Author: admin

ಪೋಷಕರ ಜತೆ ಸೇರಿ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ‘ಅನುಭವʼ ಚಿತ್ರದ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ. ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿ ಜೈಲು ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಒಳ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವನ್ನ ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿದ್ದು ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಉಪಸಮಿತಿ ರಚನೆ ಕೇವಲ ಕಣ್ಣೊರೆಸುವ ತಂತ್ರ. ಸದಾಶಿವ ಆಯೋಗ ವರದಿ ಮಂಡನೆಯಾಗಿಲ್ಲ. ಅಸೆಂಬ್ಲಿಯಲ್ಲಿ ವರದಿ ಚರ್ಚೆಯೂ ಆಗಿಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಕೇವಲ ಕಣ್ಣೊರೆಸುವ ತಂತ್ರ ಬೇಡ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ನ (ಬಿಎಸ್‌ಸಿಎಲ್) ಮಹತ್ವಾಕಾಂಕ್ಷಿ ವರ್ಚ್ಯುವಲ್ ಸ್ಮಾರ್ಟ್ ಕ್ಲಿನಿಕ್ (ವಿಎಸ್‌ಸಿ) ಕೇಂದ್ರಗಳ ಯೋಜನೆ ಹೊಸ ವರ್ಷದಿಂದ ಕಾರ್ಯಾರಂಭಗೊಳ್ಳಲಿದೆ. ಬಿಎಸ್‌ಸಿಎಲ್ ಅಧಿಕಾರಿಗಳ ಪ್ರಕಾರ ಈ ಯೋಜನೆಯಡಿ ಒಟ್ಟು ೨೭ ಕೇಂದ್ರಗಳ ಪೈಕಿ ೨೬ ಕೇಂದ್ರಗಳ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿದ್ದು, ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿ ಪ್ರಾಯೋಗಿಕವಾಗಿ ಕಾರ್ಯಾಚರಣೆ ಆರಂಭಿಸಲು ಸಿದ್ಧವಾಗಿದೆ. ಗುಟ್ಟಹಳ್ಳಿಯಲ್ಲಿನ ಪ್ರಾಯೋಗಿಕ ಕೇಂದ್ರದ ಕಾಮಗಾರಿಗಳು ಪೂರ್ಣಗೊಂಡಿದ್ದು, ಕಾರ್ಯಾರಂಭಗೊಳ್ಳಲು ಸಿದ್ಧವಾಗಿದೆ. ಸದಾಶಿವನಗರದಲ್ಲಿರುವ ಜನತಾ ಬಜಾರ್‌ ನಲ್ಲಿ ಸ್ಥಾಪಿಸಿರುವ ಸೆಂಟ್ರಲ್ ಕ್ಲಿನಿಕಲ್ ಕಮಾಂಡ್ ಸೆಂಟರ್ (ಸಿಸಿಸಿಸಿ) ಪೂರ್ಣಗೊಳ್ಳುವುದಕ್ಕಾಗಿ ನಾವು ಕಾಯುತ್ತಿದ್ದೇವೆ. ಅದು ಡಿಸೆಂಬರ್ ೨೦೨೨ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ,” ಎಂದು ಬಿಎಸ್ ಸಿಎಲ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ ಅವರು ತಿಳಿಸಿದ್ದಾರೆ. ಈ ಸ್ಮಾರ್ಟ್ ವರ್ಚ್ಯುವಲ್ ಕ್ಲಿನಿಕ್‌ ಗಳನ್ನು ಬೆಂಗಳೂರು ನಗರದಾದ್ಯಂತ ಇರುವ ೨೭ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತಿವೆ. ಸಿಸಿಸಿ ಕೇಂದ್ರದಲ್ಲಿ ಒಂಬತ್ತು ವಿಶೇಷ ತಜ್ಞ ವೈದ್ಯರ ಸೇವೆಗಳನ್ನು ಲಭ್ಯಗೊಳಿಸಲಾಗುತ್ತದೆ. ಇವರನ್ನು ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ…

Read More

ಸಾಮಾನ್ಯವಾಗಿ, ಗರ್ಭಾವಸ್ಥೆಯಲ್ಲಿ ಆಹಾರವನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಮಹಿಳೆಯರು ತುಂಬಾ ಗೊಂದಲಕ್ಕೊಳಗಾಗುತ್ತಾರೆ. ಯಾವ ಆಹಾರ ಸೇವಿಸಬೇಕು, ಯಾವ ಆಹಾರ ಸೇವಿಸಬಾರದು ಎಂಬ ಪ್ರಶ್ನೆಗಳು ಸಾಮಾನ್ಯ. ಈ ಪ್ರಶ್ನೆಗಳಿಗೆ ಉತ್ತರವೇ ಈ ಪೋಸ್ಟ್. ಈ ಕೆಳಗೆ ನೀಡಿರುವ ಆಹಾರಗಳನ್ನು ಹೆಚ್ಚು ಸೇವಿಸುವುದರಿಂದ ಮಗುವಿಗೆ ಬೇಕಾದ ಆರೋಗ್ಯವು ನಷ್ಟವಿಲ್ಲದೆ ಸಿಗುತ್ತದೆ. ಆ ರೀತಿಯಲ್ಲಿ, ಗರ್ಭಾವಸ್ಥೆಯಲ್ಲಿ, ಮಹಿಳೆಯರು ಹೆಚ್ಚು ಹಾಲು, ಕಾಳುಗಳು, ಕಬ್ಬು, ಸಾಲ್ಮನ್, ಮೊಟ್ಟೆ, ಕೋಸುಗಡ್ಡೆ ಮತ್ತು ಹಸಿರು ಎಲೆಗಳು, ಹಣ್ಣುಗಳು, ಧಾನ್ಯಗಳು, ಆವಕಾಡೊ, ಒಣ ಹಣ್ಣುಗಳನ್ನು ತಿನ್ನಬೇಕು. ಬೇಯಿಸದ ಹಸಿರು ತರಕಾರಿ, ಬಿಸಿಯಾದ ಹಾಲು, ಯಕೃತ್ತು, ಆಲ್ಕೊಹಾಲ್ಯುಕ್ತ ಪಾನೀಯಗಳು, ಕಾಫಿ, ಚಹಾವನ್ನು ಸಂಪೂರ್ಣವಾಗಿ ತ್ಯಜಿಸಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಮ್ಮ ಸಂಸತ್ತಿನಲ್ಲಿ ಟೀ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ? ಅಸ್ಸಾಂನ ಬಿಜೆಪಿ ಸಂಸದೆ ಪವಿತ್ರಾ ಮಾರ್ಗರೆಥಾ ಅವರು ಸಂಸತ್ತಿನ ಅಧಿವೇಶನದಲ್ಲಿ ಚಹಾವನ್ನು ರಾಷ್ಟ್ರೀಯ ಪಾನೀಯವೆಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೇಳಿದರು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್‌ನಿಂದ ಈಶಾನ್ಯದವರೆಗೆ, ಪ್ರತಿ ಮನೆಯ ಅಡುಗೆಮನೆಯಲ್ಲಿ ಚಹಾ ಲಭ್ಯವಿದೆ. ದೇಶಾದ್ಯಂತ ಜನರು ಚಹಾದೊಂದಿಗೆ ತಮ್ಮ ದೈನಂದಿನ ದಿನಚರಿಯನ್ನು ಪ್ರಾರಂಭಿಸುತ್ತಾರೆ. ಹೀಗಾಗಿ ಚಹಾವನ್ನು ರಾಷ್ಟ್ರೀಯ ಪಾನೀಯ ಎಂದು ಘೋಷಿಸಬೇಕು,” ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನ್ಯೂಜಿಲೆಂಡ್ ಸರ್ಕಾರವು ತನ್ನ ನಾಗರಿಕರಲ್ಲಿ ಧೂಮಪಾನವನ್ನು ಕಡಿಮೆ ಮಾಡಲು 2025 ರ ವೇಳೆಗೆ ನ್ಯೂಜಿಲೆಂಡ್ ಅನ್ನು ಧೂಮಪಾನ ಮುಕ್ತ ದೇಶವನ್ನಾಗಿ ಮಾಡಲು ಯೋಜಿಸಿದೆ. ಅದರಂತೆ, ಯುವಕರು ಸಿಗರೇಟ್ ಕೊಳ್ಳುವುದನ್ನು ಮತ್ತು ಸಿಗರೇಟ್ ಸೇದುವುದನ್ನು ಜೀವನ ಪರ್ಯಂತ ನಿಷೇಧಿಸಿ ನ್ಯೂಜಿಲೆಂಡ್ ಸರ್ಕಾರ ಕ್ರಮದ ಆದೇಶ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಗಡಿ ವಿವಾದ ಸಂಬಂಧ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಗಡಿ ಪ್ರಕರಣ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕುರಿತಾದ ಕಾನೂನು ನಿಯಮಗಳ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಂಗಳೂರು : ಮಕ್ಕಳ ಕಲಿಕಾ ಕೊರತೆ ನೀಗಿಸಲು 2022-23 ನೇ ಸಾಲಿನಿಂದ 5 ಮತ್ತು 8 ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿ ಗಳನ್ನು ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ನು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ…

Read More

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪಿಎಂ ಪೋಷಣ್ ಯೋಜನೆಯಡಿ ಮಕ್ಕಳಿಗೆ ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಿಕ್ಷಣ ಇಲಾಖೆಯು ಹಬ್ಬ ಹರಿದಿನಗಳಲ್ಲಿ ಹಬ್ಬದೂಟ ನೀಡಲು ಸೂಚನೆ ನೀಡಿದ್ದು, ಈ ಕಾರ್ಯಕ್ರಮದಡಿ ದಾನಿಗಳು, ಟ್ರಸ್ಟ್, ಸಂಘ, ಸಂಸ್ಥೆಗಳು, ಎಸ್ ಡಿಎಂಸಿಗಳು, ಸಾರ್ವಜನಿಕರು ಸೇರಿದಂತೆ ಸಮುದಾಯದವರು ತಮ್ಮದೇ ಆರ್ಥಿಕ ಅಥವಾ ಆಹಾರ ಸಹಕಾರ, ನೆರವಿನೊಂದಿಗೆ ಮಕ್ಕಳ ಸಂಪೂರ್ಣ ವಿಶೇಷ ಭೋಜನ ವ್ಯವಸ್ಥೆ ಅಥವಾ ಬಿಸಿಯೂಟಕ್ಕೆ ಪೂರಕವಾಗಿ ಪೌಷ್ಠಿಕ ಆಹಾರ ನೀಡಲು ಮುಂದಾಗಿದೆ. ಶಾಲೆಗಳಲ್ಲಿ ವಿಶೇಷವಾಗಿ ಊರಿನ ಹಬ್ಬ, ಜಾತ್ರೆ, ತೇರು, ರಾಷ್ಟ್ರೀಯ ಹಬ್ಬಗಳು, ಜನ್ಮದಿನ, ಜಯಂತಿ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಸ್ಥಳೀಯವಾಗಿ ಸಮುದಾಯದಿಂದ ಸಾಮೂಹಿಕವಾಗಿ ಆಚರಿಸುವ ವಿಶೇಷ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಭೋಜನ, ವಿಶೇಷ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ. ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದೆ. ವಿಜಯಪುರ ಜಿಲ್ಲೆಯ ಕಪನಿಂಬರಗಿ ಜಿಎಚ್‌ಎಸ್ ಶಾಲೆಯ ಪ್ರತಾಪ್ ಸಿಂಗ್, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ. ಯೋಗೇಶ್ವರಪ್ಪ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸೋಮನಗೌಡ ಪಾಟೀಲ್ ಬಂಧಿತರಾಗಿದ್ದಾರೆ. ಸದ್ಯ ಬಂಧಿತರನ್ನು ವಿಚಾರಣೆ ನಡೆಸಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಆರೋಪಿ ಶಿಕ್ಷಕರನ್ನು ಹಾಜರುಪಡಿಸಿರುವ ಕೋರ್ಟ್ ಆದೇಶದ ಮೇರೆಗೆ ಸಿಐಡಿ ಅಧಿಕಾರಿಗಳು ಬಂಧಿತ ಶಿಕ್ಷಕರನ್ನು ಜೈಲಿಗೆ ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More