Subscribe to Updates
Get the latest creative news from FooBar about art, design and business.
- ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
- ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
- ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
- ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
- ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್ ಗಳ ಕ್ಯೂ!
- ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
- ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
Author: admin
ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸುವುದಕ್ಕೆ ಅನುಮತಿ ನೀಡಲು ವಾರಣಾಸಿ ಜಿಲ್ಲಾ ಕೋರ್ಟ್ ನಿರಾಕರಿಸಿದೆ. ಶಿವಲಿಂಗದ ವೈಜ್ಞಾನಿಕ ಅಧ್ಯಯನ ನಡೆಸಲು ಅನುಮತಿ ನೀಡುವಂತೆ ಕೋರಿ ಹಿಂದೂಗಳು ಸಲ್ಲಿಸಿದ್ಧ ಅರ್ಜಿಯನ್ನ ವಾರಣಾಸಿ ಜಿಲ್ಲಾಕೋರ್ಟ್ ನ್ಯಾಯಾಧೀಶ ಅಜಯ್ ಕೃಷ್ಣ ವಜಾಗೊಳಿಸಿದ್ದಾರೆ. ಈ ಮೂಲಕ ಜ್ಞಾನ್ವಾಪಿ ಮಸೀದಿ ಸಂಕೀರ್ಣದಲ್ಲಿ ‘ಶಿವಲಿಂಗ’ದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆ ನಡೆಸಬೇಕೆಂಬ ಹಿಂದೂ ಪಕ್ಷದ ಬೇಡಿಕೆ ತಿರಸ್ಕೃತವಾಗಿದೆ. ಕಾರ್ಬನ್ ಡೇಟಿಂಗ್ ನಡೆಸಿದರೇ ಸಾಕ್ಷಿಗೆ ಹಾನಿಯಾಗಬಹುದು. ಜಾಗವನ್ನ ಸೀಲ್ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ ಎಂದು ಸುಪ್ರೀಂ ಆದೇಶ ಉಲ್ಲೇಖಿಸಿ ಈ ಮಹತ್ವದ ತೀರ್ಪನ್ನ ಕೋರ್ಟ್ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಕರಾವಳಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ 5 ದಿನ ಮಳೆಯಾಗಲಿದೆ. ತಗ್ಗು ಪ್ರದೇಶದ ಜನ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಉತ್ತರಕನ್ನಡ, ದಕ್ಷಿಣಕನ್ನಡ, ಬಾಗಲಕೋಟೆ, ಧಾರವಾಡ ಗದಗ ಹಾವೇರಿ ಬಳ್ಳಾರಿ ಸೇರಿ 17ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಲಿದ್ದು, ಜಿಲ್ಲಾಧಿಕಾರಿಗಳಿಗೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡ: ಬ್ಯಾಂಕ್ನ ಎಟಿಎಂನಿಂದ ಹಣ ಬಾರದೇ ಅಕೌಂಟನಿಂದ ಕಟ್ ಆಗಿದ್ದ 500 ರೂಪಾಯಿ ಹಿಂದುರಿಗಿಸದ ಬ್ಯಾಂಕ್ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಗ್ರಾಹಕನಿಗೆ 1,02,700 ರೂ.ಗಳ ಪರಿಹಾರ ನೀಡಬೇಕೆಂದು ಆದೇಶ ಹೊರಡಿಸಿದೆ. ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖೆಯ ಗ್ರಾಹಕರಾದ ವಕೀಲ ಸಿದ್ದೇಶ ಹೆಬ್ಬಳ್ಳಿ ನವೆಂಬರ್ 28, 2020 ರಂದು ತಮ್ಮ ಎಟಿಎಂ ಕಾರ್ಡನಿಂದ 500 ರೂ. ಹಣ ತಗೆಯಲು ಪ್ರಯತ್ನಿಸಿದಾಗ ತನ್ನ ಉಳಿತಾಯ ಖಾತೆಯಿಂದ ಡೆಬಿಟ್ ಆದರೂ ತನಗೆ ಆ ಹಣ ಬಾರದ ಕಾರಣ ಮತ್ತೊಮ್ಮೆ ಪಕ್ಕದ ಎಟಿಎಂ ಮಶೀನಿನಿಂದ ಕಾರ್ಡಹಾಕಿ 500 ರೂ.ಪಡೆದಿದ್ದರು. ಇಂಡಿಯನ್ ಓವರಸೀಸ್ ಬ್ಯಾಂಕಿನ ಎಟಿಎಂ ಕಾರ್ಡ್ನಿಂದ ಮೊದಲನೇ ಸಲ ತೆಗೆದ 500 ರೂ. ತನಗೆ ಬಂದಿಲ್ಲವಾದರೂ ತನ್ನ ಖಾತೆಯಿಂದ ಡೆಬಿಟ್ ಆಗಿರುವ ಕುರಿತು ಡಿಸೆಂಬರ್ 02, 2020 ರಂದು ತಮ್ಮ ಖಾತೆಯಿರುವ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖಾ ವ್ಯವಸ್ತಾಪಕರಿಗೆ ದೂರು ಕೊಟ್ಟಿದ್ದರು. ಆದರೆ, ಸಿದ್ದೇಶ ಹೆಬ್ಬಳ್ಳಿ ಅವರು ನೀಡಿದ ದೂರು ಕುರಿತು ಶಾಖಾ ವ್ಯವಸ್ಥಾಪಕರು ಯಾವುದೇ…
ಹುಬ್ಬಳ್ಳಿ: ಕಳೆದೆರಡೂ ವರ್ಷಗಳಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಇನ್ನೊಂದೆಡೆ ಆ ಸಮುದಾಯವನ್ನ 2ಎ ಮೀಸಲಾತಿಗೆ ನೀಡಬಾರದು ಎಂಬ ಒತ್ತಡವೂ ಸರ್ಕಾರದ ಮೇಲಿದೆ. ಇದೀಗ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಕ್ಕೆ ಸೆಡ್ಡು ಹೊಡೆದಿರುವ ಹಲವು ಸ್ವಾಮೀಜಿಗಳು ಚಿಂತನ ಮಂಥನ ನಡೆಸಲು ಮುಂದಾಗಿದ್ದಾರೆ. ಹುಬ್ಬಳ್ಳಿ ನಗರದ ಅಕ್ಕನ ಬಳಗದಲ್ಲಿ ನಡೆಯುವ ರಾಜ್ಯ ಮಟ್ಟದ ಹೋರಾಟ ಜಾಗೃತಿ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗಿಯಾಗಲಿದ್ದು, ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟ, ಹಡಪದ, ಗಂಗಾಮತ, ವಿಶ್ವಕರ್ಮ, ಮಡಿವಾಳ, ಚಿತ್ರಗಾರ, ಎಸ್.ಎಸ್.ಕೆ, ಮರಾಠ, ಗಾಣಿಗ, ಸಮಾಜ, ರಜಕ, ಉಪ್ಪಾರ, ಸೂರ್ಯವಂಶ ಸಮಾಜದ ಮುಖಂಡರು ಕೂಡ ಭಾಗಿಯಾಗಲಿದ್ದಾರೆ. ಪಂಚಮಸಾಲಿ ಸಮುದಾಯವು 2 ಎ ಮೀಸಲಾತಿ ಸಿಗದೆ ಹೋದರೆ ನವೆಂಬರ್ ಮೊದಲನೆಯ ವಾರದಲ್ಲಿ ವಿಧಾನಸಭೆ ಮುತ್ತಿಗೆ ಹಾಕಲಾಗುತ್ತದೆ, ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರಕ್ಕೆ ಸಮುದಾಯದ ಶಕ್ತಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ನಡುವೆ ಯಾವುದೇ ಕಾರಣಕ್ಕೂ ಪಂಚಮಸಾಲಿ ಸಮುದಾಯಕ್ಕೆ…
ಭುವನೇಶ್ವರ್: ಹನಿಟ್ರ್ಯಾಪ್ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವ ಆರೋಪದ ಮೇಲೆ ಅರ್ಚನಾ ನಾಗ್ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್ ಬಲೆಗೆ ಕಡೆವಿರುವುದಾಗಿ ತಿಳಿದುಬಂದಿದೆ. ಈ ವಿಚಾರ ಇದೀಗ ಒಡಿಶಾ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಉಂಟು ಮಾಡಿದೆ. ಹನಿಟ್ರ್ಯಾಪ್ಗೆ ಒಳಗಾದ ಶಾಸಕರಲ್ಲಿ ಬಹುತೇಕರು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದ ಸದಸ್ಯರಾಗಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಗುಟ್ಟಾಗಿ ನಿಭಾಯಿಸಿದ ಬಗ್ಗೆ ಈ ಹಿಂದೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಅರ್ಚನಾಳನ್ನು ಬಂಧಿಸಿ ಒಂದು ವಾರ ಕಳೆದರೂ ಆಕೆಯ ವಿಚಾರಣೆಯನ್ನು ಯಾಕೆ ನಡೆಸಲಿಲ್ಲ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಅರ್ಚನಾ ಮತ್ತು ಆಕೆಯ ಪತಿ ಜಗಬಂಧು ಚಂದ್ ಅವರು ಅನೇಕ ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ಇರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೆಲವು ರಾಜಕಾರಣಿಗಳು ಅರ್ಚನಾ ಪರಿಚಯವನ್ನು ಒಪ್ಪಿಕೊಂಡರೆ, ಇನ್ನು ಕೆಲವರು ಆಕೆಯೊಂದಿಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ಅಲ್ಲದೆ, ಪೊಲೀಸರು ಸಹ ಎಲ್ಲಾ…
ಪಣಜಿ: ನಿರಂತರವಾಗಿ ಸುರಿದ ಭಾರೀ ಮಳೆಗೆ ದಕ್ಷಿಣ ಗೋವಾದ ಪ್ರಸಿದ್ಧ ದೂಧ್ ಸಾಗರ್ ಜಲಪಾತದಲ್ಲಿ ಕೇಬಲ್ ಸೇತುವೆ ಕುಸಿದು ಬಿದ್ದಿದ್ದು, 40ಕ್ಕೂ ಹೆಚ್ಚು ಪ್ರವಾಸಿಗರನ್ನ ರಕ್ಷಿಸಲಾಗಿದೆ. ಶುಕ್ರವಾರ ಸಂಜೆ ಘಟನೆ ಈ ನಡೆದಿದ್ದು, ಗೋವಾ – ಕರ್ನಾಟಕ ಗಡಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪಾತದ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ಸೇತುವೆ ಕುಸಿದಿದ್ದು, 40ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಅಪಾಯದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಕೂಡಲೇ ದೃಷ್ಟಿ ಲೈಫ್ ಸೇವರ್ಸ್ ಸಹಾಯದಿಂದ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ದೃಷ್ಟಿ ಲೈಫ್ ಸೇವರ್ಸ್ನ ಪಿಆರ್ಒ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಮೃತ ರಾಸುಗಳ ಪರಿಹಾರಕ್ಕೆ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ಸಿರವಾರ ತಾಲೂಕು ಕವಿತಾಳ ಪಟ್ಟಣದಲ್ಲಿ. ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ಹೊಲಗಳಲ್ಲಿ ನೀರು ನುಗ್ಗಿ ಹತ್ತಿ ತೊಗರಿ ಬೆಳೆ ನಾಶವಾಗಿರುತ್ತದೆ. ಮೌನೇಶ್ ತಂದೆ ಅಯ್ಯಾಳಪ್ಪ ಹಿರೇಕುರುಬರು ಇವರಿಗೆ ಸಂಬಂಧಿಸಿದ ಹೊಲದಲ್ಲಿ ಹತ್ತಿ ಹೊಲಕ್ಕೆ ನೀರು ನುಗ್ಗಿ ಬೆಳೆ ನಾಶ ಆಗುವುದಲ್ಲದೇ ಆತಂಕ ಉಂಟು ಮಾಡಿದೆ. ಎಕರೆಗೆ 15 ಸಾವಿರ ಖರ್ಚು ಮಾಡಿರುತ್ತಾರೆ. ಒಟ್ಟು 10 ಎಕರೆ ಹತ್ತಿ ಮತ್ತು ತೊಗರಿ ಹೊಲಕ್ಕೆ ನೀರು ನುಗ್ಗಿ ಇರುತ್ತದೆ ರೈತ ಆತಂಕದಲ್ಲಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪರಿಹಾರವನ್ನು ದೊರಕಿಸಿಕೊಡಬೇಕೆಂದು. ರೈತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೊಡೋ ಪಾದಯಾತ್ರೆಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ತೆರಳಿದರು. 150ಕ್ಕೂ ಹೆಚ್ಚು ವಾಹನಗಳಲ್ಲಿ ಹೊರಟ ಕಾರ್ಯಕರ್ತರಿಗೆ ಚನ್ನರಾಜ ಹಟ್ಟಿಹೊಳಿ ಮಾರ್ಗದರ್ಶನ ಮಾಡಿ, ಕಾರ್ಯಕರ್ತರ ಜೊತೆಯೇ ತೆರಳಿದರು. ಎಲ್ಲರೂ ಸಂಜೆಯ ಹೊತ್ತಿಗೆ ಬಳ್ಳಾರಿಯಲ್ಲಿ ಪಾದಯಾತ್ರೆ ಸೇರಿಕೊಂಡರು. ಪಾದಯಾತ್ರೆ ಕರ್ನಾಟಕ ಪ್ರವೇಶಿಸಿದ ದಿನದಿಂದಲೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮೀಣ ಕ್ಷೇತ್ರದ ಸಹಸ್ರಾರು ಕಾರ್ಯಕರ್ತರು ಸೇರಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy