Author: admin

ಬೆಳ್ತಂಗಡಿ, ಅ.13- ತಾಲೂಕು ಹಾಗೂ ರಾಜ್ಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ತಮ್ಮ ಯೋಚನೆ ಹಾಗೂ ಯೋಜನೆಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದ ವಸಂತಮಹಲ್ ಬಳಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿಕರು ಹಾಗೂ ಅಡಿಕೆ ಬೆಳೆಗಾರರು ಅನೇಕ ಸಮಸ್ಯೆಗಳಿಂದ ಹತಾಶರಾಗಿದ್ದಾರೆ. ಅವರ ಬಗ್ಗೆ ಸಂಸತ್‍ನಲ್ಲಿ ಧ್ವನಿ ಎತ್ತುವುದಲ್ಲದೆ, ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಭರವಸೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯದಲ್ಲಿ ಏಳು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಈಗಾಗಲೆ ಪ್ರಾರಂಭಿಸಿದ್ದು, ಜನಸಾಮಾನ್ಯರಿಗೆ ಆಧಾರ್ ಕಾರ್ಡ್, ಆರೋಗ್ಯ ವಿಮೆ, ನೆರೆ-ಬರ ಪರಿಹಾರ, ಕೂಲಿ ಕಾರ್ಮಿಕರಿಗೆ ಇ-ಶ್ರಮ ಕಾರ್ಡ್ , ಆಯುಷ್ಮಾನ್ ಕಾರ್ಡ್ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗಿದೆ. ಧರ್ಮಸ್ಥಳದ ಮಂಜುನಾಥನ ಬಗ್ಗೆ ದೃಢ ನಂಬಿಕೆ ಎಲ್ಲರಲ್ಲಿದೆ. ದೇವಸ್ಥಾನದಲ್ಲಿ ಧಾರ್ಮಿಕ ಪರಂಪರೆ, ಶಿಸ್ತು,…

Read More

ಇರ್ವಿನ್ ರಸ್ತೆ ವಿಸ್ತರಣೆಗೆ ಎದುರಾಗಿದ್ದ ಕೆಲ ವಾಣಿಜ್ಯ ಕಟ್ಟಡಗಳು ಮತ್ತು ಮಸೀದಿಯ ಗೋಡೆಗಳ ತೆರವು ಕಾರ್ಯಾಚರಣೆ ರಾತ್ರಿಯಿಂದಲೇ ಆರಂಭಿಸಲಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಇದರೊಂದಿಗೆ ರಸ್ತೆ ವಿಸ್ತರಣೆಗೆ ಇದ್ದ ಅಡೆ ತಡೆ ಕೊನೆಗೂ ನಿವಾರಣೆಯಾಗಿದೆ. ಈ ರಸ್ತೆ ವಿಸ್ತರಣೆಗೆ ಹಲವು ವರ್ಷಗಳಿಂದಲೂ ಪ್ರಯತ್ನ ನಡೆದಿತ್ತು. ಆದರೆ ಈ ರಸ್ತೆಯಲ್ಲಿರುವ ವಾಣಿಜ್ಯ ಕಟ್ಟಡಗಳು ಮತ್ತು ಮಸೀದಿಯ ಗೋಡೆಯನ್ನು ಒಡೆಯಲು ತಡೆಯಾಜ್ಞೆ ಇದ್ದ ಕಾರಣ ಇಷ್ಟು ವರ್ಷಗಳವರೆಗೆ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ತಡೆಗೋಡೆ ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ. ಮಸೀದಿ ಮಂಡಳಿಯವರೊಂದಿಗೆ ಚರ್ಚಿಸಿ ಮನವೊಲಿಸಲಾಗಿದೆ. ನಂತರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ತೆರವುಕಾರ್ಯ ಪೂರ್ಣಗೊಳ್ಳಲಿದೆ. ಇದರಿಂದ ರಸ್ತೆಯನ್ನು 10ರಿಂದ 12 ಅಡಿಗಳವರೆಗೆ ವಿಸ್ತರಣೆ ಮಾಡಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ ತಿಳಿಸಿದ್ದಾರೆ. ಗೋಡೆಯನ್ನು ತೆರವುಗೊಳಿಸುವುದರಿಂದ ಇರ್ವಿನ್ ರಸ್ತೆಯ ವಿಸ್ತರಣೆಗೆ ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ. ಜನರಿಗೆ, ವಾಹನಗಳ ಸಂಚಾರಕ್ಕೆ ಅನುಕೂಲವಾಗಲಿದೆ. ಇದಕ್ಕಾಗಿ ಹೈಕೋರ್ಟ್ ಗೆ ಮತ್ತು…

Read More

ರಾಜ್ಯದಲ್ಲಿ ಮಳೆಯ ಅಬ್ಬರ ತಪ್ಪಿದರೂ ಉಕ್ಕಿ ಹರಿಯುತ್ತಿರುವ ಜಲಾಶಯಗಳಿಂದ ಪ್ರವಾಹದ ಭೀತಿ ಎದುರಾಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವ ಹಾಗೆ ಮಳೆ ಪ್ರಮಾಣ ರಾಜ್ಯದಲ್ಲಿ ತಗ್ಗಿದರೂ ಮಳೆಯ ಅವಾಂತರಗಳು ಮಾತ್ರ ಹೆಚ್ಚಾಗಿವೆ. ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಜಿಲ್ಲೆಯ ಕಡೂರು ತಾಲ್ಲೂಕಿನ ಐತಿಹಾಸಿಕ ಮದಗದ ಕೆರೆ ಏರಿಯಲ್ಲಿ ಭೂ ಕುಸಿತ ಉಂಟಾಗಿದೆ. ಮುಳ್ಳಯ್ಯನಗಿರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಕೆರೆಗೆ ಹರಿದುಬರುತ್ತಿದ್ದು, ಏರಿ ಬಿರುಕುಬಿಟ್ಟ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಹೆಗ್ಗಾರು ಕೂಡಿಗೆಯಲ್ಲಿ ರಸ್ತೆ ಕೊಚ್ಚಿ ಹೋಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಚಕನೂರು ಗ್ರಾಮದಲ್ಲಿರುವ ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದ್ದು, ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಘಟಪ್ರಭ ನದಿ ತುಂಬಿ ಹರಿಯುತ್ತಿರುವುದರಿಂದ ಜಮೀನುಗಳಿಗೆ ನೀರು ನುಗ್ಗಿ ಕಬ್ಬಿನ ಬೆಳೆ ನಾಶವಾಗಿದೆ. ಜಲಾಶಯದಿಂದ ಭಾರೀ…

Read More

ಬೆಂಗಳೂರು : ರಾಜ್ಯದಲ್ಲಿ ಸದ್ಯ ಚರ್ಚಿತ ವಿಷಯ ಎಂದರೆ ಹೈಕೋರ್ಟ್ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿ ಆದೇಶ ನೀಡಿದೆ. 2016 ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಎಸಿಬಿ ಸಂಸ್ಥೆ ರಚನೆಯಾಗಿತ್ತು.‌ ಈಗ ಕೋರ್ಟ್ ಕೊಟ್ಟಿರುವ ತೀರ್ಪು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ. ಇಷ್ಟು ದಿನ ಆಟಕ್ಕೂಂಟು ಲೆಕ್ಕಕ್ಕಿಲ್ಲ ಎನ್ನುವಂತಿದ್ದ ಲೋಕಾಯುಕ್ತದಲ್ಲಿ ಬಾಕಿಯಿರುವ ಪ್ರಕರಣಗಳು ಸಾಕಷ್ಟಿವೆ. ಒಟ್ಟು 8,036 ಪ್ರಕರಣಗಳು ಲೋಕಾಯುಕ್ತದಲ್ಲಿ ಬಾಕಿ ಇವೆ. ಇದರಲ್ಲಿ‌‌ 2,430 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಗಂಭೀರವಲ್ಲದ 13 ಸಾವಿರ ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. ಈ ಪೈಕಿ 12 ಸಾವಿರ ಪ್ರಕರಣಗಳು ಇತ್ಯರ್ಥವಾಗಿವೆ. 2017 ರಿಂದ ಇಲ್ಲಿಯವರೆಗೂ ಅಂದರೆ ಐದು ವರ್ಷದಲ್ಲಿ 20,549 ಪ್ರಕರಣ ದಾಖಲಾಗಿವೆ. ಇದರಲ್ಲಿ 2, 431 ಪ್ರಕರಣಗಳನ್ನ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ 304 ಸ್ವಯಂ ಪ್ರೇರಿತ ದೂರನ್ನ ಲೋಕಾಯುಕ್ತ ದಾಖಲಿಸಿಕೊಂಡಿದೆ. ಒಟ್ಟಾರೆಯಾಗಿ ಈ ಎಲ್ಲಾ ಪ್ರಕರಣಗಳ ಜೊತೆ ಹೈಕೋರ್ಟ್ ಆದೇಶ ನೀಡಿರುವಂತೆ ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ…

Read More

ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಮತ್ತೊಂದು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರವೇಶಿಸಲಿದೆ. ವಾಸ್ತವವಾಗಿ, ಓಲಾ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಲಿದೆ. Ola S1 ಮತ್ತು Ola S1 Pro ಬಿಡುಗಡೆಯ ನಂತರ ಕಂಪನಿಯು ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್‌ನ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಕಂಪನಿಯು ಹೊಸ ಸ್ಕೂಟರ್ ಅನ್ನು ತರಲಿದೆ ಎಂದು ಓಲಾ ಕಂಪನಿಯ ಸಿಇಒ ಭವಿಶ್ ಅಗರ್ವಾಲ್ ವೀಡಿಯೊ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಕಂಪನಿಯು ತನ್ನ S1 ಪ್ರೊ ಇ-ಸ್ಕೂಟರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ ಕೇವಲ ಒಂದು ವರ್ಷದ ನಂತರ ಆಗಸ್ಟ್ 15 ರಂದು ಹೊಸ ಉತ್ಪನ್ನವನ್ನು ತರಲಿದೆ ಎಂಬು ಗಮನಾರ್ಹ ಸಂಗತಿ. ಓಲಾ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾಹಿತಿ ನೀಡಿದ ಕಂಪನಿಯ ಸಿಇಒ ಭವಿಶ್ ಅಗರ್ವಾಲ್, “ಆಗಸ್ಟ್ 15 ರಂದು, ನಾವು ನಮ್ಮ ಹಸಿರು ಇವಿಯನ್ನು ಪ್ರಸ್ತುತಪಡಿಸುತ್ತೇವೆ” ಎಂದು ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ಈ ವೀಡಿಯೊ ಟ್ವೀಟ್‌ನಲ್ಲಿ ಟೀಸರ್ ಎಲೆಕ್ಟ್ರಿಕ್ ಸ್ಕೂಟರ್…

Read More

ಬೆಂಗಳೂರು : ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಲ್ಲ ವರ್ಗಗಳಿಗೂ ವಯೋಮಿತಿಯಲ್ಲಿ 2 ವರ್ಷ ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1, ವಿಕಲಚೇತನರಿಗೆ 47 ವರ್ಷ ಮೀರಬಾರದು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ 45 ವರ್ಷ ಹಾಗೂ ಸಾಮಾನ್ಯ ವರ್ಗಗಳಿಗೆ 42 ವರ್ಷ ಮೀರಬಾರದು. ಇನ್ನೂ ಶಿಕ್ಷಕರಾಗಿ ಆಯ್ಕೆಯಾಗಲು ಇದ್ದ ಕಟ್ ಆಫ್ಅಂಕಗಳನ್ನು 60 ರಿಂದ 50 ಕ್ಕೆ ಇಳಿಸಲು ಸರ್ಕಾರ ಮುಂದಾಗಿದೆ. ಕ್ಯಾಬಿನೆಟ್ ನಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು – ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಓಬಿಸಿ ಮೀಸಲಾತಿ ಸಂಬಂಧ ಭಕ್ತವತ್ಸಲ ಕಮಿಟಿ ಶಿಫಾರಸು ಅನುಮೋದನೆ ನೀಡಿದೆ. ಶೇ. 50 ಕ್ಕೂ ಮೀರದಂತೆ ಮೀಸಲಾತಿ ನೀಡಲಾಗುತ್ತಿದೆ. ಎಸ್ಸಿ, ಎಸ್ಟಿ, ಓಬಿಸಿ ಶೇಕಡಾ 50 ಮೀರುವಂತಿಲ್ಲ ಎಂದು ತಿಳಿಸಿದೆ. ವರದಿಯ ಪ್ರಾಥಮಿಕ ಶಿಫಾರಸುಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಶೇ.…

Read More

ಬೆಂಗಳೂರು : ಇಲ್ಲಿಯವರೆಗೂ ದೇಶದ ಕೆಂಪು ಕೋಟೆ ಸೇರಿದಂತೆ ಸರ್ಕಾರಿ ಕಟ್ಟಡಗಳು, ಸಂಘಸಂಸ್ಥೆಗಳಲ್ಲಿ ಖಾದಿ ರಾಷ್ಟ್ರಧ್ವಜಗಳು ದೇಶದ ಹೆಮ್ಮೆಯ ಪ್ರತೀಕವಾಗಿ ರಾರಾಜಿಸುತ್ತಿದ್ದವು. ಇದೀಗ ಕೇಂದ್ರ ಸರ್ಕಾರ ಧ್ವಜ ಸಂಹಿತೆಯಲ್ಲಿ ಮಾಡಿದ ತಿದ್ದುಪಡಿಯಿಂದಾಗಿ ಕೈಯಲ್ಲಿ ನೂಲುವ ಖಾದಿ ತ್ರಿವರ್ಣ ಧ್ವಜಗಳೇ ಅಲ್ಲದೆ ಯಂತ್ರಗಳಲ್ಲಿ ಮಾಡುವ ಪಾಲಿಸ್ಟರ್ ಧ್ವಜಗಳನ್ನು ಕೂಡ ಬಳಸಲು ಅನುಮತಿಸಿದೆ. ಅಲ್ಲದೆ ಹರ್ ಘರ್ ತಿರಂಗ ಅಭಿಯಾನದಡಿ ರಾತ್ರಿ ಹಗಲು ಸಾರ್ವಜನಿಕವಾಗಿ ಮನೆಗಳಲ್ಲಿ ಪ್ರದರ್ಶಿಸಲು ಬಯಸಿದರೆ, ಇದಕ್ಕೆ ಅನುಮತಿ ನೀಡುವ ತಿದ್ದುಪಡಿಯನ್ನೂ ಮಾಡಲಾಗಿದೆ. ಗಾಂಧಿ ಭವನ ಬಳಿಯ ಖಾದಿ ಎಂಪೋರಿಯಂ ವ್ಯವಸ್ಥಾಪಕ ಸಂಗಮೇಶ್ವರ್ ಮಠ್, ಮಾರುಕಟ್ಟೆಗಳಲ್ಲಿ ಪಾಲಿಸ್ಟರ್ ಧ್ವಜಗಳು ಕೈಗೆಟಕುವ ದರದಲ್ಲಿದೆ ಎಂಬ ಕಾರಣಕ್ಕಾಗಿ ಹೆಚ್ಚು ಮಾರಾಟ ನಡೆಯುತ್ತಿವೆ. ಈ ನಡುವೆ ಖಾದಿ ವಸ್ತ್ರದ ತ್ರಿವರ್ಣ ಧ್ವಜಕ್ಕೂ ಉತ್ತಮ ಬೇಡಿಕೆ ಇದೆ. ಈ ವರ್ಷ ಮನೆ ಮನೆ ತ್ರಿವರ್ಣ ಧ್ವಜದ ಅಭಿಯಾನದ ಹಿನ್ನಲೆ ಪ್ರತೀ ವರ್ಷಕ್ಕಿಂತ ಈ ಬಾರಿ ಮೂರು ಪಟ್ಟು ಹೆಚ್ಚು ವ್ಯಾಪಾರ ನಡೆದಿದೆ. ಈ ವರ್ಷ 34 ಲಕ್ಷ…

Read More

ಇಂದು ದೇಶದ ಹಲವು ರಾಜ್ಯಗಳಲ್ಲಿ ಭಾತೃತ್ವದ ಸಂಕೇತವಾಗಿರುವ ರಕ್ಷಾಬಂಧನ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಸಹೋದರಿಯರು ತಮ್ಮ ಸಹೋದರರ ಕೈಗೆ ರಾಖಿಯನ್ನು ಕಟ್ಟಿದ್ದಾರೆ. ಇಂತಹುದರಲ್ಲಿ ರಾಜಸ್ಥಾನದ ರಾಜಸಮಂಜ್ ಜಿಲ್ಲೆಯಿಂದ ಒಂದು ವಿಶಿಷ್ಟ ಸುದ್ದಿಯೊಂದು ಹೊರಹೊಮ್ಮಿದೆ. ವಾಸ್ತವದಲ್ಲಿ ಅಲ್ಲಿನ ಓರ್ವ ಮಹಿಳೆಯು ಒಂದು ಚಿರತೆಯ ಕೈಗೆ ರಾಖಿಯನ್ನು ಕಟ್ಟಿ ರಕ್ಷಾಬಂಧನ ಉತ್ಸವವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸಿದ್ದಾರೆ. ಈ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು, ರಾಖಿ ಕಟ್ಟುವ ಸಂದರ್ಭದಲ್ಲಿ ಚಿರತೆ ಮಹಿಳೆಗೆ ಯಾವುದೇ ರೀತಿಯ ಹಾನಿಯನ್ನುಂಟು ಮಾಡಿಲ್ಲ ಎಂಬುದು ಇಲ್ಲಿ ತುಂಬಾ ವಿಶೇಷವಾಗಿದೆ. ಚಿರತೆಗೆ ರಾಖಿ ಕಟ್ಟಿದ ಮಹಿಳೆ ರಾಜಸಮಂಜ್ ಜಿಲ್ಲೆಯ ಖೇಡಾ ಗ್ರಾಮದ ನಿವಾಸಿಯಾಗಿರುವ ಲೀಲಾ ಹೆಸರಿನ ಮಹಿಳೆ ತನ್ನ ಪತಿಯೊಂದಿಗೆ ತವರು ಮನೆಗೆ ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಗಾಯಗೊಂಡ ಒಂದು ಚಿರತೆ ರಸ್ತೆಯ ಪಕ್ಕದಿಂದ ಸಾಗುತ್ತಿರುವುದನ್ನು ಆಕೆ ಗಮನಿಸಿದ್ದಾಳೆ. ಆಗ ವಾಹನವನ್ನು ನಿಲ್ಲಿಸಲು ಹೇಳಿದ ಮಹಿಳೆ ಚಿರತೆಯ ಮುಂದಿನ ಕೈಗೆ ರಾಖಿಯನ್ನು…

Read More

ಮುಂಬೈ: ಸಾಲ ವಸೂಲಿ ವೇಳೆ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವುದು ಮತ್ತು ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ನಂತರ ಪೋನ್‌ ಮಾಡುವಂತಿಲ್ಲವೆಂದು ಆರ್‌ಬಿಐ ಹೊಸ ಸುತ್ತೋಲೆ ಬಿಡುಗಡೆ ಹೊರಡಿಸಿದ್ದು, ಖಡಕ್ ಎಚ್ಚರಿಕೆ ನೀಡಿದೆ. ಬ್ಯಾಂಕ್‌ ಗಳು, ಎನ್‌ಬಿಎಫ್‌ಸಿಗಳು ಮತ್ತು ಎಆರ್‌ಸಿಗಳು ಸೇರಿದಂತೆ ನಿಯಂತ್ರಿತ ಘಟಕಗಳಿಗೆ ಹೆಚ್ಚುವರಿ ಸೂಚನೆ ನೀಡುವಾಗ ರಿಸರ್ವ್ ಬ್ಯಾಂಕ್ (RBI) ಸಾಲ ವಸೂಲಾತಿಗೆ ಸಂಬಂಧಿಸಿದಂತೆ ವಸೂಲಾತಿ ಏಜೆಂಟ್‌ಗಳು ತನ್ನ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದೆ. ಈ ಹಿಂದೆಯೇ ಹೊರಡಿಸಲಾಗಿರುವ ನಿಯಮಗಳನ್ನು ಸಂಸ್ಥೆಗಳು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಹೊಸ ಸುತ್ತೋಲೆ ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಸಾಲ ವಸೂಲಿ ಸಂದರ್ಭದಲ್ಲಿ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸುವಂತೆ ಇಲ್ಲ. ಅನಪೇಕ್ಷಿತ ಸಂದೇಶಗಳನ್ನು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಫೋನ್‌ ಮಾಡುವಂತಿಲ್ಲವೆಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ…

Read More

ನವದೆಹಲಿ: ಪಶ್ಚಿಮ ನ್ಯೂಯಾರ್ಕ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಲೇಖಕ ಸಲ್ಮಾನ್ ರಶ್ದಿಗೆ ಅಪರಿಚಿತ ವ್ಯಕ್ತಿಯೊಬ್ಬ ಚಾಕು ಇರಿದು ಹಲ್ಲೆ ನಡೆಸಿದ್ದಾನೆ. ಷಟೌಕ್ವಾ ಇನ್‌ಸ್ಟಿಟ್ಯೂಟ್‌ ನ ವೇದಿಕೆಯ ಮೇಲೆ ಆಯೋಜಕರು ರಶ್ದಿ ಅವರನ್ನು ಭಾಷಣಕ್ಕೆ ಆಹ್ವಾನಿಸುತ್ತಿದ್ದಂತೆಯೇ ದಿಢೀರ್ ದಾಳಿ ನಡೆಸಿದ ಅಪರಿಚಿತ ವ್ಯಕ್ತಿ ರಶ್ದಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಅವರು ನೆಲಕ್ಕೆ ಕುಸಿದುಬಿದ್ದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ವೆಂಟಿಲೇಟರ್‌ನಲ್ಲಿ ಸಲ್ಮಾನ್ ರಶ್ದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ದಾಳಿಯ ಪರಿಣಾಮ ಅವರು ತಮ್ಮ ಒಂದು ಕಣ್ಣನ್ನು ಕಳೆದುಕೊಳ್ಳೂವ ಸಾಧ‍್ಯತೆ ಇದೆ ಎಂದು ತಿಳಿದುಬಂದಿದೆ. ಚಾಕು ಇರಿತದಿಂದ ರಶ್ದಿಯವರ ತೋಳಿನ ನರಗಳು ತುಂಡಾಗಿದ್ದು, ಯಕೃತ್ತಿಗೆ ಹಾನಿಯುಂಟಾಗಿದೆ. ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಬಫಲೋದಿಂದ ದಕ್ಷಿಣಕ್ಕೆ 75 ಮೈಲುಗಳಷ್ಟು ದೂರದಲ್ಲಿರುವ ಷಟೌಕ್ವಾದಲ್ಲಿ ಈ ಘಟನೆ ನಡೆದಿದೆ. ಇನ್ಸ್ಟಿಟ್ಯೂಟ್ ಪ್ರಕಾರ ‘ಅಭಿವ್ಯಕ್ತಿ ಸ್ವಾತಂತ್ರ್ಯದ ನೆಲೆಯಾಗಿ’ ದೇಶಭ್ರಷ್ಟ ಲೇಖಕರಿಗೆ ಅಮೆರಿಕ’ ವಿಷಯದ ಬಗ್ಗೆ ರಶ್ದಿ ಮಾತನಾಡಬೇಕಿತ್ತು. ಚಾಕು ಇರಿತದ ನಂತರ ಅವರನ್ನು ಹೆಲಿಕಾಪ್ಟರ್ ಮೂಲಕ…

Read More