Subscribe to Updates
Get the latest creative news from FooBar about art, design and business.
- ಯುವಕರಿಗೆ ತಂತ್ರಜ್ಞಾನ ವ್ಯಸನವಾಗಿದೆ: ಪ್ರೊ.ಎಂ.ವೆಂಕಟೇಶ್ವರಲು
- ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ
- ಜನವರಿ 6ರಿಂದ ಮಧ್ಯಂತರ ವಿದ್ಯುತ್ ವ್ಯತ್ಯಯ
- ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ
- ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಅದ್ದೂರಿಯಾಗಿ ನೆರವೇರಿದ ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ
- 26 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಡೆಂಗ್ಯೂ ಜ್ವರದಿಂದ ಬಾಲಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರಿಂದ ಪ್ರತಿಭಟನೆ
Author: admin
ತುಮಕೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020-21ನೇ ಸಾಲಿನಲ್ಲಿ ದಾಖಲಾಗಿರುವ ಒಟ್ಟು 507 ಪ್ರಕರಣಗಳಲ್ಲಿ 9,47,49,862 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ 473 ಪ್ರಕರಣಗಳಲ್ಲಿ ಒಟ್ಟು 7,69,73,500 ರೂ. ಮೌಲ್ಯದ ವಸ್ತುಗಳ ಪ್ರದರ್ಶನ ಹಾಗೂ ವಾರಸುದಾರರಿಗೆ ವಾಪಸ್ ನೀಡಲಾಗುತ್ತಿದೆ. ಮಂಗಳವಾರ ಇಲ್ಲಿನ ಚಿಲುಮೆ ಪೊಲೀಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ವಲಯ ಐಜಿಪಿ ಚಂದ್ರಸೇಖರ್ ಐ.ಪಿ.ಎಸ್. ಸುಮಾರು 9.5 ಕೋಟಿ ಮೌಲ್ಯದ ” ಸ್ವತ್ತು ಪ್ರದರ್ಶನ ಮತ್ತು ವಾರಸುದಾರರಿಗೆ ಹಿಂತಿರುಗಿಸುವ ಕಾರ್ಯಕ್ರಮ” ವನ್ನು ನೆರವೇರಿಸಿದರು. ಚಿನ್ನಾಭರಣಗಳು: 2020ರಲ್ಲಿ 2,66,78,097 ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. 2021ರಲ್ಲಿ 2,01,86,664 ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ಳಿಯ ಆಭರಣಗಳು: 2020ರಲ್ಲಿ 4,37,500 ರೂ. ಮೌಲ್ಯದ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 2021ರಲ್ಲಿ 9,32,039 ಮೌಲ್ಯದ ಬೆಳ್ಳಿಯ ಆಭರಣ ವಶಪಡಿಸಿಕೊಳ್ಳಲಾಗಿದೆ. ದ್ವಿಚಕ್ರ ವಾಹನಗಳು: 2020ರಲ್ಲಿ ಒಟ್ಟು 39 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 11,53,000 ಆಗಿದೆ. 2021ರಲ್ಲಿ 52 ದ್ವಿಚಕ್ರವಾಹಗಳನ್ನು ವಶಪಡಿಸಿಕೊಳ್ಳಲಾಗಿದೆ ಇದರ…
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನರು ಇಲ್ಲಿನ ಆದರ್ಶ ನಗರದ ಅವರ ನಿವಾಸದ ಮುಂದೆ ಕಾಯುತ್ತಿದ್ದರು. ತೀವ್ರ ನೂಕುನುಗ್ಗಲಿನ ನಡುವೆಯೇ ಸಿಎಂ ಕೆಲವೇ ನಿಮಿಷಗಳಲ್ಲಿ ಮನವಿ ಸ್ವೀಕರಿಸಿ ಸ್ಥಳದಿಂದ ತೆರಳಿದರು. ಕೊವಿಡ್ ಹಿನ್ನೆಲೆಯಲ್ಲಿ ಸದ್ಯ ಸುರಕ್ಷಿತ ದೈಹಿಕ ಅಂತರ ಕಾಯ್ದುಕೊಳ್ಳಬೇಕು ಎನ್ನುವ ನಿಯಮವನ್ನು ಸರ್ಕಾರವೇ ಮಾಡಿದೆ. ಆದರೆ, ವಿವಿಧ ಸಮಾಜದ ಮುಖಂಡರು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮನವಿ ನೀಡಲು ಬಂದಾಗ ಯಾವುದೇ ದೈಹಿಕ ಅಂತರವೂ ಇಲ್ಲದೇ ನಾ ಮುಂದು ತಾ ಮುಂದು ಎಂಬಂತೆ ಮನವಿ ನೀಡಲು ಪೈಪೋಟಿ ನಡೆಸಿದರು. ಇನ್ನು ಕೆಲವರು ಸಿಎಂ ಆಪ್ತ ಸಹಾಯಕರ ಭೇಟಿಗೆ ಅವಕಾಶ ಸಿಕ್ಕರೆ ಸಾಕು ಎಂದು ಕೂಡ ಪರದಾಡುತ್ತಿರುವ ದೃಶ್ಯ ಸ್ಥಳದಲ್ಲಿ ಕಂಡು ಬಂತು. ಬೊಮ್ಮಾಯಿ 9:30ಕ್ಕೆ ಮನೆಯಿಂದ ಹೊರಡುತ್ತಾರೆ ಎನ್ನುವುದು ತಿಳಿದಿದ್ದ ಅನೇಕರು ಬೆಳಗ್ಗೆ 7 ಗಂಟೆಯಿಂದಲೇ ಅವರ ಮನೆಯ ಮುಂದೆ ಜಮಾಯಿಸಿದ್ದರು. ಇನ್ನೂ ಮನವಿ ನೀಡುವಂತಹ ಸಂದರ್ಭದಲ್ಲಿ ದೈಹಿಕ ಅಂತರ, ಕೊವಿಡ್ ನಿಯಮಗಳು…
ತುರುವೇಕೆರೆ: ತಾಲೂಕಿನಲ್ಲಿ ಮಾಯಸಂದ್ರ ಪ್ರತಿಷ್ಠಿತ ಹೋಬಳಿಯಂದೇ ಹೆಸರಾಗಿದೆ. ಆದರೆ ಹೆಸರಿಗಷ್ಟೇ ಪ್ರತಿಷ್ಠೆ ಪ್ರತಿಷ್ಠಿತ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಯಾಕೆಂದರೆ, ಇಂತಹ ಪ್ರತಿಷ್ಠಿತ ಮಾಯಸಂದ್ರ ಗ್ರಾಮದ ಅಂಗನವಾಡಿ ಕೇಂದ್ರ (ಡಿ) ದುಸ್ಥಿತಿಯಲ್ಲಿದ್ದು, ಅಂಗನವಾಡಿ ಕೇಂದ್ರದ ಕೊಠಡಿಯ ಮೇಲ್ಚಾವಣಿ ಭಾಗವು ಎಂತಹ ಸಂದರ್ಭದಲ್ಲೂ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕೊಠಡಿಯಲ್ಲಿ ಸಣ್ಣ ಮಕ್ಕಳು ಆಟ ಪಾಠವನ್ನು ಕಲಿಯುತ್ತಿದ್ದಾರೆ. ಮಳೆಗಾಲದಲ್ಲಿ ಅದೆಷ್ಟು ಬಾರಿ ಮೇಲ್ಚಾವಣಿಯ ಹಂಚುಗಳು ಕೆಳಗೆ ಬಿದ್ದಿರುವ ಘಟನೆಗಳು ನಡೆದಿವೆ ಇಂತಹ ಕೊಠಡಿಯಲ್ಲಿ ಮಕ್ಕಳು ಕಲಿಕೆಯ ಸಂದರ್ಭದಲ್ಲಿ ಮಳೆ ಗಾಳಿಯಂತಹ ಸಂದರ್ಭ ಉದ್ಭವಿಸಿದಾಗ ಸಣ್ಣ ಮಕ್ಕಳ ಗತಿಯೇನು? ಎಂಬ ಪ್ರಶ್ನೆ ಗ್ರಾಮದ ಪ್ರಜ್ಞಾವಂತ ಯುವಕರು ಹಾಗೂ ಗ್ರಾಮದ ಸಾರ್ವಜನಿಕರು ಚರ್ಚೆ ನಡೆಸುತ್ತಿದ್ದಾರೆ. ಹಲವು ತಿಂಗಳುಗಳಿಂದ ಈ ಅಂಗನವಾಡಿ ಕೇಂದ್ರವು ಇಂತಹ ದುಸ್ಥಿತಿಯಲ್ಲಿದ್ದು, ಇದರಲ್ಲಿ ಮಕ್ಕಳನ್ನು ಕೂರಿಸಿಕೊಂಡು ಆಟ-ಪಾಠಗಳನ್ನು ಕಲಿಸುತ್ತಿದ್ದಾರೆ. ಇದುವರೆಗೂ ಪರ್ಯಾಯ ವ್ಯವಸ್ಥೆಯಾಗಿ ಬೇರೊಂದು ಕೊಠಡಿಗೆ ಅಂಗನವಾಡಿ ಕೇಂದ್ರ ವರ್ಗಾಯಿಸಿಲ್ಲ. ಹಣವಂತರು ತಮ್ಮ ಮಕ್ಕಳಿಗೆ ಈ ಅಂಗನವಾಡಿ ಕೇಂದ್ರದ ದುಸ್ಥಿತಿ ಕಂಡು ಖಾಸಗಿ ಕಾನ್ವೆಂಟ್…
ತುಮಕೂರು: ಓಮಿಕ್ರಾನ್ ಆತಂಕದ ನಡುವೆ ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 10 ದಿನದಲ್ಲಿ 109 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಪೈಕಿ 42 ಜನ ಮಕ್ಕಳು ಕೂಡ ಸೇರಿದ್ದಾರೆ ಎನ್ನಲಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ಕಳೆದ 10 ದಿನದಲ್ಲಿ 1 ರಿಂದ 18 ವರ್ಷದೊಳಗಿನ 42 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಮಕ್ಕಳಲ್ಲಿ ಗಂಭೀರ ಸ್ವರೂಪದ ಲಕ್ಷಣ ಇಲ್ಲದೇ ಇದ್ದರೂ ಪೋಷಕರಲ್ಲಿ ಆತಂಕ ಶುರುವಾಗಿದೆ. ಈ ನಡುವೆ 3ನೇ ಅಲೆ ಮಕ್ಕಳಿಗೆ ಬಾಧಿಸಲಿದೆ ಎಂಬ ತಜ್ಞರ ಅಭಿಪ್ರಾಯವು ಪೋಷಕರಲ್ಲಿ ಇನ್ನಷ್ಟು ಆತಂಕವನ್ನು ಸೃಷ್ಟಿಸಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದ್ದ 35 ಜನರ ಸ್ವಾಬ್ ಅನ್ನು ಓಮಿಕ್ರಾನ್ ಟೆಸ್ಟ್ ಗೆ ಕಳಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ. ಇನ್ನೊಂದೆಡೆ ಮಕ್ಕಳಿಗೆ ಶಾಲೆ ಆರಂಭವಾಗಿದ್ದು, ಮಕ್ಕಳ ಓಡಾಟದಿಂದ ಸೋಂಕು ಹೆಚ್ಚಳವಾಗುವ ಭೀತಿ ಕೂಡ ಸೃಷ್ಟಿಯಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417…
ಹುಬ್ಬಳ್ಳಿ: ಸಿದ್ದರಾಮಯ್ಯ ಮೇಲೆ ಬಹಳ ಗೌರವ ಇತ್ತು. ಆದರೆ ಇತ್ತೀಚೆಗೆ ಅವರ ಹೇಳಿಕೆಗಳಿಂದ ನಿರಾಸೆಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಸಿಎಂ ಬಸವರಾಜ್ ಬೊಮ್ಮಾಯಿ ಸುಳ್ಳು ಹೇಳುತ್ತಾರೆ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೇಸರ ವ್ಯಕ್ತಡಿಸಿದ ಬೊಮ್ಮಾಯಿ, ಸಿದ್ದರಾಮಯ್ಯನವರ ಮೇಲೆ ಬಹಳ ಗೌರವವಿತ್ತು. ಆದರೆ, ಇತ್ತೀಚೆಗಿನ ಅವರ ಹೇಳಿಕೆಯಿಂದ ನಿರಾಸೆಯಾಗಿದೆ ಎಂದು ಅವರು ಹೇಳಿದರು. ಸಂಪುಟ ವಿಸ್ತರಣೆ ಬಗ್ಗೆ ಶಾಸಕ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿಎಂ ಎಲ್ಲರ ಹೇಳಿಕೆಗಳಿಗೂ ನಾನು ಪ್ರತಿಕ್ರಿಯಿಸುತ್ತಾ ಇರಲು ಆಗುವುದಿಲ್ಲ ಎಂದರು. ಇನ್ನು ಕೋವಿಡ್ ಮೂರನೆ ಅಲೆ ತಡೆಗಟ್ಟಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಟೆಸ್ಟ್ ವರದಿ ಬರುವಂತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಇನ್ನು ಒಮಿಕ್ರಾನ್ ವೇಗವಾಗಿ ಹರಡುತ್ತೆ ಆದರೆ ತೀವ್ರತೆ ಕಡಿಮೆ ಎಂಬ ಮಾಹಿತಿ ಇದೆ. ಜನರು ಎಚ್ಚರದಿಂದ ಇರುವುದು ಅಗತ್ಯ ಎಂದು ಹೇಳಿದರು. ನಿಮ್ಮ…
ಮಧುಗಿರಿ: ಮಧುಗಿರಿ ಅಥವಾ ಸಿರಾ ಭಾಗದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ ತಿಳಿಸಿದರು. ತಾಲೂಕಿನ ಪುರವರ ಹೋಬಳಿಯ ಬಡಕನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು, ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಮಧುಗಿರಿ ಹಾಗೂ ಸಿರಾ ಕ್ಷೇತ್ರಗಳು ಆರ್ಥಿಕವಾಗಿ ಪ್ರಗತಿ ಹೊಂದಬೇಕೆಂಬ ನಿಟ್ಟಿನಲ್ಲಿ ಈ ಭಾಗದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕೆಂದು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಕಳೆದ ಬಾರಿ ಮತದಾರರು ವಿಶ್ವಾಸವಿಟ್ಟು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದರು. ಆದರೆ, ಅವರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಜನರಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವ ಅನೇಕ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕೆಂದು ಮತಯಾಚನೆ ಮಾಡುತ್ತಿದ್ದೇವೆ ಎಂದರು. ಕ್ಷೇತ್ರದ ಗ್ರಾಮೀಣ ಭಾಗಗಳು ತುಂಬಾ ಹಿಂದುಳಿದ ಪ್ರದೇಶಗಳಾಗಿವೆ. ಈ ಭಾರಿ ಸ್ಥಳೀಯ ಸಂಸ್ಥೆಗಳಲ್ಲಿ ಮತದಾರರು ಯುವಕರನ್ನು…
ಮಧುಗಿರಿ: ತಾಲೂಕಿನ ಚಿನಕವಜ್ರ ವೃತ್ತದಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪ್ರಗತಿಯನ್ನು ಶಾಸಕರಾದ ಎಂ.ವಿ.ವೀರಭದ್ರಯ್ಯನವರು ವೀಕ್ಷಿಸಿದರು. ಈ ಸಂದರ್ಭದಲ್ಲಿ , ಪುರಸಭೆ ಸದಸ್ಯರಾದ ಚಂದ್ರಶೇಖರ್ ಬಾಬು, ಗಂಗರಾಜು, ಎಂ.ಆರ್.ಜಗನ್ನಾಥ್, ನಾಣಿ, ಮಾಜಿ ಸದಸ್ಯರಾದ ಶಫಿವುಲ್ಲಾ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ: ಅಬಿದ್, ಮಧುಗಿರಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಸರಗೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣದ ಹಿನ್ನೆಲೆಯಲ್ಲಿ ಹಾದನೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ನಾಮಫಲಕದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗ್ರಾಮಸ್ಥರು ಮೇಣದ ಬತ್ತಿ ಹಚ್ಚಿ ಮೌನಚರಣೆ ನಡೆಸಿದರು. ಈ ವೇಳೆ ಗ್ರಾಮದ ಮುಖಂಡ ಮಹದೇವಯ್ಯ ಮಾತನಾಡಿ, ಭಾರತ ದೇಶದಲ್ಲಿ ಡಿ.6 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿನಿಬ್ಬಾಣ ಹೊಂದಿದಾಗ 193 ರಾಷ್ಟ್ರಗಳ ಧ್ವಜವನ್ನು ಕೆಳಗಿಳಿಸಿ ಗೌರವ ಸಲ್ಲಿಸಿದ್ದಾರೆ. ಅವರ ಕೊಡುಗೆ, ಸಾಧನೆ ಜಗತ್ತಿಗೆ ತಿಳಿದಿದೆ ಆದರೆ, ಭಾರತೀಯರಿಗೆ ಇನ್ನೂ ತಿಳಿದಿಲ್ಲ ಇನ್ನೂ ಜಾತಿ, ಧರ್ಮ ಎಂದು ಯೋಚಿಸುತ್ತಿದ್ದಾರೆ ಇದು ದುರಂತ ಎಂದು ಹೇಳಿದರು. ಗ್ರಾಮದ ಯುವಕ, ಯುವತಿಯರು ಮತ್ತು ಮಕ್ಕಳು ಅಂಬೇಡ್ಕರ್ ರವರ ಭಾವಚಿತ್ರವನ್ನಿಟ್ಟು ಮೇಣದ ಬತ್ತಿ ಹಚ್ಚಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಈ ಸಂದರ್ಭದಲ್ಲಿ ಯಾಜಮಾನರು ಮಹದೇವಯ್ಯ, ಚಿಕ್ಕಣ.ಗ್ರಾಮ ಪಂಚಾಯಿತಿ ಸದಸ್ಯರು ಶಿವರಾಜ್ ಅರಸು, ಪ್ರಕಾಶ್, ರತ್ನಮ ರಾಜೇಶ್, ಗ್ರಾಮದ ಮುಖಂಡರು ಪುಟ್ಟಸ್ವಾಮಿ, ಮಹದೇವಸ್ವಾಮಿ, ನಂಜುಂಡಿ, ಚನ್ನಯ್ಯ, ಸುರೇಶ್,…
ತುಮಕೂರು: ನಗರದ ಹೇಮಾವತಿ ನಾಲಾ ವಲಯ ವಿಶೇಷ ಭೂಸ್ವಾಧೀನ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸೋಮವಾರ ತಡರಾತ್ರಿ 11 ಗಂಟೆಯವರೆಗೂ ಕಾರ್ಯಾಚರಣೆ ನಡೆಸಿದ್ದಾರೆ. ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ್, ಇನ್ಸ್ ಪೆಕ್ಟರ್ ವಿಜಯಲಕ್ಷ್ಮೀ ನೇತೃತ್ವದ ತಂಡ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಹೇಮಾವತಿ ನಾಲಾವಲಯ ಕಚೇರಿಯ ಅಧಿಕಾರಿಗಳನ್ನು ಮನೆಗೆ ಹೋಗದಂತೆ ತಡೆದು ಕಚೇರಿಯಲ್ಲಿಯೇ ಇರಿಸಿಕೊಂಡಿದ್ದಾರೆ. ಭೂಸ್ವಾಧೀನ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು ತಡ ರಾತ್ರಿ 11 ಗಂಟೆವರೆಗೂ ಎಸಿಬಿ ಅಧಿಕಾರಿಗಳ ಶೋಧಕಾರ್ಯ ಮುಂದುವರೆಸಿದ್ದರು. ವರದಿ: ರಾಜೇಶ್ ರಂಗನಾಥ್ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುರುವೇಕೆರೆ: ನನಗೂ ತುರುವೇಕರೆಗೂ ಅವಿನಾಭಾವ ಸಂಬಂಧವಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ಹೆಚ್ಚಿನ ಮತ ನೀಡಿದ ತಾಲೂಕು ಇದಾಗಿದ್ದು, ಈ ತಾಲೂಕಿನ ಜನತೆಗೆ ನಾನು ಚಿರರುಣಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಪಟ್ಟಣದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಲೋಕೇಶ್ ಅವರ ಪರ ಮತಯಾಚಿಸಿದ ಗೌಡರು, ಕಳೆದ ಚುನಾವಣೆಯಲ್ಲಿ ತಾಲೂಕಿನ ಜನತೆ ನೀಡಿದ ಬೆಂಬಲವನ್ನು ಸ್ಮರಿಸಿಕೊಂಡರು. ಇನ್ನೂ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ದೇವೇಗೌಡರ ವಿರುದ್ಧ ಕೆ.ಎಂ.ರಾಜಣ್ಣ ನೀಡಿರುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿ, ದೇವೇಗೌಡರ ಬಗ್ಗೆ ಮಾತನಾಡಲು ಕೆ.ಎಂ.ರಾಜಣ್ಣ ಯಾರು? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್, ಮಾಜಿ ಶಾಸಕ ಎಚ್.ಬಿ.ನಂಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷರು,ಲೀಲಾವತಿ ಗಿಡ್ಡಯ್ಯ ಮತ್ತಿತರು ಹಾಜರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700