Subscribe to Updates
Get the latest creative news from FooBar about art, design and business.
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
- ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
- ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
- ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
- ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
- ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
Author: admin
ಬೆಳಗಾವಿ : ಪಂಚಮಸಾಲಿ ಹೋರಾಟ ಅಂತಿಮ ಹಂತ ತಲುಪಿದ್ದು, 2 ಎ ಮೀಸಲಾತಿ ನೀಡುವಲ್ಲಿ ಸರ್ಕಾರ ವಿಳಂಬ ನೀತಿ ತೋರುತ್ತಿರುವುದನ್ನು ಖಂಡಿಸಿ 25 ಲಕ್ಷ ಜನರಿಂದ ಡಿಸೆಂಬರ್ 12 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಹುಕ್ಕೇರಿಯಲ್ಲಿ ಹಮ್ಮಿಕೊಂಡ ಪಂಚಮಸಾಲಿ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ 2ಎ ಮೀಸಲಾತಿ ಹೋರಾಟ ಕೆಲವೇ ದಿನಗಳಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ. ಶೇ 82ರಷ್ಟು ಬಹುಸಂಖ್ಯಾತ ಪಂಚಮಸಾಲಿ ಸಮಾಜದವರು ಅಧಿಕಾರದಿಂದ ವಂಚಿತರಾಗಿದ್ದಾರೆ. ಪಂಚಮಸಾಲಿ ಹೃದಯವಂತ ಸಮಾಜ, ನಾನು ಪೀಠಾಧ್ಯಕ್ಷನಾದ ಬಳಿಕ ಎಂದೆಂದಿಗೂ ಯಾರೂ ಏನನ್ನೂ ಕೇಳಿಲ್ಲ. ಮೀಸಲಾತಿ ಸಿಗೋವರೆಗೂ ಏನೂ ಬೇಡ, ಹೋರಾಟಕ್ಕೆ ಬನ್ನಿ ಎಂದು ಕರೆ ಕೊಟ್ಟಿದ್ದೇನೆ ಎಂದು ತಿಳಿಸಿದರು. 2ಎ ಮೀಸಲಾತಿಗೆ ಆಗ್ರಹಿಸಿ ಸರ್ಕಾರಕ್ಕೆ ಕೊಟ್ಟ ಗಡುವು ಮುಗಿದು ಹೋಗಿದೆ. ಸರ್ಕಾರ ನಾಲ್ಕು ಬಾರಿ ಮಾತು ಕೊಟ್ಟು ಮರಿದು ಕೊಂಡಿದೆ. ಹೀಗಾಗಿ, ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಿದ್ದೇವೆ. ಈಗ ಮೀಸಲಾತಿ…
ಕೊರಟಗೆರೆ: ಪಟ್ಟಣದ ಕಾಮಧೇನು ಮೀಟಿಂಗ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಮಾನ್ಯವರ್ ಕಾನ್ಷೀರಾಂ ಜೀ ಅವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಮಾನ್ಯವಾರ್ ಕಾನ್ಷೀರಾಮ್ ಅವರಿಗೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಕೊರಗೆರೆ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಂವಿಧಾನದ ಬಗ್ಗೆ ಮತ್ತು ದೇಶದ ಕಾನೂನು ಸುವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿ ಒಂದು ಗಂಟೆಗಳ ಕಾಲ ಅಧ್ಯಯನ ಶಿಬಿರವನ್ನು ಆಯೋಜಿಸುವ ಮೂಲಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ರಚನೆಯ ಸಂವಿಧಾನ ಪುಸ್ತಕವನ್ನು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ನಂತರ ರಾಜ್ಯ ಕಮಿಟಿಯ ಮತ್ತು ಜಿಲ್ಲಾ ಕಮಿಟಿಯ ಮುಖಂಡರುಗಳ ನೇತೃತ್ವದಲ್ಲಿ ತುಮಕೂರು ಗ್ರಾಮಾಂತರ ಬಹುಜನ ಸಮಾಜ ಪಾರ್ಟಿಯ ಘಟಕ ಸ್ಥಾಪನೆ ಮಾಡಲಾಯಿತು.. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಸಂವಿಧಾನದ ಮಹತ್ವ ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ನಾಗರಿಕರು ತಿಳಿಯಲೇ ಬೇಕಾಗಿದೆ ಇತ್ತೀಚಿನ ದಿನಗಳಲ್ಲಿ…
ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಸುವರ್ಣ ಸೌಧ ಮುಂದೆ ರೈತರು ಅರೆಬೆತ್ತಲೆ ಪ್ರತಿಭಟನೆ ಮುಂದಾಗಿದ್ದರು. ಆದರೆ ಜಿಲ್ಲೆಯ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರನ್ನು ಪೊಲೀಸರು ತಡೆ ಹಿಡಿದರು. ಇದರಿಂದ ಪೊಲೀಸರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿದ್ದಾರೆ. ರಸ್ತೆ ತಡೆ ಬಳಿಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಹತ್ತರಗಿ ಟೋಲ್ ಗೇಟ್ ಬಳಿ ಪೊಲೀಸರು ರೈತರನ್ನು ತಡೆದಿದ್ದಾರೆ. ಪ್ರತಿಭಟನೆಗೆ ತಡೆಯೊಡ್ಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ, ಸ್ಥಳದಲ್ಲೇ ಧರಣಿ ಕುಳಿತಿದ್ದ ಅವರನ್ನು ವಶಕ್ಕೆ ಪಡೆದಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಧರಣಿ ನಿರತರ ನಡುವೆ ವಾಗ್ವಾದ ನಡೆದು, ನೂಕಾಟ, ತಳ್ಳಾಟ ನಡೆಯಿತ್ತು. ಈ ವೇಳೆ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆಗಳು ಜಲಾವೃತಗೊಳ್ಳುತ್ತಿದ್ದು, ಇದರಿಂದಾಗಿ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಎದುರಿಸುತ್ತಿದ್ದಾರೆ. ಹುಳಿಯಾರು ಕೆರೆ ಕೋಡಿ ಬೀಳಲು ಕ್ಷಣ ಗಣನೆ ಆರಂಭವಾಗಿದ್ದು, ಕೆರೆ ಕೋಡಿ ಹರಿದರೆ ಇಲ್ಲಿನ ಜನರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ. ಹುಳಿಯಾರು ಕೆರೆ ಅಂಗಳದಲ್ಲಿ ಮನೆಯ ಕಟ್ಟಿ ಜೀವನ ಸಾಗಿಸುತ್ತಿರುವವರಿಗೆ ಕಳೆದ ಎರಡು ದಶಕಗಳಿಂದಲೂ ಈ ರೀತಿಯ ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಮಳೆಯಿಂದ ಹುಳಿಯಾರು ಕೆರೆ ತುಂಬಿದಂತೆಲ್ಲ, ಕೆರೆ ಅಂಗಳದಲ್ಲಿರುವ ಮನೆಗಳೆಲ್ಲ ಜಲಾವೃತಗೊಳ್ಳುತ್ತಿದೆ. ದಿನೇ ದಿನೇ ಜಲಾವೃತಗೊಳ್ಳುತ್ತಿರುವ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಾಗದೆ, ಸ್ಥಳಾಂತರಗೊಳ್ಳಲು ಬೇರೆಡೆ ಸ್ಥಳವು ಇಲ್ಲದೆ, ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾ ಬಟ್ಟೆಯಾಗಿದೆ. ಸರ್ಕಾರ ಕೂಡಲೇ ಇಲ್ಲಿನ ಎಲ್ಲಾ ನಿರಾಶ್ರಿತರಿಗೂ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಲಿ ಎಂಬುದು ಇಲ್ಲಿನ ನಿರಾಶ್ರಿತರ ಒತ್ತಾಯವಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್., ತುಮಕೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಮ್ಮದಲ್ಲದ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಹಣ ಪಡೆದು ವಂಚಿಸಿದ್ಧ ಆರು ಮಂದಿ ವಿರುದ್ಧ ನಗರದ ಅಶೋಕ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಎ.1 ಪುಟ್ಟಬುದ್ಧಿ, ಎ.2 ಪುಷ್ಪ, ಎ. 3 ಲಿಂಗಣ್ಣ, ಎ.4 ಮಹದೇವ ಮತ್ತು ಇವರಿಗೆ ಸಹಕರಿಸಿದ ಮುಡಾ ಅಧಿಕಾರಿ ಹರ್ಷವರ್ಧನ್ ಹಾಗೂ ವಕೀಲ ರಾಜೇಶ್ .ಎಂ ವಿರುದ್ಧ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/20,22ರ ಪ್ರಕಾರ ಭಾರತೀಯ ದಂಡಸಂಹಿತೆ 416, 419,420, ಹಾಗೂ 406ರಡಿ ಪ್ರಕರಣ ದಾಖಲಾಗಿದೆ. ಕೆಂಪಮ್ಮ ಎಂಬುವವರ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳು ಮುಡಾದಿಂದ 98,33,862 ರೂ. ಹಣವನ್ನ ಪಡೆದು ವಂಚಿಸಿದ್ದರು. ಈ ಸಂಬಂಧ ಕೆಂಪಮ್ಮ ದೂರು ನೀಡಿದ್ದರು. ಈ ನಡುವೆ 1ನೇ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಅಶೋಕಪುರಂ ಪೊಲೀಸ್ ಠಾಣೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಪ್ರಕರಣ…
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಕೆಲವು ದಿನ ಮುಂದುವರಿಯಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇಂದ್ರ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರಿಂದ ಬೆಂಗಳೂರಿನ ತಗ್ಗು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವಾರು ಬಡಾವಣೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತಗೊಂಡಿದ್ದವು. ಐಟಿ ಹಬ್ ಆಗಿರುವ ಬೆಳ್ಳಂದೂರಿನಲ್ಲಿ ಮನೆಗಳು ಹಾಗೂ ಅಪಾರ್ಟ್ ಮೆಂಟ್ ಗಳಿಗೆ ನೀರು ನುಗ್ಗಿದ್ದು, ಹಲವು ಕಾರುಗಳು ಮುಳುಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮನೆಯಲ್ಲಿ ಮಟನ್ ಅಡುಗೆ ಮಾಡುವ ವಿಷಯದಲ್ಲಿ ಆರಂಭವಾದ ಗಂಡ-ಹೆಂಡತಿ ಜಗಳ ಪಕ್ಕದ ಮನೆಯವನ ಕೊಲೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆ ಮಧ್ಯಪ್ರದೇಶದ ರಾಜಧಾನಿ ಭೂಪಾಲ್ ನಲ್ಲಿ ನಡೆದಿದೆ. ಮಂಗಳವಾರ ಮಾಂಸಹಾರ ಅಡುಗೆ ಮಾಡಬಾರದು ಎಂದು ಪತ್ನಿ ವಾದ ಮಾಡುತ್ತಿದ್ದರೆ, ಗಂಡ ಮಟನ್ ಸಾರು ಮಾಡು ಎಂದು ಪಟ್ಟು ಹಿಡಿದಿದ್ದ. ಈ ವಿಷಯದಲ್ಲಿ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿದ್ದರಿಂದ ನೆರೆಮನೆಯಾದ ಜಗಳ ಬಿಡಿಸಲು ಬಂದಿದ್ದಾನೆ. ಆದರೆ ಕೊನೆಗೆ ಆತನೇ ಬಲಿಯಾಗಿದ್ದಾನೆ. ಹಿಂದೂ ಸಂಪ್ರದಾಯದ ಪ್ರಕಾರ ಹಲವರು ಮಂಗಳವಾರ ಮಂಗಳಕರ ದಿನವೆಂದು ಪರಿಗಣಿಸುತ್ತಾರೆ. ಹೀಗಾಗಿ ಕೆಲವರು ಅಂದು ಮಾಂಸಾಹಾರವನ್ನು ಸೇವಿಸುವುದಿಲ್ಲ. ಈ ಹಿನ್ನೆಲೆ ಮಹಿಳೆ ತನ್ನ ಪತಿಗೆ ಮಾಂಸಾಹಾರ ಮಾಡುವುದು ಬೇಡ ಎಂದು ವಾದಿಸಿದ್ದಾಳೆ. ಇದರಿಂದ ಕೋಪಗೊಂಡ ಪಪ್ಪು ಜಗಳ ಪ್ರಾರಂಭಿಸಿದ್ದಾನೆ. ಗಲಾಟೆ ಕೇಳಿದ ಪಕ್ಕದ ಮನೆಯ ಬಿಲ್ಲು ಎಂಬಾತ ಜಗಳವನ್ನು ಬಿಡಿಸಲು ಹೋಗಿ, ಸಮಸ್ಯೆಯನ್ನು ಇತ್ಯರ್ಥವೇನೋ ಮಾಡಿ ವಾಪಾಸ್ ತನ್ನ ಮನೆಗೆ ಬಂದಿದ್ದಾನೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಪಪ್ಪು ಬಿಲ್ಲುವಿನ ಮನೆಗೆ ಹೋಗಿ ಬಿಲ್ಲುವನ್ನುಹೊಡೆದು…
ಗುರುರಾಯರ ಸನ್ನಿಧಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿಗೆ ಹಣದ ಹರಿವು ಹರಿದು ಬಂದಿದ್ದು, ಸುಮಾರು ಒಂದು ತಿಂಗಳಲ್ಲಿ ಸುಮಾರು 2 ಕೋಟಿ ರೂ. ಸಂಗ್ರಹವಾಗಿ ದಾಖಲೆ ಬರೆದಿದೆ. ಅಕ್ಟೋಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 1,98,17,614 ರೂ. ಸಂಗ್ರಹವಾಗಿದೆ. ಸಂಗ್ರಹವಾದ ಕಾಣಿಕೆಯಲ್ಲಿ 4,40,660 ರೂ. ನಾಣ್ಯಗಳು ಹಾಗೂ 1,93,77,054 ರೂ. ನೋಟುಗಳಿವೆ. ಜೊತೆಗೆ 128 ಗ್ರಾಂ ಬಂಗಾರ, 810 ಗ್ರಾಂ ಬೆಳ್ಳಿ ವಸ್ತುಗಳು ಸಿಕ್ಕಿವೆ. ಸೆಪ್ಟೆಂಬರ್ 29ರಿಂದ ಅಕ್ಟೋಬರ್ 18ರವರೆಗಿನ 20 ದಿನಗಳ ಕಾಣಿಕೆ ಸಂಗ್ರವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಮಠಕ್ಕೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ, ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಎಣಿಕೆ ಕಾರ್ಯ ಮುಕ್ತಾಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಜನಪ್ರಿಯರಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ೨೩ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ಬಿಲ್ಡರ್ಸ್ ಜಿಮ್ ಕಟ್ಟಡದ ೨೩ನೇ ಮಹಡಿಯಿಂದ ಹಾರಿ ೫೭ ವರ್ಷದ ಪಾರಸ್ ಪೊರ್ವಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಚಿಂಚೊಪ್ಕೊಳಿ ರೈಲ್ವೆ ನಿಲ್ದಾಣದ ಬಳಿಯ ಶಾಂತಿ ಕಮಲ್ ಹೌಸಿಂಗ್ ಸೊಸೈಟಿ ಕಟ್ಟಡದ ಜಿಮ್ ನ ಬಾಲ್ಕನಿಯಿಂದ ಹಾರಿ ಪಾರಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವೆಂಬರ್ 11 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಇಂದು ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ ದೊರೆಯಿತು. ಇಂದಿನಿಂದ ನವೆಂಬರ್ 7 ರವರೆಗೆ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣಾ ಅಭಿಯಾನ ನಡೆಯಲಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಮೃತ್ತಿಕಾ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕೆಲವರು ಕೆಂಪೇಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರೇನು ಚಕ್ರವರ್ತಿನಾ ಅವರಿಗ್ಯಾಕೆ ಅಷ್ಟು ಮಹತ್ವ ಅಂತಾರೆ . ಕೆಂಪೇಗೌಡರು ಎಷ್ಟು ದೊಡ್ಡವರು ಅನ್ನೋದು ಮುಖ್ಯ ಅಲ್ಲ. ಅವರು ಎಂತಹ ಕೆಲಸ ಮಾಡಿದ್ದಾರೆ ಅನ್ನೋದು ಮುಖ್ಯ. ಕೆಂಪೇಗೌಡರಿಂದ ಈ ಬೆಂಗಳೂರು ಸೃಷ್ಠಿಯಾಗಿರುವುದು. ಹಲವು ಸರ್ಕಾರ ಬಂದು ಹೋದರೂ ಕೆಂಪೇಗೌಡರಿಗೆ ಗೌರವ ಸಿಕ್ಕಿಲ್ಲ. ಬಿಎಸ್ ವೈ ಮತ್ತು ಸಿಎಂ ಬೊಮ್ಮಾಯಿ ಕೆಂಪೇಗೌಡರಿಗೆ ಗೌರವ ಸೂಚಿಸಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…