Subscribe to Updates
Get the latest creative news from FooBar about art, design and business.
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
Author: admin
ತುಮಕೂರು: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 325 ಬಾಲಕಿಯರು ಗರ್ಭ ಧರಿಸಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ ಹೇಳಿದರು. ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಬುಧವಾರ ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಗರ್ಭ ಧರಿಸುವ ಪ್ರಕರಣಗಳು ಹೆಚ್ಚುತ್ತಿವೆ. ಈಗಾಗಲೇ ವರದಿಯಾಗಿರುವ 325 ಪ್ರಕರಣಗಳಲ್ಲಿ 230 ಪ್ರಕರಣಗಳ ಬಗ್ಗೆ ವಯಸ್ಸಿನ ಖಾತರಿ ಪಡಿಸುವ ಪ್ರಕ್ರಿಯೆ ಜಿಲ್ಲಾ ಆಸ್ಪತ್ರೆ ಹಂತದಲ್ಲಿ ನಡೆದಿದೆ ಎಂದು ಹೇಳಿದರು. ಗಡಿ ಭಾಗಗಳಲ್ಲಿ ಪೋಕ್ಸೋ, ಬಾಲ ಗರ್ಭಿಣಿ, ಮಕ್ಕಳು ಕಾಣೆಯಾಗುವ ಪ್ರಕರಣಗಳು ಹೆಚ್ಚುತ್ತಿವೆ. ಕಾನೂನು ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಶಾಲಾ–ಕಾಲೇಜು, ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ನಾಗರಿಕರಲ್ಲಿ ಅರಿವು ಮೂಡಿಸಿ ಮಾನವ ಹಕ್ಕು ಉಲ್ಲಂಘನೆ ಆಗದಂತೆ ತಡೆಯಬೇಕು ಎಂದು ಸಲಹೆ ಮಾಡಿದರು. ವಿದ್ಯೋದಯ…
ತುಮಕೂರು: ವಿಜ್ಞಾನ ಬಿಂದು–ಮ್ಯಾಥ್ ಲ್ಯಾಬ್ ರಾಷ್ಟ್ರೀಯ ಗಣಿತ ದಿನಾಚರಣೆ ಅಂಗವಾಗಿ ಡಿಸೆಂಬರ್ 21 ಭಾನುವಾರ ಬೆಳಿಗ್ಗೆ 9:30ರಿಂದ 11:30ರವರೆಗೆ ಸರ್ವೋದಯ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತ-ವಿಜ್ಞಾನ ಒಲಂಪಿಯಾಡ್ ಆಯೋಜಿಸಿದೆ. 1 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ. 8, 9, ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಒಲಂಪಿಯಾಡ್ ನಡೆಯಲಿದೆ. ಆಸಕ್ತರು https:// shorturl.at/Fopil ಲಿಂಕ್ ಅಥವಾ ವಾಟ್ಸಾಪ್ ಸಂಖ್ಯೆ 8660587150ರಲ್ಲಿ ನೋಂದಾಯಿಸಿಕೊಳ್ಳಲು ಡಿ.18 ಕೊನೆ ದಿನ ಆಗಿರುತ್ತದೆ. ಗಣಿತ, ವಿಜ್ಞಾನದಲ್ಲಿ ಆಸಕ್ತಿ ಮೂಡಿಸಿ, ಸರಳತೆಯಿಂದ ಸಂತಸಗೊಳಿಸುವುದು, ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸ್ಪರ್ಧಾತ್ಮಕ ಕಲಿಕೆಗೆ ಸಹಕರಿಸುವುದು, ಸಮಸ್ಯೆಗಳನ್ನು ಕಾತುರತೆಯಿಂದ ಸುಲಭವಾಗಿ ಬಿಡಿಸಲು ಮಕ್ಕಳಲ್ಲಿ ವಿಶ್ಲೇಷಣಾ ಸಾಮರ್ಥ್ಯ, ಆಲೋಚನಾ ಕ್ರಮಗಳನ್ನು ಉಂಟುಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಲಾ ಹಂತದಿಂದಲೇ ಸಿದ್ಧಗೊಳಿಸುವುದು ಒಲಂಪಿಯಾಡ್ ಉದ್ದೇಶ. ಶಿಕ್ಷಣ ಇಲಾಖೆಯ ಪಠ್ಯಕ್ರಮ ಆಧಾರದಲ್ಲಿ ತರಗತಿವಾರು ಪ್ರಶ್ನೆಗಳನ್ನು ನೀಡಲಾಗುವುದು. ಒಲಂಪಿಯಾಡ್ ವಿಜೇತರಿಗೆ ಬಹುಮಾನ, ವಿಜ್ಞಾನ ಬಿಂದು ಚಿಲ್ಡನ್ಸ್ ಕ್ಲಬ್ –ಮ್ಯಾಥ್ ಲ್ಯಾಬ್ ಚಟುವಟಿಕೆಗಳಿಗೆ ಒಂದು ವರ್ಷ ಉಚಿತ ಸದಸ್ಯತ್ವ, ರಾಜ್ಯ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ತುಮಕೂರು ಜಿಲ್ಲಾ ಬಂಜಾರ ಲಂಬಾಣಿ ಸೇವಾಲಾಲ್ ಸೇವಾ ಸಂಘದ ಸಹಯೋಗದಲ್ಲಿ ಡಿಸೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರಸ್ವತಿಪುರಂನಲ್ಲಿ ಅಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಉಪಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರ ಗೌರವ ಉಪಸ್ಥಿತಿಯಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಗೆ ವೀರ ಮಹಿಳೆ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಡಿಸೆಂಬರ್ 24ರೊಳಗಾಗಿ ನೇರವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2956624ನ್ನು ಸಂಪರ್ಕಿಸಬಹುದಾಗಿದೆ. ಎಂದು ಇಲಾಖೆಯ ಉಪನಿರ್ದೇಶಕ ಡಾ. ಸಿದ್ದರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ 2 ವಾರಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಕಾರ್ಯಕ್ರಮವು ನಗರದ ಬಿ.ಹೆಚ್. ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯಲಿದ್ದು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಉದ್ಯಮ ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ತರಬೇತಿ ಪಡೆಯಲಿಚ್ಛಿಸುವ ಯುವನಿಧಿ ಫಲಾನುಭವಿಗಳು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ. ಬಸ್ ನಿಲ್ದಾಣ, ತುಮಕೂರು ಅಥವಾ ದೂ. ವಾ.ಸಂ. 7022746755ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.…
ತುಮಕೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಅಕ್ಷಯ ಡೆವಲಪ್ ಮೆಂಟ್ ಫೌಂಡೇಷನ್ ಮಧುಗಿರಿ ಇವರ ಸಂಯುಕ್ತಾಶ್ರಯದಲ್ಲಿ ಡಿ.13 ಮತ್ತು 14 ರಂದು ಬಾಲ ಬಹದ್ದೂರ್ ಐಟಿಐ ಕಾಲೇಜು ಸಭಾಂಗಣ, ಶಿರಾಗೇಟ್, ಮಧುಗಿರಿ ಇಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಡಿ.13ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಬ್ ಬಹದ್ದೂರ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಪ್ರಕಾಶ್ ಬಾಬು ಎಂ.ಎಲ್. ವಹಿಸಲಿದ್ದು, ನಟ ಹನುಮಂತೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಡಾ.ರವಿಕುಮಾರ್ ನೀಹ, ಪ್ರೊ.ಮ.ಲ.ನ.ಮೂರ್ತಿ, ಡಾ. ನಳಿನ ಎನ್., ಡಾ.ಗೋವಿಂದರಾಯ ಎಂ., ಡಾ.ಮಂಜುನಾಥ್ ಬುಡಸನಹಳ್ಳಿ, ಮಲ್ಲಿಕಾರ್ಜುನಪ್ಪ ಬಿ.ಎಲ್., ಈಶ್ವರ ಕು. ಮಿರ್ಜಿ, ಡಾ.ಮಂಜುನಾಥ್ ಟಿ.ಹೆಚ್., ಬಿ.ಮಂಜುನಾಥ್, ಪಿ.ವಿ.ಹನುಮಂತರಾಯಪ್ಪ ಆಗಮಿಸುವರು. ನಂತರ ರತ್ನ ಯುವರಾಜ್ ಅಬ್ಬತ್ತನಹಳ್ಳಿ ಇವರಿಂದ ಕನ್ನಡ ಗೀತೆ ಮತ್ತು ಜಾನಪದ ಗೀತೆಗಳ ಗಾಯನ. ಡಿ. 13 ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ದೇಶ: ಸಾಂಸ್ಕೃತಿ ನಿರೂಪಣೆ ಕುರಿತು ಡಾ. ರವಿಕುಮಾರ್ ನೀಹ, ರೆಟ್ರೋ ಸಿನಿಮಾಗಳು …
ತುಮಕೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ವ್ಯಸನಗಳಿಂದ ಮುಕ್ತರಾಗಿ ವಿದ್ಯಾರ್ಥಿಗಳು ಮೊಬೈಲ್ ಗಳಿಂದ ದೂರವಿದ್ದು, ಭವಿಷ್ಯ ಉಜ್ವಲವಾಗಿಸಿಕೊಳ್ಳಿ, ಮಾದಕ ಪಾನೀಯ, ಮಾದಕ ವಸ್ತುಗಳಿಂದ ದೂರವಿದ್ದು, ಶಿಸ್ತುಬದ್ಧವಾಗಿ ಬದುಕಿ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಪುರುಷೋತ್ತಮ್ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ನಡೆಮುಕ್ತ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವ್ಯಸನಗಳಿಂದ ದೂರವಿದ್ದು, ಕನಸುಗಳನ್ನು ಕಾಣುವ ಮೂಲಕ ಜೀವನವನ್ನು ಅರ್ಥಪೂರ್ಣವಾಗಿ ರೂಪಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಿ ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಚಾರ್ಯರಾದ ಎಸ್.ರಾಜ್ ಕುಮಾರ್ ಮಾತನಾಡಿ, ಸದೃಢ ದೇಹದಿಂದ ಸದೃಢ ಮನಸ್ಸು ಸಾಧ್ಯ. ಆರೋಗ್ಯವಂತ ಒಳ್ಳೆಯ ವಿದ್ಯಾರ್ಥಿಗಳಿಂದ ಒಳ್ಳೆಯ ಸಮಾಜ ನಿರ್ಮಾಣ ಸಾಧ್ಯ. ವ್ಯಸನಗಳಿಂದ ಮುಕ್ತರಾಗಿ ಬದುಕು ಕಟ್ಟಿಕೊಳ್ಳಿ ಎಂದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ರೆಹಮತ್ ಉಲ್ಲಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ನಯನ ಮತ್ತು ಚಂದ್ರಕಲಾ ಪ್ರಾ ರ್ಥಿಸಿದರು. ಉಪನ್ಯಾಸಕರಾದ ವಸಂತ್ ಕುಮಾರ್ ವಂದಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಗುಬ್ಬಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆಯು APEDA ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ 12ರಂದು ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ನೆಟ್ಟಿಕೆರೆ ಗ್ರಾಮದಲ್ಲಿ ಅಡಿಕೆ ಬೆಳೆ ಕುರಿತು ರೈತರಿಗೆ ತರಬೇತಿಯನ್ನು ಆಯೋಜಿಸಿದೆ. ಅಡಿಕೆ ಉತ್ಪಾದನೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಅಡಿಕೆಯಲ್ಲಿ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ, ಸುಸ್ಥಿರ ಅಡಿಕೆ ಕೃಷಿ, ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಇತರ ಕೃಷಿ ಉತ್ಪನ್ನಗಳಿಗೆ ರಫ್ತು ಅವಕಾಶಗಳ ಕುರಿತು ತರಬೇತಿ ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ರೈತ ಫಲಾನುಭವಿಗಳು ತರಬೇತಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪುಷ್ಪಲತಾ ಎ.ಎಸ್. ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮ ಮತ್ತು ಪರಿಶೀಲನೆಯನ್ನು ನಡೆಸಲು ತಾಲ್ಲೂಕಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು. ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಂಭಂದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಇದರೊಂದಿಗೆ ಎತ್ತಿನಹೊಳೆ ಯೋಜನೆಗಾಗಿ ತಾಲ್ಲೂಕಿನಲ್ಲಿ ಒಟ್ಟು 534 ಎಕರೆ ಜಮೀನು ಅಗತ್ಯವಿದೆ, ಈ ಪೈಕಿ 383 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಾನುಭವಿಗಳ ಖಾತೆಗೆ ಈಗಾಗಲೇ ಹಣವನ್ನು ವರ್ಗಾಯಿಸಲಾಗಿದೆ. ಇದರ ಜೊತೆಗೆ ಬಾಕಿ ಉಳಿದಿರುವ ಜಮೀನಿನ ಭೂಸ್ವಾಧೀನಕ್ಕೆ ಸಂಭಂದಿಸಿದಂತೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.…
ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಡಾ.ಜಿ.ಪರಮೇಶ್ವರ ರವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ್ಯಾಲಿ ಪಟ್ಟಣದಲ್ಲಿ ನಡೆಸಿದರು. ಕರ್ನಾಟಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗುತ್ತಿದ್ದಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಡಾ.ಜಿ.ಪರಮೇಶ್ವರ ರವರ ಅಭಿಮಾನಿಗಳು ಬೃಹತ್ ಮೆರವಣಿಗೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಕೊರಟಗೆರೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಧಾನ ರಸ್ತೆ ಮೂಲಕ ಮುಖ್ಯ ಬಸ್ ಸ್ಟ್ಯಾಂಡ್ ವೃತ್ತದವರೆಗೆ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು. ಯುವಕರು ಬೈಕ್ ರ್ಯಾಲಿಯೊಂದಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ರರೇ ಆಗಬೇಕು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಮೊದಲ ಆದ್ಯತೆ ಡಾ.ಜಿ.ಪರಮೇಶ್ವರ್ ರವರಿಗೆ ನೀಡಬೇಕೆಂದು ಘೋಷಣೆ ಕೂಗಿದರು, ಮೆರವಣಿಗೆಯಲ್ಲಿ ಮಹಿಳೆಯರು ಬಹುದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಡಾ.ಜಿ.ಪರಮೇಶ್ವರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು, ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ, ತ್ಯಾಗ ಮಾಡಿದ್ದಾರೆ, ಸಜ್ಜನ ರಾಜಕಾರಣಿಯಾದ ಅವರನ್ನು ದಲಿತ…