Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕರ್ನಾಟಕದ ಸ್ತಬ್ದಚಿತ್ರಕ್ಕೆ ಈ ಬಾರಿ ಅನುಮತಿ ನಿರಾಕರಿಸಿತ್ತು. ಆದರೆ ಕೇಂದ್ರ ಸರ್ಕಾರದ ನಡೆಗೆ ರಾಜ್ಯದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರ್ಕಾರ ಇದೀಗ ಕೊನೆ ಕ್ಷಣದಲ್ಲಿ ಕರ್ನಾಟಕದ ನಾರಿಶಕ್ತಿ ಸ್ತಬ್ದಚಿತ್ರ ಸೇರ್ಪಡೆ ಮಾಡಿದೆ. ಈ ಮೂಲಕ ಗಣರಾಜ್ಯೋತ್ಸವದಲ್ಲಿ ಸತತ 14ನೇ ಬಾರಿ ರಾಜ್ಯದ ಟ್ಯಾಬ್ಲೋ ಪ್ರದರ್ಶನವಾಗುತ್ತಿದೆ. ರಾಜ್ಯದ ಟ್ಯಾಬ್ಲೊಗೆ ಕೇಂದ್ರದಿಂದ ಅನುಮತಿ ನಿರಾಕರಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ ರಾಜ್ಯದ ಸ್ತಬ್ದಚಿತ್ರಕ್ಕೆ ಅವಕಾಶ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ. ಈ ಮೂಲಕ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನೌಕರರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಜೂನ್ ವರೆಗೆ ಹಬ್ಬಗಳು, ಪ್ರವಾಸ, ಮದುವೆ ಮೊದಲಾದ ಕಾರ್ಯಕ್ರಮಗಳು ಹೆಚ್ಚಾಗಿರುತ್ತವೆ. ವಾಹನಗಳ ಕಾರ್ಯಾಚರಣೆಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಆಗಬಾರದು ಎನ್ನುವ ಕಾರಣಕ್ಕೆ ಕಾರ್ಯನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕೆಎಸ್ಆರ್ಟಿಸಿ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ: ಹೈನುಗಾರಿಕೆಯಲ್ಲಿ ಉತ್ತಮ ಲಾಭ ಪಡೆಯಬಹುದು, ಆದ್ದರಿಂದ ಗುಣಮಟ್ಟದ ಹಾಲು ನೀಡಿ ಎಂದು ಕೆಎಂಎಫ್ ನಿರ್ದೇಶಕ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚೆನ್ನಮಲ್ಲಯ್ಯ ರೈತರಿಗೆ ಕರೆ ನೀಡಿದರು. ತಾಲೂಕಿನ ತುಮಕೂರು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣಕಯಂತ್ರ ಮತ್ತು ಹೊಸದುರ್ಗ ಮಹಿಳಾ ಸ್ವಸಹಾಯ ಸಂಘಕ್ಕೆ 2 ಲಕ್ಷ ಚೆಕ್ ವಿತರಣೆ ಮಾಡಿ ಮಾತನಾಡಿದ ಅವರು, ರಾಜ್ಯದ 14 ಒಕ್ಕೂಟಗಳಲ್ಲಿ ತುಮಕೂರು ಎರಡನೇ ಲಾಭದಾಯಕ ಸ್ಥಾನದಲ್ಲಿದೆ. ಆಂಧ್ರ ಮತ್ತು ಕರ್ನಾಟಕ ರಾಜ್ಯಗಳ ಶಾಲಾ ಮಕ್ಕಳಿಗೆ ಹಾಲಿನ ಪುಡಿ ವಿತರಣೆಯಾಗುತ್ತಿದೆ. ನಂದಿನಿ ತುಪ್ಪ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸರಬರಾಜಾಗುತ್ತಿದೆ. ಜಿಲ್ಲಾದ್ಯಂತ ಒಟ್ಟು ಹಾಲು ಉತ್ಪಾದನೆ 7 ಲಕ್ಷ 6 ಸಾವಿರ ಲೀಟರ್ ಆಗುತ್ತಿದೆ. ಇದನ್ನು ಸಮರ್ಪಕವಾಗಿ ನಿರ್ವಹಿಸಿ ಬಂದಂತ ಲಾಭಾಂಶವನ್ನು ಹಾಲು ನಂದಿನಿ ಡೈರಿಗೆ ಹಾಕುವ ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಮುಖ್ಯಸ್ಥ ದಿಲೀಪ್ ಕುಮಾರ್, ವಿಸ್ತರಣಾಧಿಕಾರಿ ಸುನಿತಾ, ತಾಲೂಕಿನ ಸಂಘಗಳ…
ತಿಪಟೂರು: ಜನವರಿ 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ರಾಜ್ಯ ಕಾಂಗ್ರೆಸ್ ಮಹಿಳಾ ಸಮಾವೇಶ ಆಯೋಜಿಸಲಾಗಿದ್ದು, ಕನಿಷ್ಠ 2000 ಜನ ಮಹಿಳೆಯರು ತಿಪಟೂರಿನಿಂದ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಇಂದಿನಿಂದ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಪ್ರಾರಂಭಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಟ್ಟಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನವರಿ 24ರಂದು ಬಸ್ ಯಾತ್ರೆ ತುಮಕೂರು ಜಿಲ್ಲೆಗೆ ಆಗಮಿಸಲಿದ್ದು, ತಿಪಟೂರಿನಿಂದ 3,000 ಕಾರ್ಯಕರ್ತರು ಈ ಸಮಾವೇಶಕ್ಕೆ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೆನೂರು ಕಾಂತರಾಜ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಕಾಶ್, ತಾಲೂಕು ಮಾಜಿ ಅಧ್ಯಕ್ಷ ಸುರೇಶ್ ನಾ ಕೇನಳ್ಳಿ, ಮಹಿಳಾ ಘಟಕದ ಅಧ್ಯಕ್ಷ ನೂರು ಬಾನು ಸೈಫ್ ಉಲ್ಲಾ ಇತರರು…
ಸರಗೂರು: ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳು ಬುಧವಾರದಂದು ಬೆಳಿಗ್ಗೆಯಿಂದ ವಿವಿಧ ರೀತಿಯ ಪೂಜೆ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆಯನ್ನು ಮಾಡಲಾಯಿತು. ಬಳಿಕ ಮಧ್ಯಾಹ್ನ ಸಮಯದಲ್ಲಿ ಕೆರೆಯಿಂದ ಸತ್ತಿಗೆ ಮುಖಾಂತರ ಪೂರ್ಣ ಕುಂಭ ಕಳಸವನ್ನು ಹೊತ್ತು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೆರವಣಿಗೆ ನಡೆಸಲಾಯಿತು. ಚಿಕ್ಕಬರಗಿ ಹೆಡಿಯಾಲ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡಿಕೊಂಡು ಉದ್ದಕ್ಕೂ ನಗಾರಿ ತಮಟೆ ಕಲಾತಂಡಗಳೊಡನೆ ಸಾಗಿ ವರದರಾಜ ಸ್ವಾಮಿ ದೇವಾಲಯ ಬಳಿ ತಲುಪಿತ್ತು . ನಂತರ ವಿಶೇಷ ಪೂಜೆ ಮತ್ತು ಭಜನೆ ಹಾಗೂ ದೀಪಾರಾಧನೆ ನಡೆಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಯಜಮಾನರು ಮತ್ತು ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಮುಖಂಡರು ಯುವಕರು ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರಗೂರು: ಪಟ್ಟಣದ ವಿರಕ್ತಮಠದಲ್ಲಿ ತಾಲ್ಲೂಕು ವಿಶ್ವಕರ್ಮ ಸೇನಾ ಸಮಿತಿ ವತಿಯಿಂದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಸೇನಾ ಸಮಿತಿ ಅಧ್ಯಕ್ಷ ಲೋಕೇಶ್, ಗ್ರಾಪಂ ಅಧ್ಯಕ್ಷ ಮುಳ್ಳೂರು ಗೊವಿಂದಚಾರಿ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಸರಗೂರು ತಾಲ್ಲೂಕಿನ ಪಟ್ಟಣದ 11 ವಾರ್ಡಿನ ಪಡಗಲು ವಿರಕ್ತಮಠದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದಚಾರ್, ಸನಾತನ ಇತಿಹಾಸ ಹೊಂದಿದ ವಿಶ್ವಕರ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಸಮಾಜ ವಿದ್ಯಾವಂತರಾಗಿ, ಸಂಘಟಿತರಾಗಿಗಬೇಕು ಎಂದು ಕರೆ ನೀಡಿದರು. ವಿಶ್ವಕರ್ಮ ಸೇನಾ ಸಮಿತಿ ಅಧ್ಯಕ್ಷ ಲೋಕೇಶ್ ಮಾತನಾಡಿ, ನಮ್ಮ ಸಮಾಜಕ್ಕೆ ಸರಿಯಾದ ಸಾಮಾಜಿಕ ನ್ಯಾಯ ಸಿಗಬೇಕಿದೆ. ಸಮಾಜಕ್ಕೆ ಮೀಸಲಾತಿಯ ಅಗತ್ಯವಿದ್ದು, ಸಮಾಜದಲ್ಲಿ ತುಳಿತಕ್ಕೊಳಗಾದ ಅರ್ಹರಿಗೆ ಮೀಸಲಾತಿ ದೊರಕಬೇಕು ಎಂದರು. ವಿರಕ್ತ ಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಮಾತನಾಡಿ, ಯಾವುದೇ ಧರ್ಮ ಜಾತಿ ಮೀಸಲಾತಿಗೆ ಒಳಪಡಿಸ ಬೇಕಾದರೆ ಕುಲಶಾಸ್ತ್ರ ಅಧ್ಯಯನವಾಗಬೇಕು. ಬೇರೆ ಸಮಾಜಕ್ಕೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳಬೇಕು. ವಿಶ್ವಕರ್ಮ ಸಮಾಜದಲ್ಲಿ ಅನೇಕ ಸಂಘಟನೆಗಳಿದ್ದು…
ಹೊಸ ರಾಜಕೀಯ ಪಕ್ಷ ಘೋಷಿಸಿ ಆಡಳಿತ ಪಕ್ಷ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡಿದೆ. ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ಗೃಹ ಇಲಾಖೆ, ಸಿಬಿಐಗೆ ಅನುಮತಿ ನೀಡಿ ಆದೇಶ ನೀಡಿದೆ. ಈ ಬಗ್ಗೆ ಹೈಕೋರ್ಟ್ ಗೆ ಮಾಹಿತಿ ನೀಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ನೀಡಿದೆ. ಗೃಹ ಇಲಾಖೆಯಿಂದ ಸಿಬಿಐಗೆ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರ್ಕಾರಿ ಜಾಹೀರಾತಿನ ನೆಪದಲ್ಲಿ ರಾಜಕೀಯ ಜಾಹೀರಾತು ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷಕ್ಕೆ 163.62 ಕೋಟಿ ರೂಪಾಯಿ ವಸೂಲಾತಿ ನೋಟಿಸ್ ನೀಡಿದ್ದು 10 ದಿನಗಳೊಳಗೆ ಮೊತ್ತವನ್ನು ಪಾವತಿಸುವಂತೆ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (ಡಿಐಪಿ) ಸೂಚಿಸಿದೆ.. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಪಕ್ಷದ ವಿರುದ್ಧ ಕ್ರಮ ಕೈಗೊಂಡ ಸುಮಾರು ಒಂದು ತಿಂಗಳ ನಂತರ ಹೊಸ ಬೆಳವಣಿಗೆಯಾಗಿದೆ.ಆಮ್ ಆದ್ಮಿ ಪಕ್ಷಕ್ಕೆ ನೀಡಿರುವ ನೋಟಿಸ್ ಪ್ರಕಾರ, 2016-2017ನೇ ಸಾಲಿನಲ್ಲಿ ಸರ್ಕಾರಿ ಜಾಹೀರಾತುಗಳ ಹೆಸರಿನಲ್ಲಿ ರಾಜಕೀಯ ಜಾಹೀರಾತುಗಳನ್ನು ಮುದ್ರಿಸಲು ಖಜಾನೆಯಿಂದ ಬಂದ ಹಣವನ್ನು ಬಳಸಲಾಗಿದೆ. ಈ ಜಾಹೀರಾತುಗಳು ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಲಾಗಿದೆ. ವಸೂಲಾತಿ ಸೂಚನೆಯು ಮೊತ್ತದ ಮೇಲಿನ ಬಡ್ಡಿಯನ್ನು ಸಹ ಒಳಗೊಂಡಿದೆ ಮತ್ತು AAP ಸಂಪೂರ್ಣ ಮೊತ್ತವನ್ನು 10 ದಿನಗಳಲ್ಲಿ ಪಾವತಿಸಲು ಒತ್ತಾಯಿಸುತ್ತದೆ. ನಿಗದಿತ ಸಮಯದೊಳಗೆ ಹಣ ಠೇವಣಿ ಇಡದಿದ್ದರೆ ನಿಯಮಾನುಸಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಸರ್ಕಾರದ ಮಾಹಿತಿ ಮತ್ತು ಪ್ರಸಾರ ನಿರ್ದೇಶನಾಲಯ…
ಶಬರಿಮಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆಯಿಂದ 707157 ಟಿನ್ ಪ್ರಸಾದ ಮೊಹರು. ಇದರಿಂದ ದೇವಸ್ವಂ ಮಂಡಳಿಗೆ ಏಳು ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಾಗಿದೆ. 62 ರಿಂದ 69 ರ ಬ್ಯಾಚ್ಗಳ ಅವರಣವನ್ನು ಸೀಲ್ ಮಾಡಿ ಗೋದಾಮಿಗೆ ಸ್ಥಳಾಂತರಿಸಲಾಯಿತು. ಪ್ರಸಾದ ತಯಾರಿಕೆಗೆ ಬಳಸುವ ಏಲಕ್ಕಿಯಲ್ಲಿ ಕ್ರಿಮಿನಾಶಕಗಳ ಅಂಶ ಕಂಡುಬಂದ ಹಿನ್ನೆಲೆಯಲ್ಲಿ ಪ್ರಸಾದ ವಿತರಣೆಯನ್ನು ನಿಲ್ಲಿಸಲಾಗಿತ್ತು. ಉಳಿದ ಏಲಕ್ಕಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಏಲಕ್ಕಿ ಗುತ್ತಿಗೆದಾರರ ವಿರುದ್ಧ ಮಂಡಳಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸೂಚಿಸಲಾಗಿದೆ. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವುದು ಸೇರಿದಂತೆ ಕ್ರಮ ಕೈಗೊಳ್ಳಲು ಆಡಳಿತ ಮಂಡಳಿ ಸಿದ್ಧತೆ ನಡೆಸಿದೆ. ಗುತ್ತಿಗೆದಾರರಿಂದ ನಷ್ಟವನ್ನು ವಸೂಲಿ ಮಾಡಲು ಮಂಡಳಿ ಮುಂದಾಗಿದೆ. ಶಬರಿಮಲೆಯಲ್ಲಿ ಈಗ ಪ್ರಸಾದ ವಿತರಣೆ ಆರಂಭವಾಗಿದೆ. ಏಲಕ್ಕಿ ಇಲ್ಲದ ಪ್ರಸಾದ ಹಂಚಲಾಗುತ್ತದೆ. ಪ್ರಸಾದ ವಿತರಣೆ ಸ್ಥಗಿತಗೊಂಡಿದ್ದರಿಂದ ಗುರುವಾರ ಸಂಜೆ ಬೆಟ್ಟಕ್ಕೆ ಇಳಿದ ಭಕ್ತರಿಗೆ ಪಂಚಾಮೃತ ಪ್ರಸಾದ ಖರೀದಿಸಲು ಸಾಧ್ಯವಾಗಲಿಲ್ಲ. ಸ್ಥಾವರವು ದಿನಕ್ಕೆ 2,40,000 ಟಿನ್ ಪ್ರಸಾದವನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಪಂಚಾಮೃತ ಬಿಕ್ಕಟ್ಟನ್ನು ಶೀಘ್ರವಾಗಿ…
ರಾಷ್ಟ್ರೀಯ ಯುವ ದಿನ…. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ ಗೌರವ ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು….. ಭಾರತದ ನಿಜವಾದ ಖಾವಿ ಧಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ….. ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು ” ಭಾರತದ ಯುವ ಶಕ್ತಿ ಹೊಂದಿರಬೇಕು ಎಂದು ಆಶಿಸಿದ್ದವರು ಸ್ವಾಮಿ ವಿವೇಕಾನಂದರು. ಆದರೆ ಈಗಿನ ವಾಸ್ತವ ಏನು…… ಸೀಡ್ ಲೆಸ್ ಯುವ ಜನಾಂಗ….. ಹೌದು ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ. ಜಾಗತೀಕರಣದ ಪ್ರಭಾವದಿಂದಾಗಿ ಭಾರತದ ಮಧ್ಯಮ ವರ್ಗದ ಕುಟುಂಬಗಳಲ್ಲಿ ಬಡತನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಯಿತು. ಊಟ ಬಟ್ಟೆ ವಸತಿಯ ವಿಷಯದಲ್ಲಿ ಮಕ್ಕಳಿಗೆ ಹೆಚ್ಚಿನ ಕೊರತೆಯಾಗದಂತೆ ಪೋಷಕರು ನೋಡಿಕೊಂಡರು.…