Author: admin

ಬೆಂಗಳೂರು : ರಾಜ್ಯದಲ್ಲಿ ಚರ್ಮಗಂಟು ರೋಗ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಜಾನುವಾರು ಸಂತೆ ‌ಮತ್ತು ಸಾಗಾಣಿಕೆಯನ್ನು ನಿಷೇಧಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ಚರ್ಮಗಂಟು ರೋಗದ ಕುರಿತು ಮುಂಜಾಗ್ರತಾ ಕ್ರಮವಾಗಿ ಕರಪತ್ರಗಳು, ಪೋಸ್ಟರ್, ಪಶುಸಂಗೋಪನೆ ಇಲಾಖಾ ಅಧಿಕಾರಿಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ‌ಹೇಳಿದರು. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ, ಉಣ್ಣೆ, ಕಚ್ಚುವ ನೊಣಗಳು, ವೈರಾಣುಗಳಿಂದ ಜಾನುವಾರುಗಳಿಗೆ ಹರಡುತ್ತದೆ. ರೋಗ ಕಾಣಿಸಿಕೊಂಡ ಪ್ರದೇಶ ಹಾಗೂ ಸುತ್ತಮುತ್ತಲಿನ 5 ಕಿ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಲಸಿಕೆ ನೀಡಲಾಗುತ್ತಿದೆ. ರೋಗಪೀಡಿತ ರಾಸುಗಳಿಂದ ಆರೋಗ್ಯವಂತ ರಾಸುಗಳನ್ನು ಬೇರ್ಪಡಿಸಿ, ಕೂಡಲೇ ಸ್ಥಳೀಯ ಪಶು ವೈದ್ಯರು ಸಂಪರ್ಕಿಸಿ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಯುವತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತ ಯುವತಿ. ಬೆಂಗಳೂರಿನಲ್ಲಿ ಕಾಲ್ ಸೆಂಟರ್ನಲ್ಲಿ ತಬಸ್ಸುಮ್ ಕೆಲಸ ಮಾಡುತ್ತಿದ್ದಳು. ನಿನ್ನೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ಅಪರಿಚಿತ ಯುವಕ ದಾಖಲಿಸಿದ್ದ. ಈ ಬಗ್ಗೆ ದೂರು ನೀಡಿ ಎಂದಿದ್ದಕ್ಕೆ ಯುವತಿಯ ಮೊಬೈಲ್ ​ನೊಂದಿಗೆ ಯುವಕ ಪರಾರಿಯಾಗಿದ್ದಾನೆ. ಪೋಷಕರು ಆಸ್ಪತ್ರೆಗೆ ಬಂದಾಗ ತಬಸ್ಸುಮ್ ನಿತ್ರಾಣ ಸ್ಥಿತಿಯಲ್ಲಿದ್ದಳು. ಯುವತಿಯ ತಲೆಯ ಹಿಂಬದಿಯಲ್ಲಿ, ಮೈಮೇಲೆ ಸಿಗರೇಟನಿಂದ ಸುಟ್ಟಿದ ಗಾಯದ ಗುರುತು ಪತ್ತೆಯಾಗಿವೆ. ಹೆಚ್ಚಿನ ಚಿಕಿತ್ಸೆಗೆ ಮಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಬಸ್ಸುಮ್ ಸಾವನ್ನಪ್ಪಿದ್ದಾಳೆ. ಮಗಳನ್ನು ಕೊಲೆ ಮಾಡಿದ್ದಾರೆಂದು ಮೃತ ತಬಸ್ಸುಮ್ ತಂದೆ ಇರ್ಷಾದ್ ಅಹ್ಮದ್ ಆರೋಪ ಮಾಡಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯನಗರ: ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ಧಾಳಿ ನಡೆಸಿದ್ದಾರೆ. ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ ಗಿಲ್ಲ ,ಚುನಾವಣೆಯಲ್ಲಿ ಅಂಬೇಡ್ಕರ್ ರನ್ನು 2 ಬಾರಿ ಸೋಲಿಸಿದರು. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ತಲವಾರಿನಿಂದ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 11:30 ಗಂಟೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ. ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರು ನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್‌ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಚುನಾವಣಾ ರ್ಯಾಲಿಗಳಲ್ಲಿ ಸೀರೆ ಮತ್ತು ಶರ್ಟ್ ಗಳನ್ನು ಉಡುಗೊರೆಯಾಗಿ ನೀಡುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ. ಸರ್ಕಾರಿ ಮತ್ತು ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ಮತ್ತು ಅವುಗಳ ಮೈದಾನಗಳನ್ನು ಸೇರಿದಂತೆ ರ್ಯಾಲಿಗಳಿಗೆ ಬಳಸಬಾರದು ಹೇಳಿದೆ. ಇದಲ್ಲದೆ, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಅವಧಿಯಲ್ಲಿ ಜಾಹೀರಾತುಗಳಿಗೆ ಸಮಾನ ಸ್ಥಳವನ್ನು ಪಡೆಯಬೇಕು ಅಂತ ತಿಳಿಸಿದೆ. ರ್ಯಾಲಿಗಳು ಮತ್ತು ಪಾದಯಾತ್ರೆಗಳಲ್ಲಿ ಯಾವುದೇ ಪಕ್ಷ ಅಥವಾ ಪಕ್ಷದ ಅಭ್ಯರ್ಥಿಗೆ ಟೋಪಿಗಳು, ಮುಖವಾಡಗಳು, ಸ್ಕಾರ್ಫ್ಗಳು ಇತ್ಯಾದಿಗಳನ್ನು ಬಳಸಬಹುದು ಎಂದು ಚುನಾವಣಾ ಆಯೋಗವು ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಸೀರೆ ಮತ್ತು ಶರ್ಟ್ ಗಳನ್ನು ಪಕ್ಷ ಅಥವಾ ರ್ಯಾಲಿಗಳಲ್ಲಿ ಅಭ್ಯರ್ಥಿ ವಿತರಿಸಲು ಸಾಧ್ಯವಿಲ್ಲ ಅಂತ ತಿಳಿಸಿದೆ. ಜಾಹೀರಾತಿಗಾಗಿ ಎಲ್ಲಾ ಪಕ್ಷಗಳು ಸಮಾನ ಸ್ಥಳವನ್ನು ಪಡೆಯಬೇಕು ಎಂದು ಆಯೋಗ ಹೇಳಿದೆ. ಆದರೆ ಖಾಸಗಿ ಸ್ಥಳಗಳು ಗೋಡೆಗಳ ಮೇಲೆ ಬರೆಯುವುದು, ಸ್ಥಳೀಯ ಕಾನೂನಿನ ಅಡಿಯಲ್ಲಿ ಭಿತ್ತಿಪತ್ರಗಳನ್ನು ಹಾಕುವುದು ಮುಂತಾದ ನಿರ್ಬಂಧಗಳನ್ನು ಅನುಸರಿಸಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಬೆಳಗಾವಿ ಹುಕ್ಕೇರಿಯಲ್ಲಿ ಅಕ್ಟೋಬರ್ 21 ರಂದು ಲಿಂಗಾಯಿತ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದ್ದು, ಅಷ್ಟರಲ್ಲಿ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳಬೇಕು. ಇಲ್ಲದೆ ಇದ್ದರೆ ಹುಕ್ಕೇರಿ ಸಮಾವೇಶದಲ್ಲಿ ವಿಧಾನಸೌಧ ಮುತ್ತಿಗೆಗೆ ಕರೆ ನೀಡುವುದಾಗಿ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾಡುತ್ತಿರುವ ಹೋರಾಟ 2 ವರ್ಷ ತಲುಪಿದೆ. ಆದರೂ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳದೆ ನುಣಿಚಿಕೊಳ್ಳುತ್ತಿದೆ ಎಂದರು. ಈಗಾಗಲೇ ಲಿಂಗಾಯತ ಸಮುದಾಯದ 31 ಉಪ ಪಂಗಡಗಳಿಗೆ 2 ಎ ಮೀಸಲಾತಿ ಸ್ಥಾನ ನೀಡಿದೆ. ಅದೇ ರೀತಿಯಲ್ಲಿ ಸರ್ಕಾರ ನಮ್ಮ ಸಮುದಾಯಕ್ಕೂ ನೀಡಲಿ ಎಂಬುವುದು ನಮ್ಮ ಹಕ್ಕೊತ್ತಾಯವಾಗಿದೆ ಎಂದು ಹೇಳಿದರು. ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳದೆ ಹೋದರೆ, ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿ ಲಿಂಗಾಯತರನ್ನು ಸೇರಿಸಿ ಹೋರಾಟ ನಡೆಸಲಾಗುವುದು ಎಂದು…

Read More

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಚಿವ ಸ್ಥಾನ ನೀಡಿದರೆ ಪಡೆಯುತ್ತೇನೆ. ಸಂಪು ವಿಸ್ತರಣೆ ಪಕ್ಷದ ಹಿರಿಯರಿಗೆ ಬಿಟ್ಟಿದ್ದು. ಅವರಿಗೆ ಸರಿ ಎನಿಸಿದರೇ ಕ್ಯಾಬಿನೆಟ್ ವಿಸ್ತರಿಸಲಿ ಭೇಡ ಅಂದ್ರೆ ಬೇಡ ಷಡ್ಯಂತ್ರದಿಂದ ನನ್ನನ್ನ ಪ್ರಕರಣದಲ್ಲಿ ಸಿಲುಕಿಸಿದರು ಎಂದರು. ನಾವು ಎಂದಿಗೂ ಹಿಂದುತ್ವ ಪರ. ಕಡುಬಡವ ಹಿಂದುಗಳಿಗೆ ಮೀಸಲಾತಿ ಸಿಗಬೇಕು. ಶ್ರೀಮಂತರ ಮೀಸಲಾತಿ ರದ್ಧಾಗಬೇಕು. ಎಸ್ ಎಸಿ ಮೀಸಲಾತಿ ಹೆಚ್ಚಿಸಿದ್ದು ಸಂವಿಧಾನಬದ್ಧವಾಗಿದೆಯಾ ಎಂದು ಸಿದ್ಧರಾಮಯ್ಯ ಕೇಳುತ್ತಾರೆ. ಇದನ್ನ ಸರ್ವಪಕ್ಷ ಸಭೆಯಲ್ಲೇ ಕೇಳಬೇಕಿತ್ತು . ಈಗ ಹೊರಗಡೆ ಬಂದು ಗೊಂದಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹಾಗೆಯೇ ಈಗ ಕುರುಬರಿಗೆ ಎಸ್ ಟಿ ಮೀಸಲಾತಿ ಕೊಡಬೇಕು ಎನ್ನುತ್ತಿದ್ದಾರೆ. ಹಿಂದೆ ಅವರ ಬಾಯಿಗೆ ಏನು ತುಂಬಿಕೊಂಡಿದ್ದರು ಎಂದು ಸಿದ್ಧರಾಮಯ್ಯ ವಿರುದ್ಧ ಕೆ.ಎಸ್ ಈಶ್ವರಪ್ಪ ಗುಡುಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಆರ್.ನಾಗರಾಜುರವರು18 ಮತಗಳನ್ನು ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ನರಸಮ್ಮರವರು 17 ಮತಗಳನ್ನು ಪಡೆದು ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾದ ಫಲಿತಾಂಶದ ವರದಿಯನ್ನು ಕೊರಟಗೆರೆಯ ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್ ಘೋಷಣೆ ಮಾಡಿದರು. ಇನ್ನೂ ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಟಿ.ಆರ್. ನಾಗರಾಜು ಮಾತನಾಡಿ, ಅಧ್ಯಕ್ಷನಾಗಲು ಸಹಕರಿಸಿದ ಎಲ್ಲಾ ಸದಸ್ಯರಿಗೂ ಧನ್ಯವಾದ ತಿಳಿಸಿ,  ಗ್ರಾಮ ಅಭಿವೃದ್ಧಿಗೆ ಶ್ರಮಿಸುತ್ತ, ಗ್ರಾಮದ ಸ್ವಚ್ಛತೆ, ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ ಹಾಗೂ ಶಾಶ್ವತವಾದ ಕೆಲವು ಕಾರ್ಯಕ್ರಮಗಳನ್ನು ಮಾಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ನೂತನ  ಅಧ್ಯಕ್ಷ,  ಉಪಾಧ್ಯಕ್ಷೆಗೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರುಗಳು ಶುಭ ಕೋರಿದರು. ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಈ…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದ ಕೆರೆಯು ಈ ಹಿಂದೆ ಸುರಿದ ಭಾರಿ ಮಳೆಯಿಂದ ಸುಮಾರು 18 ವರ್ಷಗಳ ನಂತರ ಕೋಡಿ ಬಿದ್ದಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ದೊಡ್ಡ ಮಟ್ಟದಲ್ಲಿ ಕೆರೆ ಕೋಡಿ ಬಿದ್ದಿದೆ. ಇದೇ ಸಂದರ್ಭದಲ್ಲಿ  ತುಮಕೂರು ಮಾರ್ಗವಾಗಿ ತೋವಿನಕೆರೆ ಬರುತ್ತಿದ್ದ   ಕಾರೊಂದು ಚಾಲಕನ ಸಹಿತ ಕೆರೆಕೋಡಿ ನೀರಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು. ಸ್ಥಳೀಯರ ಮತ್ತು ದಾಸಲುಕುಂಟೆ ಗ್ರಾಮದ ಸಿದ್ದರಾಜು ಮತ್ತು ಅವರ ಗೆಳೆಯರ ತಂಡ ಕಾರು ಚಾಲಕರನ್ನು ತಡರಾತ್ರಿಯಲ್ಲಿಯೇ ರಕ್ಷಣೆ ಮಾಡಿದ್ದಾರೆ. ನಂತರ ಬೆಳಿಗ್ಗೆ ಸ್ಥಳೀಯರು ಕಾರನ್ನು ಜೆಸಿಬಿ ಯಂತ್ರದ ಮೂಲಕ ಕಾರನ್ನು ಹೊರ ತೆಗೆದಿದ್ದಾರೆ ವರದಿ:  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು : ಪತ್ರಕರ್ತರ ಮೇಲೆ ಹಲ್ಲೆ ಯತ್ನ ನಡೆಸಿದ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಕಿವಿ ಮೂಗು ಗಂಟಲು ತಜ್ಞ ಡಾ. ನವೀನ್ ಹಾಗೂ  ಪತ್ರಕರ್ತರ ವಿರುದ್ಧವೇ ಸುಳ್ಳು ಪ್ರಕರಣ ದಾಖಲಿಸಿದ ಪಿಎಸ್ ‌ಐ ನಾಗರಾಜ್ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ತಾಲ್ಲೂಕು ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪತ್ರಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕೊರಟಗೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಪಘಾತಕ್ಕೊಳಗಾಗಿದ್ದ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ವೈದ್ಯರ ನಡೆಗೆ ಪತ್ರಕರ್ತರು ಆಸ್ಪತ್ರೆಗೆ ತೆರಳಿ ವರದಿ ಮಾಡಲು ವಿಡಿಯೋ ಮಾಡುತ್ತಿದ್ದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯ ಡಾ.ನವೀನ್ ಎಂಬುವವರು ಪತ್ರಕರ್ತರ ಮೇಲೆ ಹಲ್ಲೆ ಯತ್ನ ನಡೆಸಿದ್ದು, ಪತ್ರಕರ್ತರ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ ವೈದ್ಯರನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕೆಂದು ಕಾರ್ಯ ನಿರತ ಪತ್ರಕರ್ತರು ಆಗ್ರಹಿಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ ಪತ್ರಕರ್ತರು ವೈದ್ಯ ಡಾ.ನವೀನ್  ಹಾಗೂ ಸುಳ್ಳು ಪ್ರಕರಣ ದಾಖಲಿಸಿದ ಪಿ.ಎಸ್.ಐ. ನಾಗರಾಜು…

Read More