Subscribe to Updates
Get the latest creative news from FooBar about art, design and business.
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
- ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
Author: admin
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಣದಲ್ಲಿ ವಂದೇ ಭಾರತ ಎಕ್ಸ್ಪ್ರೆಸ್ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ಮೋದಿ ಅವರು, ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ, ವಂದೇ ಭಾರತ ಎಕ್ಸ್ಪ್ರೆಸ್ ಹಾಗೂ ಭಾರತ ಗೌರವ್ ಕಾಶಿ ದರ್ಶನ ರೈಲ್ವೆಗೆ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ , ಸಿಎಂ ಬಸವರಾಜ ಬೊಮ್ಮಾಯಿ, ಕೇಂಧ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕಾಮದೇನು ಸ್ಮರಣಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ತಮ್ಮ 32 ವರ್ಷಗಳ ಸೇವಾ ಅವಧಿಯಲ್ಲಿ ಅಗ್ನಿಶಾಮಕ ದಳದಲ್ಲಿ ಜನರ ಪ್ರಾಣ ಜನ ರಕ್ಷಣೆ,ಆಸ್ತಿಪಾಸ್ತಿ ರಕ್ಷಣೆ ಸೇರಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಸಂಕೇಶ್ವರದ ಅಗ್ನಿಶಾಮಕ ನಿವೃತ್ತ ಠಾಣಾಧಿಕಾರಿ ಮಹಾಲಿಂಗಪ್ಪ ಮುಧೋಳ ಅವರು ಈ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದುಕೊಂಡಿದ್ದಾರೆ. ಇತ್ತೀಚಿಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ನಡೆದ ಪದಕ ಪ್ರಧಾನ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕ ಪ್ರಧಾನ ಮಾಡಿ ಗೌರವಿಸಿದರು.ಗೃಹ ಸಚಿವ ಅರಗ ಜ್ಞಾನೇಂದ್ರ ಉಪಸ್ಥಿತರಿದ್ದರು. ಜುಲೈ 13,1988ರಿಂದ ಅಗ್ನಿ ಶಾಮಕ ಇಲಾಖೆಯಲ್ಲಿ ಸೇವೆಗೆ ಸೇರಿದ ಮಹಾಲಿಂಗಪ್ಪ ಮುಧೋಳ ತಮ್ಮ 32ವರ್ಷಗಳ ಸುಧೀರ್ಘ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ, ಅಗ್ನಿಶಾಮಕ ಠಾಣಾಧಿಕಾರಿಯಾಗಿ ಇತ್ತೀಚಿಗೆ ನಿವೃತ್ತಿಯಾಗಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿ ಜನರ ಪ್ರಾಣ, ಆಸ್ತಿಪಾಸ್ತಿ ರಕ್ಷಣೆ ಮಾಡಿ ಅತ್ಯುತ್ತಮ ಕೆಲಸ ನಿರ್ವಹಿಸಿದ್ದಾರೆ.ಇವರ ನಿಸ್ವಾರ್ಥ ಸೇವೆ ಗುರ್ತಿಸಿ ಈ ಪದಕಪ್ರಧಾನ ಮಾಡಲಾಗಿದೆ.ಪದಕ ಪಡೆದ ಮಹಾಲಿಂಗಪ್ಪ ಮುಧೋಳ್ ಗೆ ಅಗ್ನಿಶಾಮಕ…
ರಾಯಚೂರು: ನಗರದ ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳು ಸಿಕ್ಕಿಬಿದಿದ್ದಾರೆ. ಬಿಲ್ ಕ್ಲಿಯರ್ ಮಾಡಲು 5-10 ಸಾವಿರ ರೂ. ಲಂಚ ಕೇಳಿದ್ದಾರೆ. ಬಳ್ಳಾರಿ ಮೂಲದ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನನ್ವಯ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಇಂಜಿನಿಯರ್ಸ್ ಸಿಕ್ಕಿಬಿದಿದ್ದಾರೆ. ಸದ್ಯ ನಾಲ್ಕು ಇಂಜಿನಿಯರ್ ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮಿಳುನಾಡು ಚೆನ್ನೈ : ತಿನ್ನುತ್ತಿದ್ದಾಗ ಬಿರಿಯಾನಿ ಸ್ವಲ್ಪ ಕೊಡ್ರಿ ಎಂದು ಕೇಳಿದ್ದಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿದ ಪತಿ ನಂತರ ಆಕೆಯನ್ನೂ ತಬ್ಬಿಕೊಂಡು ನಂದಿಸಲು ಹೋಗಿ ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದೆ. 74 ವರ್ಷದ ಪತಿ ಬೆಂಕಿ ಹಚ್ಚಿದ ಬಳಿಕ ಪತ್ನಿಯನ್ನು ಅಪ್ಪಿಕೊಂಡಿದ್ದಾನೆ. ಇದರಿಂದ ಇಬ್ಬರೂ ಸುಟ್ಟ ಗಾಯಗಳಿಂದ ನರಳುತ್ತಿದ್ದರು. ಶೋಚನೀಯ ಸ್ಥಿತಿಯಲ್ಲಿದ್ದ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರೂ ಮೃತಪಟ್ಟಿದ್ದಾರೆ. ಚೆನ್ನೈನ ಅಯನವರಂನ ಟ್ಯಾಗೊ ನಿವಾಸಿಗಳಾದ ನಿವೃತ್ತ ರೈಲ್ವೆ ನೌಕರ ಕರುಣಾಕರನ್ ಮತ್ತು ಪತ್ನಿ ಪದ್ಮಾವತಿ ಮೃತ ನಿವಾಸಿಗಳು. ದಂಪತಿಗೆ 4 ಮಕ್ಕಳಿದ್ದು ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದು, ಸೋಮವಾರ ರಾತ್ರಿ ದಂಪತಿಯ ಮನೆಯಿಂದ ಕಿರುಚಾಟವನ್ನು ಕೇಳಿದ ನೆರೆಹೊರೆಯವರು ಅಲ್ಲಿಗೆ ಓಡಿಬಂದರು. ಗಂಡ ಹೆಂಡತಿ ಸುಟ್ಟು ಕರಕಲಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ಸಾಯುವ ಮೊದಲು ಪದ್ಮಾವತಿ ನೀಡಿದ ಕಾರಣ ತುಂಬಾ…
ದೇಶೀಯ ಮದ್ಯ ಸೇವಿಸಿದ 24 ಆನೆಗಳು ಗಂಟೆಗಟ್ಟಲೆ ಮೈಮರೆತು ಮಲಗಿದ ಘಟನೆ ಅಸ್ಸಾಂನಲ್ಲಿ ನಡೆದಿದೆ. ಸಾಂಪ್ರದಾಯಿಕ ಮವುಹಾ ದೇಶೀಯ ಮದ್ಯ ಸೇವಿಸಿದ ಆನೆಗಳು ಗಂಟೆಗಟ್ಟಲೆ ಸುಖವಾಗಿ ನಿದ್ರಿಸಿ ಎಂಜಾಯ್ ಮಾಡಿವೆ. ಗ್ರಾಮಸ್ಥರು ಗ್ರಾಮದ ಸಮೀಪದ ಕಾಡಿನಲ್ಲಿ ಸಾಂಪ್ರದಾಯಿಕ ಮದ್ಯ ತಯಾರಿಸುತ್ತಿದ್ದರು ಹೀಗೆ ತಯಾರಿಸಿದ ಮದ್ಯ ತರಲು ಹೋದಾಗ ಹೂವಿನ ವಾಸನೆ ನೋಡಿ ಬಂದ ಆನೆಗಳನ್ನು ನೋಡಿ ಓಡಿ ಹೋಗಿದ್ದಾರೆ. ಆದರೆ ಸ್ಥಳಕ್ಕೆ ಬಂದ ಆನೆಗಳು ಎಣ್ಣೆ ಹೊಡೆದು ಮತ್ತು ಏರಿ ಮಲಗಿವೆ. ಕೆಂಜೊಹರ್ ಜಿಲ್ಲೆಯಲ್ಲಿ ಮಹುವಾ ಹೂವುಗಳನ್ನು ನೀರು ತುಂಬಿದ ಹೊಂಡದಲ್ಲಿ ಕೆಲವು ಸಮಯ ಮುಚ್ಚಿಡಲಾಗುತ್ತದೆ. ನಂತರ ಅವರು ಹೋದಾಗ ಆನೆಗಳು ಮಡಿಕೆ ಒಡೆದು ಕುಡಿದು ಮಲಗಿವೆ. ನಾವು ಬೆಳಿಗ್ಗೆ 6 ಗಂಟೆಗೆ ಕಾಡಿಗೆ ಹೋದಾಗ ಮಡಿಕೆಗಳು ಒಡೆದು ಹೋಗಿದ್ದವು. ಅಲ್ಲದೇ ಸುಮಾರು 24 ಆನೆಗಳು ಮತ್ತಿನಲ್ಲಿ ಮಲಗಿದ್ದವು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಚಿತ್ರದುರ್ಗ: ಮದರ್ ಟ್ರೀಮ್ಸ್ ರೂರಲ್ ಮತ್ತು ಅರ್ಬನ್ ಎಜುಕೇಷನ್ ಡೆವಲಪ್ ಮೆಂಟ್ ಸೊಸೈಟಿ, ಶ್ರೀ ಆಂಜನೇಯ ಸ್ವಾಮಿ ಪ್ರೌಢ ಶಾಲೆ ಕಡ್ಲೇಗುದ್ದು ಹಾಗೂ ಶ್ರೀ ಮಲಾರಲಿಂಗೇಶ್ವರ ನರ್ಸಿಂಗ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯನ್ನು ಆಯೋಜಿಸಲಾಗಿದೆ. ನವೆಂಬರ್ 19ರಂದು ವೀರಯೋಧ ಜಿ.ಎಸ್. ಪ್ರಭಾಕರ ಸಭಾಂಗಣದಲ್ಲಿ ರಾಜ್ಯ ಮಟ್ಟದ ಗ್ರಾಮೀಣ ಮಕ್ಕಳ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಕಾರ್ಯಕ್ರಮದ ದಿನ ಬೆಳಗ್ಗೆ 8:30ಕ್ಕೆ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣ ನಡೆಯಲಿದೆ. ಕಡ್ಲೆಗುದ್ದು ಗ್ರಾ.ಪಂ. ಸದಸ್ಯರಾದ ಕುಮಾರ್ ಜೆ.ಡಿ. ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಶಿವಸ್ವಾಮಿ ಕೆ.ಎಂ. ಅವರು ನಾಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ಚಿತ್ರದುರ್ಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರಾಮಲಿಂಗ ಶೆಟ್ರು ಪರಿಷತ್ ನ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಬಳಿಕ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.…
ಬೆಂಗಳೂರು : ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯದ ಮೇಲಿದ್ದಾಗ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ರಾಜ್ಯ ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಒಟ್ಟು 93,013 ಅಧಿಕಾರಿ ಮತ್ತು ಸಿಬ್ಬಂದಿಗಳು ಕರ್ತವ್ಯದ ಮೇಲಿರುವಾಗ ಆಕಸ್ಮಿಕ/ಅಪಘಾತದಲ್ಲಿ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ಮಂಜೂರಾತಿ ಆದೇಶ ಹೊರಡಿಸಿದೆ. ಅಧಿಕಾರಿಗಳು ಮೃತರ ಕುಟುಂಬದವರಿಗೆ ವಿಮಾ ಪರಿಹಾರ ಮೊತ್ತ ರೂ.20.00 ಲಕ್ಷಗಳನ್ನು ಮಂಜೂರು ಮಾಡುವ ಸಂಬಂಧ, ವಿವರವಾದ ವರದಿಯೊಂದಿಗೆ 15 ದಿನಗಳ ಒಳಗೆ ಕೈಂ ಫಾರಂ ಅನ್ನು ಭರ್ತಿ ಮಾಡಿ, ಸೂಚಿಸಿರುವ ದಾಖಲೆಗಳನ್ನು ಘಟಕಾಧಿಕಾರಿಗಳೇ ಖುದ್ದು ದೃಢೀಕರಿಸಿ ನೇರವಾಗಿ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಗೆ ಪೋಸ್ಟ್ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಲಾಗಿದೆ. ಕರ್ತವ್ಯದ ಮೇಲಿರುವಾಗ ಮೃತಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಯ ಮಾಹಿತಿಯನ್ನು ನಿಗಧಿತ ಸಮಯದೊಳಗೆ…
ವಿಜಯಪುರ: ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿ ಚಲಿಸುತ್ತಿದ್ದ ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ರಸ್ತೆಯಲ್ಲಿ ನಡೆದಿದೆ. ರಮೇಶ ನಾಟಿಕಕಾರ(45) ಮಗಳು ಖುಷಿ(8) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಶ್ರೀದೇವಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಬಸವನ ಬಾಗೇವಾಡಿ ತಾಲೂಕಿನವರು ಎಂದು ತಿಳಿದು ಬಂದಿದೆ. ಬಾಗೇವಾಡಿ ಮೂಲಕ ಪತಿ, ಪತ್ನಿ ಹಾಗೂ ಮಗಳು ಬೈಕ್ನಲ್ಲಿ ಚಲಿಸುತ್ತಿದ್ದಾಗ ಎದುರಿಗೆ ಬಂದ ಕ್ರೂಸರ್ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಶಾಲಾ ಮಕ್ಕಳಿಗೆ ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ವಾಟರ್ ಬೆಲ್ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸಿಬೇಕೆಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು, ಕುಡಿಯುವ ನೀರಿನ ಬೆಲ್ ಗೆ ವಿಶೇಷ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ 10:35 ಕ್ಕೆ ಹಾಗೂ ಮಧ್ಯಾಹ್ನ 12 ಗಂಟೆ, ಹಾಗೂ 2 ಗಂಟೆಗೆ ವಾಟಲ್ ಬೆಲ್ ಮಾಡಲು ಚಿಂತನೆ ನಡೆಸಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ನೀರು ಬಹಳ ಮುಖ್ಯವಾಗಿದ್ದು, ಆದ್ದರಿಂದ ಮಕ್ಕಳಿಗೆ ನೀರು ಕುಡಿಯಲು ದಿನಕ್ಕೆ ಮೂರು ಬಾರಿ 10 ನಿಮಿಷ ಬ್ರೇಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಶಾಲೆಗಳಲ್ಲಿ ಮಕ್ಕಳು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುತ್ತಿಲ್ಲ ಎಂಬುದನ್ನು ಮನಗಂಡ ಶಿಕ್ಷಣ…
ಮಧುಗಿರಿ: ನವೆಂಬರ್ 13ರಂದು ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ: ಅರ್ಜುನ್ ಜನ್ಯ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ
ಮಧುಗಿರಿ: ತಾಲೂಕು ವಿಕಾಸ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ಪುಣ್ಯ ಸ್ಮರಣೆ ಅಂಗವಾಗಿ ನವೆಂಬರ್ 13ರಂದು ಭಾನುವಾರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬೆಳಗೆ 10 ರಿಂದ 2 ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ವಿಕಾಸ ಸಮಿತಿಯ ಅಧ್ಯಕ್ಷರಾದ ಭೀಮನಕುಂಟೆ ಹನುಮಂತೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ರತ್ನ ಪುನೀತ್ ರಾಜಕುಮಾರ್ ಅವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ. ಆರೋಗ್ಯ ತಪಾಸಣೆಯನ್ನು ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಮೂಲಕ ನಡೆಸಲಾಗುತ್ತದೆ. ಈ ತಪಾಸಣೆಯಲ್ಲಿ ಮಧುಮೇಹ ತಜ್ಞರು, ಮೂಳೆ ಮತ್ತು ಕೀಳು ತಜ್ಞರು ಹಾಗೂ ಜನರಲ್ ಸರ್ಜನ್ ಲಭ್ಯವಿರುತ್ತಾರೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಧ್ಯಮ ಮೂಲಕ ಮನವಿ ಮಾಡಿದರು. ಸಂಜೆ ಖ್ಯಾತ ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ರವರ ನೇತೃತ್ವದಲ್ಲಿ…