Author: admin

ತುಮಕೂರು: ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು-ಶಿರಾ ರಾಷ್ಟ್ರೀಯ ಹೆದ್ದಾರಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಬಳ್ಳಾರಿಯ ತಾವರಹಳ್ಳಿ ಮೂಲದ ನಾಗರಾಜ್ ಮೃತ ಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ತುಮಕೂರಿಂದ ಶಿರಾಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊಣಾಜೆ:  ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌‌ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಜಗನ್ನಾಥ (44) ಎಂಬುವವರು ಹೃದಾಯಾಘಾತದಿಂದ ನಿಧನರಾಗಿದ್ದಾರೆ. ಜಗನ್ನಾಥ ಅವರು ಕರ್ತವ್ಯದಲ್ಲಿದ್ದಾಗಲೇ ಅಸ್ವಸ್ಥರಾಗಿದ್ದು ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕೆತ್ಸೆ ಫಲಕಾರಿಯಾಗದೆ ನಿಧನರಾದರು. ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ: ಇದ್ದ ಸಂಪರ್ಕ ಸೇತುವೆ ಮಳೆಯಿಂದಾಗಿ ಮುರಿದು ಬಿದ್ದು ಒಂದು ವರ್ಷವಾಗಿದೆ ಈ ಊರಿಗೆ ಸಂಪರ್ಕ ಸೇತುವೆ ಇಲ್ಲದೆ ಜನರು ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದ್ದು, ಈವರೆಗೆ ಸಂಪರ್ಕ ಸೇತುವೆ ನಿರ್ಮಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾವಗಡ-ತುಮಕೂರು ಮಾರ್ಗದ ರಸ್ತೆಯನ್ನು ತಡೆದು ಪ್ರತಿಭಟಿಸಿದ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿ ಲಕ್ಲಿಹಟ್ಟಿ ಗ್ರಾಮದ ಜನರು, ಸಂಪರ್ಕ ಸೇತುವೆ ಇಲ್ಲದ ಕಾರಣ ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಿದರು. ತೀವ್ರವಾಗಿ ಮಳೆ ಸುರಿಯುತ್ತಿದ್ದು,  ಜೀವ ಹಾನಿ ಆಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಿರುಗಿ ನೋಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು,  ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ವರದಿ:  ಮಂಜುಸ್ವಾಮಿ. ಎಂ.ಎನ್ . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಾಲಕುಂಟೆ ಕೆರೆಯು 20 ವರ್ಷಗಳ ನಂತರ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿರುವುದು ಕಂಡು ಬಂದಿದೆ. 80 ಎಕರೆ ಅಧಿಕ ವಿಸ್ತೀರ್ಣ ಹೊಂದಿದ ಕೆರೆ ಇದಾಗಿದೆ. 2015 ರಲ್ಲಿ ಅರ್ಧ ಭಾಗದಷ್ಟು ಮಾತ್ರ ಈ ಕೆರೆಯು ತುಂಬಿತ್ತು. ಆ ಸಂದರ್ಭದಲ್ಲಿ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಮಠದ ಶ್ರೀಗಳಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿರವರು ಬಾಗಿನ ಅರ್ಪಿಸಿದ್ದರು. ಸುಮಾರು 16 ಹಳ್ಳಿಗಳ ಜೀವನಾಡಿಯಾಗಿರುವ ದಾಸಾಲಕುಂಟೆ ಕೆರೆ ಕೋಡಿ ಬಿದ್ದಿರುವುದನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ. ಕೆರೆ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದನ್ನು ಕಂಡು ಊರಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ವರದಿ:  ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಕ್ಕಿ ಹರಿಯುವ ನೀರಿನಲ್ಲಿ ಯುವಕರ ಮೋಜು ಮಸ್ತಿ ಮಾಡುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದ್ದು,  ನೋಡ ನೋಡುತ್ತಲೇ ತಂದೆ ಮಗ ನೀರಲ್ಲಿ ಕೊಚ್ಚಿ ಹೋದ ವಿಡಿಯೋ ವೈರಲ್ ಆಗಿದೆ. ನೀರಿನಲ್ಲಿ ಆಟವಾಡಲು ಹೋದ ಯುವಕ ಮತ್ತು ಬಾಲಕ ಇಬ್ಬರು ರಭಸದಿಂದ ಹರಿಯುತ್ತಿರುವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ಗ್ರಾಮಾಂತರದ ಗೂಳೂರು ಕೆರೆಯಲ್ಲಿ ನಡೆದಿದೆ. ಸ್ಥಳದಲ್ಲೇ ಇದ್ದ ಸ್ಥಳೀಯರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ ತಾಲೂಕಿನ ಗೂಳೂರು ಕೆರೆಯಲ್ಲಿ ನಡೆದಿದೆ. ಇನ್ನಾದರೂ ಸ್ಥಳೀಯ ಜಿಲ್ಲಾಡಳಿತ ಎಚ್ಚೆತ್ತು ಕೊಂಡು ತುಂಬಿ ಹರಿಯುತ್ತಿರುವ ಕೆರೆಗಳಿಗೆ ಭದ್ರತೆ ನಿಯೋಜನೆ ಮಾಡುತ್ತದೆಯಾ ನೋಡಬೇಕಿದೆ. ಜೊತೆಗೆ ಸಾರ್ವಜನಿಕರು ಕೂಡ ಜವಾಬ್ದಾರಿಯುತವಾಗಿ ವರ್ತಿಸಬೇಕಿದೆ. ಹರಿಯುವ ನೀರಿನಲ್ಲಿ ಆಟವಾಡುವುದು, ಹುಚ್ಚಾಟ ಆಡುವುದು ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಮಧುಗಿರಿ: ಬಳ್ಳಿ ಮತ್ತು ಮುಳ್ಳುಗಳು ರೆಕ್ಕೆಗೆ ಚುಚ್ಚಿ ಸಿಲುಕಿದ್ದ ರಾಷ್ಟ್ರೀಯ ಪಕ್ಷಿ ನವಿಲನ್ನು ಅರಣ್ಯ ಇಲಾಖೆ ರಕ್ಷಿಸಿದ ಘಟನೆ ನಡೆದಿದೆ. ದೊಡ್ಡೇರಿ ಗ್ರಾಮ ನಿವಾಸಿ ದೊಡ್ಡೇರಿ ಮಹಲಿಂಗಯ್ಯನವರು ಹೆಣ್ಣು ನವಿಲೊಂದು ಪೊದೆಯಲ್ಲಿ ಸಿಲುಕಿಕೊಂಡಿರುವುದನ್ನು ನೋಡಿ ತಕ್ಷಣವೇ ಅರಣ್ಯ ಇಲಾಖೆಅಧಿಕಾರಿಯಾದ ಮುತ್ತುರಾಜ್ ರವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಬಡವನಹಳ್ಳಿ ಮತ್ತು ತಿಮ್ಮಲಾಪುರ ಅರಣ್ಯ ರಕ್ಷಕರಾದ ಎಲ್ಲಪ್ಪ ಹಂಚಿನಾಳ್, ಚಿದಾನಂದ ಚೆನ್ನಾಗಿರಿ ಅಧಿಕಾರಿಯವರಿಗೆ ತಿಳಿಸಿದ್ದು, ತಕ್ಷಣ ನವಿಲು ಸಿಲುಕುಕೊಂಡಿರುವ ಸ್ಥಳಕ್ಕೆ ಆಗಮಿಸಿ ಸುಮಾರು ಒಂದು ವರ್ಷ ವಯಸ್ಸಿನ ಹೆಣ್ಣು ನವಿಲನ್ನು ರಕ್ಷಣೆ ಮಾಡಿದ್ದಾರೆ. ಪಕ್ಷಿಯು ಆಹಾರವಿಲ್ಲದೆ ಸುಸ್ತಾಗಿದ್ದು, ಇದೀಗ ನವಿಲನ್ನು ರಕ್ಷಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ನವಿಲಿಗೆ ಚಿಕಿತ್ಸೆ ನೀಡಿ, ಆರೈಕೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರಾದ ಡಿ.ಬಿ.ಮಂಜುನಾಥ್, ಕಾರ್ತಿಕ್, ಜಗದೀಶ್, ರವಿಚಂದ್ರ ಮುಂತಾದವರು ನವಿಲನ್ನು ರಕ್ಷಣೆ ಮಾಡಲು ಸಹಕರಿಸಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ ಬಂದಿದೆ. ನಕಲಿ ಛಾಪಾ ಕಾಗದದ ಮೂಲಕ ಡೀಲ್ ನಡೆಸುತ್ತಿದ್ದ ಹನ್ನೊಂದು ಆರೋಪಿಗಳ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಬಂಧಿತರಿಂದ ಒಟ್ಟು 1.33 ಕೋಟಿ ರೂ. ಮೌಲ್ಯದ 2664 ನಕಲಿ ಛಾಪಾ ಕಾಗದಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಒಡೆಯರ ಕಾಲದಿಂದ ಈವರೆಗಿನ ಛಾಪಾ ಕಾಗದಗಳು ಪತ್ತೆಯಾಗಿವೆ. ಈ ಗ್ಯಾಂಗ್ ಛಾಪಾ ಕಾಗದಗಳ ಮೂಲಕ ಪ್ರಾಪರ್ಟಿಗಳ ಜಿಪಿಎ ಮಾಡುತ್ತಿದ್ದರು. ನಾಲ್ಕು ಕಡೆ ನಕಲಿ ಛಾಪಾ ಕಾಗದ ಬಳಸಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. 1990,1995, 2002, 2009 ರಲ್ಲಿ ರಿಜಿಸ್ಟರ್ ಆಗಿರುವಂತೆ ದಾಖಲಾತಿ ಸೃಷ್ಟಿ ಮಾಡಿದ್ದಾರೆ. ನಾಲ್ಕು ಕೇಸ್ ನಲ್ಲಿ ಕೋಟ್ಯಂತರ ರೂಪಾಯಿಗಳ ಬೆಲೆ ಬಾಳುವ ಆಸ್ತಿಗಳ ಜಿಪಿಎ ಮಾಡಿದ್ದು ಬಯಲಿಗೆ ಬಂದಿದೆ. ಈ ಗ್ಯಾಂಗ್ ಒಂದು ಛಾಪಾ ಕಾಗದವನ್ನು ಐದರಿಂದ ಎಂಟು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಸಧ್ಯ ಆರೋಪಿಗಳಿಂದ 118 ನಕಲಿ ಸೀಲ್ ಗಳು ವಶಪಡಿಸಿಕೊಂಡಿದ್ದಾರೆ. ನಕಲಿ ಛಾಪಾ…

Read More

ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮತ್ತು ಮೆರವಣಿಗೆ ನಡೆಸುತ್ತಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಸಂಸತ್ ಭವನ ಮತ್ತು ರಾಷ್ಟ್ರಪತಿ ಭವನದ ಕಡೆಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಜಾಥಾ ಹೊರಟಿದ್ದರು. ಈ ವೇಳೆ ದೆಹಲಿ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೆಹಲಿ ಪೊಲೀಸರ ಮೇಲೆ ಹಲ್ಲೆ ಆರೋಪ: ಕಸ್ಟಡಿಗೆ ತೆಗೆದುಕೊಳ್ಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಪಕ್ಷದ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ನಾವು ದನಿ ಎತ್ತುತ್ತಿದ್ದೇವೆ. ಆದರೆ ಪೊಲೀಸರು ನಮಗೆ ಮುಂದುವರೆಯಲು ಅವಕಾಶ ನೀಡಲಿಲ್ಲ” ಎಂದು ಹೇಳಿದ್ದಾರೆ. “ಈ ಶಕ್ತಿಗಳನ್ನು ವಿರೋಧಿಸುವುದು ನಮ್ಮ ಕೆಲಸ. ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಕೆಲಸ. ಹಣದುಬ್ಬರ ಮತ್ತು ನಿರುದ್ಯೋಗದಂತಹ ಜನರ ಸಮಸ್ಯೆಗಳನ್ನು ತೊಡೆದುಹಾಕುವುದು ನಮ್ಮ ಕೆಲಸ…

Read More

ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ 2022 ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಲೈವ್ ಆಗಿದೆ. ಸಾಮಾನ್ಯ ಬಳಕೆದಾರರಿಗೆ, ಈ ಸೇಲ್ ಇಂದು ರಾತ್ರಿ ಮಧ್ಯರಾತ್ರಿಯಿಂದ ಪ್ರಾರಂಭವಾಗುತ್ತದೆ. ಪ್ರತಿ ವರ್ಷ ನಡೆಯುವ ಈ ಫ್ರೀಡಂ ಸೇಲ್‌ ನಲ್ಲಿ ಬಳಕೆದಾರರು ಸ್ಮಾರ್ಟ್‌ಫೋನ್‌ ಗಳು, ಎಲೆಕ್ಟ್ರಾನಿಕ್ ವಸ್ತುಗಳು, ಗೃಹೋಪಯೋಗಿ ವಸ್ತುಗಳು ಇತ್ಯಾದಿಗಳ ಮೇಲೆ ಭಾರೀ ರಿಯಾಯಿತಿ ಪಡೆಯಬಹುದು. ಕೆಲವು ದಿನಗಳ ಹಿಂದೆ, ಅಮೆಜಾನ್ ಈ ಮಾರಾಟದಲ್ಲಿ ಲಭ್ಯವಿರುವ ಪ್ರಮುಖ ಕೊಡುಗೆಗಳನ್ನು ಬಹಿರಂಗಪಡಿಸಿದೆ. ಈ ಸೇಲ್ ಆಗಸ್ಟ್ 10 ರ ಮಧ್ಯರಾತ್ರಿಯವರೆಗೆ ಇರುತ್ತದೆ. ಈ ಫ್ರೀಡಂ ಸೇಲ್ ನಲ್ಲಿ ಹೊಸದಾಗಿ ಬಿಡುಗಡೆಯಾದ OnePlus 10T , iQOO 9T ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಈ ವರ್ಷ ಪರಿಚಯಿಸಲಾದ ಬಜೆಟ್, ಮಿಡ್ ಬಜೆಟ್ ಮತ್ತು ಪ್ರೀಮಿಯಂ ಫೋನ್‌ಗಳ ಮೇಲೆ ಕೂಡಾ ರಿಯಾಯಿತಿ ಸಿಗಲಿದೆ. ಇದಲ್ಲದೆ, ಬಳಕೆದಾರರು ಸ್ಮಾರ್ಟ್ ಟಿವಿಗಳು, ಲ್ಯಾಪ್‌ಟಾಪ್‌ಗಳು, ಗೃಹೋಪಯೋಗಿ ವಸ್ತುಗಳು, ಇತ್ಯಾದಿಗಳ ಮೇಲೆ ರಿಯಾಯಿತಿ ಪಡೆಯಲಿದ್ದಾರೆ. ಅಮೆಜಾನ್ ಹೊರತುಪಡಿಸಿ, ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಸೇವಿಂಗ್ ಡೇಸ್…

Read More

ಪಿಎಸ್ ಐ  ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ ನಗರದಲ್ಲಿ ಸಿಐಡಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳನ್ನ ಬಂಧಿಸಿದ್ದಾರೆ. ಬಂಧಿತರು ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದೆ. ಇವರು ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಎಂಟು ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು. ಎಂಟು ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿತ್ತು. ಇವರು ನಗರದ ಎಸ್.ಬಿ.ಆರ್. ಮತ್ತು ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು. 1) ರವಿರಾಜ್ ಅಖಂಡೆ 2) ಪೀರಪ್ಪ ಹಾಸ್ಟೆಲ್‌ನಲ್ಲಿ ಕುಕ್ಕರ್ 3) ಶ್ರೀಶೈಲ್ 4) ಭಗವಂತರಾಯ್ 5) ಸಿದ್ದುಗೌಡ ಪಾಟೀಲ್ ಎಫ್‌ಡಿಎ 6) ಸೋಮನಾಥ್ 7) ಕಲ್ಲಪ್ಪ ಅಲ್ಲಾಪುರ ಕಾನ್ಸ್ಟೆಬಲ್ 8) ವಿಜಯಕುಮಾರ್ ಈ ಬಂಧಿತ ಅಭ್ಯರ್ಥಿಗಳು ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕ್ಯಾಂಡಿಡೆಟ್‌ಗಳು ಎಂದು ಹೇಳಲಾಗಿದೆ. ಇವರು ತಲಾ 40 ಲಕ್ಷಕ್ಕೂ ಅಧಿಕ ಹಣವನ್ನ ಕಿಂಗ್‌ ಪಿನ್ ಆರ್‌.ಡಿ. ಪಾಟೀಲ್‌…

Read More