Subscribe to Updates
Get the latest creative news from FooBar about art, design and business.
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
Author: admin
ಕರ್ನಾಟಕದಲ್ಲಿರುವ 943 ಸರ್ಕಾರಿ, 10 ಅನುದಾನಿತ ಹಾಗೂ 48 ಖಾಸಗಿ ಶಾಲೆಗಳು ಸೇರಿದಂತೆ ಸುಮಾರು ೧,೦೦೧ ಶಾಲೆಗಳಲ್ಲಿ ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳಿಲ್ಲ. ಒಟ್ಟು ೭೫,೯೧೯ ಬಾಲಕಿಯರ ಶಾಲೆಗಳ ಪೈಕಿ ೧,೫೭೦ ಶಾಲೆಗಳಲ್ಲಿ ಬಳಕೆಯ ಸ್ಥಿತಿಯಲ್ಲಿ ಇಲ್ಲದಿರುವಂತಹ ಶೌಚಾಲಯಗಳಿದ್ದರೆ; ೩೨೮ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ ಎಂಬ ಮಾಹಿತಿ ಬಹಿರಂಗಗೊಂಡಿದೆ. ಮೇಲ್ಕಂಡ ದತ್ತಾಂಶವನ್ನು ಇತ್ತೀಚಿನ ಎಜುಕೇಷನ್ ಪ್ಲಸ್ ಗಾಗಿ ಯೂನಿಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಸಿಸ್ಟಂ (ಯುಡಿಐಎಸ್ಎ+) 2021-22ರ ಒಂದು ವರದಿ ಬಹಿರಂಗಪಡಿಸಿದ್ದು, ಈ ಮೂಲಕ ಕರ್ನಾಟಕದ ಶಾಲೆಗಳಲ್ಲಿರುವ ಕಳಪೆ ಮೂಲಸೌಕರ್ಯ ಹಾಗೂ ಕೊರತೆಯ ಮೇಲೆ ಬೆಳಕು ಚೆಲ್ಲಿದೆ. ವರದಿಯ ಪ್ರಕಾರ ೭೧೪ ಶಾಲೆಗಳಲ್ಲಿ ವಿದ್ಯುತ್ ಇಲ್ಲ ಹಾಗೂ ೨೨೦ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯಗಳಿಲ್ಲ. ೮,೧೫೩ ಶಾಲೆಗಳಲ್ಲಿ ಕೈ ತೊಳೆಯುವ ಸೌಕರ್ಯಗಳಿಲ್ಲವಂತೆ. ಅಂದಾಜು ೨೨,೬೧೬ ಶಾಲೆಗಳಲ್ಲಿ ವಿಶೇಷ ಅಗತ್ಯಗಳಿರುವಂತಹ ಮಕ್ಕಳಿಗಾಗಿ ರ್ಯಾಂಪ್ ಗಳಿಲ್ಲ. ಹಾಗಾಗಿ, ಅನೇಕ ಶೈಕ್ಷಣಿಕ ಸಂಸ್ಥೆಗಳು ಇನ್ನೂ ಸೇರ್ಪಡೆಗೊಳ್ಳುವುದರಿಂದ ಬಹಳ ದೂರವೇ ಉಳಿದಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ. ಸುಮಾರು ೧೨,೪೪೨ ಶಾಲೆಗಳು ಕಳೆದ…
ಹಿಂದೂ ಬಗ್ಗೆ ನನ್ನ ಹೇಳಿಕೆ ತಪ್ಪೆಂದು ಸಾಬೀತು ಪಡಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ, ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ. ಹಿಂದೂ ಧರ್ಮಕ್ಕೆ ಎಲ್ಲಿ ಅವಮಾನ ಮಾಡಿದ್ದೇನೆ..? ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಅಶ್ಲೀಲ ಅಂತಾ ನಾನು ಬರದಿದ್ದಾ..? ಅದು ಪರ್ಷಿಯನ್ ಪದ. ಇದಕ್ಕೆ ವಿಕಿಪಿಡಿಯಾದಲ್ಲಿ ದಾಖಲೆ ಇದೆ. ಡಿಕ್ಷನರಿಯಲ್ಲಿ ಹಿಂದೂ ಅರ್ಥ ಅಶ್ಲೀಲ ಅಂತಿದೆ ಎಂದು ಪುನರುಚ್ಚರಿಸಿದರು. ನಾನು ಪಕ್ಷದ ವೇದಿಕೆಯಲ್ಲಿ ಮಾತನಾಡಿಲ್ಲ. ಪಕ್ಷಕ್ಕೂ ನನ್ನ ಹೇಳಿಕೆಗೂ ಸಂಬಂಧವಿಲ್ಲ. ಪಕ್ಷದ ನಿಲುವು ಬೇರೆ ಇದೆ. ರಾಜ್ಯಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರ ಖಂಡನೆಗೆ ಆಕ್ಷೇಪಿಸಲ್ಲ. ಮನುವಾದಿಗಳು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಬೆಳಗಾವಿ : 2022-23 ನೇ ಸಾಲಿಗೆ ಇಲಾಖೆಯಿಂದ ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ಪೂರ್ವ (ಪ್ರೀಮ್ಯಾಟ್ರಿಕ್) ವಿದ್ಯಾರ್ಥಿ ವೇತನಕ್ಕಾಗಿ ಎಸ್.ಎಸ್.ಪಿ. ತಂತ್ರಾಂಶದಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಶಾಲೆ/ ಶಿಕ್ಷಣ ಸಂಸ್ಥೆಗಳ ಮುಖಾಂತರ ಸದರಿ ಯೋಜನೆಯ Website: https:/ssp.karnataka.gov.inರಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಕಾರಣ ಬೆಳಗಾವಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನರು ಈ ಸೌಲಭ್ಯವನ್ನು ಪಡೆದು ಉನ್ನತ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ, ಭಾರತ್ ಜೋಡೋ ಯಾತ್ರಾ ಟ್ವಿಟರ್ ಹ್ಯಾಂಡಲ್ ಗಳನ್ನು ನಿರ್ಬಂಧಿಸಿ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದೆ. ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದ್ದು, ಸಂಸ್ಥೆಯು ದೂರು ದಾಖಲಿಸಿತ್ತು. ಕೆಜಿಎಫ್ ಸಿನಿಮಾದ ಸುಲ್ತಾನಾ..ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬೆಳಗಾವಿ: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಒತ್ತಡ ಹೆಚ್ಚಿದೆ ಇದೆ. ಸಾವಿರಾರು ಜನ ಹೆಣ್ಣು ಮಕ್ಕಳ ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವರುಣಾದಿಂದ ನಿಂತುಕೊಳ್ಳಬೇಕು ಅಂತಾ ನಮ್ಮ ಹುಡುಗ ಹೇಳ್ತಿದ್ದಾನೆ. ಚಾಮರಾಜಪೇಟೆಯಿಂದ ನಿಂತುಕೊಳ್ಳಬೇಕು ಅಂತಾ ಜಮೀರ್ ಹೇಳುತ್ತಿದ್ದಾನೆ ಎಂದು ಹೇಳಿದ್ದಾರೆ. ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಹೆಣ್ಣು ಮಕ್ಕಳು ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ. ನಾನು ಏಕೆ ಯೋಚನೆ ಮಾಡ್ತಿರುವುದು ಅಂದ್ರೆ ವಾರಕ್ಕೊಮ್ಮೆ ಹೋಗಿ ಅಲ್ಲಿ ಇರೋದಕ್ಕೆ ಆಗೋದಿಲ್ಲ. ಕಾರ್ಯಕರ್ತರಿಗೆ ಜನರಿಗೆ ಸಿಗೋದಕ್ಕಾಗಲ್ಲ, ಅವರ ಕಷ್ಟ ಸುಖಗಳಿಗೆ ಸ್ಪಂದಿಸೋದಕ್ಕೆ ಆಗೋದಿಲ್ಲ. ನೀವು ಬಂದು ನಿಂತುಕೊಳ್ಳಿ ಅಂತಾ ಅವರು ಹೇಳಬಹುದು. ಆದರೆ ನನಗೆ ಮನಸು ಒಪ್ಪುತ್ತಿಲ್ಲ. ಎರಡು ತಿಂಗಳಿನಿಂದ ಬಾದಾಮಿಗೇ ಹೋಗಿಲ್ಲ. ನಾಳೆ ಹೋಗಬೇಕೆಂದುಕೊಂಡಿದ್ದೆ, ಅದೂ ಕ್ಯಾನ್ಸಲ್ ಆಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾವಣೆ ಮಾಡಲಾಗಿದ್ದು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ. ಮಂಡಳಿ ನಿರ್ದೇಶಕರು ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾವಣೆ ಮಾಡಲಾಗಿದೆ, ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೋಹಳ್ಳಿ: ಮಹಾರಾಷ್ಟ್ರದ ಜತ್ತ ತಾಲೂಕಿನ ಗೊಗವಾಡ ಗ್ರಾಮದಲ್ಲಿ ನ.12ರಂದು ನಡೆಯುವ ಧಮ್ಮಭೂಮಿ ಲೋಕಾರ್ಪಣೆ ಸಮಾರಂಭಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬನ್ನಿ ಎಂದು DSS ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಆಲಗೂರ ಕರೆ ನೀಡಿದರು. ಗ್ರಾಮದಲ್ಲಿ ಜತ್ತತಾಲೂಕಿನ ಗುಗವಾಡ ಗ್ರಾಮದಲ್ಲಿ ಧಮ್ಮಭೂಮಿ ಲೋಕಾರ್ಪಣೆ ಸಮಾರಂಭದ ಪ್ರಚಾರ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, ಬೋಧಿಸತ್ವ ಪರಮಪೂಜ್ಯ ಡಾ.ಬಾಬಸಾಹೇಬ ಅಂಬೇಡ್ಕರ್ ಅವರು ನೀಡಿದ ಧಮ್ಮದ ಪ್ರಚಾರ ಮಾಡಲು ಮತ್ತು ಆದರ್ಶ ಸಮಾಜ ನಿರ್ಮಾಣಕ್ಕಾಗಿ ಸಾಂಸ್ಕೃತಿಕ ಕೇಂದ್ರ ನಿರ್ಮಿಸಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕಲ್ಪನೆಯಂತೆ ಮಾನವ ಅಭಿವೃದ್ಧಿ ಕೇಂದ್ರವನ್ನು ರಚಿಸಲು ಸಿ.ಆರ್. ಸಾಂಗಲೀಕರ ಇವರು ಪ್ರಯತ್ನಿಸಿದ್ದಾರೆ. ನಾಗಪೂರದ ದೀಕ್ಷಾಭೂಮಿ, ಮುಂಬೈನ ಚೈತ್ಯಭೂಮಿ, ಮಾಣಗಾವನ ಸನ್ಮಾನಭೂಮಿ ರೀತಿ ಗೂಗವಾಡದ ಧಮ್ಮಭೂಮಿಯಾಗಿದ್ದು, ಲೋಕಾರ್ಪಣೆಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗೋಣ ಎಂದರು. ದಲಿತ ಮುಖಂಡರಾದ ರಘುನಾಥ್ ನಾಟಿಕಾರ, ಪ್ರಕಾಶ ಕನ್ನಾಳ, ಲಖನ್ ಗುರಪ್ಪಗೊಳ, ಹಣಮಂತ ಭಜಂತ್ರಿ, ತುಖಾರಾಮ ಭಜಂತ್ರಿ, ಪ್ರಭು ದೊಡ್ಡಮನಿ, ವಿನೋದ ಗುರಪ್ಪಗೊಳ, ವೈಭವ ಕನ್ನಾಳ, ರಾಜು ಭಜಂತ್ರಿ, ರಾಜು ನಾಕಮಾನ, ರಾಜು…
ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂತೋಷ್ (28) ಎಂಬಾತ ಈ ಕೃತ್ಯ ಎಸಗಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಬಂದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ, ವೃದ್ದೆಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿಕ್ಕೋಡಿ : ಹಿಂದೂ ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ ಎಂಬ ಪದ ಪರ್ಷಿಯನ್ ಪದವಾಗಿದ್ದು, ಭಾರತೀಯ ಪದವೇ ಅಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ಭಾರತಕ್ಕೂ, ಪರ್ಷಿಯನ್ ಗೂ ಏನೂ ಸಂಬಂಧವಿಲ್ಲದಿದ್ದರೂ, ಹಿಂದೂ ಪದ ನಮ್ಮದು ಹೇಗಾಯಿತು ಎಂಬುವುದರ ಬಗ್ಗೆ ಚರ್ಚೆ ನಡೆಯಬೇಕಿದೆ. ಹಿಂದೂ ಪದದ ಅರ್ಥ ಅಶ್ಲೀಲವಾಗಿದ್ದು, ನಿಜಾರ್ಥ ತಿಳಿದರೆ ನಾಚಿಕೆ ಆಗುತ್ತದೆ ಎಂದು ವಿವಾದಾತ್ಮಕವಾಗಿ ಮಾತನಾಡಿದ್ದಾರೆ. ಎಲ್ಲಿಂದಲೋ ಬಂದಿರುವ ಹಿಂದೂ ಧರ್ಮವನ್ನು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದ ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಹಿಂದೂ ಪದ ಪರ್ಶಿಯನ್ ಮೂಲದಿಂದ ಬಂದಿದೆ ಎಂದು ಹೇಳುತ್ತಿದ್ದಂತೆ ಹಲವರು ವಿರೋಧಿಸಿದ್ದಾರೆ. ಜಾರಕಿಹೊಳಿ ಆಡಿರುವ ಮಾತುಗಳು ಇದೀಗ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಪಾವಗಡ: ತಾಲ್ಲೂಕಿನ ನ್ಯಾಯದಗುಂಟೆ ಗ್ರಾಮ ಪಂಚಾಯಿತಿಗೆ ಒಳಪಡುವ, ನ್ಯಾಯದಗುಂಟೆ ಗ್ರಾಮ ಮತ್ತು ಚಿಕ್ಕತಿಮ್ಮನಹಟ್ಟಿ ಗ್ರಾಮದಲ್ಲಿ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪನವರ ನೇತೃತ್ವದಲ್ಲಿ ಹಲವಾರು ಮುಖಂಡರುಗಳು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾದರು. ಈ ಕಾರ್ಯಕ್ರಮದಲ್ಲಿ ನ್ಯಾಯದಗುಂಟೆ ಗ್ರಾಮ ಪ್ರವೀಣ್, ರೇವಣ್ಣ (ಪಿಲ್ಲಿಕುಂಟೆ), ರಂಗನಾಥ, ಕದಿರೇಹಳ್ಳಿ ಗ್ರಾಮದ ಶಿವಮೂರ್ತಿ, ರಾಜಪ್ಪ, ರಾಘವೇಂದ್ರ, ಆನಂದ ಚಿಕ್ಕತಿಮ್ಮನಹಟ್ಟಿ ಗ್ರಾಮದ ತಿಮ್ಮಯ್ಯ.ಸಿ., ತಿಮ್ಮಣ್ಣ, ಉತ್ತರಾಜಿ, ಈರಣ್ಣ(ಆಟೋ), ಹನುಮಂತರಾಯಪ್ಪ (ಸ್ವಾಮೀಜಿ), ಈರಣ್ಣ, ಓಬಯ್ಯ, ಶಿವಕುಮಾರ, ಚಂದ್ರಶೇಖರ್ ಬಸಣ್ಣ, ಹನುಮಂತರಾಯ (ಗ್ರಾಮ ಪಂಚಾಯ್ತಿ ಸದಸ್ಯರು) ಮತ್ತು ಚಿತ್ತಪ್ಪನವರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಉಪಾಧ್ಯಕ್ಷರಾದ ತಿಮ್ಮಾರೆಡ್ಡಿ, ತಾಲ್ಲೂಕು ಕಾರ್ಯಧ್ಯಕ್ಷರಾದ ಎನ್.ಎ.ಈರಣ್ಣರವರು, ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz