Subscribe to Updates
Get the latest creative news from FooBar about art, design and business.
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
- ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
Author: admin
ಎಎಸ್ ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪೇರೇಸಂದ್ರ ಗ್ರಾಮದಲ್ಲಿನ ಎಎಸ್ ಐ ನಾರಾಯಣ ಸ್ವಾಮಿ ಮನೆಯಲ್ಲಿ ಈ ಘಟನೆ ನಡೆದಿದೆ. ನಾರಾಯಣ ಸ್ವಾಮಿ ಅವರ ಪುತ್ರ ಶರತ್ ಗೆ ಮೂರು ಗುಂಡು ತಗುಲಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಶರತ್ ಮೇಲೆ ಗುಂಡು ಹಾರಿಸಿ ಪತ್ನಿ ಹಾಗೂ ಸೊಸೆ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕನ್ನಡ ಚಿತ್ರರಂಗದ ಹಿರಿಯ ನಟಿ ತಾರಾ ಅವರ ಕಾರು ಚಾಲಕನ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾರಾ ಅವರ ಕಾರು ಚಾಲಕ ಅಕ್ಷಯ್ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅಕ್ಟೋಬರ್ 29ರಂದು ನಟಿ ತಾರಾ ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕ ಅಕ್ಷಯ್ ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿದ್ದಾರೆ. ಮುಂದೆ ಇದ್ದ ಕಾರು ಜಖಂಗೊಂದಿತ್ತು, ಅಕ್ಷಯ್ ಅವರ ಅಜಾಗರೂಕ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎಂದು ಮುಂದಿನ ಕಾರಿನಲ್ಲಿದ್ದ ಗಿರೀಶ್ ಅವರು ಆರೋಪಿಸಿದ್ದರು. ಘಟನಾ ನಂತರ ಕಾರು ರಿಪೇರಿ ಮಾಡಿಸುವುದಾಗಿ ಅಕ್ಷಯ್ ಭರವಸೆ ನೀಡಿದ್ದರು. ಆದರೆ ರಿಪೇರಿ ಮಾಡಿಸದೇ ನಂತರ ಸಾಕಷ್ಟು ಬಾರಿ ಅಲೆದಾಡಿಸಿದ್ದಾರೆ ಎಂದು ಮತ್ತೊಂದು ಕಾರಿನ ಗಿರೀಶ್ ದೂರು ನೀಡಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ‘ಅಜಾಗರೂಕ ಚಾಲನೆ’ ಎಂದು ಪ್ರಕರಣ ದಾಖಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ದೇವರ ಹರಕೆ ತೀರಿಸಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ಮೂವರು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಂಭವಿಸಿದೆ. ಗೋಗಿ ತಾಂಡ ನಿವಾಸಿಗಳಾದ ದೀಪಕ್ (45), ಯುವರಾಜ್ (17) ಮತ್ತು ರಾಹುಲ್ (17) ಮೃತಪಟ್ಟ ದುರ್ದೈವಿಗಳು. ಗೋಗಿ ತಾಂಡಾದಿಂದ ಸಾವಳಗಿ ತಾಂಡಗೆ ದೇವರಿಗೆ ಹರಕೆ ತೀರಿಸಲು ಕುಟುಂಬ ಸಮೇತರಾಗಿ ತೆರಳಿದ್ದರು. ಕುಟುಂಬದವರು ಬೇರೆ ವಾಹನದಲ್ಲಿ ಮರಳಿದರೆ, ಈ ಮೂವರು ಬೈಕ್ ನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಾಗಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ವಾರ್ಡ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ಮತದಾರರ ಪಟ್ಟಿ ಪರಿಶೀಲಿಸಲು ಅವಕಾಶ ನೀಡಲಾಗಿದೆ. ತಮ್ಮ ಮೊಬೈಲ್ನಲ್ಲಿ VHA ಆ್ಯಪ್ ಅಥವಾ NVSP ವೆಬ್ಸೈಟ್ ಮೂಲಕ ಮಾಹಿತಿ ಪಡೆಯಬಹುದಾಗಿದೆ. e-EPIC download ಮಾಡಿಕೊಳ್ಳಲು ಇನ್ನಿತರ ಮತಗಟ್ಟೆ, ಶೇಕಡಾವಾರು ಮತದಾನದ ಮಾಹಿತಿ ಪಡೆಯಬಹುದು. ಈ ಹಿಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8614 ಮತಗಟ್ಟೆಗಳಿದ್ದವು. ಪ್ರಸ್ತುತ 8615 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿ ದೋಷಗಳಿದ್ದರೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳು ಅವಕಾಶ ಇದೆ. ಅಂದರೆ 8-12-22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅಂತಿಮ ಮತದಾರರ ಪಟ್ಟಿಯನ್ನು 5-1-2023 ಕ್ಕೆ ಪ್ರಕಟಿಸಲಾಗುತ್ತೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು. ಇ-ಲಿಸ್ಟ್ ಇಂದು ಪ್ರಕಟನೆ ಮಾಡಿದ್ದೇವೆ. ಅದರ ಆಧಾರದ…
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಚೋದನೆ ನೀಡಿದ್ದಾರೆ ಎಂಬ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಜೆಪಿ ಹಿರಿಯ ಮುಖಂಡರಾದ ಎಲ್ ಕೆ ಆಡ್ವಾಣಿ, ಉಮಾಭಾರತಿ, ಮನೋಹರ್ ಜೋಷಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಸರೋಜ್ ಯಾದವ್ ಅವರನ್ನೊಳಗೊಂಡ ಪೀಠ, ಅಡ್ವಾಣಿ, ಉಮಾ ಭಾರತಿ, ದಿವಂಗತ ಕಲ್ಯಾಣ್ ಸಿಂಗ್, ಮನೋಹರ್ ಜೋಷಿ ಸೇರಿದಂತೆ 32 ಮಂದಿ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ. ಅಯೋಧ್ಯೆಯ ಇಬ್ಬರು ಮುಸ್ಲಿಮ್ ಮುಖಂಡರು ಬಾಬ್ರಿ ಮಸೀದಿ ಧ್ವಂಸಗೊಳಿಸಿ ರಾಮ ಮಂದಿರ ಸ್ಥಾಪನೆಗೆ ಪ್ರಚೋದನೆ ನೀಡಿ ಗಲಭೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಇವರ ಮೇಲಿದ್ದ ಆರೋಪಗಳನ್ನು ವಜಾಗೊಳಿಸಿದ್ದ ಸಿಬಿಐ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. 2020ರಲ್ಲಿ ಸಿಬಿಐ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ಯೋಜಿತ ಕೃತ್ಯ ಎಂದು ಹೇಳಿತ್ತು. ಆದರೆ ಅದೇ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆ ಹಾಗೂ ಸುಪ್ರೀಂಕೋರ್ಟ್ ವಿವಾದ ಬಗೆ…
ಭಾರತ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ಹೆಸರು ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದು, ಸಂಭಾವ್ಯ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಹಲವು ಘಟಾನುಘಟಿಗಳ ಜೊತೆ ರವೀಂದ್ರ ಜಡೇಜಾ ಅವರ ಪತ್ನಿ ಕೂಡ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಜಡೇಜಾ ಪತ್ನಿ ರಿವಾಬಾ ಜಡೇಜಾ ಮೆಕಾನಿಕಲ್ ಇಂಜಿನಿಯರ್ ವಿದ್ಯಾಭ್ಯಾಸ ಮಾಡಿದ್ದು, ರಿವಾಬಾ ಅವರ ಸಂಬಂಧಿ ಹರಿ ಸಿಂಗ್ ಸೋಲಾಂಕಿ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದಾರೆ. ಕರ್ಣಿಸೇನಾ ಮುಖಂಡರಲ್ಲಿ ಒಬ್ಬರಾಗಿರುವ ರಿವಾಬಾ ಜಡೇಜಾ ರಜಪುತ್ ಸಮುದಾಯದವರಾಗಿದ್ದಾರೆ. ರವೀಂದ್ರ ಜಡೇಜಾ ಅವರನ್ನು 2016ರಲ್ಲಿ ವಿವಾಹ ಆಗಿದ್ದಾರೆ. ಗುಜರಾತ್ ನಲ್ಲಿ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ ತವರೂರಾದ ಈ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿಗೆ ಪ್ರಮುಖವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ದೇಶದಲ್ಲೇ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿ ಅವರು 2ನೇ ಟರ್ಮಿನಲ್ಗೆ ಉದ್ಘಾಟನೆ ಮಾಡಲಿದ್ದಾರೆ. ಇದರಿಂದ ಇನ್ನುಮುಂದೆ ವಿಮಾನ ನಿಲ್ದಾಣಕ್ಕೆ ದೇಶ-ವಿದೇಶಗಳಿಂದ ಬಂದುಹೋಗುವ ವಿಮಾನಗಳು ಮತ್ತು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಲಿದೆ. ಟರ್ಮಿನಲ್-2ನ್ನು ಗಾರ್ಡನ್ ಟರ್ಮಿನಲ್ ಎಂದು ಬಿಲ್ ಮಾಡಲಾಗಿದೆ. ಉದ್ಯಾನ ನಗರಿ ಬೆಂಗಳೂರಿನ ಅಭಿವೃದ್ಧಿ ನೀತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ವಿಶೇಷವಾಗಿ ಟರ್ಮಿನಲ್ ಅನ್ನು ವಿನ್ಯಾಸಗೊಳಿಸಲಾಗಿದೆ . ಒಟ್ಟು 13,000 ಕೋಟಿ ರೂ. ವೆಚ್ಚದಲ್ಲಿ 2.55 ಲಕ್ಷ ಚದರ ಮೀ. ಟರ್ಮಿನಲ್-2 ನಿರ್ಮಾಣ ನಡೆಯುತ್ತಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತಿದೆ. 1.6 ಕೋಟಿ ಪ್ರಯಾಣಿಕರ ದಟ್ಟಣೆಯ ಹೊರೆ ತಗ್ಗಿಸಲು ಟರ್ಮಿನಲ್-2 (ಟಿ-2) ಸಿದ್ದಪಡಿಸಲಾಗಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ…
ಬೆಂಗಳೂರು: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದು, ಜನತೆಯಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ ಎಂದು ಹಿಂದೂ ಅರ್ಥ ಅಶ್ಲೀಲ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ. ಇಷ್ಟು ದಿನ ಕಾಂಗ್ರೆಸ್ಸಿಗರು ಹಿಂದೂಗಳನ್ನ ಅವಮಾನ ಮಾಡುತ್ತಾ ಅಲ್ಪಸಂಖ್ಯಾತರ ಮತ ಪಡೆದುಕೊಂಡು ಅಧಿಕಾರದ ಕುರ್ಚಿ ಮೇಲೆ ಕುಳಿತಿದ್ರು ಎಂದು ಕಿಡಿಕಾರಿದ್ದಾರೆ. ಈಗ ಇಡೀ ರಾಜ್ಯ ಮತ್ತು ದೇಶದ ಜನಕ್ಕೆ ಕಾಂಗ್ರೆಸ್ಸೇ ಒಂದು ಅಶ್ಲೀಲ ಅಂತ ಗೊತ್ತಾಗಿದೆ. ಹಾಗಾಗಿ ಜನ ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಾಗಲೇ ಹಿಂದೂಗಳಿಗೆ ಅವಮಾನ ಮಾಡಿದ್ದಕ್ಕೆ ಬೆಲೆ ತೆತ್ತಿದ್ದಾರೆ. ಮುಂದೆಯೂ ಬೆಲೆ ತೆರುತ್ತಾರೆ. ಇನ್ನೂ 5 ತಿಂಗಳಲ್ಲಿ ಚುನಾವಣೆ ಇದೆ. ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಧಾರವಾಡ, ನವೆಂಬರ್ 9 : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅವಕಾಶ ಪಾಲಿಕೆ ಅನುಮತಿ ಕೊಟ್ಟಿರುವುದರ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಇಲಾಖೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುತಾಲಿಕ್, ಬಿಜೆಪಿ ಆಡಳಿತದಲ್ಲಿ ಇರುವ ಪಾಲಿಕೆ ಟಿಪ್ಪು ಜಯಂತಿಗೆ ಅನುಮತಿ ದ್ರೋಹ ಮಾಡಿದೆ ಎಂದು ಕಿಡಿಕಾರಿದ್ದಾರೆ. ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟು ಹಿಂದೂಗಳಿಗೆ ದ್ರೋಹ ಮಾಡಿದ್ದೀರಿ, ಇದನ್ನ ರದ್ದು ಮಾಡಿ ವಾಪಸ್ ಪಡೆಯಬೆಕು ಎಂದು ಅವರು ತಿಳಿಸಿದರು. ಗುರುವಾರ ಇದನ್ನು ವಿರೋಧಿಸಿ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪಾಲಿಕೆಗೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಪಾಲಿಕೆಯಿಂದ ಷರತ್ತುಬದ್ಧ ಅನುಮತಿ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದಕ್ಕಾಗಿ ಎಐಎಂಐಎಂ ಹಾಗೂ ಕೆಲವು ದಲಿತ ಸಂಘಟನೆಗಳಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ಕೇಳಿದ್ದವು. ಇದರ ಬಗ್ಗೆ ಸುದೀರ್ಘ ಸಭೆ ನಡೆಸಿದ ಪಾಲಿಕೆ, ಈದ್ಗಾ ಮೈದಾನದಲ್ಲಿ…