Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ಬೆಂಗಳೂರು : ಬೆಂಗಳೂರು -ಪುಣೆ ರಸ್ತೆಯು 841 ಕಿ.ಮೀ. ಅಂತರ ಹೊಂದಿದೆ. ಈ ಅಂತರ ಕ್ರಮಿಸಲು 14 ರಿಂದ 15 ಗಂಟೆ ಪ್ರಯಾಣ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಎವರ್ ಗ್ರೀನ್ ಕಾರಿಡಾರ್ ಹೊಸ ಯೋಜನೆಯು ಎರಡು ನಗರಗಳ ನಡುವೆ 95 ಕಿ.ಮೀ. ಅಂತರ ಕಡಿಮೆ ಮಾಡಲಿರುವುದರ ಜತೆಗೆ 3ರಿಂದ 4 ಗಂಟೆ ಪ್ರಯಾಣದ ಅವಧಿ ಕಡಿತ ಆಗಲಿದೆ. ಸದ್ಯ ಸಿದ್ಧಗೊಂಡಿರುವ ಡಿಪಿಆರ್ ಪ್ರಕಾರ ರಾಜ್ಯದಲ್ಲಿ 458 ಕಿ.ಮೀ. ಉದ್ದ ಹೆದ್ದಾರಿ ಇರಲಿದೆ. ಹಾಲಿ ಬೆಂಗಳೂರು-ಪುಣೆ ರಸ್ತೆಯು 841 ಕಿ.ಮೀ. ಅಂತರ ಕಾರಿಡಾರ್ ನಿರ್ಮಾಣದ ನಂತರ 95 ಕಿ.ಮೀ. ಅಂತರ ಕಡಿಮೆ ಆಗಲಿದೆ. ಕರ್ನಾಟಕದ 9 ಜಿಲ್ಲೆಗಳಲ್ಲಿ ಹಾದು ಹೋಗಲಿರುವ ಹೆದ್ದಾರಿ 2023ರ ಆರಂಭದಲ್ಲಿ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ. ಗ್ರೀನ್ ಕಾರಿಡಾರ್ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವ ಪುಣೆ-ಬೆಂಗಳೂರು ಎಕ್ಸ್ಪ್ರೆಸ್ ಷಟ್ಪಥ ಹೆದ್ದಾರಿ ಯೋಜನೆ, ಕೊಪ್ಪಳ ಜಿಲ್ಲೆಯ ಮೂಲಕ ಹಾದು ಹೋಗಲಿದ್ದು, ಈ ಭಾಗದ ಆರ್ಥಿಕ ಅಭಿವೃದ್ಧಿಗೆ ಹೊಸ ಭರವಸೆ ಮೂಡಿಸಿದೆ.…
ತಿಪಟೂರು: ನಿರಂತರ ಗೊಂದಲಮಯ ನಿರ್ಧಾರಗಳ ಮೂಲಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ಕಾರಣವಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡಲೇ ರಾಜೀನಾಮೆ ನೀಡಬೇಕೆಂದು ತಿಪಟೂರಿನ ಕಾಂಗ್ರೆಸ್ ಮುಖಂಡ ಶಶಿಧರ್ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮಕ್ಕಳ ಶಿಕ್ಷಣದ ಹಕ್ಕುಗಳನ್ನು ಇಂದಿನ ಸರ್ಕಾರ ದ ಜನ ವಿರೋಧಿ ನೀತಿ ಕಿತ್ತುಕೊಳ್ಳುತ್ತಿದೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಹದಗೆಡಿಸುವಲ್ಲಿ ಪ್ರಮುಖ ಪಾತ್ರಧಾರಿ ಬಿ.ಸಿ.ನಾಗೇಶ್ ತಿಪಟೂರು ಮರ್ಯಾದೆ ಕಳೆಯದೆ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಶಶಿಧರ್ ಆಗ್ರಹಿಸಿದರು. ಇತ್ತೀಚೆಗಷ್ಟೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶುಲ್ಕ ವಸೂಲಿಗೆ ಸುತ್ತೋಲೆ ಹೊರಡಿಸಿದ್ದು, ಮಕ್ಕಳಿಗೆ ಕೊಡುತ್ತಿದ್ದ ಸೈಕಲ್ ಗಳನ್ನು ನಿಲ್ಲಿಸಿದ್ದು, ಬಿ.ಸಿ.ನಾಗೇಶ್ ಸಚಿವರಾದ ನಂತರ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಅವರು ಆರೋಪಿಸಿದರು. ಒಟ್ಟಾರೆ ಹೇಳುವುದಾದರೆ ತಿಪಟೂರಿನ ಮಾನ ಮರ್ಯಾದೆ ಕಳೆಯದೆ ಕೂಡಲೇ ರಾಜೀನಾಮೆ ಕೊಡಬೇಕೆಂದು ಅಗ್ರಹಿಸಿದರು. ವರದಿ: ಆನಂದ್, ತಿಪಟೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಕೊರಟಗೆರೆ: ನವೆಂಬರ್ 1 ರಂದು ಕೊರಟಗೆರೆ ತಾಲೂಕಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲು ಆಯ್ಕೆ ಸಮಿತಿ ಸಭೆ ಸೇರಿ, ತಹಶೀಲ್ದಾರ್ ಮಾರ್ಗದರ್ಶನದಲ್ಲಿ 8 ವಿವಿಧ ಕ್ಷೇತ್ರಗಳಿಂದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿದೆ. ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾರ್ಗದರ್ಶನದಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಿದ್ದು, ಸಮಿತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ದೊಡ್ಡಸಿದ್ದಪ್ಪ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ 29 ಅರ್ಜಿಗಳಲ್ಲಿ ಆಯ್ಕೆ ಸಮಿತಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿತು. ಆಯ್ಕೆಯಾದ ಸಾಧಕರು: ಕೃಷಿ ಕ್ಷೇತ್ರದಿಂದ ಸಾವಯವ ಕೃಷಿಕ ತಾಲೂಕಿನ ಚನ್ನರಾಯನ ದುರ್ಗಾ ಹೋಬಳಿಯ ಬರಕ ಗ್ರಾಮದ ದೊಡ್ಡಯ್ಯ ಬಿನ್ ವೀರಣ, ಹೊಳವನಹಳ್ಳಿ ಹೋಬಳಿಯ ಚಿಕ್ಕನಹಳ್ಳಿಯ ಶಿವಣ್ಣ, ಸರ್ಕಾರಿ ನೌಕರರ ಕ್ಷೇತ್ರದಿಂದ ಕನ್ನಡ ಶಿಕ್ಷಕರಾದ ಬುಕ್ಕಾಪಟ್ಟಣ ಕಾಂತರಾಜು ಬಿನ್ ರಾಮಯ್ಯ, ಕನ್ನಡ ಪರ ಹೋರಾಟ ಕ್ಷೇತ್ರದಿಂದ ಕೊರಟಗೆರೆ ಪಟ್ಟಣದ ಬಿ.ಎಸ್.ಪ್ರಸನ್ನಕುಮಾರ್ ಬಿನ್…
ಭಾರತೀಯ ಜನತಾ ಪಕ್ಷದ ಸರ್ಕಾರ ಭ್ರಷ್ಟಾಚಾರದ ಮೂಲಕ ಶಾಸಕರನ್ನು ಖರೀದಿಸಿ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದೆ, ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಮ್ಮ ಪಕ್ಷದ ಹಾಗೂ ಜೆಡಿಎಸ್ ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಬಿಜೆಪಿ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಇಂದು ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ಈ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರು ಲಿಖಿತವಾಗಿ ಪತ್ರ ಬರೆದು ಪ್ರಧಾನಿಗಳಿಗೆ ಹೇಳಿದ್ದಾರೆ. ಇದೇ ವಿಚಾರವನ್ನು ನಾವು ಬೆಳಗಾವಿ ಮತ್ತು ಬೆಂಗಳೂರಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲು ನಿಲುವಳಿ ಸೂಚನೆಗೆ ಅವಕಾಶ ಕೇಳಿದರೂ ಕೂಡ ಸರ್ಕಾರ ಸಭಾಧ್ಯಕ್ಷರ ಮೇಲೆ ಒತ್ತಡ ಹಾಕಿ ಅವಕಾಶ ಸಿಗದಂತೆ ಮಾಡಿತು ಎಂದರು. ಬಸವರಾಜ ಬೊಮ್ಮಾಯಿ ಅವರು ದಾಖಲಾತಿ ನೀಡಿ ಎಂದು ನಮಗೆ ಕೇಳುವ ಮೂಲಕ…
ಚಿತ್ರದುರ್ಗ: ಹೊಸದುರ್ಗ ಮಾಜಿ ಶಾಸಕರು ವಾಣಿ ವಿಲಾಸ ಸಾಗರ ಅಣೆಕಟ್ಟೆಯ ಕೋಡಿಯನ್ನು 124 ಅಡಿಗೆ ಇಳಿಸುವ ಬಗ್ಗೆ ಮಾತನಾಡಿದ್ದು ಖಂಡನೀಯ, ವಾಣಿ ವಿಳಾಸ ಸಾಗರ ನಮ್ಮ ಜೀವನಾಡಿ ಯಾವುದೇ ಕಾರಣಕ್ಕೂ ಕೋಡಿ ಇಳಿಸಲು ಬಿಡುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಬ್ಯಾಡರಹಳ್ಳಿ ಶಿವಕುಮಾರ್ ಹೇಳಿದರು. ಹೊಸದುರ್ಗದ ಮಾಜಿ ಶಾಸಕರಾದ ಬಿ.ಜಿ.ಗೋವಿಂದಪ್ಪನವರು ವಾಣಿ ವಿಲಾಸ ಸಾಗರ ಅಣೆಕಟ್ಟೆ ಕೋಡಿ ಇಳಿಸುವ ವಿಚಾರವಾಗಿ ನೀಡಿದ ಹೇಳಿಕೆ ವಿಚಾರವಾಗಿ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿನ ವಾಣಿ ವಿಲಾಸ ಸಾಗರದ ಅಚ್ಚುಕಟ್ಟು ಪ್ರದೇಶದ ಧರ್ಮಪುರ ಹೋಬಳಿಯ ತೊರೆ ಓಬೇನಹಳ್ಳಿ, ಬಿದರಕೆರೆ, ಅಂಬಲಗೆರೆ, ಬ್ಯಾಡರಹಳ್ಳಿ, ಐನಾಳ್ಳಿ , ಗ್ರಾಮದ ರೈತರು ತೊರೆ ಓಬೇನಹಳ್ಳಿ ವೇದಾವತಿ ನದಿ ದಂಡೆಯ ಮೇಲಿರುವ ಈಶ್ವರ ದೇವಸ್ಥಾನದ ಸಮೀಪ ಸಭೆ ಸೇರಿ ಖಂಡನೆ ವ್ಯಕ್ತಪಡಿಸಿದರು. ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಬ್ಯಾಡರಹಳ್ಳಿ ಶಿವಕುಮಾರ್, ವಿದೇಶ ಪ್ರವಾಸದಲ್ಲಿರುವ ಹಾಲಿ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ್ ರವರು ಪತ್ರಿಕೆ ಹೇಳಿಕೆ ನೀಡಿ ಯಾವುದೇ ಕಾರಣಕ್ಕೂ…
ಬೆಂಗಳೂರು: ನವೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ (ಜಿಐಎಂ) ರಾಜ್ಯ ಸರ್ಕಾರ 5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕುವ ವಿಶ್ವಾಸವಿದೆ ಕರ್ನಾಟಕ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹೂಡಿಕೆಯು ಸುಮಾರು ಐದು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಗುರಿಯನ್ನು ತಲುಪುವ ಮತ್ತು ಇನ್ನೂ ಉತ್ತಮವಾಗಿ ಮಾಡುವ ವಿಶ್ವಾಸ ನಮಗಿದೆ ಎಂದು ಅವರು ತಿಳಿಸಿದ್ದಾರೆ. GIM ನ ಕೊನೆಯ ಆವೃತ್ತಿಯ ನಂತರ ಕೇವಲ 27 ಪ್ರತಿಶತಕ್ಕೆ ಹೋಲಿಸಿದರೆ 75 ಪ್ರತಿಶತಕ್ಕಿಂತಲೂ ಹೆಚ್ಚು ಉತ್ತಮವಾದ ಪರಿವರ್ತನೆ ಅನುಪಾತ, ಹೂಡಿಕೆ ಪ್ರಸ್ತಾಪಗಳ ಸಾಕ್ಷಾತ್ಕಾರದ ಬಗ್ಗೆ ಸರ್ಕಾರವು ಭರವಸೆ ಹೊಂದಿದೆ ಎಂದರು. ಮೊದಲಿನಂತಲ್ಲದೆ, ಶೃಂಗಸಭೆಯ ಸಮಯದಲ್ಲಿ ಎಂಒಯುಗಳನ್ನು ನೇರವಾಗಿ ಸಹಿ ಮಾಡಲಾಗುವುದಿಲ್ಲ. ಹೂಡಿಕೆ ಪ್ರಸ್ತಾಪಗಳ ಬಗ್ಗೆ ವಿವರವಾದ ಚರ್ಚೆಗಳ ನಂತರ ಮತ್ತು ಅಗತ್ಯ ಅನುಮತಿಗಳನ್ನು ನೀಡಿದ ನಂತರ ಈ ಪ್ರಕ್ರಿಯೆ ನಡೆಯುತ್ತದೆ ಎಂದು ನಿರಾಣಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕರುನಾಡ ವಿಜಯ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಅಧ್ಯಕ್ಷರಾದ ಎಚ್.ಎಸ್. ಸುರೇಶ್ ಅಧ್ಯಕ್ಷತೆಯಲ್ಲಿ ಆಹ್ವಾನ ಪತ್ರಿಕೆ ಬಿತ್ತಿ ಚಿತ್ರ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಯಿಂದ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎಸ್.ಸುರೇಶ್, ನವೆಂಬರ್ 28 2022ನೇ ಸೋಮವಾರ ಪಟ್ಟಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಸಂಘಟನೆಯ ವತಿಯಿಂದ ನಡೆಸಲಾಗುವುದು ಎಂದು ತಿಳಿಸಿದರು. ಧ್ವಜಾರೋಹಣವನ್ನು ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪಾಲ್ ಎನ್. ನಾಯಕ್ , ಹಾಗೂ ಪೊಲೀಸ್ ಉಪನಿರೀಕ್ಷಕರಾದ ಕೇಶವಮೂರ್ತಿ ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರುನಾಡ ವಿಜಯ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಹೆಚ್. ಎನ್. ದೀಪಕ್ ವಹಿಸಲಿದ್ದಾರೆ., ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಮಸಾಲ ಜಯರಾಮ್ ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ 28.11.2022ನೇ ಸೋಮವಾರದಂದು ಉಚಿತ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ನಮ್ಮ ತಾಲೂಕಿನ ಅತಿ ಕಿರಿಯ ವಯಸ್ಸಿನಲ್ಲಿಯೇ ತನ್ನ ಅಂಗಾಂಗಗಳನ್ನು ದಾನ ಮಾಡಿ ಇಂದಿನ ಯುವ…
ತಿಪಟೂರು: ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆಗಾಗಿ ರಾಜ್ಯಾದ್ಯಂತ ಎಲ್ಲಾ ಗ್ರಾಮಗಳಿಂದಲು ಮೃತ್ತಿಕೆ ಸಂಗ್ರಹ ಕಾರ್ಯನಡೆಯುತ್ತಿದೆ. ಇದೇ ವೇಳೆ ಬಿಜೆಪಿಯು ಈ ಕಾರ್ಯಕ್ರಮದಲ್ಲಿಯೂ ರಾಜಕೀಯ ಲಾಭ ಮಾಡಲು ಹೊರಟಿದೆ ಎಂದು ಆರೋಪಿಸಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಚಿಕ್ಕಹೊನ್ನವಳ್ಳಿ ಗ್ರಾಮದಲ್ಲಿ ರಥವನ್ನು ತಡೆದ ಸಾರ್ವಜನಿಕರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗ್ರಾಮದೊಳಗೆ ಬರದಂತೆ ತಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲ್ಲೂಕಿನಾದ್ಯಂತ ಸೂಸೂತ್ರವಾಗಿ ನಡೆಯುತ್ತಿದ್ದ ಮೃತಿಕೆ ಸಂಗ್ರಹವು ಸಚಿವರ ಉಪಸ್ಥಿತಿಯಲ್ಲಿಯೇ ಜರುಗುತ್ತಿತ್ತು. ಆದರೆ ಚಿಕ್ಕಹೊನ್ನವಳ್ಳಿ ಗ್ರಾಮದಲ್ಲಿ ಈ ರಥಯಾತ್ರೆಯಲ್ಲಿ ಒಕ್ಕಲಿಗರ ಸ್ವಾಮೀಜಿಗಳಾದ ಶ್ರೀಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು, ಶ್ರೀಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಯಾಕೆ ಇಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಇನ್ನೂ ಮಾಜಿ ಸಿಎಂ ಯಡಿಯೂರಪ್ಪನವರ ಚಿತ್ರವನ್ನು ಬಳಸಿ ಅದರಲ್ಲಿ ನಮಗೆ ಯಾವುದೇ ಅಭ್ಯಂತರವಿಲ್ಲ. ಆದರೆ, ಒಕ್ಕಲಿಗರ ನಾಯಕರು, ಹಿರಿಯರೂ, ಮಾಜಿ ಪ್ರಧಾನಿಗಳೂ ಆಗಿರುವ ದೇವೇಗೌಡರ ಚಿತ್ರವನ್ನು ಯಾಕೆ ಬಳಸಿಲ್ಲ? ಎಂದು ಪ್ರಶ್ನಿಸಿದರು. ಕೆಂಪೇಗೌಡರ…
ಬೆಂಗಳೂರು ಮಹಾನಗರವನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನರಿಂದ ಸೆಸ್ (ತೆರಿಗೆ) ರೂಪದಲ್ಲಿ ಹಣ ಸಂಗ್ರಹಿಸಿತು. ಆದರೆ ನಗರದಲ್ಲಿ ಭಿಕ್ಷುಕರ ಪುನರ್ವಸತಿ ಏನೂ ಸುಧಾರಿಸಿಲ್ಲ. ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಜನರಿಂದ ತೆರಿಗೆ ರೂಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ನಗರದಲ್ಲಿರುವ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಆದರೆ ಈಗಲೂ ನಗರದಲ್ಲಿ ಎಲ್ಲೆಂದರಲ್ಲಿ ಭಿಕ್ಷುಕರು ಕಂಡು ಬರುತ್ತಿದ್ದಾರೆ. ಹಾಗಾದರೆ ಜನರಿಂದ ಸಂಗ್ರಹಿಸಿದ ತೆರಿಗೆ ಹಣ ಎಲ್ಲಿ ಹೋಯಿತು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಇತ್ತೀಚೆಗೆ ವಿಧಾನ ಪರಿಷತ್ ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಭಿಕ್ಷಾಟನಾ ನಿರ್ಮೂಲನಾ ತೆರಿಗೆ ರೂಪದಲ್ಲಿ ರಾಜ್ಯದ 10 ಮುನಿಸಿಪಲ್ ನಿಗಮಗಳಿಂದ ಒಟ್ಟು ರೂ. 437 ಕೋಟಿ ಸಂಗ್ರಹಿವಾಗಿರುವುದಾಗಿ ತಿಳಿಸಿದರು. ಈ ಪೈಕಿ ಬೆಂಗಳೂರು ಮಹಾನಗರ ಸಿಂಹಪಾಲು ಅನ್ನು ಹೊಂದಿದೆ. ಅಂದರೆ ಬೆಂಗಳೂರಿಗರಿಂದಲೇ ಬರೋಬ್ಬರಿ ರೂ.309 ಕೋಟಿ ಭಿಕ್ಷಾಟನಾ ನಿರ್ಮೂಲನಾ…
ನಟ ಧನಂಜಯ್ ಬೆಂಬಲಕ್ಕೆ ನೀನಾಸಂ ಸತೀಶ್ ನಿಂತಿದ್ದಾರೆ. ‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ ಕಲೆಗೆ ಅಪಮಾನ ಮಾಡಲಾಗಿದೆ ಎಂಬ ವಿಚಾರ ವಿವಾದಕ್ಕೀಡಾದ ಬೆನ್ನಲ್ಲೆ ಸಾಕಷ್ಟು ಮಂದಿ ನಟ-ನಟಿಯರು ಡಾಲಿ ಬೆಂಬಲಿಕ್ಕೆ ನಿಂತಿದ್ದಾರೆ. ಇದೀಗ ನಿನಾಸಂ ಸತೀಶ್ ಬೆಂಬಲ ನೀಡಿದ್ದಾರೆ. ಧನಂಜಯ್ ನನ್ನ ಗೆಳೆಯ, ಅವನ ಎಲ್ಲ ವಿಚಾರಗಳ ಜೊತೆ ಮತ್ತು ಮಾನವೀಯತೆ ಜೊತೆ ನಾನಿದ್ಡೇನೆ ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ನನ್ನಂತೆ ಊರು ಬಿಟ್ಟು ಬ್ಯಾಗು ಹಿಡಿದು ಬಂದವನು, ಸುಮ್ಮನೆ ಸಣ್ಣ ಕಾರಣ ಹಿಡಿದು ಅವನನ್ನು ತೇಜೊವಧೆ ಮಾಡುವ ಗೆಳೆಯರೆ, ನೀವು ನಮ್ಮ ಏಳಿಗೆಯನ್ನು ಬಯಸಿದವರೇ. ವೈಷಮ್ಯ ಬಿಡಿ’ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz