Subscribe to Updates
Get the latest creative news from FooBar about art, design and business.
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
- ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
- ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
- ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
Author: admin
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಂಡನೆ ವ್ಯಕ್ತಪಡಿಸಿದ್ದಾರೆ.ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ. ಅನೈತಿಕ ಮಾರ್ಗದಲ್ಲಿ ಬೊಮ್ಮಾಯಿ ಸರ್ಕಾರ ಬಂದಿದೆ. ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ, ನೇಮಕಾತಿ ಹಗರಣಗಳು ನಡೆದಿದೆ. ಆದರೆ ಈ ಬಗ್ಗೆ ಕ್ರಮ ಇಲ್ಲ. ಜನರು ರೈತರ ಸಮಸ್ಯೆ ನಿವಾರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಆತ್ಮಹತ್ಯೆಗೆ ಶರಣಾದವರು. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜತೆ ನೆಲೆಸಿದ್ದರು. ಆದ್ರೆ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಕ್ಕಳಲ್ಲಿ ಹೃದ್ರೋಗ ಸಮಸ್ಯೆ ಜಾಸ್ತಿಯಾಗಿರುವ ಕಾರಣ ಶಾಲಾ ಸಮಯ ಬದಲಿಸಬೇಕೆಂಬ ಮಹತ್ವದ ಸಲಹೆಯನ್ನು ಜಯದೇವ ಹೃದ್ರೋಗ ಆಸ್ಪತ್ರೆ ಡಾ. ಮಂಜುನಾಥ್ ನೀಡಿದ್ದಾರೆ. 7-8 ವರ್ಷದ ಮಕ್ಕಳಿಗೆ ಹೆಚ್ಚು ನಿದ್ರೆ ಬೇಕು. ಆದರೆ ನಿದ್ರಾಹೀನತೆಗೆ ಅವರ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಹೃದ್ರೋಗಕ್ಕೆ ಕಾರಣವಾಗುತ್ತಿದೆ. 7 ವರ್ಷದಲ್ಲಿ 6000 ಹೃದಯ ಚಿಕಿತ್ಸೆ ನೀಡಿದ್ದು, ಚಿಕ್ಕವಯಸ್ಸಿನಲ್ಲಿ ಒತ್ತಡದಿಂದ ಆರೋಗ್ಯ ಹದಗೆಡುತ್ತಿದೆ. 2ನೇ ಕ್ಲಾಸ್ವರೆ ಶಾಲಾ ಸಮಯ 10AM-12.30PM ಮಾಡಬೇಕೆಂದು ಎಚ್ಚರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಹಿಂದೂಗಳಾಗಿ ಹುಟ್ಟಿದ ನಾವು ಹಿಂದೂಗಳಾಗಿಯೇ ಸಾಯುತ್ತೇವೆ. ಬಿಜೆಪಿಯವರದ್ದು ನಾಟಕ. ಒಳಗಿಂದ ನಮ್ಮಲ್ಲಿ ಹಿಂದುತ್ವವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನೀಯರ ಫೋಟೋ ಹಾಕ್ತೀವಿ ಅಂತ ಸ್ಪೀಕರ್ ಹೇಳಿದರು. ಆದ್ರೆ ಇಲ್ಲಿ ಬಂದ ಬಳಿಕ ಸಾವರ್ಕರ್ ಫೋಟೋ ಹಾಕುವ ವಿಚಾರ ತಿಳಿಯಿತು. ಸಾವರ್ಕರ್ ವಿವಾದಿತ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು ಎಂದು ಅವರು ಇದೇ ವೇಳೆ ಹೇಳಿದರು. ಕಮಿಷನ್, ಹಗರಣ, ಮತದಾರರ ಪಟ್ಟಿ ಹಗರಣ ವಿಚಾರ ಚರ್ಚೆಯಾಗಬಾರದು ಅನ್ನೋ ಕಾರಣಕ್ಕೆ ಈ ವಿವಾದವನ್ನು ಬಿಜೆಪಿಯವರು ತಂದಿಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸುಳ್ಯ: ದೇವರ ಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ 14ರಂದು ಪ್ರತಿಭಾ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಎಸ್.ಅಂಗಾರ, ಎ.ವಿ.ತೀರ್ಥರಾಮ, ಬಾಲಕೃಷ್ಣ ಕೀಲಾಡಿ, ನವೀನ್ ಸಾರಕೆರೆ ಮತ್ತು ಮದರ್ ಡ್ರೀಮ್ಸ್ ರೂರಲ್ ಅಂಡ್ ಅರ್ಬನ್ ಎಜುಕೇಶನ್ ಡೆವಲಪ್ಮೆಂಟ್ ಸೊಸೈಟಿ ರಿಜಿಸ್ಟರ್ಡ್ ಮತ್ತು “ಶ್ರೀರಾಮ ಗೋಶಾಲೆ” ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂಸ್ಥೆಯಿಂದ ದಿನನಿತ್ಯ ಉಚಿತ ಸಂಜೆ ಪಾಠ ಶಾಲೆ ನಡೆಸುವ ಮೂಲಕ ಮಾದರಿಯಾಗಿದೆ. ಕಾರ್ಯಕ್ರಮದಲ್ಲಿ ಮಕ್ಕಳಿಗೆ 50 ಪ್ರಮಾಣ ಪತ್ರ, 50 ಪುಸ್ತಕ , 50 ಹಣ್ಣಿನ ಗಿಡಗಳನ್ನು ನೀಡುವ ಮೂಲಕ ಶಿಕ್ಷಕಿಯಾದ ಸಂಪ್ರೀತ ಅವರಿಗೆ ಸನ್ಮಾನವನ್ನು ಮಾಡಿದರು ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪ್ರದೀಪ್, ಹೆಚ್ಚು ಕಾರ್ಯದರ್ಶಿಯಾದ ಮಹಾಂತೇಶ್ ಡಿ., ದಕ್ಷಿಣ ಕನ್ನಡ ಜಿಲ್ಲೆಯ ಸಂಚಾಲಕರಾದ ಮಂಜುನಾಥ್, ಶ್ರೀರಾಮ ಗೋಶಾಲೆಯ ಅಧ್ಯಕ್ಷರಾದ ಸೋಮಪ್ರಸಾದ್ ರೈ, ಕಾರ್ಯದರ್ಶಿಗಳಾದ ಚಂದ್ರಶೇಖರ್ ಮೇಣಾಲ ಮತ್ತು ಪದಾಧಿಕಾರಿಗಳು ಮತ್ತು ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಪ್ರತಿ ವರ್ಷದಂತೆ, ಆನ್ಲೈನ್ ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿ ಈ ವರ್ಷವೂ ಭಾರತೀಯರು ಹೆಚ್ಚು ಆರ್ಡರ್ ಮಾಡಿದ ಆಹಾರವನ್ನು ಬಹಿರಂಗಪಡಿಸಿದೆ. ಸ್ವಿಗ್ಗಿ ವರದಿಯ ಪ್ರಕಾರ, ಈ ವರ್ಷ ಅತಿ ಹೆಚ್ಚು ಆರ್ಡರ್ ಮಾಡಿದ ಭಕ್ಷ್ಯಗಳ ಪಟ್ಟಿಯಲ್ಲಿ ಬಿರಿಯಾನಿ ಅಗ್ರಸ್ಥಾನದಲ್ಲಿದೆ. ಬಿರಿಯಾನಿ ಸತತ ಏಳನೇ ಬಾರಿಗೆ ಅಗ್ರಸ್ಥಾನದಲ್ಲಿದೆ. ಈ ವರ್ಷ ಬಿರಿಯಾನಿಗಾಗಿ ಸೆಕೆಂಡಿಗೆ ಸರಾಸರಿ 2.28 ಆರ್ಡರ್ಗಳು ಬಂದಿವೆ. ಅಂದರೆ ಪ್ರತಿ ನಿಮಿಷಕ್ಕೆ ಸುಮಾರು 140 ಆರ್ಡರ್ಗಳು. ವರದಿಯ ಪ್ರಕಾರ, ಈ ವರ್ಷ ಸ್ವಿಗ್ಗಿಯಲ್ಲಿ ಹೆಚ್ಚು ಆರ್ಡರ್ ಮಾಡಿದ ಇತರ ಭಕ್ಷ್ಯಗಳೆಂದರೆ: ಚಿಕನ್ ಬಿರಿಯಾನಿ, ಮಸಾಲಾ ದೋಸೆ, ಚಿಕನ್ ಫ್ರೈಡ್ ರೈಸ್, ಪನೀರ್ ಬಟರ್ ಮಸಾಲಾ, ಬಟರ್ ನಾನ್, ವೆಜ್ ಫ್ರೈಡ್ ರೈಸ್, ವೆಜ್ ಬಿರಿಯಾನಿ ಮತ್ತು ತಂದೂರಿ ಚಿಕನ್. ಇಟಾಲಿಯನ್ ಪಾಸ್ಟಾ, ಪಿಜ್ಜಾ, ಮೆಕ್ಸಿಕನ್ ಬೌಲ್, ಮಸಾಲೆಯುಕ್ತ ರಾಮೆನ್ ಮತ್ತು ಸುಶಿಯಂತಹ ಭಕ್ಷ್ಯಗಳು. ಭಾರತೀಯ ಆಹಾರದ ಹೊರತಾಗಿ, ಈ ವರ್ಷ ಭಾರತೀಯರು ಇತರ ಪಾಕಪದ್ಧತಿಗಳನ್ನು ಪ್ರಯೋಗಿಸಿದ್ದಾರೆ ಎಂದು ಸ್ವಿಗ್ಗಿ ಬಹಿರಂಗಪಡಿಸುತ್ತದೆ. ಅವುಗಳಲ್ಲಿ,…
ಕೇರಳ :ವಿಶ್ವಕಪ್ ಪಂದ್ಯದ ಪ್ರದರ್ಶನದ ವೇಳೆ ಎಸ್ಐಗೆ ಥಳಿಸಲಾಗಿದೆ. ಪೊಜ್ಜಿಯೂರು ಎಸ್ ಐ ಎಸ್ ಸಾಜಿ ಹಲ್ಲೆಗೊಳಗಾದವರು. ಪೊಜ್ಜಿಯೂರು ಜಂಕ್ಷನ್ನಲ್ಲಿ ಪರದೆ ಹಾಕಿಕೊಂಡು ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮದ್ಯಪಾನ ಮಾಡಿ ತೊಂದರೆ ಕೊಡುತ್ತಿದ್ದ ಇಬ್ಬರು ಯುವಕರನ್ನು ಹೊರ ತೆಗೆಯಲು ಯತ್ನಿಸಿದ್ದೇ ಹಿಂಸಾಚಾರಕ್ಕೆ ಕಾರಣ. ಘಟನೆಯಲ್ಲಿ ಪೊಜ್ಜಿಯೂರು ಮೂಲದ ಜಸ್ಟಿನ್ (32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್ಐ ಸಾಜಿ ಅವರನ್ನು ಪಾರಸಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಣ್ಣೂರಿನ ಪಲ್ಲಿಯನ್ ಮೂಲದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದ ನಂತರ ನಡೆದ ಘರ್ಷಣೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುರಾಗ್, ಆದರ್ಶ್ ಮತ್ತು ಅಲೆಕ್ಸ್ ಅಂತೋನಿ ಗಾಯಗೊಂಡಿದ್ದಾರೆ. ವಿನೋದ್, ವಿಜಯನ್, ಶೈಜು, ಪ್ರಶೋಭ್ ಮತ್ತು ಪ್ರತೀಶ್ ಆರೋಪಿಗಳು. ಗಾಯಗೊಂಡ ಮೂವರನ್ನು ಎರಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಮಧ್ಯರಾತ್ರಿ 12.40ರ ಸುಮಾರಿಗೆ ಈ ಘಟನೆ ನಡೆದಿದೆ. ಫ್ರಾನ್ಸ್-ಅರ್ಜೆಂಟೀನಾ ಪಂದ್ಯದ ನಂತರ, ಫ್ರಾನ್ಸ್ ಅಭಿಮಾನಿಗಳ ಗುಂಪು ಸಮಸ್ಯೆಗಳನ್ನು ಗೇಲಿ ಮಾಡಲು ಪ್ರಾರಂಭಿಸಿತು. ಅವರು ಮಾದಕ ದ್ರವ್ಯ ಸೇವಿಸಿದ್ದರೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ: ವಿಶ್ವಕಪ್ ಗೆದ್ದ ಅರ್ಜೆಂಟೀನಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಅರ್ಜೆಂಟೀನಾ ಫುಟ್ಬಾಲ್ ತಂಡ ಮತ್ತು ಮೆಸ್ಸಿಯ ಕೋಟ್ಯಂತರ ಭಾರತೀಯ ಅಭಿಮಾನಿಗಳು ಅದ್ಭುತ ಗೆಲುವಿನಿಂದ ಸಂತೋಷಗೊಂಡಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಫ್ರಾನ್ಸ್ ಮತ್ತು ಅರ್ಜೆಂಟೀನಾ ಫಿಫಾ ವಿಶ್ವಕಪ್ (ಫಿಫಾ ಡಬ್ಲ್ಯುಸಿ) ಫೈನಲ್ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಈ ವಿಜಯಕ್ಕಾಗಿ ಅರ್ಜೆಂಟೀನಾ ಅಧ್ಯಕ್ಷ ಅಲ್ಬರ್ಟೊ ಫರ್ನಾಂಡಿಸ್ ಅವರನ್ನು ಪ್ರಧಾನಿ ಅಭಿನಂದಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪೋಪ್ ಫ್ರಾನ್ಸಿಸ್ ಅವರು 2013 ರಲ್ಲಿ ಕ್ಯಾಥೋಲಿಕ್ ಚರ್ಚ್ನ ಪೋಪ್ ಆಗಿ ಆಯ್ಕೆಯಾದರು. ಆಗ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನು ವಿವರಿಸಿದ ಅವರು, ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಮತ್ತು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ ಚರ್ಚ್ಗೆ ಮುಜುಗರವಾಗುವುದನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy