Subscribe to Updates
Get the latest creative news from FooBar about art, design and business.
- ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
- ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
- ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
- ತೆರೆ ಮೇಲೆ ರಾಜ್ ಕುಮಾರ್, ಅಂತರಂಗದಲ್ಲಿ ಮುತ್ತುರಾಜ್ ಇದ್ದರು: ಆರ್. ಮಂಜುನಾಥ್ ಚವಾಣ್, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
- ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
- ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
- ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
- ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
Author: admin
ಅರುಣಾಚಲ ಪ್ರದೇಶ : ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಉಭಯ ದೇಶಗಳ ಸೈನಿಕರು ಗಾಯಗೊಂಡಿದ್ದಾರೆ. ತವಾಂಗ್ ಬಳಿ ಡಿಸೆಂಬರ್ 9 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 2021ರಲ್ಲಿ, ಅರುಣಾಚಲ ಪ್ರದೇಶದ ಯಾಂಗ್ಸೆಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ವಿವಾದವಿತ್ತು. 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಜೂನ್ 15, 2020ರ ಘಟನೆಯ ನಂತರ ಇದೇ ಮೊದಲನೆಯದು. ನಂತರ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು ಮತ್ತು ಅನೇಕರು ಗಾಯಗೊಂಡರು. ಈ ಚಕಮಕಿಯಲ್ಲಿ ಚೀನಾದ ಹಲವು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಅಕ್ಟೋಬರ್ 2021ರಲ್ಲಿ, ಕೆಲವು ಚೀನೀ ಸೈನಿಕರನ್ನು ಯಾಂಗ್ಸೆಯಲ್ಲಿ ಕೆಲವು ಗಂಟೆಗಳ ಕಾಲ ಭಾರತೀಯ ಸೈನಿಕರು ಬಂಧಿಸಿದಾಗ ಇದೇ ರೀತಿಯ ಘಟನೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಕರ್ನಾಟಕದಲ್ಲಿ ಮೊದಲ ಝೀಕಾ ಪ್ರಕರಣ ಪತ್ತೆಯಾಗಿದ್ದು, ಈ ಹಂತದಲ್ಲಿ ಜನತೆ ರೋಗ ಹರಡದಂತೆ ಎಚ್ಚರ ವಹಿಸುವುದು ಬಹಳ ಮುಖ್ಯ. *ಸೊಳ್ಳೆ ಕಡಿತ ತಪ್ಪಿಸುವುದು Zika ವಿರುದ್ಧ ರಕ್ಷಿಸಲು ಮುಖ್ಯ ಮಾರ್ಗ *ಗರ್ಭಿಣಿಯರು, ಬಾಣಂತಿಯರು, ಚಿಕ್ಕ ಮಕ್ಕಳು ಸೊಳ್ಳೆ ಕಚ್ಚದಂತೆ ಎಚ್ಚರಿಕೆ ವಹಿಸಬೇಕು. *ಸಂಜೆ ವೇಳೆ ಕಿಟಕಿ-ಬಾಗಿಲು ಮುಚ್ಚಿ ಸೊಳ್ಳೆ ಮನೆಯೊಳಗೆ ಬರದಂತೆ ನೋಡಿಕೊಳ್ಳಿ; ಮಲಗುವಾಗ ಸೊಳ್ಳೆ ಪರದೆ ಬಳಸಿ. *ಮನೆ, ಸುತ್ತಮುತ್ತ ಮತ್ತು ಸಾರ್ವಜನಿಕ ಸ್ಥಳದಲ್ಲಿ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಬೇಡಿ. ರೋಗಲಕ್ಷಣಗಳು ಝಿಕಾ ವೈರಸ್ ಸೋಂಕಿತ ಹೆಚ್ಚಿನ ಜನರು ರೋಗಲಕ್ಷಣಗಳನ್ನು ಅಭಿವೃದ್ಧಿಪಡಿಸುವುದಿಲ್ಲ. ಹಾಗೆ ಮಾಡುವವರಲ್ಲಿ, ಅವರು ಸಾಮಾನ್ಯವಾಗಿ ಸೋಂಕಿನ ನಂತರ 3-14 ದಿನಗಳ ನಂತರ ಪ್ರಾರಂಭಿಸುತ್ತಾರೆ, ದದ್ದು, ಜ್ವರ, ಕಾಂಜಂಕ್ಟಿವಿಟಿಸ್, ಸ್ನಾಯು ಮತ್ತು ಕೀಲು ನೋವು, ಅಸ್ವಸ್ಥತೆ ಮತ್ತು ತಲೆನೋವು ಸೇರಿದಂತೆ ಸಾಮಾನ್ಯವಾಗಿ ಸೌಮ್ಯವಾಗಿರುತ್ತವೆ ಮತ್ತು ಸಾಮಾನ್ಯವಾಗಿ 2 – 7 ದಿನಗಳವರೆಗೆ ಇರುತ್ತದೆ . ಈ ರೋಗಲಕ್ಷಣಗಳು ಇತರ ಆರ್ಬೋವೈರಲ್ ಮತ್ತು ಆರ್ಬೋವೈರಲ್ ಅಲ್ಲದ ರೋಗಗಳಿಗೆ ಸಾಮಾನ್ಯವಾಗಿದೆ; ಹೀಗಾಗಿ,…
ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆಯಂತೆ ಹೆರಿಗೆ ಮಾಡಿಸಲು ಹೋಗಿ ಹೆಚ್ಚುಕಮ್ಮಿಯಾದ ಕಾರಣ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಬಂದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆ ಪ್ರಸೂತಿ ತಜ್ಞರು ಲಭ್ಯವಿರಲಿಲ್ಲ. ನೋವು ಹೆಚ್ಚಾದ ಕಾರಣ ಸಿಬ್ಬಂದಿ ವೈದ್ಯರಿಗೆ ಕರೆ ಮಾಡಿ ತಿಳಿಸಿದ್ದಾರೆ. ವೈದ್ಯರು ವಿಡಿಯೋಕಾಲ್ನಲ್ಲಿ ಗೈಡ್ ಮಾಡ್ತಿನಿ, ಆಪರೇಷನ್ ಮಾಡಿ ಎಂದಿದ್ದಾರೆ. ಈ ವೇಳೆ ಏನೋ ಅನಾಹುತವಾಗಿ ತಾಯಿ & ಮಗುವಿನ ಪ್ರಾಣ ಹೋಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಡಿಸೆಂಬರ್ 19 ರಿಂದ 30 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಅಧಿವೇಶನವು 15ನೇ ವಿಧಾನಸಭೆಯ ಕೊನೆಯ ಅಧಿವೇಶನವಾಗಿದ್ದು, ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.ಈ ಸಿದ್ಧತೆಗಳನ್ನು ವಿಧಾನಸಭೆಯ ಸಭಾಪತಿಗಳಾದ ವಿಶ್ವನಾಥ್ ಹೆಗಡೆ ಕಾಗೇರಿ ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಇದು 8ನೇ ಅಧಿವೇಶನ. ಒಟ್ಟು ಬೆಳಗಾವಿಯಲ್ಲಿ ಹತ್ತು ಅಧಿವೇಶನಗಳು ಜರುಗಿದ್ದು, ಅದರಲ್ಲಿ ಎರಡು ಅಧಿವೇಶನ ಕೆ .ಎಲ್ .ಇ .ಜೆ ಎಂ ಸಿ ಮೆಡಿಕಲ್ ಕಾಲೇಜಿನಲ್ಲಿ ಅಧಿವೇಶನ ನಡೆಸಲಾಗಿತ್ತು. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆಯುವ 5ನೇ ವರ್ಷದ ಹಾಗೂ ಕೊನೆಯ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಈ ಅಧಿವೇಶನದಲ್ಲಿ ಒಟ್ಟು 6 ವಿಧೇಯಕಗಳು ಮಂಡಿಸಲಾಗುವುದು. ಸಮಯ ಇರುವರಿಂದ ಹೆಚ್ಚಿನ ವಿಧೇಯಕಗಳು ಸರ್ಕಾರಗಳಿಂದ ಪ್ರಸ್ತಾವನೆಯ ನಿರೀಕ್ಷೆಯಲ್ಲಿ ನಾವಿದ್ದೇವೆ. 6 ವಿಧೇಯಕಗಳಲ್ಲಿ ಮೊದಲನೇ ವಿಧೇಯಕ ಅಭಿವೃದ್ಧಿ ವಿದಾಯಕವಾಗಿದ್ದು, ಇದು ಈಗಾಗಲೇ ಸದನದಲ್ಲಿ ಮಂಡನೆಯಾಗಿದ್ದು, ಆದರೆ…
ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಸದ್ಯ ಈ ವಿಚಾರವಾಗಿ ಬೆಳಗಾವಿಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಮಾತನಾಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಮೂರ್ನಾಲ್ಕು ತಿಂಗಳಲ್ಲಿ ಏನು ಅಭಿವೃದ್ಧಿ ಮಾಡಲು ಆಗುತ್ತೆ? ಹೊಸ ಸರ್ಕಾರದಲ್ಲಿ ಮಂತ್ರಿ ಆಗಬೇಕೆಂದು ಎಲ್ಲರೂ ಸುಮ್ಮನಿದ್ದಾರೆ ಎಂದು ಖಡಕ್ ಆಗಿ ಹೇಳಿದ್ದಾರೆ. ಗುಜರಾತ್ ಮಾದರಿಯಲ್ಲೇ ಹೊಸಬರಿಗೆ ಅವಕಾಶ ನೀಡಬೇಕು. ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡ್ತಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಜಿಲ್ಲೆಯ ಬಿಎಸ್ ಎಫ್ ಯೋಧ ಸದ್ದಾಂ ಜಮಾದಾರ್ ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಗುಜರಾತ್ನ ಬುಜ್ನಲ್ಲಿ ನಿಧನರಾಗಿದ್ದಾರೆ. ಸದ್ದಾಂ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದವರು. ಇತ್ತೀಚಿಗೆ ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸದ್ದಾಂ ಜಮಾದಾರ್ ಅವರಿಗೆ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆದರೆ ಅಕಾಲಿಕವಾಗಿ ನಿಧನ ಹೊಂದಿದ್ದು, ಅತೀವ ದುಃಖ ಉಂಟಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಅಣ್ಣತಮ್ಮಂದಿರನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂತಾರ ಸಿನಿಮಾದ ಯಶಸ್ಸಿನ ಬಳಿಕ ಕಾಂತಾರ- 2 ಸಿನಿಮಾ ಮಾಡಲು ನಿರ್ದೇಶಕ ರಿಷಭ್ ಶೆಟ್ಟಿ ಪ್ಲ್ಯಾನ್ ಮಾಡಿದ್ದಾರೆ ಎಂಬ ವಿಚಾರವೊಂದು ಹರಿದಾಡುತ್ತಿತ್ತು. ಅದಕ್ಕೆ ಇದೀಗ ಸ್ಪಷ್ಟನೆ ದೊರೆತಂತಿದೆ. ನಟ ರಿಷಬ್ ಶೆಟ್ಟಿ ಅನುಮತಿ ಪಡೆದ ಬಗ್ಗೆ ದೈವ ನರ್ತಕ ಉಮೇಶ್ ಗಂಧಕಾಡು ಮಾತನಾಡಿ, ರಿಷಭ್ ಶೆಟ್ಟಿಯವರು ಕೆಲವು ದಿನಗಳ ಹಿಂದೆ ಅಣ್ಣಪ್ಪ ಪಂಜುರ್ಲಿ ಸೇವೆ ಮಾಡಬೇಕೆಂದು ಕೇಳಿಕೊಂಡಿದ್ದರು. ಅದಕ್ಕಾಗಿ ನಗರದ ಬಂದಲೆಯ ಮಡಿವಾಳಬೆಟ್ಟು ದೈವಸ್ಥಾನದಲ್ಲಿ ನಾನೇ ಅಣ್ಣಪ್ಪ ಪಂಜುರ್ಲಿ ದೈವದ ನರ್ತನ ಸೇವೆ ಮಾಡಿದ್ದೆ. ದೈವದ ನೇಮದ ವೇಳೆ ಹೇಳುವ ನುಡಿ ನರ್ತಕ ಹೇಳುವುದಲ್ಲ ಬದಲಾಗಿ ದೈವವೇ ಹೇಳುವುದು. ಅದು ದೈವ ನರ್ತಕರಾದ ನಮಗೆ ಗೊತ್ತಾಗದೇ ಆಗುವಂತದ್ದು ಎಂದರು. ಅಣ್ಣಪ್ಪ ಪಂಜುರ್ಲಿಯ ನೇಮದ ವೇಳೆ ಪುಷ್ಪ ಪ್ರಶ್ನೆಯಲ್ಲಿ ದೈವದ ಬಳಿ ಕಾಂತಾರ-2 ಸಿನಿಮಾ ಮಾಡಲು ಅರಿಕೆ ಮಾಡಿದ್ದ ವೇಳೆ ಶುಭ ಶಕುನ ಬಂದಿದೆ. ಕಾಂತಾರ-2 ಸಿನಿಮಾ ಬಹಳ ಶುದ್ಧಾಚಾರದಿಂದ ಮಾಡಬೇಕು. ಧರ್ಮಸ್ಥಳಕ್ಕೆ ತೆರಳಿ ಅಣ್ಣಪ್ಪ ಪಂಜುರ್ಲಿ ದೈವದ ಬಳಿ ಪ್ರಾರ್ಥನೆಯೂ ಮಾಡಬೇಕು…
ಹೆಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಸರ್ಕಾರದ ತೆರಿಗೆ ಹಣ ದುರುಪಯೋಗವಾಗಿದೆ, ಅಕ್ರಮ ಖಾತೆ ಮಾಡಿದ್ದಾರೆ, ಅಧಿಕಾರಿಗಳು ಅಕ್ರಮದಲ್ಲಿ ತೊಡಗಿದ್ದಾರೆ ಎಂದು ಪೌರ ಆಡಳಿತ ಸಚಿವಾಲಯಕ್ಕೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕಳೆದ ಒಂಬತ್ತು ತಿಂಗಳ ಹಿಂದೆ ದೂರು ನೀಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದರು ಕೂಡ ಯಾವುದೇ ಕ್ರಮ ಆಗಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯ ಮಿಲ್ ನಾಗರಾಜು ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದಾರೆ. ಪುರಸಭಾ ಮುಂಭಾಗ ಏಕಾಂಗಿಯಾಗಿ ಉಪವಾಸ ಆರಂಭಿಸಿರುವ ಅವರು, ಸದಸ್ಯರು, ಅಧಿಕಾರಿಗಳ ಮೇಲೆ ಕ್ರಮ ಆಗುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಇವರಿಗೆ ಹಲವು ಪ್ರಗತಿಪರ ಸಂಘಟನೆಯ ಮುಖಂಡರು ಬೆಂಬಲ ವ್ಯಕ್ತಪಡಿಸಿದರು. ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಸದಸ್ಯ ಮಿಲ್ ನಾಗರಾಜು, ಕಳೆದ ನಾಲ್ಕು ವರ್ಷದ ಹಿಂದೆ ಪುರಸಭೆಗೆ ಚುನಾಯಿತರಾದ ನಂತರ ಸಾರ್ವಜನಿಕವಾಗಿ ಪುರಸಭೆ ವತಿಯಿಂದ ಅಭಿವೃದ್ಧಿ ಕೆಲಸ ಕಾರ್ಯ ಮಾಡಿಕೊಡಲು ನಮ್ಮಿಂದ ಸಾಧ್ಯವಾಗಿಲ್ಲ, ಕಾರಣ ಅಧಿಕಾರಿಗಳು ನಮಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು. ಸಾಮಾನ್ಯ ಸಭೆಯಲ್ಲಿ ಆಡಳಿತ…
ಮಂಜುಸ್ವಾಮಿ.ಎಂ.ಎನ್, ಕೊರಟಗೆರೆ. ಕೊರಟಗೆರೆ: ಜನ ಸ್ನೇಹಿ ತಹಶೀಲ್ದಾರ್ ಎಂದೇ ಹೆಸರು ಪಡೆದಿರುವ ತುಮಕೂರು ಜಿಲ್ಲೆ ಕೊರಟಗೆರೆಯ ತಹಶೀಲ್ದಾರ್ ನಾಹೀದಾ ಜಮ್ ಜಮ್ ಅವರು, ಮಾರುವೇಷದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ್ದು, 108 ತುರ್ತು ಸೇವೆಯ ನಿರ್ವಹಣೆ ವೈಫಲ್ಯವನ್ನು ಬಯಲು ಮಾಡಿದ್ದಾರೆ. ಚಿರತೆ ದಾಳಿಯಿಂದ ಗಾಯಗೊಂಡು ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತರು ಮತ್ತು ಮಕ್ಕಳ ಆರೋಗ್ಯ ವಿಚಾರಣೆಗೆ ಬಂದ ನಾಹಿದಾ ಅವರ ಬಳಿ ತುರ್ತು ಆರೋಗ್ಯ ಸೇವೆ 108 ಕುರಿತು ದೂರು ನೀಡಿದ್ದರು. ಚಿರತೆ ದಾಳಿ ಸಂದರ್ಭದಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಕುರಿತು ವಿವರಿಸಿ ಕಣ್ಣೀರು ಹಾಕಿದ್ದರು. ಈ ಹಿನ್ನೆಲೆಯಲ್ಲಿ 108 ಕ್ಕೆ ರಾಮಕ್ಕನ ಹೆಸರಿನಲ್ಲಿ ವಡ್ಡಗೆರೆ ಕ್ರಾಸ್ ಬಳಿ ಅಪಘಾತ ಆಗಿದೆ ಎಂದು ತಹಶೀಲ್ದಾರ್ ಕರೆ ಮಾಡ್ತಾರೆ. 2 ನಿಮಿಷ 108 ಗ್ರಾಹಕ ಸೇವಾಕೇಂದ್ರದ ಸಿಬ್ಬಂದಿ ಮಾಹಿತಿ ಪಡೆಯುತ್ತಾರೆ. ನಂತರ ಕರೆಯು ಆಂಬ್ಯುಲೆನ್ಸ್ ಸಿಬ್ಬಂದಿಗೆ ವರ್ಗಾವಣೆ ಆಗುತ್ತದೆ. ಆಂಬ್ಯುಲೆನ್ಸ್ ಸಿಬ್ಬಂದಿ ಉಮಾದೇವಿಯ ಜೊತೆ 8 ನಿಮಿಷ ತಹಶೀಲ್ದಾರ್ ಮಾತನಾಡುತ್ತಾರೆ.…
ಈ ವರ್ಷದ ಆಗಸ್ಟ್ ತಿಂಗಳಿಂದ ರಾಜ್ಯಾದ್ಯಂತ ಅನೇಕ ಅಂಗನವಾಡಿ ಕೇಂದ್ರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳು ಹಾಗೂ ಗರ್ಭಿಣಿಯರಿಗೆ ‘ತಾಂತ್ರಿಕ’ ಕಾರಣಗಳಿಂದಾಗಿ ಮೊಟ್ಟೆಗಳನ್ನು ಹಂಚಿಕೆ ಮಾಡುವಲ್ಲಿ ತೊಂದರೆ ಅನುಭವಿಸುತ್ತಿವೆ. ಮಕ್ಕಳು ಹಾಗೂ ಮಹಿಳೆಯರಲ್ಲಿ ಅಪೌಷ್ಠಿಕತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ವಾರದಲ್ಲಿ ಮೂರು ಮೊಟ್ಟೆಗಳು ಹಾಗೂ ಗರ್ಭಿಣಿಯರಿಗೆ ವಾರದಲ್ಲಿ ಆರು ಮೊಟ್ಟೆಗಳನ್ನು ಹಂಚಿಕೆ ಮಾಡುತ್ತಿದೆ. ಆದರೆ ಹಣಕಾಸು ಇಲಾಖೆಯ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ ಖಜಾನೆ-|| ವತಿಯಿಂದ ಹಣ ಬಿಡುಗಡೆಯಲ್ಲಿ ಆಗಿರುವ ತೊಂದರೆಯಿಂದಾಗಿ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಸಿಬ್ಬಂದಿಗಳೇ ತಮ್ಮ ಸ್ವಂತ ಖರ್ಚಿನಿಂದ ಮೊಟ್ಟೆಗಳ ಬಿಲ್ಲುಗಳನ್ನು ಪಾವತಿಸುತ್ತಿದ್ದಾರೆ, ಹಾಗೂ ಹಣ ಇಲ್ಲದಿರುವವರು ಫಲಾನುಭವಿಗಳಿಗೆ ಮೊಟ್ಟೆಗಳ ಹಂಚಿಕೆಯನ್ನು ನಿಲ್ಲಿಸಿದ್ದಾರೆ. ಗದಗ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಮೂರು ಅಂಗನವಾಡಿ ಕೇಂದ್ರಗಳಲ್ಲಿ ಹಣಕಾಸಿನ ಕೊರತೆಯಿಂದಾಗಿ ಮಕ್ಕಳಿಗೆ ಮೊಟ್ಟೆಗಳನ್ನು ಕೊಡುವುದು ಸಾಧ್ಯವಾಗುತ್ತಿಲ್ಲವಂತೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರೆಯರ ಮತ್ತು ಸಹಾಯಕಿಯರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ ಅವರ ಪ್ರಕಾರ…