Subscribe to Updates
Get the latest creative news from FooBar about art, design and business.
- ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
- ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
- ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
- ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
- ತುಮಕೂರು: ಮತ್ತೆ ಮೂರು ನವಿಲುಗಳು ಸಾವು
- ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
- ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
- ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
Author: admin
ಗಡಿವಿವಾದ ತಾರಕಕ್ಕೇರಿದ ಹಿನ್ನೆಲೆ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ-ಮಹಾರಾಷ್ಟ್ರ ನಡುವಿನ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇದೀಗ ಮತ್ತೆ ಆರಂಭವಾಗಿದೆ. ಬೆಳಗಾವಿ-ಮಹಾರಾಷ್ಟ್ರ ನಡುವೆ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಿದೆ. ಬೆಳಗಾವಿಯಿಂದ 400ಕ್ಕೂ ಹೆಚ್ಚು ಬಸ್ ಸಂಚರಿಸುತ್ತಿದ್ದು, ಮಹಾರಾಷ್ಟ್ರದಿಂದಲೂ ಬೆಳಗಾವಿಗೆ ಬಸ್ ಆಗಮಿಸುತ್ತಿವೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿವಿವಾದದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಹಾರಾಷ್ಟ್ರದ ಕೆಲ ಕಿಡಿಗೇಡಿ ಪುಂಡರು ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ಮಸಿ ಬಳಿದು ಉದ್ಧಟತನ ತೋರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಕಾಲೇಜು ಆಡಳಿತ ಮಂಡಳಿ ಡ್ಯಾನ್ಸ್ ಮಾಡಿದ ನಾಲ್ವರನ್ನ ಅಮಾನತು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದ ಚರಂಡಿಯಲ್ಲಿ ಪತ್ತೆಯಾದ ಸೂಟ್ಕೇಸ್ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಮೃತದೇಹ ಸಿಕ್ಕಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾಗಿ ಸೂಟ್ಕೇಸ್ವೊಂದು ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಆ ಸೂಟ್ಕೇಸ್ನಿಂದ ದುರ್ವಾಸನೆ ಬರುತ್ತಿರುವುದಾಗಿ ಕರೆ ಮಾಡಿದವರು ತಿಳಿಸಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್ಗಳ ಸಹಾಯದಿಂದ ಚರಂಡಿಯಿಂದ ಸೂಟ್ಕೇಸ್ ಅನ್ನು ಹೊರತೆಗೆದು ಪರಿಶೀಲಿಸಿದಾಗ ತೀರಾ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆ ಮಹಿಳೆಯ ವಯಸ್ಸು28ರಿಂದ 30 ವರ್ಷ ಎಂದು ಅಂದಾಜಿಸಲಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತ ತಂಡದ ನಾಯಕ, ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಸಿಕ್ಸರ್ ಬಾರಿಸಿದ, ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ ಎಂಬ ದಾಖಲೆ ಬರೆದರು. ವೆಸ್ಟ್ಇಂಡೀಸ್ನ ದೈತ್ಯ ಬ್ಯಾಟ್ಸ್ಮ್ಯಾನ್ ಕ್ರಿಸ್ ಗೇಲ್ 553 ಸಿಕ್ಸರ್ ಸಿಡಿಸಿದ ಮೊದಲಿಗರಾಗಿದ್ದು, ಈ ದಾಖಲೆ ಮುರಿಯಲು ರೋಹಿತ್ ಇನ್ನೂ 54 ಸಿಕ್ಸರ್ ಬಾರಿಸಬೇಕಿದೆ. ಬಾಂಗ್ಲಾ ವಿರುದ್ಧ ನಡೆದ 2ನೇ ಏಕದಿನ ಪಂದ್ಯದಲ್ಲಿ ಗಾಯದ ಮಧ್ಯೆಯೂ ಕೊನೆಯಲ್ಲಿ ಮೈದಾನಕ್ಕಿಳಿದ ಹಿಟ್ಮ್ಯಾನ್, 3 ಬೌಂಡರಿ 5 ಸಿಕ್ಸರ್ ಸಮೇತ 51 ರನ್ ಗಳಿಸಿದರೂ ಭಾರತ ಪಂದ್ಯ ಸೋಲು ಕಂಡಿತು. ರೋಹಿತ್ ಈ ಪಂದ್ಯದಲ್ಲಿ 3ನೇ ಸಿಕ್ಸರ್ ಬಾರಿಸಿದಾಗ 500 ಸಿಕ್ಸರ್ ದಾಖಲೆ ಬರೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜೊತೆ ಜೊತೆಯಲಿ ವಿವಾದದಿಂದ 2 ವರ್ಷ ಕಿರುತೆರೆಯಿಂದ ನಿಷೇಧಕ್ಕೆ ಒಳಗಾಗಿದ್ದ ನಟ ಅನಿರುದ್ಧ್ ಇದೀಗ ಕಿರುತೆರೆಗೆ ಮರಳುವ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ನಟ ಅನಿರುದ್ಧ್ರಿಗೆ ಯಾವುದೇ ವಾಹಿನಿಗಳು ಕೂಡ ಕೆಲಸ ಕೊಡದಂತೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಚಿತ್ರಣ ಬೇರೆ ರೀತಿಯಲ್ಲೇ ಬದಲಾಗಿದೆ. ನಿರ್ಮಾಪಕರ ಸಂಘ ಮಾಡಿಕೊಂಡಿದ್ದ ಮನವಿಯನ್ನು ಉದಯ ವಾಹಿನಿ ತಳ್ಳಿಹಾಕಿದೆ. ಪರಿಣಾಮ ಸೂರ್ಯವಂಶ ಧಾರಾವಾಹಿಗೆ ಅನಿರುದ್ಧ ಅವರನ್ನು ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಅನಿರುದ್ಧ ಅವರೇ ಸ್ಪಷ್ಟ ಪಡಿಸಿದ್ದಾರೆ. ತಾವು ಉದಯ ವಾಹಿನಿಯಲ್ಲಿ ಪ್ರಸಾರ ಕಾಣಲಿರುವ ಸೂರ್ಯವಂಶ ಧಾರಾವಾಹಿಯಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಅವರು, ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಧಾರಾವಾಹಿಯಲ್ಲಿ ನಟಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ. S.ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ…
ಹುಬ್ಬಳ್ಳಿ : ಖ್ಯಾತ ವಿ ಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ್ ಜೀವನಧಾರಿತ ಸಿನಿಮಾ ವಿಜಯಾನಂದ ಇಂದು (ಡಿ. 9) ರಂದು ಬಿಡುಗಡೆಯಾಗಿದ್ದು, ಭಾರತದ 1000 ಹಾಗೂ ವಿದೇಶದ 200 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಕನ್ನಡಿಗರೊಬ್ಬರ ಮೊಟ್ಟಮೊದಲ ಪಾನ್ ಇಂಡಿಯಾ ಬಯೋಪಿಕ್ ಎಂಬ ಹೆಗ್ಗಳಿಕೆಗೆ ವಿಜಯಾನಂದ ಚಿತ್ರ ಪಾತ್ರವಾಗಿದ್ದು, ಕೇವಲ ಒಂದು ಟ್ರಕ್ ನಿಂದ ಆರಂಭವಾದ ವಿ ಆರ್ ಎಲ್ ಲಾಜಿಸ್ಟಿಕ್ ಇಂದು ದೇಶದ ಅತಿ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ಬೆಳೆದ ಯಶೋಗಾಥೆಯನ್ನು ಪ್ರೇಕ್ಷಕರ ಮುಂದೆ ತೆರೆದಿಡಲಿದೆ. ಈ ಚಿತ್ರದಲ್ಲಿ ಹಿರಿಯ ನಟ ಅನಂತನಾಗ್, ರವಿಚಂದ್ರನ್, ವಿನಯ ಪ್ರಸಾದ್, ಪ್ರಕಾಶ್ ಬೆಳವಾಡಿ, ನಿಹಾಲ್, ಸಿರಿ ಪ್ರಹ್ಲಾದ್, ಶೈನ್ ಶೆಟ್ಟಿ, ಭರತ್ ಬೋಪಣ್ಣ, ಅರ್ಚನಾ ಕೊಟ್ಟಿಗೆ, ರಮೇಶ್ ಭಟ್, ದಯಾಳ್ ಪದ್ಮನಾಭ ಸೇರಿದಂತೆ ಹಲವು ದಿಗ್ಗಜರು ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ವಿಧಾನಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ ಬಳಿಕ, ಆ ಸ್ಥಾನ ತೆರವಾಗಿತ್ತು. ಹೀಗಾಗಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ನಿಯಮ7ರ ಉಪ ನಿಯಮ(1)ರಂತೆ ದಿನಾಂಕ ಡಿಸೆಂಬರ್ 12ರಂದು ಸಭಾಪತಿಯವರ ಚುನಾವಣೆಯನ್ನು ನಡೆಸಲು ದಿನಾಂಕ ನಿಗದಿ ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ ಡಿಸೆಂಬರ್ ರಂದು ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವಂತ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ: ಪಟ್ಟಣದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪಾವಗಡ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಆಚರಣೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಬಸಲಿಂಗಪ್ಪ, ಉಪನ್ಯಾಸಕರಾದ ನರಸಿಂಹಮೂರ್ತಿ,ಸುಲಕ್ಷ ಎಬಿವಿಪಿ ಕಾರ್ಯಕರ್ತರಾದ ಪ್ರದೀಪ್ ಕುಮಾರ್, ಕಲ್ಯಾಣ್ ಮನೋಜ್, ಹಳೆಯ ಎಬಿವಿಪಿ ಕಾರ್ಯಕರ್ತರಾದ ನಂದೀಶ್ ನಾಯ್ಕ ಪಿ ಹಾಗೂ ರಾಮಕೃಷ್ಣ ನಾಯ್ಕ ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ಮಾದಿಗ ಸಮುದಾಯ ಜನರಿಗೆ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಡಿ.11 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ತಾಲೂಕಿನ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸುವಂತೆ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳುನಾಗಣ್ಣ ಮನವಿ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎ ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸುಮಾರು ವರ್ಷಗಳಿಂದ ಮಾದಿಗ ಜನಾಂಗದವರಾದ ನಾವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ರಾಜಕೀಯವಾಗಿ ವಂಚಿತರಾಗಿದ್ದು, ನಮ್ಮ ಸೌಲಭ್ಯಕ್ಕಾಗಿ ವಿವಿಧ ರೀತಿಯಲ್ಲಿ ಹಲವಾರು ಪ್ರತಿಭಟನೆಗಳನ್ನು ಸರ್ಕಾರದ ವಿರುದ್ಧ ಕೈಗೊಂಡರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಬಾಬು ಜಗಜೀವನರಾಂ ವಿಚಾರ ವೇದಿಕೆ ಉಪಾಧ್ಯಕ್ಷ ಮತ್ತು ಗ್ರಾಪಂ ಸದಸ್ಯ ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುರ್ಣೆಗಾಲ…
ಹೆಚ್.ಡಿ.ಕೋಟೆ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಬಾರ್ ಗಳು ತೆರೆಯುವುದಕ್ಕೂ ಮೊದಲೇ ಅಕ್ರಮ ಮದ್ಯ ಮಾರಾಟಗಾರರು ಫೀಲ್ಡಿಗಿಳಿಯುತ್ತಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಾಟ ಆರಂಭಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಕುಡುಕರು ಮದ್ಯ ಖರೀದಿಗಾಗಿ ಮುಗಿ ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ತಾಲೋಕು ಕೇಂದ್ರ ಸ್ಥಾನದ ಬಸ್ ನಿಲ್ದಾಣದ ಎದುರಿನಲ್ಲೇ ಇಂತಹ ದೃಶ್ಯ ಕಂಡು ಬಂದರೆ, ಹಳ್ಳಿಗಳಲ್ಲಿ ಏನು ಸ್ಥಿತಿ ಇರಬಹುದು ಅನ್ನೋ ಮಾತುಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ. ಅಕ್ರಮ ಮದ್ಯ ಮಾರಾಟವನ್ನು ಕಂಡೂ ಕಾಣದಂತೆ ಅಬಕಾರಿ ಇಲಾಖೆ ಕುಳಿತಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಖಾಸಗಿ ವಾಹನಗಳ ನಿಲ್ದಾಣ ಬದಿಯಲ್ಲಿರುವ ರಸ್ತೆ ಬದಿ ಹೋಟೆಲ್ ಆಸುಪಾಸಿನಲ್ಲೇ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಅಬಕಾರಿ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ. ವರದಿ: ಮಲಾರ ಮಹದೇವಸ್ವಾಮಿ, ಹೆಚ್.ಡಿ.ಕೋಟೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…