Subscribe to Updates
Get the latest creative news from FooBar about art, design and business.
- ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
- ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
- ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
- ತುಮಕೂರು: ಮತ್ತೆ ಮೂರು ನವಿಲುಗಳು ಸಾವು
- ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
- ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
- ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
- ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
Author: admin
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ನಡೆದಿದ್ದಂತ ಅಕ್ರಮ ಸಂಬಂಧ, ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ ನ ಶಹರ ಠಾಣೆಯ ಪೊಲೀಸರು, ಮೂಡಲಗಿ ತಾಲೂಕಿನ ರಾಜಾಪುರ ನಿವಾಸಿಯಾಗಿರುವಂತ ಬಾಳೇಶ್ ಕಟ್ಟಿಕಾರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಬಾಳೇಶ್ ಕಟ್ಟಿಕಾರ್ ಅವರು ಆಗಸ್ಟ್ 7, 2022ರಂದು ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮಕ್ಕಾಗಿ ಎಲೆಕ್ಟ್ರಾನಿಕ್ ಡಿವೈಸರ್ ಸಪ್ಲೈ ಮಾಡಿದ್ದ ಎಂಬುದಾಗಿ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್ಗಳಿಗೆ ಕಪ್ಪು ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಧ್ವನಿ ಹಾಗೂ ಫೋಟೊವನ್ನು ಅವರ ಅನುಮತಿ ಇಲ್ಲದೇ ಯಾರೂ ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ತಮ್ಮ ವ್ಯಕ್ತಿತ್ವದ ಹಕ್ಕು ಕಾಪಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಅಮಿತಾಭ್ ಬಚ್ಚನ್ ಹೈಕೋರ್ಟ್ ಮೊರೆ ಹೋಗಿದ್ದರು. ಅಮಿತಾಭ್ ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಶುಕ್ರವಾರ ನೀಡಿದ ಮಧ್ಯಂತರ ಆದೇಶದಲ್ಲಿ ಅನುಮತಿ ಇಲ್ಲದೇ ಅವರ ಫೋಟೊ, ಧ್ವನಿ ಬಳಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಖ್ಯಾತ ವ್ಯಕ್ತಿಯ ವ್ಯಕ್ತಿತ್ವವನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಅದು ಕೂಡ ಆ ವ್ಯಕ್ತಿ ಸಾಕಷ್ಟು ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಅವರ ಫೋಟೊ ಹಾಗೂ ಧ್ವನಿ ಬಳಸುವುದು ಕಾನೂನು ಉಲ್ಲಂಘನೆ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಮಿಳುನಾಡಿನ ಗೊಬಿಚೆಟ್ಟಿಪಾಳ್ಯಂ ನಿವಾಸಿ ಜ್ಯೋತಿಷಿಯ ಮಾತುಕೇಳಿ ಹಾವಿನಿಂದ ಕಚ್ಚಿಸಿಕೊಂಡು ನಾಲಗೆ ಕಳೆದುಕೊಂಡಿದ್ದಾನೆ. ಈತನಿಗೆ ದಿನವೂ ಹಾವಿನ ಕನಸು ಬೀಳುತ್ತಿತ್ತಂತೆ. ಹಾವಿನಿಂದ ಕಚ್ಚಿಸಿಕೊಂಡಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಈತ ಪರಿಹಾರಕ್ಕಾಗಿ ಜ್ಯೋತಿಷಿಯೊಬ್ಬರ ಬಳಿ ಹೋಗಿದ್ದಾನೆ. ಜ್ಯೋತಿಷಿ ಹಾವಿನ ಪೂಜೆ ಮಾಡುವಂತೆ ಸಲಹೆ ನೀಡಿದ್ದಾನೆ. ಹಾವಿನ ಹುತ್ತ ಇರುವ ದೇಗುಲವನ್ನು ಪೂಜೆಗಾಗಿ ಸಲಹೆ ಮಾಡಿದ್ದಾನೆ. ಪೂಜೆಯ ನಂತರ ಹಾವಿಗೆ ತನ್ನ ನಾಲಿಗೆಯನ್ನು ತೋರಿಸುವಂತೆ ಸಲಹೆ ನೀಡಿದ್ದಾನೆ. ಜ್ಯೋತಿಷಿಯ ಸಲಹೆಯಂತೆ ನಾಲಗೆಯನ್ನು ಹಾವಿನ ಮುಂದೆ ಚಾಚಿ ನಿಂತಿದ್ದಾನೆ. ಸಿಟ್ಟಿಗೆದ್ದ ಹಾವು ನಾಲಗೆಯನ್ನು ಕಚ್ಚಿದೆ. ಜೊತೆಯಲ್ಲಿದ್ದ ಸಂಬಂಧಿ ಹಾಗೂ ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಜೀವ ಉಳಿಸುವ ಸಲುವಾಗಿ ವೈದ್ಯರು ಆತನ ನಾಲಗೆಯನ್ನು ಕತ್ತರಿಸಿದ್ದಾರೆ. ಈರೋಡ್ ಮನಿಯನ್ ಮೆಡಿಕಲ್ ಆಸ್ಪತ್ರೆಯ ಮುಖ್ಯಸ್ಥ, ಡಾಕ್ಟರ್ ಎಸ್. ಸೆಂಥಿಲ್ ಕುಮಾರನ್ ಮಾತನಾಡಿ, ನವೆಂಬರ್ 18 ರಂದು ಈ ವ್ಯಕ್ತಿಗೆ ಹಾವು ಕಚ್ಚಿದ ಕಾರಣ ಬಾಯಲ್ಲಿ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು. ಹಾವಿನ ವಿಷದಿಂದಾಗಿ ಆತನ ನಾಲಗೆಯ ಅಂಗಾಂಶಕ್ಕೆ ಹಾನಿಯಾಗಿತ್ತು. ಜೀವ ಉಳಿಸುವ…
ಸೆಕ್ಸ್ ಮಾಡುವ ವೇಳೆ ಹೃದಯಾಘಾದಿಂದ ಉದ್ಯಮಿ ಮೃತಪಟ್ಟಿದ್ದು, ಕೊಲೆ ಪ್ರಕರಣದಲ್ಲಿ ಸಿಲುಕುವ ಭೀತಿಯಿಂದ ಮಹಿಳೆ ಉದ್ಯಮಿ ಶವವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. 67 ವರ್ಷದ ಬೆಂಗಳೂರಿನ ಉದ್ಯಮಿ ಬಾಲಸುಬ್ರಹ್ಮಣ್ಯನ್ ಶವ ಜೆಪಿ ನಗರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಆಪ್ತರ ಸಹಾಯದಿಂದ ಮಹಿಳೆ ಜೊತೆ ದೈಹಿಕ ಸಂಪರ್ಕ ಬೆಳೆಸುತ್ತಿದ್ದ ಉದ್ಯಮಿ ಬಾಲಸುಬ್ರಹ್ಮಣ್ಯನ್ ಸೆಕ್ಸ್ ಮಾಡುವ ವೇಳೆ ಕಾರ್ಡಿಯಕ್ ಅರೆಸ್ಟ್ ಆಗಿ ಮೃತಪಟ್ಟಿದ್ದಾರೆ. ಇದರಿಂದ ಕೊಲೆ ಪ್ರಕರಣದ ಭೀತಿಗೆ ಒಳಗಾದ ಮಹಿಳೆ ಪತಿ ಹಾಗೂ ಸೋದರನ ಸಹಾಯ ಕೇಳಿದ್ದಾಳೆ. ಮೂವರು ಸೇರಿ ಬಾಲಸುಬ್ರಹ್ಮಣ್ಯನ್ ಅವರ ದೇಹವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಜೆಪಿ ನಗರದ ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದಾರೆ. ಪೊಲೀಸರು ಬಾಲಸುಬ್ರಹ್ಮಣ್ಯನ್ ಅವರ ಫೋನ್ ಕಾಲ್ ಗಳ ಡಿಟೈಲ್ಸ್ ಹಾಗೂ ಲೋಕೆಷನ್ ಪರಿಶೀಲಿಸಿದಾಗ ಮಹಿಳೆಯ ಮನೆಗೆ ಪದೇಪದೆ ಭೇಟಿ ನೀಡಿರುವುದು ತೋರಿಸಿದೆ. ಕುಟುಂಬದ ಮೂಲಗಳ ಪ್ರಕಾರ ಇತ್ತೀಚೆಗಷ್ಟೇ ಆಂಜಿಯೊಪ್ಲಾಸ್ಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಸುಬ್ರಹ್ಮಣ್ಯನ್ ವೈಯಕ್ತಿಕ ಕೆಲಸದ ಮೇಲೆ ಹೊರಗೆ…
ಬೆಳಗಾವಿ : ಗಡಿಭಾಗದಲ್ಲಿ ಕರ್ನಾಟಕದ ಬಸ್ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆಯುತ್ತಿರುವುದು ಈಗ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಅಖಿಲ ಭಾರತೀಯ ಮರಾಠ ಸಂಘದ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದು, ಮಹಾರಾಷ್ಟ್ರ ಬಸ್ ಗಳಿಗೂ ಕಪ್ಪು ಮಸಿ ಬಳಿಯುವ ಭೀತಿ ಹಿನ್ನೆಲೆ ಏಕಾಏಕಿ 300ಕ್ಕೂ ಅಧಿಕ ಬಸ್ ಗಳನ್ನು ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತ ಮಾಡಿದೆ. ಇತ್ತ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಬಸ್ ಗಳು ತೆರಳುತ್ತಿವೆ. ನಿಪ್ಪಾಣಿಯ ಬಸ್ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಒಂದು ಡಿಆರ್ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕ್ರಮ ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಪುಣೆ: ಕರ್ನಾಟಕ ಬಸ್ ಗಳಿಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆ ಜಿಲ್ಲೆಯ ದೌಂಡ್ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್ ಗೆ ಜೈ ಮಹಾರಾಷ್ಟ್ರ ಮತ್ತು ಜಾಹಿರ್ ನಿಷೇಧ್ ಪದಗಳನ್ನು ಕಪ್ಪು ಬಣ್ಣದಲ್ಲಿ ಬರೆದು ತಮ್ಮ ಪುಂಡಾಟವನ್ನು ಮೆರೆದಿದ್ದಾರೆ. ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೆ ಮೊದಲು ಅಂದರೆ ನವೆಂಬರ್ 18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದ್ದು, ನಿಷೇಧಿತ ತುರಾಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಲಭ್ಯವಾಗಿದೆ. ನ. 19 ರ ಸಂಜೆ ಮಂಗಳೂರಿನಲ್ಲಿ ಬ್ಲಾಸ್ಟ್ ಆಗಿತ್ತು. 18ರಂದು ಬಂಟ್ವಾಳದ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 2, ಉಡುಪಿಯ ಒಂದು, ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಮಾಡಿರುವ ಲೊಕೇಷನ್ ಅನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿವೆ. ಶಂಕಿತ ಉಗ್ರ ಶಾರೀಕ್ ಕರಾವಳಿಯ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಕದ್ರಿ ಮಂಜುನಾಥ, ಮಂಗಳಾದೇವಿ, ಕುದ್ರೋಳಿ ದೇವಸ್ಥಾನವನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದೂ ಸಂಘಟನೆಗಳು ದೇವಾಲಯದ ಮುಂಭಾಗ ಮುಸ್ಲಿಮರ ವ್ಯಾಪಾರದ ವಿರುದ್ದ ಸಿಡಿದೆದ್ದಿದ್ದರು. ಇದೇ ಕಾರಣಕ್ಕೆ ದೇವಸ್ಥಾನಗಳನ್ನೇ ಉಗ್ರ ಟಾರ್ಗೆಟ್ ಮಾಡಿದನಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕುಕ್ಕರ್…
ಮನೆ ಬಿಟ್ಟು ಬಂದು ಮದುವೆ ಆಗಿದ್ದ ಯುವ ಪ್ರೇಮಿಗಳು ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣದಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಪರಸ್ಪರ ಪ್ರೀತಿಸ್ತಿದ್ದ ಯುವಕ– ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ಸದ್ಯ ಇವರ ಮೃತದೇಹ ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಫೋನ್ ಪೇ, ಗೂಗಲ್ ಪೇ , ಪೇಟಿಎಂ ಸೇರಿದಂತೆ ಯುಪಿಐ ಪಾವತಿ ಆ್ಯಪ್ ವಹಿವಾಟುಗಳಿಗೆ ಮಿತಿ ವಿಧಿಸುವ ಕುರಿತು ಭಾರತದ ರಾಷ್ಟ್ರೀಯ ಪಾವತಿಗಳ ನಿಗಮವು ಭಾರತೀಯ ರಿಸರ್ವ್ ಬ್ಯಾಂಕ್ ಜೊತೆಗೆ ಸಮಾಲೋಚನೆ ನಡೆಸಿದೆ. ವರದಿಗಳ ಪ್ರಕಾರ ಥರ್ಡ್ ಪಾರ್ಟಿ ಆ್ಯಪ್ ಪೂರೈಕೆದಾರರಿಗೆ (ಟಿಪಿಎಪಿ) ಶೇ.30ರಷ್ಟು ವಹಿವಾಟಿನ ಮಿತಿ ವಿಧಿಸುವಂತೆ ಎನ್ ಪಿಸಿಐ ನವೆಂಬರ್ ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಡಿಜಿಟಲ್ ಪಾವತಿ ಆ್ಯಪ್ ವಲಯದಲ್ಲಿ ಗೂಗಲ್ ಪೇ ಹಾಗೂ ಫೋನ್ ಪೇ ಶೇ.80ರಷ್ಟು ಮಾರುಕಟ್ಟೆ ಪಾಲು ಹೊಂದಿವೆ. ಇಲ್ಲಿಯ ತನಕ ಡಿಜಿಟಲ್ ಪಾವತಿ ಆ್ಯಪ್ ಬಳಸಿ ಎಲ್ಲ ಕಡೆ ಪಾವತಿ ಮಾಡಿರೋರಿಗೆ ಮಿತಿ ಹೆಚ್ಚಳದಿಂದ ತೊಂದರೆಯಾಗಲಿದೆ. ಡಿಜಿಟಲ್ ಪಾವತಿ ಆ್ಯಪ್ ವಹಿವಾಟುಗಳಿಗೆ ಗರಿಷ್ಠ ಮಿತಿ ವಿಧಿಸುವ ಸಂಬಂಧ ನಡೆದ ಸಭೆಯಲ್ಲಿ ಭಾರತದ ರಾಷ್ಟ್ರೀಯ ಪಾವತಿಗಳ ನಿಗಮ ಅಧಿಕಾರಿಗಳ ಜೊತೆಗೆ ಹಣಕಾಸು ಸಚಿವಾಲಯ ಹಾಗೂ ಆರ್ ಬಿಐ ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ಮಿತಿ ವಿಧಿಸುವ ಕುರಿತು ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಯುಪಿಐ…