Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಕೋಲ್ಕತ್ತಾ: ಬಂಗಾಳದ ಆಡಳಿತಾರೂಢ ತೃಣಮೂಲ ನಾಯಕರನ್ನೇ ಟಾರ್ಗೆಟ್ ಮಾಡಿರುವ ಇಡಿ ಇದೀಗ ಐಪಿಎಸ್ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದೆ. ಗುರುವಾರ ಎಂಟು ಐಪಿಎಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಜ್ಞಾನವಂತ್ ಸಿಂಗ್ (ಎಡಿಜಿ, ಸಿಐಡಿ), ಕೋಟೇಶ್ವರ ರಾವ್, ಎಸ್ ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್ ಮತ್ತು ತಥಾಗತ ಬಸು ನೋಟಿಸ್ ಪಡೆದವರಲ್ಲಿ ಸೇರಿದ್ದಾರೆ. ಕಳೆದ ವರ್ಷವೂ ನೋಟಿಸ್ ಪಡೆದ 8 ಅಧಿಕಾರಿಗಳ ಪೈಕಿ ಏಳು ಮಂದಿಗೆ ಇಡಿ ನೋಟಿಸ್ ಜಾರಿ ಮಾಡಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಪಟ್ಟಣದ 19 ವಾರ್ಡ್ ನಲ್ಲಿ ನಾಲ್ಕು ದಿನಗಳ ಮುಂಚೆ ಶಾಸಕ ಎಂ.ವಿ.ವೀರಭದ್ರಯ್ಯರವರು ಸುಮಾರು ಎಂಟು ಲಕ್ಷ ವೆಚ್ಚದ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸಿದರು. ಆದರೆ ಪುರಸಭೆ ಅಧಿಕಾರಿಗಳ ನಿರ್ಲಕ್ಷದಿಂದ ಶುದ್ಧ ನೀರಿನ ಘಟಕವನ್ನು ಸರಿಯಾಗಿ ನೋಡಿಕೊಳ್ಳುವವರು ಯಾರು ಇಲ್ಲದ ಕಾರಣ ಸುತ್ತಮುತ್ತ ನಿಂತಿರುವ ಕೊಚ್ಚೆ ನೀರು ತೊಟ್ಟಿಗೆ ಬಂದು ಅದೇ ನೀರು ಶುದ್ದಿಯಾಗಿ ಬರುತ್ತಿದೆ. ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಸಾರ್ವಜನಿಕರು ಯಾರು ಆ ನೀರನ್ನು ಕುಡಿಯುತ್ತಿಲ್ಲ. ಇದನ್ನು ಮನಗಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಸ್ಥಳಕ್ಕೆ ಹೋಗಿ ಸ್ವತಃ ನೀರನ್ನು ಕುಡಿದು ಪರೀಕ್ಷಿಸಿದಾಗ ನೀರು ಅಶುದ್ದಿಯಾಗಿ ಬರುವುದು ಕಂಡುಬಂದಿದೆ. ಈ ಬಗ್ಗೆ ಆಕ್ರೋಶಗೊಂಡ ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾಧ್ಯಮದೊಂದಿಗೆ ಮಾತನಾಡಿ, ಸುಮಾರು ಎಂಟು ಲಕ್ಷ ವೆಚ್ಚದ ಶುದ್ಧ ನೀರಿನ ಘಟಕ ಆರಂಭವಾಗಿದ್ದು, ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಶುದ್ಧ ನೀರು ಬರುತ್ತಿದೆ. ಸರಿಯಾದ ಕಾಮಗಾರಿ ಮಾಡದೆ, ನೆಲದಲ್ಲಿ ನೀರಿನ ಸಂಪು ನಿರ್ಮಿಸಲಾಗಿದ್ದು, ಅದರಲ್ಲಿ ಕಸಕಡ್ಡಿ ಕೊಳಚೆ ನೀರು…
ಪಾಟ್ನಾ: ಇಡಿ ಅಧಿಕಾರಿಗಳು ತಮ್ಮ ಮನೆಗೆ ಬಂದು ಕಚೇರಿ ತೆರೆಯಬಹುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಬಿಹಾರ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರೀಯ ಮಾಧ್ಯಮ ಚಾನೆಲ್ ಎನ್ ಡಿಟಿವಿಗೆ ವಿಶೇಷ ಸಂದರ್ಶನ ನೀಡಿದರು. ‘ನಿಮ್ಮ ಚಾನೆಲ್ (ಎನ್ಡಿಟಿವಿ) ಮೂಲಕ ನಾನು ಇಡಿ, ಆದಾಯ ತೆರಿಗೆ ಇಲಾಖೆ, ಸಿಬಿಐಗೆ ಆಹ್ವಾನ ನೀಡುತ್ತಿದ್ದೇನೆ. ಅವರು ನನ್ನ ಮನೆಯಲ್ಲಿ ಕಚೇರಿಗಳನ್ನು ತೆರೆಯಬಹುದು . ಇಡಿ, ಸಿಬಿಐ ಬಿಜೆಪಿ ಪಕ್ಷದ ಸೆಲ್ನಂತೆ ಕೆಲಸ ಮಾಡುತ್ತಿವೆ ಎಂದರು. ನಿತೀಶ್ ಜೊತೆ ಕೈಜೋಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪೂರ್ವ ಯೋಜನೆಯ ಭಾಗವಾಗಿ ಭೇಟಿಯಾಗಲಿಲ್ಲ, ಆದರೆ ಅದು ಆಕಸ್ಮಿಕವಾಗಿ ಸಂಭವಿಸಿದೆ ಎಂದು ಹೇಳಿದರು. ನಿತೀಶ್ ಅವರು ಬಿಜೆಪಿಯೊಂದಿಗೆ ಇರುವವರೆಗೂ ಅನಾನುಕೂಲವಾಗಿದ್ದಾರೆ ಎನ್ನಲಾಗಿದೆ. 2024ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್ ಸ್ಪರ್ಧಿಸಬಹುದೇ? ಎಂಬ ಪ್ರಶ್ನೆಗೆ ಉತ್ತರಿಸುತ್ತಾ. ‘ಮೋದಿ ಪ್ರಧಾನಿಯಾದಾಗ.. ನಿತೀಶ್ ಏಕೆ ಆಗಬಾರದು?’ ಎಂದರು. ಬಿಜೆಪಿಯನ್ನು ಕಿತ್ತೊಗೆಯಲು ಎಲ್ಲ ವಿರೋಧ ಪಕ್ಷಗಳು ಒಗ್ಗೂಡಿ ಈ ನಿಟ್ಟಿನಲ್ಲಿ ಮಾರ್ಗಸೂಚಿ ಸಿದ್ಧಪಡಿಸಬೇಕು.…
ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳು, ಮಹಿಳೆಯರು ಮತ್ತು ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಅಯೋಧ್ಯೆ ಜಿಲ್ಲೆಯಲ್ಲಿ ಮೂವರು ದುಷ್ಕರ್ಮಿಗಳು ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಿಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಮ್ಮ ಗ್ರಾಮದ ಬಳಿಯ ಶೆರ್ಪುರ್ಪುರ ಮಾರುಕಟ್ಟೆಯಿಂದ ಮನೆಗೆ ತೆರಳುತ್ತಿದ್ದಾಗ ಅವರನ್ನು ದುಷ್ಕರ್ಮಿಗಳು ಅಪಹರಿಸಿ ಸಮೀಪದ ಕಬ್ಬಿನ ಗದ್ದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಅವರನ್ನು ಬಿಟ್ಟು ಪರಾರಿಯಾಗಿದ್ದಾರೆ. ಮನೆಗೆ ತೆರಳಿದ ಸಂತ್ರಸ್ತರು ಮರುದಿನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ಸಂತ್ರಸ್ತೆಯ ಕುಟುಂಬದ ಸದಸ್ಯರು ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ನೀಡಲು ಹೋದಾಗ ಸ್ಥಳೀಯ ಪೊಲೀಸರು ಎಫ್ ಐಆರ್ ದಾಖಲಿಸಲು ನಿರಾಕರಿಸಿದರು. ಈ ವಿಷಯ ಹೊರಬೀಳದಂತೆ ಎಚ್ಚರಿಕೆ ವಹಿಸಿದ್ದರು. ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಕೊನೆಗೂ ಎಫ್ಐಆರ್ ದಾಖಲಾಗಿದೆ. ಭೈಲಾಲ್ ಯಾದವ್, ತ್ರಿಭುವನ್ ಯಾದವ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣಗಳನ್ನು…
ಕೇಂದ್ರ ಸರಕಾರ ಬಡವರಿಗಾಗಿ ನೀಡುತ್ತಿರುವ ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವುದು ನೋಡಿದರೆ ಕೇಂದ್ರದ ಆರ್ಥಿಕ ಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಡವರ ಮೇಲೆ ತೆರಿಗೆ ಹೊರೆ ಹಾಕುತ್ತಿರುವ ಮೋದಿ ಸರಕಾರ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ. ಕೇಂದ್ರ ತೆರಿಗೆಯಲ್ಲಿ ರಾಜ್ಯಗಳ ಪಾಲು ಶೇ.42ರಿಂದ ಶೇ.29ಕ್ಕೆ ಇಳಿಕೆಯಾಗಿದೆ. ಆಹಾರ ಪದಾರ್ಥಗಳ ಮೇಲೆ ಜಿಎಸ್ ಟಿ ಹೇರಲಾಗಿದೆ. ವಾರ್ಷಿಕ ರೂ. 3.5 ಲಕ್ಷ ಕೋಟಿ ಆದಾಯ ಬರುತ್ತಿದೆ. ಆದರೆ, ಉಚಿತ ಶಿಕ್ಷಣ ಮತ್ತು ಔಷಧಕ್ಕೆ ಕೇಂದ್ರದ ತೀವ್ರ ವಿರೋಧವಿದೆ. ಶ್ರೀಮಂತರಿಗೆ ರೂ. 10 ಲಕ್ಷ ಕೋಟಿ, ಅವರ ಕಂಪನಿಗಳು ರೂ. 5 ಲಕ್ಷ ಕೋಟಿ ತೆರಿಗೆಯನ್ನು ಕೇಂದ್ರ ಮನ್ನಾ ಮಾಡಿದೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಸೈನಿಕರ ಫಿಂಚನ್ಗಳಿಗೆ ಹಣವಿಲ್ಲ ಎಂದು ಟೀಕಿಸಿದರು. ಮತ್ತೊಂದೆಡೆ, ಉಚಿತ ಶಿಕ್ಷಣ ಮತ್ತು ಔಷಧದ ಹೆಸರಿನಲ್ಲಿ ಕೇಜ್ರಿವಾಲ್ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಮತ್ತು ಜನರನ್ನು ಹೆದರಿಸುತ್ತಿದ್ದಾರೆ…
ಕಲ್ಪತರು ವಿದ್ಯಾ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಬಿಎ ಸಿಗುವ ಮೂಲಕ ಗ್ರಾಮೀಣ ಪ್ರದೇಶದ ಸಂಸ್ಥೆಯು ಗುರುತಿಸಿಕೊಳ್ಳುವಂತಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೆ ರುದ್ರಪ್ಪ ಸಂತಸ ವ್ಯಕ್ತಪಡಿಸಿದರು. ಕಲ್ಪತರು ಇಂಜಿನಿಯರಿಂಗ್ ಕಾಲೇಜ್ ಆಡಳಿತ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು ಕಾಲೇಜಿಗೆ ಭೇಟಿ ನೀಡಿ ನವದೆಹಲಿ ನ್ಯಾಷನಲ್ ಬೋರ್ಡ್ ಆಫ್ ಆ ಕ್ರೆಡಿಟೇಶನ್ ಎನ್ ಬಿಎ ತಂಡಗಳು ಕಾಲೇಜಿನ ಕೊಠಡಿಗಳು , ಅಲ್ಲಿನ ವಿನ್ಯಾಸ ಲೈಬ್ರೆರಿ ವ್ಯವಸ್ಥೆ, ಬೋಧನಾ ಸಿಬ್ಬಂದಿಯ ಹಾಜರಾತಿ ಮಾಹಿತಿ ಸಂಗ್ರಹಿಸಿ ಎನ್ ಬಿಎ ಮಾನ್ಯತೆಗೆ ಶಿಫಾರಸ್ಸು ಮಾಡಿದ್ದು, ಈ ಮೂಲಕ ವಿಶ್ವ ದರ್ಜೆಯ ಗುಣಮಟ್ಟದ ಶಿಕ್ಷಣಕ್ಕೆ ಈ ಕಾಲೇಜು ಮಾನ್ಯತೆ ಪಡೆದಿದೆ . ಖಾಜಾಂಚಿ ಟಿ.ಎಸ್. ಶಿವಪ್ರಸಾದ್ ಮಾತನಾಡಿ, ನಮ್ಮ ಸಂಸ್ಥೆ ಕಡಿಮೆ ಶುಲ್ಕ ವಸೂಲಿ ಮಾಡುತ್ತಿದೆ . ಇದರಿಂದಲೇ ನಮ್ಮ ಕಾಲೇಜಿಗೆ ಮಾನ್ಯತೆ ಸಿಕ್ಕಿದೆ. ಸದ್ಯಕ್ಕೆ ಎರಡು ವಿಭಾಗಕ್ಕೆ ಮಾನ್ಯತೆ ಬಂದಿದೆ ಎಂದು ತಿಳಿಸಿದರು. ಕಾರ್ಯದರ್ಶಿ ಸುಧಾಕರ್, ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜ್ ಟಿ.ಎಸ್., ಬಸವರಾಜ್ ಜಿ.ಕೆ.…
ಮಧುಗಿರಿ: ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಂಡವಾಡಿ ರಸ್ತೆ ಬಳಿಯಲ್ಲಿ ನಡೆದಿದೆ. ತಾಲೂಕಿನ ಪುರವಾರ ಹೋಬಳಿಯ ತಿಮ್ಮಪ್ಪ ನವರ ಮಗನಾದ ರೇಣುಕಣ ( 22 ) ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ಗುರುತಿಸಲಾಗಿದೆ. ಪೆಟ್ರೋಲ್ ಮೈಗೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದ ಈತ ಬೆಂಕಿಯ ಉರಿ ತಾಳಲಾರದೇ ಕಿರುಚಾಡಿದ್ದಾನೆ. ಈ ವೇಳೆ ಸಾರ್ವಜನಿಕರು ತಕ್ಷಣವೇ ತಾಲೂಕಿನ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಶಿವಕುಮಾರ್ ಘಟನಾ ಸ್ಥಳಕ್ಕೆ ಆಗಮಿಸಿ ಉಚಿತ ಸೇವೆಯಲ್ಲಿರುವ ರಕ್ಷಣಾ ವೇದಿಕೆ ಆಂಬುಲೆನ್ಸ್ ನಲ್ಲಿ ಗಾಯಗೊಂಡ ಯುವಕನನ್ನು ಚಿಕಿತ್ಸೆಗೆ ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿರುತ್ತಾರೆ. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನ್ಯಾಯಬೆಲೆ ಅಂಗಡಿಯಲ್ಲಿ ಬಲವಂತವಾಗಿ ತ್ರಿವರ್ಣ ಧ್ವಜ ಹಾರಾಟ ಮಾಡುತ್ತಿರುವುದು, ಅದಕ್ಕಾಗಿ ಬಡ ಜನರಿಂದ ಹಣ ವಸೂಲಿ ಮಾಡುವುದು ನಾಚಿಕೆಗೇಡು ಎಂದು ಬಿಜೆಪಿಯ ಸಂಸದ ವರುಣ್ಗಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಬೆಲೆ ಅಂಗಡಿ ಮುಂದೆ ಬಡವರ ಅಸಹಾಯಕ ಹೇಳಿಕೆಗಳ ಮಾಧ್ಯಮ ವರದಿಯನ್ನು ಟ್ವೀಟರ್ನಲ್ಲಿ ಪೊೀಸ್ಟ್ ಮಾಡಿರುವ ಅವರು, 75ನೇ ವರ್ಷದ ಸ್ವಾತಂತ್ರ್ಯೋತ್ಸವ ಬಡವರಿಗೆ ಹೊರೆಯಾಗುತ್ತಿರುವುದು ದುರಾದೃಷ್ಟ ಎಂದಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ 20ರೂ.ಗೆ ರಾಷ್ಟ್ರಧ್ವಜವನ್ನು ಮಾರಾಟ ಮಾಡಲಾಗುತ್ತಿದೆ.ಧ್ವಜ ಖರೀದಿ ಮಾಡದೇ ಇರುವವರಿಗೆ ಪಡಿತರ ನೀಡುವುದಿಲ್ಲ ಎಂದು ಅಂಗಡಿಯವನು ಹೇಳಿಕೆ ನೀಡಿದ್ದಾನೆ. ಆಹಾರ ಇಲಾಖೆಯ ಇನ್ಸ್ಪೆಕ್ಟರ್ ಅವರು ನೀಡಿರುವ ಸೂಚನೆ ಪ್ರಕಾರ ಪಡಿತರ ಬೇಕಾದರೆ ಧ್ವಜ ಖರೀದಿಸಲೇ ಬೇಕು ಎಂದಿದ್ದಾನೆ. ಆದರೆ, ನಮಗೆ ಕಷ್ಟ ಕಲಾದಲ್ಲಿ ಆಹಾರ ಖರೀದಿಸಲೇ ಹಣವಿಲ್ಲ. ಇನ್ನು ಧ್ವಜಕ್ಕೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದು ದುಬಾರಿಯಾಗಿದೆ ಎಂದು ಕೂಲಿಕಾರ್ಮಿಕರು ಹೇಳಿಕೆ ನೀಡಿದ್ದಾರೆ. ಇದನ್ನು ಪೊೀಸ್ಟ್ ಮಾಡಿರುವ ವರುಣ್ಗಾಂ ತಿರಂಗಗಾಗಿ ಹಣ ವಸೂಲಿ ಮಾಡುವುದು ನಾಚಿಕೆಗೇಡು. ಜೀವನ ನಿರ್ವಹಣೆ ಮಾಡಲು ಸಮಸ್ಯೆ ಎದುರಿಸುತ್ತಿರುವ ಬಡವರ…
ಕಾಶ್ಮೀರದ ರಜೌರಿ ಜಿಲ್ಲೆಯ ಪರ್ಗಲ್ ಸೇನಾ ಶಿಬಿರದ ಮೇಲೆ ಇಂದು ಮುಂಜಾನೆ ಆತ್ಮಾಹುತಿ ಭಯೋತ್ಪಾದಕರ ಗುಂಪು ದಾಳಿ ನಡೆಸಿ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.ಕ್ಷಿಪ್ರ ಕಾರ್ಯಾಚರನೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಶಸ್ತ್ರ ಸಜ್ಜಿತ ಭಯೋತ್ಪಾದಕರು ಮೂದಲು ಸೇನಾ ಶಿಬಿರದ ಬೇಲಿಯನ್ನು ದಾಟಲು ಪ್ರಯತ್ನಿಸಿದಾಗ ಎಚ್ಚೆತ ಕಾವಲುಗಾರ ಯೋಧ ಎಚ್ಚರಿಸಿ ಪ್ರತಿರೋಧಿಸಿದ್ದಾನೆ. ಈ ನಡುವೆ ಭಯೋತ್ಪಾದಕರ ಗುಂಡು ಹಾರಿಸಿದ್ದಾರೆ ನಂತರ ಗುಂಡಿನ ಚಕಮಕಿ ನಡೆಯಿತು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಹೇಳಿದ್ದಾರೆ. ಕತ್ತಲೆಯಲ್ಲಿ ಜಾಗದಲ್ಲಿ ಒಳ ನುಸುಳಲು ಪ್ರಯತ್ನಿಸುವಾಗ ಇಬ್ಬರು ಭಯೋತ್ಪಾದಕರು ಪತ್ತೆಯಾಗಿದ್ದಾರೆ. ಅವರನ್ನು ಸದೆಬಡಿಯಲಾಗಿದೆ. ಇದರ ನಡುವೆ ಐವರು ಯೋದರು ಗಾಯಗೊಂಡರು ಅದರಲ್ಲಿ ಮೂವರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ. ದರ್ಹಾಲ್ ಪೊಲೀಸ್ ಠಾಣೆಯಿಂದ ಸುಮಾರು ಆರು ಕಿಲೋಮೀಟರ್ ಈ ಸೇನಾ ಶಿಬಿರವಿದ್ದು ಸಂಚು ಮಾಡಿ ಈ ದಾಳಿ ನಡೆಸಲಾಗಿದೆ.ಕಣಿವೆಯಾದ್ಯಂತ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಹೆಚ್ಚುವರಿ ಪಡೆಗಳು ಸ್ಥಳಕ್ಕೆ…
ಹಣಕಾಸು ಅವ್ಯವಹಾರ ಆರೋಪ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ)ನಡೆಸುತ್ತಿರುವ ತನಿಖೆಯನ್ನು ಪ್ರಶ್ನಿಸಿ ಕೇರಳದ ಐವರು ಎಲ್ಡಿಎಫ್ ಶಾಸಕರು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಿಪಿಐ(ಎಂ) ಶಾಸಕರಾದ ಕೆ ಕೆ ಶೈಲಜಾ, ಐ ಬಿ ಸತೀಶ್ ಮತ್ತು ನಟ ಎಂ ಮುಖೇಶ, ಸಿಪಿಐ ಶಾಸಕ ಇ ಚಂದ್ರಶೇಖರನ್ ಮತ್ತು ಕಾಂಗ್ರೆಸ್ (ಜಾತ್ಯತೀತ) ಶಾಸಕ ಕಡನಪ್ಪಲ್ಲಿ ರಾಮಚಂದ್ರನ್ ಅವರು ಇಡಿ ತನಿಖೆಯನ್ನು ವಿರೋಧಿಸಿ ಹೈಕೋರ್ಟ್ನಲ್ಲಿ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎಸ್ ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರ ಪೀಠದ ಮುಂದೆ ಈ ಅರ್ಜಿಯ ವಿಚಾರಣೆಗೆ ನಡೆಯಲಿದೆ. ವಿದೇಶಿ ವಿನಿಮಯ, ಮೂಲಸೌಕರ್ಯ ನಿ ಹೊಡಿಕೆಯಲ್ಲಿ ನಡೆದಿರುವ ಅಕ್ರಮ ಕುರಿತು ತನಿಖೆಗೆ ಹಾಜರಾಗ ಬೇಕೆಂದು ನೀಡಿದ ಸಮನ್ಸ್ ಗಳನ್ನು ಕೂಡ ಪ್ರಶ್ನಿಸಿ ಪ್ರತ್ಯೇಕ ಮನವಿಯಲ್ಲಿ ಮಾಜಿ ರಾಜ್ಯ ಹಣಕಾಸು ಸಚಿವ ಥಾಮಸ್ ಐಸಾಕ್ ಸಲ್ಲಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…