Author: admin

ನವದೆಹಲಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಪೊಲೀಸ್ ಉಮೇಶ್ ರೆಡ್ಡಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಉಮೇಶ್ ರೆಡ್ಡಿಗೆ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಸಿಜೆಐ ಪೀಠ ಆದೇಶ ಹೊರಡಿಸಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಕ್ರೂರ ಶಿಕ್ಷೆಯಾಗಬೇಕು, ಆತನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದು ಅದು 2013ರಲ್ಲಿ ತಿರಸ್ಕರಿಸಲ್ಪಟ್ಟಿತ್ತು.ಆದರೆ ಈಗ ಸುಪ್ರೀಂ ಕೋರ್ಟ್ ಗಲ್ಲು…

Read More

ಬೆಂಗಳೂರು ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾದ ಅಮಾನವೀಯ ಘಟನೆ ಬೆಂಗಳೂರಿನ ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಡೆದಿದೆ. ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಮೃತಪಟ್ಟಿದ್ದಾಳೆ. ಶಿಕ್ಷಕನ ಹೊಡೆತಕ್ಕೆ ಮೊದಲ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ (106) ಇಂದು ವಿಧಿವಶರಾಗಿದ್ದಾರೆ. ಇದೇ ತಿಂಗಳು 2 ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಮನೆಯಿಂದ ಕೊನೆಯ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದ ಕಿನ್ನೌರ್ ನಿವಾಸಿ ನೇಗಿಗೆ 106 ವರ್ಷ ವಯಸ್ಸಾಗಿತ್ತು. ನವೆಂಬರ್ 2ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಅವರು ತಮ್ಮ ಮನೆಯಿಂದ ಕೊನೆಯ ಮತ ಚಲಾಯಿಸಿದ್ದರು. ಮತ ಚಲಾಯಿಸಿದ ನಂತರ ಮಾತನಾಡಿದ ಶ್ಯಾಮ್ ಸರನ್, ಮತದಾನ ಪ್ರಜಾಪ್ರಭುತ್ವದ ಮಹಾನ್ ಹಬ್ಬ ಎಂದು ಹೇಳಿದ್ದರು. ನಾವೆಲ್ಲರೂ ನಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದಿದ್ದರು. ಜುಲೈ 1, 1917ರಲ್ಲಿ ಜನಿಸಿದ್ದ ನೇಗಿ ಅವರು ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ ಬಳಿಕ 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಹವಾಮಾನದ ಕಾರಣಕ್ಕೆ ಐದು ತಿಂಗಳ ಮುಂಚಿತವಾಗಿಯೇ ಮತದಾನ ನಡೆದಿದ್ದು, ಈ ವೇಳೆ ಮೊತ್ತ ಮೊದಲಿಗರಾಗಿ ಶ್ಯಾಮ್ ಸರಣ್ ನೇಗಿ…

Read More

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿಯಾಗಿ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ‘ವಿಶ್ವೇಶ್ವರ ಭಟ್ ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ’ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ತಿಳಿಸಿದರು. ‘ಭಾರತದ ರಾಷ್ಟ್ರಪತಿ ಅವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ವಿಶ್ವೇಶ್ವರ ಭಟ್ ಸ್ಪಷ್ಟಪಡಿಸಿದ್ದಾರೆ’ ಎಂದೂ ತಿಳಿಸಿದರು. ಆಯೋಗವು ಕ್ಷಮಾಪಣೆ ಪತ್ರದೊಂದಿಗೆ ಪ್ರಕರಣದ ವಿವರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದೂ ಅವರು ಮಾಹಿತಿ ನೀಡಿದರು. ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿಯಾಗಿ ಬರೆದುದರ ಬಗ್ಗೆ ಮಾಡಲಾಗಿದ್ದ ಪೋಸ್ಟ್ ಅನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಖುದ್ದಾಗಿ ಹಾಜರಾಗುವಂತೆ ನೋಟಿಸ್ ನೀಡಿತ್ತು. ಮೊಹಮ್ಮದ್ ಮಫಾಜ್ ಎಂಬುವವರು ಈ ಬಗ್ಗೆ ಅಕ್ಟೋಬರ್ 9ರಂದು ಟ್ವೀಟ್ ಮಾಡಿದ್ದರು. ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿದ್ದ ಲೇಖನದ ಎರಡು ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದರು. ಜತೆಗೆ…

Read More

ಹೆಚ್.ಡಿ.ಕೋಟೆ: ತಾಲ್ಲೂಕಿನ ಆಡಳಿತ ಸೌಧದ ಸಾರ್ವಜನಿಕ ಶೌಚಾಲಯಗಳು ಗಬ್ಬೆದ್ದು ನಾರುತಿದ್ದು, ಸ್ವಚ್ಛಗೊಳಿಸುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದೆ. ಆಡಳಿತ ಸೌಧದ ದುಸ್ಥಿತಿ ನೋಡಲಾಗದೇ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೇ ಸಂದರ್ಭದಲ್ಲಿ ಹೋರಾಟಗಾರ, ದಲಿತ ಸಂಘರ್ಷ ಸಮಿತಿಯ ಮುಖಂಡ ಸಣ್ಣಕುಮಾರ್ ಮತ್ತು ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಶೌಚಾಲಯ ಸ್ವಚ್ಛಗೊಳಿಸಿ, ವಿನೂತನವಾಗಿ ಪ್ರತಿಭಟನೆ ತೋರಿದ್ದಾರೆ. ಶಾಸಕರು ತಿಂಗಳಿಗೆ ಎರಡೂ ಮೂರು ಬಾರಿ ತಾಲ್ಲೂಕು ಕಛೇರಿಗೆ ಭೇಟಿ ನೀಡುತ್ತಿರುತ್ತಾರೆ. ಆದರೆ ತಾಲ್ಲೂಕು ಆಡಳಿತದ ಅವ್ಯವಸ್ಥೆ ಅವರ ಕಣ್ಣಿಗೆ ಕಾಣುತಿಲ್ಲವೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇನ್ನೂ ತಾಲೂಕು ಆಡಳಿತ ಸೌಧವೇ ಈ ದುಸ್ಥಿತಿಯಲ್ಲಿರುವುದು ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ. ಜೊತೆಗೆ ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಬಿಸಿ ಮುಟ್ಟಿಸಬೇಕಾದ ಶಾಸಕರು ಯಾಕೆ ಮೌನವಾಗಿದ್ದಾರೆ ಅನ್ನೋ ಪ್ರಶ್ನೆಗಳಿಗೆ ಕಾರಣವಾಗಿದೆ. ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ ವಿಳಂಬ ಮಾಡುತ್ತಿರುವ ತಾಲೂಕು ಆಡಳಿತ ಜನರ ಗೋಳನ್ನು ಬಗೆ ಹರಿಸುತ್ತಾರಾ ಎಂದು ಕಾದು ನೋಡಬೇಕಿದೆ. ಸಾರ್ವಜನಿಕರ ಶೌಚಾಲಯವನ್ನೂ ನಿರ್ವಹಣೆ ಮಾಡದ ಅಧಿಕಾರಿಗಳು ಜನರ…

Read More

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಕ್ರಮ ಆಸ್ತಿ ಮತ್ತು ಹಣ ವರ್ಗಾವಣೆ ಆರೋಪದಲ್ಲಿ ಪದೇಪದೆ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಶುಕ್ರವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಕೆಪಿಸಿಸಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ಈ ಕುರಿತು ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್‌ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ…

Read More

2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 175 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ. ಬೆಂಗಳೂರಿನ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತ ಸಭೆ ನಡೆದಿದ್ದು, ಈಗಾಗಲೇ 175 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ ಎನ್ನಲಾಗಿದೆ. 175 ಕ್ಷೇತ್ರಗಳಲ್ಲಿ 90 ಕ್ಷೇತ್ರಗಳಿಗೆ ಒಬ್ಬ ಅಭ್ಯರ್ಥಿ​, 85 ಕ್ಷೇತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ. ಇನ್ನೂ 49 ಕ್ಷೇತ್ರಗಳಿಗೆ ಅಂತಿಮವಾಗದ ಅಭ್ಯರ್ಥಿಗಳಿದ್ದಾರೆ. ಹಾಲಿ ಶಾಸಕರ ಪೈಕಿ 10 ಮಂದಿಗೆ ಟಿಕೆಟ್ ಕೈ ತಪ್ಪಿದೆ. ಉಳಿದೆಲ್ಲಾ ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಬೇರೆ ಪಕ್ಷಗಳಿಂದ 25 ಜನ ಕಾಂಗ್ರೆಸ್​​ಗೆ ಬರುವ ನಿರೀಕ್ಷೆಯಿದ್ದು, ಅವರಿಗೆ ಈಗಾಗಲೇ ಕ್ಷೇತ್ರ ಮೀಸಲಿಡಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್ 40ಕ್ಕೂ ಹೆಚ್ಚು ಕ್ಷೇತ್ರಗಳನ್ನು ಅಂತಿಮಗೊಳಿಸಿಲ್ಲ. ಇಂದು ಸಂಜೆಯೇ ಹೈಕಮಾಂಡ್​ಗೆ ಕೈ ಅಭ್ಯರ್ಥಿಗಳ ಲಿಸ್ಟ್ ಹೋಗಲಿದ್ದು, ದೆಹಲಿಯಿಂದ ತಂಡವೊಂದು ಬಂದು ರಾಜ್ಯದಲ್ಲಿ ಸಮೀಕ್ಷೆ ನಡೆಸುತ್ತದೆ. ಸಮೀಕ್ಷೆ ರಿಪೋರ್ಟ್​ ಬಳಿಕ ಹೈಕಮಾಂಡ್​ನಿಂದ ಪಟ್ಟಿ ರಿಲೀಸ್…

Read More

ಬೆಳಗಾವಿ : ಕುಂದಾನಗರಿ ಕೇವಲ ಕುಂದಾಗಷ್ಟೇ ಅಲ್ಲಾ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭತ್ತದ ಬೆಳೆಗೂ ಪ್ರಸಿದ್ಧಿ ಪಡೆದಿದೆ. ಬಾಸುಮತಿ ಭತ್ತದ ತಳಿಗೆ ಪ್ರಸಿದ್ಧತೆ ಪಡೆದಿರುವ ಬೆಳಗಾವಿ ಭತ್ತದ ಖನಿಜ ಎಂದು ಪ್ರಸಿದ್ಧಿಯಾಗಿದೆ. ಆದ್ರೇ ಭತ್ತ ಬೆಳೆಗಾರರು ಈ ಭಾರಿ ಕಂಗಾಲಾಗಿದ್ದಾರೆ. ಕೂಲಿ ವೆಚ್ಚ, ಕಾರ್ಮಿಕರ ಸಮಸ್ಯೆ ಸೇರಿ ಹಲವು ಸಮಸ್ಯೆಗಳಿಂದ ತತ್ತರಿಸಿ ಹೋಗಿದ್ದಾರೆ. ಈ ಕುರಿತು ಪಂಚಾಯತ್ ಸ್ವರಾಜ್ ಸಮಾಚಾರದೊಂದಿಗೆ ಭತ್ತ ಬೆಳೆಗಾರರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ. ಬೆಳಗಾವಿ ಸುತ್ತುಮುತ್ತಲು ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದ್ದು ಇಲ್ಲಿ ಪ್ರಮುಖವಾಗಿ ಇಂದಿರಾಯನಿ ಬಾಸುಮತಿ, ಕಿಟಾಲ ತಳಿಗಳ ಹೆಚ್ಚನ ಪ್ರಮಾಣದಲ್ಲಿ ಬೆಳೆಯುತ್ತಾರೆ . ಈಗ ಇರುವ ಮಾರುಕಟ್ಟೆಯ ಬೆಲೆ ತಳಿಗಳ ಆಧಾರಿತವಾಗಿದ್ದು ಬಾಸುಮತಿಗೆ 4 ಸಾವಿರ ರೂಪಾಯಿಗಳಿಂದ ಹಿಡಿದು 5 ಸಾವಿರ ರೂಪಾಯಿವರೆಗೆ ಬೆಲೆ ಹೊಂದಿದೆ. 2500-3000 ಸಾವಿರವರೆಗೆ ರೈತರಿಂದ ದಲ್ಲಾಳಿಗಳು ಖರೀದಿ ಮಾಡುತ್ತಾರೆ. ಈ ಬೆಲೆ ರೈತನಿಗೆ ಸಮಾಧಾನಕರವಾಗಿಯೂ ಇಲ್ಲ ಮತ್ತು ಈ ಬೆಲೆಯಿಂದಾಗಿ ಕೃಷಿ ಮಾಡಲು ಕಷ್ಟವಾಗಿದೆ, ಒಂದು…

Read More

ಪ್ರತಿಭಟನೆ ನಡೆಸುತ್ತಿದ್ದ ಶಿವಸೇನೆ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ. ಶಿವಸೇನೆ ಮುಖಂಡ ಸುಧೀರ್ ಸುರಿ ಹತ್ಯೆಗೊಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.  ನಗರದಲ್ಲಿನ ಪ್ರಮುಖ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ. ದೇವಸ್ಥಾನದ ಹೊರಭಾಗದಲ್ಲಿ ಹಾನಿಗೊಳಗಾದ ದೇವಸ್ಥಾನದ ಮೂರ್ತಿಗಳು ಕಸದ ತೊಟ್ಟಿಯಲ್ಲಿ ಸಿಕ್ಕಿದ್ದನ್ನು ಖಂಡಿಸಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಶಿವಸೇನೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆ ವೇಳೆ ಕೆಲವರು ಗಾಳಿಯಲ್ಲಿ ಗುಂಡು ಹಾರಿಸಿದರೆ ಇನ್ನೂ ಕೆಲವರು ಇದನ್ನೇ ದುರುಪಯೋಗಪಡಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More