸ್ತ್ರ ಮತ್ತು ನ್ಯಾಯ, ದಲಿತ ಮತ್ತು ಬುಡಕಟ್ಟು ಅಧ್ಯಯನಗಳು ಮತ್ತು ಕ್ರಿಯೆ, ಅಂಗವೈಕಲ್ಯ ಅಧ್ಯಯನಗಳು ಮತ್ತು ಕ್ರಿಯೆ, ಜೀವನೋಪಾಯ ಮತ್ತು ಸಾಮಾಜಿಕ ಉದ್ಯಮಶೀಲತೆ, ಮಾನಸಿಕ ಆರೋಗ್ಯ, ಸಾರ್ವಜನಿಕ ಆರೋಗ್ಯ, ಮಹಿಳಾ-ಕೇಂದ್ರಿತ ಅಭ್ಯಾಸದಲ್ಲಿ M.A./M.Sc. ಪದವಿಯನ್ನು ಓದಬಹುದು. ಪರಿಸರ ಹವಾಮಾನ ಬದಲಾವಣೆ ಮತ್ತು ಸುಸ್ಥಿರತೆಯ ಅಧ್ಯಯನಗಳು, ನಿಯಂತ್ರಕ ನೀತಿ ಮತ್ತು ನಿರ್ವಹಣೆ, ನಗರ ನೀತಿ ಮತ್ತು ನಿರ್ವಹಣೆ, ಜಲ ನೀತಿ ಮತ್ತು ನಿರ್ವಹಣೆ, ವಿಪತ್ತು ನಿರ್ವಹಣೆ, ಅಭಿವೃದ್ಧಿ ನೀತಿ ಯೋಜನೆ ಮತ್ತು ಅನುಷ್ಠಾನ, ಸುಸ್ಥಿರ ಜೀವನೋಪಾಯಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಇತ್ಯಾದಿ. ಅರ್ಹತೆ: ಪದವಿ (ಮೂರು…
ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ಛೆ ಹೋಗುವಂತೆ ನಟಿಸಿ ಚಿನ್ನಾಭರಣ ಕದಿಯುತ್ತಿದ್ದ ತಮಿಳುನಾಡಿನ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ತಿರುಚ್ಚಿ ಸಮಯಪುರಂನ ದೇವಿ (39), ಶಾಂತಿ (27) ಮತ್ತು ಅನು (22) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರೂ ಕಳ್ಳತನವನ್ನುಮಾಡಲು ಬಹಳ ಅತ್ಯಾಧುನಿಕವಾಗಿ ಯೋಜಿಸಿದರು. ಪೆರುಂಬವೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ವೃದ್ಧೆಯ ಕೊರಳಲ್ಲಿದ್ದ 2 ಪವನ್ ನೆಕ್ಲೇಸ್ ಹಾಗೂ ಬಸ್ ಪ್ರಯಾಣಿಕನ 4 ಪವನ್ ಸರ ಕದ್ದಿದ್ದಾರೆ.ಪೆರುಂಬವೂರ್ನ ಆಸ್ಪತ್ರೆ ತಲುಪಿದ ಗ್ಯಾಂಗ್ ರೋಗಿಗಳು ಮತ್ತು ಜನರು ಸೇರುವ ಪ್ರದೇಶಕ್ಕೆ ತೆರಳಿ ಮೂರ್ಛೆ ಹೋದಂತೆ ನಟಿಸಿದ್ದಾರೆ. ಇದನ್ನು ಕಂಡ ಐಕುಂಬಳದ ಮತ್ತೋರ್ವ ಮಹಿಳೆ ಸಹಾಯ ಮಾಡಲು ಮುಂದಾದ ಜನರ ಗುಂಪಿಗೆ ನುಗ್ಗಿ ಚಿನ್ನಾಭರಣ ದೋಚಿ ಓಡಿ ಹೋಗಿದ್ದಾಳೆ. ಅದೇ ರೀತಿ ಬಸ್ ಗಳಲ್ಲಿ ಚಿನ್ನಾಭರಣ ದೋಚಿದ್ದಾರೆ.ಹೊಸ ಸಂಚು ರೂಪಿಸಿದಾಗ ಮೂವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಲ್ಲಿ ಒಬ್ಬರಾದ ಶಾಂತಿ ಕಳೆದ ತಿಂಗಳು ಜೈಲಿನಿಂದ ಬಿಡುಗಡೆಯಾಗಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಇಡುಕ್ಕಿಯ ಕುಮಲಿಯಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಥೇಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಗು ಸೇರಿದಂತೆ ಹತ್ತು ಮಂದಿ ವಾಹನದಲ್ಲಿದ್ದರು. ಶಬರಿಮಲೆ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಥೇಣಿ ನಿವಾಸಿಗಳು ಪ್ರಯಾಣಿಸುತ್ತಿದ್ದ ಟವೇರಾ ಕಾರು ಅಪಘಾತಕ್ಕೀಡಾಗಿದೆ. ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗರಾಜ್ (46), ದೇವದಾಸ್ (55), ಚಕಂಪೆಟ್ಟಿಯ ಶಿವಕುಮಾರ್ (45), ಮುನಿಯಾಂಡಿ (55), ಮರವಪೆಟ್ಟಿಯ ಕನ್ನಿ ಸ್ವಾಮಿ (60), ಷಣ್ಮುಖ ಸುಂದರಪುರದ ವಿನೋದ್ ಕುಮಾರ್ (43) ಮೃತಪಟ್ಟವರು. ಥೇಣಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದವರಲ್ಲಿ ಒಬ್ಬರು ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮಗುವನ್ನು ಕುಮಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.ಕೇರಳ ಮತ್ತು ತಮಿಳುನಾಡು ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಎರಡೂವರೆ ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಡೆಸಿದರು.… ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ರಾಜ್ಯ ಸಹಾಯಕ ಪ್ರಾಧ್ಯಾಪಾಕರ ಅರ್ಹತಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಯುಜಿಸಿಯಿಂದ ಮಾನ್ಯತೆ ಅಗತ್ಯವಿರುವ ರಾಜ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ಯುಜಿಸಿಯ ಪರಿಕಲ್ಪನೆ ಮತ್ತು ವ್ಯಾಪ್ತಿಯಡಿ ರಾಜ್ಯ ಸರ್ಕಾರವು ಒಂದು ಏಜೆನ್ಸಿಯನ್ನು ಗುರುತಿಸಬಹುದು. ಅದು ವಿಶ್ವವಿದ್ಯಾನಿಲಯವಾಗಿರಬಹುದು ಅಥವಾ ಪ್ರತಿಷ್ಠಿತ ಪರೀಕ್ಷಾ ಸಂಸ್ಥೆ ಅಥವಾ ಉನ್ನತ ಶಿಕ್ಷಣಕ್ಕಾಗಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸದ ಪ್ರತಿಷ್ಠಿತ ಸಂಸ್ಧೆಯಾಗಿರಬಹುದೆಂಬ ಅವಕಾಶದಡಿ 2022ನೇ ಸಾಲನ್ನು ಒಳಗೊಂಡಂತೆ ಮುಂದಿನ ಆದೇಶದವರೆಗೆ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸುವಂತೆ ಆದೇಶಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಸರ್ಕಾರ 80 ಕೋಟಿ ಜನರಿಗೆ ಒಂದು ವರ್ಷಕ್ಕೆ ಉಚಿತ ಧಾನ್ಯ ನೀಡಿದೆ. ರಾಷ್ಟ್ರೀಯ ಆಹಾರ ಭದ್ರತಾ ಇಲಾಖೆ ಮುಂದಿನ ವರ್ಷದ ಡಿಸೆಂಬರ್ವರೆಗೆ ದೇಶದ 80 ಕೋಟಿ ಜನರಿಗೆ ಉಚಿತ ಧಾನ್ಯ ವಿತರಿಸಲಿದೆ. ಉಚಿತ ಧಾನ್ಯವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ, ವಿಶೇಷ ಉಚಿತ ಪಡಿತರ ಯೋಜನೆ ಅಡಿಯಲ್ಲಿದೆ. 2020 ರ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಯಿತು. ಯೋಜನಾ ಅವಧಿ ಈ ತಿಂಗಳು ಮುಗಿಯಲಿರುವುದರಿಂದ ಯೋಜನೆಯ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಅನ್ನ ಯೋಜನೆಯಡಿ ಒಬ್ಬ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯಗಳು, 3 ಕೆಜಿ ಅಕ್ಕಿ, 2 ಕೆಜಿ ಗೋಧಿ ಮತ್ತು 1 ರೂಪಾಯಿಗೆ ರಾಗಿ ಸಿಗುತ್ತದೆ. ಕೇಂದ್ರ ಸರಕಾರ ಈ ಯೋಜನೆಗೆ ವರ್ಷಕ್ಕೆ 2 ಲಕ್ಷ ಕೋಟಿ ರೂ ಮೀಸಲಿಡಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy