Author: admin

ತುಮಕೂರು: ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕನಿಷ್ಠ ಮೂಲಭೂತ ಸೌಲಭ್ಯವನ್ನೂ ಒದಗಿಸದ ಹಿನ್ನೆಲೆಯಲ್ಲಿ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರವು ಉಪವಾಸ ಸತ್ಯಾಗ್ರಹ ಆರಂಭಿಸಿದೆ. ಮೂಲಭೂತ ಸೌಕರ್ಯ ಒದಗಿಸಲು 200 ಲಕ್ಷ ರೂಪಾಯಿಗಳು ಬಿಡುಗಡೆಯಾಗಿ 9 ತಿಂಗಳುಗಳು ಕಳೆದರೂ ಕಟ್ಟಡ ಕಾಮಗಾರಿ ಅನುಷ್ಠಾನವಾಗದೇ ಕಾಲೇಜು ಶಿಕ್ಷಣ ಇಲಾಖೆ ಆಡಳಿತ ನಿರ್ಲಕ್ಷಿಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗುವವರೆಗೂ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದೆ. ಹೋರಾಟದ ನೇತೃತ್ವ ವಹಿಸಿರುವ ಸಿದ್ದಲಿಂಗೇಗೌಡರು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯ ನಿರ್ದೇಶಕರಾದ ಅಪ್ಪಾಜಿ ಗೌಡರನ್ನು ತರಾಟೆಗೆತ್ತಿಕೊಂಡು, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ಹಾಗೂ ಜವಾಬ್ದಾರಿಯ ಪಾಠ ಹೇಳಿದರು. ಶಾಲೆಯ ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳಿಲ್ಲ. ಕುಡಿಯುವ ನೀರು ಕೂಡ ಇಲ್ಲ. ಹೆಣ್ಣು ಮಕ್ಕಳು ಕಲಿಯುವ ವಿದ್ಯಾಲಯದಲ್ಲಿ ಶೌಚಾಲಯವೇ ಇಲ್ಲ. ಇದೆಲ್ಲ ಸೂಕ್ಷ್ಮವಾದ ವಿಷಯವಾಗಿದ್ದು, ಇದನ್ನು ಸರ್ಕಾರಿ ಅಧಿಕಾರಿಗಳಾದವರು ತಿಳಿದಿರಬೇಕಲ್ಲವೇ? ಎಂದು ಅಪ್ಪಾಜಿ ಗೌಡರನ್ನು ತರಾಟೆಗೆತ್ತಿಕೊಂಡರು. ಹೋರಾಟದಲ್ಲಿ ಸಿದ್ದಲಿಂಗೇಗೌಡರು, ದರ್ಶನ್, ವಕೀಲರಾದ…

Read More

ಬೆಂಗಳೂರು: ಟೀಮ್‌ ಇಂಡಿಯಾದ ಮಾಜಿ ಸ್ಟಾರ್ ಕ್ರಿಕೆಟಿಗ ವಿನೋದ್ ಕಾಂಬ್ಳಿ, ಹಣಕಾಸಿನ ವಿಚಾರದಲ್ಲಿ ಸದ್ಯ ತುಂಬಾ ಕೆಟ್ಟ ಸಮಯವನ್ನು ಎದುರಿಸುತ್ತಿದ್ದಾರೆ. ಇತ್ತೀಚಿನ ಮಾಧ್ಯಮಗಳ ವರದಿ ಪ್ರಕಾರ ಕಾಂಬ್ಳಿ, ತಮ್ಮ ದೈನಂದಿನ ಜೀನವ ನಡೆಸುವ ಸಲುವಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಕ್ರಿಕೆಟಿಗರಿಗೆ ನೀಡುವ ಪಿಂಚಣಿಯನ್ನು ನೆಚ್ಚಿಕೊಂಡು ಇರುವಂತಹ ದಯನೀಯ ಸ್ಥಿತಿಗೆ ತಲುಪಿದ್ದಾರೆ. ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಬಹುದೊಡ್ಡ ಸ್ಟಾರ್‌ ಆಟಗಾರರಲ್ಲಿ ಒಬ್ಬರಾಗಿ ಕೋಟಿಗಟ್ಟಲೆ ಸಂಪಾದನೆ ಮಾಡುತ್ತಿದ್ದ ವಿನೋದ್ ಕಾಂಬ್ಳಿ, ಈಗ ದಿನಕ್ಕೆ ಕೇವಲ 1000 ರೂಪಾಯಿ ಸಂಪಾದಿಸುವ ಸ್ಥಿತಿಯಲ್ಲಿದ್ದಾರೆ. ವಿನೋದ್ ಕಾಂಬ್ಳಿ ಭಾರತ ತಂಡದ ಪರ ಆಡುವಾಗ ಬೌಲರ್‌ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಂತಹ ಆಟಗಾರ. ಕಾಂಬ್ಳಿ ಉತ್ತಮ ಬೌಲರ್‌ಗಳನ್ನು ಬಡಿದು ಬೆಂಡೆತ್ತುವವ ಸಾಮರ್ಥ್ಯ ಹೊಂದಿದ್ದ ಬ್ಯಾಟರ್‌. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯ ಕೂಡ. ಇಬ್ಬರೂ ಟೀಮ್ ಇಂಡಿಯಾಗೆ ಜೊತೆಯಾಗಿ ಪದಾರ್ಪಣೆ ಮಾಡಿದ್ದಾರೆ.ಆದರೆ ಇಂದು ಸಚಿನ್ ತೆಂಡೂಲ್ಕರ್ ದೇಶವಷ್ಟೇ ಅಲ್ಲ ವಿಶ್ವದ ಶ್ರೀಮಂತ…

Read More

ಕೊಡಗು : ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಈ ಹಿನ್ನೆಲೆ ಬೆಳೆಹಾನಿಯ ಪ್ರದೇಶವನ್ನು ವೀಕ್ಷಣೆ ಮಾಡಲು ತಿಮ್ಮಯ್ಯ ಸರ್ಕಲ್‌ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಂದಾಗ ಅವರ ಕಾರಿನ ಮೇಲೆ  ಮೊಟ್ಟೆ ಎಸೆದಿದ್ದಾರೆ. ಬೆಳಗ್ಗೆ ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಪ್ರತಿಭಟಿಸಿದರು. ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಎಸೆದು ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ ಘೋಷಣೆ ಕೂಗಿದರು. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಮಧುಗಿರಿ: ದೇಶದಲ್ಲಿ ಅಸ್ಪೃಶ್ಯರಿಗೆ ಮತದಾನದ ಹಕ್ಕನ್ನು ಕೊಟ್ಟ ಮೇಲೆಯೇ ನಮಗೆ ಬದುಕಿನಲ್ಲಿ ಭರವಸೆಯ ಬೆಳಕು ಕಂಡಿದ್ದು, ಇಂದೇ ನಮಗೆ ಸ್ವತಂತ್ರ ಬಂದ ದಿನವಾಗಿದೆ ಎಂದು ಡಾ.ಅಂಬೇಡ್ಕರ್ ಪೀಪಲ್ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅನುಭವಿಸಿದ ನೋವನ್ನು ಯಾರೂ ಕಾಣಲಾರರು . ಇಂತಹ ಮಹಾನೀಯನಿಂದಾಗಿ ದೇಶದ ಅಸಹಾಯಕರು ಮತದಾನದ ಹಕ್ಕನ್ನು ಪಡೆದ ಈ ದಿನವನ್ನು ದೇಶದ ನೈಜ ಸ್ವತಂತ್ರ ದಿನವಾಗಿ ಆಚರಿಸಲಾಗುತ್ತಿದೆ . 1932 ನೇ ಆಗಸ್ಟ್ 17ರಂದು ಬ್ರಿಟಿಷರಿಂದ ಅನುಮತಿ ಪಡೆದು ಅಸ್ಪೃಶ್ಯ ಸಮುದಾಯಕ್ಕೆ ಮತ ಹಾಕುವ ಹಕ್ಕನ್ನು ಪಡೆಯಲಾಯಿತು. ಈ ಹೋರಾಟ 1917ರಿಂದ 1932ರವರೆಗೂ ನಿರಂತರವಾಗಿ ನಡೆದಿದ್ದರಿಂದ ಇಂದೂ ನಾವೆಲ್ಲ ಮತ ಚಲಾಯಿಸುವ ತ್ತಿದ್ದೇವೆ ಎಂದರು . ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ್ ತಾಲೂಕು ಅಧ್ಯಕ್ಷ ಲಕ್ಷ್ಮೀಷತಿ ಉಪಾಧ್ಯಕ್ಷ ಬಾಲಕೃಷ್ಣ ಮುಖಂಡರಾದ ಧ್ರುವ ಕುಮಾರ್ , ವಕೀಲ ಶಿವಕುಮಾರ್ , ಜೀವಿಕ ಮಂಜು…

Read More

ಸರಗೂರು: ತಾಲ್ಲೂಕಿನ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೆ ಆಚರಣೆ ಮಾಡಿದ ವಿಚಾರ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಕರ್ನಾಟಕ ಭೀಮ ಸೇನೆ ಮತ್ತು ಪ್ರಗತಿಪರ ಸಂಘಟನೆಗಳು ಘಟನೆಯನ್ನು ಖಂಡಿಸಿವೆ. ಸ್ವಾತಂತ್ರ್ಯೋತ್ಸವದ ವೇಳೆ ಅಂಬೇಡ್ಕರ್ ಅವರ ಫೋಟೋ ಬಳಸಿ ಎಂದು ಮನವಿ ಮಾಡಿದರೆ, ನಿಮ್ಮ ಬಳಿಯಲ್ಲಿ ಸುತ್ತೋಲೆ ಇದೆಯಾ? ಎಂಬ ಉದ್ಧಟತನದ ಪ್ರಶ್ನೆಗಳನ್ನು ಸಿಬ್ಬಂದಿ ಕೇಳಿದ್ದು, ಅಂಬೇಡ್ಕರ್ ಅವರ ಬಗ್ಗೆ ಇವರಿಗೆ ಯಾಕಿಷ್ಟು ಅಸಹನೆ? ಎಂದು ಪ್ರಶ್ನಿಸಿರುವ ಹೋರಾಟಗಾರರು, ಇಂತಹವರು ಸಂವಿಧಾನದ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹರಲ್ಲ, ತಕ್ಷಣವೇ  ಕೆಲಸದಿಂದ ಕಿತ್ತು ಹಾಕಿ ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ಬೃಹತ್ ಹೋರಾಟವನ್ನು ರೂಪಿಸುತ್ತೇವೆ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ. ಘಟನೆ ಸಂಬಂಧ ಆಸ್ಪತ್ರೆಯ ಸಿಬ್ಬಂದಿ ಡಾ ಡೇವಿಸ್ ಚಾಹಲ್ ಮಾತನಾಡಿ, ನಮ್ಮ ಸಿಬ್ಬಂದಿ, ನಾವು ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೆ ಸ್ವಾತಂತ್ರ್ಯ ಆಚರಿಸಿ ತಪ್ಪು…

Read More

ತುಮಕೂರು: ದೇಶದಲ್ಲಿ ರಾಷ್ಟ್ರಪ್ರೇಮದ ಹೆಸರಿನಲ್ಲಿ ರಾಷ್ಟ್ರಪಿತ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನ ಪದೇ ಪದೇ ಅವಮಾನಿಸುತ್ತಿರುವ ಬಗ್ಗೆ ವರದಿಗಾಳಾಗ್ತಿವೆ. ಇದೀಗ ತುಮಕೂರು ಜಿಲ್ಲೆ ಮಧುಗಿರಿ ಪುರಸಭೆಯ ದಂಡಿನ ಮಾರಮ್ಮನ ಮುಂಭಾಗದಲ್ಲಿನ ಫ್ಲೆಕ್ಸ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆಯ ಫೋಟೋವನ್ನು ಗಾಂಧೀಜಿ ಪೋಟೋದ ಮೇಲೆ ಹಾಕಿ ಸಂಭ್ರಮಾಚರಣೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕಳೆದ ಆಗಸ್ಟ್ 15ರಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಧುಗಿರಿ ಪಟ್ಟಣದ ಡಿ.ಎಂ ಬಡಾವಣೆಯ ಭಗತ್ ಸಿಂಗ್ ಯೂಥ್ ಅಸೋಸಿಯೇಷನ್‌ನಿಂದ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಈ ಒಂದು ಫ್ಲೆಕ್ಸ್‌ನಲ್ಲಿ ಭಗತ್ ಸಿಂಗ್, ಸರ್ದಾರ್ ವಲ್ಲಬಭಾಯಿ ಪಟೇಲ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರ ಬೋಸ್, ಮಹಾತ್ಮ ಗಾಂಧೀಜಿ, ಲಾಲ್ ಬಹಾದ್ದೂರ್ ಶಾಸ್ತ್ರಿ, ಕಿತ್ತೂರು ರಾಣಿ ಚೆನ್ನಮ್ಮ ಜೊತೆಗೆ ನಾಥೂರಾಮ್ ಗೋಡ್ಸೆ ಪೋಟೋವನ್ನು ಹಾಕಲಾಗಿದೆ. ಫ್ಲೆಕ್ಸ್ ನಲ್ಲಿರುವ ಇಷ್ಟು ಪೋಟೋಗಳಲ್ಲಿ ಪ್ರಮುಖವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಇತರರ ಪೋಟೋಗಳನ್ನು ಕೆಳಗಡೆ ಸಾಲಿನಲ್ಲಿ ಹಾಕಿ, ಗಾಂಧೀಜಿ…

Read More

ಬೆಂಗಳೂರು : ವಿಧಾನಸೌಧದ ಆಡಳಿತ ಕೇಂದ್ರ ಎಂಎಸ್ ಬಿಲ್ಡಿಂಗನ ಸಂಪ್ ನಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸಾವನ್ನಪ್ಪಿ ಎರಡು, ಮೂರು ದಿನಗಳಾಗಿರಬಹುದು ಎನ್ನಲಾಗಿದೆ. ಕಟ್ಟಡದ ಸಂಪ್ ನಲ್ಲಿ ಶವ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಎರಡು ದಿನಗಳಿಂದ‌ ಇದೇ ನೀರನ್ನು ಎಂಎಸ್ ಬಿಲ್ಡಿಂಗ್, ಲೋಕಾಯುಕ್ತ ಸೇರಿದಂತೆ ಮತ್ತೆ ಕೆಲವು ಕಟ್ಟಡದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಬಳಸಿದ್ದಾರೆ. ಬಹುಮಹಡಿ ಕಟ್ಟಡದಲ್ಲಿನ ವಾಟರ್‌ ಟ್ಯಾಂಕ್‌ನಲ್ಲಿ ಈ ಅಪರಿಚಿತ ಶವ ಪತ್ತೆಯಾಗಿದ್ದು, ಎರಡು ದಿನಗಳ ನಂತರ ವಿಷಯ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಯಾರಾದರೂ ನೌಕರರಿರಬಹುದೇನೋ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ನೌಕರ ವರ್ಗದಲ್ಲಿ ಯಾರಾದರೂ ಎರಡು ದಿನಗಳಿಂದ ನಾಪತ್ತೆಯಾಗಿದ್ದಲ್ಲಿ, ದಯಮಾಡಿ ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಿವಮೊಗ್ಗದಲ್ಲಿ ಪ್ರಾರಂಭವಾಗಿ ಕೋಮು ಕಲಹಕ್ಕೆ ಕಾರಣವಾಗಿರುವ ಫ್ಲೆಕ್ಸ್‌ ವಿವಾದ ಇದೀಗ ತುಮಕೂರಿನಲ್ಲಿ ಬಿಗುವಿನ ವಾತಾವರಣ ಸೃಷ್ಠಿಗೆ ಕಾರಣವಾಗಿದೆ. ತುಮಕೂರು ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದ ಬಿಸಿಯೇರಿದ್ದು, ನಗರದ ಟೌನ್ ಹಾಲ್ ವೃತ್ತದಲ್ಲಿನ ಸಾವರ್ಕರ್ ಫ್ಲೆಕ್ಸ್’ಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಅಶೋಕ ರಸ್ತೆಯಲ್ಲಿ ಅಳವಡಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ನಗರದ ಟೌನ್‌ಹಾಲ್ ವೃತ್ತದಲ್ಲಿನ ಗಣಪತಿ ದೇವಸ್ಥಾನದಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದಾರೆ. ಸದರಿ ಗಣಪತಿ ದೇವಸ್ಥಾನದ ಎದುರು ದರ್ಗಾ ಇದ್ದು, ಶಾಂತಿ ಕದಡುವ ಆತಂಕ ಇದೆ‌. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿಯಿಂದಲೇ ಫ್ಲೆಕ್ಸ್ ಬಳಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಈಗಾಗಲೇ ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಉಂಟಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಸಂಭವಿಸಿದೆ. ಇದರ ಬೆನ್ನಲ್ಲೇ ತುಮಕೂರು ನಗರದಲ್ಲಿ ಕೂಡ ಫ್ಲೆಕ್ಸ್ ವಿಚಾರದಲ್ಲಿ ವಿವಾದ ಏರ್ಪಡುತ್ತಿರುವುದು ಸಾರ್ವಜನಿಕವಾಗಿ ಆತಂಕಕ್ಕೆ ಕಾರಣವಾಗಿದೆ. ಸದ್ಯ ಪೊಲೀಸರು…

Read More

ಗದಗ : ಮಲಗಿದ್ದ ತಂದೆಯ ತಲೆಗೆ ಕೊಡಲಿಯಿಂದ ಹೊಡೆದು ಸ್ವಂತ ಮಗನೇ ಹತ್ಯೆ ಮಾಡಿರುವ ಘಟನೆ ಗದಗ ತಾಲೂಕಿನ ಹುಲಕೋಟೆ ಗ್ರಾಮದಲ್ಲಿ ನಡೆದಿದೆ. ಕುಡಿದು ಗಲಾಟೆ ಮಾ ಡುತ್ತಿದ್ದ ತಂದೆಯ ವರ್ತನೆಯಿಂದ ಬೇಸತ್ತ ಮಗ ಈ ಕೃತ್ಯ ಎಸಗಿದ್ದಾನೆ. ತಂದೆಯನ್ನೇ ಕೊಲೆ ಮಾಡಿದ ಮಗನನ್ನು ವಿಜಯ್ ಚಿಕ್ಕನಟ್ಟಿ ಎಂದು ಗುರುತಿಸಲಾಗಿದೆ. ಇನ್ನು ಗಣೇಶ್ ಚಿಕ್ಕನಟ್ಟಿ ಮಗನಿಂದ ಹತನಾದ ತಂದೆ. 51 ವರ್ಷದ ಗಣೇಶ್ ಕಳೆದ ಕೆಲ ವರ್ಷದಿಂದ ಕುಡಿತದ ದಾಸನಾಗಿದ್ದ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಗಣೇಶ್, ಸಂಜೆ ಆಗುತ್ತಿದ್ದಂತೆಯೇ ಕಂಠಪೂರ್ತಿ ಕುಡಿದು ಕಿರಿಕ್ ಶುರು ಮಾಡುತ್ತಿದ್ದ. ಕುಡಿದು ಬಂದು ಹೆಂಡತಿ ಮಕ್ಕಳನ್ನ ಪೀಡಿಸೋದು ಗಣೇಶನ ನಿತ್ಯದ ಕಾಯಕವಾಗಿತ್ತು. ಇದರಿಂದ ಬೇಸತ್ತಿದ್ದ ಗಣೇಶನ ಕಿರಿಯ ಮಗ, ಊರು ಬಿಟ್ಟು ಅಕ್ಕನ ಮನೆ ಸೇರಿದ್ದ ಆದರೆ ಹಿರಿಯ ಮಗ ಊರಲ್ಲೇ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದು, ತಂದೆ ತಾಯಿಯನ್ನು ನೋಡಿಕೊಳ್ಳುತ್ತಿದ್ದ. ದಿನ ನಿತ್ಯ ಈ ರೀತಿ ಕಿರಿ ಕಿರಿ ಮಾಡುತ್ತಿದ್ದ ತಂದೆಯ ಕೃತ್ಯದಿಂದ ವಿಜಯ್…

Read More

ಮಂಕಿಪಾಕ್ಸ್ ಪ್ರಕರಣಗಳ ಬಗ್ಗೆ ಡಬ್ಲ್ಯುಎಚ್‌ಒ ಎಚ್ಚರಿಕೆ: ವಿಶ್ವದಾದ್ಯಂತ ಮಂಗನ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದುವರೆಗೆ ಮಂಗನ ಕಾಯಿಲೆ ಸೋಂಕಿತ ರೋಗಿಗಳ ಸಂಖ್ಯೆ 35000 ಕ್ಕೆ ಏರಿದೆ. ಕಳೆದ ಒಂದು ವಾರದಲ್ಲಿ 7500 ಹೊಸ ರೋಗಿಗಳು ಪತ್ತೆಯಾಗಿದೆ. ಈ ನಡುವೆ ಮನುಷ್ಯರಿಂದ ನಾಯಿಗೆ ಮಂಗನ ಕಾಯಿಲೆ ಹರಡಿರುವ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ, ಮಾನವನಿಂದ ನಾಯಿಗೆ ಮೊದಲ ಬಾರಿಗೆ ಮಂಕಿಪಾಕ್ಸ್ ಸೋಂಕು ಹರಡಿರುವ ಬಗ್ಗೆ ವರದಿ ಆಗಿದೆ. ಇದು ವಿಶ್ವದ ಮೊದಲ ಅಪರೂಪದ ಪ್ರಕರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಮಂಕಿಪಾಕ್ಸ್ ಸೋಂಕು ಮನುಷ್ಯರಿಂದ ನಾಯಿಗೆ ಹರಡುವುದು ಗಂಭೀರ ಪ್ರಕರಣ: ಸುದ್ದಿ ಸಂಸ್ಥೆ ಎಎಫ್‌ಪಿ ಪ್ರಕಾರ, ಮಾನವನಿಂದ ನಾಯಿಗೆ ವೈರಸ್ ಹರಡುವ ಪ್ರಕರಣ ಬೆಳಕಿಗೆ ಬಂದ ನಂತರ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ. ಮಂಗನ ಕಾಯಿಲೆಯಿಂದ ಬಳಲುತ್ತಿರುವ ಜನರು ಪ್ರಾಣಿಗಳ ಸಂಪರ್ಕಕ್ಕೆ ಬರದಂತೆ ಡಬ್ಲ್ಯುಎಚ್‌ಒ ಸಲಹೆ ನೀಡಿದೆ.…

Read More