Author: admin

ಮೈಸೂರಿನ ಕೆ.ಆರ್​.ನಗರ ತಾಲೂಕಿನ ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಜೊತೆಯಾಗಿದ್ದಾರೆ. ರಾಮೇಗೌಡ(75), ಗೌರಮ್ಮ(70) ಮೃತ ದಂಪತಿ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ರಾಮೇಗೌಡ ಮೃತಪಟ್ಟಿದ್ದಾರೆ. ಪತಿ ಮನೆಗೆ ಬಾರದ ಕಾರಣ ಗೌರಮ್ಮ ಜಮೀನಿಗೆ ಹೋಗಿ ನೋಡಿದಾಗ ಪತಿ ಶವವಾಗಿದ್ದರು. ಇದನ್ನು ಕಂಡು ಆಕೆ ಆಘಾತದಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದ್ರೆ ರಾಮೇಗೌಡ ರ ಅಂತ್ಯಸಂಸ್ಕಾರದ ವೇಳೆ ಗೌರಮ್ಮ ಮೃತಪಟ್ಟಿದ್ದಾರೆ. ಗ್ರಾಮಸ್ಥರು ಅಕ್ಕಪಕ್ಕದಲ್ಲೇ ದಂಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಒಂಟಿಯಾಗಿ ಬರುವ ಮಹಿಳೆಯರಿಗೆ ದಿಲ್ಲಿಯ ಜಾಮಾ ಮಸೀದಿ ಆಡಳಿತ ಪ್ರವೇಶ ನಿರಾಕರಿಸಿದೆ. ಒಂಟಿಯಾಗಿ ಬರುವ ಮಹಿಳೆಯರಿಗೆ ಮಾತ್ರವೇ ನಿರ್ಬಂಧ ಅನ್ವಯವಾಗುತ್ತದೆ. ಕುಟುಂಬದೊಂದಿಗೆ ಅಥವಾ ಪತಿಯೊಂದಿಗೆ ಬರುವ ಮಹಿಳೆಯರಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಜಾಮಾ ಮಸೀದಿ ಪಿಆರ್‌ಒ ಸಬಿವುಲ್ಲಾ ಖಾನ್ ಸ್ಪಷ್ಟಪಡಿಸಿದ್ದಾರೆ. ಮಸೀದಿ ಆವರಣದಲ್ಲಿ ನಡೆಯುವ ಅನುಚಿತ ವರ್ತನೆಗಳಿಗೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿಸಿದ್ದಾರೆ. ಮಸೀದಿಗೆ ಮಹಿಳೆಯರು ಪ್ರವೇಶಿಸದಂತೆ ನಿಷೇಧ ಹೇರಿಲ್ಲ. ಮಹಿಳೆಯರು ಒಬ್ಬಂಟಿಯಾಗಿ ಬಂದಾಗ ಅನುಚಿತವಾಗಿ ವರ್ತಿಸುವುದು, ಟಿಕ್‌ ಟಾಕ್‌ಅಥವಾ ಡಾನ್ಸ್‌ವಿಡಿಯೊಗಳನ್ನು ಚಿತ್ರೀಕರಿಸುವುದು ವರದಿಯಾಗುತ್ತಿವೆ. ಇವುಗಳಿಗೆ ತಡೆಯೊಡ್ಡುವುದಕ್ಕಾಗಿ ನಿಷೇಧ ಹೇರಲಾಗಿದೆ. ಕುಟುಂಬದೊಂದಿಗೆ ಬರುವವರಿಗೆ ಅಥವಾ ದಂಪತಿಗೆ ಯಾವುದೇ ನಿರ್ಬಂಧ ಇಲ್ಲ. ಧಾರ್ಮಿಕ ತಾಣವನ್ನು ಹುಡುಗರು, ಹುಡುಗಿಯರ ಭೇಟಿ ಸ್ಥಳವನ್ನಾಗಿಸುವುದು ತರವಲ್ಲ ಎಂದು ಹೇಳಿದ್ದಾರೆ. ಮಸೀದಿಯ ಈ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ದಿಲ್ಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಅಧ್ಯಕ್ಷೆ ಸ್ವಾತಿ ಮಲಿವಾಲ್‌ಅಸಮಾಧಾನ ವ್ಯಕ್ತಪಡಿಸಿದ್ದು, ವಿವರಣೆ ಕೇಳಿ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

30 ವರ್ಷದ ಹಿಂದೆ ಶೈತ್ಯೀಕರಿಸಲಾಗಿದ್ದ ಭ್ರೂಣದಿಂದ ಯುಎಸ್‌ ನ ರಾಚೆಲ್ ರಿಡ್ಜ್‌ವೇ ಮತ್ತು ಫಿಲಿಪ್ ರಿಡ್ಜ್‌ವೇ ದಂಪತಿ ಅವಳಿ ಮಕ್ಕಳನ್ನು ಪಡೆದು ಸುದ್ದಿಯಾಗಿದ್ದಾರೆ. ಅಮೇರಿಕಾದ ಒರೆಗಾನ್‌ ದಂಪತಿಗೆ ಜನಿಸಿದ ಮಕ್ಕಳು ಈ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಹಿಂದಿನ ದಾಖಲೆಯಲ್ಲಿ ಮೊಲ್ಲಿ ಗಿಬ್ಸನ್ 27 ವರ್ಷ ಸಂಗ್ರಹವಾಗಿದ್ದ ಭ್ರೂಣದಿಂದ 2020 ರಲ್ಲಿ ಅವಳಿ ಮಕ್ಕಳನ್ನು ಪಡೆದಿದ್ದರು. ಸದ್ಯ ಒರೆಗಾನ ದಂಪತಿಗೆ ಜನಿಸಿದ ಮಕ್ಕಳನ್ನು ವಿಶ್ವದ ಅತ್ಯಂತ ಹಳೆಯ ಮಕ್ಕಳು ಎಂದು ಕರೆಯಲಾಗುತ್ತಿದೆ. ಹೆಣ್ಣು ಮಗು ಲಿಡಿಯಾ 5 ಪೌಂಡ್, 11 ಔನ್ಸ್, (2.5 ಕೆಜಿ) ಗಂಡು ಮಗು ತಿಮೋತಿ 6 ಪೌಂಡ್, 7 ಔನ್ಸ್ (2.92 ಕೆಜಿ) ತೂಕವಿತ್ತು. ಈಗಾಗಲೇ 8, 6, 3 ಮತ್ತು 2 ವರ್ಷ ನಾಲ್ಕು ಮಕ್ಕಳನ್ನು ಹೊಂದಿರುವ ರಿಡ್ಜ್‌ವೇಸ್ ದಾನ ಪಡೆದ ಭ್ರೂಣಗಳನ್ನು ಬಳಸಿಕೊಂಡು ಹೆಚ್ಚಿನ ಮಕ್ಕಳನ್ನು ಪಡೆದಿದ್ದಾರೆ. ದಾನಿಗಳಿಂದ ಭ್ರೂಣಗಳನ್ನು ಏಪ್ರಿಲ್ 22, 1992 ರಂದು ಫ್ರೀಜ್ ಮಾಡಲಾಗಿತ್ತು, 2007 ರವರೆಗೆ ವೆಸ್ಟ್ ಕೋಸ್ಟ್ ಫರ್ಟಿಲಿಟಿ…

Read More

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆತನ ಸೋದರ ತೀವ್ರ ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ನಡೆದ ಆದರ್ಶ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮುಸ್ಲಿಂ ಸಹೋದರರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಹಲವೆಡೆ ಜನರು ಗುಂಪು ಕಟ್ಟಿಕೊಂಡು ಆಕ್ರೋಶ ಹೊರಹಾಕಲಾರಂಭಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಿಲ್ವಾರಾ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹವಾ ಸಿಂಗ್ ಘುಮಾರಿಯಾ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಅವರ ಸಹೋದರನನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಮಹಾತ್ಮಾ ಗಾಂಧಿ ಕ್ರಾಸಿಂಗ್, ಬದ್ಲಾ ಚೌರಾಹಾ, ಭೀಮಗಂಜ್, ಸಿಟಿ ಕೊತ್ವಾಲಿ ಸೇರಿದಂತೆ ಹಲವೆಡೆ ನಗರದಲ್ಲಿ…

Read More

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ರೋಡಲ್ಲಿ ಯಮಗುಂಡಿ, ಬಿದ್ರೆ ಜೀವನ ಬಂಡಿ ಪೋಸ್ಟರ್ ಬಿಡುಗಡೆ ಮಾಡಿದ್ದು, ಪೋಸ್ಟರ್ ನಲ್ಲಿ ಸಿಎಂ ಯಮನಂತೆ ಬಿಂಬಿಸಿದೆ. ಈ ಮೂಲಕ ವಿವಿಧ ಚಿತ್ರಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಅಭಿಯಾನ ನಡೆಸಿದೆ. ಮತ್ತೊಂದು ಪೋಸ್ಟರ್ ನಲ್ಲಿ ಕಿಲಾಡಿ ಜೋಡಿ ಎಂದು ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥನಾರಾಯಣ ಅವರ ಪೋಸ್ಟರ್, ಸರ್ವರ್ ಸೋಮಣ್ಣ ಹೆಸರಲ್ಲಿ ಸಚಿವ ಸೋಮಣ್ಣ, ಚಪಲ ಚನ್ನಿಗರಾಯ ಎಂದು ರಮೇಶ್ ಜಾರಕಿಹೊಳಿ ಪೋಸ್ಟರ್, ಅಡುಗೆ ಭಟ್ಟರಂತೆ ಸಚಿವ ಬಿ.ಸಿ.ನಾಗೇಶ್ ಪೋಸ್ಟರ್ ಪ್ರಕಟಿಸಿದೆ. ಈ ಮೂಲಕ ಕಾಂಗ್ರೆಸ್ ವಿಭಿನ್ನ ರೀತಿಯ ಪೋಸ್ಟರ್ ಅಭಿಯಾನದ ಮೂಲಕ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅಣಕವಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಂಗಳೂರು : ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಕೆನೆಭರಿತ ಹಾಲಿನ ಪುಡಿ ಬದಲಿಗೆ ಟೆಟ್ರಾ ಪ್ಯಾಕೆಟ್ ನಲ್ಲಿ ಹಾಲು ವಿತರಿಸಲು ಕೆಎಂಎಫ್ ನಿರ್ಧರಿಸಿದೆ. ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕೆಟ್ ನಲ್ಲಿನ ಹಾಲು ವಿತರಿಸಲು ಕೆಎಂಎಫ್ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಬಜೆಟ್ ನಲ್ಲಿ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆಗೆ ಹಸಿರು ನಿಶಾನೆ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹಾಲಿನ ಪೌಡರ್ ವಿತರಿಸುವಲ್ಲಿ ಸಾಲು ಸಾಲು ಲೋಪಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಂಗಳೂರು: ನವೆಂಬರ್ 26 ಸಂವಿಧಾನ ಅರ್ಪಣೆ ದಿನ ಹಾಗೂ ಜನವರಿ 26ರ ಸಂವಿಧಾನ ಜಾರಿಯಾದ ದಿನಗಳ ಅಂಗವಾಗಿ ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಹೊಸ ಸಂವಿಧಾನ ಗೀತೆ ಬಿಡುಗಡೆಯಾಗಿದೆ. ಈ ಗೀತೆಯನ್ನು ಸೋಸಲೆ ಗಂಗಾಧರ್ ಅವರು ರಚಿಸಿ ರಾಗ ಸಂಯೋಜನೆ ಮಾಡಿದ್ದಾರೆ. ಡಾ.ಶಿವಕುಮಾರ್, ಸಿದ್ದೇಶ್ ಬದನವಾಳು ಗಾಯನ ಮಾಡಿದ್ದಾರೆ. ಎಂ.ಎಸ್.ಮಾರುತಿ ಸಂಗೀತ ನೀಡಿದ್ದಾರೆ. ಹರಿರಾಮ್ ಎ. ನಿರೂಪಿಸಿದ್ದಾರೆ. ಸುನೀಲ್ ಬಾಫುಲೆ ಆರ್ಥಿಕ ಸಹಕಾರ ನೀಡಿದ್ದಾರೆ. ಅಶ್ವಿನ್ ಚೆಂಡ್ತಿಮಾರ್ ಛಾಯಾಗ್ರಹಣ ಮಾಡಿದ್ದು,  ವಿನಯ್ ಕುಮಾರ್ ಎ. ಸಂಕಲನದಲ್ಲಿ ಈ ಹಾಡು ಮೂಡಿ ಬಂದಿದೆ. ಪದ್ಮಪಾಣಿ ಮ್ಯೂಸಿಕ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಈಗಾಗಲೇ ಈ ಗೀತೆ ಬಿಡುಗಡೆಗೊಂಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.  ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಈ ಹಾಡಿಗೆ ಹೆಚ್ಚಿನ ಮಹತ್ವ ದೊರೆತಿದೆ.  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು : ಸರ್ಕಾರಿ ಶಾಲೆಗಳ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಆರೋಗ್ಯ ತಪಾಸಣೆ ಒಂದು ಇಲಾಖೆಯಿಂದ ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ, ಖಾಸಗಿ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೋರಲಾಗಿದೆ. ಪರೀಕ್ಷಾ ಫಲಿತಾಂಶ ಅಂಕಪಟ್ಟಿ ಜೊತೆಗೆ ಮಕ್ಕಳಿಗೆ ಹೆಲ್ತ್ ಕಾರ್ಡ್ ವಿತರಿಸಿದರೆ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಧಾರವಾಡ: ಆಯತಪ್ಪಿ ಬಾವಿಯಲ್ಲಿ ಬಿದ್ದು ಅರಣ್ಯಾಧಿಕಾರಿ ಅಜೀತ್ ಶಾನಬಾಗ್ ಅವರು ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ನಗರದ ಶ್ರೀಪಾದ ನಗರದಲ್ಲಿರುವ ಅವರ ಮನೆಯ ಅಂಗಳದ ಭಾವಿಯ ಸುತ್ತ ಬೆಳೆದಿರುವ ಕಸ ಸ್ವಚ್ಛಗೊಳಿಸುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ. ಹೊಸಾಯಲ್ಲಾಪುರದ ರುದ್ರ ಭೂಮಿಯಲ್ಲಿ ಬ್ರಾಹ್ಮಣರ ವಿಧಿ ವಿಧಾನ ಪ್ರಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ರಾಜ್ಯದ ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ 23.95 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟು 55 ಮಠಗಳು, 81 ದೇಗುಲಗಳು, 25 ಸಂಘ ಸಂಸ್ಥೆಗಳಿಗೆ ಒಟ್ಟು 23.95 ಕೋಟಿ ಬಿಡುಗಡೆಯಾಗಿದೆ. ಕೆಲವು ತಿಂಗಳ ಹಿಂದೆಯಷ್ಟೇ ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ 3ನೇ ಪೀಠಕ್ಕೂ ಅನುದಾನ ಬಿಡುಗಡೆಯಾಗಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟ ಹಾಗೂ ಒಕ್ಕೂಟದ ಸದಸ್ಯರಾಗಿರುವ ರಾಜ್ಯದ ಪಂಚಮಸಾಲಿ ಸ್ವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್​ಗೆ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More