Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟ ಅರೆಸ್ಟ್ ಆಗಿದ್ದಾನೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ. ‘ಮಿಸ್ಟರ್ ಭೀಮರಾವ್’ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಅರೋಪಿ ಯುವ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯವಾಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದನೆಂದು ತಿಳಿದುಬಂದಿದೆ. ಉದ್ಯಮಿಗೆ ಭೇಟಿಯಾಗಿದ್ದ ಆತ ತಾವು ಕ್ರೈಂ ಪೊಲೀಸರು ಎಂದು ಹೇಳಿ ಹೆದರಿಸಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಸಹ ಬೆದರಿಕೆ ಹಾಕಿದ್ದ. ಈ ಕೇಸ್ ಕ್ಲೋಸ್ ಮಾಡಬೇಕೆಂದರೆ ನೀವು ನನಗೆ ಹಣ ನೀಡಬೇಕೆಂದು ಕೇಳಿದ್ದ. ಅದರಂತೆ ಮೊದಲಿಗೆ 50 ಸಾವಿರ, ನಂತರ ಬ್ಯಾಂಕ್ನಲ್ಲಿ 3 ಲಕ್ಷ ಡ್ರಾ ಮಾಡಿಸಿಕೊಂಡಿದ್ದ. ಹಂತ ಹಂತವಾಗಿ ಒಟ್ಟು 14 ಲಕ್ಷ ರೂ.ಗೂ ಹೆಚ್ಚಿನ ಹಣವನ್ನು ಉದ್ಯಮಿ ಬಳಿ ವಸೂಲಿ ಮಾಡಿದ್ದ. ಹಲಸೂರು ಗೇಟ್ ಬಳಿ…
ಕ್ರೇಜಿಸ್ಟಾರ್ ರವಿಚಂದ್ರನ್ ಅಂದ್ರೇನೆ ಡಿಫರೆಂಟ್..ತನಗನಿಸಿದ್ದು ಏನು ಅದನ್ನೇ ಮಾಡಿ ತೋರಿಸೋರು ಅಂದ್ರೆ ಅದು ಕೇವಲ ನಮ್ಮ ಕನಸುಗಾರ. ನೋಡ್ರೋ ನಿಮಗಾಗಿ ಸಿನಿಮಾ ಮಾಡ್ತೀನಿ..ಪ್ರಚಾರ ಮಾಡಲ್ಲ..ನೀವೇ ಮಾಡ್ಕೊಳ್ಳಿ ಅಂತ ಅಭಿಮಾನಿಗಳ ಮೇಲೆ ನಂಬಿಕೆ ಇಟ್ಟು ಸಿನಿಮಾ ಮಾಡ್ತಾರೆ. ಅಂತೆಯೇ ಇದೀಗ ಕನಸುಗಾರನ ಕನಸಿನ ಕೂಸು “ರವಿ ಬೋಪಣ್ಣ” ಸಿನಿಮಾ ಭರ್ಜರಿಯಾಗಿ ತೆರೆ ಕಂಡಿದೆ. ಹಾಗಾದ್ರೆ “ರವಿ ಬೋಪಣ್ಣ” ಸಿನಿಮಾ ಹೇಗಿದೆ ಅನ್ನೋದ್ರ ಪಕ್ಕಾ ರಿವ್ಯೂ ನಿಮ್ಮ ಜೀ ಕನ್ನಡ ನ್ಯೂಸ್ ನಿಮ್ಮ ಮುಂದಿಡುತ್ತಿದೆ. ವಿಭಿನ್ನ ಪಾತ್ರಗಳನ್ನ ಮಾಡಲು ಸಾಧ್ಯವಾಗೋದು ಚಿತ್ರಬ್ರಹ್ಮನಿಗಷ್ಟೇ. ಹೊಸತನವಿರಬೇಕು ಅಂತ ಡಿಫರೆಂಟಾಗೇ ಚಿತ್ರಗಳನ್ನ ಮಾಡುತ್ತಾರೆ.ಸೋಲು-ಗೆಲುವು ಏನೇ ಬಂದ್ರು ಗಟ್ಟಿತನದಿಂದ ಸ್ವೀಕಾರ ಮಾಡುತ್ತಾರೆ. ‘ರವಿ ಬೋಪಣ್ಣ’ ಚಿತ್ರದಲ್ಲಿ ಅವರು ನಮ್ಮೊಳಗಿರೋ ವ್ಯಕ್ತಿತ್ವವನ್ನ ಇಟ್ಕೊಂಡೆ ಅದ್ಬುತವಾಗಿ ಕಥೆ ಬರೆದಿದ್ದಾರೆ. ‘ರವಿ ಬೋಪಣ್ಣ’ ಸಿನಿಮಾದಲ್ಲಿ ಅಥಿತಿ ಪಾತ್ರದಲ್ಲಿ ಕಿಚ್ಚ ಕಮಲ್ ಮಾಡಿದ್ದಾರೆ. ಇದು ಈ ಸಿನಿಮಾ ಇನ್ನಷ್ಟು ತೂಕ ಹೆಚ್ಚಾಗಿದೆ. ಕಾವ್ಯಾ ಶೆಟ್ಟಿ, ರಾಧಿಕಾ ಕುಮಾರಸ್ವಾಮಿ ಅವರ ಮೈಮಾಟ ಪಕ್ಕಾ ಪಡ್ಡೆ ಹುಡುಗರ ನಿದ್ದೆ…
ಡ್ರೋನ್ ಮೂಲಕ ಇಲ್ಲಿನ ವಿಕ್ಟೋರಿಯಾ ಸ್ಮಾರಕ ಭವನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಛಾಯಾಚಿತ್ರಗಳನ್ನು ಸೆರೆಹಿಡಿದ ಆರೋಪದ ಮೇಲೆ ಇಬ್ಬರು ಬಾಂಗ್ಲಾದೇಶೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯೂಸಿಯಂನ ಭದ್ರತೆಯಲ್ಲಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಹೇಸ್ಟಿಂಗ್ಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಕಾರ್ಯಾಚರಣೆ ಕೈಗೊಂಡು ಬಾಂಗ್ಲಾದೇಶದ ಇಬ್ಬರನ್ನು ವಿಕ್ಟೋರಿಯಾ ಮೆಮೋರಿಯಲ್ ಹಾಲ್ ಕಾಂಪೌಂಡ್ನಲ್ಲಿ ಬಂಧಿಲಾಗಿದೆ. ಆರಂಭಿಕ ತನಿಖೆಯಲ್ಲಿ ಇಬ್ಬರು ಬಾಂಗ್ಲಾದೇಶಿಗಳು ಮಾನವರಹಿತ ವೈಮಾನಿಕ ವಾಹನ ಡ್ರೋನ್ ಬಳಸಿ ಅವರು ಸ್ಮಾರಕ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಛಾಯಾಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿ ಸೇನೆಯ ಪೂರ್ವ ಕಮಾಂಡ್ ಪ್ರಧಾನ ಕಛೇರಿಯೂ ಇದೆ ಇಬ್ಬರು ಬಾಂಗ್ಲಾದೇಶೀಯರನ್ನು ಆಗಸ್ಟ 23 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅವರು ವಿಮಾನ ಕಾಯಿದೆಯನ್ನು ಉಲ್ಲಂಘಿಸಿದ್ದಾರೆ. ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಡ್ರೋನ್ಗಳನ್ನು ಹಾರಿಸುವುದನ್ನು ನಿಷೇಧಿಸಲಾಗಿದೆ ಏಕೆಂದರೆ ಇದು ಡ್ರೋನ್ ರಹಿತ ವಲಯವಾಗಿದೆ ಮತ್ತು ರಕ್ಷಣಾ ಪ್ರದೇಶದಲ್ಲಿಯೂ ಬರುತ್ತದೆ.…
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲಾಯಲ್ಲಿ ಬಿಹಾರದ ಮೂಲದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಅಜಾಶ್ ವಲಯದಲ್ಲಿ ಕಳೆದ ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಭಯೋತ್ಪಾದಕರು ಮೊಹಮ್ಮದ್ ಅಮ್ರೇಜ್ನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಈತ ಬಿಹಾರದ ಮಾಧೇಪುರ ಪ್ರದೇಶದ ಸೋದಾನರಾ ಸುಂಬಲನ ನಿವಾಸಿ ಎನ್ನಲಾಗಿದ್ದು ಕಾಶ್ಮೀರದಲ್ಲಿ ಆತ ಕೆಲಸಮಾಡುತ್ತಿದ್ದ. ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟಿ ನಂತರ ಒಳಗೆ ನುಗ್ಗಿ ಗುಂಡುಹಾರಿಸಿ ಭಯೋತ್ಪಾದಕರು ಅಲ್ಲಿಂದ ಪರಾರಿಯಾಗಿದ್ದಾರೆ. ಮತ್ತೊಬ್ಬನ ಮೇಲೂ ಗುಂಡು ಹಾರಿಸಲಾಗಿದ್ದು ಆತ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಶಾಸಕ ಸುದೀಪ್ ರಾಯ್ ಬರ್ಮನ್ ಮತ್ತು ಕಾಂಗ್ರೇಸ್ ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸುಶಾಂತ ಚಕ್ರವರ್ತಿ ಸೇರಿದಂತೆ ಇತರೆ ನಾಲ್ವರು ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಇಲ್ಲಿ ನಡೆದಿದೆ. ಅಗರ್ತಲಾದ ರಾಣಿರ್ ಬಜಾರ್ನಲ್ಲಿ ಸ್ಥಳೀಯ ಕಾಂಗ್ರೆಸ್ಮುಖಂಡರು ರ್ಯಾಲಿ ಆಯೋಜಿಸಿದ್ದರು ಅಲಿಗೆ ಬರುವಾಗ ಶಾಸಕರು ಮುಖಂಡರ ಮೆಲೆ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ಶಾಸಕ ರಾಯ್ ಬರ್ಮನ್ ಮತ್ತು ಚಕ್ರವರ್ತಿ, ಮಹಿಳಾ ಘಟಕದ ನಾಯಕಿ ಸುಮನಾ ಸಹಾ ಅವರನ್ನು ಇಲ್ಲಿನ ಜಿಬಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.ದಾಳಿಯ ವೇಳೆ ಕನಿಷ್ಠ 12 ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಅನುಮತಿಯಿಲ್ಲದೆ ರ್ಯಾಲಿ ಆಯೋಜಿಸಲಾಗಿತ್ತು ಏಕಾಏಕಿ ನೂರಕ್ಕೂ ಹೆಚ್ಚು ಜನರ ಗುಂಪು ದಾಳಿ ನಡೆಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಇದೇ ವೇಳೆ ಹಲವೆಡೆ ಎಂಟು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.ಬಿಜೆಪಿ ವಿರುದ್ದ ಕಾಂಗ್ರೇಸ್ ನಾಯಕರು ಆರೋಪಿಸಿದ್ದಾರೆ. ಕಾಂಗ್ರೇಸ್ ನ ಕಾನೂನು ಘಟಕವು ಪೊಲೀಸರಿಗೆ ದೂರು…
ಪೊಲೀಸ್ ಮೆಸ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್ಟೇಬಲ್ ವೊಬ್ಬರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಡಿಯೋ ವೈರಲ್ಲಾಗಿದೆ. ಫಿರೋಜಾಬಾದ್ನ ಪೊಲೀಸ್ ಹೆಡ್ಕ್ವಾಟ್ರ್ರಸ್ನ ಮೆಸ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ರೊಟ್ಟಿ ದಾಲ್ ಮತ್ತು ಚಟ್ನಿ ಇರುವ ಆಹಾರದ ಪ್ಲೇಟ್ನ್ನು ಹಿಡಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಸ್ಟೆಬಲ್ ಮನೋಜ್ಕುಮಾರ್ ರಸ್ತೆಗೆ ಬಂದಿದ್ದಾರೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮುಂದೆ ಹೋಗಿ ನಾಯಿಯೂ ತಿನ್ನದಂತಹ ಕೆಟ್ಟ ಆಹಾರವನ್ನು ನಮಗೆ ನೀಡಲಾಗುತ್ತಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಪೌಷ್ಟಿಕ ಆಹಾರಕ್ಕಾಗಿ ಹೆಚ್ಚುವರಿಯಾಗಿ 1875 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. ಆದರೆ ಈ ರೊಟ್ಟಿ ನೋಡಿ ಎಂದು ಪ್ರಯಾಣಿಕರಿಗೆ ತೋರಿಸಿದ್ದಾರೆ. ಹೆದ್ದಾರಿಯ ಮಧ್ಯದಲ್ಲಿರುವ ಡಿವೈಡರ್ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಾನ್ಸ್ಟೇಬಲ್ ಹೆಡ್ ಕ್ವಾಟ್ರಸ್ ಮುಂದೆ ಆಹಾರದ ತಟ್ಟೆಯೊಂದಿಗೆ ನಿಂತು ಅತ್ತು ರಂಪಾಟ ಮಾಡಿದ್ದಾರೆ. ಈ ವಿಡಿಯೋ ಯೋಗಿ ಆದಿತ್ಯನಾಥ್ ಅವರಿಗೆ ತಲುಪಿಸಿ ನಮ್ಮ ಗೋಳು ಕೇಳುವವರು ಇಲ್ಲ. ಎಡಿಜಿಪಿ…
ಎಪ್ಪತ್ತೈದನೆ ಸ್ವಾತಂತ್ರ್ಯೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದರು. 75ನೇ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಳವಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಾದ್ಯಂತ ಸರ್ಕಾರ ಅದ್ಧೂರಿಯಾಗಿ ಆಚರಿಸಲಿದೆ. ಮುಂದಿನ ನಮ್ಮ ದೇಶದ ಭವಿಷ್ಯ ನಮ್ಮ ಜನತೆಯ ಕೈಯಲ್ಲಿದೆ. ಹರ್ ಘರ್ ತಿರಂಗಕ್ಕೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಕಿಡಿಕಾರಿದರು. ತ್ರಿವರ್ಣ ಧ್ವಜ ತ್ಯಾಗ, ಬಲಿದಾನ, ಹೋರಾಟದಿಂದ ಸಿಕ್ಕಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಹಿರಿಯರು ಹೋರಾಟ ಮಾಡಿರುವ ಫಲ. ಸ್ವಾತಂತ್ರ್ಯ ಹೋರಾಟವನ್ನು ತಿರುಚದೆ ಸತ್ಯಾಸತ್ಯತೆ ತಿಳಿಸಬೇಕಿದೆ. ತ್ರಿವರ್ಣ ಧ್ವಜದಲ್ಲಿ ಭಾರತದ ಏಕತೆ, ಶಕ್ತಿ, ಸ್ವಾತಂತ್ರ್ಯ, ಭವಿಷ್ಯ ಎಲ್ಲವೂ ಅಡಗಿದೆ. ಅದರ ಬಗ್ಗೆ ವಿರೋಧ ಮಾಡುವುದು, ಟೀಕೆ ಮಾಡುವುದು ದೇಶ ವಿರೋಧಿ ಕೃತ್ಯದಂತೆ. ಅಂತಹ ಕೀಳುಮಟ್ಟದ ಮಾತಿಗೆ ಜನತೆ ಬೆಲೆ ಕೊಡುವುದಿಲ್ಲ.…
ವಿಮಾನದಲ್ಲಿ ವ್ಯಕ್ತಿಯೊಬ್ಬ ಧೂಮಪಾನ ಮಾಡುತ್ತಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿರುವ ಜೊತೆ ಭದ್ರತೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಉತ್ತರಖಂಡ್ ನ ಶಾಸಕ ಉಮೇಶ್ ಕುಮಾರ್ ಅವರು ತಮ್ಮ ಟ್ವೀಟರ್ನಲ್ಲಿ ಹಂಚಿಕೊಂಡಿರುವ ವಿಡಿಯೋ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ವಿಮಾನದ ಸೀಟಿನಲ್ಲಿ ಅಡಗಿಕೊಳ್ಳುವಂತೆ ಮಲಗಿ ಕಾಲ ಮೇಲೆ ಕಾಲು ಹಾಕಿದ್ದು, ಲೈಟರ್ನಿಂದ ಸಿಗರೇಟ್ ಅಂಟಿಸಿ ಧೂಮಪಾನ ಮಾಡಿದ್ದಾನೆ. ಅದೇ ವಿಮಾನದ ಮುಂಭಾಗ ಸೀಟ್ಗಳಲ್ಲಿ ಪ್ರಯಾಣಿಕರು ಕುಳಿತಿರುವು ಕಂಡುಬಂದಿದೆ. ಆತ ಸಿಗರೇಟ್ ಸೇದುವುದನ್ನು ಮತ್ತೊಬ್ಬ ವ್ಯಕ್ತಿ ವಿಡಿಯೋ ಮಾಡಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಬಿಗಿಭದ್ರತೆ ಇರಲಿದ್ದು, ಬೆಂಕಿಗೆ ಕಾರಣವಾಗಿರುವ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ. ಹಾಗಿದ್ದು ವಿವಾದಿತ ವ್ಯಕ್ತಿ ಸಿಗರೇಟ್ ಮತ್ತು ಲೈಟರ್ನ್ನು ತೆಗೆದುಕೊಂಡು ಹೋಗಿದ್ದು ಹೇಗೆ ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ಭಯೋತ್ಪಾದನೆಯ ದಾಳಿ, ಬೆದರಿಕೆಗಳ ನಡುವೆ ಈ ರೀತಿಯ ಭದ್ರತೆಯ ವೈಫಲ್ಯಗಳು ಆತಂಕ ಮೂಡಿಸಿವೆ. ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…
ಸರಣಿ ಮೊಬೈಲ್ ಸುಲಿಗೆ ಮಾಡಿ ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 78.84 ಲಕ್ಷ ರೂ. ಮೌಲ್ಯದ 512 ಸ್ಮಾರ್ಟ್ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಪಾದರಾಯನಪುರದ ನಿವಾಸಿ ಅಜ್ಮಲ್ ಪಾಷಾ ಮತ್ತು ಶಿವಾಜಿನಗರದ ನಿವಾಸಿ ಇಜಾಜ್ ಬಂಧಿತ ಆರೋಪಿಗಳು. ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮೊಬೈಲ್ ಫೋನ್ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದ ಬಗ್ಗೆ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡು ಇಬ್ಬರನ್ನು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು 7ರಿಂದ 8 ಜನರ ತಂಡದೊಂದಿಗೆ ಸೇರಿಕೊಂಡು ಸುಲಿಗೆ ಮಾಡುತ್ತಿದ್ದರು. ನಗರದಲ್ಲಿ ಮೊಬೈಲ್ ಫೋನ್ಗಳನ್ನು ಸುಲಿಗೆ ಮತ್ತು ಕಳವು ಮಾಡಿ ನಂತರ ಆ ಮೊಬೈಲ್ಗಳನ್ನು ಮುಂಬೈ, ಹೈದರಾಬಾದ್ ಮತ್ತು ದೆಹಲಿಯಲ್ಲಿರುವ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಆರೋಪಿಗಳ ವಿರುದ್ಧ ಈ ಹಿಂದೆ ಚಾಮರಾಜಪೇಟೆ, ಉಪ್ಪಾರಪೇಟೆ, ಮಾಗಡಿ ರಸ್ತೆ, ಕಾಮಾಕ್ಷಿಪಾಳ್ಯ, ವರ್ತೂರು ಹಾಗೂ ಅಶೋಕನಗರ ಪೊಲೀಸ್ ಠಾಣೆಗಳಲ್ಲಿ ಮೊಬೈಲ್ ಸುಲಿಗೆ ಮತ್ತು ಕಳವು ಪ್ರಕರಣ ದಾಖಲಾಗಿದ್ದು, ಆ ಪ್ರಕರಣಗಳಲ್ಲಿ ಜೈಲಿಗೆ ಹೋಗಿ…
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.7.2ರಷ್ಟಿದ್ದು, 18 ವರ್ಷ ಮೇಲ್ಪಟ್ಟವರು 3ನೇ ಡೋಸ್ನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪಡೆಯ ಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.17ರಷ್ಟು ಮಾತ್ರ 3ನೇ ಡೋಸ್ ಲಸಿಕೆ ಪಡೆದಿದ್ದಾರೆ. ಕೋವಿಡ್ ಹೋಗಿದೆ ಎಂದು ಉದಾಸೀನ ಮಾಡದೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು. ಹೈದರಾಬಾದ್ ಮೂಲದ ಸಂಸ್ಥೆಹೊಸದಾಗಿ ಕಾರ್ಬೋ ವ್ಯಾಕ್ಸ್ನ್ನು ಸಂಶೋಧಿಸಿದೆ. ಇದಕ್ಕೆ ಕೇಂದ್ರ ಅನುಮತಿ ನೀಡಿದ್ದು, ಈ ಲಸಿಕೆ ಪಡೆಯಲು ಅವಕಾಶವಿದೆ. ರಾಜ್ಯದಲ್ಲೂ ಕೂಡ ಚಾಲನೆ ನೀಡಲಾಗುವುದು ಎಂದರು. ಆ.1ರಿಂದ 10ರ ಅವಧಿಯಲ್ಲಿ ಕೋವಿಡ್ ರೋಗದಿಂದ 24 ಮಂದಿ ಮೃತಪಟ್ಟಿದ್ದು, ಅವರಲ್ಲಿ 60 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದರೆ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯಬೇಕು. ತೀವ್ರತರದ ವ್ಯಾವುಳ್ಳವರು 3ನೇ ಡೋಸ್ನ್ನು ಜರೂರಾಗಿ ಪಡೆಯಬೇಕು ಎಂದರು. ದೆಹಲಿಯಲ್ಲಿ ಕೋವಿಡ್ ಪಾಸಿವಿಟಿ ಶೇ.15ರಷ್ಟಿದೆ. ಬೆಂಗಳೂರು…