Author: admin

ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಸಿರುವ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಚಿಂಚೋಳಿ ತಾಲೂಕಿನ ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಶಬ್ಧದೊಂದಿಗೆ ಲಘು ಭೂಕಂಪನವಾಗಿದ್ದು, ಲಘು ಭೂಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಾತ್ರಿಯಲ್ಲ ಮನೆಯಿಂದ ಹೊರಗಡೆ ಕಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ವಸಾಹತುಶಾಹಿ ಇತಿಹಾಸ ನೆನಪಿಸುವ ಸೇಂಟ್ ಜಾರ್ಜ್ ಕ್ರಾಸ್ ಕೈಬಿಟ್ಟು, ಭಾರತೀಯ ನೌಕಾಪಡೆ ನೂತನ ಧ್ವಜವನ್ನು ಬರಮಾಡಿಕೊಳ್ಳಲು ಸಜ್ಜಾಗಿದೆ. ಸೆ. 2 ರಂದು ಪ್ರಧಾನಿ ಮೋದಿ ಹೊಸ ಧ್ವಜವನ್ನು ಅನಾವರಣಗೊಳಿಸಲಿದ್ದಾರೆ. ಭಾರತದ ಶ್ರೀಮಂತ ಕಡಲ ಪರಂಪರೆ ಅನುಸಾರವಾಗಿ ನೌಕಾ ಪಡೆಯ ಹೊಸ ಧ್ವಜ ವಿನ್ಯಾಸ ಗೊಳಿಸಲಾಗಿದೆ. ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಅವರು ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಐಎನ್‌ಎಸ್ ವಿಕ್ರಾಂತ್ ಎಂದು ಮೊದಲ ಸ್ವದೇಶಿ ವಿಮಾನವಾಹಕ ನೌಕೆಯನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಅದನ್ನು ದೇಶಕ್ಕೆ ಹಸ್ತಾಂತರಿಸಲಿದ್ದಾರೆ. ಈ ಸಮಯದಲ್ಲಿ, ವಸಾಹತುಶಾಹಿ ಭೂತಕಾಲವನ್ನು ತೆಗೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಅನುಗುಣವಾಗಿ ಭಾರತೀಯ ನೌಕಾಪಡೆಯ ಹೊಸ ಧ್ವಜವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ. ನೌಕಾಪಡೆ ಇತಿಹಾಸ: ಭಾರತದಲ್ಲಿ ಅ.2 1934 ರಂದು ರಾಯಲ್ ಇಂಡಿಯನ್ ನೇವಿ ಎಂಬ ಹೆಸರಿನಲ್ಲಿ ನೌಕಾಪಡೆ ಆರಂಭಿಸಲಾಯಿತು. 1950ರ ಜ. 26ಕ್ಕೆ ದೇಶವನ್ನು ಗಣರಾಜ್ಯ ಎಂದು ಘೋಷಿಸಿದ ಬಳಿಕ ‘ರಾಯಲ್’ ಪದ ಬಿಟ್ಟು ‘ಭಾರತೀಯ ನೌಕಾಪಡೆ’ ಎಂಬ…

Read More

ನೈರುತ್ಯ ಮುಂಗಾರು ಚುರುಕುಗೊಂಡಿರುವ ಕಾರಣ ನಿರಂತರ ಮಳೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾನಿಯನ್ನುಂಟು ಮಾಡಿದೆ. ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಇನ್ನೂ ಸಕ್ರಿಯವಾಗಿದೆ ಮತ್ತು ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಇನ್ನು ಕಳೆದ 36 ಗಂಟೆಗಳಲ್ಲಿ ಸುರಿದ ಮಳೆಯಿಂದಾಗಿ ಐಟಿ-ಸಿಟಿ ಬೆಂಗಳೂರು ನಗರದಲ್ಲಿ ಹಲವಾರು ಜನವಸತಿ ಪ್ರದೇಶಗಳು ಮತ್ತು ರಸ್ತೆಗಳು ಮೊಣಕಾಲು ಆಳದ ನೀರಿನಿಂದ ಜಲಾವೃತವಾಗಿದ್ದು, ಜನಜೀವನದ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮ ಬೀರಿದೆ. ಐಟಿ ಕಾರಿಡಾರ್‌ನಲ್ಲಿ ವಾಹನಗಳು ನೀರಿನಲ್ಲಿ ಹರಿಯಲಾರಂಭಿಸಿದಾಗ ಮುಳುಗಡೆಯಾದ ಹೊರವರ್ತುಲ ರಸ್ತೆ ಪ್ರಯಾಣಿಕರಿಗೆ ದೊಡ್ಡ ಸಮಸ್ಯೆಯಾಯಿತು. ಅನೇಕ ವಸತಿ ಪ್ರದೇಶಗಳಲ್ಲಿ, ಅಧಿಕಾರಿಗಳು ಪರಿಹಾರ ಮತ್ತು ರಕ್ಷಣೆಗಾಗಿ ತೆಪ್ಪಗಳೊಂದಿಗೆ ಆಗಮಿಸಿದರು. ನಗರದ ಮೂಲ ಸೌಕರ್ಯಗಳು ಸ್ಥಗಿತಗೊಂಡಿದ್ದು, ಸರ್ವಾಂಗೀಣ ದುಸ್ಥಿತಿ ಉಂಟಾಗಿದೆ. ಮಳೆ ಪೀಡಿತ ಪ್ರದೇಶಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಸರ್ಜಾಪುರದ ರೇನ್‌ಬೋ ಡ್ರೈವ್‌ ಲೇಔಟ್‌ನಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲು ಅಧಿಕಾರಿಗಳು ತೆಪ್ಪಗಳನ್ನು…

Read More

ಬೆಂಗಳೂರು ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸಲು ಬಿಬಿಎಂಪಿ ನಿರ್ಧರಿಸಿದೆ. ಈ ಮೂಲಕ ಕಲಾವಿದರಿಗೆ ಬಿಬಿಎಂಪಿ ಸಿಹಿ ಸುದ್ದಿ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್‌ಹಾಲ್) ಬಾಡಿಗೆ ದರವನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆ ಮೂಲಕ ಹಾಲಿ ದರವನ್ನು ಕಡಿಮೆ ಮಾಡಿದೆ. ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ, ರಂಗಭೂಮಿ ಕಲಾವಿದರಿಗೆ ಕಡಿಮೆ ದರದಲ್ಲಿ ಸಿಗುವಂತೆ ದರ ಕಡಿತಗೊಳಿಸಿದೆ. ಈ ಪರಿಷ್ಕೃತ ದರ ಸೆಪ್ಟಂಬರ್‌ 1ರಿಂದ ಜಾರಿಗೆ ತರುವ ಮೂಲಕ ಕಲಾವಿದರಿಗೆ ಗೌರಿ ಗಣೇಶ ಹಬ್ಬದ ಕೊಡುಗೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್ ಪುರ ಅವರು, ಟೌನ್‌ಹಾಲ್‌ ಈ ಹಿಂದೆ ಪೂರ್ತಿ ದಿನ (ಬೆಳಗ್ಗೆ 8 ರಿಂದ ರಾತ್ರಿ 10. ಗಂಟೆವರೆಗೆ) ಎಸಿ ಸಹಿತ (ಹವಾ ನಿಯಂತ್ರಿತ) ಬಾಡಿಗೆ ಬೇಕಾದರೆ 75,000 ರೂ. ಹಾಗೂ ನಾನ್…

Read More

ವಿಭಿನ್ನ ಪಾತ್ರಗಳನ್ನು ಮಾಡುವ ಮೂಲಕ ಸೈ ಎನಿಸಿಕೊಂಡಿರುವ ದಕ್ಷಿಣ ಭಾರತದ ಖ್ಯಾತ ನಟ ಸುಮನ್ ನಿಧನರಾಗಿದ್ದಾರೆ ಎಂಬ ಸುಳ್ಳುಸುದ್ದಿ ಹಬ್ಬಿಸಲಾಗಿದೆ. ಈ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳಲ್ಲಿ ಹಲವು ವಿಡಿಯೋ ಹರಿಬಿಡಲಾಗಿದ್ದು, ಇದರ ವಿರುದ್ಧ ಕಾನೂನು ಸಮರ ಸಾರಲು ಸುಮನ್ ಮುಂದಾಗಿದ್ದಾರೆ. ಈಗಾಗಲೇ ಅನಾರೋಗ್ಯ & ಸಾವಿನ ಬಗೆಗಿನ ಸುಳ್ಳುಸುದ್ದಿಯಿಂದ ಅನೇಕ ಸೆಲೆಬ್ರಿಟಿಗಳು ಬೇಸತ್ತಿದ್ದಾರೆ. ‘ನಾನು ಬದುಕಿದ್ದೇನೆ & ಆರೋಗ್ಯವಾಗಿದ್ದೇನೆ’ ಎಂದು ಸ್ಪಷ್ಟನೆ ನೀಡುವ ಅನಿವಾರ್ಯತೆ ಸೃಷ್ಟಿಯಾಗಿದೆ.ಕೆಲವು ಯೌಟ್ಯೂಬ್ ಚಾನೆಲ್ ಹಾಗೂ ವೆಬ್ಪೋರ್ಟೆಲ್ ನ್ಯೂಸ್ ಚಾನೆಲ್ ಮಾಡುವ ಕೆಲಸಗಳಿಂದ ಸಿನಿಮಾ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳಿಗೆ ಅಪಮಾನ ಹಾಗೂ ಅವರ ಮನಸ್ಸಿಗೆ ಘಾಸಿ ಮಾಡುತ್ತಿದೆ ಸರ್ಕಾರ ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು :ಮಳೆ ಬಂದ ವೇಳೆ ಸವಾರರು ಅಂಡರ್‌ಪಾಸ್ ಕೆಳಗೆ ವಾಹನ ನಿಲ್ಲಿಸಿ, ಆಶ್ರಯ ಪಡೆಯುತ್ತೇವೆ. ಆದರೆ, ಇನ್ನು ಅಂಡರ್‌ಪಾಸ್‌ನಲ್ಲಿ ವಾಹನ ನಿಲ್ಲಿಸಿದರೆ, ದಂಡ ಹಾಕುವುದಾಗಿ ಬೆಂಗಳೂರು ಸಂಚಾರ ಜಂಟಿ ಪೊಲೀಸ್ ಕಮಿಷನರ್ B.R.ರವಿಕಾಂತೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ‘ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸುವುದರಿಂದ ಸಂಚಾರಕ್ಕೆ ಸಮಸ್ಯೆಯಾಗಿ, ಟ್ರಾಫಿಕ್ ಜಾಮ್ ಆಗುತ್ತಿದೆ. ಹೀಗಾಗಿ, ವಾಹನ ನಿಲ್ಲಿಸುವ ಮಾಲೀಕರ ವಿರುದ್ಧ ದಂಡ, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ. ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ. ನಾಯಂಡಹಳ್ಳಿ, ವಿಂಡ್ಸನ್ ಮ್ಯಾನರ್​ ಮಳೆ ಬಂತೆಂದು ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿಸಲಾಗುತ್ತಿದ್ದು, ಇದರಿಂದ ಟ್ರಾಫಿಕ್​ಜಾಮ್​ ಉಂಟಾಗುತ್ತಿತ್ತು. ಇಂತಹ ಸಂದರ್ಭದಲ್ಲಿ ಹೆವಿ ವೆಹಿಕಲ್ಸ್​ ಪಾಸ್​ ಆದಾಗ ಅಪಘಾತವಾಗುತ್ತದೆ. ಹೀಗಾಗಿ ಇನ್ಮುಂದೆ ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸದಂತೆ ಸೂಚನೆ ನೀಡಲಾಗಿದೆ. ಕೆಳಸೇತುವೆಯಲ್ಲಿ ಗಾಡಿ ನಿಲ್ಲಿಸಿ ಟ್ರಾಫಿಕ್​ಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಕಲಬುರಗಿ ಜಿಲ್ಲೆಯ ಮೂಲದಕಲಶೆಟ್ಟಿ ಕುಟುಂಬದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ(25) 3 ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಕಲಶೆಟ್ಟಿ (55) ಎಂದು ಗುರುತಿಸಲಾಗಿದೆ. ಕಾರು ಚಾಲಕ, ಇಬ್ಬರು ಮಕ್ಕಳು ಹಾಗೂ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಕಾರು ಓವರ್ ಟೇಕ್ ಮಾಡಲು ಹೋಗಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಬಳಿಕ ತಿರುಗಿದ ಕಾರಿಗೆ ಹಿಂಬದಿಯಿಂದ ಬಸ್​ ಗುದ್ದಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ : ಕಳೆದ ಬಾರಿ ನುಗ್ಗಿದ ಪ್ರವಾಹದಿಂದ ಉತ್ತರ ಕರ್ನಾಟಕದ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಒಂದು ಹೊತ್ತು ಊಟ ಮಾಡಿ, ಗುಡಿ ಗುಂಡಾರಗಳಲ್ಲಿ ಚಿಕ್ಕ ಮಕ್ಕಳನ್ನು ಕಟ್ಟಿಕೊಂಡು ಜೀವನ ಸಾಗಿಸಿದ್ದಾರೆ. ಇನ್ನು ಬೆಳೆದ ಬೆಳೆಯಂತು ಅಕ್ಷರಶಃ ಕೊಚ್ಚಿಕೊಂಡು ಹೋಗಿದೆ. ತಾವು ಕಷ್ಟಪಟ್ಟು ಬೆವರು ಹರಿಸಿ ಬೆಳೆದ ಬೆಳೆ ಕಣ್ಣ ಮುಂದೆ ನೀರುಪಾಲದ ಸ್ಥಿತಿಯನ್ನು ಕಂಡು ಎಂತಹ ವ್ಯಕ್ತಿಯೂ ನಿಂತಲ್ಲೇ ಕುಸಿದು ಹೋಗಿರುತ್ತಾನೆ. ಅಂತಹದೇ ಪರಿಸ್ಥಿತಿಯನ್ನು ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗೂರ ಗ್ರಾಮದ ರೈತ ಸಂಗಪ್ಪ ಚಂದ್ರಪ್ಪ ರೇವಡಿ ಅನುಭವಿಸಿದ್ದರು. ತೋಟಗಾರಿಕಾ ಇಲಾಖೆ ಸಹಕಾರದಿಂದ ನರೇಗಾ ಯೋಜನೆಯಡಿ ಆಗಷ್ಟೆ ನಾಟಿ ಮಾಡಿದ ಪೇರಳ ಸಸಿಗಳು ನೀರಲ್ಲಿ ನಿಂತಿದ್ದವು. ರೈತ ಸಂಗಪ್ಪ ಅಕ್ಷರಶಃ ಕುಸಿದು ಹೋಗಿದ್ರು.1 ಏಕರೆ 20 ಗುಂಟೆಯಲ್ಲಿ ಇಡಿ ಕುಟುಂಬವೇ ಬೆವರು ಹರಿಸಿ ಬೆಳೆದ ಬೆಳೆ ಇನ್ನೇನು ಕೈಗೆ ಬರುವ ಹೊತ್ತಿಗೆ ಪ್ರವಾಹ ರಕ್ಕಸನಂತೆ ಬಂದು ನಿಂತಿತ್ತು. ಇಡಿ ಕುಟುಂಬವೇ ಕಂಗಾಲಾಗಿ ಹೋಗಿತ್ತು. ಆದರೇ…

Read More

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ನಗರದ ಹೊರವಲಯದಲ್ಲಿ ನಿರ್ಮಿಸಲಾಗಿರುವ ‘ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆಯನ್ನು ಅವರು ಉದ್ಘಾಟಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬೆಳಿಗ್ಗೆ 11:30ಕ್ಕೆ ಬರಲಿರುವ ಅವರು ಹೆಲಿಕಾಪ್ಟರ್​ ಮೂಲಕ ನೆಲಮಂಗಲದಲ್ಲಿರುವ ಎಸ್​ಡಿಎಂ ನಿಸರ್ಗ ಕೇಂದ್ರ ತಲುಪಲಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿರುವ ಸಂಸ್ಥೆಯ ಮುಖ್ಯಸ್ಥರಾದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕ್ಷೇಮವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಹ ಉಪಸ್ಥಿತರಿರಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸುಮೋಟೋ ಕೇಸ್ ದಾಖಲಿಸಲಾಗಿದೆ. ಚಿತ್ರದುರ್ಗದ ಎಸ್ ಪಿ ಅವರಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿ ಗೆ ನೋಟಿಸ್ ನೀಡಿದೆ. ಏಳು ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದ್ದು, ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More