Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ 10,889 ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿ ವರ್ಧಕ ಬಳಕೆಗೆ ಪರವಾನಗಿ ನೀಡಿದೆ. ರಾಜ್ಯ ಸರ್ಕಾರವು ಧ್ವನಿವರ್ಧಕ ಬಳಕೆ ಕುರಿತಂತೆ ಅರ್ಜಿಗಳನ್ನು ಪರಿಶೀಲನೆ ಪೂರ್ಣಗೊಳಿಸಿದ್ದು, ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕಗಳ ಬಳಕೆಗೆ 450 ರೂ.ಶುಲ್ಕ ವಿಧಿಸಲಾಗಿದೆ. ರಾಜ್ಯದಲ್ಲಿ 10,889 ಕ್ಕೂ ಹೆಚ್ಚು ಮಸೀದಿಗಳು ಸೇರಿದಂತೆ ಮಂದೀರ, ಚರ್ಚ್ ಗಳ 17,850 ಧ್ವನಿವರ್ಧಕಗಳ ಬಳಕೆಗೆ ಪರವಾನಗಿ ನೀಡಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಧ್ವನಿವರ್ಧಕ ಪರವಾನಗಿಗಳು 1,841 ಆಗಿದ್ದು, ಇದರಲ್ಲಿ ಮಸೀದಿಗಳು, ದೇವಾಲಯಗಳು, ಚರ್ಚ್ಗಳು ಮತ್ತು ರೆಸ್ಟೋರೆಂಟ್ಗಳು ಸೇರಿವೆ 744 ಧ್ವನಿವರ್ಧಕ ಪರವಾನಗಿ ಹೊಂದಿರುವ ವಿಜಯಪುರದಲ್ಲಿ ಅತಿ ಹೆಚ್ಚು ಮಸೀದಿಗಳಿವೆ. ಈ ವರ್ಷದ ಆರಂಭದಲ್ಲಿ, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಬೆಳಿಗ್ಗೆ 6 ಗಂಟೆಯ ಮೊದಲು ಧ್ವನಿವರ್ಧಕಗಳನ್ನು ಬಳಸಬಾರದು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಮಸೀದಿಗಳು ಉಲ್ಲಂಘಿಸಿವೆ ಎಂದು ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದವು. ಈ ಒತ್ತಡಕ್ಕೆ ಮಣಿದ ಬಿಜೆಪಿ ಸರ್ಕಾರ ಈ ವರ್ಷದ…
ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಹೊಳೆಪ್ಪ ಮಾರುತಿ ಮಸ್ತಿ (25), ಪತ್ನಿ ವಾಸಂತಿ (22) ಹಾಗೂ ಒಂದೂವರೆ ವರ್ಷದ ಮಗು ಮೃತಪಟ್ಟ ದುರ್ದೈವಿಗಳು. ಮದ್ಯದ ಅಮಲಿನಲ್ಲಿ ಹೊಳೆಪ್ಪ ಪತ್ನಿಯೊಂದಿಗೆ ಜಗಳವಾಡಿದ್ದ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದ. ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಇದರಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಊರ ಹೊರಗಿನ ಹೊಲಕ್ಕೆ ಹೋಗಿದ್ದ ವಾಸಂತಿ ಮರಳಿ ಮನೆಗೆ ಬಂದಿರಲಿಲ್ಲ. ಇದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ತಡರಾತ್ರಿ ಅವರ ಶವ ಕಂಡುಬಂದಿದೆ. ವಾಸಂತಿ ಕಾಲಿನಡಿ ಪುಟ್ಟ ಮಗುವಿನ ಮೃತದೇಹ…
ಬೆಂಗಳೂರು : ಬರೋಬ್ಬರಿ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕಟಿತ ವರ್ಗಾವಣೆ ಆದೇಶದಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದೆ. ಡಾ.ಪ್ರಸಾದ್ ಎನ್ ವಿ ಅವರಿಗೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದ್ದರೇ, ಜಯರಾಂ ಅವರಿಗೆ ಕಪಿಲ್ ಮೋಹನ್ ಅವರ ವರ್ಗಾವಣೆಯಿಂದ ತೆರವಾದಂತ ಕಂದಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೊಣೆಗಾರಿಕೆ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಅನಿಲ್ ಕುಮಾರ್ ಟಿ.ಕೆ ಅವರಿಗೆ ರೆವಿನ್ಯೂ ಇಲಾಖೆಯ ಪ್ರಿನ್ಸಿಪಲ್ ಸೆಕ್ರೇಟರಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಸ್ಕಿಲ್ ಡೆವೆಲೆಪ್ ಮೆಂಟ್, ಎಂಟರ್ ಪ್ರೈನೆರ್ ಶಿಪ್ ಮತ್ತು ಲೈವಿಹೂಡ್ ನ ಹೆಚ್ಚುವರಿ ಕಾರ್ಯದರ್ಶಿ ಶ್ರೀವಿದ್ಯಾ ಪಿ.ಐ ಅವರನ್ನು ಬೆಂಗಳೂರು ಈ-ಗೋವೆರೆನ್ಸ್ ನ ಸಿಇಓ ಆಗಿ ನೇಮಕ ಮಾಡಿದೆ. ಮೈಸೂರು…
ಬೆಂಗಳೂರು: ಮೈಸೂರಿನಲ್ಲಿ ಈಗಾಗಲೇ ಮೊದಲ ಅಪ್ಪು ಆಯಂಬುಲೆನ್ಸ್ ಸೇವೆ ಆರಂಭಗೊಂಡಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಅಪ್ಪು ಆಂಬುಲೆನ್ಸ್ ಸೇವೆ ಆರಂಭಗೊಳ್ಳಬೇಕು. ನನ್ನ ಕನಸಿನ ಯೋಜನೆಗೆ ಹಲವರು ಕೈ ಜೋಡಿಸಿದ್ದಾರೆ. ಮುಂದೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಅಪ್ಪು ಆಂಬುಲೆನ್ಸ್ ಸೇವೆಯನ್ನು ಆರಂಭಿಸೋದಕ್ಕೆ ನಿರ್ಧರಿಸಲಾಗಿದೆ ಎಂದು ನಟ ಪ್ರಕಾಶ್ ರಾಜ್ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಪುನೀತ್ ರಾಜ್ ಕುಮಾರ್ ಇಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಅಪ್ಪು ಇಂದು ಇಲ್ಲಿದ್ದರೇ ಕಾಂತಾರ ಎಂದು ಹೇಳುತ್ತಿದ್ದರು. ಅಪ್ಪು ಆಂಬುಲೆನ್ಸ್ ಸೇವೆ ಆರಂಭಿಸಬೇಕು. ಪುನೀತ್ ರಾಜ್ ಕುಮಾರ್ ಕನಸು ಕೂಡ ಇದಾಗಿತ್ತು. ಈ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಆಂಬುಲೆನ್ಸ್ ಸೇವೆ ಸಿಗಬೇಕು ಅಂತ ಹೇಳುತ್ತಿದ್ದರು. ಈ ಮಾತು ಅವರ ನಿಧನಾನಂತ್ರ ಹೇಳಿದಾಗ ನಟ ಸೂರ್ಯ, ನಟ ಚಿರಂಜೀವಿ ಹಾಗೂ ಶಿವರಾಜ್ ಕುಮಾರ್ ಪತ್ನಿ ಗೀತಾ ಒಂದೊಂದು ಆಂಬುಲೆನ್ಸ್ ಕೊಟ್ಟಿದ್ದಾರೆ. ಮುಂದೆ ಜಿಲ್ಲೆಗಳಲ್ಲಿ ಈ ಆಂಬುಲೆನ್ಸ್ ಸೇವೆ ಆರಂಭಗೊಳ್ಳಲಿದ್ದಾವೆ…
ಬೆಳಗಾವಿ: ಡಿಸೆಂಬರ್ 12 ಕ್ಕೆ ಎಲ್ಲರೂ ಬುತ್ತಿ ಕಟ್ಟಿಕೊಂಡು ಬರಬೇಕು, ಪಂಚಮಸಾಲಿ ಸಮಾಜದ ಅಂತಿಮ ಹೋರಾಟ ಮಾಡೋಣ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಕರೆನೀಡಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಇಂದು ನಡೆದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ನಮಗೆ ಮೀಸಲಾತಿ ವಿಳಂಬವಾಗಲು ಒಬ್ಬರಿದ್ದಾರೆ. ನನ್ನ ವಿರುದ್ಧ ಏನೇನೋ ಮಾಡಲು ಯತ್ನಿಸಿದರು ಎಂದು ಪರೋಕ್ಷವಾಗಿ ಯಡಿಯೂರಪ್ಪ, ಬಿ. ವೈ ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ಅಪ್ಪ-ಮಗ ಏನೇನೋ ಮಾಡುತ್ತಿದ್ದಾರೆ, ನನಗೆ ಏನೂ ಆಗಲ್ಲ. ಅವರ ಬಳಿ ನಿಜವಾದ ಹಾವಿಲ್ಲ, ನನ್ನ ಬುಟ್ಟಿಯಲ್ಲಿ ಹಾವಿದೆ. ಈ ಸಮಾವೇಶ ಇದ್ದಿದ್ದು ಸಮಾಜದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹೊರತು ನಾವು ಲೀಡರ್ ಆಗಲು ಬಂದಿಲ್ಲ. ನಾನು ಯಾರ ಕಾಲಿಗೂ ಬಿದ್ದಿಲ್ಲ. ನಾನು ವಾಜಪೇಯಿ, ಅಡ್ವಾಣಿ ಅವರಿಗಷ್ಟೇ ನಮಿಸಿದ್ದು. ಇದೀಗ ಎಲ್ಲರೂ ಮೀಸಲಾತಿ ಕೊಡುವಂತೆ ಹೇಳುತ್ತಿದ್ದಾರೆ. ಆರು ತಿಂಗಳಲ್ಲಿ ಚುನಾವಣೆ ಇದೆ. ಅದಕ್ಕೆ ಇವೆಲ್ಲಾ ನಡೆಯುತ್ತಿವೆ ಎಂದು ವಾಗ್ದಾಳಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ…
ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆರವರ ಸತತ ಪ್ರಯತ್ನದಿಂದಾಗಿ ಮೃತದೇಹಗಳ ದಹನಕ್ಕಾಗಿ ವಿನೂತನವಾಗಿ ಮೇಘಾ ಗ್ಯಾಸ್ ಕಂಪನಿ ವತಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ಮೃತರ ದೇಹಗಳನ್ನು ಗ್ಯಾಸ್ ಆಪರೇಟೆಡ್ ಬರ್ನರ್ ಅಳವಡಿಸಲಾಗುತ್ತಿದೆ. ಬೆಳಗಾವಿ ನಗರದ ಸದಾಶಿವ ನಗರ ಸಾರ್ವಜನಿಕ ಸ್ಮಶಾನದಲ್ಲಿ ಮೃತದೇಹಗಳ ದಹನಕ್ಕಾಗಿ ಡಿಸೇಲ್ ಆಪರೇಟೆಡ್ ಬರ್ನರ್ಗಳಿಂದ ಸಾರ್ವಜನಿಕರಿಗೆ 5000 ಗಳ ವೆಚ್ಚ ತಗುಲುತ್ತಿದ್ದು, ಕಟ್ಟಿಗೆಯಿಂದ ದೇಹದ ದಹನಕ್ಕಾಗಿ 3 ರಿಂದ 4 ಸಾವಿರವರೆಗೆ ವೆಚ್ಚವಾಗಿ ದೇಹ ದಹನವಾಗಲು ಸುಮಾರು 4 ತಾಸುಗಳು ಬೇಕಾಗುವುದಲ್ಲದೆ ಇಲೆಕಟ್ರಿಕ್ ಆಪರೇಟೆಡ್ ಬರ್ನರ್ಗೆ ಅತಿಯಾದ ವೆಚ್ಚವಾಗುವುದರಿಂದ ಸಾರ್ವಜನಿಕರಿಗೆ ಮೃತದೇಹಗಳ ದಹನ ಮಾಡುವ ಕ್ರಿಯೆಯನ್ನು ಸುಲಭಗೊಳಿಸುವ ಮತ್ತು ಕಡಿಮೆ ವೆಚ್ಚದಲ್ಲಿ ಮೃತದೇಹಗಳ ಅಂತ್ಯಕ್ರಿಯೆಯನ್ನು ಮಾಡಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ಯಾಸ್ ಆಪರೇಟೆಡ್ ಬರ್ನರ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಬೆಳಗಾವಿ ನಗರದಲ್ಲಿ ಶಾಸಕ ಅನಿಲ ಬೆನಕೆರವರ ನಿರ್ದೇಶನದ ಮೇರೆಗೆ ಮೇಘಾ ಗ್ಯಾಸ ಕಂಪನಿಯವರೊಂದಿಗೆ ಚರ್ಚಿಸಿ ಸದಾಶಿವ ನಗರದ ಸಾರ್ವಜನಿಕ ಸ್ಮಶಾನದಲ್ಲಿ ಗ್ಯಾಸ್ ಮೂಲಕ ದೇಹಗಳ ದಹನ…
ಬೆಳಗಾವಿ : ಪಂಚಮಸಾಲಿ ಹೋರಾಟ ಅಂತಿಮ ಹಂತ ತಲುಪಿದ್ದು, 2 ಎ ಮೀಸಲಾತಿ ನೀಡುವಲ್ಲಿ ಸರ್ಕಾರ ವಿಳಂಬ ನೀತಿ ತೋರುತ್ತಿರುವುದನ್ನು ಖಂಡಿಸಿ 25 ಲಕ್ಷ ಜನರಿಂದ ಡಿಸೆಂಬರ್ 12 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಹುಕ್ಕೇರಿಯಲ್ಲಿ ಹಮ್ಮಿಕೊಂಡ ಪಂಚಮಸಾಲಿ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ 2ಎ ಮೀಸಲಾತಿ ಹೋರಾಟ ಕೆಲವೇ ದಿನಗಳಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ. ಶೇ 82ರಷ್ಟು ಬಹುಸಂಖ್ಯಾತ ಪಂಚಮಸಾಲಿ ಸಮಾಜದವರು ಅಧಿಕಾರದಿಂದ ವಂಚಿತರಾಗಿದ್ದಾರೆ. ಪಂಚಮಸಾಲಿ ಹೃದಯವಂತ ಸಮಾಜ, ನಾನು ಪೀಠಾಧ್ಯಕ್ಷನಾದ ಬಳಿಕ ಎಂದೆಂದಿಗೂ ಯಾರೂ ಏನನ್ನೂ ಕೇಳಿಲ್ಲ. ಮೀಸಲಾತಿ ಸಿಗೋವರೆಗೂ ಏನೂ ಬೇಡ, ಹೋರಾಟಕ್ಕೆ ಬನ್ನಿ ಎಂದು ಕರೆ ಕೊಟ್ಟಿದ್ದೇನೆ ಎಂದು ತಿಳಿಸಿದರು. 2ಎ ಮೀಸಲಾತಿಗೆ ಆಗ್ರಹಿಸಿ ಸರ್ಕಾರಕ್ಕೆ ಕೊಟ್ಟ ಗಡುವು ಮುಗಿದು ಹೋಗಿದೆ. ಸರ್ಕಾರ ನಾಲ್ಕು ಬಾರಿ ಮಾತು ಕೊಟ್ಟು ಮರಿದು ಕೊಂಡಿದೆ. ಹೀಗಾಗಿ, ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಿದ್ದೇವೆ. ಈಗ ಮೀಸಲಾತಿ…
ಕೊರಟಗೆರೆ: ಪಟ್ಟಣದ ಕಾಮಧೇನು ಮೀಟಿಂಗ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಮಾನ್ಯವರ್ ಕಾನ್ಷೀರಾಂ ಜೀ ಅವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಮಾನ್ಯವಾರ್ ಕಾನ್ಷೀರಾಮ್ ಅವರಿಗೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಕೊರಗೆರೆ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಂವಿಧಾನದ ಬಗ್ಗೆ ಮತ್ತು ದೇಶದ ಕಾನೂನು ಸುವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿ ಒಂದು ಗಂಟೆಗಳ ಕಾಲ ಅಧ್ಯಯನ ಶಿಬಿರವನ್ನು ಆಯೋಜಿಸುವ ಮೂಲಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ರಚನೆಯ ಸಂವಿಧಾನ ಪುಸ್ತಕವನ್ನು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ನಂತರ ರಾಜ್ಯ ಕಮಿಟಿಯ ಮತ್ತು ಜಿಲ್ಲಾ ಕಮಿಟಿಯ ಮುಖಂಡರುಗಳ ನೇತೃತ್ವದಲ್ಲಿ ತುಮಕೂರು ಗ್ರಾಮಾಂತರ ಬಹುಜನ ಸಮಾಜ ಪಾರ್ಟಿಯ ಘಟಕ ಸ್ಥಾಪನೆ ಮಾಡಲಾಯಿತು.. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಸಂವಿಧಾನದ ಮಹತ್ವ ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ನಾಗರಿಕರು ತಿಳಿಯಲೇ ಬೇಕಾಗಿದೆ ಇತ್ತೀಚಿನ ದಿನಗಳಲ್ಲಿ…
ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಸುವರ್ಣ ಸೌಧ ಮುಂದೆ ರೈತರು ಅರೆಬೆತ್ತಲೆ ಪ್ರತಿಭಟನೆ ಮುಂದಾಗಿದ್ದರು. ಆದರೆ ಜಿಲ್ಲೆಯ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರನ್ನು ಪೊಲೀಸರು ತಡೆ ಹಿಡಿದರು. ಇದರಿಂದ ಪೊಲೀಸರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿದ್ದಾರೆ. ರಸ್ತೆ ತಡೆ ಬಳಿಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಹತ್ತರಗಿ ಟೋಲ್ ಗೇಟ್ ಬಳಿ ಪೊಲೀಸರು ರೈತರನ್ನು ತಡೆದಿದ್ದಾರೆ. ಪ್ರತಿಭಟನೆಗೆ ತಡೆಯೊಡ್ಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ, ಸ್ಥಳದಲ್ಲೇ ಧರಣಿ ಕುಳಿತಿದ್ದ ಅವರನ್ನು ವಶಕ್ಕೆ ಪಡೆದಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಧರಣಿ ನಿರತರ ನಡುವೆ ವಾಗ್ವಾದ ನಡೆದು, ನೂಕಾಟ, ತಳ್ಳಾಟ ನಡೆಯಿತ್ತು. ಈ ವೇಳೆ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆಗಳು ಜಲಾವೃತಗೊಳ್ಳುತ್ತಿದ್ದು, ಇದರಿಂದಾಗಿ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಎದುರಿಸುತ್ತಿದ್ದಾರೆ. ಹುಳಿಯಾರು ಕೆರೆ ಕೋಡಿ ಬೀಳಲು ಕ್ಷಣ ಗಣನೆ ಆರಂಭವಾಗಿದ್ದು, ಕೆರೆ ಕೋಡಿ ಹರಿದರೆ ಇಲ್ಲಿನ ಜನರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ. ಹುಳಿಯಾರು ಕೆರೆ ಅಂಗಳದಲ್ಲಿ ಮನೆಯ ಕಟ್ಟಿ ಜೀವನ ಸಾಗಿಸುತ್ತಿರುವವರಿಗೆ ಕಳೆದ ಎರಡು ದಶಕಗಳಿಂದಲೂ ಈ ರೀತಿಯ ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಮಳೆಯಿಂದ ಹುಳಿಯಾರು ಕೆರೆ ತುಂಬಿದಂತೆಲ್ಲ, ಕೆರೆ ಅಂಗಳದಲ್ಲಿರುವ ಮನೆಗಳೆಲ್ಲ ಜಲಾವೃತಗೊಳ್ಳುತ್ತಿದೆ. ದಿನೇ ದಿನೇ ಜಲಾವೃತಗೊಳ್ಳುತ್ತಿರುವ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಾಗದೆ, ಸ್ಥಳಾಂತರಗೊಳ್ಳಲು ಬೇರೆಡೆ ಸ್ಥಳವು ಇಲ್ಲದೆ, ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾ ಬಟ್ಟೆಯಾಗಿದೆ. ಸರ್ಕಾರ ಕೂಡಲೇ ಇಲ್ಲಿನ ಎಲ್ಲಾ ನಿರಾಶ್ರಿತರಿಗೂ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಲಿ ಎಂಬುದು ಇಲ್ಲಿನ ನಿರಾಶ್ರಿತರ ಒತ್ತಾಯವಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್., ತುಮಕೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz