Subscribe to Updates
Get the latest creative news from FooBar about art, design and business.
- ಯುವಕರಿಗೆ ತಂತ್ರಜ್ಞಾನ ವ್ಯಸನವಾಗಿದೆ: ಪ್ರೊ.ಎಂ.ವೆಂಕಟೇಶ್ವರಲು
- ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ
- ಜನವರಿ 6ರಿಂದ ಮಧ್ಯಂತರ ವಿದ್ಯುತ್ ವ್ಯತ್ಯಯ
- ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ
- ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಅದ್ದೂರಿಯಾಗಿ ನೆರವೇರಿದ ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ
- 26 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಡೆಂಗ್ಯೂ ಜ್ವರದಿಂದ ಬಾಲಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರಿಂದ ಪ್ರತಿಭಟನೆ
Author: admin
ತಿಪಟೂರು: ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ತಮ್ಮ ಸೇವೆಸಲ್ಲಿಸುವ ಹಿನ್ನೆಲೆ ಕಾಯಂ ಸೇವಾ ಭದ್ರತೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ತರಗತಿ ಬಹಿಷ್ಕರಿಸಿ ಶುಕ್ರವಾರ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ನಮಗೆ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯ ದೊರೆತಿಲ್ಲ. ಕೇವಲ ಮಾಸಿಕ ಭತ್ಯೆ ಪಡೆಯುತ್ತಿದ್ದೇವೆ. ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ನಿರ್ಮಿಸುತ್ತಿರುವ ನಮಗೆ ರಾಜ್ಯ ಸರ್ಕಾರ ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಅತಿಥಿ ಉಪನ್ಯಾಸಕರಿಗೆ ಖಾಯಂ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಹಿಂದೆ ಸರ್ಕಾರಿ ಕಾಲೇಜಿನಲ್ಲಿ ಹಂಗಾಮಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ ಸಾಫ್ಟ್ ಗ್ಯಾಪ್ ಗುತ್ತಿಗೆ ಆಧಾರಿತ ಅರೆಕಾಲಿಕ ಉಪನ್ಯಾಸಕರನ್ನು ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಪದನಾಮ ಹೊಂದಿರುವವರನ್ನು 1982.1992.2003 ರಲ್ಲಿ ಕಾಯಂ ಮಾಡಿರುವ ನಿದರ್ಶನಗಳಿವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿರುವ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ…
ತುಮಕೂರು: ಬೇರೆಯವರ ಋಣ ನಮ್ಮ ಮೇಲಿದೆ ಎಂದು ಪಕ್ಷಕ್ಕೆ ದ್ರೋಹ ಬಗೆಯಲು ಸಾಧ್ಯವೇ? ಎಂದು ತುಮಕೂರು ಬಿಜೆಪಿ ಸಂಸದ ಜಿ ಎಸ್ ಬಸವರಾಜು ಪ್ರಶ್ನಿಸಿದರು. ಸ್ಥಳೀಯ ಸಂಸ್ಥೆ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ತುಮಕೂರು ಮಹಾನಗರ ಪಾಲಿಕೆ ಆವರಣಕ್ಕೆ ಆಗಮಿಸಿದ ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಬಳಿಕ ಪತ್ರಕರ್ತರ ಜೊತೆಗೆ ಮಾತನಾಡಿದರು. ವಿಧಾನ ಪರಿಷತ್ ಚುನಾವಣೆ ಪ್ರಾಶಸ್ತ್ಯದ ಮತದಾನದ ಮೇಲೆ ಅವಲಂಬಿತವಾಗಿದೆ. ಈಗ ಚುನಾಯಿತರಾಗಿರುವ ಪ್ರತಿನಿಧಿಗಳು ಮತದಾರರು ಸಾಕಷ್ಟು ವಿದ್ಯಾವಂತರಿದ್ದಾರೆ. ಹಾಗಾಗಿ ಮತದಾರರು ಯಾರಿಗೆ ಮತ ಚಲಾವಣೆ ಮಾಡುತ್ತಾರೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಬಿಜೆಪಿ ಪಕ್ಷದ ಅಭ್ಯರ್ಥಿ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ನಾನು 40 ವರ್ಷದ ರಾಜಕಾರಣದಲ್ಲಿ ಸ್ನೇಹಿತರಾಗಿದ್ದೇವೆ. ಹಾಗೆಂದ ಮಾತ್ರಕ್ಕೆ ನಾವು ಪಕ್ಷದ ಚಿನ್ಹೆಯ ಅಡಿಯಲ್ಲಿ ನಿಂತಿರುವ ಅಭ್ಯರ್ಥಿ ಬಿಟ್ಟು ಬೇರೆಯವರಿಗೆ ಮತದಾನ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಇನ್ನು ಕಳೆದ ಒಂದು ವಾರದಿಂದ…
ತಿಪಟೂರು: ತಾಲೂಕಿನ ಹೊನವಳ್ಳಿ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ಅಲ್ಲಿ ವಿಧಾನಪರಿಷತ್ ಚುನಾವಣೆ ಮತದಾನ ನಡೆಯುತ್ತಿದ್ದು, ಪಂಚಾಯತ್ ಸದಸ್ಯರೆಲ್ಲರೂ ಒಬ್ಬರಾಗಿ ಶಿಸ್ತಿನಿಂದ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಪಂಚಾಯತ್ ಸಿಬ್ಬಂದಿ ವರ್ಗ, ಪೊಲೀಸ್ ಅಧಿಕಾರಿಗಳು, ಆಶಾ ಕಾರ್ಯಕರ್ತರು ತಮ್ಮ ಕಾರ್ಯವನ್ನು ಬಹಳ ಶಿಸ್ತಿನಿಂದ ನಿರ್ವಹಿಸಿದ್ದು, ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೇ ಮತದಾನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಯಲು ಶ್ರಮಿಸಿದ್ದಾರೆ. ಮತದಾನ ಮಾಡಲು ಬಂದ ಎಲ್ಲಾ ಸದಸ್ಯರಿಗೂ ಕೋವಿಡ್ 19 ಸುರಕ್ಷಾ ಕ್ರಮವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಮತಚಲಾಯಿಸಲು ಅವಕಾಶ ಮಾಡಿಕೊಡಲಾಗಿತ್ತು. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ರಾಂಝಿ: ನೆರೆಹೊರೆಯವರ ಕಿರುಕುಳ ತಾಳಲಾರದೆ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಜಬಲ್ ಪುರ ಜಿಲ್ಲೆಯ ರಾಂಝಿಯಲ್ಲಿ ನಡೆದಿದೆ. ಬಾಲಕಿಯು ಮಧ್ಯಪ್ರದೇಶದ ಪ್ರದೇಶದ ನಿವಾಸಿಯಾಗಿದ್ದು, ನೆರೆಹೊರೆಯ ಮನೆಯವರು ಬಾಲಕಿಯು ಶಾಲೆಗೆ ಹೋಗುವ ವೇಳೆ ಅವಳ ಚಿತ್ರಗಳನ್ನು ಕ್ಲಿಕ್ಕಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು ಎನ್ನಲಾಗಿದೆ.. ಇದರಿಂದ ಬೇಸತ್ತಿದ್ದ ಬಾಲಕಿಯೂ ಪೊಲೀಸರಿಗೆ ದೂರು ನೀಡಲು ಹೋದರೆ ಪೊಲೀಸರು ಮೂರು ಗಂಟೆಯಾದರೂ ದೂರು ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿದೆ.. ಹೀಗಾಗಿ ಮನನೊಂದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಬಾಲಕಿಯ ಮನೆಯಲ್ಲಿದ್ದ ಡೆತ್ ನೋಟ್ನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಆಧಾರದ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಆಶಾ ಖನ್ನಾ, ತನ್ವಿ ಕೇವತ್ ಮತ್ತು ಮಮತಾ ಕೇವತ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.. ಮೃತ ಬಾಲಕಿಯ ತಂದೆ , ಬಾಲಕಿಗೆ ಆರೋಪಿಗಳು ಕಿರುಕುಳ ನೀಡುತ್ತಿದ್ದು, ನನಗೂ ಹೊಡೆದಿದ್ದಾರೆ ಎಂದು ಈ ಹಿಂದೆ ದೂರು…
ಚಿಕ್ಕಮಗಳೂರು: ಕೋವಿಡ್ ನಿಂದ ಮೃತಪಟ್ಟ ತರೀಕೆರೆ ತಾಲ್ಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಮಹದೇವಪ್ಪ ಮತ್ತು ಅಜ್ಜಂಪುರ ತಾಲೂಕಿನ ಪುರ ಗ್ರಾಮ ಪಂಚಾಯಿತಿಯ ನೀರುಗಂಟಿ ಕಲ್ಲೇಶಪ್ಪ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಮೊದಲ ಹಂತದ ಪರಿಹಾರ ಧನ ವಿತರಿಸಲಾಯಿತು. ಪರಿಹಾರದ ಮೊತ್ತ 30 ಲಕ್ಷ ಮಂಜೂರಾಗಿದ್ದು, ಮೊದಲ ಹಂತದಲ್ಲಿ 10 ಲಕ್ಷ ರೂ. ಗಳನ್ನು ಆರ್ ಟಿ ಎಸ್ ಮೂಲಕ ಪಡೆಯಲು ಮಂಜೂರಾತಿ ಆದೇಶ ಪ್ರತಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಹಸ್ತಾಂತರಿಸಿದರು. ಉಪಕಾರ್ಯದರ್ಶಿ ಕಿಶೋರ್ ಕುಮಾರ್ ಹಾಗೂ ಸಿಎಓ ಶಿವಕುಮಾರ್ ಇದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 1770
ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ, ಭಾರತೀಯ ವಾಯುಪಡೆಯ (ಐಎಎಫ್) ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರ ತಂದೆ ತಿಳಿಸಿದ್ದಾರೆ. ವರುಣ್ ಸಿಂಗ್ ಅವರ ತಂದೆ, ಭೋಪಾಲ್ ನಿವಾಸಿಯಾಗಿದ್ದು, ಅವರು ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ತೀವ್ರವಾಗಿ ಗಾಯಗೊಂಡ ಗ್ರೂಪ್ ಕ್ಯಾಪ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ. ನಾನು ವೆಲ್ಲಿಂಗ್ಟನ್ ತಲುಪಿದ್ದೇನೆ” ಎಂದು ಅವರು ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ. ವರುಣ್ ಸಿಂಗ್ ಅವರು ಜನರಲ್ ರಾವತ್ ಅವರೊಂದಿಗೆ ವೆಲ್ಲಿಂಗ್ಟನ್ಗೆ ಪ್ರಯಾಣಿಸುತ್ತಿದ್ದರು, ಅಲ್ಲಿ ಸಿಡಿಎಸ್ ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು ನಿಗದಿಯಾಗಿತ್ತು, ಆಗ ತಮಿಳುನಾಡಿನ ಕೂನೂರ್ ಬಳಿ ಚಾಪರ್ ಅಪಘಾತಕ್ಕೀಡಾಯಿತು. ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಸಿಂಗ್ ಅವರಿಗೆ ತೀವ್ರ ಗಾಯಗಳಾಗಿದ್ದು, ಸದ್ಯಕ್ಕೆ ವೆಂಟಿಲೇಟರ್ ಯಂತ್ರದ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿವೃತ್ತ ಕರ್ನಲ್ ಅವರು ತಮ್ಮ ಮಗನ ಸ್ಥಿತಿಗೆ…
ತಿಪಟೂರು: ನಗರದಲ್ಲಿನ ಕೋಡಿ ಸರ್ಕಲ್ ಹತ್ತಿರ ಬರುವ ನಕ್ಷತ್ರ ಬಾರ್ ಅಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರಾದ ರಮೇಶ್ ಶಿವಪುರ ಇವರ ಮೇಲೆ ನಗರ ಪೊಲೀಸ್ ಠಾಣಾ ಪೇದೆ ಕೃಷ್ಣಮೂರ್ತಿ ಎಂಬವರು ಹಲ್ಲೆ ನಡೆಸಿ, ಹಣ ವಸೂಲಿ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ದಲಿತ ಪರ ಮತ್ತು ಪ್ರಗತಿಪರ ಸಂಘಟನೆಗಳು, ತಾಲೂಕಿನ ಆದಿಜಾಂಬವ ಸಂಘದ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದು, ಸೆಪ್ಟಂಬರ್ ನಲ್ಲಿ ಈ ಘಟನೆ ನಡೆದಿದ್ದು, ಸಂಜೆ 5:30ರಿಂದ 6 ಗಂಟೆಯ ವೇಳೆ ಕೃಷ್ಣಪ್ಪನವರು ಕಂಠಪೂರ್ತಿಯಾಗಿ ಕುಡಿದು ಬಿಲ್ ಕೊಡದೇ ಹೋಗಿದ್ದು, ಬಿಲ್ ಕೇಳಿದ ಸಂದರ್ಭ ಬಾರ್ ನ ವ್ಯವಸ್ಥಾಪಕ ರಮೇಶ್ ಅವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ನಡೆಸಿದ್ದಾರೆ ಎಂದು ದಲಿತ ಮುಖಂಡ ಕುಪ್ಪಾಳು ರಂಗಸ್ವಾಮಿ ಆರೋಪಿಸಿದರು. ಪೇದೆ ಕೃಷ್ಣಮೂರ್ತಿ ಅವರು, ಹಲ್ಲೆ ನಡೆಸಿರುವುದೇ ಅಲ್ಲದೇ ಮಾಮೂಲಿ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ತಿಪಟೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸರು ಯಾವುದೇ…
ಕೊರಟಗೆರೆ: ವಿಧಾನ ಪರಿಷತ್ ಚುನಾವಣೆ ಇಂದು ರಾಜ್ಯದಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ತಮ್ಮ ಮತವನ್ನು ಚಲಾಯಿಸಿದರು. ಕೊರಟಗೆರೆ ಪಟ್ಟಣ ಪಂಚಾಯತ್ ಸದಸ್ಯರ ಜೊತೆಗೆ ಮತದಾನ ಕೇಂದ್ರಕ್ಕೆ ಆಗಮಿಸಿದ ಡಾ.ಜಿ.ಪರಮೇಶ್ವರ್ ಅವರು ಮತಚಲಾಯಿಸಿದರು. ವಿಧಾನ ಪರಿಷತ್ ಚುನಾವಣೆ ಪ್ರಚಾರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಡಾ.ಜಿ.ಪರಮೇಶ್ವರ್ ಅವರು ಬಿಡುವಿಲ್ಲದೇ ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲೆಯ ಮೂಲೆಮೂಲೆಗಳಲ್ಲಿಯೂ ಪ್ರಚಾರ ನಡೆಸಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುರುವೇಕೆರೆ: ಇಡೀ ರಾಜ್ಯದಲ್ಲೇ ತೀವ್ರ ಕುತೂಹಲ ಕೆರಳಿಸಿರುವಂತಹ ವಿಧಾನ ಪರಿಷತ್ ಚುನಾವಣೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಆದರೆ, 12 ಗಂಟೆಯಾದರೂ ಮಣೆಚೆಂಡೂರು ಗ್ರಾಮ ಪಂಚಾಯ್ತಿಯಲ್ಲಿನ ಒಂದು ಮತ ಬಿಟ್ಟರೆ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿ, ಸೊರವನಹಳ್ಳಿ ಗ್ರಾಮ ಪಂಚಾಯ್ತಿ ಮತ್ತು ಮಾಯಸಂದ್ರ ಗ್ರಾಮ ಪಂಚಾಯ್ತಿಯಲ್ಲಿ ಇನ್ನೂ ಕೂಡ ಒಂದು ಮತವೂ ಆಗಿಲ್ಲ. ಪಂಚಾಯ್ತಿ ಸಿಬ್ಬಂದಿಗಳು, ಆರಕ್ಷಕರು ಮತ್ತು ಆಶಾಕಾರ್ಯಕರ್ತೆಯರು ಕೋವಿಡ್ ಸುರಕ್ಷಾ ಕ್ರಮಗಳನ್ನು ಕೈಗೊಂಡು ಬೆಳ್ಳಂಬೆಳಗ್ಗೆಯೇ ಪಂಚಾಯ್ತಿಯಲ್ಲಿ ಶಿಸ್ತಿನಿಂದ ಹಾಜರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯ್ತಿ ಸದಸ್ಯರು ಮಾತ್ರ ಮತದಾನ ಮಾಡಲು ಇನ್ನೂ ಯಾಕೆ ಬಂದಿಲ್ಲ? ಎಂಬುದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡಿದೆ. ಮತದಾನ ಮಾಡಲು ಸಂಜೆ 4 ಗಂಟೆಯವರೆಗೂ ಸಮಯವಿರುವುದರಿಂದ ಕಾದು ನೋಡಬೇಕಾಗಿದೆ. ಸದಸ್ಯರ ಸಂಖ್ಯಾ ಬಲ ಶೆಟ್ಟಿಗೊಂಡನ ಹಳ್ಳಿ ಗ್ರಾಮ ಪಂಚಾಯ್ತಿ – 14 ಮಣೆಚೆಂಡೂರು ಗ್ರಾಮಪಂಚಾಯ್ತಿ – 14 ಸೊರವನಹಳ್ಳಿ ಗ್ರಾಮಪಂಚಾಯ್ತಿ-16 ಮಾಯಸಂದ್ರ ಗ್ರಾಮಪಂಚಾಯ್ತಿ-15 ವರದಿ: ವೆಂಕಟೇಶ ಜೆ ಎಸ್ (ವಿಕ್ಕಿ) ಮಾಯಸಂದ್ರ ನಿಮ್ಮ ಸುದ್ದಿಗಳನ್ನು…
ಬಾಂಗ್ಲಾದೇಶ: ಸರ್ಕಾರವನ್ನ ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನ ಸಹ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು.. ಈ ಘಟನೆಗೆ ಸಂಬಂಧಿಸಿದಂತೆ 20 ವಿದ್ಯಾರ್ಥಿಗಳಿಗೆ ಬಾಂಗ್ಲಾದೇಶದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.. ಸರ್ಕಾರವನ್ನು ಟೀಕಿಸಿ ಪೋಸ್ಟ್ ಮಾಡಿದ್ದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಆವರಣದಲ್ಲೇ ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.. ಹೀಗಾಗಿ ಪ್ರಕರಣದಲ್ಲಿ 20 ವಿದ್ಯಾರ್ಥಿಗಳಿಗೆ ಢಾಕಾ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಮೂಲಕ ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿರುವುದಾಗಿ ಕೋರ್ಟ್ ಹೇಳಿದೆ. ಆರೋಪಿಗಳೆಲ್ಲರೂ ದೋಷಿಗಳೆಂದು ಸಾಬೀತಾಗಿದ್ದು, 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಮೂರ್ತಿ ಅಬು ಜಾಫರ್ ಮೊಹಮ್ಮದ್ ಕಮ್ರುಜ್ಜಾಮನ್ ಘೋಷಿಸಿದ್ದಾರೆ. ಒಟ್ಟು 25 ತಪ್ಪಿತಸ್ಥರ ಪೈಕಿ ಮೂವರು ಕೃತ್ಯ ನಡೆದ ದಿನದಿಂದಲೂ ತಲೆಮರೆಸಿಕೊಂಡಿದ್ದು, ಉಳಿದ ಎಲ್ಲರೂ ಜೈಲಿನಲ್ಲಿದ್ದಾರೆ. 2019ರ ಅಕ್ಟೋಬರ್ 6ರಂದು ಬಾಂಗ್ಲಾದೇಶದ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿ ಅಬ್ರಾರ್ ಫಹಾದ್ ಎಂಬುವವರನ್ನು ಕಾಲೇಜಿನ ಆವರಣದಲ್ಲಿ ಉದ್ರಿಕ್ತ ಗುಂಪೊಂದು ಭೀಕರವಾಗಿ…