Subscribe to Updates
Get the latest creative news from FooBar about art, design and business.
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
- ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
- ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
- ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
Author: admin
ಉಟ್ಕೈಯಲ್ಲಿ ಭೂಕುಸಿತದಿಂದಾಗಿ ಉಟ್ಕೈ-ಮೆಟ್ಟುಪಾಳ್ಯಂ ನಡುವಿನ ಮೌಂಟೇನ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದೀಗ ಅದನ್ನು ಸರಿಪಡಿಸಲಾಗಿದ್ದು, 5 ದಿನಗಳ ನಂತರ ಉಟ್ಕೈ – ಮೆಟ್ಟುಪಾಳ್ಯಂ ಮಾರ್ಗದಲ್ಲಿ ಇಂದು ಮತ್ತೆ ಪರ್ವತ ರೈಲು ಓಡುತ್ತಿದೆ. ಇದು ಪ್ರವಾಸಿಗರಲ್ಲಿ ಸಂತಸ ಮೂಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ಹೊಸ ವರ್ಷ ಮತ್ತು ಕ್ರಿಸ್ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿಯನ್ನುಕಡ್ಡಾಯಗೊಳಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಈ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷ ಮತ್ತು ಕ್ರಿಸ್ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿ ಕಡ್ಡಾಯವಾಗಿದೆ. ಸಂಘಟಕರು, ಅನುಮತಿಗಳಿಗಾಗಿ ಅರ್ಜಿ ಸಲ್ಲಿಸುವಾಗ, ಅವರು ಹೋಸ್ಟ್ ಮಾಡುವ ಈವೆಂಟ್ಗಳ ಪ್ರಕಾರದ ಬಗ್ಗೆ ವಿವರವಾಗಿ ವಿವರಿಸಬೇಕು. ಅನುಮತಿ ಇಲ್ಲದ ಪಾರ್ಟಿಗಳಿಗೆ ಆಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸೂಚನೆ ನೀಡಿದ್ದಾರೆ. ತಪಾಸಣೆ, ಪರವಾನಗಿ ಪಡೆಯದಿರುವ ಶಸ್ತ್ರಾಸ್ತ್ರಗಳ ಮೇಲೆ ನಿಷೇಧ, ಹೈ ರೆಸಲ್ಯೂಶನ್ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ವಿದ್ಯುತ್ ಬ್ಯಾಕಪ್, ಸಾಕಷ್ಟು ಬೆಳಕು, ಭದ್ರತಾ ಸಿಬ್ಬಂದಿ ನೇಮಕ ಕುರಿತು ನಿರ್ದೇಶನ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಳ್ಳಾರಿ: ತಾಲ್ಲೂಕಿನ ಹಲಕುಂದಿ ಗ್ರಾಮದ ಬಳಿಯ ಕಲ್ಯಾಣ ಕೋಳಿ ಫಾರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಹರಿದು ಮೂವರು ಜನ ಹಾಸ್ಟಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಬಸ್ ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮುರುಡಿಯ ಶಂಕರ್ (18) ಎಮ್ಮಿಗನೂರಿನ ಕನಕರಾಜ್ (19) ನಾಗೇನಹಳ್ಳಿಯ ಹೊನ್ನೂರ (22) ಎಂದು ಗುರುತಿಸಿದ್ದು ಇವರು ಬಳ್ಳಾರಿ ನಗರದ ಎಸ್ಎಸ್ಟಿ ಹಾಸ್ಟಲ್ ನ ವಿದ್ಯಾರ್ಥಿಗಳಾಗಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ : 2023ರ ವಿಧಾನಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಶ್ರೀ ರಾಮ ಸೇನೆಯ ಕಾರ್ಯಕರ್ತರು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ. ನಾನು ಕೂಡ ಕಾರ್ಕಳ ಅಥವಾ ತೇರದಾಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗೆ ಮಾನವೀಯತೆ ಇದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ತಕ್ಷಣ ಮರುತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಸದನದೊಳಗೆ ವೀರ ಸಾವರ್ಕರ್ ಭಾವಚಿತ್ರವನ್ನು ಏಕೆ ಹಾಕಲಾಗುತ್ತದೆ. ಇಲ್ಲಿಯವರೆಗೆ ಸದನದಲ್ಲಿ ಸಾವರ್ಕರ್ ಫೋಟೋ ಹಾಕಿಲ್ಲ, ಈಗ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರವಾಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವೀರ ಸಾವರ್ಕರ್ ಮೊದಲೇ ವಿವಾದಾತ್ಮಕ ವ್ಯಕ್ತಿತ್ವ ಹೊಂದಿದವರು. ಗಾಂಧೀಜಿ ಸಾವಿನಲ್ಲಿ ಸಾವರ್ಕರ್ ಕೈವಾಡವಿದೆ ಎಂದರು. ಫೋಟೋ ಅಳವಡಿಕೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿಲ್ಲ. ಈ ವಿಚಾರವನ್ನು ಸರ್ವ ಸದಸ್ಯರ ಗಮನಕ್ಕೆ ತಂದಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 10 ದಿನ ನಡೆಯುವ ರಾಜಕೀಯ ಮೇಲಾಟಕ್ಕೆ ಬೆಳಗಾವಿ ಸಜ್ಜಾಗಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ. ಇತ್ತ ತಿರುಗೇಟು ನೀಡಲು ಬಿಜೆಪಿ ಸರ್ಕಾರ ಕೂಡ ರೆಡಿಯಾಗಿದೆ. ಗಡಿ ವಿವಾದ, ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹ, ನೇಮಕಾತಿ ಹಗರಣ, ಗ್ರಾಮ ಪಂಚಾಯಿತಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವಿಳಂಬ, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ಪ್ರಶ್ನೆಗಳಿಗೆ ಸಮರ್ಥವಾಗಿ ಉತ್ತರಿಸಲು ರಾಜ್ಯ ಸರ್ಕಾರ ಕೂಡ ಸಜ್ಜಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಂಜನಗೂಡು: ಕಾಡಿನಲ್ಲಿ ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ವೇಳೆ ರೈತರನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಂಜನಗೂಡು ತಾಲೂಕಿನ ಕೋಣನೂರು-ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಪ್ಪಿಸಿಕೊಂಡು ಹೋಗುವ ಭರದಲ್ಲಿ ಬೇಟೆಗಾರರ ಜೀಪು ಮಗುಚಿ ಬಿದ್ದ ಘಟನೆಯೂ ನಡೆದಿದೆ. ಕೋಣನೂರು ಗ್ರಾಮದ ಹೊರವಲಯದ ಎತ್ತಿನ ಮುಂಟಿ ಎಂಬ ಸ್ಥಳದಲ್ಲಿ ರಾತ್ರಿಯ ಸಮಯದಲ್ಲಿ ಜಿಂಕೆಯನ್ನು ಬೇಟೆಯಾಡಿದ ಬೇಟೆಗಾರರು, ಮರಕ್ಕೆ ನೇತು ಹಾಕಿ, ಮಾಂಸ ಮಾಡುತ್ತಿದ್ದರು. ಈ ವೇಳೆ ಜಮೀನಿನಲ್ಲಿದ್ದ ರೈತರನ್ನು ಕಂಡು ಹೆದರಿ, ಜೀಪು ಹತ್ತಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಗಾಬರಿಯಿಂದ ತೆರಳುವ ಭರದಲ್ಲಿ ಜೀಪು ಪಲ್ಟಿಯಾಗಿದ್ದು, ಜೀಪನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಕೋಣನೂರು ಮತ್ತು ಚುಂಚನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆಗಳು ಯಥೇಚ್ಛವಾಗಿವೆ, ಕುರುಚಲು ಅರಣ್ಯ ಪ್ರದೇಶವಾಗಿರುವ ಇಲ್ಲಿ ಸಾವಿರಾರು ಸಂಖ್ಯೆಯಲ್ಲಿರುವ ಜಿಂಕೆಗಳು ವಾಸಿಸುತ್ತಿವೆ. ಜೊತೆಗೆ ಕೃಷ್ಣಮೃಗಗಳು ಕೂಡ ವಾಸಿಸುತ್ತಿವೆ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಿಂಕೆಗಳು ಬೇಟೆಗಾರರಿಗೆ ಬಲಿಯಾಗುತ್ತಿವೆ ಎಂದು ಕೋಣನೂರು ಮತ್ತು ಚುಂಚನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಪೊಲೀಸ್…
ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಇದುವರೆಗೂ ಬಂದಿರುವ ಅರ್ಜಿಗಳನ್ನು ಆಯಾ ಜಿಲ್ಲಾ ಕಾಂಗ್ರೆಸ್ ಗಳಿಗೆ ಕಳುಹಿಸಿಕೊಡುತ್ತೇವೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ರಾಜ್ಯಮಟ್ಟದ ಚುನಾವಣಾ ಸಮಿತಿಯಿಂದ ಇಬ್ಬರು ಸದಸ್ಯರಿಗೆ ಒಂದೊಂದು ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು. ಪಕ್ಷದ 5 ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಚುನಾವಣಾ ಸಮಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಎಲ್ಲರೂ ಸೇರಿ ಚರ್ಚೆ ಮಾಡುತ್ತಾರೆ. ಆದಷ್ಟು ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ಸೇರಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಪ್ರತಿ ಕ್ಷೇತ್ರಗಳಲ್ಲಿ 1…
ತಿಪಟೂರು: ಕೊಬ್ಬರಿಗೆ ಬೆಂಬಲ ಬೆಲೆ ಕುರಿತು ರಾಜ್ಯಸಭೆಯಲ್ಲಿ ಚರ್ಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವಂತೆ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಕೊಬ್ಬರಿ ಬೆಲೆ ತುಂಬಾ ಕನಿಷ್ಠಕ್ಕೆ ಇಳಿದಿದ್ದು, ಪರಿಣಾಮವಾಗಿ ರೈತರಿಗೆ ತುಂಬಾ ನಷ್ಟ ಅನುಭವಿಸುವ ಸ್ಥಿತಿ ಉಂಟಾಗಿದೆ. ಆದ ಕಾರಣ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಕೆ.ಷಡಕ್ಷರಿ ಅವರ ಆದೇಶದಂತೆ ನಾ ಕೆನಹಳ್ಳಿ ಸುರೇಶ್ ಷಡಕ್ಷರಿ ಅವರ ಅಭಿಮಾನಿ ಬಳಗ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಕಲ್ಪತರು ನಾಡಿನ ಕೊಬ್ಬರಿಗೆ ಕನಿಷ್ಠ ರೂ.15,000 ಬೆಂಬಲ ಬೆಲೆ ಘೋಷಿಸುವಂತೆ ನ್ಯಾಫೆಡ್ ಕೇಂದ್ರ ಸ್ಥಾಪಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ಪಟ್ಟಣದ ಕೋಟೆ ಬೀದಿಯ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಬೆಟ್ಟದಲ್ಲಿ ಮೇಯುತ್ತಿದ್ದ ಮೇಕೆಗಳ ಮೇಲೆ ಮೂರು ಚಿರತೆಗಳು ದಾಳಿ ನಡೆಸಿದೆ. ಚಿರತೆಗಳ ದಾಳಿಗೆ ಒಂದು ಮೇಕೆ ಬಲಿ: ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮೇಕೆ ಕಳೆದುಕೊಂಡ ರೈತನಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಹಲವು ತಿಂಗಳುಗಳಿಂದ ಒಂದೊಂದಾಗಿ ಮೇಕೆ ಹಾಗೂ ಸಾಕು ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಗೆ ಆಹಾರವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಕುಡಿಯುವ ನೀರಿನ ಬಾವಿ ಇದ್ದು ಸಾರ್ವಜನಿಕರ ಪ್ರತಿನಿತ್ಯ ಅಲ್ಲಿಗೆ ಬರಬೇಕು. ರಾತ್ರಿ ಸಮಯದಲ್ಲಿ ವಿದ್ಯುತ್ ಕಂಬಗಳಲ್ಲಿ ಬೆಳಕು ಇಲ್ಲದ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಚಿರತೆಗಳು ದಾಳಿ ಮಾಡಿದರೆ, ಏನು ಮಾಡಬೇಕು? ಎಂದು ಆತಂಕ ವ್ಯಕ್ತಪಡಿಸಿರುವ ಸಾರ್ವಜನಿಕರು, ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ವಹಿಸಿ ಚಿರತೆಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.…