Author: admin

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಜನತೆ ರಾಜ್ಯ ಸರ್ಕಾರದ ಭಾರತ ಚುನಾವಣಾ ಆಯೋಗದ ಆದೇಶದಂತೆ ಮತದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಸೌಲಭ್ಯವನ್ನು ಪಡೆಯುವ ನಿಟ್ಟಿನಲ್ಲಿ ಭಾರತದಾದ್ಯಂತ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕಿದೆ ಎಂದು ತಹಶೀಲ್ದಾರ್ ನಹೀದಾ ಜಂ ಜಂ ತಿಳಿಸಿದರು. ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಬೇಕು. ನಮ್ಮ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಬಿ ಎಲ್ ಒ ಅಧಿಕಾರಿಗಳು ತಮ್ಮ ಮನೆಯ ಬಾಗಿಲಿಗೆ ಬಂದು ಮತದಾರರ ಚೀಟಿಗೆ ಆಧಾರ್ ಸಂಖ್ಯೆಯನ್ನು ನೋಂದಣಿ ಮಾಡಿಕೊಳ್ಳುತ್ತಾರೆ ಅವರಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಆಧಾರ್ ಸಂಖ್ಯೆಯನ್ನು ತಪ್ಪದೇ ನೋಂದಣಿ ಮಾಡುವಂತೆ ಸಾರ್ಚಜನಿಕರಲ್ಲಿ ಮನವಿ ಮಾಡಿದರು. ಯಾವುದೇ ಲೋಪದೋಷಗಳಿಗೆ ಎಡೆ ಮಾಡಿಕೊಡದೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾವಣೆ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಕೊರಟಗೆರೆಯ ತಹಶೀಲ್ದಾರ್ ನಹೀದಾ ಜಂ ಜಂ ಮನವಿ ಮಾಡಿದರು. ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಚಿತ್ರದುರ್ಗ: ಭಾರೀ ಮಳೆಯಿಂದಾಗಿ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 22 ರ ಸಿ.ಎಮ್. ಬಡಾವಣೆಯಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ವಾರದಿಂದಲೇ ಮಳೆ ಸುರಿಯುತ್ತಿದ್ದು, ಸಿ.ಎಮ್. ಬಡಾವಣೆಯಲ್ಲಿರುವ ಅಂಗನವಾಡಿಗೂ ನೀರು ನುಗ್ಗಿದೆ. ಸುತ್ತಮುತ್ತಲಿನ ಮನೆಗಳಿಗೆ ನೀರು ನುಗ್ಗಿದ್ದು, ಜನರ ನಿದ್ರೆ ಕೆಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳಿಗೂ, ಆಡಳಿತಕ್ಕೂ ಎಷ್ಟು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ, ಜನಪ್ರತಿನಿಧಿಗಳ ಉದಾಸೀನತೆಯಿಂದಾಗಿ ಇಲ್ಲಿನ ಜನರು ಇದೀಗ ತೀವ್ರ ಸಂಕಷ್ಟಕ್ಕೀಡಾಗಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಮುರುಳಿಧರನ್ ಆರ್., ಚಿತ್ರದುರ್ಗ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮವು ಕಂದಾಯ ಗ್ರಾಮಕ್ಕೆ ಒಳಪಟ್ಟಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು 150ಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ರಸ್ತೆಯೇ ಇಲ್ಲ ಈ ಗ್ರಾಮದ ಮಧ್ಯೆ ಹರಿಯುವ ಹಳ್ಳ ರಸ್ತೆಯಾಗಿ ಮಾರ್ಪಟ್ಟಿದೆ. ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು ಏನು ಮಾಡುತ್ತಿದ್ದಾರೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಕೊರಟಗೆರೆ ಕಂದಾಯ ಗ್ರಾಮದ ಕುಮಟೇನಹಳ್ಳಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು, ಸರಿ ಸುಮಾರು 120ಕ್ಕೂ ಹೆಚ್ಚು ಮತದಾರರಿದ್ದಾರೆ. ಸದರಿ ಗ್ರಾಮಕ್ಕೆ ನಕಾಶೆ ರಸ್ತೆ ಇದ್ದೂ ಇಲ್ಲದಂತೆ ಮಾಯವಾಗಿದೆ. ಸುಮಾರು ಏಳು ವರ್ಷಗಳಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಜೊತೆಗೆ ಮುಖ್ಯವಾಗಿ ಸಂಪರ್ಕ ರಸ್ತೆ ಇಲ್ಲದೆ ಜನರು ಹಳ್ಳವನ್ನೇ ರಸ್ತೆಯನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಬೆಂಡೋಣೆ ಗ್ರಾಮದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಕುಮಟೇನಹಳ್ಳಿ ಗ್ರಾಮದ ಮುಗ್ಧ ಜನರು ಹೊರ ಪ್ರಪಂಚಕ್ಕೆ ಕಾಲಿಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಕಾಶೆ ರಸ್ತೆ ತೆರವು…

Read More

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಫ್ರಾನ್ಸ್ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ ನಂ. 3 ಶ್ರೀಮಂತನಾಗಿ ಕಾಣಿಸಿಕೊಂಡಿದ್ದಾರೆ. ಬ್ಲೂಮ‌ಬರ್ಗ ಬಿಲಿಯನೇರ್ಸ್ ಇಂಡೆಕ್ಸ್ ಶ್ರೇಯಾಂಕದಲ್ಲಿ ಗೌತಮ್ ಅದಾನಿ ಈಗ ಎಲೋನ್ ಮಸ್ಕ್ ಮತ್ತು ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿದ್ದಾರೆ. ಒಟ್ಟು 137.4 ಶತಕೋಟಿ ಡಾಲರ್ ನಿವ್ವಳ ಆಸ್ತಿ ಹೊಂದಿರುವ 60 ವರ್ಷದ ಅದಾನಿ, ಲೂಯಿಸ್ ವಿಟಾನ್ ಅಧ್ಯಕ್ಷ ಅರ್ನಾಲ್ಟ್ ಅವರ ಸಂಪತ್ತನ್ನು ಹಿಂದಿಕ್ಕಿದ್ದಾರೆ ಎನ್ನಲಾಗಿದೆ. ಇದೇ ಮೊದಲ ಬಾರಿಗೆ ಏಷ್ಯಾದ ವ್ಯಕ್ತಿಯೊಬ್ಬರು ಈ ಪಟ್ಟಿಯಲ್ಲಿ ಅಗ್ರ ಮೂರು ಸ್ಥಾನಗಳಿಗೆ ಪ್ರವೇಶಿಸಿದ್ದಾರೆ, ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ಚೀನಾದ ಜಾಕ್ ಮಾ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಅದಾನಿ ಗ್ರೂಪ್ ಭಾರತದ ಮೂರನೇ ಅತಿದೊಡ್ಡ ಸಮೂಹವಾಗಿದೆ. ಅದಾನಿ ಅವರ ಸಂಪತ್ತು 60.9 ಶತಕೋಟಿ ಡಾಲರ್‌ಗಳಷ್ಟು ಹೆಚ್ಚಾಗಿದೆ. ಈ ಮೊತ್ತವೂ ಇತರ ಉಳಿದ ಬಿಲೇನಿಯರ್‌ಗಿಂತ ಐದು ಪಟ್ಟು ಹೆಚ್ಚಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ರಾಯಚೂರು : ರಾಯಚೂರಿನಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, ಓರ್ವ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗುಡುದೂರುನಲ್ಲಿ ನಡೆದಿದೆ. ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ಈ ದುರಂತ ಸಂಭವಿಸಿದ್ದು, ತುಂಗಭದ್ರಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಪತ್ತೆಗಾಗಿ ಶೋಧ ಕಾರ್ಯಚಾರಣೆ ನಡೆಯುತ್ತಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy  

Read More

ಮುಂಬೈ, ಆಗಸ್ಟ್ 30: ಕಳೆದ 2020 ರಲ್ಲಿ ಕಮಲ್ ರಶೀದ್ ಖಾನ್ ಮಾಡಿರುವ ವಿವಾದಾತ್ಮಕ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಾಡ್ ಪೊಲೀಸರು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ. ಕೆಆರ್‌ಕೆ ಎಂದೇ ಕರೆಯಲ್ಪಡುವ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ಅವರನ್ನು ಬಂಧಿಸಲಾಗಿದ್ದು, ಮಂಗಳವಾರವೇ ಬೊರಿವಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆಷ್ಟೇ ಕ್ರಿಕೆಟಿಗ ಪತಿ ವಿರಾಟ್ ಕೊಹ್ಲಿ ಅವರ “ಖಿನ್ನತೆಯ” ಹಿಂದೆ ನಟಿ ಅನುಷ್ಕಾ ಶರ್ಮಾ ಇದ್ದಾರೆ ಎಂದು ಕೆಆರ್‌ಕೆ ಟ್ವೀಟ್ ಮಾಡಿ ಸುದ್ದಿ ಆಗಿದ್ದರು. ನಟಿಯನ್ನು ತಲೆಯಲ್ಲಿ ತುಂಬಿಕೊಂಡು ಖಿನ್ನತೆಗೆ ಒಳಗಾಗಿದ್ದಾರೆ ಎಂದು ಮೊದಲು ಟ್ವೀಟ್ ಮಾಡಿದ್ದ ಈತನು, ನಂತರದಲ್ಲಿ ಅದನ್ನು ಡಿಲೀಟ್ ಮಾಡಿದ್ದರು. ದೇಶದ್ರೋಹಿ 2 ಚಿತ್ರ ಬಿಡುಗಡೆ: ಈ ವರ್ಷದ ಆರಂಭದಲ್ಲಿ KRK ಅವರು ದೇಶದ್ರೋಹಿ 2 ಬಿಡುಗಡೆಯನ್ನು ಘೋಷಿಸಿದಾಗ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿತ್ತು. ಇದು ಸ್ವಯಂಘೋಷಿತ ಬ್ಲಾಕ್‌ಬಸ್ಟರ್ ಎಂಬುದು ಸ್ಪಷ್ಟವಾಗಿ “ಬಾಹುಬಲಿಗಿಂತ ದೊಡ್ಡದಾಗಿದೆ” ಎಂದು…

Read More

ಟಾಲಿವುಡ್ ಹೀರೋಗಳಂತೆ ತೆಲುಗಿನಲ್ಲೂ ಕ್ರೇಜ್ ಗಳಿಸಿರುವ ನಟ ದಳಪತಿ ವಿಜಯ್. ತುಪಾಕಿ ಚಿತ್ರದ ಮೂಲಕ ಅವರಿಗೆ ತೆಲುಗಿನಲ್ಲಿ ಉತ್ತಮ ಮಾರುಕಟ್ಟೆ ಸಿಕ್ಕಿತು. ಅಂದಿನಿಂದ ಅವರು ನಟಿಸಿದ ಎಲ್ಲಾ ಸಿನಿಮಾಗಳು ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿವೆ. ಅವರ ಇತ್ತೀಚಿನ ಬಿಡುಗಡೆಯಾದ ಬೀಸ್ಟ್ ವಿಫಲವಾಗಿತ್ತು. ಸದ್ಯ ವಿಜಯ್ ವಂಶಿಪೈಡಿಪಲ್ಲಿ ನಿರ್ದೇಶನದಲ್ಲಿ ಸಿನಿಮಾ ಮಾಡುತ್ತಿದ್ದಾರೆ. ದ್ವಿಭಾಷಾ ಚಿತ್ರವಾಗಿ ಚಿತ್ರೀಕರಣ ನಡೆಯುತ್ತಿದ್ದು, ಸದ್ಯ ಶರವೇಗದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ನಡುವೆ ವಿಜಯ್ ಇತ್ತೀಚೆಗಷ್ಟೇ ಚೆನ್ನೈನಲ್ಲಿ ದುಬಾರಿ ಅಪಾರ್ಟ್ ಮೆಂಟ್ ಖರೀದಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ವಿಜಯ್ ಪ್ರಸ್ತುತ ಚೆನ್ನೈನ ಪೂರ್ವ ಕರಾವಳಿ ರಸ್ತೆಯಲ್ಲಿ ನೆಲೆಸಿದ್ದಾರೆ. ಕಾಲಿವುಡ್ ವಲಯಗಳ ಪ್ರಕಾರ, ಅಲ್ಲಿ ಟ್ರಾಫಿಕ್ ವಿಪರೀತ ಹೆಚ್ಚಾದ ಕಾರಣ ಮತ್ತೊಂದು ಮನೆಯನ್ನು ಖರೀದಿಸಲಾಗಿದೆ. ಚೆನ್ನೈನಲ್ಲಿ ಸುಮಾರು 35 ಕೋಟಿ ರೂ.ಗೆ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಸದ್ಯ ವಿಜಯ್ ವರಸುಡು ಸಿನಿಮಾ ಮುಗಿಸುವ ಹಂತದಲ್ಲಿದ್ದಾರೆ. ದಿಲ್ ರಾಜು ನಿರ್ಮಾಣದ ಈ ಚಿತ್ರ ಮುಂದಿನ ವರ್ಷದ ಮೊದಲಾರ್ಧದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ…

Read More

ನವದೆಹಲಿ : ದೇಶದ ಜನರಿಗೆ 2022 ರ ದೀಪಾವಳಿಯಲ್ಲಿ, ಜಿಯೋ 5 ಜಿ ಅನ್ನು ಭಾರತದ ಮೆಟ್ರೋ ನಗರಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಆರ್ಐಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ 45 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, 5ಜಿಯನ್ನು ಬಳಸಿಕೊಂಡು, ನಾವು ಉನ್ನತ ಗುಣಮಟ್ಟದ, ಹೆಚ್ಚು ಕೈಗೆಟುಕುವ ಸ್ಥಿರ ಬ್ರಾಡ್ಬ್ಯಾಂಡ್ ಸೇವೆಗಳ ರೋಲ್-ಔಟ್ ಅನ್ನು ತ್ವರಿತಗೊಳಿಸಬಹುದು ಎಂದು ಮುಕೇಶ್ ಅಂಬಾನಿ ಹೇಳಿದರು, ಜಿಯೋ 5 ಜಿ ವಿಶ್ವದ ಅತ್ಯಂತ ಸುಧಾರಿತ 5 ಜಿ ಆಗಿದೆ ಎಂದು ಅವರು ಹೇಳಿದರು. ನಮ್ಮ ಕಂಪನಿಯು ವಾರ್ಷಿಕ ಆದಾಯದಲ್ಲಿ 100 ಬಿಲಿಯನ್ ಡಾಲರ್ ದಾಟಿದ ಭಾರತದ ಮೊದಲ ಕಾರ್ಪೊರೇಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ ಹಾಗೂ ಮಾಂಸ ಮಾರಾಟದ ಅಂಗಡಿಗಳನ್ನು ಗಣೇಶ ಚತುರ್ಥಿ ನಿಮಿತ್ಯ ಬುಧವಾರ (ಆ.31) ಬಂದ್ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದು, ಮಾಲೀಕರು ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ತಿಳಿಸಲಾಗಿದೆ. ಸದರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಅಂಗಡಿ ಮಾಲಿಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಎಷ್ಟೇ ಕಠಿಣ ನಿಯಮಗಳು, ಕಾನೂನು ಜಾರಿಗೆ ತಂದರು ವಾಹನಗಳ ಮೇಲೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಹೀಗಾಗಿ ರಸ್ತೆ ಅಪಘಾತದಲ್ಲಿ ಬಲಿಯಾಗುವರ ಸಂಖ್ಯೆ ಹೆಚ್ಚುತ್ತಿದೆ. 2021 -2022 ರ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 816 ರಸ್ತೆ ಅಪಘಾತದಲ್ಲಿ ಬಲಿಯಾಗುವ ಮೂಲಕ ರಾಜ್ಯದಲ್ಲಿ ಬೆಳಗಾವಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಬೆಂಗಳೂರು ನಗರದಲ್ಲಿ 633, ತುಮಕೂರು ಜಿಲ್ಲೆಯಲ್ಲಿ 596, ಮೈಸೂರು 510 ಮತ್ತು ಬೆಂಗಳೂರು ನಗರ ಹೊರತುಪಡಿಸಿ ಬೆಂಗಳೂರು ಜಿಲ್ಲೆಯಾದ್ಯಂತ 507 ಬಲಿಯಾಗಿವೆ. ಇನ್ನು 2021- 22ರಲ್ಲಿ ರಾಜ್ಯದಲ್ಲಿ 34,394 ಅಪಘಾತಗಳು ವರದಿಯಾಗಿದ್ದು, 9,868 ಸಾವುಗಳು ಮತ್ತು 40,483 ಮಂದಿ ಗಾಯಗೊಂಡಿದ್ದಾರೆ. ಅಂದರೆ ಆ ಅವಧಿಯಲ್ಲಿ ರಾಜ್ಯದಲ್ಲಿ ಪ್ರತಿದಿನ ಸರಾಸರಿ 94 ಅಪಘಾತಗಳು ಮತ್ತು 27 ಸಾವುಗಳು ವರದಿಯಾಗಿವೆ ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More