Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಶಿವಮೊಗ್ಗ: ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡ್ತೇನೆ, ಇಲ್ಲವಾದ್ರೆ ಇಲ್ಲ ಎಂದಿದ್ದಾರೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದಾರೆ, ನೀವೂ ಕೂಡ ನಿವೃತ್ತಿ ತಗೋತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಚುನಾವಣೆಗೆ ಸ್ಪರ್ಧಿಸುವ ವಿಚಾರವನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು. ನಾನು ಮೊದಲು ಎಂಎಲ್ಎ ಆದಾಗಲೂ ನಾನೇ ಸ್ವಯಂ ಇಚ್ಛೆಯಿಂದ ಶಾಸಕನಾಗಿದ್ದಲ್ಲ. ಹಿರಿಯರೆಲ್ಲಾ ಕೂತು ನನ್ನನ್ನು ಆಯ್ಕೆ ಮಾಡಿದರು. ನಂತರ ಯುವ ಮೋರ್ಚಾ ರಾಜ್ಯಾಧ್ಯಕ್ಷ ಆಗಬೇಕು ಎಂದು ಹೇಳಿದರು. ನಾನು ಅದನ್ನೂ ನಿರ್ವಹಿಸಿದೆ. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷನಾಗಿಯೂ ಕೆಲಸ ಮಾಡಿದೆ. ನಂತರ ಅನೇಕ ಮಂತ್ರಿ ಪದವಿಗಳನ್ನ ನೋಡಿದ್ದೇನೆ, ಉಪ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಈಗಲೂ ಅಷ್ಟೇ ಪಕ್ಷ ಚುನಾವಣೆಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಇಲ್ಲದಿದ್ದರೆ ಇಲ್ಲ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾಹಿತಿ ಇಲ್ಲ,…
ಉಡುಪಿ : ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು, ಜಿಲ್ಲೆಗೆ ಆಗಮಿಸಿದ ಕುಂದಾಪುರದ ಗುರುರಾಜ ಪೂಜಾರಿ ಅವರನ್ನು ಇಂದು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧೀ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪೌರಾಯುಕ್ತ ಡಾ.ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಗುರುರಾಜ ಪೂಜಾರಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅವಧಿಯಲ್ಲಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ಪಡೆಯುವ ಮೂಲಕ ಗುರುರಾಜ ಪೂಜಾರಿ ಅವರು ಉಡುಪಿ ಜಿಲ್ಲೆಯ ಸಂಭ್ರಮವನ್ನು ಹೆಚ್ಚಿಸಿದ್ದು, ದೇಶದಲ್ಲಿ ಜಿಲ್ಲೆಯ ಹೆಸರನ್ನು ಪ್ರಖ್ಯಾತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಉನ್ನತ…
ನಾನು ಕಾಫಿ ನಾಡು ಚಂದು ಪುನೀತಣ್ಣನ್ ಶಿವಣ್ಣನ್ ಅಭಿಮಾನಿ ಅನ್ನುತ್ತಾ ಹಾಡು ಹಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಿರುವ ಕಾಫಿ ನಾಡು ಚಂದುಗೆ ಬಿಗ್ ಬಾಸ್ ಗೆ ಎಂಟ್ರಿ ಸಿಕ್ಕಿಲ್ಲ. ಸಾಕಷ್ಟು ಜನರು ಕಾಫಿನಾಡು ಚಂದು ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಅನ್ನೋ ನಿರೀಕ್ಷೆಯಿಟ್ಟಿದ್ದರು. ಆದ್ರೆ ಅವರ ನಿರೀಕ್ಷೆಗಳು ಸುಳ್ಳಾಗಿವೆ. ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ 16 ಸ್ಪರ್ಧಿಗಳಲ್ಲಿ ಕಾಫಿ ನಾಡು ಚಂದು ಕಾಣಿಸಿಕೊಳ್ಳದೆ ಇರೋದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಹಾಡು ಹಾಗೂ ಡ್ಯಾನ್ಸ್ ಮೂಲಕ ಎಲ್ಲರನ್ನು ರಂಜಿಸುತ್ತಿರುವ ಕಾಫಿನಾಡು ಚಂದುಗೆ ಬಿಗ್ ಬಾಸ್ ಪ್ರವೇಶ ಸಿಗೋದು ಖಚಿತ ಎಂದೇ ಹೇಳಲಾಗಿತ್ತು. ಸಾಮಾಜಿಕ ಜಾಲತಾಣದ ಮೂಲಕ ಅತ್ಯುತ್ತಮ ಮನರಂಜನೆ ನೀಡುತ್ತಿರುವ ಚಂದು ಬಿಗ್ ಬಾಸ್ ಗೆ ಸೂಕ್ತ ವ್ಯಕ್ತಿ. ಎಲ್ಲರೂ ಮನರಂಜನೆಯನ್ನು ಬಯಸಿ ಬಿಗ್ ಬಾಸ್ ನೋಡುತ್ತಾರೆ. ಇದೀಗ ಆಯ್ಕೆಯಾಗಿರುವ ಸ್ಪರ್ಧಿಗಳಿಗಿಂತ ಚಂದು ಅತ್ಯುತ್ತಮ ಎಂಟರ್ಟೈನರ್. ಹೀಗಾಗಿ ಕಾಫಿನಾಡು ಚಂದುಗೆ ಅವಕಾಶ ನೀಡಬೇಕಿತ್ತು ಎಂದು ಸಾಕಷ್ಟು ಜನರು…
ಕೊರಟಗೆರೆ: ತಾಲ್ಲೂಕಿನ ಚೀಲಗಾನಹಳ್ಳಿ ಗ್ರಾಮದ ಯುವಕ ಜುಲೈ 29 ರಂದು ಕಾಣೆಯಾಗಿದ್ದಾನೆ. ಗ್ರಾಮದ ಮಂಜುಳ ಶ್ರೀ ಕಂಠಯ್ಯನವರ ಮೊದಲನೇಯ ಮಗ ನಂದೀಶ್(23) ಕಾಣೆಯಾದ ಯುವಕನಾಗಿದ್ದಾನೆ. ಜುಲೈ 29 ರ ಬೆಳಿಗ್ಗೆ ಕೊರಟಗೆರೆಯಲ್ಲಿ ತನ್ನ ತಂದೆ ನಡೆಸುತ್ತಿರುವ ಟೀ ಸ್ಟಾಲ್ ಗೆ ಹೋಗುವುದಾಗಿ ಹೇಳಿ, ತನ್ನ ತಂದೆಯ ಟೀ ಸ್ಟಾಲ್ ನಲ್ಲಿ ಟೀ ಕುಡಿದಿದ್ದಾನೆ. ಬಳಿಕ ಮನೆಗೆ ಹೋಗುವುದಾಗಿ ಹೇಳಿ ಹೋದ ಯುವಕ ಸಂಜೆಯಾದರು ಮನೆಗೆ ಹೊಂದಿರುವುದಿಲ್ಲ. ನಂದೀಶ್ ರವರ ಎಡಗೈಯಲ್ಲಿ “ಅಮ್ಮ”ಎಂದು ಹಚ್ಚೆ ಗುರುತು ಇರುತ್ತದೆ. 5ಅಡಿ 6ಅಂಗುಲ ಎತ್ತರ, ಎಣ್ಣೆ ಕೆಂಪು ಬಣ್ಣ ಸಾಧಾರಣ ಮೈಕಟ್ಟು,ಮಾತು ಬರುವುದಿಲ್ಲ ಮೂಕ ಹಾಗೂ ಕಿವುಡನಾಗಿರುತ್ತಾನೆ. ಕಾಣೆಯಾದ ದಿನ ಹಳದಿ ಬಣ್ಣದ ಕೆಂಪು ಗೀರಿನ ರೇಡಿಮೇಡ್ ಶರ್ಟ್ ಸಿಮೆಂಟ್ ಬಣ್ಣದ ಬರ್ಮುಡಾ ಧರಿಸಿರುತ್ತಾನೆ. ಈತನನ್ನು ಸಾರ್ವಜನಿಕ ಸ್ಥಳದಲ್ಲಿ ಹೋಟೆಲ್ ಗಳಲ್ಲಿ ಬಸ್ ಸ್ಟ್ಯಾಂಡ್ ಗಳಲ್ಲಿ ಅಥವಾ ಯಾವುದೇ ಟೀ ಸ್ಟಾಲ್ ಅಂಗಡಿಗಳ ಮುಂದೆ ನೋಡಿದವರು ಕೆಳಗಂಡ ನಂಬರ್ ಗಳಿಗೆ ಕರೆ ಮಾಡಿ ತಿಳಿಸಬೇಕೆಂದು ಅಥವಾ…
ತಿಪಟೂರು: ಬೈಪಾಸ್ ರಸ್ತೆಯ ನೀರಿನ ಚರಂಡಿಯ ಅವ್ಯವಸ್ಥೆಯಿಂದಾಗಿ R R ಆಗ್ರೋ ಪ್ರಾಡಕ್ಟ್ಸ್ ಫ್ಯಾಕ್ಟರಿಗೆ ನೀರು ನುಗ್ಗಿದ್ದು, ಫ್ಯಾಕ್ಟರಿಯಲ್ಲಿ ತಯಾರಿಸುವ ಲಕ್ಷಾಂತರ ರೂಪಾಯಿ ಮೌಲ್ಯದ ಕಾಯಿ ಪೌಡರ್ ಹಾಳಾಗಿ ಹೋಗಿದೆ. ಘಟನೆಯಲ್ಲಿ ಫ್ಯಾಕ್ಟರಿ ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರಸ್ತೆಯಿಂದ ನೇರವಾಗಿ ಫ್ಯಾಕ್ಟರಿ ಕಡೆಗೆ ನೀರು ಹರಿದಿದ್ದು, ಪರಿಣಾಮವಾಗಿ ಫ್ಯಾಕ್ಟರಿ ಮಾಲಿಕರಿಗೆ ತೀವ್ರ ನಷ್ಟವಾಗಿದೆ. ಇಂಜಿನಿಯರ್ ಗೆ ಈ ಬಗ್ಗೆ ಅನೇಕ ಬಾರಿ ಮಾಹಿತಿ ನೀಡಿದರೂ ಅವರು ನಮ್ಮ ಮಾತಿಗೆ ಬೆಲೆ ಕೊಡದೇ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ. ರಸ್ತೆ ನೀರಿನಿಂದ ಇಲ್ಲಿನ ಸುತ್ತಮುತ್ತಲಿನ ಸಾಕಷ್ಟು ಪ್ರದೇಶಗಳ ಜನರಿಗೆ ತೊಂದರೆಯಾಗಿದ್ದು, ಯಾರ ಬಳಿ ಸಮಸ್ಯೆ ಹೇಳಬೇಕು ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸಿದ್ದಾರೆ. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪಾವಗಡ: ಬಟ್ಟೆ ಒಗೆಯಲು ಹೋಗಿದ್ದ ವೇಳೆ ಮಹಿಳೆಯೊಬ್ಬರು ನೀರುಪಾಲಾದ ಘಟನೆ ಪಾವಗಡ ತಾಲೂಕಿನ ಬ್ಯಾಡನೂರು ನೀರಿನ ಹಳ್ಳದಲ್ಲಿ ನಡೆದಿದೆ. ಇಂದು ಬೆಳಗ್ಗೆ ಬಟ್ಟೆಗಳನ್ನು ತೊಳೆಯುವ ವೇಳೆ ನೀರಿನಲ್ಲಿ ಗ್ರಾಮದ ಗೋವಿಂದಪ್ಪ ಎನ್ನುವವರ ಪತ್ನಿ 35 ವರ್ಷದ ದೇವಿರಮ್ಮ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ದೇವಿರಮ್ಮ ಅವರಿಗಾಗಿ ಇದೀಗ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ನಡೆಸುತ್ತಿದ್ದು, ಈವರೆಗೆ ಅವರ ಪತ್ತೆ ಸಾಧ್ಯವಾಗಿಲ್ಲ. ಪಾವಗಡ ತಾಲೂಕಿನ ಬ್ಯಾಡನೂರು ಗ್ರಾಮದಲ್ಲಿ ಇರುವಂತಹ ಶಂಕರಲಿಂಗನಕೆರೆ ಇತ್ತೀಚಿಗೆ ಕೋಡಿ ಬಿದ್ದಿತ್ತು. ಈ ಹಳ್ಳದ ನೀರು ಹರಿಯುವ ಸ್ಥಳದಲ್ಲಿ ದೇವಿರಮ್ಮ ಎನ್ನುವರು ಬಟ್ಟೆ ಸ್ವಚ್ಛಗೊಳಿಸಲು ಇಂದು ಬೆಳಗ್ಗೆ ತೆರಳಿದಾಗ ಈ ಘಟನೆ ಸಂಭವಿಸಿದೆ. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ತಾಲೂಕು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರ್ಗಿ: ಹುಡುಗಿಯ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಗುಂಪೊಂದು ಕಾಲೇಜು ಕ್ಯಾಂಟೀನ್ ನಲ್ಲಿ ಬಡಿದಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವರದಿ ಪ್ರಕಾರ, ಒಂದು ಗುಂಪಿನ ಯುವತಿಯನ್ನು ಮತ್ತೊಂದು ಗುಂಪಿನ ಹುಡುಗರು ಚುಡಾಯಿಸಿದ್ದೇ ಹೊಡೆದಾಟಕ್ಕೆ ಕಾರಣ ಎನ್ನಲಾಗದೆ. ವಿದ್ಯಾರ್ಥಿ ಗ್ಯಾಂಗ್ ನ ಹೊಡೆದಾಟದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೇರಳ, ಮಹಾರಾಷ್ಟ್ರ,ತೆಲಂಗಾಣ, ದೆಹಲಿ ಮೂಲದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಓದುತ್ತಿದ್ದು, ಇದೀಗ ಕಾಲೇಜ್ ನಲ್ಲಿಯೇ ಹೊಡೆದಾಡಿಕೊಂಡಿರುವ ವಿಚಾರ ಭಾರಿ ಸುದ್ದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ತಾಲೂಕಿನ ಐಡಿ ಹಳ್ಳಿ ಹೋಬಳಿಯ ಗ್ರಾಮದ ರೈತರು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಾನಾ ಸಂಕಷ್ಟಕ್ಕೊಳಗಾಗಿದ್ದು, ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟಿಸಿ, ಉಪತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಕೆರೆ ಕೋಡಿ ಹರಿದು ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಕೃಷಿ ಮಾಡಲು ಅಡ್ಡಿಯಾಗಿದೆ. ರಾಜ ಕಾಲುವೆಗಳ ದುರಸ್ತಿ ಕಾರ್ಯ ನಡೆಯದೆ ರಾಜಕಾಲುವೆಗಳು ಮುಚ್ಚಿ ಹೋಗಿರುವ ಕಾರಣ ಕೃಷಿ ಭೂಮಿಯ ಮೇಲೆ ಕೆರೆ ಕೋಡಿ ಹರಿದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ನೀರು ಹರಿದ ಪರಿಣಾಮ ಸ್ಮಶಾನದಲ್ಲಿದ್ದ ಶವಗಳು ನೀರಿನಲ್ಲಿ ತೇಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಶಾನ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ರೈತ ಹೋರಾಟಗಾರರು, ಪ್ರಗತಿಪರರು ಹಾಗೂ ವಿವಿಧ ಸಂಘಟನೆಗಳ ಹೋರಾಟಗಾರರು ಭಾಗವಹಿಸಿದ್ದರು. ಉಪತಹಶೀಲ್ದಾರ್ ಇನಾಯತ ಉಲ್ಲಾ ಅವರಿಗೆ ಮನವಿ ಸಲ್ಲಿಸಿದರು. R I ನಾರಾಯಣಪ್ಪ, ರೇಖಾ, ಪಲ್ಲವಿ, ಅಶೋಕ್ ರೆಡ್ಡಿ, ಬಾಲಕೃಷ್ಣ, ನರಸಿಂಹರೆಡ್ಡಿ, ಕೃಷ್ಣಾರೆಡ್ಡಿ, ನರೇಂದ್ರ, ಜನಾರ್ಧನ್ ರೆಡ್ಡಿ,…
ದಾವಣಗೆರೆ: ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು ವೀಕೆಂಡ್ ಪಾರ್ಟಿಯಲ್ಲಿ ತೊಡಗಿದ್ದ ಯುವಕ-ಯುವತಿಯರಿಗೆ ಶಾಕ್ ನೀಡಿದ ಘಟನೆ ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಇಲ್ಲಿನ ದಿ ಸ್ಟೇಜ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆನ್ನಾಲಾಗಿದೆ. ವರದಿಗಳ ಪ್ರಕಾರ, ದಿ ಸ್ಟೇಜ್ ಹೋಟೆಲ್ ನಲ್ಲಿ ವೀಕೆಂಡ್ ನಲ್ಲಿ ಶುಕ್ರವಾರ ರಾತ್ರಿಯಿಂದ ಭಾನುವಾರದ ವರೆಗೂ ಪ್ರತಿವಾರ ಡ್ರಿಂಕ್ಸ್ ಪಾರ್ಟಿ ನಡೆಯುತ್ತದೆ, ಕಪಲ್ಸ್ ಗಳಿಗೆ ಮಾತ್ರ ಹೋಟೆಲ್ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಪಾರ್ಟಿಯಲ್ಲಿ ಡಿಜೆ ಸಾಂಗ್, ಡ್ರಿಂಕ್ಸ್ ಜತೆ ಮಾದಕ ವಸ್ತು ಸೇವನೆ ಕೂಡ ಮಾಡಲಾಗುತ್ತಿದೆ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆನ್ನಲಾಗಿದ್ದು, ಘಟನೆಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಹುಟ್ಟು ಹಬ್ಬ ಆಚರಣೆ ಮಾಡಿ ಎಂದು ಸಿದ್ದರಾಮಯ್ಯನವರು ಯಾರಿಗೂ ಹೇಳಿಲ್ಲ. ಅವರು ಯಾವ ವರ್ಷನೂ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡವರಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಬ್ಬ ಮಾಸ್ ಲೀಡರ್. 40 ವರ್ಷದ ರಾಜಕೀಯದಲ್ಲಿ ಇರುವುದರಿಂದ ಸ್ವಾಭಾವಿಕವಾಗಿ ಪ್ರೀತಿ ವಿಶ್ವಾಸದಿಂದ ಮಾಡಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಇದೊಂದು ಒಳ್ಳೆಯ ಅವಕಾಶ. ಇದರಿಂದ ನಮ್ಮ ಪಕ್ಷಕ್ಕೆ ಒಂದು ರೀತಿಯ ಬೆಂಬಲ ಸಿಕ್ಕಿದೆ ಎಂದು ಅವರು ಸಿದ್ದರಾಮೋತ್ಸವದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ರೇಡ್ ವಿಚಾರವಾಗಿ ಮಾತನಾಡಿದ ಅವರು, ಎಸಿಬಿಯವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ, ಪುನಃ ಪುನಃ ಮಾಹಿತಿ ಪಡೆಯಲು ರೇಡ್ ಮಾಡುತ್ತಿರಬಹುದು. ಈ ಬಗ್ಗೆ ನಮ್ಮ ಪಕ್ಷದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡಿದ್ದಾರೆ ಎಂದರು. ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು…