Author: admin

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳುತ್ತಿದೆ. ಈ ಮಧ್ಯೆ ಆರಂಭದಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು. ಆದರೆ ಇದೀಗ ಎಎಪಿ ಮುನ್ನಡೆ ಸಾಧಿಸಿದೆ. ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಕಾಂಗ್ರೆಸ್‌ ಪಕ್ಷ 10 ಸ್ಥಾನಗಳಲ್ಲಿ ಇತರರು 4 ಸ್ಥಾನಗಳಲ್ಲಿ ಮುಂದೆ ಇದ್ದಾರೆ. 250 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಪಾಲಿಕೆ ಅಧಿಕಾರದ ಗದ್ದುಗೆಗೇರಲು 126 ಮ್ಯಾಜಿಕ್ ನಂಬರ್ ಆಗಿದೆ. ಮತದಾನೋತ್ತರ ಸಮೀಕ್ಷೆಯಲ್ಲಿ ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ. ಕಾಂಗ್ರೆಸ್‌ ಕೇವಲ ಆರು ವಾರ್ಡ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ನನ್ನನ್ನು ಅನ್ನರಾಮಯ್ಯ, ರೈತ ರಾಮಯ್ಯ, ದಲಿತ ರಾಮಯ್ಯ ಎಂದೆಲ್ಲಾ ಜನರು ನನ್ನನ್ನು ಕರೆಯುತ್ತಾರೆ. ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಹೆಸರಿಗೆ ಸಿದ್ರಾಮುಲ್ಲಾ ಖಾನ್ ಸೇರಿಸಿದ್ದಕ್ಕೆ ಬೇಸರ ಇಲ್ಲ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ತೋರಿಸುತ್ತೆ. ಮುಸ್ಲಿಂ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯಾನಾದ ಶಿಶುನಾಳ ಷರೀಫರ ಪರಂಪರೆ ನಮ್ಮದು ಎಂದು ಹೇಳುವ ಮೂಲಕ ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಳಗಾವಿ: ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ಇದೀಗ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮಹಾರಾಷ್ಟ್ರಕ್ಕೆ ತೆರಳುವ ಕೆ ಎಸ್ ​​ಆರ್​ ಟಿಸಿ ಬಸ್ ​ಗಳ​​ ಸಂಚಾರ ಸ್ಥಗಿತಗೊಳಿಸಲಾಗಿದೆ. ಇನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದಾರೆ. ನಿನ್ನೆ ರಾತ್ರಿ ಪುಣೆಯಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ನವನಿರ್ಮಾಣ ಸೇನೆ ಕಾರ್ಯಕರ್ತರು ಕೆಎಸ್ ಆರ್ ಸಿ ಬಸ್ ತಡೆದು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ ಬಂದ್ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲವು ತಿಂಗಳುಗಳಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಮಧ್ಯೆ ನಡೆಯುತ್ತಿರುವ ಜಗಳ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿಬಿಟ್ಟಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ ಬಂದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ವಿಷಯ ಗೊತ್ತಾದ ಕೂಡಲೇ ಕಾಲೇಜಿಗೆ ಧಾವಿಸಿದ ರೇಣುಕಾಚಾರ್ಯಯ, ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ರಿನು ತರಾಟೆಗೆ ತೆಗೆದುಕೊಂಡು ನಿಮ್ಮ ಜಗಳಗಳಿಗೆ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ ಅಂತ ತಾಕೀತು ಮಾಡಿ ಎಲ್ಲರನ್ನು ಒಳಗೆ ಕಳಿಸಿದ್ದಾರೆ. ನಿಮ್ಮ ಮಧ್ಯೆ ಏನೇ ಸಮಸ್ಯೆಗಳಿದ್ದರೂ ಕುಳಿತು ಮಾತನಾಡಿ ಪರಿಹರಿಸೋಣ, ವಿದ್ಯಾರ್ಥಿಗಳನ್ನು ತಿದ್ದಬೇಕಾದ ನೀವೆ ಈ ರೀತಿ ಮಾಡಿಕೊಂಡರೆ ಹೇಗೆ ಎಂದು ಶಾಸಕರು ಉಪನ್ಯಾಸಕರನ್ನು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿಯ ಶಿರಡಿನಗರದ ರೈಲು ಹಳಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನ ಮರ್ಮಾಂಗಕ್ಕೆ ವಿದ್ಯುತ್‌ ತಗುಲಿ ಗಂಭೀರ ಗಾಯವಾಗಿದೆ. ವಿನಾಯಕ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ರೈಲು ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳುವ ಸಮಯದಲ್ಲಿ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ವಿದ್ಯಾರ್ಥಿ ಅಪಾಯಕಾರಿ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ಗೀಳು ಹೊಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದ. ಅಲ್ಲಿ ಬರುವ ರಿಯಾಕ್ಷನ್‌ಗಳಿಂದ ಉತ್ತೇಜಿತನಾಗಿ ಅಪಾಯಕಾರಿ ಸ್ಥಳಗಳನ್ನು ಆಯ್ದುಕೊಳ್ಳುತ್ತಿದ್ದ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೀರತ್​ನ ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆಯಾಗಿದ್ದು, ನರ ಬಲಿ ಇರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ. ಬಾಲಕನನ್ನು ನವೆಂಬರ್ 30 ರಂದು ಪ್ರೀತ್ ವಿಹಾರ್‌ನಲ್ಲಿರುವ ನಿವಾಸದಿಂದ ಅಪಹರಿಸಿ ಹತ್ಯೆ ಮಾಡಲಾಗಿದೆ. ಮೀರತ್​ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿದ್ದು, ನರಬಲಿಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದಾರೆ. ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ. ಬಟ್ಟೆಗಳ ಆಧಾರದ ಮೇಲೆ ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬಾಲಕನ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬ ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ…

Read More

ಭಾರತ ತಂಡದ ನಾಯಕ ರೋಹಿತ್ ಶರ್ಮ ಫೀಲ್ಡಿಂಗ್ ವೇಳೆ ಹೆಬ್ಬೆರಳಿಗೆ ಬಲವಾದ ಪೆಟ್ಟು ಬಿದ್ದಿದ್ದು, ಬಾಂಗ್ಲಾದೇಶದ ವಿರುದ್ಧದ 2ನೇ ಏಕದಿನ ಪಂದ್ಯದ ನಡುವೆಯೇ ಹೊರನಡೆದಿದ್ದಾರೆ. ಮೀರ್ ಪುರದಲ್ಲಿ ಬುಧವಾರ ನಡೆದ 2ನೇ ಏಕದಿನ ಪಂದ್ಯದ ವೇಳೆ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಫೀಲ್ಡಿಂಗ್ ವೇಳೆ ರೋಹಿತ್ ಹೆಬ್ಬೆರಳಿಗೆ ಗಾಯವಾಗಿದ್ದು, ಸ್ಕ್ಯಾನಿಂಗ್ ಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಉಮ್ರಾನ್ ಮಲಿಕ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಏಕದಿನ ಕ್ರಿಕೆಟ್ ಗೆ ಮರಳಿದ್ದಾರೆ. ಈಗಾಗಲೇ ಭಾರತ ತಂಡ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡಿದ್ದರಿಂದ ಸರಣಿ ಜೀವಂತವಾಗಿಸಿರಿಸಿಕೊಳ್ಳಲು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೆದುಳು ಜ್ವರ ತಡೆಗೆ ರಾಜ್ಯದಲ್ಲಿ ಜೆಇ ಲಸಿಕೆಯನ್ನು ನೀಡುತ್ತಿದ್ದು, ಮಧುಗಿರಿಯಲ್ಲಿ ಇದನ್ನು ಪಡೆದ 10 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಟ್ಟಣದ ಎಂಜಿಎಂ ಬಾಲಕಿಯರ ಪ್ರೌಢ ಶಾಲೆಯ ಮಕ್ಕಳು ಅಸ್ವಸ್ಥಗೊಂಡಿದ್ದು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಾಸಕ ಎಂ.ವಿ.ವೀರಭದ್ರಯ್ಯ ಆಸ್ಪತ್ರೆಗೆ ಮಕ್ಕಳ ಆರೋಗ್ಯ ವಿಚಾರಿಸಿದರು. ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ, ಲಸಿಕೆ ಅಭಿಯಾನದ ಆರ್‌ಸಿಎಚ್‌ಡಿ ಕೇಶವರಾವ್‌, ಟಿಎಚ್‌ಒ ಡಾ.ರಮೇಶ್‌ಬಾಬು, ವೈದ್ಯಾಧಿಕಾರಿ ಸಂತೋಷ್‌ ಸಿಂಗ್‌, ಬಿಇಒ ಕೃಷ್ಣಪ್ಪ, ಬಿಆರ್‌ಸಿ ಹನುಮಂತರಾಯಪ್ಪ, ಶಾಲಾ ಸಮಿತಿ ಕಾರ್ಯದರ್ಶಿ ಶಂಕರನಾರಾಯಣ್‌, ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಇತರರು ಇದ್ದರು.

Read More

ಮುಸ್ಲಿಮರ ವೇಷಭೂಷಣ ಧರಿಸಿದ ನಾಯಕರ ಪೋಟೊಗೆ ಮುಸ್ಲಿಂ ಹೆಸರನ್ನು ಹಾಕಿ ವ್ಯಂಗ್ಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್‌ಗೆ ಜೆಡಿಎಸ್‌ ಆಕ್ಷೇಪಿಸಿದೆ. ಈ ಎರಡೂ ಪಕ್ಷಗಳ ಪಾಲಿಗೆ ಮುಸ್ಲಿಮರು ಅಬ್ಬೇಪಾರಿಗಳಾಗಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿ ಕಾರಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದವರು ಮುಸಲ್ಮಾನರನ್ನು ಯಾರು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು ಎಂದುಕೊಂಡಿದ್ದಾರೆ, ಇವರಿಬ್ಬರ ಹೆಸರು ಬೇರೆ, ಆದರೆ ಉದ್ದೇಶ ಮಾತ್ರ ಒಂದೇ. ಸಮುದಾಯಗಳ ನಡುವೆ ದ್ವೇಷ ಬಿತ್ತುವುದೇ ಇವರ ಕೆಲಸ ಎಂದು ಟೀಕಿಸಿದ್ದಾರೆ. ಬಿಜೆಪಿಗೆ ಮುಸಲ್ಮಾನರೆಂದರೆ ಅಪಥ್ಯ, ಸದಾ ಮೇಲೆ ದ್ವೇಷ ಕಾರುವುದೇ ಜಾಯಮಾನ. ಮುಸಲ್ಮಾನರನ್ನು ಗುತ್ತಿಗೆ ತೆಗೆದುಕೊಂಡಂತೆ ವರ್ತಿಸುವ ಕಾಂಗ್ರೆಸ್ ಖಾನ್,ಉಲ್ಲಾ,ಶೇಖ್ ಎಂಬ ಮುಸ್ಲಿಂ ಹೆಸರುಗಳನ್ನು ಮತ್ತು ವೇಷಭೂಷಣಗಳನ್ನು ವ್ಯಂಗ್ಯ ಮತ್ತು ಹೀಯಾಳಿಕೆಗೆ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ಹೇಳಿದ್ದಾರೆ. ಮುಸಲ್ಮಾನರು ಪ್ರಬುದ್ಧರಾಗಿದ್ದಾರೆ ಎನ್ನುವುದನ್ನು ಬಿಜೆಪಿ ಮತತು ಕಾಂಗ್ರೆಸ್‌ ಪಕ್ಷಗಳು ಮರೆಯಬಾರದು ಎಂದು ಎಚ್ಚರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಮೆದುಳು ಜ್ವರ ತಡೆಗೆ ರಾಜ್ಯದಲ್ಲಿ ಜೆಇ ಲಸಿಕೆಯನ್ನು ನೀಡುತ್ತಿದ್ದು, ಮಧುಗಿರಿಯಲ್ಲಿ ಇದನ್ನು ಪಡೆದ 10 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಟ್ಟಣದ ಎಂಜಿಎಂ ಬಾಲಕಿಯರ ಪ್ರೌಢ ಶಾಲೆಯ ಮಕ್ಕಳು ಅಸ್ವಸ್ಥಗೊಂಡಿದ್ದು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಾಸಕ ಎಂ.ವಿ.ವೀರಭದ್ರಯ್ಯ ಆಸ್ಪತ್ರೆಗೆ ಮಕ್ಕಳ ಆರೋಗ್ಯ ವಿಚಾರಿಸಿದರು. ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ, ಲಸಿಕೆ ಅಭಿಯಾನದ ಆರ್‌ಸಿಎಚ್‌ಡಿ ಕೇಶವರಾವ್‌, ಟಿಎಚ್‌ಒ ಡಾ.ರಮೇಶ್‌ಬಾಬು, ವೈದ್ಯಾಧಿಕಾರಿ ಸಂತೋಷ್‌ ಸಿಂಗ್‌, ಬಿಇಒ ಕೃಷ್ಣಪ್ಪ, ಬಿಆರ್‌ಸಿ ಹನುಮಂತರಾಯಪ್ಪ, ಶಾಲಾ ಸಮಿತಿ ಕಾರ್ಯದರ್ಶಿ ಶಂಕರನಾರಾಯಣ್‌, ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಇತರರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More