Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲು ಪ್ರಮಾಣವನ್ನು ಶೇ. 15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸುವ 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಶೈಕ್ಷಣ ಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಮತ್ತು ಹುದ್ದೆಗಳಲ್ಲಿ ಮೀಸಲಾತಿ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಇಂದು ಸರ್ವಾನುಮತದ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಮಂಡಿಸಿದ ವಿಧೇಯಕಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳ ಎಲ್ಲಾ ಸದಸ್ಯರ ಒಕ್ಕೋರಲಿನ ಸಹಮತ ವ್ಯಕ್ತಪಡಿಸಿ ಸರ್ವಾನುಮತದ ಬೆಂಬಲ ಸೂಚಿಸಿದರು.ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡು ಅನುಮೋದನೆ ಪಡೆದಿದೆ ಎಂದು ಪ್ರಕಟಿಸಿದರು. ಇದಕ್ಕೂ ಮುನ್ನ ನಿಯಮ 69 ರಡಿ ನಡೆದ ಚರ್ಚೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಸದಸ್ಯರಾದ ಹೆಚ್.ಕೆ. ಪಾಟೀಲ, ಬಂಡೆಪ್ಪ ಕಾಶೆಂಪುರ, ಡಾ. ಕೆ. ಅನ್ನದಾನಿ, ಕೆ.ಎಂ. ಶಿವಲಿಂಗೇಗೌಡ,…
ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಸಚಿವ ಮಾಧುಸ್ವಾಮಿ ಉತ್ತರಿಸಿದರು. ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೇವೆ ಎಂದು ಮಾಧುಸ್ವಾಮಿ ಉತ್ತರಿಸಿದರು. ನಾವು ಯಾರಿಗೂ ಫ್ರೀ ಹ್ಯಾಂಡ್ ಕೊಟ್ಟಿಲ್ಲ, ನೀವು ಹೋಗಿ ಮಾಡ್ಕೊಂಡು ಬರಬಹುದು ಅಂತ. ಪೊಲೀಸ್ ಯಾವಾಗಲೂ ಪೊಲೀಸ್, ಮೋರಲ್ ಪೊಲೀಸ್ ಅಂತ ಒಂದು ಇರಕ್ಕಾಗಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಬಂಜಾರ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು ಆದರೆ ಇಂದಿನ ಬಿಜೆಪಿ ಸರ್ಕಾರ ಬಂಜಾರ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ನಮ್ಮ ಕರ್ನಾಟಕ ರಾಜ್ಯದ ಬಂಜಾರ ಸಮುದಾಯದ ತಾಂಡಗಳಲ್ಲಿರುವ ಅರ್ಚಕರಿಗೆ ಮಾಸಿಕ ರೂ. 10,000/- ಗಳಂತೆ ಗೌರವಧನ ನೀಡಬೇಕು ಎಂದು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ, ತೆಲಂಗಾಣ ರಾಜ್ಯ ಸರ್ಕಾರವು ಅಲ್ಲಿನ ಬಂಜಾರ ಸಮುದಾಯದವರ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡು ತಾಂಡಗಳಲ್ಲಿನ ವಿವಿಧ ದೇವಾಲಯಗಳ ಆರ್ಚಕರಿಗೆ “ಧೂಪ, ದೀಪ, ನೈವೇದ್ಯಮ್” ಯೋಜನೆ ರೂಪಿಸಿ ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಕರ್ನಾಟಕ ರಾಜ್ಯದಲ್ಲಿರುವ ಸಾವಿರಾರು ಬಂಜಾರ ತಾಂಡಾಗಳ ಆರಾಧ್ಯ ದೇವರುಗಳ ದೇವಸ್ಥಾನಗಳಲ್ಲಿ ಪೂಜೆ, ಅರ್ಚನೆ, ಭಜನೆ ಮುಂತಾದ ಧಾರ್ಮಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಆದರೆ ಇಲ್ಲಿನ ತಾಂಡಾಗಳ ಅರ್ಚಕರುಗಳು ಸೌಲಭ್ಯ ವಂಚಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಕರ್ನಾಟಕ ಸರ್ಕಾರವು…
ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಶೃಂಗೇರಿಗೆ ಅನುದಾನ ನೀಡುವಾಗ ಜೀವರಾಜ್ ಅವರ ಹೆಸರು ಉಲ್ಲೇಖಿಸಿರುವುದು ಸರಿಯಲ್ಲ. ಜೀವರಾಜ್ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಸೋತ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಒಂದು ಕೆಟ್ಟ ಸಂಪ್ರದಾಯ. ಅದು ಯಾವುದೇ ಪಕ್ಷದ ಅಭ್ಯರ್ಥಿಯಾಗಿರಲಿ. ಬಜೆಟ್ ಗೆ ಅನುಮೋದನೆ ನೀಡುವವರು ಯಾರು? ಚುನಾವಣೆಯಲ್ಲಿ ಸೋತವರು ಬಂದು ಚರ್ಚಿಸಿ ಬಜೆಟ್ ಪಾಸ್ ಮಾಡಿ ಕೊಡುತ್ತಾರ? ಸೋತವರ ಹೆಸರಿಗೆ ಅನುದಾನ ನೀಡಿ, ಅವರಿಗೆ ಜನರ ಜೊತೆ ಹೋಗಿ ಕೆಲಸ ಮಾಡಿ ಎನ್ನುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಇದನ್ನು ಪ್ರತಿಷ್ಠೆ ಮಾಡಿಕೊಳ್ಳಬಾರದು, ಇದು ಮುಂದುವರೆಲೂಬಾರದು. ಸೋತವರು ಮತ್ತೆ ಗೆದ್ದು ಬಂದು ಜನರ ಜೊತೆ ನಿಂತು ಕೆಲಸ ಮಾಡಲಿ ಎಂದು ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ…
ವಿಶ್ವಕ್ಕೆ ಭಯವನ್ನು ತೋರಿಸಲು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ರಷ್ಯಾ ಘೋಷಿಸಿದೆ. ಇದಾದ ನಂತರ ವಿಶ್ವ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರವಾಗಿ ಏರಿಕೆಯಾಗಿದೆ. ತರುವಾಯ, ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 2.94 ಡಾಲರ್ಗಳಷ್ಟು ಹೆಚ್ಚಾಗಿದೆ ಮತ್ತು $ 83.72 ಕ್ಕೆ ಮಾರಾಟವಾಗುತ್ತಿದೆ. ಕಳೆದ ತಿಂಗಳು $80 ರ ಸಮೀಪದಲ್ಲಿದ್ದ ಪೆಟ್ರೋಲ್ ಬೆಲೆಗಳು ರಷ್ಯಾದ ಘೋಷಣೆಯಿಂದಾಗಿ ಮತ್ತೆ ಏರಲು ಪ್ರಾರಂಭಿಸಿವೆ. ತಜ್ಞರ ಪ್ರಕಾರ, ಈ ಘೋಷಣೆಯಿಂದ ಭಾರತದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು. ವಿಧಾನಸಭಾ ಕಲಾಪದಲ್ಲಿ ಮೀಸಲಾತಿ ವಿಚಾರ ಚರ್ಚೆಯಾಯಿತು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನೀವು ಅವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದೀರಾ…? ಮೀಸಲಾತಿ ಹೆಚ್ಚಳದ ಬಗ್ಗೆ ಈವರೆಗೆ ಕೇಂದ್ರದ ಮೇಲೆ ಒತ್ತಡ ಹಾಕಿಲ್ಲ. ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕಿ. ಎಸ್.ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ನಮ್ಮ ಬೆಂಬಲವಿದೆ. ಕಾಂಗ್ರೆಸ್ ಪಕ್ಷ ಮೀಸಲಾತಿ ಹೆಚ್ಚಳದ ಪರ ಇದೆ ಎಂದು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಾರ್ಷಿಕ ಪರಿಶೋಧನಾ ವರದಿಯಲ್ಲಿ ಗಮನಕ್ಕೆ ಬಂದಿರುವಂತೆ ಬಿಬಿಎಂಪಿಯ ಅಧಿಕಾರಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಸಿದ್ಧವಾಗುತ್ತಿರುವ ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಹಾಗೂ ಟ್ಯಾಲಿ ಅಕೌಂಟಿಂಗ್ ಸಾಫ್ಟ್ ವೇರ್ ಅನ್ನು ಕಲಿತು ತಮ್ಮ ಅಕೌಂಟೆನ್ಸಿ ಕೌಶಲ್ಯಗಳನ್ನು ಉತ್ತಮಪಡಿಸಿಕೊಳ್ಳಲು ಉತ್ಸುಕರಾಗಿದ್ದಂತಹ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ತರಬೇತಿ ಏಜೆನ್ಸಿಯೊಂದನ್ನು ಆಯ್ಕೆ ಮಾಡುವಲ್ಲಿ ಅಗತ್ಯಕ್ಕಿಂತ ಹೆಚ್ಚು ವೇಗವನ್ನು ತೋರ್ಪಡಿಸಿರುವ ಸಂಗತಿ ಬಹಿರಂಗಗೊಂಡಿದೆ. ಈ ಪರಿಶೊಧನಾ ವರದಿಯಲ್ಲಿ ಬಿಬಿಎಂಪಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಪಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಬಿಬಿಎಂಪಿ ಆಯ್ಕೆ ಮಾಡಿರುವ ಸೇವಾ ಏಜೆನ್ಸಿ ಆಯ್ಕೆ ಪ್ರಕ್ರಿಯೆಯಲ್ಲಿ ಗಂಭೀರ ಲೋಪವೊಂದು ಬಹಿರಂಗಗೊಂಡಿದೆ. ಸಿಇಟಿ ಹಾಗೂ ಅಕೌಂಟಿಂಗ್ ಸಾಫ್ಟ್ ವೇರ್ ಟ್ಯಾಲಿಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸಂಬಂಧಪಟ್ಟ ವಿಷಯದಲ್ಲಿ ಪರಿಣಿತಿಯನ್ನು ಹೊಂದಿರುವ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡುವ ಬದಲಿಗೆ, ಬಿಬಿಎಂಪಿಯು ಪೇಪರ್ ಪ್ಲೇಟುಗಳನ್ನು ತಯಾರಿಸಿ ವಿತರಣೆ ಮಾಡುವ ಎಸ್ ಆರ್ ಇಂಡಸ್ಟ್ರಿಸ್ಗೆ ಆ ಜವಾಬ್ದಾರಿಯನ್ನು ವಹಿಸಿರುವ ಸಂಗತಿ ಪರಿಶೋಧನಾ ವರದಿಯಲ್ಲಿ…
ಚಾಮರಾಜನಗರ: ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆದ ಅಚಾನಕ್ ಘಟನೆಯಿಂದ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಬಿಸಲವಾಡಿ ಗ್ರಾಮದಲ್ಲಿ ನಡೆಯುತ್ತಿರುವ ಕ್ಚಾರಿಯೊಂದರಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಬಂಧಿಸಿದ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಿಸಲವಾಡಿ ಗ್ರಾಮದಲ್ಲಿರುವ ಭಾಸ್ಕರ್ ಎಂಬುವವರ ಕ್ವಾರಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕ್ವಾರಿಯಲ್ಲಿ ಕೆಲಸ ಮಾಡುತ್ತಿರುವಾಗ ಸಡಿಲವಾದ್ದರಿಂದ ಕಲ್ಲು ಕುಸಿದು ಈ ಘಟನೆ ನಡೆದಿದೆ. ಬಂಡೆಯ ಮೇಲುಗಡೆ ನಿಂತು ಕುಳಿ ತೆಗೆಯುವಾಗ ಈ ಘಟನೆ ಸಂಭವಿಸಿದ್ದು ಮೃತರು ಹೊರರಾಜ್ಯದವರೊ ಅಥವಾ ಸ್ಥಳೀಯರೊ ಎಂಬುದನ್ನ ಇಲಾಖೆ ಖಾತ್ರಿಪಡಿಸಬೇಕಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇವಸ್ಥಾನಗಳ ವಾರ್ಷಿಕ ನಿರ್ವಹಣಾ ವೆಚ್ಚವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಧಾರ್ಮಿಕ ದತ್ತಿ,ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಲಿಂಗಸುಗೂರು ಶಾಸಕ ಡಿ.ಎಸ್. ಹೂಲಗೇರಿಯವರ ಪರವಾಗಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು, ಮುಜರಾಯಿ ಇಲಾಖೆಗೆ ಅನುದಾನ ಬಹಳ ಕಡಿಮೆಯಿದ್ದು, ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಸೇರಿದಂತೆ ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದರು. … ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಮಾತನಾಡಿ, ಮುಜರಾಯಿ ದೇವಸ್ಥಾನಗಳಿಗೆ 50 ಸಾವಿರ ರೂ., 1 ಲಕ್ಷ ರೂ., 2 ಲಕ್ಷ ರೂ.ಹೀಗೆ ಕನಿಷ್ಠ ಪ್ರಮಾಣದ ಅನುದಾನ ನೀಡಿದರೆ ನಿರ್ವಹಣೆ ಮಾಡುವುದು ಹೇಗೆ?, ವಾರ್ಷಿಕ ಅನುದಾನವನ್ನು ಕನಿಷ್ಟ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು.ಪ್ರಶ್ನೆಗೆ ಒದಗಿಸಿರುವ ಲಿಖಿತ ಉತ್ತರದಲ್ಲಿ ದೇವಸ್ಥಾನಗಳ ಹೆಸರು ಹಾಗೂ ಮಾಹಿತಿ ಆಂಗ್ಲಭಾಷೆಯಲ್ಲಿದೆ. ಗ್ರಾಮಗಳ…
ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸೈಬರ್ ಕ್ರೈಂ ವಂಚನೆಗೊಳಗಾದವರ ನೆರವಿಗಾಗಿ ಸರ್ಕಾರವು ಬೆಂಗಳೂರು ನಗರದಲ್ಲಿ 8 ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ವಿಶೇಷ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆದು, ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಸೈಬರ್ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸೋಮವಾರ ವಿಧಾನ ಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪಿ.ಆರ್.ರಮೇಶ್ ಹಾಗೂ ಟಿ.ಎ.ಶರವಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.ರಾಜ್ಯದಲ್ಲಿ ಸೈಬರ್ ಅಪರಾಧ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಸೈಬರ್ ಸೆಲ್ ಆಧುನೀಕರಣಗೊಳಿಸಲಾಗಿದೆ. ಪೊಲೀಸರಿಗೆ ಆಧುನಿಕ ತರಬೇತಿ ನೀಡಲು ಸಿ.ಐ.ಡಿ ಘಟಕದಲ್ಲಿ ವಿಶೇಷ ತರಬೇತಿ ವಿಭಾಗವನ್ನು ಸ್ಥಾಪಿಸಲಾಗಿದೆ. ಒಟ್ಟು 3657 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ, ಸರ್ಕಾರಿ ಅಯೋಜಕರು, ಇನ್ನಿತರೆ ಕಾನೂನು ಜಾರಿ ಸಂಸ್ಥೆಗಳಿಗೆ ತರಬೇತಿ ನೀಡಲಾಗಿದೆ. ರಾಜ್ಯದ ಗೃಹ ಇಲಾಖೆ ಗುಜರಾತಿನ ಅಹಮದಬಾದ್ ವಿಧಿ ವಿಜ್ಞಾನ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅಲ್ಲಿ ರಾಜ್ಯದ ಆಸಕ್ತ…