Author: admin

ಕೊರಟಗೆರೆ: ತಾಲ್ಲೂಕು ಕಚೇರಿ ಹತ್ತಿರದ ಎಸ್‌ ಬಿಐ ಬ್ಯಾಂಕ್ ಪಕ್ಕದಲ್ಲಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅನಿಲ್ ಕುಮಾರ್ ನಿರ್ಮಿಸಿರುವ ನೂತನ ಕಟ್ಟಡವನ್ನು ಸಂಸದ ಜಿ.ಎಸ್ ಬಸವರಾಜು  ಶುಕ್ರವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಕ್ಷೇತ್ರ ಅಭಿವೃದ್ಧಿಗೆ ಸಂಬಂಧಪಟ್ಟಂತಹ ವಿಷಯವನ್ನು ಚರ್ಚಿಸಲು ಸೂಕ್ತ ಕಟ್ಟಡವಿರಲಿಲ್ಲ, ನಿಜಕ್ಕೂ ಇಂದು ಸುದಿನ ಎಂದೇ ಹೇಳಬಹುದ. ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿ ಅನಿಲ್‌ ಕುಮಾರ್ ಮತ್ತು ಕಾರ್ಯಕರ್ತರು ಸೇರಿ ನೂತನ ಕಟ್ಟದ ನಿರ್ಮಿಸಿರುವುದು ನಿಜಕ್ಕೂ ಸಂತಸದ ವಿಷಯ ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಅನಿಲ್‌ಕುಮಾರ್ ಮಾತನಾಡಿ, ಕೊರಟಗೆರೆ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಸರ್ಕಾರದ ಪ್ರತಿಯೊಂದು ಸೌಲಭ್ಯವು ಜನರಿಗೆ ನೇರವಾಗಿ ಸಿಗುವಂತೆ ಮಾಡುವ ದೃಷ್ಟಿಯಿಂದ ಪಕ್ಷದ ಕಾರ್ಯಕರ್ತರೊಂದಿಗೆ ನೂತನ ಕಟ್ಟಡವನ್ನ  ನಿರ್ಮಿಸಿದೆ ಎಂದು ಹೇಳಿದರು. ಈ ವೇಳೆ ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷ ಪವನ್‌…

Read More

ಚಿತ್ರದುರ್ಗ: ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ಅಂಗವಾಗಿ ಅಕ್ಟೋಬರ್  29 ರಿಂದ  ನಾಲ್ಕು ದಿನಗಳವರೆಗೆ ಜೆಜೆ ಹಟ್ಟಿ ಬಳಗದ ವತಿಯಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ತಂಡದಲ್ಲಿ ಸುಮಾರು 20 ತಂಡಗಳು ಭಾಗವಹಿಸಲಿದ್ದು, ಎಲ್ಲ ತಂಡದ ಆಟಗಾರರಿಗೆ ಪುನೀತ್ ರಾಜಕುಮಾರ್ ಭಾವಚಿತ್ರ ಇರುವ ಟೀ ಶರ್ಟ್ ಅನ್ನು ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಿ.ಎಸ್.ಅನಿತ್ ಕುಮಾರ್ ಹಾಗೂ ನಗರಸಭೆ ಸದಸ್ಯರಾದ ಸೈಯದ್ ನಸ್ರುಲ್ಲಾ ಹಾಗೂ ಜೈಲುದ್ದೀನ್ ತಂಡದ ಆಟಗಾರರಾದ ಸ್ವಾಮಿ, ರಂಗಸ್ವಾಮಿ, ಮಲ್ಲಿಕಾರ್ಜುನ್, ರೋಹಿತ್ ಶಶಿ, ಸುಪ್ರೀತ್ ನೆಲ್ಸನ್ ಮಂಡೇಲಾ, ಹೊಯ್ಸಳ ಮತ್ತು ಎಲ್ಲ ತಂಡದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್., ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಿರಿಯೂರು:  ಪುನೀತ್ ರಾಜ್ ಕುಮಾರ್ ಅವರ ಸಾಕ್ಷ್ಯ ಚಿತ್ರ ಗಂಧದ ಗುಡಿ ಚಿತ್ರ ನಂಜುಡೇಶ್ವರ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿದೆ. ಆದರೆ ಕಾಂತಾರ ಚಿತ್ರ ಕೂಡ ಇದೇ ಸಂದರ್ಭದಲ್ಲಿ ಇದೇ ಟಾಕಿಸ್ ನಲ್ಲಿ ಪ್ರದರ್ಶನವಾಗುತ್ತಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ದಿನದಲ್ಲಿ ಒಟ್ಟು ನಾಲ್ಕು ಶೋಗಳು ಪ್ರದರ್ಶನವಾಗುತ್ತಿವೆ. ಈ ಪೈಕಿ ಎರಡು ಶೋ ಕಾಂತಾರ ಚಿತ್ರ ಪ್ರದರ್ಶನಗೊಳ್ಳಲಿದ್ದು, 2 ಶೋ ಗಂಧದ ಗುಡಿ ಚಿತ್ರ ಪ್ರದರ್ಶನಗೊಳಿಸಲು ಟಾಕಿಸ್ ಮಾಲಕರು ನಿರ್ಧರಿಸಿದ್ದಾರೆ.  ಆದರೆ, ಇದರ ವಿರುದ್ಧ ಜಯ ಕರ್ನಾಟಕ ರಕ್ಷಣಾ ಸೇನೆ, ಹಾಗೂ ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಥಿಯೇಟರ್ ಮಾಲೀಕರ ಒಂದು ಕುತಂತ್ರದಿಂದ ಅಪ್ಪು ಕೊನೆಯ ಚಿತ್ರಕ್ಕೆ ಸಮಸ್ಯೆಯಾಗಿದೆ. ನಂಜುಂಡೇಶ್ವರ ಚಿತ್ರಮಂದಿರದಲ್ಲಿ ಕಾಂತಾರ ಚಲನ ಚಿತ್ರವು ಈಗ ನಡೆಯುತ್ತಿದ್ದು ಎರಡು ಶೋ ಕಾಂತಾರ ಹಾಗೂ ಎರಡು ಶೋ ಗಂಧದ ಗುಡಿ ಸಿನಿಮಾ ನಡೆಸುವುದಾಗಿ  ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದ ಬೇರೆ ಯಾವುದಾದರೂ  ಚಿತ್ರಮಂದಿರಕ್ಕೆ ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಲನಚಿತ್ರ ಕೊಟ್ಟು…

Read More

ರಾಜ್ಯದಲ್ಲಿ ಸರ್ಕಾರವೇ ಇಲ್ಲ. 34 ಸಚಿವರಲ್ಲಿ 26 ಸಚಿವರಿದ್ದಾರೆ. ಬೊಮ್ಮಾಯಿಯವರೇ 8 ಖಾತೆಗಳನ್ನು ಇಟ್ಟುಕೊಂಡಿದ್ದು, ಯಾವುದಕ್ಕೂ ಸರಿಯಾಗಿ ನ್ಯಾಯ ಒಗದಿಸುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಸಚಿವಾಲಯಗಳು ಖಾಲಿ ಇವೆ. ಬೊಮ್ಮಾಯಿ ಸಿಎಂ ಆದ ಮೇಲೆ 12 ಖಾತೆಗಳು ಅವರ ಬಳಿಯೇ ಇವೆ. 37 ಇಲಾಖೆಗಳನ್ನು ಸಿಎಂ ಸೇರಿ 5 ಮಂದಿ ಸಚಿವರು ಮಾತ್ರ ನಿರ್ವಹಿಸುತ್ತಿದ್ದಾರೆ. ಯಾವ ಇಲಾಖೆಗಳೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದು ಕರ್ನಾಟಕದ ದುರಂತ ಎಂದು ಕಿಡಿ ಕಾರಿದರು. ಸರ್ಕಾರ ಹೈಕೋರ್ಟ್‌ ಗೆ ಸಲ್ಲಿಸಿರುವ ಅಫಿಡವಿಟ್‌ ನಲ್ಲಿ ಬೆಂಗಳೂರಿನಲ್ಲಿ 2ಸಾವಿರ ಕಿ.ಮೀ ರಸ್ತೆಯಿದೆ. ಇದರಲ್ಲಿ ೩೩ ಸಾವಿರ ಗುಂಡಿಗಳಿವೆ, ೧೦ ಸಾವಿರ ಮುಚ್ಚಿದ್ದೇವೆ. ಇದಕ್ಕೆ ೮೦೦ ಕೋಟಿ ಖರ್ಚಾಗಿದೆ ಎಂದು ತಿಳಿಸಿದೆ. ಹೊಸ ರಸ್ತೆ ನಿರ್ಮಿಸಲು ೧.೨ ಕೋಟಿ ವೆಚ್ಚವಾದರೆ ಗುಂಡಿ ಮುಚ್ಚಲು ೧.೫ ಕೋಟಿ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ ೧೪೦೦ ಕಿ.ಮೀ ರಸ್ತೆಯಿದ್ದು, ೫೦೦೦ ಸಾವಿರ ಗುಂಡಿಗಳಿವೆ. ೧೫೦…

Read More

ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ ಕೆ ವಿ ರಾಜೆಂದ್ರ ಅಧಿಕಾರ ಸ್ವೀಕರಿಸಿದರು.ಡಾ ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿತ್ತು. ಇಂದು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರಾಜೇಂದ್ರ ಅವರನ್ನು ನಿರ್ಗಮಿತ ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ವಾಗತಿಸಿದರು. ಬಳಿಕ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ನೂತನ ಜಿಲ್ಲಾಧಿಕಾರಿಯಾಗಿ ಕಡತಗಳಿಗೆ ಸಹಿ ಹಾಕಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಕೆ.ವಿ ರಾಜೇಂದ್ರ, ಸರ್ಕಾರ ನನ್ನ ಸಾಮರ್ಥ್ಯ ನೋಡಿ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಜಿಲ್ಲಾಧಿಕಾರಿ ಕಚೇರಿ ಎಂದರೆ ಸಾರ್ವಜನಿಕರಿಗೆ ಸದಾ ತೆರೆದಿರಬೇಕು. ಅಂತಹ ಆಡಳಿತ ನೀಡಲು ಇಷ್ಟಪಡುತ್ತೇನೆ. ಸರ್ಕಾರದ ಯೋಜನೆಗಳಿಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಅಲೆಯದೇ, ತಾಲೂಕು ಮಟ್ಟದಲ್ಲೇ ಸಮಸ್ಯೆ ಬಗೆಹರಿಸುವಂತೆ ಕ್ರಮ ಕೈಗೊಳ್ಳುತ್ತೇನೆ ಎಂದರು. ಈ ವೇಳೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಮುಡಾ ಆಯುಕ್ತ ದಿನೇಶ್‌ ಕುಮಾರ್…

Read More

ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ಎಸ್‌ಬಿ ಆರ್‌ ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಎಚ್‌.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವ ವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’, ಕೊಳಲದನಿ’, `ಸಂವೇದನೆ , `ಭಾರತೀಯ ಕಾವ್ಯಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ, `ಸಂಕ್ಷಿಪ್ತ ಶಬ್ದಮಣಿದರ್ಪಣ’, `ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ. ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್‌.ಎಸ್‌.ಎಸ್‌ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ, ‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಟ ದಿವಂಗತ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯದಾಗಿ ತೆರೆ ಮೇಲೆ ಕಾಣಿಸಿಕೊಂಡಿರುವ ಗಂಧದ ಗುಡಿ ಚಿತ್ರ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಗಂಧದ ಗುಡಿ ಚಿತ್ರ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಪುನೀತ್‌ ರಾಜ್‌ ಕುಮಾರ್‌ ಅವರನ್ನು ತೆರೆಯ ಮೇಲೆ ಕಂಡ ಅಭಿಮಾನಿಗಳು ಭಾವುಕರಾಗುತ್ತಿದ್ದಾರೆ. ಗಂಧದಗುಡಿ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್, ಬೇರೆ ಸಿನಿಮಾ ನೋಡೋಕು ಇದನ್ನ ನೋಡೋಕು ವ್ಯತ್ಯಾಸವಿದೆ. ತುಂಬಾ ಕಷ್ಟ ಆಗುತ್ತಿದೆ. ಗಂಧದಗುಡಿಯ ಗಂಧ ನಮ್ಮ ಫ್ಯಾಮಿಲಿಗೆ ತುಂಬಾ ಹತ್ತಿರ ಇದೆ. ಈ ಸಿನಿಮಾವನ್ನ ಪ್ರತಿಯೊಬ್ಬರು ನೋಡಲೇಬೇಕು ಎಂದಿದ್ದಾರೆ. ಹಾಗೆಯೇ ಗಂಧದಗುಡಿ ನೋಡುವಾಗ ಅಪ್ಪುವನ್ನ ಕಂಡರೇ ನೋವಾಗುತ್ತೆ. ಗಂಧದಗುಡಿ ಮೂಲಕ ಅಪ್ಪು ಸದಾ ಜೀವಂತವಾಗಿರುತ್ತಾನೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ‌ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಹಾಗೆಯೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, ಕಾಂಗ್ರೆಸ್ಸಿನಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಕ್ಕಿಲ್ಲ, ಸಿಗುವುದೂ ಇಲ್ಲ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ವೇಳೆ ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ರಾಹುಲ್ ಗಾಂಧಿ ಭೇಟಿ ಮಾಡಿ, ಸಂವಾದಕ್ಕೆ ಮುಂದಾಗಿದ್ದ ಕಾಡುಗೊಲ್ಲರಿಗೆ ತಡೆಯೊಡ್ಡಲಾಗಿದೆ. ಕಾಡುಗೊಲ್ಲರು ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಅಡ್ಡಿಪಡಿಸಲಾಗಿದೆ. ಇದು ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ವಿರೋಧಿತನಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಂಬೈ : ಹುಡುಗಿಯನ್ನು ಐಟಂ ಎಂದು ಕರೆಯುವುದು ಅವಹೇಳನಕಾರಿಯಾಗಿದ್ದು, ಇದು ಆಕೆಯನ್ನು ಲೈಂಗಿಕವಾಗಿ ಗುರಿಯಾಗಿಸಿ ಅಪಮಾನ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಮುಂಬೈ ವಿಶೇಷ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣ ಒಂದರ ವಿಚಾರಣೆ ವೇಳೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ.ಜೆ.ಅನ್ಸಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಾಲಕಿಗೆ ಕಿರುಕುಳ ನೀಡಿದ ಯುವಕನಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. 2015ರ ಜುಲೈ 14ರಂದು ಮುಂಬೈ ಹೊರವಲಯದಲ್ಲಿ ಯುವಕನೊಬ್ಬ ಹದಿನಾರು ವರ್ಷದ ಬಾಲಕಿ ಶಾಲೆಯಿಂದ ಹಿಂದಿರುಗುತ್ತಿದ್ದಾಗ ಆಕೆಗೆ ಐಟಂ ಎಂದು ಕರೆದಿದ್ದಲ್ಲದೆ ಜಡೆಯನ್ನು ಹಿಡಿದು ಎಳೆದಾಡಿ, ಅಪಮಾನ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಕುರಿತು ವಿಶೇಷ ನ್ಯಾಯಾಲಯದಲ್ಲಿ ಸುಧೀರ್ಘಕಾಲ ವಿಚಾರಣೆ ನಡೆದು ಈಗ ತೀರ್ಪು ಹೊರಬಿದ್ದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉತ್ತರಪ್ರದೇಶ : ಮನೆಯಲ್ಲಿ ಟೀ ಕುಡಿದು ತೀವ್ರ ಅಸ್ವಸ್ಥಗೊಂಡು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನಾಗ್ಲಾ ಕನ್ಹೈ ಗ್ರಾಮದಲ್ಲಿ ನಡೆದಿದೆ. ಶಿವಾನಂದನ್ (35), ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಮನೆಯಲ್ಲಿ ಚಹಾ ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ರವೀಂದ್ರ ಸಿಂಗ್, ಶಿವಾಂಗ್ ಮತ್ತು ದಿವಾನ್ಶ್ ಮೃತಪಟ್ಟಿದ್ದರು. ಸೊಬ್ರಾನ್ ಮತ್ತು ಶಿವಾನಂದನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅಲ್ಲಿಯೂ ಇಬ್ಬರೂ ಸಾವನ್ನಪ್ಪಿದರು. ಶಿವಾನಂದನ ಪತ್ನಿ ಭತ್ತದ ಬೆಳೆಗೆ ಸಿಂಪಡಣೆ ಮಾಡಿದ ಔಷಧವನ್ನು ಟೀ ಪುಡಿ ಎಂದು ತಪ್ಪಾಗಿ ಭಾವಿಸಿ ಚಹಾ ಮಾಡಿದ್ದಾರೆ. ಇದನ್ನು ಕುಡಿದ ಐವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More