Author: admin

ಬೆಳಗಾವಿ : ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಚಿರತೆ ಹಾವಳಿ ಕಂಡುಬಂದಿವೆ. ಈಗಾಗಲೇ ಅಧಿಕಾರಿಗಳು 24*7 ಚಿರತೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, 3 ರಿಂದ 4 ದಿನಗಳಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿಗೊಳಿಸಲಾಗುವುದು. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಅವರು ತಿಳಿಸಿದರು. ನಗರದ ಅರಣ್ಯ ಇಲಾಖೆಯ ಸಭಾಂಗಣದಲ್ಲಿ ಸೋಮವಾರ (ಆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ಚಿರತೆ ಹಾವಳಿ ಕಾರ್ಯಾಚರಣೆಯ ಕುರಿತು ಅವರು ಮಾಹಿತಿ ನೀಡಿದರು. ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ 4 ಚಿರತೆಗಳು ಕಾಣಸಿಕೊಂಡಿವೆ. ಅಥಣಿ ಭಾಗದಲ್ಲಿ ಕಂಡಿರುವ ಚಿರತೆ ಮಹಾರಾಷ್ಟ್ರದ ಗಡಿಯ ಕಾಡಿನತ್ತ ಹೋಗಿರುತ್ತದೆ ಎಂದು ಮಾಹಿತಿ ಸಿಕ್ಕಿದೆ. ಸವದತ್ತಿ ಹಾಗೂ ಮೂಡಲಗಿ ಭಾಗದಲ್ಲಿ ಕಂಡುಬಂದಿರುವ ಚಿರತೆಗಳು ಈ ವರೆಗೆ ಮತ್ತೆ ಕಾಣಸಿಕೊಂಡಿಲ್ಲ ಎಂದು ತಿಳಿಸಿದರು. ನಗರದಲ್ಲಿ ಕಂಡುಬಂದಿರುವ ಚಿರತೆ ಹಿಡಿಯಲು ಈಗಾಗಲೇ 24*7 ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. 22 ಬೋನು ಗಳನ್ನು ಇರಿಸಲಾಗಿದೆ. ಇನ್ನೂ ಹೆಚ್ಚಿನ…

Read More

ಪ್ರತಿವರ್ಷ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುಕೂಲವಾಗುವಂತೆ ಕನಿಷ್ಠ ಐದು ಕೋಟಿ ರೂಪಾಯಿ ಶಾಶ್ವತ ಅನುದಾನವನ್ನು ಪ್ರತ್ಯೇಕವಾಗಿ ತೆಗೆದಿರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರದ ಗಮನಸೆಳೆದು ಶಾಶ್ವತ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು. ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸುವುದಕ್ಕೆ ಸಂಬಂಧಿಸಿದಂತೆ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ(ಆ.22) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ಶಾಸಕರು ಹಾಗೂ ಸರಕಾರಗಳು ಬದಲಾದಾಗ ಅನುದಾನಕ್ಕಾಗಿ ಅಲೆದಾಡುವ ಪರದಾಟ ತಪ್ಪಲಿದೆ ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು. ಕನಿಷ್ಠ ಐದು ಕೋಟಿ ರೂಪಾಯಿ ತೆಗೆದಿರಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುವುದು ಎಂದು ಭರವಸೆಯನ್ನು ನೀಡಿದರು. ವೀರಜ್ಯೋತಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಲಾಗುವುದು. ಹಂಪಿ ಉತ್ಸವ, ದಸರಾ ಮಾದರಿಯಲ್ಲಿ ವಿಜೃಂಭಣೆಯಿಂದ ಕಿತ್ತೂರು ಉತ್ಸವ ಆಚರಿಸುವ ನಿಟ್ಟಿನಲ್ಲಿ ಸಲಹೆ ನೀಡಲಾಗಿದೆ. ಉತ್ಸವದ ಅವಧಿಯನ್ನು ಹೆಚ್ಚಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು. ಮಹಿಳೆಯರಿಗಾಗಿ…

Read More

ರಾಜಸ್ಥಾನ: ಜೈಪುರದ ಫಾರ್ಮ್ ಹೌಸ್ ಒಂದರಲ್ಲಿ ಜೂಜಾಟ, ಅಶ್ಲೀಲ ಪಾರ್ಟಿ ಮೇಲೆ ಸೈಬರ್ ಕ್ರೈಂ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಕರ್ನಾಟಕದ ಕೆ ಎಎಸ್ ಅಧಿಕಾರಿ ಸಹಿತ 7 ಮಂದಿ ಬಂಧಿಸಲಾಗಿದೆ. ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳಿದ್ದಂತ ಕೆ ಎ.ಎಸ್. ಅಧಿಕಾರಿಗಳು ಸಹಿತ ಹಲವು ಅಧಿಕಾರಿಗಳು, ಜೂಜಾಟ, ಅಶ್ಲೀಲ ಪಾರ್ಟಿಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪೊಲೀಸರು ನಡೆಸಿದಂತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಕ್ಯಾಸಿನೋ ಪಾರ್ಟಿಯಲ್ಲಿ ತೊಡಗಿದ್ದಂತ ವೇಳೆಯಲ್ಲಿ ಕೆಎಎಸ್ ಅಧಿಕಾರಿ ಶ್ರೀನಾಥ್ ಸೇರಿದಂತೆ 7 ಮಂದಿಯನ್ನು, ಜೈಪುರದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ ಎಎಸ್ ಅಧಿಕಾರಿ ಶ್ರೀನಾಥ್, ಕೋಲಾರದ ಸೈಬರ್ ಕ್ರೈಂ ವಿಭಾಗದ ಇನ್ಸ್ ಪೆಕ್ಟರ್ ಅಂಜಿನಪ್ಪ, ಕೋಲಾರ ನಗರಸಭೆಯ ಸದಸ್ಯ ಸತೀಶ್, ಶಿಕ್ಷಕ ರಮೇಶ್, ಆರ್ ಟಿಓ ಇಲಾಖೆ ಸಿಬ್ಬಂದಿ ಶಬರೀಶ್, ವ್ಯಾಪಾರಿ ಸುಧಾಕರ್ ಸೇರಿದಂತೆ ಒಟ್ಟು 7 ಜನರನ್ನು ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಧಾರವಾಡ : ಖಾಸಗಿ ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಘಟಗಿಯ ಧಾರವಾಡ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿದ್ದವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು:  ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸರಣಿ ಕಳತನ ನಡೆಸಿರುವ ಘಟನೆ  ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದಿದೆ. ಎಪಿಎಂಸಿಯಲ್ಲಿನ 4 ಅಂಗಡಿಗಳ ರೋಲಿಂಗ್ ಷಟರ್ ಮೀಟಿ ಕಳ್ಳತನ ನಡೆಸಲಾಗಿದ್ದು, ಗಡಾರಿಯಿಂದ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ಗಳನ್ನೇ ಟಾರ್ಗೆಟ್ ಮಾಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ   ಸಪ್ತಗಿರಿ ಎಂಟರ್ಪ್ರೈಸಸ್,  ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿ ಟ್ರೇಡರ್ಸ್, ಸಂಜಯ್ ಟ್ರೇಡರ್ಸ್ , ಚಂದನ ಟ್ರೇಡರ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ.  ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಆವಣದಲ್ಲಿ ಆವರಣದಲ್ಲಿ 40ಕ್ಕೂ ಹೆಚ್ಚು ಅಂಗಡಿಗಳಿವೆ. ಘಟನೆಗೆ ಸಂಬಂಧಿಸಿದಂತೆ  ಸ್ಥಳಕ್ಕೆ ಹುಳಿಯಾರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರಿನ ಹೀರೇಹಳ್ಳಿಯ ಓಂಕಾರೇಶ್ವರ ದೇವಸ್ಥಾನದ ಅರ್ಚಕ ಎಚ್.ಆರ್.ಚಂದ್ರಶೇಖರ್ ಅವರು ಇಸ್ಲಾಮ್ ಗೆ ಮತಾಂತರವಾಗಲು ನಿರ್ಧರಿಸಿದ್ದು, ಆದರೆ ಸಕ್ಕರೆ ಕಾಯಿಲೆ ಹಿನ್ನೆಲೆಯಲ್ಲಿ ಮುಂಜಿ ಮಾಡಿಸಲು ಸಾಧ್ಯವಾಗದೇ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ತುಮಕೂರು ಗ್ರಾಮಾಂತರದ ಹೀರೇಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಪತ್ರಿಕೆಯಲ್ಲಿ ಅಧಿಕೃತ ಪ್ರಕಟಣೆ ಕೊಟ್ಟು ಮತಾಂತರವಾಗಿದ್ದ ಎಚ್.ಆರ್.ಚಂದ್ರಶೇಖರಯ್ಯ, ಮತಾಂತರ ಗೊಂಡು, ಮುಬಾರಕ್ ಪಾಷಾ ಎಂದು ಹೆಸರು ‌ಬದಲಾವಣೆ ಮಾಡಿಕೊಂಡಿದ್ದರು. ಆದರೆ ಸಕ್ಕರೆ ಕಾಯಿಲೆ ಇರೋದ್ರಿಂದಾಗಿ ಮುಂಜಿ ಮಾಡಿಸಿಕೊಳ್ಳಲು ಸಾಧ್ಯವಾಗದೇ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮುಂಜಿ ಮಾಡಿದ್ರೆ ಮಾತ್ರ ಮುಸ್ಲಿಂಮರಲ್ಲಿ ಸರಿಯಾಗಿ ಶವ ಸಂಸ್ಕಾರ ಮಾಡೋದು ಎಂದ ಚಂದ್ರಶೇಖರ್, ಸೊಗಡು ಶಿವಣ್ಣರ ಮನವೊಲಿಕೆ ಹಾಗೂ ಮುಂಜಿಗೆ ಅಂಜಿ ತಾನು ವಾಪಸ್ ಬಂದಿದ್ದೇನೆ ಎಂದು ತಿಳಿಸಿದರು. ಅಣ್ಣತಮ್ಮಂದಿರರ ನಡುವಿನ ಆಸ್ತಿ ಜಗಳದಿಂದ ಬೇಸತ್ತಿದ್ದ ಚಂದ್ರಶೇಖರ್, ತನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ ಎಂದು ನೊಂದಿದ್ದರು. ಹೀಗಾಗಿ ಮತಾಂತರದ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಮತಾಂತರ ಸುದ್ದಿ ಕೇಳುತಿದ್ದಂತೆ ಮನೆಗೆ ದೌಡಾಯಿಸಿದ ಮಾಜಿ ಸಚಿವ ಸೊಗಡು ಶಿವಣ್ಣ…

Read More

‘ಸಿದ್ದರಾಮಯ್ಯ ಅವರು ಮಾಂಸ ಸೇವಿಸಿ, ದೇವಸ್ಥಾನಕ್ಕೆ ತೆರಳಿರುವುದು ತಪ್ಪಲ್ಲ. ಆ ವಿಚಾರ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡುವುದು ಸರಿಯಲ್ಲ’ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿ, ‘ಹಿಂದೂಗಳಲ್ಲಿ ಸಾಕಷ್ಟು ಜನ ಮಾಂಸಹಾರಿಗಳಿದ್ದಾರೆ. ಬಿಜೆಪಿಯವರಿಗೆ ಚರ್ಚೆ ಮಾಡಲು ಬೇರೆ ವಿಷಯಗಳಿಲ್ಲ. ಇಂತಹ ವಿಷಯಗಳನ್ನು ಬಿಟ್ಟು, ಸಾವರ್ಕರ್ ಅವರ ಬಗ್ಗೆ ಚರ್ಚಿಸಲಿ’ ಎಂದಿದ್ದಾರೆ. ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡರು. ನಾವು ಮನೆಮನೆಗೆ ತೆರಳಿ ಸಾವರ್ಕರ್​ ಬಗ್ಗೆ ತಿಳವಳಿಕೆ ನೀಡುತ್ತೇವೆ. ಪ್ರತಿ ಗಣೇಶ ಪೆಂಡಾಲ್​ನಲ್ಲೂ ಸಾವರ್ಕರ್​ ಫೋಟೊ ಇಡುತ್ತೇವೆ ಎಂದರು. ‘ನಮ್ಮಲ್ಲಿ ಎಲ್ಲಾ ರೀತಿಯ ಭಕ್ತರಿದ್ದಾರೆ. ಮಾಂಸ ಸೇವನೆ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ’ ಎಂದು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಒಂದರ ಮೇಲೊಂದು ಮತ್ತೊಂದು ಎಂಬಂತೆ ಒಟ್ಟು 4 ಚಿರತೆಗಳು ಪ್ರತ್ಯಕ್ಷವಾಗಿವೆ. ಸದ್ಯ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಸಮೀಪ ಮೊಳವಾಡದ ಹೊಲದಲ್ಲಿ ಭಾನುವಾರ ಕಾಣಿಸಿಕೊಂಡಿದೆ. ಮೊಳವಾಡ – ಶಿರಗುಪ್ಪಿ ರಸ್ತೆಯ ಪಕ್ಕದಲ್ಲಿರುವ ಹೊಲದಲ್ಲಿ ಚಿರತೆ ಕಾಣಿಸಿದೆ. ರೈತರು ಹೊಲದಲ್ಲಿ ನೋಡಿದಾಗ ಹೆಜ್ಜೆ ಗುರುತುಗಳು ಕಾಣಿಸಿವೆ. ಹೀಗಾಗಿ ಗ್ರಾಮದಲ್ಲಿ ಆತಂಕ ಮನೆಮಾಡಿದೆ. ಗ್ರಾಮದಲ್ಲಿ ಡಂಗೂರ ಹೊಡೆಸಿ,ಗ್ರಾಮದ ಹೊಲದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಹೊಲಕ್ಕೆ ಹೋಗುವವರು ಎಚ್ಚರಿಕೆ ವಹಿಸಬೇಕು ಎಂದು ಗ್ರಾಮದ ಎಲ್ಲೆಡೆ ಡಂಗೂರ ಎಚ್ಚರಿಸಲಾಗಿದೆ. ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಮಾಹಿತಿ ನೀಡಿದ್ದು, ಮೊಳವಾಡದಲ್ಲಿ ಚಿರತೆ ಕಾಣಿಸಿಕೊಂಡಿರುವ ಮಾಹಿತಿ ಬಂದಿದ್ದು, ತಕ್ಷಣದಿಂದಲೇ ನಾವು ಚಿರತೆ ಶೋಧದಲ್ಲಿ ತೊಡಗಿದ್ದೇವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ : ನಗರದಲ್ಲಿ ಸಾವರ್ಕರ್ ಫೋಟೋ ವಿವಾದ ತಾರಕ್ಕೇರಿದ್ದು, ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿ ಅಪರಿಚಿತರು ಪರಾರಿಯಾಗಿರುವ ಘಟನೆ ನಡೆದಿದೆ. ವಿಜಯಪುರದ ಜಲನಗರದ ಕಾಲೋನಿಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಅಪರಿಚಿತರು ತಡರಾತ್ರಿ ಕಾಂಗ್ರೆಸ್ ಕಚೇರಿಯ ಪ್ರವೇಶದ್ವಾರ ಹಾಗೂ ಕಿಟಕಿಗಳಿಗೆ ಸಾವರ್ಕರ್ ಫೋಟೋ ಅಂಟಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಂಗ್ರೆಸ್ ಕಚೇರಿಯಲ್ಲಿ ಅಂಟಿಸಿದ್ದ ಸಾವರ್ಕರ್ ಫೋಟೋ ತೆರವುಗೊಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 23, 24 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 24 ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More