Subscribe to Updates
Get the latest creative news from FooBar about art, design and business.
- ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
- ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
- ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
- ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
Author: admin
ಗಂಡನ ಮನೆ ಹೋಗು ಎಂದು ತಾಯಿ ಬುದ್ದಿವಾದ ಹೇಳಿದ್ದಕ್ಕೆ ಬೇಸರಗೊಂಡ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಉಪ್ಪಾರಬೀದಿಯಲ್ಲಿ (ಮಾವಿನತೋಪು) ನಡೆದಿದೆ. ಉಪ್ಪಾರಬೀದಿ ನಿವಾಸಿ ಐಶ್ವರ್ಯ (20) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಐಶ್ವರ್ಯ ಕುಣಿಗಲ್ ತಾಲೂಕಿನ ಅಮೃತೂರಿನ ಅನಿಲ್ಕುಮಾರ್ ಜೊತೆ ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದು, 2021ರಲ್ಲಿ ಐಶ್ವರ್ಯ ಗರ್ಭಿಣಿಯಾಗಿದ್ದಳು. ಈ ಸಂದರ್ಭದಲ್ಲಿ ಐಶ್ವರ್ಯಳ ಮೈದುನ ಮತ್ತು ನಾದಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪತಿ ಅನಿಲ್ಕುಮಾರ್ ಪತ್ನಿಯನ್ನು ತವರು ಮನೆಗೆ ಬಿಟ್ಟು ಬಂದಿದ್ದರು. ತವರು ಮನೆಯಲ್ಲೇ ಹೆರಿಗೆ ಆಗಿ ಹಲವು ತಿಂಗಳು ಕಳೆದರೂ ಐಶ್ವರ್ಯ ಗಂಡನ ಮನೆಗೆ ಹೋಗಿರಲಿಲ್ಲ. ಹೀಗಾಗಿ ತಾಯಿ ಮಗಳಿಗೆ ತವರು ಮನೆಗೆ ಹೋಗುವಂತೆ ಬುದ್ಧಿವಾದ ಹೇಳಿದ್ದಾರೆ. ಬುದ್ಧಿವಾದದಿಂದ ಬೇಸರಗೊಂಡಿದ್ದ ಐಶ್ವರ್ಯ ತಾಯಿ ಮದುವೆಗೆ ಹೋಗಿದ್ದ ವೇಳೆಯಲ್ಲಿ ಮನೆಯಲ್ಲಿ ಯಾರು ಇಲ್ಲದಾಗ ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿನ ಕುರಿತು ತಾಯಿ ನೀಡಿದ ದೂರಿನ ಅನ್ವಯ…
ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ಟಿ-20 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 5 ವಿಕೆಟ್ ಗಳಿಂದ ಜಯ ಗಳಿಸಿ ನೂತನ ಚಾಂಪಿಯನ್ ಆಗಿದೆ. ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆರಿಸಿಕೊಂಡಿತು. ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು. ಇಂಗ್ಲೆಂಡ್ 1 ಓವರ್ ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಪಾಕ್ ಪರ ನಾಯಕ ಬಾಬಾ ಅಜಂ 30 ರನ್ ಹಾಗೂ ಮಸೂದ್ 38 ರನ್ ಹೊಡೆದರು. ಅಂತ್ಯದಲ್ಲಿ ಶಾದಾಬ್ ಖಾನ್ 20 ರನ್ ಗಳಿಸಿದ್ದನ್ನು ಬಿಟ್ಟರೆ ಉಳಿದೆಲ್ಲ ಬ್ಯಾಟ್ಸ್ಮನ್ ಗಳು ತರಗಲೆಗಳಂತೆ ಔಟಾದರು. ಇಂಗ್ಲೆಂಡ್ ಪರ ಸ್ಯಾಮ್ ಕರ್ರನ್ 3 ವಿಕೆಟ್ ಹಾಗೂ ಅದಿಲ್ ರಶೀದ್-ಕ್ರಿಸ್ ಜೋರ್ಡನ್ ತಲಾ 2 ವಿಕೆಟ್ ಪಡೆದರು. ಬಳಿಕ ಇಂಗ್ಲೆಂಡ್ 19 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಹೊಡೆದು ಗೆಲುವು ಸಾಧಿಸಿತು.…
ಟರ್ಕಿಯ ರಾಜಧಾನಿ ಇಸ್ತಾಂಬುಲ್ ನ ಜನದಟ್ಟಣೆ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿದ್ದು, 53ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಸ್ತಾಂಬುಲ್ ನ ರಸ್ತೆ ಇಸ್ತಿಕಲಾಲ್ ನಲ್ಲಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಬಾಂಬ್ ಸ್ಫೋಟ ಸಂಭವಿಸಿದೆ. ಬಾಂಬ್ ಸ್ಫೋಟವಾಗುತ್ತಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪತ್ನಿ ಕಿರುಕುಳ ಕಾಟ ತಡೆಯಲಾರದೇ ಪತಿ ಹಾಗೂ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಜಗೋಪಾಲನಗರದ ಶ್ರೀಗಂಧ ನಗರದ ನಿವಾಸಿ ಅತ್ತೆ ಭಾಗ್ಯಮ್ಮ (57) ಮತ್ತು ಶ್ರೀನಿವಾಸ್ (33) ಮೃತಪಟ್ಟ ದುರ್ದೈವಿಗಳು. ಮೃತ ಶ್ರೀನಿವಾಸ್ ಪೋಷಕರಿಗೆ ವಯಸ್ಸಾಗಿದ್ದು, ತಿಂಗಳ ಹಿಂದೆಯಷ್ಟೇ ಮಡಿಕೇರಿಯಲ್ಲಿದ್ದ ತನ್ನ ತಂದೆ, ತಾಯಿಯನ್ನು ಬೆಂಗಳೂರಿನ ಮನೆಗೆ ಕರೆದುಕೊಂಡು ಬಂದಿದ್ದರು. ಶ್ರೀನಿವಾಸ್ ಪತ್ನಿ ಸಂಧ್ಯಾಳಿಗೆ ಇದು ಇಷ್ಟವಿರಲಿಲ್ಲ. ವಯಸ್ಸಾದ ಅತ್ತೆ – ಮಾವನನ್ನು ನೋಡಿಕೊಳ್ಳೋರು ಯಾರು? ನನಗೆ ಅತ್ತೆ, ಮಾವ ನೋಡಿಕೊಳ್ಳೋಕೆ ಕಷ್ಟ ಎಂದು ಸಂಧ್ಯಾ ಗಲಾಟೆ ತೆಗೆದಿದ್ದಳು. ಮಧ್ಯರಾತ್ರಿ ಮೂರು ಗಂಟೆಗೆ ಗಲಾಟೆ ನಡೆದಿತ್ತು ಎಂಬ ಆರೋಪ ಬಂದಿದೆ. ಸಂಧ್ಯಾಳ ಜಗಳದಿಂದ ಬೇಸತ್ತ ತಾಯಿ ಭಾಗ್ಯಮ್ಮ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂತರ ಶ್ರೀನಿವಾಸ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಧ್ಯಾಹ್ನದ ತನಕ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಲಾಟೆಯಿಂದ ಬೇಸತ್ತು ತಾಯಿ- ಮಗ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ…
ಹೆಚ್.ಡಿ.ಕೋಟೆ: ಪುರಸಭೆ ಕಾರ್ಯಲಯದಲ್ಲಿ ಖಾಸಗಿ ವ್ಯಕ್ತಿಗಳ ದರ್ಬಾರಿಗೆ ಕೋಕ್ ಕೊಡುವುದಾಗಿ ನೂತನ ಸ್ಥಾಯಿಸಮಿತಿ ಅಧ್ಯಕ್ಷ ಐಡಿಯ ವೆಂಕಟೇಶ್ ಭರವಸೆ ನೀಡಿದರು. ಹೆಚ್.ಡಿ.ಕೋಟೆ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಹಗಲು ದಂಧೆ ನಡೆಯುತಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದ ಕೂಗಿಗೆ ಸ್ಪಂದಿಸುವುದಾಗಿ ತಿಳಿಸಿದ ಅವರು, ಪುರಸಭೆ ಕಾರ್ಯಾಲಯದಲ್ಲಿ ಸರ್ಕಾರದ ಆದೇಶವಿಲ್ಲದೇ, ಕೆಲವು ವ್ಯಕ್ತಿಗಳು ಅಧಿಕಾರಿಗಳ ಕುಮ್ಮಕ್ಕಿನಿಂದ ಸರ್ಕಾರಿ ಕಡತಗಳನ್ನು ತೆಗೆದುಕೊಂಡು ತಮ್ಮ ಮನಬಂದಂತೆ ವರ್ತಿಸುತ್ತಿದ್ದು, ಅಂತಹ ವ್ಯಕ್ತಿಗಳ ಮೇಲೆ ಶಿಸ್ತುಕ್ರಮ ಜರಗಿಸುವುದಾಗಿ ಭರವಸೆ ನೀಡಿದರು. ಪುರಸಭೆ ಕಾರ್ಯಾಲಯದಲ್ಲಿ ಅಧಿಕಾರಿಗಳು ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಹಿಂದೇಟು ಹಾಕಿದ್ದು, ತಾವು ನೇಮಕ ಮಾಡಿಕೊಂಡ ದಳ್ಳಾಳಿಗಳ ಮುಖಾಂತರ ಹೋದರೆ ಮಾತ್ರ ಕೆಲಸ ಕಾರ್ಯಮಾಡಿಕೊಡುವುದು ಇಲ್ಲವಾದರೆ ಸಾರ್ವಜನಿಕ ಕೆಲಸ ಕಾರ್ಯ ಮಾಡದೆ ಅಲೆದಾಡಿಸುತ್ತಿದ್ದಾರೆ. ಸರ್ಕಾರದಿಂದಯಾವುದೇ ಆದೇಶವನ್ನು ಪಡೆಯದೆ ಖಾಸಗಿ ವ್ಯಕ್ತಿಗಳನ್ನು ಅಧಿಕಾರಿಗಳು ನೇಮಕ ಮಾಡಿಕೊಂಡಿರುವುದು ಆನೇಕ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇಂತಹ ಸಿಬ್ಬಂದಿಯ ಮೇಲೆ ನಿರ್ದಾಕ್ಷಿಣ್ಯವಾಗಿ ನಮ್ಮ ಆಡಳಿತ ಮಂಡಳಿಯವರಿಗೆ ತಿಳಿಸಿ ಸೂಕ್ತಕ್ರಮ ಜರುಗಿಸುವುದಾಗಿ ವೆಂಕಟೇಶ್ ಭರವಸೆ ನೀಡಿದರು…
ಪ್ರಪಂಚದಾದ್ಯಂತ ಕೆಲವು ವಿಶೇಷ ದಿನಗಳನ್ನು ಆಚರಿಸುವ ಪದ್ಧತಿ ಇದೆ. ಇದು ಸಂತೋಷದ ದಿನಗಳನ್ನು ಸಹ ಹೊಂದಿದೆ. ಅದನ್ನು ಆಚರಿಸುವುದು ಎಂದರೆ ನಾವು ಅವರ ನೆನಪನ್ನು ಹಂಚಿಕೊಳ್ಳುತ್ತಿದ್ದೇವೆ ಎಂದರ್ಥ. ನಮ್ಮ ಭಾರತ ದೇಶದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟಗಾರ, ಭಾರತಕ್ಕೆ ಬೆಳಕಾಗಿದ್ದ ಮಂತರುಲ್ ಮಾಣಿಕಂ ಅವರ ಜನ್ಮದಿನವಾದ ನವೆಂಬರ್ 14 ರಂದು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಪ್ರೀತಿಸುವ ಮತ್ತು ಅವರೊಂದಿಗೆ ಸಂವಹನ ನಡೆಸುತ್ತಿದ್ದ ಭಾರತದ ಮೊದಲ ಪ್ರಧಾನಿ ಅವರನ್ನು ಮಕ್ಕಳು ಅಂಕಲ್ ನೆಹರು ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಯಾವಾಗಲೂ ತನ್ನ ಅಂಗಿಯೊಳಗೆ ಗುಲಾಬಿಯನ್ನು ಹಿಡಿದಿರುವ ಸಂಭಾವಿತ ವ್ಯಕ್ತಿ. ನೆಹರು ಮಕ್ಕಳಿಗಾಗಿ ಅನೇಕ ಉಲ್ಲೇಖಗಳು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳೇ ಭಾರತದ ಭವಿಷ್ಯ ಮತ್ತು ಅವರನ್ನು ಬೌದ್ಧಿಕವಾಗಿ ಮತ್ತು ವಿದ್ಯಾವಂತರನ್ನಾಗಿ ಮಾಡಬೇಕು ಎಂಬ ದೃಢ ನಂಬಿಕೆ ನೆಹರೂ ಅವರಲ್ಲಿತ್ತು. “ಇಂದಿನ ಮಕ್ಕಳೇ ನಾಳಿನ ನಾಯಕರು” ಎಂಬುದು ಅವರ ಪ್ರಸಿದ್ಧ ಧ್ಯೇಯವಾಕ್ಯ. ಅವರು…
ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಘಟಪ್ರಭಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಇದೇ ನವೆಂಬರ್ 11 ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿ ಸತೀಶ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಹಿನ್ನೆಲೆಯಲ್ಲಿ ಘಟಪ್ರಭಾ ಠಾಣೆಯಲ್ಲಿ ಇದೀಗ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದ ವೇಳೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ವಿವಿಧ ದಲಿತ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ : ಹಿರೇಬಾಗೇವಾಡಿ ಹೊರವಲಯದ ಘಾಟ್ ರಸ್ತೆಯಲ್ಲಿ ಲಾರಿ, ಟ್ರ್ಯಾಕ್ಟರ್ ಹಾಗೂ ಎರಡು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ತೀವ್ರ ಗಾಯಗೊಂಡಿದ್ದಾರೆ. ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಹೊರಟಿದ್ದ ಲಾರಿಯು ಟ್ರ್ಯಾಕ್ಟರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು. ಎರಡು ವಾಹನಗಳು ರಸ್ತೆ ಪಕ್ಕದ ಎರಡು ಬೈಕುಗಳಿಗೆ ಡಿಕ್ಕಿ ಹೊಡೆದವು. ಒಂದಕ್ಕೂಂದು ಗುದ್ದಿದ ರಭಸಕ್ಕೆ ನಾಲ್ಕೂ ವಾಹನಗಳು ರಸ್ತೆ ಬದಿಗೆ ಉರುಳಿ ಬಿದ್ದವು. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಮೂರು ತುಂಡಾಗಿದೆ. ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಒಬ್ಬ ಬೈಕ್ ಸವಾರ, ಟ್ರ್ಯಾಕ್ಟರ್ ಚಾಲಕ ಹಾಗೂ ಲಾರಿ ಚಾಲಕ ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನಿಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ರಸ್ತೆ ಬದಿಯ ತಗ್ಗಿನಲ್ಲಿ ಲಾರಿ ಮುಂಭಾಗ ಕೆಳಗೆ ಮಾಡಿ ಬಿದ್ದಿದ್ದರಿಂದ ಅದರೊಳಗೆ ಸಿಲುಕಿಕೊಂಡ ಚಾಲಕನನ್ನು ಹೊರತೆಗೆಯಲು ಊರಿನ ಜನ ಹಗ್ಗಗಳನ್ನು ತಂದು ಲಾರಿಯ ಮುಂಭಾಗದ ಸರಳು, ಗಾಜು,…
ಹೆ.ದೇ.ಕೋಟೆ: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬಿರ್ಸಾ ಮುಂಡ ಬುಡಕಟ್ಟು ಸಮಾಜಗಳ ಅಭಿವೃದ್ಧಿ ಮತ್ತು ಸೇವಾ ಒಕ್ಕೂಟ ಮತ್ತು ಶೋಟೋಕಾನ್ ಕರಾಟೆ ಮತ್ತು ಮಾರ್ಟಿಯಲ್ ಆರ್ಟ್ ಅಕಾಡೆಮಿ ವತಿಯಿಂದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಸುಮಾರು 500 ನೂರಕ್ಕು ಹೆಚ್ಚು ಕರಾಟೆ ಪಟುಗಳು ಭಾಗವಹಿಸಿ ತಮ್ಮ ತಮ್ಮ ಪ್ರತಿಭೆಗಳನ್ನು ಪ್ರದರ್ಶನ ಮಾಡಿದರು. ಈ ಪಂದ್ಯಾವಳಿಯ ವೇದಿಕೆಯಲ್ಲಿ ಜಿ.ಎನ್. ದೇವದತ್ತ, ಜಯಪ್ರಕಾಶ್, ಬೆಟ್ಟಸ್ವಾಮಿ, ಮಹೇಂದ್ರ, ಎಡತೊರೆ ಮಹೇಶ್, ವೆಂಕಟೇಶ, ಕರಾಟೆ ಮಾಸ್ಟರ್ ಗಳಾದ ಸೇನ್ ಸೈ ಅಬ್ದುಲ್, ಮಹಮೊದ್, ಚಂದ್ರನ್, ಮನೋಜ್, ರಾಯಪ್ಪ, ಸಂದೇಶ ಮುಂತಾದವರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿಗಾರರಿಗೆ 354ಕೋಟಿ ಯಲ್ಲಿ 20 ಕುರಿ 1 ಮೇಕೆ ವಿತರಣಾ ಯೋಜನೆಯನ್ನು ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ ಘೋಷಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರನ್ನು ಕುರುಬ ಸಮುದಾಯಕ್ಕಾಗಿ ಯೋಜನೆ ಘೋಷಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ಮಾಜಿ ಸಚಿವರಾದ ಹೆಚ್ ಎಂ ರೇವಣ್ಣನವರ ನೇತೃತ್ವದಲ್ಲಿ. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಲದಿಂದ ಸನ್ಮಾನಿಸಲಾಯಿತು. ಮಹಾಮಂಡಳ ಅಧ್ಯಕ್ಷರಾದ ಶ್ರೀ ಶರಣು ಬಿ ತಳ್ಳಿಕೇರಿ , ಉಪಾಧ್ಯಕ್ಷರಾದ ಶ್ರೀ ಕಾಶಿನಾಥ್ ಹುಡೇದ ಸೇರಿದಂತೆ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy