Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ವಿಜಯಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ. ಏತ ನೀರಾವರಿ ಕಾಲುವೆಗೆ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ತಾಯಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರೇಣುಕಾ ಅಮೀನಪ್ಪ ಕೋನಿನ್(26) ಹಾಗೂ ಮಕ್ಕಳಾದಂತ ಯಲ್ಲವ್ವ(2) ಅಮೃತಾ(1) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು ಶವಗಳ ಪತ್ತೆಕಾರ್ಯ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಗಡಿ ವಿವಾದದ ಮಧ್ಯೆಯೇ ಎನ್ಸಿಪಿ ಶಾಸಕ ರೋಹಿತ್ ಪವಾರ್ ಕದ್ದುಮುಚ್ಚಿ ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ.ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಪವಾರ್ ಬೆಳಗಾವಿ ಭೇಟಿ ನೀಡಿದ್ದಾರೆ ಎನ್ನಲಾಗ್ತಿದೆ. ಗಡಿ ಉಸ್ತುವಾರಿ ಸಚಿವರ ಬೆಳಗಾವಿ ಭೇಟಿ ರದ್ದು ಖಂಡಿಸಿ ಮಹಾ ವಿಕಾಸ ಅಘಾಡಿ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ ರೋಹಿತ್ ಪವಾರ್ ಅವರಿಗೆ ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದು ರಾತ್ರೋರಾತ್ರಿ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ. ರೋಹಿತ್ ಪವಾರ್ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್ಸಿಪಿ ಶಾಸಕರಾಗಿದ್ದಾರೆ. ರೋಹಿತ್ ಪವಾರ್ ನಿನ್ನೆ ರಾತ್ರಿ ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿದರು ಎಂದು ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ ಬೆಳಗಾವಿ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಗಡಿ ಹೋರಾಟದಲ್ಲಿ…
ದಲಿತ ಸಿಎಂ ಬಳಿಕ ಕಾಂಗ್ರೆಸ್ ನಲ್ಲೀಗ ಮಹಿಳಾ ಸಿಎಂ ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ಎದ್ದಿತ್ತು. ಇದೀಗ ಈ ಬಳಿಕ ಮಹಿಳಾ ಮುಖ್ಯಮಂತ್ರಿ ಕೂಗು ಎದ್ದಿದೆ. ಈ ಬಗ್ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿಷಯವನ್ನು ಎತ್ತಿದ್ದಾರೆ. ಮಹಿಳಾ ಮುಖ್ಯಮಂತ್ರಿ ಬರಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಅದಕ್ಕೆ ತಕ್ಕ ವಾತಾವರಣ ನಿರ್ಮಾಣವಾಗಬೇಕಿದೆ. ನಾವು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಯಾಕೆ ಕೊಡಬಾರದು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಮಾತ್ರ ದಲಿತ ಸಿಎಂ ಸಾಧ್ಯ. ಬಿಜೆಪಿ ದಲಿತರನ್ನು ಒಡೆದು ಆಳುವ ನೀತಿ ಅನುರಸಿರುತ್ತಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವುದಕ್ಕೆ ಯೋಗ್ಯತೆ ಇರಲಿಲ್ಲ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಂಬೈ: 20 ಭಾರತೀಯ ನಕ್ಷತ್ರ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮೀರಾರೋಡ್ ಪಶ್ಚಿಮ ಉಪನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ನದೀಮ್ ಶುಜಾವುದ್ದೀನ್ ಶೇಖ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಸಾಗಣೆ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬೊರಿವಲಿಯ ಗಣಪತ್ ಪಾಟೀಲ್ ನಗರ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, 20 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಮೆಗಳ ಒಟ್ಟು ಮೊತ್ತ ಸುಮಾರು 3.5 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ ಎಂದು ಎಂಎಚ್ ಬಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಅಶ್ಲೀಲ ಚಿತ್ರ ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಾಜ್ ಕುಂದ್ರಾ ಮಾತ್ರವಲ್ಲದೇ ಈ ಪ್ರಕರಣದಲ್ಲಿ ನಟಿಯರಾದ ಶೆರ್ಲಿನಾ ಚೋಪ್ರಾ, ಪೂನಂ ಪಾಂಡೆಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನು ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ನೀಡಲಾಗಿದೆ. ಮಗೆ ನಿರೀಕ್ಷಣಾ ಜಾಮೀನು ಸಿಗುವತನಕ ಮುಖಮುಚ್ಚಿಕೊಂಡೇ ಓಡಾಡುವುದಾಗಿ ಶಪಥ ಮಾಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹೆಚ್.ಡಿ.ಕೋಟೆ: ತಾಲೂಕಿನ ನುಗು ಬಿರ್ವಾಳು ಗ್ರಾಮದ ಶ್ರೀ ಕಾಳಮಂಟೇಶ್ವರ ದೇವಸ್ಥಾನ ಮುಂಭಾಗದಲ್ಲಿ ಶ್ರೀ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಹೋತ್ಸವದ ಅಂಗವಾಗಿ ದೇವಸ್ಥಾನವನ್ನು ವಿವಿಧ ಬಗೆಯ ಬಣ್ಣಗಳಿಂದ ಬಳಿದು ಸಿಂಗಾರಿಸಲಾಗಿತ್ತು. ದೇವಸ್ಥಾನವನ್ನು ವಿದ್ಯುತ್ ದೀಪಾಲಂಕಾರಗೊಳಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೋರಣ ಕಟ್ಟಿ ಮಧುವಣಗಿತ್ತಿಯಂತೆ ಅಲಂಕೃತಗೊಳಿಸಲಾಗಿತ್ತು. ವಾದ್ಯಗೋಷ್ಠಿಗಳು ಮೊಳಗಿದವು. ಬೆಳಗ್ಗೆ 7 ಕ್ಕೆ ದೇವರಿಗೆ ಗಣಪತಿ ಪೂಜೆ, ವಿವಿಧ ಹೋಮ ಹವನಗಳು ನಡೆದವು. ದೇವರ ಉತ್ಸವ ಮೂರ್ತಿಯನ್ನು ಗಂಗೆಸ್ನಾನ ಮಾಡಿಸಿ, ನಂತರ ದೇವಸ್ಥಾನದ ಬಳಿಗೆ ಕರೆತಂದು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬಸವೇಶ್ವರ ಮೂರ್ತಿಯನ್ನೂ ಪ್ರತಿಷ್ಠಾಪಿಸಿ, ಮಹಾಮಂಗಳಾರತಿ ನಡೆಸಲಾಯಿತು. ಭಕ್ತರು ದಾರಿಯುದ್ದಕ್ಕೂ ದೇವರ ಭಜನೆ ನಡೆಸಿಕೊಟ್ಟರು. ನುಗು ಜಲಾಶಯದ ನಾಲೆ ಸಮೀಪದಲ್ಲೇ ದೇವಸ್ಥಾನವಿರುವುದರಿಂದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹರಕೆ ತೀರಿಸಿದರು. ಬಿಜೆಪಿ ಮುಖಂಡ ಡಾ.ಎಚ್.ವಿ.ಕೃಷ್ಣಸ್ವಾಮಿ, ಆಪ್ತ ಕಾರ್ಯದರ್ಶಿ ಶಿವಕುಮಾರ್, ಹೊಸ ಬಿರ್ವಾಳು, ನುಗು ಬಿರ್ವಾಳು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ವರದಿ:…
ಕರ್ನಾಟಕ ಸರ್ಕಾರವು, ದುರ್ಬಲ ವರ್ಗಗಳ ಜನರಿಗೆ, ಅದರಲ್ಲಿಯೂ ವಿಶೇಷವಾಗಿ ಕೊಳಗೇರಿ ನಿವಾಸಿಗಳು, ದಿನಗೂಲಿ ನೌಕರರು ಹಾಗೂ ಸಮಾಜದ ಆರ್ಥಿಕವಾಗಿ ಬಲಹೀನವಾಗಿರುವ ಸಮಾಜದ ಜನರಿಗೆ ಪ್ರಾಥಮಿಕ ಆರೋಗ್ಯಸೇವಾ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ, ಡಿಸೆಂಬರ್ 14(ನಾಳೆ) ರಂದು 114 ‘ನಮ್ಮ ಕ್ಲಿನಿಕ್’ಗಳನ್ನು ಉದ್ಘಾಟಿಸಲಿದೆ. ಈ ಚಿಕಿತ್ಸಾಲಯಗಳಲ್ಲಿ 12 ವಿವಿಧ ರೀತಿಯ ಆರೋಗ್ಯ ಸೇವೆಗಳು ಲಭ್ಯವಿದ್ದು, ಪ್ರತಿ ಕ್ಲಿನಿಕ್ ನಲ್ಲಿ ಓರ್ವ ವೈದ್ಯಕೀಯ ಅಧಿಕಾರಿ, ಓರ್ವ ಶುಶ್ರೂಷಕಿ, ಲ್ಯಾಬ್ ಟೆಕ್ನಿಷಿಯನ್ ಹಾಗೂ ಓರ್ವ ‘ಡಿ’ ಗ್ರೂಪ್ ಕಾರ್ಮಿಕರಿರುತ್ತಾರೆ.ಈ ಯೋಜನೆಗೆ ರೂ.೧೫೦ ಕೋಟಿ ವೆಚ್ಚವಾಗಲಿದ್ದು, ಬಹುಪಾಲು ಕ್ಲಿನಿಕ್ ಗಳು ಸರ್ಕಾರಿ ಕಟ್ಟಡಗಳಲ್ಲಿ ಕಾರ್ಯನಿರ್ವಹಣೆಯನ್ನು ಆರಂಭಿಸಲಿದೆ. “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14ರಂದು ಈ ‘ನಮ್ಮ ಕ್ಲಿನಿಕ್’ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಆರಂಭದಲ್ಲಿ ರಾಜ್ಯಾದ್ಯಂತ ಒಂದೇ ಬಾರಿಗೆ 114 ಕ್ಲಿನಿಕ್ ಗಳನ್ನು ಉದ್ಘಾಟಿಸಲಾಗುವುದು. ಇದು ಚರಿತ್ರೆಯಲ್ಲೇ ಮೊಟ್ಟ ಮೊದಲ ಬಾರಿಗೆ ಒಟ್ಟಿಗೆ ೧೦೦ಕ್ಕೂ ಹೆಚ್ಚು ಸಂಖ್ಯೆಯ ಕ್ಲಿನಿಕ್ ಗಳನ್ನು ಉದ್ಘಾಟಿಸುತ್ತಿರುವ ಕಾರ್ಯಕ್ರಮವಾಗಿದೆ. ಇದು ಸಾರ್ವಕಾಲಿಕ ದಾಖಲೆಯಾಗಲಿದೆ,” ಎಂದು ಆರೋಗ್ಯ…
ಬೆಂಗಳೂರಿನಲ್ಲಿ ಇಂದಿನಿಂದ ಜಿ 20 ಶೃಂಗಸಭೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಹೊರವಲಯದಲ್ಲಿರುವ ದೇವನಹಳ್ಳಿಯ ಪ್ರೆಸ್ಟಿಜ್ ಗಾಲ್ಪ್ ಶೈರ್ ಜೆಡಬ್ಯ್ಲೂ ಮ್ಯಾರಿಯಟ್ ಹೋಟೆಲ್ ನಲ್ಲಿ ಶೃಂಗಸಭೆ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹಲವು ದೇಶಗಳ ಹಣಕಾಸು ಕಾರ್ಯದರ್ಶಿ ಗಳು ಸೇರಿದಂತೆ ಹಲವು ಗಣ್ಯರು ಜಿ20 ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಅತಿಥಿಗಳ ಭದ್ರತೆಗೆ 6 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸುಮಾರು 700 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಐದು ದಿನ ಈ ಸಭೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರು : ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ, ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಕೂಡ ಚರ್ಚೆ ನಡೆಸಲಿದ್ದೇನೆ ಎಂದರು. ಗಡಿ ವಿವಾದದ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನು ಗೃಹ ಸಚಿವರ ಮುಂದಿಡುತ್ತೇನೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpagaxhmLTkOnd50sAy
ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ಪೊಲೀಸ್ ತಂಡ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದ್ದಾರೆ. ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವ ವೇಳೆ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ರಾಜಾ ಪಟೇರಿಯಾ ವಿವಾದ ಸೃಷ್ಟಿಸಿದ್ದರು. ಅಂದಹಾಗೆ ರಾಜಾ ಪಟೇರಿಯಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy