Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಗಿರಿನಗರ ಠಾಣೆ ಪೊಲೀಸರು ನಿರ್ದೇಶಕ ಗುರು ಪ್ರಸಾದ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಗುರುಪ್ರಸಾದ್ ಕನ್ನಡ ಚಿತ್ರರಂಗದ ನಟ ಮತ್ತು ನಿರ್ದೇಶಕ. ನಿರ್ದೇಶಕರಾಗಿ ಅವರ ಚೊಚ್ಚಲ ಚಿತ್ರ ಮಠ (2006) ಈ ಸಿನಿಮಾ ಅಂದು ಸಖತ್ ಸದ್ದು ಮಾಡಿತ್ತು. ನಿರ್ದೇಶಕರಾಗಿ ಅವರ ಎರಡನೇ ಚಿತ್ರ ಎದ್ದೇಳು ಮಂಜುನಾಥ ಈ ಎರಡೂ ಚಲನಚಿತ್ರಗಳನ್ನು ಉತ್ತಮ ವಿಮರ್ಶೆಗಳೊಂದಿಗೆ ಅನೇಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಗಣ್ಯ ವ್ಯಕ್ತಿಗಳ ಪ್ರೀತಿಯ ಮಾಮಾ, ಸ್ಯಾಂಟ್ರೋ ರವಿ, ಇಂದು ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತನ್ನ ಅಕ್ರಮ ದಂಧೆಗಳಿಂದ ಕೋಟ್ಯಂತರ ರೂ. ಆಸ್ತಿ ಮಾಡಿರುವ ಕೆ.ಎಸ್.ಮಂಜುನಾಥ್ ಯಾನೆ ಸ್ಯಾಂಟ್ರೋ ರವಿಯ ಕಥೆಗಳು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಂಡಿತ್ತು. ಸ್ಯಾಂಟ್ರೋ ರವಿಗೆ ಮನೆ ಬಾಡಿಗೆಗೆ ನೀಡಿದ್ದ ವ್ಯಕ್ತಿ ಹೇಳುವ ಪ್ರಕಾರ, ಸ್ಯಾಂಟ್ರೋ ರವಿ ಅಪಾರ್ಟ್ ಮೆಂಟ್ ಬಾಡಿಗೆ ಪಡೆದುಕೊಂಡಿದ್ದಾಗ, ಮನೆಗೆ ನಟಿಯರು, ಮಾಡೆಲ್ ಗಳು, ಸರ್ಕಾರಿ ಅಧಿಕಾರಿಗಳು ಬರುತ್ತಿದ್ದರು ಎಂದು ಹೇಳಿದ್ದಾರೆ. 2000ನೇ ಇಸವಿಯಿಂದ 2005ರವರೆಗೆ ಮಂಡ್ಯ, ಮೈಸೂರಿನಲ್ಲಿ ತನ್ನ ವೃತ್ತಿಯನ್ನು ಆರಂಭಿಸಿದ್ದ ಸ್ಯಾಂಟ್ರೋ ರವಿ, ಗಣ್ಯ ವ್ಯಕ್ತಿಗಳಿಗೆ ಹುಡುಗಿಯರನ್ನು ಸಪ್ಲೈ ಮಾಡುವ ಕೆಲಸ ಮಾಡುತ್ತಿದ್ದ. ತನ್ನ ಪತ್ನಿ ವಕೀಲೆ ಎಂದು ಬೆದರಿಸಿ ಹಲವರಿಗೆ ವಂಚಿಸಿದ್ದ ಎನ್ನಲಾಗಿದೆ. ತನ್ನ ಶೋಕಿಗಾಗಿ ಮೂರು ನಾಲ್ಕು ಕಾರುಗಳನ್ನು ಈತ ಇಟ್ಟುಕೊಂಡಿದ್ದ. ಆರ್.ಆರ್ ನಗರ ಪೊಲೀಸರ ಎದುರೇ ಸ್ಯಾಂಟ್ರೋ ರವಿ ತಾವು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನಂತೆ.. ಸರಿ ಸುಮಾರು 3-4 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಸೇವೆ…
ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಗೀಡಾಗಿದ್ದ ಸ್ಯಾಂಟ್ರೋ ರವಿ ಕೇಸ್ ಗೆ ಇದೀಗ ಹೊಸ ಟ್ವಿಸ್ಟ್ ದೊರಕಿದ್ದು, ಕೊನೆಗೂ ಸ್ಯಾಂಟ್ರೋ ರವಿ ಯಾನೆ ಕೆ.ಎಸ್.ಮಂಜುನಾಥ್ ನ್ನು ಪೊಲೀಸರು ಬಂಧಿಸಿದ್ದಾರೆ. ಸ್ಯಾಂಟ್ರೋ ರವಿ ಗುಜರಾತ್ ನಲ್ಲಿ ತಲೆ ಮರೆಸಿಕೊಂಡಿದ್ದು, ಅಲ್ಲಿಗೆ ತೆರಳಿದ ಕರ್ನಾಟಕ ಪೊಲೀಸರು ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ವರು ಎಸ್ ಪಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ರಾಮನಗರ, ಮಂಡ್ಯ, ಮೈಸೂರು ಹಾಗೂ ಕೇರಳದಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು. ಸ್ಯಾಂಟ್ರೋ ರವಿ ಗುಜರಾತ್ ನಲ್ಲಿರುವ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ರಾಜ್ಯ ಪೊಲೀಸರ ತಂಡ ಗುಜರಾತ್ ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧಿಸಿ, ರಾಜ್ಯಕ್ಕೆ ಕರೆತರಲು ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೋರ್ವ ಮಹಿಳೆ ಮೇಲೆ ಮೂತ್ರ ಮಾಡಿದ ಘಟನೆ ದೊಡ್ಡ ಸುದ್ದಿಯಾಗಿತ್ತು. ಇದೀಗ ಆರೋಪಿ ಶಂಕರ್ ಮಿಶ್ರಾ, ನಾನು ಮೂತ್ರ ಮಾಡಿಲ್ಲ, ಮಹಿಳೆ ತಾನಾಗಿಯೇ ಮೂತ್ರ ಮಾಡಿಕೊಂಡಿದ್ದಾಳೆ ಎಂದು ವಾದಿಸಿದ್ದಾನೆ. ದೆಹಲಿ ಕೋರ್ಟ್ ನಲ್ಲಿ ಶಂಕರ್ ಮಿಶ್ರಾ ತನ್ನ ವಕೀಲರ ಮೂಲಕ ಈ ವಾದ ಮಂಡಿಸಿದ್ದಾನೆ. ನಾನು ದೂರುದಾರರ ಮೇಲೆ ಮೂತ್ರ ವಿಸರ್ಜನೆ ಮಾಡಿಲ್ಲ ಎಂದು ವಾದಿಸಿದ್ದಾನೆ. ದೂರುದಾರ ಮಹಿಳೆಯ ಆಸನವನ್ನು ನಿರ್ಬಂಧಿಸಲಾಗಿತ್ತು. ಶಂಕರ್ ಮಿಶ್ರಾಗೆ ಮಹಿಳೆ ಇದ್ದ ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ. ದೂರುದಾರಳಿಗೆ ಮೂತ್ರ ವಿಸರ್ಜಿಸುವ ಸಮಸ್ಯೆ ಇದೆ. ಅವಳು ಕಥಕ್ ಡಾನ್ಸರ್ ಆಗಿದ್ದಾಳೆ. ಶೇ.80ರಷ್ಟು ಕಥಕ್ ಡಾನ್ಸ್ರರ್ ಗೆ ಈ ಸಮಸ್ಯೆ ಇದೆ ಎಂದು ಮಿಶ್ರಾನ ವಕೀಲರು ವಾದಿಸಿದ್ದಾರೆ. ವಿಮಾನದ ಒಂದು ಬದಿಯಿಂದ ಇನ್ನೊಂದು ಬದಿಗೆ ಹೋಗಲು ಸಾಧ್ಯವಿಲ್ಲ ಅನ್ನೋ ಮಿಶ್ರಾನ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಧೀಶರು, ನಾನು ಕೂಡ ವಿಮಾನದಲ್ಲಿ ಪ್ರಯಾಣಿಸಿದ್ದೇನೆ ಯಾವುದೇ ಸಾಲಿನಲ್ಲಿ ಬಂದರೂ ಆಸನದತ್ತ ಹೋಗಬಹುದು ಎಂದಿದ್ದು, ಈ ಬಗ್ಗೆ…
ಸುಮಾರು 120ಕ್ಕೂ ಹೆಚ್ಚು ಸ್ತ್ರೀಯರ ಮೇಲೆ ಅತ್ಯಾಚಾರ ನಡೆಸಿದ್ದ ಜಿಲೇಬಿ ಬಾಬಾ ಅಲಿಯಸ್ ಅಮರ್ ವೀರ್ ನ ವಿರುದ್ಧ ಸಾಲು ಸಾಲು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು. 2017ರಲ್ಲಿ ಈತನ ಮೇಲೆ ಮೊದಲ ಬಾರಿಗೆ ಕೇಸ್ ದಾಖಲಾಯ್ತು. ಆದರೆ ಇದರಲ್ಲಿ ಈತ ಜಾಮೀನು ಪಡೆದುಕೊಂಡಿದ್ದ, 2018ರಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಇದರಲ್ಲೂ ಬಾಬಾ ಜಮೀನು ಪಡೆದುಕೊಂಡಿದ್ದ. 2018ರಲ್ಲೇ ಮತ್ತೊಂದು ಅತ್ಯಾಚಾರ ಕೇಸ್ ಈತನ ಮೇಲೆ ದಾಖಲಾಗಿತ್ತು. ಜಿಲೇಬಿ ಬಾಬಾನ ಅಶ್ಲೀಲ ವಿಡಿಯೋವೊಂದು ಹೊರ ಬಂದ ವೇಳೆ ಪೊಲೀಸರು ಈತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರು. ಆತನ ಆಶ್ರಮಕ್ಕೆ ದಾಳಿ ನಡೆಸಿದ ವೇಳೆ ಮಾದಕ ದ್ರವ್ಯ, ಮಾತ್ರೆಗಳು, ವಿಸಿಆರ್ ಮಾತ್ರವಲ್ಲದೇ ಆಕ್ಷೇಪಕಾರಿ ವಸ್ತುಗಳು ಪತ್ತೆಯಾಗಿದ್ದವು. ಬಾಬಾ ನ ಮೊಬೈಲ್ ಪಡೆದು ಪರಿಶೀಲಿಸಿದಾಗ ಸುಮಾರು 120 ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದವು. ಈ ಕಾಮಿ ಬಾಬಾನ ಮೊಬೈಲ್ ನಲ್ಲಿದ್ದ 120 ವಿಡಿಯೋ ಒಬ್ಬರದ್ದಲ್ಲ, ಬದಲಾಗಿ 120 ಮಂದಿ ಬೇರೆ ಬೇರೆ ಮಹಿಳೆಯರದ್ದಾಗಿತ್ತು. ಬಾಲಕಿಯೋರ್ವಳ ಮೇಲೆ 2 ಬಾರಿ…
ಕಾರವಾರ: ಅಪರೂಪದ ಹಾರುವ ಅಳಿಲೊಂದನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ. ಕೈಗಾ ಟೌನ್ ಶಿಪ್ ನಲ್ಲಿ ತೀವ್ರವಾಗಿ ಗಾಯಗೊಂಡು ಬಿದ್ದಿದ್ದ ಹಾರುವ ಅಳಿಲನ್ನು ಕಂಡ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅಚ್ಚರಿಗೀಡಾಗಿದ್ದಾರೆ. ಮರದಿಂದ ಮರಕ್ಕೆ ಹಾರುವ ಈ ಅಪರೂಪದ ಅಳಿಲು ಮಲ್ಲಾಪುರ ಟೌನ್ ಶಿಪ್ನ ಎನ್ಪಿಸಿಐಎಲ್ ಸಿಬ್ಬಂದಿಯೋರ್ವರ ಮನೆಯ ಮೇಲೆ ಬಿದ್ದಿತ್ತು. ಈ ಬಗ್ಗೆ ಸ್ಥಳೀಯರು ಬಿಲಾಲ್ ಶೇಖ್ ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಬಿಲಾಲ್ ಹಾಗೂ ನಾಗರಾಜ್ ಅವರು ಅಳಿಲಿಗೆ ಚಿಕಿತ್ಸೆ ನೀಡಿದ್ದು, ಬಳಿಕ ಕಾಡಿಗೆ ಬಿಟ್ಟಿದ್ದಾರೆ. ಹಾರುವ ಅಳಿಲನ್ನು ನೋಡಿ ಆಶ್ಚರ್ಯಗೊಂಡೆ. ಕೆಳಗೆ ಬಿದ್ದ ಪರಿಣಾಮ ಅಳಿಗೆ ತೀವ್ರವಾಗಿ ಗಾಯವಾಗಿತ್ತು. ಅದು ಪ್ರಜ್ಞಾಹೀನ ಸ್ಥಿತಿಯಲ್ಲಿತ್ತು. ಸುತ್ತಲೂ ಜನರು ನಿಂತಿರುವುದನ್ನು ನೋಡಿ ಆತಂಕಕ್ಕೊಳಗಾಗಿತ್ತು. ಹ್ಯಾಂಡ್ ಗ್ಲೌಸ್ ಧರಿಸಿ ಅಳಿಲಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಿದೆ. ಗಾಯಗೊಂಡಿದ್ದ ಜಾಗದಲ್ಲಿ ಇರುವೆಗಳು ಮುತ್ತಿಕೊಂಡು ಮತ್ತಷ್ಟು ಗಾಯಗೊಳ್ಳುವಂತೆ…
ಅಪಹರಣಕಾರರ ಕಾರನ್ನು ಬೆನ್ನಟ್ಟಿದ ಪೊಲೀಸರು ಯುವಕನನ್ನು ರಕ್ಷಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಂಡೆಪಾಳ್ಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ರಾತ್ರಿ 11.40ರ ಸುಮಾರಿಗೆ ಕೋರಮಂಗಲದ 100 ಅಡಿ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆರೋಪಿಗಳು ಯುವಕನೋರ್ವನನ್ನು ಅಪಹರಿಸಿ ಅದೇ ರಸ್ತೆಯಲ್ಲಿ ಆಗಮಿಸುತ್ತಿದ್ದರು. ಪೊಲೀಸರನ್ನು ಕಂಡ ತಕ್ಷಣವೇ ಗಾಬರಿಯಿಂದ ಕಾರಿನ ಚಾಲಕ ಭದ್ರತಾ ಬ್ಯಾರಿಕೇಡ್ ಇದ್ದ ಸ್ಥಳಕ್ಕೆ ನುಗ್ಗಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಕಾರಿನಲ್ಲಿದ್ದ ಯುವಕ ಸಹಾಯಕ್ಕಾಗಿ ಪೊಲೀಸರನ್ನು ಕೂಗಿಕೊಂಡಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಕಾರನ್ನು 2 ಕಿ.ಮೀ. ದೂರದ ವರೆಗೆ ಬೆನ್ನಟ್ಟಿದ್ದು, ಕೋರಮಂಗಲ ವಾಟರ್ ಟ್ಯಾಂಕ್ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮೂವರು ಆರೋಪಿಗಳು ಕಾರಿನಿಂದ ಪರಾರಿಯಾಗಿದ್ದಾರೆ. ಯುವಕನನ್ನು ರಕ್ಷಿಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗೋಪಿ ಎಂದು ಗುರುತಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಬೀದರ್: ಕೆ ಎಸ್ ಆರ್ ಟಿ ಸಿ ಬಸ್ಸುಗಳ ಸಂಚಾರ ಅವ್ಯವಸ್ಥೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ತಾಲೂಕು ಘಟಕ ವತಿಯಿಂದ ಔರಾದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ತಾಲೂಕಿನಲ್ಲಿ ಬಸ್ ಸಂಚಾರದ ಅವ್ಯವಸ್ಥೆ ಕುರಿತು ಹಲವಾರು ಬಾರಿ ತಾಲೂಕಿನ ಸಾರಿಗೆ ವ್ಯವಸ್ಥಾಪಕರನ್ನು ಸಂಪರ್ಕಿಸಿ ಮನವಿ ಪತ್ರ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಬಸ್ ಪಾಸ್ ಇರುವ ಮಕ್ಕಳಿಗೆ ಶಾಲಾ ಅವಧಿಯಲ್ಲಿ ಬಸ್ಸುಗಳು ಸಿಗಬೇಕು, ಸಾರ್ವಜನಿಕರ ಸಂಚಾರಕ್ಕೆ ಸಮರ್ಪಕವಾಗಿ ಬಸ್ ಗಳು ಓಡಾಡಬೇಕು. ತಾಲೂಕಿನ ಹಳೆಯ ಬಸ್ ಗಳನ್ನು ಹಿಂಪಡೆದು ಹೊಸ ಬಸ್ ನೀಡಬೇಕು, ಬಸ್ ನಿಲ್ದಾಣವನ್ನು ಸ್ವಚ್ಛತೆಯಿಂದ ಕಾಪಾಡಬೇಕು, ಬಸ್ ನಿಲ್ದಾಣದ ನಿರ್ವಹಣೆಯನ್ನು ಹೊಸಬರಿಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ತಾಲೂಕಿನ ಗಡಿ ಭಾಗದಲ್ಲಿ ಹಳ್ಳಿಗಳು, ತಾಂಡಾಗಳಿಗೆ ಬಸ್ ಗಳ ವ್ಯವಸ್ಥೆಯನ್ನು ಸರಿಯಾಗಿ ಮಾಡಬೇಕು, ದೂರದ ಮುಂಬೈ, ಬೆಂಗಳೂರು, ಗುಲ್ಬರ್ಗ, ಹೈದರಾಬಾದ್ ಈ ಊರುಗಳಿಗೆ ಹೋಗಲು ಉತ್ತಮ ಬಸ್ ಗಳ…
ತುಮಕೂರು: ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಿ ಎಂದು ಅಚರ್ಡ್ ಮಾದಕ ದ್ರವ್ಯ ವ್ಯಸನಿಗಳ ಪುನರ್ವಸತಿ ಕೇಂದ್ರದ ನಿರ್ದೇಶಕರಾದ ಡಾ. ಸದಾಶಿವಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪಟ್ಟಣದ ಅಶೋಕನಗರದಲ್ಲಿರುವ ಮಹೇಶ್ ಪಿಯು ಕಾಲೇಜಿನಲ್ಲಿ ಜೆ ಸಿ ಐ ತುಮಕೂರು ಮೆಟ್ರೋ ನೇತೃತ್ವದಲ್ಲಿ ಹಾಗೂ ಮಹೇಶ್ ಪಿಯು ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು, ಶ್ರೀ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಡಾ. ಸದಾಶಿವಯ್ಯ, ನಿಖಿಲ್ ಶರ್ಮಾ, ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್ ಉದ್ಘಾಟಿಸಿ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಡಾ.ಸದಾಶಿವಯ್ಯ ಮಾತನಾಡಿ, ಭಾರತ ದೇಶದಲ್ಲಿ ಮಾದಕ ದ್ರವ್ಯಕ್ಕೆ ದಾಸರಾಗಿ ಲಕ್ಷಾಂತರ ಮಂದಿ ಹದಿ ಹರೆಯದ ವಯಸ್ಸಿನವರು ತುತ್ತಾಗಿದ್ದಾರೆ. ಇದರಿಂದ ಅವರ ಸಂಪೂರ್ಣ ಭವಿಷ್ಯ ಹಾಳಾಗಿದೆ. ವಿದ್ಯಾರ್ಥಿಗಳು ಸಹ ಧೂಮಪಾನ, ಮದ್ಯಪಾನ, ತಂಬಾಕು ಹಾಗೂ ಡ್ರಗ್ಸ್ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳ ದುಶ್ಚಟಕ್ಕೆ ದಾಸರಾಗದೆ, ವ್ಯಾಯಾಮ, ಯೋಗಾಸನ, ಕ್ರೀಡೆಗಳಲ್ಲಿ ಭಾಗವಹಿಸಿ, ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ತಂದೆ ತಾಯಿ,…
ಪ್ರತಿಯೊಬ್ಬರು ಸಮಾಜಕ್ಕೆ ಕೈಲಾದ ಕೊಡುಗೆಯನ್ನು ನೀಡಿ: ನಿವೃತ್ತ ಜಾನುವಾರು ಅಧಿಕಾರಿ ವೆಂಕಟೇಗೌಡ ತುರುವೇಕೆರೆ: ಪ್ರತಿಯೊಬ್ಬರು ಸಮಾಜಕ್ಕೆ ತಮ್ಮ ಕೈಲಾದ ಕೊಡುಗೆ ನೀಡಬೇಕು ನಿವೃತ್ತ ಜಾನುವಾರು ಅಧಿಕಾರಿ ವೆಂಕಟೇಗೌಡ ಹೇಳಿದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ತುರುವೇಕೆರೆ ನೇತೃತ್ವದಲ್ಲಿ ಪಶು ಆಸ್ಪತ್ರೆ ಮಾಯಸಂದ್ರ ಸಹಯೋಗದೊಂದಿಗೆ ತಾಲೂಕಿನ ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ಹಾಲು ಉತ್ಪದಕರ ಸಹಕಾರ ಸಂಘದ ಆವರಣದಲ್ಲಿ ಜಾನುವಾರುಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಮಾಜಕ್ಕೆ ತಮ್ಮ ಕೈಲಾದ ಕೊಡುಗೆಯನ್ನು ನೀಡಬೇಕು, ಸಮಾಜವೇ ಕೊಡುಗೆದಾರರನ್ನು ಗೌರವಿಸುತ್ತದೆ ನಿವೃತ್ತ ಅಧಿಕಾರಿಯಾದರೂ ಸಹ ಇಂದಿಗೂ ಸಹ ಜಾನುವಾರುಗಳ ಕಾಯಿಲೆ ಮುಂತಾದ ಸಮಸ್ಯೆಗಳಿಗೆ ಸಾರ್ವಜನಿಕರು ಕರೆ ಮಾಡುತ್ತಾರೆ, ನಾವು ಸಹ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ತುರ್ತು ಸಂದರ್ಭದಲ್ಲಿ ಜಾನುವಾರಗಳನ್ನು ಪರೀಕ್ಷಿಸುವ ಮೂಲಕ ಉತ್ತಮ ಚಿಕಿತ್ಸೆ ನೀಡುವ ಕಾರ್ಯವನ್ನು ಮುಂದುವರಿಸಿದ್ದೇನೆ. ರೈತರಿಗೆ ಉಪಯುಕ್ತ ಮಾಹಿತಿಗಳನ್ನು ತಿಳಿಸಿದ್ದೇನೆ, ನನ್ನ ಸೇವೆಗೆ ಸಮಾಜ ಗುರುತಿಸಿರುವುದು ನನ್ನ ಸೌಭಾಗ್ಯ ಎಂದರು. ಈ ವೇಳೆ ಮಹಿಳಾ ಹಾಲು…