Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಹೊಸ ವರ್ಷ ಆಚರಣೆಗೆ ಆಗಮಿಸಿದ್ದ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್ ಪ್ರಸನ್ನ ಭಟ್ (26) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿತ್ತು. ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದೆ ಎಂದು ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿತ್ತು. ಸಂಸದ ರಾಘವೇಂದ್ರ ದೆಹಲಿಗೆ ತೆರಳಿದ್ದ ಹಿನ್ನೆಲೆಯಲ್ಲಿ ಪ್ರಸನ್ನ ಭಟ್ ರಜೆಯಲ್ಲಿದ್ದರು. ಭಾನುವಾರ ಸಂಜೆ ರಾಮೇಶ್ವರಕ್ಕೆ ತೆರಳಬೇಕಿದ್ದ ಅವರು ಸಮಯವಿದ್ದ ಕಾರಣ ಆರು ಮಂದಿ ಸ್ನೇಹಿತರೊಂದಿಗೆ ಬೆಳಗ್ಗೆ ಕನಕಪುರದಲ್ಲಿರುವ ಸ್ನೇಹಿತ ಕೌಶಿಕ್ ರವರ ಮನೆಗೆ ಬಂದಿದ್ದರು. ಮಾವತ್ತೂರು ಕೆರೆಯಲ್ಲಿ ಈಜಲು ಪ್ರಸನ್ನ ಮತ್ತು ಸ್ನೇಹಿತರು ನೀರಿಗೆ ಇಳಿದಿದ್ದಾರೆ. ಈಜಲು ಬಾರದ ಕಾರಣ ಕೌಶಿಕ್ ನೀರಿಗೆ ಇಳಿದಿರಲಿಲ್ಲ. ಈಜಲು ಹೋದ ಪ್ರಸನ್ನ ಭಟ್ ನೀರಿನಿಂದ ಮೇಲಕ್ಕೆ ಬರಲೇ ಇಲ್ಲ. ಇದರಿಂದ ಗಾಬರಿಗೊಂಡ ಕೌಶಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ…
ಬೆಂಗಳೂರು : ಬಾಲ್ಯ ವಿವಾಹ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯಿತಿಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಈ ವ್ಯವಸ್ಥೆಯನ್ನು ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಶಿಫಾರಸು ಮಾಡಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡ : ಕುಡಿದ ಮತ್ತಿನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದಕ್ಕೆ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಧಾರವಾಡದ ಸುಭಾಷ್ ನಗರದಲ್ಲಿ ಘಟನೆ ನಡೆದಿದೆ. ಅಷ್ಟೇ ಅಲ್ಲದೇ ಮೊಬೈಲ್ ನಂಬರ್ ಕೊಡಿ ಎಂದು ಕೇಳಿದಕ್ಕೆ ಚಪ್ಪಲಿಯಿಂದ ಮಹಿಳೆಯೇ ಥಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ https://twitter.com/KeypadGuerilla/status/1608713474615701506?t=_nCTlGTiXN5hMLE3w0h8DQ&s=19 ಪತ್ರಕರ್ತರೊಬ್ಬರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಈತನ ಅನುಚಿತ ವರ್ತನೆಗೆ ಸುತ್ತಮುತ್ತಲಿನ ಜನರೂ ಕೂಡಾ ಆತನಿಗೆ ಚಪ್ಪಲಿಯಿಂದ ಒದ್ದು ಥಳಿಸಿದ್ದಾರೆ. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು:ಅರವಿಂದ ಲಿಂಬಾವಳಿ ಸೇರಿ ಆರು ಜನರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ. 47 ವರ್ಷದ ಪ್ರದೀಪ್ ಕಾರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ಎಸ್ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್ , ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ಅವರು ಹಲವು ವಿಷಯ ಪ್ರಸ್ತಾಪಿಸಿದ್ದು, ಆರು ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿದೆ. ಹೆಸರುಗಳ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ವಿಜಯಪುರ: ಆನಾರೋಗ್ಯದಿಂದ ಬಳಲುತ್ತಿರುವ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ ಮಠದಲ್ಲಿಯೇ ಚಿಕಿತ್ಸೆ ಮುಂದುವರೆದಿದ್ದು, ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ನಾಡಿನ ಗಣ್ಯರು, ಮಠಾಧೀಶರು ಹಾಗೂ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡತೊಡಗಿದ್ದಾರೆ. ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವೈ.ಎನ್.ಹೊಸಕೋಟೆ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಭಾನುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಉಮಾಕಾಂತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿ ಅವರು ಹಲವಾರು ದೇವರ ಮೂರ್ತಿಗಳು ಮತ್ತು ಶಿಲ್ಪಗಳನ್ನು ಕೆತ್ತನೆ ಮಾಡಿದ್ದಾರೆ. ಇಂತಹ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಶಿಲ್ಪ ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಇಂತಹ ಕಲೆ ಉಳಿಸಿ ಬೆಳಿಸಿದಾಗ ಮಾತ್ರ ಜಕಣಾಚಾರಿ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಆದಿ ನಾರಾಯಣಾಚಾರಿ, ನಿರ್ದೇಶಕರಾದ ಶಿವಶಂಕರಾಚಾರಿ, ಸತ್ಯನಾರಾಯಣಾಚಾರಿ, ಕೌಶಿಕ್ ಹಾಜರಿದ್ದರು. ವರದಿ: ನಂದೀಶ್ ನಾಯ್ಕ್, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾರವಾರ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್ ಶೇಖರನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತರು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ. ಗೋವಾದಲ್ಲಿ ಪಾರ್ಟಿ ಮುಗಿಸಿಕೊಂಡು ಅಂಕೋಲ ಭಾಗದಿಂದ ಯಲ್ಲಾಪುರ ಕಡೆಗೆ ಕಾರು ತೆರಳುತ್ತಿದ್ದು, ಈ ವೇಳೆ ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಮುಖಾಮುಖಿ ಡಿಕ್ಕಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಜೌರಿ: ನಂತರ ಶಂಕಿತ ಉಗ್ರರ ಗುಂಡಿನ ದಾಳಿಯ ಪರಿಣಾಮ ಮೂವರು ನಾಗರಿಕರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಇಲ್ಲಿನ ಡ್ಯಾಂಗ್ರಿ ಗ್ರಾಮದಲ್ಲಿ ಇಬ್ಬರು ಶಂಕಿತ ಉಗ್ರರು ಗ್ರಾಮಸ್ಥರ ಮನೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಮೂರು ಮನೆಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, 8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಜೌರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕರೆದೊಯ್ಯುಲಾಗಿದೆ. ಕಳೆದ ಎರಡು ವಾರಗಳಲ್ಲಿ ರಜೌರಿ ಜಿಲ್ಲೆಯಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಡಿಸೆಂಬರ್ 16 ರಂದು ಸೇನಾ ಶಿಬಿರ ಹೊರಗಡೆ ನಡೆದ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರ ಹೊಸ ಪಕ್ಷ ‘ಕಲ್ಯಾಣ ರಾಜ್ಯ ಪ್ರಗತಿ’(ಕೆಆರ್ ಪಿ) ಇತ್ತೀಚೆಗೆ ಘೋಷಣೆಯಾಗಿತ್ತು. ಇದೀಗ ಪಕ್ಷದ ಬಾವುಟವನ್ನು ಅಧಿಕೃತವಾಗಿ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಬಿಡುಗಡೆಗೊಳಿಸಿದ್ದಾರೆ. ಬೆಣಕಲ್ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅರುಣಾ ಲಕ್ಷ್ಮೀ ಪಕ್ಷದ ಬಾವುಟವನ್ನು ಬಿಡುಗಡೆ ಮಾಡಿದರು. ಹಸ್ತಲಾಘವ ಹೊಂದಿರುವ ಸಹಕಾರ ಮಾದರಿಯ ಚಿಹ್ನೆಯನ್ನು ಬಾವುಟದಲ್ಲಿ ಬಳಕೆ ಮಾಡಲಾಗಿದೆ. ಬಾವುಟ ಬಿಡುಗಡೆಯ ಬಳಿಕ ಮಾತನಾಡಿದ ಅರುಣಾ ಲಕ್ಷ್ಮೀ, ಇಡೀ ರಾಜ್ಯ ಕಲ್ಯಾಣ ಕರ್ನಾಟಕ ಆಗಬೇಕೆಂಬುದು ಜನಾರ್ದನ್ ರೆಡ್ಡಿಯವರ ಬಯಕೆಯಾಗಿದೆ. ತಾವು ಹುಟ್ಟಿ ಬೆಳೆದ ಬಳ್ಳಾರಿ ಪ್ರಚಂಚದ ಭೂಪಟದಲ್ಲಿ ಕಾಣಬೇಕು. ಅವರ ಆಶಯದಂತೆ ಕೆಲಸ ಮಾಡುವುದು ನನ್ನ ಜವಾಬ್ದಾರಿ ಆಗಿದೆ ಎಂದರು. ಜನಾರ್ದನ್ ರೆಡ್ಡಿ ಅವರಿಗೆ ಕೋರ್ಟ್ ನಿರ್ಬಂಧ ಇರುವುದರಿಂದ ನಾನು ಬೆಣಕಲ್ ಗ್ರಾಮಕ್ಕೆ ಬಂದಿದ್ದೇನೆ. ಕುರುಬ ಸಮಾಜದ ಜನರ ಆಶೀರ್ವಾದ ನಮ್ಮ ಮೇಲಿದ್ದರೆ ಚುನಾವಣೆ ಗೆದ್ದೇ ಗೆಲ್ಲುತ್ತೇವೆ ಎಂಬುದು ನನ್ನ ಪತಿಯ ನಂಬಿಕೆ ಆಗಿದೆ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ತುರುವೇಕೆರೆ: ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಎ ವಿ ಎಸ್ ಎಸ್ ಕಚೇರಿಯಲ್ಲಿ ಛಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿಯ ವತಿಯಿಂದ ಭೀಮ ಕೊರೆಗಾಂವ್ ವಿಜಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭೀಮ ಕೊರೆಗಾಂವ್ ಸ್ಮಾರಕದ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಿ ಚಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ತಮ್ಮ ಪೂರ್ವಜರನ್ನು ಸ್ಮರಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಚಲವಾದಿ ಮಹಾಸಭಾ ಅಧ್ಯಕ್ಷರಾದ ಡೊಂಕಿಹಳ್ಳಿ ರಾಮಣ್ಣ, ಪೇಶ್ವೆಗಳ ವಿರುದ್ಧ ಶೋಷಿತ ಮಹರ್ ಸೈನಿಕರು ಹೋರಾಡಿ ಗೆದ್ದ ದಿನವನ್ನು ಭೀಮ ಕೊರೆಗಾಂವ್ ವಿಜಯೋತ್ಸವ ಎಂಬುದಾಗಿ ಆಚರಣೆ ಮಾಡುತ್ತಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇದನ್ನು ಆಚರಣೆಗೆ ತಂದಿದ್ದರು ಎಂದರು. ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾದ ಕುಣಿಕೇನಹಳ್ಳಿ ಜಗದೀಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಡಗಿಹಳ್ಳಿ ಹನುಮಂತಯ್ಯ, ಬೀಚನಹಳ್ಳಿ ಸೀನಪ್ಪ, ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ಸೋಮೇನಹಳ್ಳಿ ಜಗದೀಶ್, ಪುರರಾಮಚಂದ್ರ,…