Subscribe to Updates
Get the latest creative news from FooBar about art, design and business.
- ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
- ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
- ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
- ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
Author: admin
ಕಾರ್ತಿಕ ಸೋಮವಾರ ಹಿನ್ನಲೆ ಹುಟ್ಟೂರು ಹರದನಹಳ್ಳಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭೇಟಿ ನೀಡಿದ್ದಾರೆ. ಮನೆ ದೇವರಾದ ದೇವೇಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಮಹಾ ರುದ್ರಾಭಿಷೇಕ ಪೂಜೆಯಲ್ಲಿ ಗೌಡರ ಕುಟುಂಬ ಸದಸ್ಯರಾದ ಪತ್ನಿ ಚನ್ನಮ್ಮ, ಮಗ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ ಭಾಗಿಯಾಗಿದ್ದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿರೋ ದೇವೇಶ್ವರ ದೇವಾಲಯಕ್ಕೆ ಕಳೆದ ಒಂದು ವರ್ಷದಿಂದ ಇದೇ ಮೊದಲ ಬಾರಿಗೆ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಬ್ಬು ಬೆಳೆಗೆ ಬೆಲೆ ನಿಗದಿ ಪಡಿಸಲು ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ವಿಧಾನಸಭೆಯಲ್ಲೂ ಪ್ರಸ್ತಾಪ ಮಾಡಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಸಿದ್ದರಾಮಯ್ಯ ರೈತರಿಗೆ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಹಲವು ಬಾರಿ ಕಬ್ಬು ಸೇರಿದಂತೆ ಎಲ್ಲ ಬಗೆಯ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸುವಂತೆ ಹಾಗೂ ರೈತರ ನಾನಾ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಸರಕಾರಕ್ಕೆ ಪತ್ರ ಬರೆದಿದ್ದರು. ಈ ಬಗ್ಗೆ ಅನೇಕ ವಿವರಗಳನ್ನು ಆಗಾಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದರು. ಕಬ್ಬು ಮತ್ತೆ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ರೈತರು ಕಳೆದ ಒಂದು ವಾರದಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಪ್ರತಿಭಟನಾನಿರತ ರೈತರ ಭೇಟಿ ವೇಳೆ ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಆತ್ಮಾನಂದ ಮತ್ತಿತರರು ಸಿದ್ದರಾಮಯ್ಯ…
ರಾಜ್ಯಾದ್ಯಂತ ಮಾತ್ರವಲ್ಲದೆ ದೇಶದ ಗಮನ ಸೆಳೆದ ಪೇ ಸಿಎಂ ಅಭಿಯಾನ ಜೋರಾಗುತ್ತಿದೆ. ಕಲಬುರಗಿ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ ಹಿನ್ನೆಲೆ ಕಲಬುರಗಿಯಲ್ಲಿ ಪೇ ಸಿಎಂ ಪೋಸ್ಟರ್ ಗಳು ರಾರಾಜಿಸುತ್ತಿವೆ. ಸಂಗಮೇಶ್ವರ ನಗರ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಅನೇಕ ಕಡೆ ಪೇ ಸಿಎಂ ಪೋಸ್ಟರ್ ಗಳು ರಾರಾಜಿಸುತ್ತಿವೆ. ತಡರಾತ್ರಿ ಪೇ ಸಿಎಂ ಪೋಸ್ಟರ್ ಅಂಟಿಸಿರೋ ಕೈ ಕಾರ್ಯಕರ್ತರು ಅಭಿಯಾನ ತೀವ್ರಗೊಳಿಸಿದ್ದಾರೆ. ವಾರದ ಹಿಂದೆ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಅಂತ ಬಿಜೆಪಿ ಮುಖಂಡರು ಪೋಸ್ಟರ್ ಅಂಟಿಸಿದ್ದರು. ಈ ಘಟನೆ ಚಿತ್ತಾಪುರ ಕ್ಷೇತ್ರ ಹಾಗೂ ಕಲ್ಬುರ್ಗಿಯಲ್ಲಿ ನಗರದಲ್ಲೂ ಹಲವಾರು ಗಲಾಟೆಗಳಿಗೆ ಕಾರಣವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ಕೂಡ ದಾಖಲಾಗಿದೆ. ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡ್ತೀನಿ ಎಂಬ ವಿವಾದಾತ್ಮಕ ಹೇಳಿಕೆ ಕೇಳಿಬಂದಿತ್ತು. ಹಾಗಾಗಿ, ಬಿಜೆಪಿ ನಾಯಕರಿಗೆ ಟಕ್ಕರ್ ಕೊಡಲು ಕೈ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸಿದ್ದಾರೆ. ಈ ಹಿಂದೆ ಸಿಎಂ ನಿವಾಸದ…
ಮದುವೆ ಆಗಲು ಒಪ್ಪಲಿಲ್ಲ ಅಂತ ಲಿವ್ ಒನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಯಸಿಯನ್ನು ಪ್ರಿಯಕರ 35 ತುಂಡುಗಳಾಗಿ ಕತ್ತರಿಸಿ ಕೊಂದು 18 ದಿನಗಳ ನಂತರ ಕಾಡಿನಲ್ಲಿ ಬಿಸಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಅಫ್ತಾಬ್ ಅಮಿನ್ ಪೂನವಾಲಾ(28) ಪ್ರೇಯಸಿ ಶ್ರದ್ಧಾ ಎಂಬಾಕೆಯನ್ನು ಮೇ 18 ರಂದು ಹತ್ಯೆಗೈದು ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪ್ರೇಯಸಿಯನ್ನು ಕೊಚ್ಚಿ ಕೊಲೆ ಮಾಡಿದ್ದೂ ಅಲ್ಲದೇ ಆಕೆಯನ್ನು ತುಂಡು ತುಂಡಾಗಿ ಕತ್ತರಿಸಿ ಪ್ರತಿ ದಿನ ರಾತ್ರಿ 2 ಗಂಟೆಗೆ ಕಾಡಿಗೆ ಹೋಗಿ ಬಿಸಾಡುತ್ತಿದ್ದ. ಶ್ರದ್ಧಾಳ ತುಂಡರಿಸಿದ ದೇಹವನ್ನು ಫ್ರಿಡ್ಜ್ ನಲ್ಲಿ ಕಾಯ್ದಿರಿಸಿದ್ದ ಅಪ್ತಾಬ್, ಮೆಹ್ರುಲ್ ಕಾಡಿನಲ್ಲಿ ದಿನಕ್ಕೊಂದು ಜಾಗದಲ್ಲಿ ದೇಹದ ತುಂಡುಗಳನ್ನು ಬಿಸಾಡುತ್ತಿದ್ದ. 26 ವರ್ಷದ ಶ್ರದ್ಧಾ ಮುಂಬೈನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕಾಲ್ ಸೆಂಟರ್ ನಲ್ಲಿ ಕೆಲಸಕ್ಕೆ ಸೇರಿದ್ದು ಅಲ್ಲಿ ಅಫ್ತಾಬ್ ಪರಿಚಯವಾಗಿದೆ. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿದ್ದು ಮನೆಯಲ್ಲಿ ಮದುವೆ ಪ್ರಸ್ತಾಪ ಮಾಡಿದ್ದಾರೆ. ಮನೆಯಲ್ಲಿ ಈ ಸಂಬಂಧಕ್ಕೆ ಒಪ್ಪಿಗೆ ದೊರೆಯದ ಕಾರಣ ಇಬ್ಬರೂ ದೆಹಲಿಯಲ್ಲಿ…
ಮುಂಬೈ: 32 ಕೋಟಿ ಮೌಲ್ಯದ 61 ಕಿಲೋ ಚಿನ್ನವನ್ನ ವಶಪಡಿಸಿಕೊಂಡು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಏಳು ಜನರನ್ನು ಬಂಧಿಸಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಕತಾರ್ ಏರ್ ವೇಸ್ ವಿಮಾನದಲ್ಲಿ ಮುಂಬೈಗೆ ಬಂದಿದ್ದರು. ಭಾರತಕ್ಕೆ ಚಿನ್ನ ತರುವುದಾಗಿ ಹಣದ ಆಮಿಷ ಒಡ್ಡಲಾಗಿದ್ದು, ಅವರಿಗೆ ಭಾರತದಲ್ಲಿನ ಕಸ್ಟಮ್ಸ್ ಕಾನೂನುಗಳ ಬಗ್ಗೆ ತಿಳಿದಿರಲಿಲ್ಲ. ಹಾಗಾಗಿ ಇವರೆಲ್ಲರೂ ಅಷ್ಟೊಂದು ಚಿನ್ನವನ್ನ ತಂದರು ಎನ್ನಲಾಗ್ತಿದೆ. ಇನ್ನು ಎಲ್ಲಾ ಆರೋಪಿಗಳನ್ನ ಪೊಲೀಸರು ಬಂಧಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಗೋವಿನಜೋಳ ಮಷಿನ್ ಚಕ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟೆ ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ರೇಣುಕಾ ಮಾದರ (45) ಮೃತ ದುರ್ದೈವಿ. ಕೂಲಿ ಕೆಲಸ ಬಂದಿದ್ದ ರೇಣುಕಾ, ಕೆಲಸ ಮಾಡುವಾಗ ಗೋವಿನಜೋಳ ಮಷಿನ್ ಚಕ್ರಕ್ಕೆ ಸೀರೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕಾಲೇಜು ಹಂತದಲ್ಲಿಯೂ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ 2021ನೇ ಸಾಲಿನ ಆಗಸ್ಟ್ 7ರಂದು ಹೊರಡಿಸಿದ್ದ ಎರಡು ಆದೇಶಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿತ್ತು. ಆದರೆ ಇದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರ ಕನ್ನಡ ಕಲಿಕೆ ಕಡ್ಡಾಯಕ್ಕೆ ಅಡ್ಡಗಾಲು ಹಾಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊಲ್ಲಾಪುರ: ಅಪಘಾತದಲ್ಲಿ ಮರಾಠಿ ನಟಿ ಕಲ್ಯಾಣಿ ಕುರಾಳೆ ಸಾವನ್ನಪ್ಪಿದ ಘಟನೆ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. 32 ವರ್ಷದ ಕಲ್ಯಾಣಿ ಪ್ರಯಾಣಿಸುತ್ತಿದ್ದ ಮೋಟಾರ್ ಸೈಕಲ್ ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ತುಜ್ಯಹತ್ ಜೀವ್ ರಂಗಾ ಟಿವಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿರುವ ಕಲ್ಯಾಣಿ ಕುರಾಳೆ ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದಾಗ ಗಾಯಗೊಂಡ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತಲುಪಿದಾಗ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಲಬುರಗಿ : ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ್ ಹೇಳಿದರು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿತ್ತು. ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ್ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬದಲಾದ ಆಹಾರ ಪದ್ಧತಿ, ಜೀವನ ಶೈಲಿಗಳಿಂದ ಇಂದು ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಗ್ಯಾಸ್ಟ್ರಿಕ್, ಅಲರ್ಜಿ ಸೇರಿದಂತೆ ಕೆಲವೊಂದು ಆರೋಗ್ಯ ಸಮಸ್ಯೆಗಳು ಸಾಮಾನ್ಯ ಎಂಬಂತಾಗಿದೆ. ಸಂಸ್ಕರಿಸಿದ ಹಾಗೂ ಟೇಸ್ಟ್ ಪೌಡರ್ ಬಳಸಿದ, ಮತ್ತೆ ಮತ್ತೆ ದುದಿದ ಎಣ್ಣೆ ಬಳಸಿದ ಆಹಾರಗಳ ಸೇವನೆಗೆ ಕಡಿವಾಣ ಹಾಕುವ ಜೊತೆಗೆ ಕೆಲವೊಂದು ಮನೆಯಲ್ಲೇ ಸಿಗುವ ಅಡುಗೆ ಸಾಮಗ್ರಿಗಳಿಂದಲೇ ಗ್ಯಾಸ್ಟ್ರಿಕ್ ಸಮಸ್ಯೆ ದೂರಗೊಳಿಸಬಹುದು. ಒಬ್ಬೊಬ್ಬರಿಗೆ ಒಂದೊಂದು ಆಹಾರದಿಂದ ಅಲಜಿ, ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಯಾರಿಗೆ ಯಾವುದರಿಂದಲಾದ್ರೂ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಬಹುದು. ಸಾಮಾನ್ಯವಾಗಿ ಆಲೂ,ಬದನೆ,ಕಡ್ಲೆಕಾಳು ತೊಗರಿಬೇಳೆ ಗ್ಯಾಸ್ಟ್ರಿಕ್ ಉಂಟು ಮಾಡುತ್ತವೆ ಎನ್ನಲಾಗುತ್ತದೆ. ಗ್ಯಾಸ್ಟ್ರಿಕ್ ಹೊಟ್ಟೆಯ ಸೆಡೆತ, ಹೊಟ್ಟೆಯುಬ್ಬರಿಕೆ, ತಲೆ ಸುತ್ತುವಿಕೆ ಮತ್ತು ಎದೆಯುರಿಗೆ ಕಾರಣವಾಗುತ್ತದೆ. ಜೀರ್ಣಾಂಗಗಳಲ್ಲಿ ವಾಯು ಉತ್ಪತ್ತಿಯಾಗಿ ಹೊರಬರಲು ನೀಡುವ ಒತ್ತಡವೇ ಗ್ಯಾಸ್ಟ್ರಿಕ್. ತಜ್ಞರು ಈ ಸಮಸ್ಯೆಗೆ ನಾನಾ ಕಾರಣಗಳನ್ನು ಪಟ್ಟಿ ಮಾಡುತ್ತಾರೆ. ಊಟದ ಸಮಯದಲ್ಲಿ ಪ್ರತಿ ತುತ್ತನ್ನೂ ನುಂಗುವಾಗ ಇದರೊಂದಿಗೆ ಕೊಂಚ ಪ್ರಮಾಣದಲ್ಲಿ ಹೊಟ್ಟೆ ಸೇರುವ ವಾತಾವರಣದ ಗಾಳಿ. ಅಹಾರ ಜೀರ್ಣಗೊಳ್ಳುವಾಗ ಉತ್ಪತ್ತಿಯಾಗುವ ಅನಿಲಗಳು ಈ…