Subscribe to Updates
Get the latest creative news from FooBar about art, design and business.
- ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
- ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
- ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
- ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
- ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್ ಗಳ ಕ್ಯೂ!
- ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
- ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
Author: admin
ಮಧುಗಿರಿ : ತಾಲ್ಲೂಕು ವ್ಯಾಪ್ತಿಯ ಕಂಬತ್ತನಹಳ್ಳಿ ಬೈಪಾಸ್ ಹೊರ ವಲಯದ ಹೆದ್ದಾರಿ ಪಕ್ಕದ ಸರ್ಕಾರಿ ಜಾಗದಲ್ಲಿ ಸುಮಾರು ಮೂರ್ನಾಲ್ಕು ಲಾರಿ ಲೋಡ್ ಗಳಷ್ಟು ಅಕ್ರಮ ಮರಳು ಶೇಖರಣೆ ಮಾಡಿರುವ ಸ್ಥಳ ನೆನ್ನೆ ಕಂಡುಬಂದಿದೆ. ಮಧುಗಿರಿ ಉಪ ವಿಭಾಗದ ಮರಳು ಸಮಿತಿ ಸದಸ್ಯರ ಗಮನಕ್ಕೆ ಸ್ಥಳೀಯರು ಈ ವಿಚಾರವನ್ನು ತಿಳಿಸಿದಾಗ, ಖುದ್ದು ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಹಾಗೂ ಮಧುಗಿರಿ ಉಪ ವಿಭಾಗದ ಮರಳು ಸಮಿತಿ ಸದಸ್ಯರಾದ ಹಂದ್ರಾಳ ನಾಗಭೂಷಣ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. ಇದೇ ವೇಳೆ ಸ್ಥಳದಿಂದಲೇ ತಹಶೀಲ್ದಾರ್ ಮತ್ತು ಉಪ ವಿಭಾಗ ಅಧಿಕಾರಿಗಳ, ಅಪಾರ ಜಿಲ್ಲಾಧಿಕಾರಿಗಳ,ಡಿವೈಎಸ್ಪಿ, ಗಮನಕ್ಕೆ ವಿಷಯವನ್ನು ನಾಗಭೂಷಣ್ ತಿಳಿಸಿದ್ದಾರೆ. ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇವರೆಲ್ಲರೂ ಜಂಟಿ ಸಮೀಕ್ಷೆ ನಡೆಸಿದ್ದಾರೆ. ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರಿಂದ ಅಕ್ರಮ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿಸಿ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಸದರಿ ಮರಳನ್ನು ನಿಯಮಾನುಸಾರ ಸೂಕ್ತ…
ಬೆಂಗಳೂರು: 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರವಾಗಿ ರಾಜ್ಯ ಸರ್ಕಾರ 124 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕಂದಾಯ ಇಲಾಖೆ ಮೂಲಕ ಜಿಲ್ಲಾಧಿಕಾರಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಹೀಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮಗೆ ಆದರ್ಶ ಹಾಗೂ ಪ್ರೇರಣೆ. ನಮ್ಮ ತೀರ್ಮಾನಗಳಿಗೆ ಈ ಮಹನೀಯರ ಬದುಕು, ವಿಚಾರಧಾರೆಯನ್ನು ಕೇಳಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಾಗಸೇನಾ ವಿದ್ಯಾಲಯದಲ್ಲಿ ಬುದ್ಧ, ಅಂಬೇಡ್ಕರ್ ಮಂಟಪ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದರಿಂದ ಅವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಡದವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಟ್ಟವರು ಕಾಲಸೀಮಿತವಾಗಿರುತ್ತಾರೆ ಎಂದರು. ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನ: ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನವನ್ನು ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು ನಾನು ಒಬ್ಬ ಅಂಬೇಡ್ಕರ್, ಬುದ್ದ, ಬಸವ, ವಾಲ್ಮೀಕಿ ಭಕ್ತ. ಅಂಬೇಡ್ಕರ್ ಅವರ ಇಚ್ಛೆಯಂತೆ ಸಂಸ್ಥೆ ಬೆಳೆದಿದೆ. ಇದು ಇನ್ನಷ್ಟು ಬೆಳೆಯಬೇಕು. ಇಲ್ಲಿ ಪ್ರಸ್ತಾಪಿಸಿರುವ 2-3 ವಿಚಾರಗಳಿಗೆ ಸಂಪೂರ್ಣ ಸಹಮತ ಮತ್ತು ಬೆಂಬಲ ನೀಡಲಾಗುವುದು ಸಂಸ್ಥೆಗೆ ಅಗತ್ಯವಿರುವ ಅನುದಾನವನ್ನು ಮುಂದಿನ ವರ್ಷ ಪಿಯುಸಿ ಅದರ…
ಬೆಂಗಳೂರು : ರಾಜ್ಯ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರೇತರದ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗ ಹಸ್ತಾಂತರಿಸಿದರು. ರಾಜ್ಯ ಸರ್ಕಾರಿ ನೌಕರರು ಮತ್ತು ಸರ್ಕಾರದ ಇತರ ಸಂಸ್ಥೆಗಳ ನೌಕರರು ಸ್ವ-ಇಚ್ಛೆಯಿಂದ ದೇಣಿಗೆ ನೀಡಲು ಮುಂದಾಗಿದ್ದು, ಗ್ರೂಪ್ ಎ ಅಧಿಕಾರಿಗಳು 11,000 ರೂ., ಗ್ರೂಪ್ ಬಿ ಅಧಿಕಾರಿಗಳು 4000 ರೂ. ಹಾಗೂ ಸಿ ವೃಂದದ ನೌಕರರು 400 ರೂ. ದೇಣಿಗೆಯನ್ನು ಒಂದು ಬಾರಿಗೆ ಪಾವತಿಸಲು ಸಮ್ಮತಿಸಿದ್ದಾರೆ. ಇದನ್ನು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ವೇತನದಲ್ಲಿ ತೆಗೆದುಕೊಳ್ಳಲು ಕೋರಿದ್ದಾರೆ. ಈ ಮೊತ್ತವು ಸುಮಾರು 80 ರಿಂದ 100 ಕೋಟಿ ರೂ. ಗಳಾಗಲಿದೆ ಎಂದು ಅಂದಾಜಿಸಲಾಗಿದೆ. ನೌಕರರ ಸಂಘದ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದ ಗೋಶಾಲೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು…
ಮಧುಗಿರಿ: ಟೆಂಪೋ ಟ್ರಾವೆಲ್ಲರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತದ ಬಳಿಕ ಟೆಂಪೋ ಟ್ರಾವೆಲರ್ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆಯ ಸಮೀಪವಿರುವ ಸಾಲು ಮರದ ತಿಮ್ಮಕ್ಕನ ಉದ್ಯಾವನದ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಪಟ್ಟಣದ ಲಿಂಗೇನಹಳ್ಳಿ ವಾಸಿಗಳಾದ ಆಟೋಚಾಲಕ ಮನ್ಸೂರ್ ಪಾಷಾ (30) ಹೆಂಡತಿ ನಗ್ಮಾ (26) ಬೆನ್ನುಮೂಳೆ ಮುರಿತವಾಗಿದ್ದು, ಪತಿಗೆ ಗಂಭೀರ ಗಾಯವಾಗಿದೆ. ಮಕ್ಕಳಾದ ಜೋಯ (4)ಗೆ ತಲೆಗೆ ಪೆಟ್ಟುಬಿದ್ದಿದೆ, ಅಯಾನ್ (3)ಗೆ ಕಾಲು ಮುರಿತವಾಗಿದೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದಾರೆ. ವರದಿ: ಅಬಿದ್ ಮಧುಗಿರಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಮಹಿಳೆಯ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ ಕಸಬಾ ಸಿದ್ದಾಪುರ ಕೆರೆ ಎಸೆದಿರುವ ಘಟನೆ ನಡೆದಿದ್ದು, ಬೇರೆ ಯಾವುದೋ ಪ್ರದೇಶದಲ್ಲಿ ಹತ್ಯೆ ಮಾಡಿ ಇಲ್ಲಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಎಸೆದು ನಾಲ್ಕೈದು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಚೀಲದಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರು ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 35ರಿಂದ 45 ವರ್ಷದ ಮಹಿಳೆಯ ಮೃತದೇಹ ಇದಾಗಿದ್ದು, ಹತ್ಯೆ ಮಾಡಿದ ಬಳಿಕ ಚೀಲಕ್ಕೆ ತುಂಬಿ ಕೆರೆಗೆ ಎಸೆದು ಹೋಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಕೆರೆಯಿಂದ ಮೇಲೆತ್ತಲಾಗಿದೆ. ಆದರೆ, ಮಹಿಳೆಯ ಗುರುತುಪತ್ತೆ ಸಾಧ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ : ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ಯೂಷನ್ ಮಾಸ್ಟರ್ ಕಾಂತರಾಜುನೇ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತಾಗಿದೆ. ಟ್ಯೂಷನ್ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಈ ವಿಚಾರ ಬಾಲಕಿಯ ಮನೆಗೆ ತಿಳಿದರೆ ಪರಿಸ್ಥಿತಿ ಬೇರೆಯದ್ದೇ ಆಗುತ್ತದೆ ಎಂಬ ಭಯದಿಂದ ಬಾಲಕಿಯ ತಲೆಗೆ ರಾಡ್ ನಿಂದ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿರುವುದು ಸಾಬೀತಾಗಿದೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿಕೊಟ್ಟಿದ್ಧ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇದೀಗ ವರದಿ ಪೊಲೀಸರ ಕೈ ಸೇರಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿ ಆಧಾರದ ಮೇಲೆ ನ್ಯಾಯಾಲಯ ಅನುಮತಿ ಪಡೆದು…
ಬೆಂಗಳೂರು; ಪ್ರೀತಿ ಹೆಸರಲ್ಲಿ ಯುವತಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನ ಯಶವಂತಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಮೋಹಿನ್ ಬಂಧಿತ ಆರೋಪಿ. ಸೈಯದ್ ಮೋಹಿನ್ ವಿರುದ್ಧ ಮತಾಂತರ ನಿಷೇಧ ಕಾಯ್ದೆ 5ರಡಿ ಪ್ರಕರಣ ದಾಖಲಾಗಿದೆ. ಪ್ರೀತಿ ಹೆಸರಲ್ಲಿ ಯುವತಿಯನ್ನ ಮತಾಂತರ ಮಾಡಿದ್ಧ ಆರೋಪ ಸೈಯದ್ ಮೋಹಿನ್ ವಿರುದ್ಧ ಕೇಳಿಬಂದಿದ್ದು, ಮತಾಂತರ ಆದರೆ ಮದುವೆಯಾಗುವುದಾಗಿ ಸೈಯದ್ ಮೋಹಿನ್ ಯುವತಿಗೆ ಹೇಳಿದ್ದ ಎನ್ನಲಾಗಿದೆ. ಈ ನಡುವೆ ಆಕ್ಟೋಬರ್ 5 ರಂದು ಯುವತಿ ಯುವತಿ ಮನೆಯಿಂದ ನಾಪತ್ತೆಯಾಗಿದ್ದು, ಯುವತಿ ಕಾಣಿಯಾದ ಬಗ್ಗೆ ಆಕೆಯ ಪೋಷಕರು ದೂರು ನೀಡಿದ್ದರು. ಯಶವಂತಪುರ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು. ನಿನ್ನೆ ಯುವತಿ ಪೋಷಕರು ಮತಾಂತರ ಎಂದು ದೂರು ನೀಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನನ್ನ ಅವಧಿಯ ಸೋಲಾರ್ ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ. ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಬಸವರಾಜ ಬೊಮ್ಮಾಯಿ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನ ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತಾನಾಡಿದ ಡಿ.ಕೆ ಶಿವಕುಮಾರ್, ನನ್ನ ವಿರುದ್ಧ ಸೋಲಾರ್ ಹಗರಣ ಆರೋಪ ಮಾಡಿದ್ದಾರೆ. ಈಗ ಬಿಜೆಪಿ ಸರ್ಕಾರ ಇದೆ. ಸಿಎಂ ಯಾಕೆ ಸುಮ್ಮನಿದ್ದಾರೆ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಲಿ ಎಂದು ಸವಾಲು ಹಾಕಿದರು. ನಾಳೆ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ನಾಳೆ 1 ಗಂಟೆಗೆ ರಾಹುಲ್ ಗಾಂಧಿ ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ. ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಭಾಗಿಯಾಗಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಇದೀಗ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಲಕ್ಕಪ್ಪ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಲಕ್ಕಪ್ಪ ಬ್ಲೂಟೂತ್ ಹೆಡ್ ಫೋನ್ ಬಳಸಿ ಪರೀಕ್ಷೆ ಬರೆದಿದ್ದನು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಈತನ ಹೆಸರಿತ್ತು ಎನ್ನಲಾಗಿದೆ. ಸದ್ಯ, ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ 13 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ತನಿಖೆಯನ್ನು ಮುಂದುವರೆಸಿರುವಂತ ಸಿಐಡಿ ಹಲವರ ಬಂಧನಕ್ಕೂ ಬಲೆ ಬೀಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy