Subscribe to Updates
Get the latest creative news from FooBar about art, design and business.
- ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
- ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
- ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
- ತುಮಕೂರು: ಮತ್ತೆ ಮೂರು ನವಿಲುಗಳು ಸಾವು
- ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
- ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
- ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
- ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
Author: admin
ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ಎಂಎಸ್ಸಿ ಪದವೀಧರೆ ಪತ್ನಿಯ ಬರ್ತ್ ಡೇ ದಿನವೇ ಆಕೆಯನ್ನು ಗಂಡನೇ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ ಮನೆಯಲ್ಲಿ ಕೆಳಗೋಟೆ ಬಡಾವಣೆಯ ಕಿರಣ್ ಪತ್ನಿ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿಯ ವಿನುತಾರ ಮೃತದೇಹ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಡುವೆ ಪ್ರೇಮಾಂಕುರ ಆಗಿತ್ತು. ಚಿತ್ರದುರ್ಗದಲ್ಲಿ ಎಂಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿನುತಾ, ಡಿಪ್ಲೋಮಾ ಓದುತ್ತಿದ್ದ ಕಿರಣ್ ನನ್ನು ಪ್ರೀತಿಸಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. ಆರು ತಿಂಗಳಿಂದ ಕಿರಣ್ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿ ಹೊಡೆದು ತವರು ಮನೆಗೆ ಕಳಿಸಿದ್ದಾನೆ. ಸೋಮವಾರ ವಿನುತಾ ಬರ್ತ್ ಡೇ ಆಗಿದ್ದು ಸಂಜೆಗೆ ದೇಗುಲಕ್ಕೆ ಹೋಗಿ ಬರೋಣವೆಂದು ಕರೆದಿದ್ದಾಳೆ. ಗಲಾಟೆ ಮಾಡಿದ ಆಕೆಯನ್ನು ಹೊಡೆದು ಸಾಯಿಸಿ ನೇಣು ಬಿಗಿದಿದ್ದು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ. ಒಂದೂವರೆ ವರ್ಷದ ಮಗು ವಿನುತಾ(27) ನೇಣಿಗೀಡಾದ ಸ್ಥಳದಲ್ಲಿ ಕಾಲ ಬಳಿಯಲ್ಲೇ ಇದೆ. ಕಿರಣ್ ಗೆ…
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬೀಗ ಹಾಕಿದ ಬಾಡಿಗೆ ಮನೆಯೊಳಗೆ ಇರಿಸಲಾಗಿದ್ದ ಡ್ರಮ್ನಲ್ಲಿ ಮಹಿಳೆಯ ಮೃತದೇಹದ ಭಾಗಗಳು ಪತ್ತೆಯಾಗಿವೆ. ಆ ಮೃತದೇಹ ವರ್ಷದಿಂದ ಅದೇ ಡ್ರಮ್ನಲ್ಲಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. ವಿಶಾಖಪಟ್ಟಣಂನ ಮಧುರವಾಡದಲ್ಲಿ ಹಲವು ತಿಂಗಳುಗಳಿಂದ ಬಾಡಿಗೆದಾರರು ಬಾಡಿಗೆಯನ್ನು ಪಾವತಿಸದ ಕಾರಣ ಮನೆಯ ಮಾಲೀಕರು ಮನೆಯ ಬಾಗಿಲು ಒಡೆದು ನೋಡಿದಾಗ ಡ್ರಮ್ ಒಳಗೆ ಮಹಿಳೆಯ ಮೃತದೇಹದ ಭಾಗಗಳು ಪತ್ತೆಯಾಗಿವೆ. ಬಾಡಿಗೆ ಕೊಡದ ಹಿನ್ನೆಲೆಯಲ್ಲಿ ಆ ಮನೆಯಲ್ಲಿದ್ದ ಸಾಮಾನುಗಳನ್ನು ಹೊರಗೆ ಹಾಕಲು ಮನೆಯ ಮಾಲೀಕರು ಬಲವಂತವಾಗಿ ಮನೆಯೊಳಗೆ ಪ್ರವೇಶಿಸಿದಾಗ ಶವವನ್ನು ಬಚ್ಚಿಟ್ಟಿರುವುದು ಗೊತ್ತಾಗಿದೆ. 2021ರ ಜೂನ್ನಲ್ಲಿ ಬಾಡಿಗೆದಾರ ಹೆಂಡತಿ ಗರ್ಭಿಣಿ ಎಂದು ಹೇಳಿ ಊರಿಗೆ ಹೋಗಿದ್ದ. ಬಳಿಕ ಮನೆ ಬಾಡಿಗೆಯನ್ನು ಕಟ್ಟಿರಲಿಲ್ಲ. ಒಂದೆರಡು ಬಾರಿ ಆ ಮನೆಗೆ ಬಂದಿದ್ದರೂ ಬಾಡಿಗೆಯನ್ನು ಕೊಟ್ಟಿರಲಿಲ್ಲ. 1 ವರ್ಷಕ್ಕೂ ಹೆಚ್ಚು ಕಾಲ ಕಾದ ಬಳಿಕ ಮಾಲೀಕ ಮನೆಗೆ ನುಗ್ಗಿ ಬಾಡಿಗೆದಾರನ ಸಾಮಾನುಗಳನ್ನು ಹೊರಗೆ ಹಾಕಿದ್ದಾರೆ. ಆಗ ಮನೆಯೊಳಗೆ ಇದ್ದ ಡ್ರಮ್ನಲ್ಲಿ ಮಹಿಳೆಯ ಕೊಳೆತ ದೇಹದ ಭಾಗಗಳು ಪತ್ತೆಯಾಗಿವೆ. ಆ ಶವ…
ಗಡಿ ವಿವಾದದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಭೇಟಿ ನೀಡಬೇಕಿತ್ತು. ಆದರೆ ರಾಜ್ಯ ಸರ್ಕಾರ ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಭೇಟಿ ರದ್ದಾಗಿದೆ. ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ, ಬೆಳಗಾವಿ ಭೇಟಿಗಾಗಿ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ. ಡಿಸೆಂಬರ್ 3 ರಂದು ಭೇಟಿ ಮಾಡಲು ನಿರ್ಧರಿಸಿದ್ದೇವು. ಆದರೆ ಕೆಲ ದಲಿತ ಸಂಘಟನೆಗಳು ಡಿಸೆಂಬರ್ 6 ರಂದು ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದರು. ಇಂದು ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನವಾಗಿದ್ದು, ಶ್ರದ್ಧಾಂಜಲಿ ಸಲ್ಲಿಕೆ ವೇಳೆ ಅಹಿತಕರ ಘಟನೆ ನಡೆಯಬಾರದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು ಎಂದು ಬೆಳಗಾವಿ ಭೇಟಿ ಕ್ಯಾನ್ಸಲ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ್, ಅಬಕಾರಿ ಸಚಿವ ಶಂಬುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಅವರು ಬೆಳಗಾವಿಗೆ ಭೇಟಿ ನೀಡಿ ಪ್ರಚೋದನಾಕಾರಿ ಭಾಷಣ ಅಥವಾ ಪ್ರಚೋದನಾಕಾರಿ ಹೇಳಿಕೆ ನೀಡುವ ಸಾಧ್ಯತೆಗಳು ಇವೆ. ಈ…
ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೇಲ್ವರ್ಗಗಳಿಗೆ ನೀಡಲಾಗಿರುವ ಶೇ.10 ಮೀಸಲನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಮೀಸಲು ಜಾತಿ ತಾರತಮ್ಯವನ್ನು ಕಾನೂನುಬದ್ಧಗೊಳಿಸುತ್ತದೆ ಎಂದು ವಾದಿಸಿದೆ. ಶೇ.10 ಮೀಸಲಾತಿ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಆದರೆ ಇದು ಮಂಡಲ್ ತೀರ್ಪು ಎಂದೇ ಜನಪ್ರಿಯತೆ ಪಡೆದುಕೊಂಡಿರುವ 1992ರ 9 ನ್ಯಾಯಾಧೀಶರ ಸಾಂವಿಧಾನಿಕ ಪೀಠ ನೀಡಿದ ಆದೇಶದ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಇಂದ್ರಾ ಸಾಹ್ನಿ ವರ್ಸಸ್ ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸಂವಿಧಾನದ ಮೂಲ ರೂಪಕ್ಕೆ ಧಕ್ಕೆ ತರಬಾರದು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೆ ಶೇ.10ರಷ್ಟು ಮೀಸಲನ್ನು ಮಾನ್ಯ ಮಾಡುವ ಮೂಲಕ ಇದನ್ನು ಉಲ್ಲಂಘಿಸಲಾಗಿದೆ. ಆರ್ಥಿಕ ಅಂಶವನ್ನು ಮಾನದಂಡವಾಗಿಟ್ಟುಕೊಂಡು ಮೀಸಲು ನೀಡುವುದು ಸಂವಿಧಾನಕ್ಕೆ ವಿರೋಧವಾಗಿದೆ ಎಂದು ಡಿಎಂಕೆ ತಿಳಿಸಿದೆ. ಈ ಹಿಂದೆ ಕಾಂಗ್ರೆಸ್ ಕೂಡ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೇಲ್ವರ್ಗದ ಆರ್ಥಿಕ ಹಿಂದುಳಿದವರ ಮೀಸಲು, ಆರ್ಥಿಕತೆ ಹಾಗೂ ಗಡಿಗಳ ಪರಿಸ್ಥಿತಿ ಮೊದಲಾದ ವಿಚಾರಗಳ…
ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಸದ್ಯದಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಅವರು ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಪುತ್ರ ಪೂರ್ವಜ್ ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ಜತೆ ಗುರುತಿಸಿಕೊಂಡಿರುವುದರಿಂದ ಸದ್ಯದಲ್ಲೇ ವಿಶ್ವನಾಥ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿಶ್ವನಾಥ್ ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪಕ್ಷ ಸೇರಿ ರಾಜ್ಯಾಧ್ಯಕ್ಷರೂ ಆಗಿದ್ದರು. ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆಪರೇಷನ್ ಕಮಲದ ವೇಳೆ ಬಿಜೆಪಿಗೆ ಹಾರಿದ್ದ ಅವರು ಉಪ ಚುನಾವಣೆಯಲ್ಲಿ ಸೋತಿದ್ದರು. ಪರಿಷತ್ ಸದಸ್ಯರಾಗಿದ್ದ ಅವರಿಗೆ ಬಿಜೆಪಿ ಕೊಟ್ಟ ಮಾತಿನಂತೆ ಸಚಿವ ಸ್ಥಾನ ನೀಡಿಲ್ಲ ಎಂಬ ಅಸಮಾಧಾನವಿದೆ. ಪಠ್ಯ ಪರಿಷ್ಕರಣೆ ವಿಚಾರ, ಹಿಜಾಬ್ ವಿಚಾರ ಸೇರಿದಂತೆ ಹಲವು ವಿಚಾರಗಳಲ್ಲಿ ಬಿಜೆಪಿಗೆ ವಿರುದ್ಧವಾದ ಹೇಳಿಕೆ ನೀಡುತ್ತಿದ್ದ ವಿಶ್ವನಾಥ್ ಇತ್ತೀಚೆಗೆ ಬಿಜೆಪಿ ಜತೆ ಅಂತರ ಕಾಯ್ದುಕೊಂಡಿದ್ದರು. ವಿಶ್ವನಾಥ್ ಪುತ್ರ ಪೂರ್ವಜ್ ನಂಜನಗೂಡು ತಾಲೂಕು ತಗಡೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ…
ಮಹಾರಾಷ್ಟ್ರದ ಸಚಿವರಿಗೆ, ಸಂಸದರಿಗೆ ಬೆಳಗಾವಿ ಗಡಿ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಇಬ್ಬರು ಸಚಿವರು ಮತ್ತು ಓರ್ವ ಸಂಸದರ ಪ್ರವಾಸ ಪಟ್ಟಿ ಬಂದಿದೆ. ಈ ಮುಂಚೆ ಡಿಸೆಂಬರ್ 3ಕ್ಕೆ ಬರುವುದಾಗಿ ಹೇಳಿದ್ದರು. ಇದೀಗ ಡಿಸೆಂಬರ್ 6ಕ್ಕೆ ಬರುವುದಾಗಿ ಹೇಳಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಪರಿಸ್ಥಿತಿ ತುಂಬಾ ಬಿಗಡಾಯಿಸಿದೆ. ಅವರಾಗೇ ಪ್ರವಾಸ ರದ್ದು ಪಡಿಸುವ ನಿರೀಕ್ಷೆ ಇದೆ. ಇಲ್ಲವಾದರೆ ನಾವೇ ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು. ಸಚಿವರು ಮತ್ತು ಸಂಸದರ ಭೇಟಿ ಸಂಬಂಧ ಈ ಹಿಂದೆ ಹೇಗೆ ಆದೇಶ ಹೊರಡಿಸಿ ತಡೆಯಲಾಗಿತ್ತೋ ಅದೇ ರೀತಿ ಬೆಳಗಾವಿ ನಿಷೇಧ ಆದೇಶ ಹೊರಡಿಸಲಾಗುವುದು. ಐಪಿಸಿ ಸೆಕ್ಷನ್ 143 ಪ್ರಕಾರ ಪ್ರತಿಬಂಧಕ ಕಾಯ್ದೆ ಹೊರಡಿಸುತ್ತೇವೆ. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕದ ಸಿಎಸ್ ಸಂದೇಶ ಕಳುಹಿಸಿದ್ದಾರೆ. ಬೆಳಗಾವಿಯ ಎಲ್ಲ ಗಡಿಭಾಗದಲ್ಲಿಯೂ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ ಎಂದು…
ಬೆಂಗಳೂರು; ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ಅಂಕ ಗಳಿಸಿದ ಒಟ್ಟು 7 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು. ಘಟಿಕೋತ್ಸವದಲ್ಲಿ ಪದವಿ ವಿಭಾಗದ 222 ಮತ್ತು ಸ್ನಾತಕೋತ್ತರ ವಿಭಾಗದ 52 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 274 ವಿದ್ಯಾರ್ಥಿಗಳು ಪದವಿ, ಪ್ರಮಾಣ ಪತ್ರ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಪ್ರೊ. ಪಿ. ಬಲರಾಮ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ವಿಜ್ಞಾನ ಪ್ರತಿಯೊಬ್ಬರ ಜೀವನದಲ್ಲೂ ಬಹು ಮುಖ್ಯ. ನೀವೆಲ್ಲಾ ಕೋವಿಡ್ ಕಾಲದ ಪದವೀಧರರು. ಆ ಸಮಯದಲ್ಲಿ ವಿಜ್ಞಾನ ಲೋಕದಲ್ಲಿ ಅನೇಕ ಸಂಶೋಧನೆಗಳನ್ನು ಕಂಡಿದ್ದೀರಿ. ಈ ಪ್ರಕೃತಿಯಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರಿಗೂ ವಿಜ್ಞಾನದ ಮಹತ್ವ ತಿಳಿದಿರಬೇಕು” ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಿ ವೈಜ್ಞಾನಿಕ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ಬದುಕಿಗೂ ಅನಿವಾರ್ಯ ಮತ್ತು ಡಾ. ಎಚ್. ನರಸಿಂಹಯ್ಯನವರ ಕನಸೂ ಹೌದು” ಎಂದರು. ಪ್ರಥಮ ಅಂಕ ಪಡೆದ ಪದವಿ ವಿದ್ಯಾರ್ಥಿಗಳಾದ ಪ್ರಿಯಾಂಕ…
ಆಂಟೋನಿ ಬೇಗೂರು ಭೀಮರಾವ್ ರಾಮ್ಜಿ ಅಂಬೇಡ್ಕರ್ ಸ್ವತಂತ್ರ ಭಾರತದ ಮೊದಲ ಕಾನೂನು ಮಂತ್ರಿ ಮತ್ತು ಭಾರತೀಯ ಸಂವಿಧಾನದ ಪಿತಾಮಹ. ಮಹಾತ್ಮಾ ಗಾಂಧಿಯವರ ನಂತರ, ಅವರು ಸ್ವತಂತ್ರ ಭಾರತದ ಶ್ರೇಷ್ಠ ನಾಯಕ ಎಂದು ಪ್ರಶಂಸಿಸಲ್ಪಟ್ಟಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಅಂಬೇಡ್ಕರರು 1955ರಲ್ಲಿ ಹದಗೆಡಲಾರಂಭಿಸಿದರು. ದೀನದಲಿತರಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಾಬಾಸಾಹೇಬ್ ಡಾ.ಪಿ.ಆರ್.ಅಂಬೇಡ್ಕರ್ ಅವರು 1956ರ ಡಿಸೆಂಬರ್ 6ರಂದು ದೆಹಲಿಯ ತಮ್ಮ ಮನೆಯಲ್ಲಿ ಮಲಗಿದ್ದಾಗ ಇಹಲೋಕ ತ್ಯಜಿಸಿದರು. ಬೌದ್ಧಧರ್ಮದಲ್ಲಿ ಆಳವಾಗಿ ತೊಡಗಿಸಿಕೊಂಡಿದ್ದರಿಂದ, ಅವರ ದೇಹವನ್ನು ಬೌದ್ಧ ವಿಧಿಗಳ ಪ್ರಕಾರ “ದಾದರ್ ಚೌಪತಿ” ಸಮುದ್ರತೀರದಲ್ಲಿ ದಹಿಸಲಾಯಿತು. ಮರಣೋತ್ತರವಾಗಿ, ಅವರಿಗೆ 1990 ರಲ್ಲಿ ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಯಿತು. ಅಂಬೇಡ್ಕರ್ ಬಹುಮುಖಿ ಅರ್ಥಶಾಸ್ತ್ರಜ್ಞರು, ಪ್ರಾಧ್ಯಾಪಕರು, ಕಾರ್ಮಿಕ ಸಚಿವರು, ವಕೀಲರು, ಷೇರು ಮಾರುಕಟ್ಟೆ ವ್ಯಾಪಾರ ಸಲಹೆಗಾರರಾಗಿದ್ದರು. ಆದರೆ ಇಂದಿಗೂ ಅವರನ್ನು ದಲಿತ ನಾಯಕನ ಸಂಕುಚಿತ ವಲಯದಲ್ಲಿಯೇ ಕಾಣಲಾಗುತ್ತಿದೆ. ಅಂಬೇಡ್ಕರ್ ಬಗ್ಗೆ ಅಷ್ಟಾಗಿ ಗೊತ್ತಿಲ್ಲದವರೂ ಇದನ್ನು ದೃಢವಾಗಿ ನಂಬುತ್ತಾರೆ. ಅಂಬೇಡ್ಕರ್ ಅವರನ್ನು ಸಮಸ್ಯಾತ್ಮಕ ಮತ್ತು ವಿವಾದಾತ್ಮಕ ದೃಷ್ಟಿಕೋನದಿಂದ…
ಆಂಟೋನಿ ಬೇಗೂರು ಡಿಸೆಂಬರ್ 05 ರಂದು ಆಚರಿಸಲಾಗುತ್ತದೆ. ಭೂಮಿಯ ಮೇಲಿನ ಮಣ್ಣಿನ ಮಹತ್ವದ ಬಗ್ಗೆ ಅರಿವು ಮೂಡಿಸಲು ಮತ್ತು ಜನಸಂಖ್ಯೆಯ ವಿಸ್ತರಣೆಯಿಂದಾಗಿ ಬೆಳೆಯುತ್ತಿರುವ ಸಮಸ್ಯೆಯನ್ನು ಎತ್ತಿ ಹಿಡಿಯಲು ಪ್ರತಿ ವರ್ಷ ಡಿಸೆಂಬರ್ 5 ರಂದು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. ಜಾಗತಿಕ ಮಣ್ಣು ಪ್ರತಿದಿನ ಜನಸಂಖ್ಯೆಯ ವಿಸ್ತರಣೆಯಿಂದಾಗಿ ಬೆಳೆಯುತ್ತಿರುವ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಆದ್ದರಿಂದ, ಮಣ್ಣಿನ ಸವಕಳಿಯನ್ನು ಕಡಿಮೆ ಮಾಡಲು, ಫಲವತ್ತತೆಯನ್ನು ಕಾಪಾಡಿಕೊಳ್ಳಲು ಮತ್ತು ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಒಂದು ಹೆಜ್ಜೆ ಇಡುವುದು ಅವಶ್ಯಕ. ಮಣ್ಣು ವಿವಿಧ ಪ್ರಮಾಣದಲ್ಲಿ ಖನಿಜಗಳು, ಸಾವಯವ ಪದಾರ್ಥಗಳು ಮತ್ತು ಗಾಳಿಯಿಂದ ಕೂಡಿದೆ. ಇದು ಸಸ್ಯದ ಬೆಳವಣಿಗೆಗೆ ಮಾಧ್ಯಮವನ್ನು ಒದಗಿಸುತ್ತದೆ, ಅನೇಕ ಕೀಟಗಳು ಮತ್ತು ಇತರ ಜೀವಿಗಳಿಗೆ ಆವಾಸಸ್ಥಾನವನ್ನು ಒದಗಿಸುತ್ತದೆ. ಇದು ಮೇಲ್ಮೈ ನೀರು ಮತ್ತು ವಾತಾವರಣದ ಅನಿಲಗಳ ನಿರ್ವಹಣೆಗಾಗಿ ಶೋಧನೆ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ನಾಲ್ಕು ಅಗತ್ಯಗಳಲ್ಲಿ ಆಹಾರ, ಬಟ್ಟೆ, ವಸತಿ ಮತ್ತು ಔಷಧ ಸೇರಿವೆ. ಇದು ಮೇಲ್ಮೈ ನೀರು ಮತ್ತು ವಾತಾವರಣದ ಅನಿಲಗಳ ನಿರ್ವಹಣೆಗಾಗಿ ಶೋಧನೆ…
ಬೀಗ ಹಾಕಿದ ಒಂಟಿ ಮನೆಗಳನ್ನು ಗುರುತಿಸಿ ದೋಚುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಮೈಸೂರು ಮೂಲದ ರಮ್ಯಾ ಹಾಗೂ ಬೆಂಗಳೂರು ಉತ್ತರಹಳ್ಳಿ ಮೂಲದ ನಾಗರಾಜ್ ಬಂಧಿತ ಆರೋಪಿಗಳು. ರಮ್ಯಾ ಹಾಗೂ ನಾಗರಾಜ್ ಪರಸ್ಪರ ಪರಿಚಯ ಆದ ನಂತರ ಇನ್ಸ್ಟಾಗ್ರಾಮ್ ಮೂಲಕ ಚಾಟ್ ಮಾಡಿಕೊಂಡು ಮತ್ತಷ್ಟು ಸ್ನೇಹ ಬೆಳೆಸಿಕೊಂಡಿದ್ದರು. ಸ್ನೇಹ ಪ್ರೀತಿಗೆ ತಿರುಗಿದ ಬಳಿಕ ಮದುವೆಯಾಗಿದ್ದರು. ಮದುವೆಯ ಬಳಿಕ ಜೀವನ ನಡೆಸಲು ನಾಗರಾಜ್ ಮತ್ತು ರಮ್ಯ ಕಳ್ಳತನ ಮಾಡಲು ಶುರು ಮಾಡಿದ್ದರು. ಇಬ್ಬರು ಪ್ರಮುಖ ರಸ್ತೆಗಳಲ್ಲಿ ತಿರುಗಿ ವಸತಿ ಸ್ಥಳಗಳಲ್ಲಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡ್ತಿದ್ರು. ನಾಗರಾಜ್ ಕಳ್ಳತನ ಮಾಡಲು ಮನೆ ಒಳಗೆ ಹೋಗಿದ್ರೆ ರಮ್ಯ ಬಾಗಿಲಲ್ಲಿ ನಿಂತು ಕಾವಲು ನಿಂತಿರುತ್ತಿದ್ದಳು. ಯಾರಾದರೂ ಬಂದರೆ ನಾಗರಾಜ್ಗೆ ಸಿಗ್ನಲ್ ಕೊಟ್ಟು ಪರಾರಿ ಆಗುತ್ತಿದ್ದರು. ಕದ್ದ ಚಿನ್ನವನ್ನು ರಮ್ಯ ಅಡಮಾನ ಇಟ್ಟು ಹಣ ಪಡೆಯುತ್ತಿದ್ದರು. ಹೀಗೆ ಜೀವನ ನಡೆಸುತ್ತಿದ್ದ ಚಾಲಾಕಿ ಜೋಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದೆ. ಒಂಟಿ ಮನೆಗಳ ಕಳ್ಳತನದ ಬಳಿಕ ಜ್ಞಾನಭಾರತಿ…