Subscribe to Updates
Get the latest creative news from FooBar about art, design and business.
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
Author: admin
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಳಿಯ ಹಾಗೂ ಉದ್ಯಮಿ ದಿವಂಗತ ಸಿದಾರ್ಥ್ ಅವರ ಪುತ್ರ ಅಮಾತ್ರ್ಯ ಹೆಗ್ಡೆ ಅವರನ್ನು ರಾಜಕೀಯಕ್ಕೆ ಕರೆತರುವ ಚರ್ಚೆಗಳು ನಡೆಯುತ್ತಿವೆ.ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೊಮ್ಮಗನಾಗಿರುವ ಅಮಾತ್ರ್ಯ ಸದ್ಯ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ತಂದೆಯವರು ಸ್ಥಾಪಿಸಿದ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಅವರ ತಾತ ಮತ್ತು ಮಾವ ಪ್ರಭಾವಿಗಳಾಗಿರುವುದರಿಂದ ಸೂಕ್ತ ಕಾಲದಲ್ಲಿ ರಾಜಕೀಯ ಪ್ರವೇಶ ಪಡೆದು ನೆಲೆ ಕಂಡುಕೊಳ್ಳುವುದು ಅಗತ್ಯ ಎಂಬ ಸಲಹೆಗಳು ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೆ, ಎಸ್.ಎಂ.ಕೃಷ್ಣ ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ಅಮಾತ್ರ್ಯ ಅವರು ಯಾವ ಪಕ್ಷದಿಂದ ರಾಜಕೀಯ ರಂಗ ಪ್ರವೇಶ ಮಾಡುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.ಬಿಜೆಪಿಯಿಂದ ರಾಜಕೀಯ ಆರಂಭಿಸುವುದಾದರೆ ಚಿಕ್ಕಮಗಳೂರು ಅಥವಾ ಮಂಡ್ಯ ಜಿಲ್ಲೆಗಳಲ್ಲಿ ಕಣಕ್ಕಿಳಿಯುವ ಬಗ್ಗೆ ವದಂತಿಗಳು ಹಬ್ಬಿವೆ. ಡಿ.ಕೆ.ಶಿವಕುಮಾರ್ ಅವರು ಅಳಿಯನನ್ನು ಮಂಡ್ಯದಿಂದಲೇ ಕಣಕ್ಕಿಳಿಸುವ ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ನ ಪ್ರಬಲ ಕೋಟೆಯಾಗಿರುವ ಮಂಡ್ಯದಲ್ಲಿ ಕಳೆದ ಲೋಕಸಭೆ…
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಮರಾಠ ಸಮುದಾಯದ ಮುಖಂಡ ಹಾಗೂ ಶಿವಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ಸಾವನ್ನಪ್ಪಿದ್ದಾರೆ. ಅಪಘಾತದ ಹೊಡೆತಕ್ಕೆ ಅವರ ಕಾರು ನಜ್ಜುಗುಜ್ಜಾಗಿದೆ. ಮಡಪ್ ಸುರಂಗದ ಬಳಿ ಮಾಜಿ ವಿಧಾನಪರಿಷತ್ ಸದಸ್ಯ (MLC) ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ಗಾಯಗಳಾಗಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಬಿಜೆಪಿಯ ಮಿತ್ರ ಪಕ್ಷವಾದ ಶಿವಸಂಗ್ರಾಮ್ನ ಮುಖ್ಯಸ್ಥರನ್ನು ಅಪಘಾತದ ನಂತರ ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ವಿನಾಯಕ್ ಮೇಟೆಯವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಪೇದೆ ರಾಮ್ ಡೋಬ್ಲೆ ಎಂಬುವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಅವರು ನವಿ ಮುಂಬೈನ ಎಂಜಿಎಂ ಆಸ್ಪತ್ರೆಗೆ ತಲುಪಿದ್ದಾರೆ. ಮಹಾರಾಷ್ಟ್ರದ…
ಮಾನ್ಸೂನ್ನ 2ನೇ ಹಂತದಲ್ಲಿ ಹಲವು ರಾಜ್ಯಗಳಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಒಡಿಶಾದಲ್ಲಿ ಉಂಟಾಗಿರುವ ಆಳವಾದ ಕಡಿಮೆ ಒತ್ತಡದ ಪರಿಣಾಮ ಬಂಗಾಳಕೊಲ್ಲಿಯಿಂದ ಆರ್ದ್ರ ಗಾಳಿ ಉತ್ತರ ಭಾರತವನ್ನು ತಲುಪುತ್ತಿದೆ. ಈ ಗಾಳಿಯಿಂದಾಗಿ ಆಗಸ್ಟ್ 14ರಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ಇತ್ಯಾದಿಗಳಲ್ಲಿ ಮಳೆಯಾಗಲಿವೆ ಎಂದು ಹೇಳಲಾಗಿದೆ. ಈ ರಾಜ್ಯದಲ್ಲಿ ರೆಡ್ ಅಲರ್ಟ್ ಇಂದು ಒಡಿಶಾದಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಎಸ್ಡಿಆರ್ಎಫ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇಂದು ಇಲ್ಲಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಪ್ರವಾಹದಂತಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಗ್ರೀನ್ ಅಲರ್ಟ್ ಇದೆ. ಮೋಡ ಕವಿದ ವಾತಾವರಣವಿರುವುದರಿಂದ ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಹಿಮಾಚಲ…
ನವದೆಹಲಿ: ಭಾರತೀಯ ಬಿಲಿಯನೇರ್ ಉದ್ಯಮಿ, ಹೂಡಿಕೆದಾರ ‘ಬಿಗ್ ಬುಲ್’ ಖ್ಯಾತಿಯ ರಾಕೇಶ್ ಜುಂಜುನ್ವಾಲಾ ಅವರು 62ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಜುಲೈ 5, 1960ರಂದು ಜನಿಸಿದ ಜುಂಜುನ್ವಾಲಾ ಬಾಂಬೆಯಲ್ಲಿ ರಾಜಸ್ಥಾನಿ ಕುಟುಂಬದಲ್ಲಿ ಬೆಳೆದರು. ಅವರ ತಂದೆ ಆದಾಯ ತೆರಿಗೆ ಆಯುಕ್ತರಾಗಿದ್ದರು. ರಾಕೇಶ್ ಅವರು ಸಿಡೆನ್ಹ್ಯಾಮ್ ಕಾಲೇಜಿನಿಂದ ಪದವಿ ಪಡೆದುಕೊಂಡಿದ್ದರು. ನಂತರ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾಗೆ ಸೇರಿಕೊಂಡರು. ರಾಕೇಶ್ ಜುಂಜುನ್ವಾಲಾ ಅಂದಾಜು $5.5 ಶತಕೋಟಿ ನಿವ್ವಳ ಮೌಲ್ಯವನ್ನು ಹೊಂದುವ(ಜುಲೈ 2022ರಂತೆ) ಮೂಲಕ ಭಾರತದ 36ನೇ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸಕ್ರಿಯ ಹೂಡಿಕೆದಾರರಲ್ಲದೆ ಜುಂಜುನ್ವಾಲಾ ಆಪ್ಟೆಕ್ ಲಿಮಿಟೆಡ್ ಮತ್ತು ಹಂಗಾಮಾ ಡಿಜಿಟಲ್ ಮೀಡಿಯಾ ಎಂಟರ್ಟೈನ್ಮೆಂಟ್ ಪ್ರೈವೇಟ್ನ ಅಧ್ಯಕ್ಷರಾಗಿದ್ದರು. ಲಿಮಿಟೆಡ್ ಮತ್ತು ಪ್ರೈಮ್ ಫೋಕಸ್ ಲಿಮಿಟೆಡ್, ಜಿಯೋಜಿತ್ ಫೈನಾನ್ಷಿಯಲ್ ಸರ್ವಿಸಸ್, ಬಿಲ್ಕೇರ್ ಲಿಮಿಟೆಡ್, ಪ್ರಜ್ ಇಂಡಸ್ಟ್ರೀಸ್ ಲಿಮಿಟೆಡ್, ಪ್ರೊವೋಗ್ ಇಂಡಿಯಾ ಲಿಮಿಟೆಡ್, ಕಾನ್ಕಾರ್ಡ್ ಬಯೋಟೆಕ್ ಲಿಮಿಟೆಡ್, ಇನ್ನೋವಸಿಂತ್ ಟೆಕ್ನಾಲಜೀಸ್ ಲಿಮಿಟೆಡ್, ಮಿಡ್ ಡೇ ಮಲ್ಟಿಮೀಡಿಯಾ ಲಿಮಿಟೆಡ್, ನಾಗಾರ್ಜುನಮಿಟ್…
ಚಾಮರಾಜನಗರ: ಕಾಡುಗಳ್ಳ ವೀರಪ್ಪನ್ನ ರಕ್ತಸಿಕ್ತ ಅಧ್ಯಾಯದಲ್ಲಿ ಒಂದಾದ ಮೀಣ್ಯಂ ದಾಳಿಗೆ ಇಂದಿಗೆ ಬರೋಬ್ಬರಿ 30 ವರ್ಷವಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಯ ಮುನ್ನ ಪೊಲೀಸರಿಗೆ ಈ ಮರಣದ ಕಥೆ ಈಗಲೂ ಕಣ್ಣೀರು ತರಿಸುತ್ತಿದೆ. ದಂತಚೋರ ವೀರಪ್ಪನ್ ಎಲ್ಲೆ ಮೀರಿದ್ದ 90ರ ದಶಕದಲ್ಲಿ ಎಸ್ಟಿಎಫ್ನಲ್ಲಿ ಕರ್ತವ್ಯ ಮಾಡಲು ಹಿಂಜರಿಯುವಂತಹ ಪರಿಸ್ಥಿತಿ ಇತ್ತು. ಈ ವೇಳೆ ಆತನನ್ನು ಹಿಡಿದೇ ಹಿಡಿಯುತ್ತೇವೆ ಎಂದು ಸಾಹಸತನ ತೋರಿದ್ದ ಎಸ್ಪಿ ಹರಿಕೃಷ್ಣ ಹಾಗೂ ಎಸ್ಐ ಶಕೀಲ್ ಅಹ್ಮದ್, ವೀರಪ್ಪನ್ ಮರಮೋಸಕ್ಕೆ ಬಲಿಯಾಗಿದ್ದರು. ಆ ದಿನವನ್ನು ಅಂದು ಎಸ್ಟಿಎಫ್ನಲ್ಲಿದ್ದ ಹಲವು ಪೊಲೀಸರು ಈಗಲೂ ನೆನೆಯುತ್ತಾರೆ. ಎಸ್ಟಿಎಫ್ ಪಡೆಯ ನಿರಂತರ ಕಾರ್ಯಾಚರಣೆ ವೇಳೆ ವೀರಪ್ಪನ್ ಬಂಟನಾದ ಗುರುನಾಥನ್ ಎಂಬಾತನನ್ನು ಹಿಡಿಯುವ ಅವಕಾಶ ಒದಗಿ ಬಂದಿತ್ತು. ಆದರೆ ಆತ ಕೊನೆಗೆ ಪೊಲೀಸರ ಗುಂಡಿಗೆ ಬಲಿಯಾಗಿದ್ದ. ತನ್ನ ನೆಚ್ಚಿನ ಬಂಟನನ್ನು ಕಳೆದುಕೊಂಡಿದ್ದ ವೀರಪ್ಪನ್, ಹರಿಕೃಷ್ಣ ಮತ್ತು ಶಕೀಲ್ ಅಹ್ಮದ್ ಮೇಲೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ. ಹಠಕ್ಕೆ ಬಿದ್ದಿದ್ದ ವೀರಪ್ಪನ್, ಕಮಲ ನಾಯ್ಕ್ ಎಂಬುವವನ ಮೂಲಕ ದಾಳಿ…
ಧಾರವಾಡ: ಇಲ್ಲಿನ ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಇಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 183 ಪ್ರಕರಣಗಳನ್ನು 5,77,12,376 ರೂ.ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು. ಹಿರಿಯ ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಅವರ ಮಾರ್ಗದರ್ಶನದಲ್ಲಿ,ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್, ರವಿ ವಿ .ಹೊಸಮನಿ ಮತ್ತು ಅನಂತ ರಾಮನಾಥ ಹೆಗಡೆ ಹಾಗೂ ಲೋಕ ಅದಾಲತ್ನ ಸದಸ್ಯರುಗಳಾದ ಎಲ್ . ಟಿ .ಮಂಟಗಣಿ, ಎಸ್.ಎಸ್.ಬಾವಾಖಾನ,ಎಮ್.ಟಿ.ಬಂಗಿ ಮತ್ತು ಎಮ್.ಸಿ.ಹುಕ್ಕೇರಿ ಅವರನ್ನೊಳಗೊಂಡ 4 ಪೀಠಗಳಲ್ಲಿ ವ್ಯಾಜ್ಯಗಳ ರಾಜಿ ಸಂಧಾನ ನಡೆದವು. ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಹಾಗೂ ವಕೀಲರಾದ ಎಮ್.ಸಿ.ಹುಕ್ಕೇರಿ ಅವರ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 13 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ರಾಜಿ – ಸಂಧಾನದ ಮೂಲಕ ಉಭಯ ಪಕ್ಷಗಾರರ ಸಮಕ್ಷಮ ಇತ್ಯರ್ಥಪಡಿಸಿದ್ದು ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್ನ ಹೆಗ್ಗಳಿಕೆಯಾಗಿದೆ ಎಂದು ಹೈಕೋರ್ಟ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ನ್ಯಾಯಾಂಗದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ರಾತ್ರಿ 9.36 ಕೂಡ ರಾಷ್ಟ್ರ ಧ್ವಜವನ್ನು ಇಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್., ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ನೆನ್ನೆ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ತಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ. ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿನೋದ ನವೀನ್ ಕುಮಾರ್ ರವರನ್ನು ಒಳಗೊಂಡ ಆಡಳಿತ ಜನಪ್ರತಿನಿಧಿಗಳನ್ನು ಸರ್ಕಾರ ಈ ಕೂಡಲೇ ಅಮಾನತು ಮಾಡಬೇಕು ಹಾಗೂ ಪೊಲೀಸ್ ಇಲಾಖೆ ಸದರಿ ವ್ಯಕ್ತಿಗಳ ವಿರುದ್ಧ ರಾಷ್ಟ್ರದ್ರೋಹದಡಿಯಲ್ಲಿ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಬೃಹತ್ ಮಟ್ಟದ…
ಬೆಂಗಳೂರು : ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರ ದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮವರೊಂದಿಗೆ ಮಾತನಾಡಿದರು.ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜುಲೈ 28 ಕ್ಕೆ ಆಗಬೇಕಿದ್ದ ಜನೋತ್ಸವವನ್ನು ಅನಿವಾರ್ಯ ಕಾರಣಗಳಿಂದ ರದ್ದು ಮಾಡಲಾಗಿತ್ತು.10 -15 ದಿನಗಳಿಂದ ಈ ಭಾಗದ ಜನರ ಒತ್ತಾಯ ಹೆಚ್ಚಾಗಿದೆ. ಬೇರೆ ಕಡೆ ಸಮಾವೇಶ ಮಾಡಲು ಜನ ಒಪ್ಪಲಿಲ್ಲ. ನಾವು ಸಾಕಷ್ಟು ತಯಾರಿ ನಡೆಸಿದ್ದು ದೊಡ್ಡಬಳ್ಳಾಪುರ ದಿಂದಲೇ ಜನೋತ್ಸವ ಪ್ರಾರಂಭವಾಗಬೇಕು.ಮೊದಲ ಹೆಜ್ಜೆ ಇಟ್ಟಿದ್ದೇವೆ.ಇಲ್ಲಿಂದಲೇ ಜನೋತ್ಸವ ಆರಂಭ ಆಗಲಿ ಆಗಲಿ ಎಂದು ನಮಗಿಂತಲೂ ಹೆಚ್ಚಿನ ಧೃಢ ನಿರ್ಧಾರ ಅವರದಾಗಿದೆ. ಅವರ ಉತ್ಸಾಹ ನಿರ್ಣಯಕ್ಕೆ ತಲೆಬಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.ಜನೋತ್ಸವದ ಬಗ್ಗೆ ಇಂದು ವರಿಷ್ಠ ರೊಂದಿಗೆ ಮಾತನಾಡಿ ತಿಳಿಸಲಾಗುವುದು ಎಂದರು. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಮಡಿಕೇರಿ: ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನೊಂದಿಗೆ ಪ್ರವಾಸಿತಾಣದಲ್ಲಿ ಅಡ್ಡಾಡುತ್ತಿರುವ ಕಂಡ ಪ್ರಿಯಕರ ಇಬ್ಬರಿಗೂ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಶನಿವಾರ ನಡೆದಿದೆ. ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಜೋಡಿ ಕಾವೇರಿ ನಿಸರ್ಗಧಾಮಕ್ಕೆ ತೆರಳಿದೆ.ಈ ಪೈಕಿ ಮಾದಾಪಟ್ಟಣ ನಿವಾಸಿ ವಿದ್ಯಾರ್ಥಿನಿ ಪ್ರಿಯಕರ ಎನ್ನಲಾದ ಕುಶಾಲನಗರ ಹೋಟೆಲ್ ಸಿಬ್ಬಂದಿ ದೊಡ್ಡಹರವೆ ಗ್ರಾಮದ ವಿಜಯ್ (22) ಈ ಜೋಡಿಯನ್ನು ಹಿಂಬಾಲಿಸಿ ಚಾಕುವಿನಿಂದ ಇರಿಯಲು ಮುಂದಾಗಿದ್ದಾನೆ. ಘಟನೆಯಿಂದ ಯುವತಿಯ ಭುಜ, ಕೈ, ಕುತ್ತಿಗೆ ಭಾಗದಲ್ಲಿ ಗಾಯ ಉಂಟಾಗಿದೆ. ತಡೆಯಲು ಬಂದ ಈಕೆಯ ಸಹಚರ ಹೆಬ್ಬಾಲೆಯ ಪ್ರವೀಣ್ ಎಂಬಾತನಿಗೂಕೂಡ ಎರಡು ಕೈಗಳಿಗೆ ಗಾಯ ಉಂಟಾಗಿದೆ. ಸ್ಥಳದಲ್ಲಿ ಇದ್ದ ಇತರೆ ಪ್ರವಾಸಿಗರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸಕಾಲದಲ್ಲಿ ಮದ್ಯ ಪ್ರವೇಶಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.ಆರೋಪಿಯನ್ನು ವಶಕ್ಕೆ ಪಡೆದ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಆಂಧ್ರಪ್ರದೇಶದಲ್ಲಿ ಕಳೆದ ಕೆಲ ವರ್ಷಗಳಿಂದ ತಾಯಿ-ಮಗು ಮರಣ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಆರ್ ಐ ವೈದ್ಯರು ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಯೋಜನೆ ರೂಪಿಸಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರವು ಪರಿಚಯಿಸಲಿರುವ ‘ಫ್ಯಾಮಿಲಿ ಡಾಕ್ಟರ್’ ಪರಿಕಲ್ಪನೆಯನ್ನು ಬೆಂಬಲಿಸಲು ರಾಜ್ಯದ ಹಲವಾರು ಅನಿವಾಸಿ ಭಾರತೀಯರು ಆಸಕ್ತಿ ತೋರಿದ್ದಾರೆ. ಆರೋಗ್ಯ ಇಲಾಖೆಯ ಎನ್ಆರ್ಐ ವೈದ್ಯಕೀಯ ವ್ಯವಹಾರಗಳ ಸಲಹೆಗಾರ ಡಾ. ವಾಸುದೇವ ಆರ್. ನಲಿಪಿರೆಡ್ಡಿ, ಅಮೆರಿಕನ್ ಅಸೋಸಿಯೇಷನ್ ಆಫ್ ಫಿಸಿಶಿಯನ್ಸ್ ಆಫ್ ಇಂಡಿಯನ್ ಒರಿಜಿನ್ಸ್ (ಎಎಪಿಐ) ಗೌರವಾಧ್ಯಕ್ಷ ಡಾ. ಕೊಲ್ಲಿ ರವಿ, ನಿಯೋನಾಟಾಲಜಿಸ್ಟ್ ಡಾ. ಪ್ರಕಾಶ್ ಎಂ. ಕಬ್ಬೂರು, ಟ್ರೈನ್ ಅಂಡ್ ಹೆಲ್ಪ್ ಬೇಬೀಸ್ ನಿರ್ದೇಶಕ ಡಾ. ಸಿಂಗಂ ಹರಿಬಾಬು. ಮತ್ತು ಇತರರು ಶುಕ್ರವಾರ ಮಂಗಳಗಿರಿಯ ಆರೋಗ್ಯ ಇಲಾಖೆ ಕಚೇರಿಯಲ್ಲಿ ಆರೋಗ್ಯ, ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ವಿಡದಾಳ ರಜಿನಿ ಅವರನ್ನು ಭೇಟಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ವಾಸುದೇವ, ಅನಿವಾಸಿ ಭಾರತೀಯ ವೈದ್ಯರ ತಂಡ ಕೆಲವು ಜಿಲ್ಲೆಗಳಲ್ಲಿ ತಾಯಿ ಮತ್ತು…