Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ಪ್ರಸಕ್ತ 2022-23 ನೇ ಸಾಲಿಗೆ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಜಿಲ್ಲೆಯ ದೈಹಿಕ ವಿಕಲಚೇತನರಿಂದ ಸೌಲಭ್ಯಕ್ಕಾಗಿ ಶೇಕಡಾ 75 ಅಥವಾ ಹೆಚ್ಚಿನ ಅಂಗವಿಕಲತೆ ಪ್ರಮಾಣ ಹೊಂದಿರುವ ಕನಿಷ್ಠ 20 ವರ್ಷ ಗರಿಷ್ಠ 60 ವರ್ಷ ವಯೋಮಿತಿಗೊಳಪಟ್ಟ ವಿಕಲಚೇತನ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ದೈಹಿಕ ವಿಕಲಚೇತನರು ಆಯಾ ತಾಲೂಕಿನ ತಾಲೂಕು ಪಂಚಾಯತ ಕಛೇರಿಯಲ್ಲಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ ಪ್ರತಿಯಲ್ಲಿ ಈ ಕೆಳಕಾಣ ಸಿದ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:-25-11-2022ರ ವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ತಾಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ.)ರನ್ನು ಅಥವಾ ಕಛೇರಿ ದೂರವಾಣ ಸಂಖ್ಯೆ: 0831-2476097ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಬೆಳಗಾವಿಯ ಇಎಸ್ಐಸಿ ಆಸ್ಪತ್ರೆಯ ಕಟ್ಟಡದ ಶಿಥಿಲಾವ್ಯವಸ್ಥೆಯನ್ನು ಪರಿಗಣ ಸಿ, ಕಾರ್ಮಿಕರ ಹಿತದೃಷ್ಠಿಯಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ನಿರ್ಮಿಸಲು ಅರ್ಹತೆ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ಪತ್ರದ ಮೂಲಕ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಕಳೆದ ತಿಂಗಳು ಆಗಸ್ಟ್ 4 ರಂದು ರಾಜ್ಯಸಭೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಹೊಸ ಆಸ್ಪತ್ರೆಯ ನಿರ್ಮಾಣದ ಕುರಿತು ಪ್ರಸ್ತಾಪಿಸಲಾಗಿತ್ತು. ಅದಕ್ಕೆ ಸಚಿವರು ಪತ್ರದ ಮೂಲಕ ಉತ್ತರ ನೀಡುವುದಾಗಿ ತಿಳಿಸಿದ್ದರು. ಆ ಹಿನ್ನಲೆಯಲ್ಲಿ 94,636 ಕಾರ್ಮಿಕರು ಕಾರ್ಮಿಕ ವಿಮಾ ನಿಗಮದಡಿ ನೊಂದಣ ಯಾಗಿದ್ದಾರೆ. ಇಎಸ್ಐಸಿ ಮಾನದಂಡಗಳ ಆಧಾರದ ಮೇಲೆ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಸ್ಥಾಪಿಸಲು ಅರ್ಹತೆ ಹೊಂದಿದೆ ಎಂದು ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಸಕಾರಾತ್ಮಕವಾಗಿ ಕೇಂದ್ರ ಸಚಿವರು ಉತ್ತರ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ. ಕರ್ನಾಟಕದ ಬೆಂಗಳೂರಿನಲ್ಲಿ ಎರಡು, ಕಲಬುರಗಿಯಲ್ಲಿ…
ಮೈಸೂರು: ಮೇಲ್ಜಾತಿಯಲ್ಲಿರುವವರು ಮೀಸಲಾತಿಗೆ ಅರ್ಹರಲ್ಲ, ಅವರಿಗೆ 10% ಮೀಸಲಾತಿ ಕೊಟ್ಟಿದ್ದಾರೆ ಅದು ಸರಿನಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿ ನಡೆದ ವಿಶ್ವಕರ್ಮ ಸಮುದಾಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ಹಿಂದುಳಿದಿದ್ದಾರೋ ಅವರಿಗೆ ಮಾತ್ರ ಮೀಸಲಾತಿ ಸಿಗಬೇಕು. ಯಾವ ಸಮುದಾಯಕ್ಕೆ ಮೀಸಲಾತಿ ಸಿಕ್ಕಿಲ್ಲ ಹೇಳಿ. ಬಸವಣ್ಣ ಅನುಭವ ಮಂಟಪ ಮಾಡಿ ಸಮಾನ ಅವಕಾಶ ಕೊಟ್ಟರು. ಅದಕ್ಕಾಗಿ ನಾವು ಬಸವಣ್ಣರಿಗೆ ಗೌರವ ಕೊಡುತ್ತೇವೆ. ಜಾತಿ ವ್ಯವಸ್ಥೆ ಇರಬಾರದು ಎಲ್ಲರೂ ಮನುಷ್ಯರಾಗಿ ಬದುಕಬೇಕು. ಅಧಿಕಾರ ಸಮಾನವಾಗಿ ಹಂಚಿಕೆಯಾದ್ರೆ ಜಾತಿ ವ್ಯವಸ್ಥೆ ಹೋಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಬಾವಿಯಲ್ಲಿ ನೀರು ಸೇದಲು ಹೋಗುತ್ತಿದ್ದೆ. ಬಾವಿ ಕಸವನ್ನು ಪಕಕ್ಕೆ ತಳ್ಳಿ ನೀರು ಸೇದುತ್ತೇವೆ. ಮತ್ತೆ ಕಸ ಸೇರಿಕೊಳ್ಳುತ್ತದೆ. ಇದೇ ರೀತಿ ಸದ್ಯ ಸಮಾಜ ಆಗಿದೆ. ರಘು ಆಚಾರ ಆರ್ಥಿಕವಾಗಿ ಸಬಲರಾದ ಕಾರಣ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುತ್ತಾನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಳಗಾವಿ: ಊಟ ಮಾಡಿ ಮಲಗಿದ್ದ ಪತ್ನಿಯನ್ನು ಕುಡಿದ ನಶೆಯಲ್ಲಿ ಗಂಡ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಹಾರೂಗೇರಿ (55) ಮೃತ ದುರ್ದೈವಿ. ಪಾಂಡುರಂಗ ಹಾರೂಗೇರಿ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಮಹಿಳೆ ಊಟ ಮಾಡಿ ಮಲಗಿದ್ದಾಗ ಮಚ್ಚಿನಿಂದ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು : ಸಚಿವ ವಿ.ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ರಾಜ್ಯ ಸಂಶೋಧಕರ ಸಂಘದ ಅಧ್ಯಕ್ಷರಾದ ಮರಿದೇವಯ್ಯ ಎಸ್. ನೇತೃತ್ವದಲ್ಲಿ ಹೆಗ್ಗಡದೇವನ ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಸಿದರು ಸಂಶೋಧನ ಸಂಘದ ರಾಜ್ಯ ಅಧ್ಯಕ್ಷರಾದ ಮರಿದೇವಯ್ಯ ಮಾತನಾಡಿ, ಶನಿವಾರ ಚಾಮರಾಜನಗರ ಗುಂಡ್ಲುಪೇಟೆಯ ಅಂಗಾರ ಗ್ರಾಮದಲ್ಲಿ ಸಹಾಯ ಕೇಳಲು ಬಂದ ಅಸಹಾಯಕ ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿ ಅವಮಾನ ಮಾಡಿರುವ ಸಚಿವ ಸೋಮಣ್ಣ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದೆ ಮುಖ್ಯಮಂತ್ರಿಗಳು ಸೋಮಣ್ಣನನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಕೂಡಲೇ ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಸುಮೊಟೊ ಕೇಸ್ ದಾಖಲಿಸಬೇಕು ಹಾಗೂ ನ್ಯಾಯಾಂಗ ತನಿಖೆ ಮಾಡಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಪುರಸಭೆಯ ಸದಸ್ಯರಾದ ಪ್ರೇಮ್ ಸಾಗರ್, ಜೀವಿಕ ರಾಜ್ಯ ಸಂಚಾಲಕರಾದ ಡಾ.ಉಮೇಶ, ಸ್ಟುಡಿಯೋ ಮಧುಸೂದನ್, ಮಹಾನಾಯಕ ರಕ್ಷಣಾ ವೇದಿಕೆಯ ಅಧ್ಯಕ್ಷ ಮಾನವೀಯಾಕರ್, ಯುವ ಮುಖಂಡ ಅವಿನಾಶ್, ಕೊಹಳ ಬಸವರಾಜು,…
ತುಮಕೂರು: ಯುಜಿಸಿ ಆದೇಶದ ಮೇರೆಗೆ ಮೈಸೂರು ಮುಕ್ತ ವಿವಿಯ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು ಅಕ್ಟೋಬರ್ 31 ಬದಲಾಗಿ ನವೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು ಯುಜಿಸಿ ಆದೇಶದ ಮೇರೆಗೆ ಅಕ್ಟೋಬರ್ 31 ಬದಲಾಗಿ ನವೆಂಬರ್ 15ರ ವರೆಗೆ ಪ್ರವೇಶಾತಿ ಮಾಡಿಕೊಳ್ಳಲಾಗುವುದು. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್ ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು. ಯುಜಿಸಿ ನಿಯಮಾವಳಿ…
ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ಮೂಲಕ ಈ ಕೆಳಕಂಡಂತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿಯವರನ್ನು ಟೀಕಿಸಿದವರ ವಿರುದ್ಧ ಪ್ರತಿಭಟಿಸಿ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರಿಗೆ ಮತ್ತು ಬಿಜೆಪಿಯವರಿಗೆ ನಾನು 32 ಪ್ರಶ್ನೆಗಳನ್ನು ಕೇಳಿದ್ದೆ. ಇದುವರೆಗೆ ಬಿಜೆಪಿಯವರಿಗೆ ಮತ್ತು ಯಡಿಯೂರಪ್ಪನವರಿಗೆ ಒಂದೇ ಒಂದು ಪ್ರಶ್ನೆಗೂ ಉತ್ತರಿಸಲು ಸಾಧ್ಯವಾಗಲಿಲ್ಲ. ಇದರ ಮಧ್ಯೆ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ 121 ದೇಶಗಳ ಪೈಕಿ 107 ನೇ ಸ್ಥಾನಕ್ಕೆ ಕುಸಿದಿದೆಯೆಂಬ ವರದಿ ಬಿಡುಗಡೆಯಾಯಿತು. ಬಿಜೆಪಿಯವರು ಯಥಾಪ್ರಕಾರ ಈ ವರದಿಯೆ ಸರಿ ಇಲ್ಲ ಎಂದು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕೇಂದ್ರ…
ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ . ಈ ನಡುವೆ ಕಾಂಗ್ರೆಸ್,ಜೆಡಿಎಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಯಾರ ಅವಧಿಯಲ್ಲಿ ಸಮಿತಿ ರಚನೆ ಯಾಗಿದೆ ಎಂಬುದು ಮುಖ್ಯವಲ್ಲ. ಆದರೆ ಮೀಸಲಾತಿ ಹೆಚ್ಚಳ ಅನುಷ್ಟಾನಕ್ಕೆ ತಂದಿರುವುದು ಬಿಜೆಪಿ. ಜೆಡಿಎಸ್, ಕಾಂಗ್ರೆಸ್ ಗೆ ರಾಜಕೀಯ ಇಚ್ಚಾಶಕ್ತಿ ಕೊರತೆ ಇದೆ. ಹೀಗಾಗಿ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ನಮಗೆ ಇಚ್ಚಾಶಕ್ತಿ ಇದೆ . ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಟಾನ ತಂದಿದ್ದೇವೆ. ಬಿಎಸ್ ವೈ, ಸಿಎಂ ಬಸವರಾಜ ಬೊಮ್ಮಾಯಿ ಅವರ ಇಚ್ಚಾ ಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಟಾನ ಮಾಡಿದ್ದೇವೆ ಎಂದರು. ಯಾವುದೇ ಸಮುದಾಯ ಸೇರಿಸಲು ನಮ್ಮ ಅಭ್ಯಂತರವಿಲ್ಲ ಆದರೆ ಜಾತಿಯ ಕುಲಶಾಸ್ತ್ರ ಅಧ್ಯಯನ ಮಾಡಬೇಕು. ಮೀಸಲಾತಿ ಅನುಷ್ಟಾನಕ್ಕಾಗಿ ಸಮಿತಿಯನ್ನ ರಚಿಸಬೇಕು. ಆ ಸಮಿತಿ ನೀಡುವ ವರದಿಯನ್ವಯ ಕ್ರಮ ಕೈಗೊಳ್ಳಬೇಕು. ಏಕಾಏಕಿ ಅನುಷ್ಟಾನ ಹೆಚ್ಚಳ ಆಗಲ್ಲ. ಮೀಸಲಾತಿ ಹೆಚ್ಚಳ ಸಂಬಂಧ…
ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಕಬ್ಬುಬೆಳೆಗಾರರು ಧರಣಿ ಕೈಗೊಂಡಿದ್ದು, ಮೈಸೂರು- ಊಟಿ ಹೆದ್ದಾರಿ ತಡೆದು ರೈತಮುಖಂಡರು ಪ್ರತಿಭಟನೆ ನಡೆಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಎಪಿಎಂಸಿ ಸಮೀಪದ ನಂಜನಗೂಡು ರಿಂಗ್ ರಸ್ತೆಯಲ್ಲಿ ಕಬ್ಬುಬೆಳೆಗಾರರು ಧರಣಿ ನಡೆಸಿದ್ದು, ಕಬ್ಬಿನ ಸೋಗು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಪ್ರತಿಭಟನಾಕಾರರು ಧರಣಿಯಲ್ಲಿ ಭಾಗಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿತ್ತು. ಈ ಮೂಲಕ ವಾಹನ ದಟ್ಟಣೆ ಆಗದಂತೆ ಪೊಲೀಸರು ಕ್ರಮವಹಿಸಿದ್ದರು. ಪ್ರತಿಭಟನಾಕಾರರು ರಸ್ತೆಯಲ್ಲಿ ಉರುಳಿಸೇವೆ ಮಾಡಿ ಪ್ರತಿಭಟನೆ ನಡೆಸಿದ್ದು, ನಾಲ್ಕು ದಿಕ್ಕಿನಲ್ಲೂ ರೈತಮುಖಂಡರು ಜಮಾವಣೆಯಾದ ಹಿನ್ನೆಲೆ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಬದಲಿ ಮಾರ್ಗದಲ್ಲಿ ತೆರಳುತ್ತಿದ್ದು, ಸದ್ಯ ಮೈಸೂರು -ನಂಜನಗೂಡು ರಸ್ತೆ ಬಂದ್ ಮಾಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಇತ್ತೀಚೆಗೆ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಾಂಶುಪಾಲರು, ಅಧ್ಯಾಪಕರು ಸಭೆ ನಡೆಸಿ ಧೈರ್ಯ ತುಂಬಿದರು. ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಾಲೇಜು ಕಟ್ಟಡ ಕುಸಿದುಬಿದ್ದಿತ್ತು. ಹೀಗಾಗಿ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿತ್ತು. ಆತಂಕ ದೂರ ಮಾಡುವ ಸಲುವಾಗಿ ಇಂದು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲ ಡಾ.ಡಿ ರವಿ ಅವರು, ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ. ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ…