Subscribe to Updates
Get the latest creative news from FooBar about art, design and business.
- ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
- ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
- ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
- ತುಮಕೂರು: ಮತ್ತೆ ಮೂರು ನವಿಲುಗಳು ಸಾವು
- ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
- ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
- ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
- ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
Author: admin
ಕಿರುತೆರೆಯ ತಾರಾ ಜೋಡಿಯಾದ ಚಂದನ್ ಕುಮಾರ್ ಮತ್ತು ಕವಿತಾ ಬೆಂಗಳೂರಿನಲ್ಲಿ ತಮ್ಮ ಹೊಸ ಹೋಟೆಲ್ಗೆ ಚಾಲನೆ ನೀಡಿದ್ದಾರೆ. ಸೀರಿಯಲ್, ಸಿನಿಮಾ ಅಂತಾ ಬ್ಯುಸಿಯಾಗಿರುವ ಚಂದನ್ ಮತ್ತು ಕವಿತಾ ದಂಪತಿ ಇದೀಗ ಹೋಟೆಲ್ ಉದ್ಯಮದತ್ತ ಮುಖ ಮಾಡಿದ್ದು, ಮೈಸೂರು ರಸ್ತೆಯಲ್ಲಿ ಮಂಡಿಪೇಟೆ ಪಲಾವ್ ಎಂಬ ಹೊಸ ಹೋಟೆಲ್ ಆರಂಭಿಸಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಬೆಂಗಳೂರು ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಚಂದನ್ ಕುಮಾರ್ ನಟನೆಯ ಜೊತೆ ಹೋಟೆಲ್ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಬಿರಿಯಾನಿ ಹೋಟೆಲ್ನಲ್ಲಿ ಸ್ಯಾಂಡಲ್ವುಡ್ ನಟರಿಂದ ತೊಡಗಿ ರಾಜಕೀಯ ಮುಖಂಡರೂ ಬಿರಿಯಾನಿ ಸವಿದಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನ ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಈಗ ಮೈಸೂರು ರೋಡ್ನಲ್ಲಿ ಮಡಿಪೇಟೆ ಪಲಾವ್ ಎಂಬ ಹೋಟೆಲ್ ತೆರೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಚಂದನ್ ಅವರ ಬಿರಿಯಾನಿ ಹೋಟೆಲ್ ನಲ್ಲಿ ಕಳ್ಳತನವಾಗಿತ್ತು. ಈಗ ಮತ್ತಷ್ಟು ಭದ್ರತೆ ಒದಗಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಸಾಫ್ಟ್ವೇರ್ ಎಂಜಿನಿಯರ್ ವೊಬ್ಬರನ್ನು ಅಪಹರಿಸಿ ₹ 8 ಲಕ್ಷ ಹಾಗೂ ಚಿನ್ನಾಭರಣ ಕಿತ್ತುಕೊಂಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊರಮಾವು ಪಿಎನ್ಟಿ ಬಡಾವಣೆಯ ತರುಣ್ ಗಣೇಶ್, ಗೋವಿಂದಪುರ ಜಾನಕಿರಾಮ ಬಡಾವಣೆಯ ವಿಘ್ನೇಶ್, ಹಳೇ ಬೈಯಪ್ಪನಹಳ್ಳಿಯ ಜೆ. ಚರೀಶ್ ಹಾಗೂ ಸುಬ್ಬಣ್ಣಪಾಳ್ಯದ ಮಣಿಕಂಠ ಬಂಧಿತರು. ಇವರಿಂದ ಕಾರು, ಮೊಬೈಲ್ ಹಾಗೂ ಚಾಕು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹೂಡಿ ನಿವಾಸಿ ಎಂಜಿನಿಯರ್ ರಾಹುಲ್ ನ. 26ರಂದು ಕಾರಿನಲ್ಲಿ ಕಲ್ಯಾಣನಗರಕ್ಕೆ ಹೋಗಿ ಅಲ್ಲಿಯೇ ಕಾರು ನಿಲ್ಲಿಸಿ ಪಬ್ಗೆ ತೆರಳಲು ಆಟೊದಲ್ಲಿ ಬ್ರಿಗೇಡ್ ರಸ್ತೆಗೆ ಹೋಗಿದ್ದರು. ಬ್ರಿಗೇಡ್ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಪರಿಚಯವಾಗಿತ್ತು. ಕೆಲವು ಯುವತಿಯರ ಫೋಟೊ ತೋರಿಸಿದ್ದ ವ್ಯಕ್ತಿ ಅವರನ್ನು ಪರಿಚಯ ಮಾಡಿಸುವುದಾಗಿ ಹೇಳಿದ್ದ. ತಮಗೆ ಯಾವ ಯುವತಿಯೂ ಬೇಡವೆಂದು ಹೇಳಿದ್ದ ರಾಹುಲ್ ಅಲ್ಲಿಂದ ಆಟೊದಲ್ಲಿ ಪುನಃ ಕಲ್ಯಾಣ ನಗರದತ್ತ ಹೊರಟಿದ್ದರು. ಬ್ರಿಗೇಡ್ ರಸ್ತೆಯಿಂದಲೇ ರಾಹುಲ್ ಅವರನ್ನು ಹಿಂಬಾಲಿಸುತ್ತಿದ್ದ ಆರೋಪಿಗಳು ಮಾರ್ಗಮಧ್ಯೆ ಅಡ್ಡಗಟ್ಟಿ ರಾಹುಲ್ ಅವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು…
ಮುಂಬೈನ ಕುರ್ಲಾದಲ್ಲಿ ಇತ್ತೀಚೆಗೆ ಭೀಕರ ಗ್ಯಾಂಗ್ ರೇಪ್ ಪ್ರಕರಣ ನಡೆದಿರುವುದು ವರದಿಯಾಗಿದೆ. 42 ವರ್ಷದ ಮಹಿಳೆಯ ಮೇಲೆ ಆಕೆಯ ನಿವಾಸದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಮಹಿಳೆಯ ಅಂಗಾಂಗಕ್ಕೆ ಸಿಗರೇಟ್ನಿಂದ ಸುಟ್ಟು, ಹಲ್ಲೆ ಮಾಡಿದ್ದಾರೆ. ಹರಿತವಾದ ಆಯುಧದಿಂದ ಆಕೆಯ ಮೈ ಕೈ ಗಾಯಗೊಳಿಸಿ ಖಾಸಗಿ ಅಂಗಕ್ಕೆ ಸಿಗರೇಟ್ನಿಂದ ಸುಟ್ಟಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅರೋಪಿಗಳು ಹಾಗೂ ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದೂ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳು ಒಬ್ಬರಾದ ಮೇಲೊಬ್ಬರು ಅಸ್ವಾಭಾವಿಕ ಲೈಂಗಿಕ ಕೃತ್ಯ ನಡೆಸಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ. ಮಹಿಳೆಯ ಖಾಸಗಿ ಅಂಗಕ್ಕೆ ಸಿಗರೇಟ್ನಿಂದ ಸುಟ್ಟಿದ್ದು, ಎದೆ ಹಾಗೂ ಎರಡೂ ಕೈಗಳಿಗೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾರೆ. ಆರೋಪಿಯೊಬ್ಬ ಘಟನೆಯ ವೀಡಿಯೊ ರೆಕಾರ್ಡ್ ಮಾಡಿದ್ದು, ಪೊಲೀಸರಿಗೆ ದೂರು ನೀಡದರೆ ವೀಡಿಯೊ ಹರಿಬಿಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಎನ್ಜಿಒ ಒಂದಕ್ಕೆ ಮಹಿಳೆ ಕಷ್ಟಗಳನ್ನು ಹೇಳಿಕೊಂಡಿದ್ದು, ಪೊಲೀಸರಿಗೆ ವಿಷಯ ತಿಳಿದ ಬಳಿಕ ಎಫ್ಐಆರ್…
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶುಕ್ರವಾರ ಅವಳಿ ಸಹೋದರಿಯರು ಗುರು ಹಿರಿಯರು ಹಾಗೂ ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಶಾಸ್ತ್ರೋಕ್ತವಾಗಿ ಮದುವೆ ಆಗಿದ್ದಾರೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದು, ಇತ್ತೀಚೆಗಷ್ಟೇ ತಂದೆ ನಿಧನರಾಗಿದ್ದರಿಂದ ತಾಯಿ ಜೊತೆ ವಾಸವಾಗಿದ್ದರು. ತಾಯಿಗೂ ಅನಾರೋಗ್ಯ ಕಾಡುತ್ತಿದ್ದು, ಮುಂದೆ ಒಬ್ಬರು ಮದುವೆ ಆದರೆ ಮತ್ತೊಬ್ಬಾಕೆಗೆ ಆಗಲಿಲ್ಲ ಅಂದರೆ ಹೇಗೆ ಬಿಟ್ಟು ಇರುವುದು ಎಂದು ಸಹೋದರಿಯರು ಅತುಲ್ ಎಂಬಾತನನ್ನು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅತುಲ್ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಯುವತಿಯರ ತಾಯಿಗೆ ಅನಾರೋಗ್ಯ ಕಾಡಲು ಆರಂಭಿಸಿದಾಗ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ…
ಆಂಟೋನಿ ಬೇಗೂರು ಅಂತರಾಷ್ಟ್ರೀಯ ಸ್ವಯಂಸೇವಕರ ದಿನದ ಮುಖ್ಯ ಉದ್ದೇಶವೆಂದರೆ ಪ್ರಪಂಚದಾದ್ಯಂತ ಶಾಂತಿ ಮತ್ತು ಅಭಿವೃದ್ಧಿಗೆ ಬೆಂಬಲ ನೀಡುವ ಸ್ವಯಂಸೇವಕತೆಯನ್ನು ಉತ್ತೇಜಿಸುವುದು … ಮತ್ತು ಯಾವುದೇ ಲಾಭವಿಲ್ಲದೆ ಅಗತ್ಯವಿರುವವರನ್ನು ಉಳಿಸಲು ಸ್ವಯಂಸೇವಕರಾಗಿರುವ ಎಲ್ಲರ ಸೇವೆಯನ್ನು ಗುರುತಿಸುವುದು. ಅನೇಕ ದೇಶಗಳು ಅಭಿವೃದ್ಧಿ ಗುರಿಗಳನ್ನು ಪೂರೈಸಲು ಸ್ವಯಂಸೇವಕ ಕಾರ್ಮಿಕರ ಸೇವೆಗಳ ಮೇಲೆ ಕೇಂದ್ರೀಕರಿಸಿವೆ. ಬಡತನ, ಹಸಿವು, ಅಸ್ವಸ್ಥತೆಗಳು, ಅನಕ್ಷರತೆ, ಹವಾಮಾನ ದೋಷಗಳು ಮತ್ತು ಮಹಿಳೆಯರ ವಿರುದ್ಧದ ತಾರತಮ್ಯದಂತಹ ಸಮಸ್ಯೆಗಳನ್ನು ಎದುರಿಸಲು ಗುರಿಗಳನ್ನು ಹೊಂದಿಸಲು ಸ್ವಯಂಸೇವಕರನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ವಯಂಸೇವಕ ಕಾರ್ಯಕರ್ತರು, ಸಮಿತಿಗಳು, ಸಂಸ್ಥೆಗಳು, ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗಾಗಿ ತಮ್ಮ ಅತ್ಯುತ್ತಮ ಕೊಡುಗೆಯನ್ನು ನೀಡುತ್ತವೆ. ಸರ್ಕಾರಿ ಏಜೆನ್ಸಿಗಳು, ಲಾಭೋದ್ದೇಶವಿಲ್ಲದ ಸಂಸ್ಥೆಗಳು, ಸಮುದಾಯ ಗುಂಪುಗಳು ಮತ್ತು ಶೈಕ್ಷಣಿಕ ಖಾಸಗಿ ವಲಯದೊಂದಿಗೆ ಅಭಿವೃದ್ಧಿಯಲ್ಲಿ ಹಂಚಿಕೊಳ್ಳಲು ಜನರು ಮತ್ತು ಸ್ವಯಂಸೇವಕರಿಗೆ ಇಂದು ಉತ್ತಮ ಅವಕಾಶವಾಗಿದೆ. ನವೆಂಬರ್ 20, 1997 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2001 ಅನ್ನು ಸ್ವಯಂಸೇವಕರ ಅಂತರರಾಷ್ಟ್ರೀಯ ವರ್ಷವೆಂದು ಘೋಷಿಸಿತು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್…
ಬೆಂಗಳೂರು; ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ರ್ಯಾಂಕ್ ಗಳಿಸಿದ ಒಟ್ಟು 7 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು. ಘಟಿಕೋತ್ಸವದಲ್ಲಿ ಪದವಿ ವಿಭಾಗದ 222 ಮತ್ತು ಸ್ನಾತಕೋತ್ತರ ವಿಭಾಗದ 52 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 274 ವಿದ್ಯಾರ್ಥಿಗಳು ಪದವಿ, ಪ್ರಮಾಣ ಪತ್ರ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಪ್ರೊ. ಪಿ. ಬಲರಾಮ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ವಿಜ್ಞಾನ ಪ್ರತಿಯೊಬ್ಬರ ಜೀವನದಲ್ಲೂ ಬಹು ಮುಖ್ಯ. ನೀವೆಲ್ಲಾ ಕೋವಿಡ್ ಕಾಲದ ಪದವೀಧರರು. ಆ ಸಮಯದಲ್ಲಿ ವಿಜ್ಞಾನ ಲೋಕದಲ್ಲಿ ಅನೇಕ ಸಂಶೋಧನೆಗಳನ್ನು ಕಂಡಿದ್ದೀರಿ. ಈ ಪ್ರಕೃತಿಯಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರಿಗೂ ವಿಜ್ಞಾನದ ಮಹತ್ವ ತಿಳಿದಿರಬೇಕು” ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಿ ವೈಜ್ಞಾನಿಕ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ಬದುಕಿಗೂ ಅನಿವಾರ್ಯ ಮತ್ತು ಡಾ. ಎಚ್. ನರಸಿಂಹಯ್ಯನವರ ಕನಸೂ ಹೌದು” ಎಂದರು. ಪ್ರಥಮ ರ್ಯಾಂಕ್ ಪಡೆದ ಪದವಿ ವಿದ್ಯಾರ್ಥಿಗಳಾದ ಪ್ರಿಯಾಂಕ…
ಕಾರವಾರ: ಜಿಲ್ಲಾ ಪಂಚಾಯಿತಿ ನೌಕರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ. ಶ್ರೀಕಾಂತ ಮೇಲಿನಮನೆ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿದ್ದ ಶ್ರೀಕಾಂತ ಕಾಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕ ಕೆಲಸದ ಒತ್ತಡ, ಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಮ್ಮಣ್ಣ ಚನ್ನಬಸಪ್ಪ ಮೇಲಿನಮನೆ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ, ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತ ಬಾಲಕಿಯ ತಾಯಿ ಪತ್ರ ಬರೆದಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯ ತಾಯಿ, ‘ನನಗೆ ಹಾಗೂ ನನ್ನ ಮಕ್ಕಳಿಗೆ ದಯಾ ಮರಣ ನೀಡಿ. ನನ್ನ ಹಾಗೂ ಮಕ್ಕಳ ಜೀವನದ ಘನತೆ ಉಳಿಸುವಂತೆ ಪತ್ರದಲ್ಲಿ ಕೋರಿದ್ದಾರೆ. ಪ್ರಧಾನಿಯವರ ‘ಭೇಟಿ ಬಚಾವೋ, ಭೇಟಿ ಪಡಾವೋ’ ಎಲ್ಲಿ ಹೋಯ್ತು. 20 ದಿನಗಳ ಕಾಲ ನಾನು ನರಕ ನೋಡಿದ್ದೇನೆ. ನನಗೆ ಈ ನರಕದಿಂದ ಮುಕ್ತಿಕೊಡಿ. ಒಡಲ ಉರಿಯಿಂದ ಈ ಕಣ್ಣೀರ ಪತ್ರ ಬರೆಯುತ್ತಿರುವೆ. ನಮ್ಮಂತಹವರು ನ್ಯಾಯ ಕೇಳಲು ಹೊರಗೆ ಬರಬಾರದು ಎಂದು ತೀವ್ರ ಮನನೊಂದು ಸಂತ್ರಸ್ತ ಬಾಲಕಿಯ ತಾಯಿ ಅಳಲು ತೋಡಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ. ಅಹಮದಾಬಾದ್ ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಗುಜರಾತ್ ಚುನಾವಣೆ ಜೊತೆಗೆ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು ಕೂಡ ನಡೆಯುತ್ತಿವೆ. ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮನವಿ ಮಾಡಿದರು. ಹಾಗೆಯೇ ಮತದಾನ ಪ್ರಕ್ರಿಯೆಯೆಲ್ಲಿ ಭಾಗಿಯಾಗುತ್ತಿರುವ ಜನತೆಗೆ ಧನ್ಯವಾದ . ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಎಲ್ಲರ ಹಕ್ಕು. ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನ ವಿದ್ಯಾರ್ಥಿ ಭವನ ಯಾರಿಗೆ ಗೊತ್ತಿಲ್ಲ. ಸುಮಾರು ಎಂಟು ದಶಕಗಳಷ್ಟು ಹಳೆಯ ಬೆಂಗಳೂರಿನ ಈ ಹೊಟೆಲ್ ಬೆಂಗಳೂರು ಮಾತ್ರವಲ್ಲದೇ, ಇಡೀ ದೇಶ ಹಾಗೂ ವಿದೇಶಗಳಲ್ಲಿಯೂ ಪ್ರಖ್ಯಾತಿಯನ್ನು ಗಳಿಸಿದೆ. ಅದರಲ್ಲಿಯೂ ವಿದ್ಯಾರ್ಥಿ ಭವನದ ಮಸಾಲೆ ದೋಸೆಗೆ ಮಾರು ಹೋಗುವವರೇ ಇಲ್ಲ ಎನ್ನಬಹುದು. ಅನೇಕ ಗಣ್ಯರು ಆಗಾಗ ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಉಪಹಾರ ಸೇವಿಸುವುದು ಸಾಮಾನ್ಯವಾಗಿದೆ. ಬೆಂಗಳೂರು ಮೂಲದ ಅನಿವಾಸಿ ಭಾರತೀಯರು ಬೆಂಗಳೂರಿಗೆ ಬಂದಾಗಿ ಇಲ್ಲಿಗೆ ಬರದೇ ಇರುವುದಿಲ್ಲ. ಬ್ರಿಟಿಷ್ ಡೆಪ್ಯೂಟಿ ಹೈ ಕಮೀಷನರ್ ಚಂದ್ರ ಅಯ್ಯರ್ ಅವರು ಬೆಂಗಳೂರಿನಲ್ಲಿ ಒಂದು ವಾರದ ಕಾಲ ತಂಗಿದ್ದರು. ಶನಿವಾರದಂದು ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ರುಚಿಯಾದ ಮಸಾಲೆ ದೋಸೆ, ಕಾಫಿ ಸವಿದರು. ವಿದ್ಯಾರ್ಥಿ ಭವನದ ಅರುಣ್ ಅಡಿಗ ಅವರು ಅಯ್ಯರ್ ಹಾಗೂ ರಾಜಕೀಯ ಆರ್ಥಿಕ ಸಲಹಾಗಾರರಾದ ಮಂಜುನಾಥ್ ಕೆ.ಎಸ್ ಅವರನ್ನು ಉಪಚರಿಸಿದರು. ಜೊತೆಗೆ ಹೋಟೆಲ್ ಚರಿತ್ರೆ ಹಾಗೂ ಖಾದ್ಯದ ವಿಶೇಷತೆಗಳ ಕುರಿತು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…