Author: admin

ಕೊರಟಗೆರೆ: ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಪೊಲೀಸರ ದೌರ್ಜನ್ಯವನ್ನ ಖಂಡಿಸಿ ಕೊರಟಗೆರೆ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತ್ತು ಎಂದು ವಕೀಲರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ತಿಳಿಸಿದರು. ಪಟ್ಟಣದ ಜೆಎಂಎಫ್‍ ಸಿ ನ್ಯಾಯಾಲಯಾದ ಅವರಣದ ಮುಂಭಾಗದಲ್ಲಿ ತಾಲ್ಲೂಕು ವಕೀಲರ ಸಂಘದ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಡಿ.3ರಂದು ಮಂಗಳೂರಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಯುವ ವಕೀಲ ಕುಲದೀಪ್ ಶಟ್ಟಿ ಅವರ ಮೇಲೆ ಅಮಾನುಷವಾಗಿ ವರ್ತನೆ ಮಾಡಿ, ವಕೀಲರ ವೃತ್ತಿ ಭಾಂದವರಿಗೆ ಅವಮಾನ ಮಾಡಿದ್ದಾರೆ. ಅವರ ತಾಯಿ ಕಾಡಿಬೇಡಿ ಕೈಮುಗಿದುಕೊಂಡರೂ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ವಕೀಲ ಎಂದರೂ ಸಹ ನೀನು ನ್ಯಾಯಲಯದಲ್ಲಿ ವಾದ ಮಾಡು ಎಂದು ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಈ ಕೂಡಲೇ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಹಿರಿಯ ವಕೀಲ ಟಿ.ಕೃಷ್ಣಮೂರ್ತಿ ಮಾತನಾಡಿ, ಮಂಗಳೂರಿನಲ್ಲಿ ಯುವ ವಕೀಲ ಕುಲದೀಪ್ ಶಟ್ಟಿ ಅವರನ್ನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಏಕಾಏಕಿ ಅವರ ಮನೆಗೆ ನುಗ್ಗಿ…

Read More

ಮಂಡ್ಯದಲ್ಲಿ ಅಯ್ಯಪ್ಪ ಭಕ್ತರೊಬ್ಬರು ವಿಶೇಷವಾಗಿ ಶಬರಿಮಲೆ ಯಾತ್ರೆ ಕೈಗೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನ ಮಧುಗಿರಿಯವರೆಗೆ ಪಾದಯಾತ್ರೆ ಮಾಡುತ್ತ ಬಂದಿದ್ದಾರೆ. ಈ ಬಾರಿ ನಟ ದಿ. ಪುನೀತ್ ರಾಜ್​ಕುಮಾರ್ ಚಿತ್ರವುಳ್ಳ ಬಾವುಟ ಹಿಡಿದು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಗಂಗಾಧರ್ ಬೆಳೆ ನಷ್ಟದಿಂದ ಕಂಗಾಲಾಗಿ ಅಯ್ಯಪ್ಪನಿಗೆ ಹರಕೆಯನ್ನ ಹೊತ್ತುಕೊಂಡಿದ್ದರು. ಶಬರಿಮಲೆಗೆ ಪಾದಯಾತ್ರೆ ಮಾಡಿದ ಬಳಿಕ ಎಲ್ಲವೂ ಶುಭವೇ ಆಗಿತ್ತು. ಕಳೆದ ಬಾರಿ ಶಬರಿಮಲೆಗೆ ಹೋಗುವಾಗ ಪುನೀತ್ ರಾಜ್ ಕುಮಾರ್ ಮೃತಪಟ್ಟಿದ್ದರು. ಅಯ್ಯಪ್ಪನ ದರ್ಶನದ ಬಳಿಕ ನೇರವಾಗಿ ಅಪ್ಪು ಸಮಾಧಿಗೆ ಗಂಗಾಧರ್ ಭೇಟಿ ಕೊಟ್ಟಿದ್ದರು. ಈ ಹಿನ್ನಲೆ ಪ್ರತಿ ವರ್ಷ ಹರಕೆ ತೀರಿಸುವ ಸಲುವಾಗಿ ಹಾಗೂ ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗಲೆಂದು ಪಾದಯಾತ್ರೆ ಮಾಡುತ್ತಿದ್ದಾರೆ. ಮಧುಗಿರಿಯಿಂದ ಶಬರಿಮಲೆಗೆ ಕಾಲ್ನಡಿಗೆಯ ಮೂಲಕವೇ ಪಾದ ಯಾತ್ರೆ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

18ರಿಂದ 25 ವರ್ಷದವರಿಗೆ ಉಚಿತವಾಗಿ ಕಾಂಡೋಮ್‌ ಒದಗಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ. ಫಾರ್ಮಸಿಗಳು 18ರಿಂದ 25 ವರ್ಷ ವಯಸ್ಸಿನವರಿಗೆ ಫ್ರೀಯಾಗಿ ಕಾಂಡೋಮ್ ನೀಡುತ್ತವೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಘೋಷಿಸಿದ್ದಾರೆ. ಔಷಧಾಲಯಗಳಲ್ಲಿ ಜನವರಿ 1ರಿಂದ 18ರಿಂದ 25 ವರ್ಷದವರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮ್ಯಾಕ್ರನ್ ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದಾರೆ. ಲೈಂಗಿಕವಾಗಿ ಹರಡುವ ರೋಗಗಳ (ಎಸ್‌ಟಿಡಿ) ಹರಡುವಿಕೆ ಕಡಿಮೆ ಮಾಡುವ ಪ್ರಯತ್ನದಲ್ಲಿ ಫ್ರಾನ್ಸ್‌ನ ಯುವಜನರು ಕಾಂಡೋಮ್‌ಗಳನ್ನು ಉಚಿತವಾಗಿ ಪಡೆಯಬಹುದು. ಫ್ರೆಂಚ್ ಆರೋಗ್ಯ ಅಧಿಕಾರಿಗಳ ಪ್ರಕಾರ, ದೇಶದಲ್ಲಿ 2020 ಮತ್ತು 2021ರಲ್ಲಿ ಅನಗತ್ಯ ಗರ್ಭಧಾರಣೆ ದರವು ಶೇಕಡಾ 30ರಷ್ಟು ಏರಿಕೆಯಾಗಿದೆ. ಹೀಗಾಗಿ ಫ್ರೆಂಚ್ ಸರ್ಕಾರವು 25 ವರ್ಷದೊಳಗಿನ ಎಲ್ಲಾ ಮಹಿಳೆಯರಿಗೆ ಉಚಿತ ಜನನ ನಿಯಂತ್ರಣವನ್ನು ನೀಡಲು ಪ್ರಾರಂಭಿಸಿತು. ಆರ್ಥಿಕ ತೊಂದರೆಗಳಿಂದಾಗಿ ಯುವತಿಯರು ಗರ್ಭನಿರೋಧಕವನ್ನು ತ್ಯಜಿಸುವುದನ್ನು ತಡೆಯಲು 18 ವರ್ಷದೊಳಗಿನವರಿಗೆ ಉದ್ದೇಶಿಸಿರುವ ಕಾರ್ಯಕ್ರಮವನ್ನು ವಿಸ್ತರಿಸಿದೆ. ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಮತ್ತು ಕೋವಿಡ್ ಲಸಿಕೆಯ ಬೂಸ್ಟರ್…

Read More

ಮಂಡ್ಯದಲ್ಲಿ ಅಯ್ಯಪ್ಪ ಭಕ್ತರೊಬ್ಬರು ವಿಶೇಷವಾಗಿ ಶಬರಿಮಲೆ ಯಾತ್ರೆ ಕೈಗೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನ ಮಧುಗಿರಿಯವರೆಗೆ ಪಾದಯಾತ್ರೆ ಮಾಡುತ್ತ ಬಂದಿದ್ದಾರೆ. ಈ ಬಾರಿ ನಟ ದಿ. ಪುನೀತ್ ರಾಜ್​ಕುಮಾರ್ ಚಿತ್ರವುಳ್ಳ ಬಾವುಟ ಹಿಡಿದು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಗಂಗಾಧರ್ ಬೆಳೆ ನಷ್ಟದಿಂದ ಕಂಗಾಲಾಗಿ ಅಯ್ಯಪ್ಪನಿಗೆ ಹರಕೆಯನ್ನ ಹೊತ್ತುಕೊಂಡಿದ್ದರು. ಶಬರಿಮಲೆಗೆ ಪಾದಯಾತ್ರೆ ಮಾಡಿದ ಬಳಿಕ ಎಲ್ಲವೂ ಶುಭವೇ ಆಗಿತ್ತು. ಕಳೆದ ಬಾರಿ ಶಬರಿಮಲೆಗೆ ಹೋಗುವಾಗ ಪುನೀತ್ ರಾಜ್ ಕುಮಾರ್ ಮೃತಪಟ್ಟಿದ್ದರು. ಅಯ್ಯಪ್ಪನ ದರ್ಶನದ ಬಳಿಕ ನೇರವಾಗಿ ಅಪ್ಪು ಸಮಾಧಿಗೆ ಗಂಗಾಧರ್ ಭೇಟಿ ಕೊಟ್ಟಿದ್ದರು. ಈ ಹಿನ್ನಲೆ ಪ್ರತಿ ವರ್ಷ ಹರಕೆ ತೀರಿಸುವ ಸಲುವಾಗಿ ಹಾಗೂ ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗಲೆಂದು ಪಾದಯಾತ್ರೆ ಮಾಡುತ್ತಿದ್ದಾರೆ. ಮಧುಗಿರಿಯಿಂದ ಶಬರಿಮಲೆಗೆ ಕಾಲ್ನಡಿಗೆಯ ಮೂಲಕವೇ ಪಾದ ಯಾತ್ರೆ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪ್ರೀಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೆಂಚು ಕಾಯಿಸಿದ್ದರಿಂದ ಪೋರ್ಚುಗಲ್ ತಂಡದ ಕೋಚ್ ವಿರುದ್ಧ ಅಸಮಾಧಾನ ಹೊರಹಾಕಿರುವ ವಿಶ್ವದ ಅಗ್ರಮಾನ್ಯ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಟೂರ್ನಿಯಿಂದ ಹೊರಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಸ್ವಿಜರ್ ಲೆಂಡ್ ವಿರುದ್ಧದ ಪಂದ್ಯದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಕಣಕ್ಕಿಳಿಸದೇ ಬೆಂಚಿನಲ್ಲಿ ಕೂರಿಸಿದ್ದರು. ಇದೀಗ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಅಲ್ಪ ಸಮಯ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಕೋಚ್ ನಡೆಯಿಂದ ಬೇಸರಗೊಂಡಿರುವ ಕ್ರಿಸ್ಟಿಯಾನೊ ರೊನಾಲ್ಡೊ ಆಡಲು ಅವಕಾಶ ನೀಡದೇ ಇದ್ದರೆ ವಿಶ್ವಕಪ್ ನಿಂದ ಹೊರನಡೆಯುವುದಾಗಿ 37 ವರ್ಷದ ಕ್ರಿಸ್ಟಿಯಾನೊ ರೊನಾಲ್ಡೊ ಎಚ್ಚರಿಕೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಪೋರ್ಚುಗಲ್ ಫುಟ್ಬಾಲ್ ಸಂಸ್ಥೆ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಬೆದರಿಕೆ ಹಾಕಿಲ್ಲ. ವಿಶ್ವಕಪ್ ನಲ್ಲಿ ತಂಡದ ಜೊತೆ ಅವರು ಇರಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಗಾಲಿ ಜನಾರ್ದನ ರೆಡ್ಡಿ ಬೇರೆ ಪಕ್ಷ ಕಟ್ಟುವುದಿಲ್ಲ, ಒಂದು ವೇಳೆ ಪಕ್ಷ ಕಟ್ಟಿದರೆ ಸ್ನೇಹ ಬೇರೆ ಪಕ್ಷ ಬೇರೆ. ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಸ್ನೇಹ ಮತ್ತು ಪಕ್ಷ ಎರಡನ್ನೂ ಒಟ್ಟಾಗಿಯೇ ಇರುವಂತೆ ಮಾಡುತ್ತೇನೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ‌್ದಾರೆ. ಜನಾರ್ದನ ರೆಡ್ಡಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲೊಬ್ಬರು. ಅವರು ಈ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಕಟ್ಟುವ ಪ್ರಶ್ನೆಯೇ ಇಲ್ಲ. ಪಕ್ಷದೊಳಗೇ ಇರುತ್ತಾರೆ ಎಂದೂ ಪತ್ರಕರ್ತರ ಪ್ರಶ್ನೆಗೆ ರಾಮುಲು ಉತ್ತರಿಸಿದ್ದಾರೆ. ಸಾರಿಗೆ ಇಲಾಖೆಯ ನಿಗಮಗಳ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸಲು 2 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆಯನ್ನು ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ. 30 ಸಾವಿರ ಬಸ್‌ಗಳನ್ನು ಬದಲಾಗಿ ಹೊಸ ಬಸ್ ಖರೀದಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಗಂಗಾವತಿ ನಗರದಲ್ಲಿ ಇತ್ತೀಚೆಗಷ್ಟೇ ಮನೆ ಖರೀದಿ ಮಾಡಿರುವ ಜನಾರ್ದನ ರೆಡ್ಡಿ, ನಗರಸಭೆ ಬಿಜೆಪಿ ಸದಸ್ಯ ರಮೇಶ ಚೌಡ್ಕಿ ಹಾಗೂ ಹಲವು ಮುಖಂಡರ…

Read More

ವರನ ಮನೆಯಿಂದ ಮದುವೆ ದಿಬ್ಬಣ ಹೊರಡುವ ಕೆಲವೇ ಕ್ಷಣಗಳ ಮುನ್ನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ರಾಜಸ್ಥಾನ್ ನಲ್ಲಿ ಶುಕ್ರವಾರ ಸಂಭವಿಸಿದೆ. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತಿಥಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾಗ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿತು. ಇದರಿಂದ ಕನಿಷ್ಠ 50 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಜೋಧ್ ಪುರದಿಂದ 60 ಕಿ.ಮೀ. ದೂರದ ಭುಂಗ್ರಾ ಗ್ರಾಮದಲ್ಲಿ ಗ್ಯಾಸ್ ಸೋರಿಕೆಯಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರಲ್ಲಿ ಕೆಲವರಿಗೆ ಶೇ.80ರಿಂದ 100ರಷ್ಟು ಸುಟ್ಟ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಕುಸಿದಿದೆ. ಘಟನೆಯಲ್ಲಿ 12 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕನ್ನಡಕ್ಕೆ ಆತಂಕವಿದೆ. ಕನ್ನಡ ಮೂಲೆಗುಂಪಾಗುತ್ತದೆ ಎನ್ನುವ ಆತಂಕ ಸುಳ್ಳು’ ಎಂದು ಖ್ಯಾತ ಚಲನಚಿತ್ರ ನಿರ್ದೇಶಕರಾದ ಯೋಗರಾಜ ಭಟ್ ಅಭಿಪ್ರಾಯಪಟ್ಟರು. ಬಹುರೂಪಿ’ ಪ್ರಕಾಶನ ಹಾಗೂ ‘ಬ್ಲಾಸಮ್ ಬುಕ್ ಹೌಸ್’ ಜಂಟಿಯಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಖ್ಯಾತ ಕಿರುತೆರೆ ನಟಿ ರಂಜನಿ ರಾಘವನ್ ಅವರ ‘ಸ್ವೈಪ್ ರೈಟ್’ ಕಾದಂಬರಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಕನ್ನಡ ಭಾಷೆ ಹುಟ್ಟಿದಾಗಿನಿಂದಲೂ ಭಾಷೆ ಮೂಲೆಗುಂಪಾಗುತ್ತಿದೆ ಎನ್ನುವ ಮಾತೂ ಕೇಳಿಬರುತ್ತಿದೆ. ಬೆಂಗಳೂರು ದಾಟಿದರೆ ಕನ್ನಡ ನೆಮ್ಮದಿಯಾಗಿಯೇ ಇದೆ. ಬೆಂಗಳೂರಿನಲ್ಲಿ ಮಾತ್ರ ನಾವು ಅನಗತ್ಯ ಗೊಂದಲಕ್ಕೆ ಒಳಗಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು. ಇತ್ತೀಚೆಗೆ ಮಹಾಪ್ರಾಣ ಕಿತ್ತುಹಾಕಬೇಕು ಎನ್ನುವ ಮಾತು ಕೇಳಿಬರುತ್ತಿದೆ. ಮಹಾಪ್ರಾಣ ಇರಬೇಕೇ, ಇಲ್ಲದಿರಬೇಕೇ ಎನ್ನುವುದಕ್ಕಿಂತ ಕನ್ನಡ ಮಾತನಾಡುತ್ತ ಇರಬೇಕು ಎನ್ನುವುದೇ ಮುಖ್ಯವಾಗಬೇಕು ಎಂದು ಯೋಗರಾಜ ಭಟ್ ಅವರು ಕಿವಿಮಾತು ಹೇಳಿದರು. ರಂಜನಿ ರಾಘವನ್ ಅವರ ಬರಹ ಸ್ತ್ರೀ ಸಮುದಾಯಕ್ಕೆ ಸಹಜವಾಗಿ ಇರುವ ಕಥನ ಕಲೆಯ ಹಿರಿಮೆಯನ್ನು ತೋರಿಸುತ್ತದೆ. ಕಥನ ಕಲೆ ರಂಜನಿ ಅವರಿಗೆ ಸಿದ್ಧಿಸಿದೆ ಎಂದರು. ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ,…

Read More

ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಬಿಜೆಪಿ 157 ಸ್ಥಾನದಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಭೂತ ಪೂರ್ವ ಜಯ ಸಾಧಿಸಿದೆ. ಈ ಕುರಿತು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಭೂತಪೂರ್ವ ಚುನಾವಣಾ ಫಲಿತಾಂಶ ದಿಂದ ಸಂತಸದಿಂದಿದ್ದೇನೆ. ಅಭಿವೃದ್ದಿ ರಾಜಕಾರಣಕ್ಕೆ ಗುಜರಾತಿಗಳಿಂದ ಆಶೀರ್ವಾದ ಸಿಕ್ಕಿದೆ. ಗುಜರಾತ್ ನಲ್ಲಿ ಮತ್ತಷ್ಟು ಅಭಿವೃದ್ದಿ ವೇಗ ನೀಡಬೇಕೆಂಬ ಬಯಕೆ ಇದೆ. ಗುಜರಾತ್ ಜನಶಕ್ತಿಗೆ ನಾನು ತಲೆ ಬಾಗುತ್ತೇನೆ ಎಂದಿದ್ದಾರೆ. ಪ್ರಚಂಡ ಜಯಕ್ಕೆ ಕಾರಣಕರ್ತರಾದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ. ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಗೆಲುವು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತೆರಿಗೆ ಕಟ್ಟದೆ ವಂಚನೆ ಮಾಡುತ್ತಿರುವ ಆರೋಪದ ಮೇಲೆ ಬೆಂಗಳೂರು ಸೇರಿ ಹಲವೆಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟದೆ ವಂಚನೆ ಮಾಡಿದ ಆರೋಪದ ಮೇಲೆ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದೆ. ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ ರಾಮನಗರ, ಬಿಡದಿಯಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More