Subscribe to Updates
Get the latest creative news from FooBar about art, design and business.
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
Author: admin
ಸರಗೂರು: ತಾಲ್ಲೂಕಿನ ನುಗು ವನ್ಯಜೀವಿ ಧಾಮ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಎತ್ತಿಗೆ ಗ್ರಾಮದ ಜಮೀನಿನ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ಕೇರಳ ರಾಜ್ಯದ ವೈನಾಡು ಜಿಲ್ಲೆ ಪಾಲಮಂಗಲಂ ಮೂಲದ ಕೂಲಿಕಾರ್ಮಿಕರ ಬಲಿಯಾಗಿದ್ದಾನೆ. ಸರಗೂರು ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿಗೆ ಗ್ರಾಮದಲ್ಲಿ ಕೇರಳದ ಮೂಲದ ಜಮೀನು ಕೆಲಸ ಮಾಡುತ್ತಿರುವ ಸಮಯದಲ್ಲಿ ಕೇರಳದ 60 ವರ್ಷ ವಯಸ್ಸಿನ ಬಾಲನ್ ಮೃತಪಟ್ಟಿದ್ದಾನೆ. ಹೆಡಿಯಾಲ ಮತ್ತು ಚಿಕ್ಕಬರಗಿ ಹೋಗುವ ರಸ್ತೆಯ ಬದಿಯಲ್ಲಿ ಇರುವ ಜಮೀನಿನಲ್ಲಿ ಕಾಡಾನೆ ಬೆಳೆಗಳನ್ನು ನಾಶ ಮಾಡಿದೆ. ನಂತರ ಪರಮೇಶ ಎಂಬುವರು ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು. ಆದರೆ ಅವರು ಆನೆಯಿಂದ ತಪ್ಪಿಸಿಕೊಂಡು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಇದಾದ ಬಳಿಕ ಬಾಲನ್ ಎಂಬುವವರು ಜಮೀನು ನಲ್ಲಿ ಸಡ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವಾಗ ಕಾಡಿನಿಂದ ಬಂದ ಆನೆ ಏಕಾಏಕಿ ದಾಳಿ ಮಾಡಿದೆ. ಈ ಘಟನೆಯನ್ನು ಪರಮೇಶ್ ಅವರು ಪ್ರತ್ಯಕ್ಷವಾಗಿ ಕಂಡಿದ್ದಾರೆ. ಘಟನೆ ವೇಳೆ ಅಕ್ಕ ಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ…
ಹಿರಿಯೂರು: ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಆಯೋಜಿಸಲಾದ ತಿರಂಗಾ ಜಾಥಾಕ್ಕೆ ತಾಲ್ಲೂಕು ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ ಚಾಲನೆ ನೀಡಿದರು. ಈ ವೇಳೆ ನಮ್ಮತುಮಕೂರು ಜೊತೆಗೆ ಮಾತನಾಡಿದ ಪ್ರಶಾಂತ ಕೆ. ಪಾಟೀಲ, ಇದೀಗ ನಮ್ಮ ದೇಶದ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಮನೆಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ 75 ನೇ ಅಮೃತಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಹಿರಿಯೂರು ತಾಲ್ಲೂಕಿನಲ್ಲಿ 1,000 ಅಡಿ ಧ್ವಜವನ್ನು ಯಾತ್ರೆಯ ಮುಖಾಂತರ ಪ್ರದರ್ಶಿಸಿ ಯಾತ್ರೆಯನ್ನು ಆಯೋಜಿಸಿರುವ ಕರ್ನಾಟಕ ರಕ್ಷಣಾ ವೇದಿಕೆಗೆ ತಹಶೀಲ್ದಾರರು ಇದೇ ವೇಳೆ ಅಭಿನಂದನೆ ತಿಳಿಸಿದರು. ಹಿರಿಯೂರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ನಾಗಭೂಷಣ್ ಮಾತನಾಡಿ, ತಿರಂಗ ಯಾತ್ರೆಯನ್ನು ಯಶಸ್ವಿಗೊಳಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಹಾಗೂ ತಾಲ್ಲೂಕು ಮುಖಂಡರುಗಳಿಗೆ ಧನ್ಯವಾದಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಟಿ.ರಮೇಶ್ ಹಾಗೂ ತಾಲ್ಲೂಕು ಗೌರವ ಅಧ್ಯಕ್ಷರಾದ ಗೋ ಬಸವರಾಜು ಅವರು ಮಾತನಾಡಿದರು. ಈ…
ತುಮಕೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆಯಿಂದ ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ ಕಾರ್ಯಕ್ರಮ ನಡೆಯಿತು. ಸುಮಾರು 3 ಸಾವಿರಕ್ಕೂ ಹೆಚ್ಚು ಜನರಿಂದ ರಾಷ್ಟ್ರಧ್ವಜ ಹಿಡಿದು ವಾಕಥಾನ್ ನಡೆಯಿತು. ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ನಡಿಗೆ. ಟೌನ್ ಹಾಲ್ ವೃತ್ತ, ಸ್ವಾತಂತ್ರ್ಯ ಚೌಕದ ಮೂಲಕ ಗಾಜಿನ ಮನೆವರೆಗೂ ಸಾಗಿತು. ವಾಕಥಾನಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಎಸ್ಪಿ ರಾಹುಲ್ ಕುಮಾರ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಕಿರುತೆರೆ ನಟಿ ಚಂದನಾ ಭಾಗಿಯಾಗಿದ್ದರು. ಗಾಜಿನ ಮನೆಯಲ್ಲಿ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಉಪಸ್ಥಿತರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಾಗಲಕೋಟೆ : ರಜೆ ಮೇಲೆ ಬಂದಿದ್ದ ಯೋಧನ ತನ್ನ ಬಾಮೈದನಿಂದಲೇ ಕೊಲೆಯಾಗಿದ್ದಾನೆ. 25 ವರ್ಷದ ಕರಿಸಿದ್ದಪ್ಪ ಕಳಸದ ಕೊಲೆಯಾದ ಯೋಧ. ಕರಿಸಿದ್ದಪ್ಪ ಕಳಸದನನ್ನು ಅವರ ಬಾಮೈದ ಚಾಕು ಇರಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಆರೋಪಿಯನ್ನು ಧರಿಗೌಡ ದೂಳಪ್ಪನವರ ಎಂದು ಗುರುತಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕರಿಸಿದ್ದಪ್ಪ ಕಳಸದ , ಕಳೆದ ನಾಲ್ಕು ದಿನದ ಹಿಂದೆ ರಜೆಯ ಮೇಲೆ ಊರಿಗೆ ಬಂದಿದ್ದ. ಈ ವೇಳೆ ತನ್ನ ಪತ್ನಿ ಜೊತೆ ಯೋಧ ಜಗಳವಾಡಿದ್ದಾನೆ. ಪತಿ ತನ್ನೊಂದಿಗೆ ಜಗಳವಾಡಿರುವ ವಿಚಾರವನ್ನು ಪತ್ನಿ ಆಕೆಯ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಾಳೆ. ರಜೆ ಮೇಲೆ ಬಂದಿದ್ದ ಯೋಧ ಊಟ ಮಾಡುವ ವೇಳೆ ಪತ್ನಿ ಜೊತೆ ಜಗಳವಾಡಿದ್ದಾನೆ. ಈ ವಿಚಾರಕ್ಕೆ ಯೋಧನ ಬಾಮೈದ ಕೋಪಗೊಂಡಿದ್ದಾನೆ. ತನ್ನ ಸಹೋದರಿಗೆ ಕಿರುಕುಳ ನೀಡುತ್ತೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಹೀಗೆ ಮಾತಿಗೆ ಮಾತು ಬೆಳೆದು ಜಗಳ ಚಾಕು ಇರಿತದವರೆಗೆ ತಲುಪಿದೆ.…
ಧಾರವಾಡ: ವಿಮಾ ಪಾಲಿಸಿ ಹೊಂದಿದ್ದು ಎಮ್ಮೆಯೊಂದು ಕಾಯಿಲೆಯಿಂದ ಮರಣ ಹೊಂದಿದ ಬಗ್ಗೆ ಪೂರಕ ದಾಖಲೆಗಳೊಂದಿಗೆ ಮಾಹಿತಿ ನೀಡಿದರೂ, ಪರಿಹಾರ ಪಾವತಿಸದ ವಿಮಾ ಕಂಪೆನಿಗೆ ಇಲ್ಲಿನ ಜಿಲ್ಲಾ ಗ್ರಾಹಕ ವ್ಯವಹಾರಗಳ ಪರಿಹಾರ ಆಯೋಗವು 95 ಸಾವಿರ ರೂ.ದಂಡ ವಿಧಿಸಿದೆ. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ಮುತ್ತಪ್ಪ ತಪೇಲಿ ಎಂಬುವರು ವಿಮಾ ಪಾಲಿಸಿ ಹೊಂದಿದ್ದ ತಮ್ಮ ಎಮ್ಮೆ ಖಾಯಿಲೆಯಿಂದ ಮರಣಹೊಂದಿದರೂ ಕೂಡ ಯುನಿವೆರಲ್ ಸೊಂಪೆÇ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಕಂಪನಿಯವರು ಪರಿಹಾರದ ಹಣ ನೀಡಿಲ್ಲ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆಯನ್ನು ನಡೆಸಿದ ಆಯೋಗವು ಎಮ್ಮೆಯ ಮೇಲಿನ ವಿಮಾ ಮೊತ್ತವನ್ನು ಫಿರ್ಯಾದಿಗೆ ನೀಡುವಲ್ಲಿ ಕರ್ತವ್ಯ ಲೋಪ ಎಸಗಿ ಸೇವಾ ನ್ಯೂನ್ಯತೆ ಮಾಡಿದ ವಿಮಾ ಕಂಪನಿಗೆ 95 ಸಾವಿರ ರೂ.ಗಳ ದಂಡ ವಿಧಿಸಿದೆ. 30 ದಿನಗಳ ಒಳಗಾಗಿ ಆದೇಶ ಪಾಲನೆ ಮಾಡಬೇಕು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶಪ್ಪ ಕೆ. ಭೂತೆ,…
ನುಗ್ಗೆಕಾಯಿ ತಿನ್ನುವುದರಿಂದ ಅಧಿಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ಆದರೆ ನುಗ್ಗೆಕಾಯಿ ಬೀಜಗಳು ಸಹ ಅನೇಕ ಅದ್ಭುತ ಪ್ರಯೋಜನಗಳನಗನು ಹೊಂದಿವೆ. ತಾಜಾ ಮತ್ತು ಹಸಿ ನುಗ್ಗೆಕಾಯಿ ಬೀಜಗಳು ಸಾಕಷ್ಟು ಸಾಫ್ಟ್ ಆಗಿರುತ್ತವೆ. ಆದರೆ ಅವು ಒಣಗಿದ ತಕ್ಷಣ, ಅವು ಗಟ್ಟಿಯಾಗುತ್ತವೆ. ವಿಶಿಷ್ಟವಾದ ರೆಕ್ಕೆಯಂತಹ ರಚನೆಗಳೊಂದಿಗೆ ಬೂದು-ಬಿಳಿ ಬಣ್ಣದಲ್ಲಿರುತ್ತವೆ. ಅವುಗಳನ್ನು ವಿವಿಧ ಉದ್ದೇಶಗಳಿಗಾಗಿ ಹಬೆಯಲ್ಲಿ ಬೇಯಿಸಬಹುದು, ಕುದಿಸಬಹುದು ಅಥವಾ ಹುರಿಯಬಹುದು. ನುಗ್ಗೆಕಾಯಿಯು ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಅಗತ್ಯವಾದ ಅಮೈನೋ ಆಮ್ಲಗಳಿಂದ ಸಮೃದ್ಧವಾಗಿರುವ ಪೋಷಕಾಂಶಗಳನ್ನು ಹೊಂದಿದೆ. ಇದು ದೇಹಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ನುಗ್ಗೆಕಾಯಿ ಬೀಜಗಳ 10 ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ನಿದ್ರೆಯನ್ನು ಸುಧಾರಿಸುತ್ತದೆ: ನುಗ್ಗೆಕಾಯಿ ಎಲೆಗಳನ್ನು 15 ನಿಮಿಷಗಳ ಕಾಲ ಬಿಸಿ ನೀರಿನಲ್ಲಿ ಹಾಕಿ ಮತ್ತು ನೀವು ಮಲಗುವ ಮೊದಲು ಅದನ್ನು ಕುಡಿಯಿರಿ ಮತ್ತು ರಾತ್ರಿಯ ವಿಶ್ರಾಂತಿಗಾಗಿ ಇದು ನಿಮಗೆ ಸಹಾಯ ಮಾಡುತ್ತದೆ ಮತ್ತು ರಾತ್ರಿಯಲ್ಲಿ ನಿದ್ರೆಗೆ ಜಾರಲು ಸಹಾಯ ಮಾಡುತ್ತದೆ. ಉತ್ತಮ ನಿದ್ದೆಯನ್ನು ಮಾಡಬಹುದು.…
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಶಕ್ತಿ ತುಂಬುವ ವಿಚಾರವಾಗಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಕಾನೂನು ಇಲಾಖೆ, ಅಡ್ವೊಕೇಟ್ ಜನರಲ್ ಅವರು ಅಧ್ಯಯನ ಮಾಡಿ ನೀಡುವ ವರದಿ ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ರಾಜ್ಯ ಭಾಷಾ ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದ ವತಿಯಿಂದ ಭಾರತ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ (ಸಿಸಿಪಿ) ಮತ್ತು ಭಾರತ ಸಾಕ್ಷ್ಯ ಅಧಿನಿಯಮ (ಐಇಎ), ದ್ವಿಭಾಷಾ ಕನ್ನಡ ಆವೃತ್ತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿ ಮಾತನಾಡಿದರು. ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಬದ್ಧವಾಗಿದ್ದೇವೆ. ತೀರ್ಪನ್ನು ಕಾನೂನು ಇಲಾಖೆ, ಅಡ್ವೊಕೇಟ್ ಜನರಲ್ ಅವರು ಅಧ್ಯಯನ ಮಾಡಿ ನೀಡುವ ಸಲಹೆ-ಸೂಚನೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ…
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.ಅವರ ವಶದಿಂದ ಒಟ್ಟು 2,251 ಜೀವಂತ ಕಾಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಆರೋಪಿಗಳನ್ನು ರಾಷ್ಟ್ರ ರಾಜಧಾನಿಯ ಆನಂದ್ ವಿಹಾರ್ ಪ್ರದೇಶದಲ್ಲಿ ಎರಡು ಚೀಲಗಳ ಕಾಟ್ರಿಡ್ಜ್ಗಳೊಂದಿಗೆ ಬಂಧಿಸಲಾಗಿದೆ.ಉತ್ತರ ಪ್ರದೇಶದ ಲಕ್ನೋಗೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು ಎಂದು ಪೂರ್ವ ವಲಯದ ಸಹಾಯಕ ಪೊಲೀಸ್ ಆಯುಕ್ತ ವಿಕ್ರಮಜಿತ್ ಸಿಂಗ್ ಹೇಳಿದ್ದಾರೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ಪೊಲೀಸರು ಇನ್ನೂ ತಳ್ಳಿಹಾಕಿಲ್ಲ ಎಂದು ಅವರು ಹೇಳಿದರು. “ಇದುವರೆಗೆ ಬಂಧಿಸಲಾದ ಆರು ಜನರಲ್ಲಿ ಒಬ್ಬರು ಡೆಹ್ರಾಡೂನ್ನಿಂದ ಬಂದವ ಗನ್ ಹೌಸ್ನ ಮಾಲೀಕರಾಗಿದ್ದಾರೆ. ಮೇಲ್ನೋಟಕ್ಕೆ, ಇದು ಅಪರಾಧ ಜಾಲದ ಮೂಲಕ ಮಾಡಲ್ಪಟ್ಟಿದೆ ಎಂದು ತೋರುತ್ತದೆ. ಆದಾಗ್ಯೂ, ಪೊಲೀಸರು ಭಯೋತ್ಪಾದಕ ಕೋನವನ್ನು ತಳ್ಳಿಹಾಕುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ (ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ) ಅಭಿಯಾನದ ಪ್ರಯುಕ್ತ ಇಂದು ಯಲಹಂಕ ವಲಯ ಆರ್ಎಂಝಡ್ ಗ್ಯಾಲೇರಿಯಾ ಮಾಲ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನದಡಿ ನಗರದ ವಿಧಾನಸೌಧ, ಎಂ.ಎಸ್ ಬಿಲ್ಡಿಂಗ್, ವಿ.ವಿ.ಟವರ್ ಸೇರಿದಂತೆ ಇನ್ನಿತರೆ ಪ್ರಮುಖ ಸ್ಥಳಗಳಲ್ಲಿ ಧ್ವಜಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಿರುವ ಪಾಲಿಕೆಯ ಧ್ವಜ ಮಾರಾಟ ಮೊಬೈಲ್ ಕೇಂದ್ರಕ್ಕೆ ಇದೇ ವೇಳೆ ಅವರು ಚಾಲನೆ ನೀಡಿದರು. ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕಾಗಿ ಪ್ರಚಾರ ಸಾಮಗ್ರಿಗಳಾದ ಕರಪತ್ರ, ಸ್ಟಿಕ್ಕರ್ ಹಾಗೂ ಬ್ಯಾಡ್ಜ್ ಅನ್ನು ಅನಾವರಣಗೊಳಿಸಿದರು. ಪೌರಕಾರ್ಮಿಕರಿಗೆ ಸಿಎಂ ಅಭಿನಂದನಾ ಪತ್ರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂದೇಶದ ಮೂಲಕ ಅಭಿನಂದನಾ ಪತ್ರವನ್ನು ಕಳುಹಿಸಿದ್ದು, ಅಭಿನಂದನಾ ಪತ್ರವನ್ನು…
ಚಾಮರಾಜಪೇಟೆ ಆಟದ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಸಕಲ ಸಿದ್ಧತೆಗಳು ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಪಶ್ಚಿಮ ವಿಭಾಗ ಪೊಲೀಸರು ಡಿಸಿಪಿ ಲಕ್ಷ್ಮಣ್ ನಿಂಬರಗಿ ನೇತೃತ್ವದಲ್ಲಿ ಪಥ ಸಂಚಲನ ನಡೆಸಿದರು. ಸಿಎಆರ್, ಕೆಎಸ್ಆರ್ಪಿ ಹಾಗೂ ಸ್ಥಳೀಯ ಪೊಲೀಸರನ್ನೊಳಗೊಂಡ ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಟಿಪ್ಪು ನಗರ, ವಾಲ್ಮಿಕಿನಗರ, ಚಾಮರಾಜಪೇಟೆ ಸೇರಿದಂತೆ ವಿವಿಧೆಡೆ ಪಥ ಸಂಚಲನ ನಡೆಸಿ ಸಾರ್ವಜನಿಕರಿಗೆ ಭರವಸೆ ಮೂಡಿಸಿದ್ದಾರೆ. ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವನ್ನು ಅದ್ಧೂರಿಯಾಗಿ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ಇಲ್ಲಿ ಭದ್ರತೆ ಕಲ್ಪಿಸುವುದು ದೊಡ್ಡ ಸವಾಲಾಗಿದೆ. ಈಗಾಗಲೇ ಚಾಮರಾಜಪೇಟೆ ಆಟದ ಮೈದಾನದ ವಿವಾದ ತಾರಕಕ್ಕೇರಿ ಸದ್ಯ ನಿಯಂತ್ರಣದಲ್ಲಿದ್ದು, ಸರ್ಕಾರದ ಮಧ್ಯಸ್ಥಿಕೆಯಲ್ಲಿ ಸಂಧಾನ ಪ್ರಕ್ರಿಯೆಗಳು ನಡೆದಿದೆ. ಈ ನಡುವೆ ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜರೋಹಣ ನಡೆಯುವುದು ಬಾರಿ ಕುತೂಹಲ ಕೆರಳಿಸಿದೆ. ಕೆಲ ಸಂಘಟನೆಗಳ ಮುಖಂಡರು ಹಾಗೂ ಸ್ಥಳೀಯ ಶಾಸಕರು ಕೂಡ ಅದ್ಧೂರಿಯಾಗಿ…