Subscribe to Updates
Get the latest creative news from FooBar about art, design and business.
- ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
- ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
Author: admin
ಬೀದರ್: ಬೀದರ್ನ ಕಾಂಗ್ರೆಸ್ ಮುಖಂಡ ಜಾನಸನ್ ಘೋಡೆ, ಬಿಹಾರದ ಮುಜಾಫರ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯೇಂದ್ರ ಚೌಧರಿ ಪರ ಸೋಮವಾರ ವಿವಿಧೆಡೆ ಪ್ರಚಾರ ನಡೆಸಿ ಗಮನ ಸೆಳೆದರು. ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ, ಮುಖಂಡರಾದ ರಾಜರತನ್ ಸಿಂಧೆ, ರತ್ನದೀಪ್ ಕಸ್ತೂರೆ, ಸ್ಥಳೀಯರು ಆದ ಅಕ್ರಂ ಪಾಶಾ, ಶೇಕ್ ಮುಜಮ್ಮಿಲ್ ಮತ್ತಿತರರು ಕ್ಷೇತ್ರದ ಲಕ್ಷ್ಮಿನಗರ, ಬ್ರಹ್ಮಪುರ, ಮೋತಿಜ್ ಮೈದಾನ, ತಿಲಕನಗರದಲ್ಲಿ ಮನೆಗೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪರ ಮತ ಯಾಚಿಸಿದರು. ಮುಜಾಫರ್ಪುರ ವಿಧಾನಸಭಾ ಕ್ಷೇತ್ರಕ್ಕೆ ನ. 6 ರಂದು ಚುನಾವಣೆ ನಡೆಯಲಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ. ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು ಎಂದು ಸೂಚಿಸಿದರು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು. ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ…
ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ವರದಿಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಮಧುಗಿರಿಯ ತೆರಿಯೂರು–ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಹಾಗೂ ಆಂಧ್ರ ಪ್ರದೇಶದ ಚೌಲೂರು ಗ್ರಾಮದ ಐವರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾಗಿರುವ ನಾಗರಾಜು ಮತ್ತು ನಿಂಗಕ್ಕ ಎಂಬವರನ್ನು ಹಿಂದೂಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತೆರಿಯೂರು ಗ್ರಾಮದ ಮಾರಪ್ಪ ದಾಸಪ್ಪ ಚಿಕ್ಕನರಸಿಂಹಯ್ಯ ಹಾಗೂ ಟಿ. ನಾಗರಾಜು ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಉಳಿದವರು ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಹಾಗೂ ಆಂಧ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಲಾರಿಗೆ ಹಿಂದಿನಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಗುಜರಾತ್ನ ಅಮಿತ್ ಪಾಟೀಲ್ (45) ಮತ್ತು ಲತಾ (40) ಮೃತರು. ಗಾಯಾಳುಗಳಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ರಾಜ್ಯದ ತಂಡ ತಿರುಪತಿಯಲ್ಲಿ ದರ್ಶನ ಮುಗಿಸಿಕೊಂಡು ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬಂದೋಲೆ ಆದೇಶಿಸಿದ್ದಾರೆ. 2024–25 ನೇ ಸಾಲಿನ 15ನೇ ಹಣಕಾಸು ಯೋಜನೆಯನ್ನು ಸಾಮಾನ್ಯ ಸಭೆ/ಗ್ರಾಮ ಸಭೆ ಜರುಗಿಸದೆ ಗ್ರಾ.ಪಂ. ಸದಸ್ಯರಿಗೆ ಮಾಹಿತಿ ನೀಡದೆ ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿ ನಡೆಸಿ ಅದರ ಬಿಲ್ ಪಾವತಿ ಮಾಡುತ್ತಿದ್ದಾರೆ. ನಿಧಿ–1 ನಿಧಿ–2 ಖಾತೆಗಳ ಕುರಿತು ಮಾಹಿತಿ ಕೇಳಿದರೂ ಮಾಹಿತಿ ನೀಡಿಲ್ಲ. 9(ಎ)11(ಬಿ) ಬಗ್ಗೆ ಮಾಹಿತಿ ಕೇಳಿದರು ಇಲ್ಲಿಯವರೆಗೆ ನೀಡಿರುವುದಿಲ್ಲ’ ಎಂದು ಅದೇ ಗ್ರಾಮ ಪಂಚಾಯಿತಿ ಸದಸ್ಯ ದೇವೆಂದ್ರ ಬಿ. ಪವಾರ ದೂರು ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿ ನಿಧಿ–1 ಮತ್ತು ನಿಧಿ–2 ಖಾತೆಯಿಂದ ₹22 ಲಕ್ಷ ಮತ್ತು 15ನೇ ಹಣಕಾಸು ಯೋಜನೆಯಡಿ ₹37 ಲಕ್ಷ ಖರ್ಚು ಮಾಡಿದ್ದಾರೆ. 2024–25ನೇ ಸಾಲಿನ 15ನೇ ಹಣಕಾಸು ಯೋಜನೆ ಕಾಮಗಾರಿಗಳನ್ನು ಮತ್ತು ನಿಧಿ 1…
ಸರಗೂರು: ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ ಎಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪೂರ್ಣಿಮ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಶನಿವಾರದಂದು ವಿವೇಕಾನಂದ ಸ್ಮಾರಕ ಆಸ್ಪತ್ರೆ, ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆಯನ್ನು ಮಾತನಾಡಿದರೆ ಸಾಲದು, ಭಾಷೆ ಉಳಿಸಲಿಕ್ಕೆ ನಾವೆಲ್ಲ ಪ್ರಯತ್ನಿಸಬೇಕು. ನಾನು ವೈದ್ಯರಾಗಿದ್ದರೂ ಕನ್ನಡ ಮಾಧ್ಯಮದಲ್ಲಿ ನಾನು ಓದಿದ್ದು ಈಗಲೂ ಕೂಡ ನಾನು ಕನ್ನಡದಲ್ಲಿಯೇ ಸಹಿ ಮಾಡುತ್ತಿದ್ದೇನೆ, ಹೊರಗಿನಿಂದ ಬಂದವರಿಗೆ ಕನ್ನಡವನ್ನು ಕಲಿಸುವಂತರಾಗಬೇಕು, ಕನ್ನಡ ಸುಂದರವಾದ ಭಾಷೆ ನಾವು ನಮ್ಮ ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ. ಕನ್ನಡ ಭಾಷೆಗೆ ಅಪಾರವಾದ ಗೌರವವನ್ನು ನಾವೆಲ್ಲ ನೀಡಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಮತ್ತು ನಿಕಟಪೂರ್ವ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ವೈ.ಡಿ.ರಾಜಣ್ಣ ಮಾತನಾಡಿ, ಕರ್ನಾಟಕ ರಾಜ್ಯ ಉದಯವಾಗಬೇಕು ಎಂಬುದು ಕನ್ನಡ ಹೋರಾಟಗಾರರ ಒತ್ತಾಸೆ ನಾವು ನಮ್ಮ ಮಕ್ಕಳಿಗೆ…
ಬೆಂಗಳೂರು: ನಾಡಿನ ಹೆಸರಾಂತ ಬರಹಗಾರರು, ಸಾಹಿತಿಗಳು, ಕಲಾವಿದರು, ಚಿಂತಕರು ಭಾಷೆ, ನೆಲ, ಜಲ, ಅಭಿವೃದ್ಧಿಗೆ ಶ್ರಮಿಸುತ್ತಿದ್ದರು ಕೂಡ ಕೆಲವರು ರಾಜಕೀಯ ಪಕ್ಷದ ಪರವಾಗಿ ಧ್ವನಿಯೆತ್ತಿ ತಮ್ಮತನವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು ಕನ್ನಡ ಭಾಷೆ, ನೆಲ, ಜಲ ಮತ್ತು ಕನ್ನಡ ಅಭಿವೃದ್ಧಿಗೆ ಅಪಾಯ ತಂದೊಡ್ಡುತ್ತಿದ್ದಾರೆ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಜುಡಿಷಿಯಲ್ ಲೇಔಟ್ ನಲ್ಲಿ ಬಡಾವಣೆಯ ಕನ್ನಡ ಕಸ್ತೂರಿ ಸಂಘ ಹಾಗೂ ವಿವಿಧ ಸಂಘಟನೆಗಳೊಂದಿಗೆ ಆಯೋಜಿಸಿದ್ದ ಅದ್ದೂರಿಯ 70 ನೇ ಕನ್ನಡ ರಾಜೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರದ ಕೆಲವು ಸಮಿತಿಗಳಲ್ಲಿ, ಪ್ರಾಧಿಕಾರಗಳಲ್ಲಿ ಅಧ್ಯಕ್ಷರು, ಸದಸ್ಯರು ಆಗಲು ಮತ್ತು ಪ್ರಶಸ್ತಿಗಳನ್ನು ಪಡೆದುಕೊಳ್ಳಲು ರಾಜಕಾರಣಿಗಳ ಜೊತೆ ಲಾಭಿ ನಡೆಸಿ ಅಧಿಕಾರ ಅನುಭವಿಸಲು ಹಾತೊರೆಯುತ್ತಿರುವುದರಿಂದ ಕನ್ನಡ ಸಾಹಿತ್ಯದ ಬೆಳವಣಿಗೆ ಕುಂಠಿತಗೊಂಡಿದೆ ಎಂದರು. ಜೊತೆಗೆ ಉತ್ತರ ಭಾರತದಿಂದ ಉದ್ಯೋಗ ಅರಸಿ ಬರುವ ಹಿಂದಿ ಭಾಷಿಕರ ಸಂಖ್ಯೆ ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು,…
ಸರಗೂರು: ಕೂಡಗಿ ಗ್ರಾಮದ ರೈತರೊಬ್ಬರ ಮೇಲೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ ಮಹದೇವಪ್ಪ ತಿಳಿಸಿದರು. ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ಕೂಡಗಿ ಗ್ರಾಮದ ದೊಡ್ಡನಿಂಗಯ್ಯ ಶುಕ್ರವಾರದಂದು ಹುಲಿ ದಾಳಿಗೆ ಮೃತಪಟ್ಟ ಹಿನ್ನೆಲೆ ಅವರ ಮನೆಗೆ ಶನಿವಾರ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡಿ ಕುಟುಂಬಸ್ಥರಿಗೆ ಸ್ವಾತಂನ ಹೇಳಿದರು. ನಂತರ ಗ್ರಾಮಸ್ಥರು ಮತ್ತು ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು. ಹುಲಿ ಓಡಾಟದ ಬಗ್ಗೆ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ ಮಾಹಿತಿಯನ್ನು ಸ್ಥಳೀಯ ಶಾಸಕರು ತಿಳಿಸಿದ್ದಾರೆ. ನೊಂದ ಕುಟುಂಬಕ್ಕೆ ಸರ್ಕಾರದ ಸೌಲಭ್ಯ ಯೋಜನೆಯಡಿಯಲ್ಲಿ ಮನೆ ಮತ್ತು ಸೌಲಭ್ಯಗಳನ್ನು ನೀಡಬೇಕು ಎಂದು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಮಾನವ–ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ, ಹಿಂದಿನಿಂದಲೂ ಇದೆ.…
ಸಾಂಪ್ರದಾಯಿಕ ಕಲೆಗಳ ಪರಂಪರೆ ಮತ್ತು ಜನಪದ ಸಂಸ್ಕೃತಿಯ ಸೊಬಗಿನ ನಡುವೆ, ಸ್ಥಳೀಯ ಪ್ರತಿಭೆಗಳನ್ನು ಅಣಿಗೊಳಿಸಿ ರೂಪುಗೊಂಡಿರುವ ಹೊಸ ದೃಶ್ಯಮಾಲಿಕೆ “ಪ್ರೊಡಕ್ಷನ್ ನಂ 01” ಇದೀಗ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶ್ರೀ ಗಂಗಾಧರೇಶ್ವರ ಸ್ವಾಮಿಗಳ ಆಶೀರ್ವಾದದಿಂದ, ಕಲ್ಪತರು ಪ್ರೊಡಕ್ಷನ್ ರವರಿಂದ ಪ್ರಥಮ ಕೃತಿಯಾಗಿ ಮೂಡಿ ಬಂದಿರುವ ಈ ಕೃತಿ ಕನ್ನಡ ಸಂಸ್ಕೃತಿಯ ಮಣ್ಣಿನ ವಾಸನೆ ತಂದುಕೊಡುವ ಭರವಸೆ ವ್ಯಕ್ತಪಡಿಸಿದೆ. ಕಥೆ -– ಚಿತ್ರಕಥೆ -– ಸಂಭಾಷಣೆ / ಸಹಿತ / ನಿರ್ದೇಶನ ಶ್ರೀಕಾಂತ್ ಕುಮಾರ್ ನಿರ್ಮಾಪಕರು ಭೋಜರಾಜ್ -– ವೆಂಕಟೇಶ್ ಪ್ರಚಾರ ಗೀತೆ ಕುಶಿ ಇವೆಂಟ್ ಬಾಯಾಗ್ರಾಹಕ/ಅಡ್ವೈಜ ರ್ಗಳು ಕಲಾವಿದರು ಭೋಜರಾಜ್, ವೆಂಕಟೇಶ್, ಕುಮಾರ್, ಶ್ರೀಕಾಂತ್, ಶುಭಾ ಚಿತ್ರದ ಹೈಲೈಟ್ಸ್: ಮೂಲಭೂತ ಜನಪದ ಭಾವನೆಗಳು ಮಣ್ಣಿನ ಸಂಗತಿ, ಸಂಸ್ಕೃತಿ ಮತ್ತು ಮನುಷ್ಯ ಮೌಲ್ಯಗಳ ತೆರೆಯ ಮೇಲೆ ಮೂಡಿಸುವ ಪ್ರಯತ್ನ ಶ್ರದ್ಧಾ, ನಂಬಿಕೆ ಮತ್ತು ಕಲೆಯನ್ನು ಸೇರ್ಪಡಿಸುವ ಸುಂದರ ಯತ್ನ ವಿಶೇಷ ಸಂದೇಶ: “ಸಮಾಜದ ನಾಡಿಯ ಜನತೆಗೆ…
ಕೊರಟಗೆರೆ: ನಮ್ಮ ಕರ್ನಾಟಕ ಕೇವಲ ಒಂದು ಪ್ರದೇಶವಲ್ಲ ಅದು ಶ್ರೀಮಂತ ಸಂಸ್ಕೃತಿ, ಭವ್ಯ, ಇತಿಹಾಸ ಮತ್ತು ಪ್ರಕೃತಿಯ ಸೌಂದರ್ಯವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಪುಣ್ಯಭೂಮಿ ಎಂದು ತಹಶೀಲ್ದಾರ್ ಕೆ.ಮಂಜುನಾಥ ತಿಳಿಸಿದರು. ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾದ 70ನೇ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದರು. ಕನ್ನಡದಲ್ಲಿ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಸಾಧ್ಯವಾಗುತ್ತದೆ. ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಕುವೆಂಪು ಅವರು ಹೇಳುವಂತೆ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ ಎಂದು ಹೇಳಿದರು. ಆದಿಕವಿ ವಾಲ್ಮೀಕಿಯಿಂದ ಆರಂಭವಾಗಿ ಪಂಪ, ರನ್ನ ಮೊದಲಾದ ಕವಿಗಳು ತಮ್ಮ ಕಾವ್ಯದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಮನದುಂಬಿ ಹೊಗಳಿದ್ದಾರೆ. ಕರ್ನಾಟಕವು ತನ್ನದೇ ಆದ…