Subscribe to Updates
Get the latest creative news from FooBar about art, design and business.
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
- ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
Author: admin
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು. ವಿಶ್ವದ ಅತಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಮಾದರಿಯಲ್ಲಿ ತಿಪಟೂರು ಐಕ್ಯತಾ ನಡಿಗೆ ಸಾಗಿದೆ. ಕ್ಷೇತ್ರ ಸಂಚಾರದಲ್ಲಿ ಕ್ಷೇತ್ರದ ಮೂಲ ಸಮಸ್ಯೆಗಳ ದಿಗ್ದರ್ಶನವಾಯಿತು. ಸ್ಥಳೀಯರು ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಟಿಟ್ಟಿದ್ದಾರೆ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಿ.ಬಿ.ಶಶಿಧರ್ (ಟೂಡಾ) ಹೇಳಿದ್ದಾರೆ. ಸಚಿವ ಬಿ.ಸಿ.ನಾಗೇಶ್ ಅವರು ಕೇವಲ ಧರ್ಮ ರಾಜಕೀಯ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುತ್ತಿಲ್ಲ, ಸಮಸ್ಯೆಗಳತ್ತ ಮುಖ ಮಾಡುತ್ತಿಲ್ಲವೆಂದು ಸ್ವತಃ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ. ಸಚಿವರ ವಿರುದ್ಧ ನಾವು ಹೇಳಿಕೆ ನೀಡಿದರೆ ಬಹುಶಃ ರಾಜಕಾರಣವೆಂದು ಹೇಳಬಹುದು. ಆದರೆ, ಜನರೇ ಬೇಸತ್ತಿದ್ದಾರೆಂದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲವೆಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ. ಅಕ್ಟೋಬರ್ 20 ರಿಂದ ಕ್ಷೇತ್ರ ಸಂಚಾರ ಕೈಗೊಂಡಿದ್ದು, ಇದುವರೆಗೆ ಗ್ಯಾರಘಟ್ಟ, ಹಾಲ್ಕುರಿಕೆ, ತಡಸೂರು, ಸಾರ್ಥವಳ್ಳಿ, ಗುಡಿಗೊಂಡನಹಳ್ಳಿ, ಗುಂಗುರಮಳೆ ಸೇರಿ 6 ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿದ್ದೇವೆ. ಪ್ರತಿ ಗ್ರಾಪಂಗಳಲ್ಲೂ ಸರಾಸರಿ 300 ಜನರಂತೆ ಇದುವರೆಗೆ ಕನಿಷ್ಠ 1,800 ಜನರನ್ನು ಭೇಟಿಯಾಗಿದ್ದೇನೆ. ಸ್ಥಳೀಯ ಹಿರಿಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಮುಖಂಡರು, ಯುವಕ-ಯುವತಿಯರು, ಮಹಿಳೆಯರು…
ಸರಗೂರು: ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಾಣ ವಾಗುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ತಕ್ಷಣವೇ ತನಿಖೆ ನಡೆಸಬೇಕು ಎಂದು ಪಟ್ಟಣ ಪಂಚಾಯತಿ ಸದಸ್ಯ ಶ್ರೀನಿವಾಸ್ ಒತ್ತಾಯಿಸಿದ್ದಾರೆ. ಕಟ್ಟಡ ಕಾಮಗಾರಿಯ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದ್ದು, ಇಲಾಖೆಗೆ ಎಂಜಿನಿಯರ್ ಧ್ರುವರಾಜ್ ಅವರು ಗುತ್ತಿಗೆದಾರನೊಂದಿಗೆ ಶಾಮಿಲಾಗಿ ಆರಂಭದಿಂದಲೂ ಕಟ್ಟಡ ಕಾಮಗಾರಿಯನ್ನು ಕಳಪೆಯಾಗಿ ನಿರ್ಮಿಸಿದ್ದಾರೆ ಎಂದು ಅವರು ಆರೋಪಿಸಿದರು. ತಕ್ಷಣವೇ ಕಾಮಗಾರಿಯನ್ನು ನಿಲ್ಲಿಸಲು ಎಂಜಿನಿಯರ್ ಧ್ರುವ ರಾಜ್, ಗುತ್ತಿಗೆದಾರನಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದ ಅವರು, ಕಳಪೆ ಕಾಮಗಾರಿಯ ಬಗ್ಗೆ ಪ್ರಶ್ನಿಸಿದರೆ, ಧ್ರುವ ರಾಜ ಅವರು ಉಡಾಫೆ ಉತ್ತರ ನೀಡುತ್ತಿದ್ದಾರೆ. ಕಾಮಗಾರಿ ನಿಲ್ಲಿಸಲು ಶಾಸಕರ ಗಮನಕ್ಕೆ ತರಲಾಗಿದೆ ಎಂದರೂ ಶಾಸಕರ ಮಾತಿಗೂ ಕ್ಯಾರೆ ಎನ್ನುತ್ತಿಲ್ಲ ಎಂದು ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ನಿಲ್ಲಿಸುವುದಿಲ್ಲ, ಯಾರಿಗೆ ಬೇಕಾದರೂ ಹೇಳಿಕೊಳ್ಳಿ ಎಂದು ಬೇಜವಾಬ್ದಾರಿಯ ಉತ್ತರ ನೀಡುವ ಮೂಲಕ ಶಾಸಕರಿಗೂ ಧ್ರುವ ರಾಜ್ ಅಗೌರವ ತೋರಿದ್ದಾರೆ. ಹೀಗಾಗಿ ಎಂಜಿನಿಯರ್ ವಿರುದ್ದ ಸೂಕ್ತಕ್ರಮ ವಹಿಸಬೇಕು. ಕಾಮಗಾರಿ ನಿಲ್ಲಿಸಬೇಕು.…
ಪ್ರಧಾನಿ ಮೋದಿಯವರ ನಾಳಿನ ಬೆಂಗಳೂರು ಭೇಟಿ ಎಲೆಕ್ಷನ್ ಗಿಮಿಕ್ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ಮೋದಿ ಬೆಂಗಳೂರು ಭೇಟಿ ಎಲೆಕ್ಷನ್ ಗಿಮಿಕ್. ಮೊದಲು 40 ಪರ್ಸೆಂಟ್ ಆರೋಪಕ್ಕೆ ಮೋದಿ ಉತ್ತರಿಸಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪತ್ರ ಬರೆದರೂ ಉತ್ತರಿಸಿಲ್ಲ ಎಂದು ಟಾಂಗ್ ನೀಡಿದರು. ವಾಲ್ಮಿಕಿ ಕನಕ ಪ್ರತಿಮೆಗೆ ಮಾಲಾರ್ಪಣೆ ಇದು ಎಲೆಕ್ಷನ್ ಗಿಮಿಕ್ . ವಾಲ್ಮಿಕಿ ಕನಕ ಪ್ರತಿಮೆ ನಿರ್ಮಿಸಿದ್ದು ಕಾಂಗ್ರೆಸ್. ಈಗ ಮಾಲಾರ್ಪಣೆ ಮಾಡಲು ಮೋದಿ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮೋದಿ ಬರ್ತಾರೆ ಅಂತಾ ಹಿಂದೆ ಗುಂಡಿ ಮುಚ್ಚಿದ್ದರು. ಈಗ ರಸ್ತೆ ಗುಂಡಿ ಮುಚ್ಚುತ್ತಿದ್ದಾರೆ. ಕಳಪೆ ರಸ್ತೆ ನಿರ್ಮಿಸಿ ಕಿತ್ತೋದ್ರೆ ಏನು ಪ್ರಯೋಜನ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾಳೆ 108 ಅಡಿಯ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿದ್ದು, ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ. ಮೋದಿ ಆಗಮನ ಹಿನ್ನೆಲೆ ಬೆಂಗಳೂರು ರಸ್ತೆ ಸಂಚಾರದಲ್ಲಿ ಮಾರ್ಗ ಬದಲಾವಣೆಯಾಗಲಿದ್ದು, ಟ್ರಾಫಿಕ್ ಹಾಗೂ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಕೆಲ ರಸ್ತೆಗಳು ಬಂದ್ ಆಗಲಿವೆ. CTO ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ, ಸ್ಯಾಂಕಿ ರಸ್ತೆ, ಏರ್ಪೋರ್ಟ್ ಕಾರಿಡಾರ್, ಮಹಾರಾಣಿ ಬ್ರಿಡ್ಜ್ ಸೇರಿದಂತೆ ಕೆಲ ರಸ್ತೆಗಳು ಬಂದ್ ಆಗಲಿವೆ. ಮೋದಿ ಭದ್ರತೆಗಾಗಿ ಒಟ್ಟು 4 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಏರ್ ಟೆಲ್ ಎಕ್ಸ್ಸ್ಟ್ರೀಮ್ ಫೈಬರ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಇದರಿಂದಾಗಿ ಗ್ರಾಹಕರು ಪರದಾಡಿದ ಘಟನೆ ನಡೆದಿದೆ. ತಾಂತ್ರಿಕ ಅಡಚಣೆಯ ಹಿನ್ನೆಲೆಯಲ್ಲಿ ಏರ್ ಟೆಲ್ ಗ್ರಾಹಕರ ಬಳಿಕ ಕ್ಷಮೆಯಾಚಿಸಿದೆ. ಏರ್ ಟೆಲ್ ನ ಸೇವೆಯಲ್ಲಿ ಹಲವೆಡೆ ಸೇವಾ ಅಡೆತಡೆಗಳು ಉಂಟಾಗಿದ್ದು, ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಏರ್ ಟೆಲ್ ಈ ಬಗ್ಗೆ ಸ್ಪಷ್ಟನೆ ನೀಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ನಿಮ್ಮ ಏರ್ ಟೆಲ್ ಎಕ್ಸ್ಸ್ಟ್ರೀಮ್ ಫೈಬರ್ ಸೇವೆಗಳಲ್ಲಿ ನೀವು ಅಡಚಣೆಯನ್ನು ಅನುಭವಿಸಬಹುದು. ನಿಮ್ಮ ಸೇವೆಗಳನ್ನು ಪುನರಾರಂಭಿಸಲು ನಿರೀಕ್ಷಿತ ಸಮಯ 10 ನವೆಂಬರ್ 2022, 5:44 PM ಆಗಿದೆ. ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಏರ್ ಟೆಲ್ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನಟಿ ರಶ್ಮಿಕಾ ಮಂದಣ್ಣ ಮಾಡಿರುವ ಪೋಸ್ಟ್ ಕುರಿತು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಶ್ಮಿಕಾ ಟ್ರೋಲ್ ಮತ್ತು ನೆಗೆಟಿವಿಟಿ ಕಾರಣದಿಂದ ನಮಗೆ ಆಗಿರುವ ತೊಂದರೆ ಕುರಿತು ಅವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕುರಿತು ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಟ್ರೋಲಿಂಗ್ ಕೆಟ್ಟದ್ದು. ಜನರ ಜೀವನದ ಬಗ್ಗೆ ನಾವು ಅಭಿಪ್ರಾಯಗಳನ್ನು ಹೇರೋಕೆ ಆಗಲ್ಲ. ವಾಸ್ತವ ಆ ವ್ಯಕ್ತಿಗೆ ಮಾತ್ರ ಗೊತ್ತಿರುತ್ತದೆ. ಅವರ ಪಾಡಿಗೆ ಅವರನ್ನು ಇರಲು ಬಿಡಿ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಅಂದಹಾಗೆ ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್ ಬ್ಯಾಗ್ ರೀತಿ ಆಗಿದ್ದೇನೆ ಎಂದು ಬರೆದುಕೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಡಿಕೇರಿ; ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ. ಶ್ರೀನಾಥ್ ಎಂಬಾತ 60 ಕ್ಕೂ ಹೆಚ್ಚು ಜನರಿಗೆ ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ ವಂಚನೆ ಮಾಡಿದ್ದ. ಪ್ರತಿಯೊಬ್ಬರಿಂದ 1 ಲಕ್ಷ ರೂ. ಸಂಗ್ರಹ ಮಾಡಿದ್ದ ಎನ್ನಲಾಗಿದೆ. ಕೊಡಗು, ದಕ್ಷಿಣ ಕನ್ನಡ ಕೇರಳಾದಲ್ಲೂ ಆರೋಪಿ ವಂಚನೆ ಮಾಡಿದ್ದು, ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಾಜಿ ವಿಶ್ವ ಸುಂದರಿ, ನಟಿ ಪ್ರಿಯಾಂಕಾ ಚೋಪ್ರಾ ಹಲವು ವರ್ಷಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ತಾರತಮ್ಯವನ್ನು ಕೊನೆಗೊಳಿಸಲು ಯುನಿಸೆಫ್ ಕಾರ್ಯಗಳ ಪ್ರಗತಿಯನ್ನು ನೋಡಲು ಅವರು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಿದ್ದಾರೆ. ಅಂದಹಾಗೆ ಪ್ರಿಯಾಂಕಾ ಚೋಪ್ರಾ ಯುನಿಸೆಫ್ನ ಸದ್ಭಾವನಾ ರಾಯಭಾರಿಯಾಗಿದ್ದು ಅವರು ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಿಷಯವನ್ನು ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ತಮ್ಮ ಭೇಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು “ಸದ್ಯ, ನಾನು ಯುನಿಸೆಫ್ನೊಂದಿಗೆ ಭಾರತದ ಲಕ್ನೋದಲ್ಲಿದ್ದೇನೆ. ನಾನು ಈ ಕ್ಷೇತ್ರ ಭೇಟಿಗಾಗಿ ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಯುದ್ಧಕ್ಕೆ ಸಜ್ಜಾಗಿ ಗೆಲುವಿಗೆ ಹೋರಾಡಿ ಎಂದು ಸೇನೆಗೆ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಕರೆ ನೀಡಿದ್ದಾರೆ. ಸತತ ಮೂರನೇ ಬಾರಿ 5 ವರ್ಷಗಳ ಅವಧಿಯ ಚೀನಾ ನ್ಯಾಷನಲ್ ಸೆಕ್ಯೂರೆಟಿ ಮುಖ್ಯಸ್ಥರಾಗಿ ನೇಮಕಗೊಂಡ ನಂತರ ಸೇನೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಸೇನೆಯಲ್ಲಿ ಅತ್ಯಂತ ಅಸ್ಥಿರ ಕಾಡುತ್ತಿದ್ದು, ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು. ಪಕ್ಷದ ಮೂರು ಪ್ರಮುಖ ಹುದ್ದೆಗಳನ್ನು ಹೊಂದಿರುವ ಕ್ಸಿ ಜಿನ್ ಪಿಂಗ್, ಚೀನಾ ಸೇನೆ ಹಿಂದೆದಿಗಿಂತಲೂ ಹೆಚ್ಚು ಸವಾಲುಗಳನ್ನು ಎದುರಿಸುತ್ತಿದ್ದು, ಅದರ ವಿರುದ್ಧ ಹೋರಾಡಿ ಗೆಲ್ಲಬೇಕಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy