Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಬೆಂಗಳೂರು: ಕರ್ನಾಟಕದ ನಂದಿನಿಯನ್ನು ಗುಜರಾತ್ ನ ಅಮುಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಗೃಹ ಸಚಿವ ಅಮಿತ್ ಶಾ ನಂದಿನಿ ಹಾಗೂ ಅಮೂಲ್ ವಿಲೀನ ವಿಚಾರವನ್ನು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಸೃಷ್ಟಿಯಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಂದಿನಿ ವಿಲೀನವಾಗಲಿದೆ ಎಂದು ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ ಎಂದಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದು ಸಮರ್ಥಿಸಿಕೊಂಡರು. ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ…
ಪಾವಗಡ : ಪಾವಗಡ ಪಟ್ಟಣದ ಹಿಂದೂಪುರ ರಸ್ತೆಯ ಬದಿಯ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನಿರ್ಗತಿಕರ ಜೊತೆಯಲ್ಲಿ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಹಾಗೂ ತಂಡ ಕೇಕ್ ಕತ್ತರಿಸಿ, ಗುಡಿಸಲು ವಾಸಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸಿ ವಿಭಿನ್ನವಾಗಿ ಹೊಸ ವರ್ಷವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಮಾರ್ಗದರ್ಶಕರಾದ ಸಂಧ್ಯಾ ಮಾನಂ ಶಶಿಕಿರಣ್, ಇಂದು ನಿರ್ಗತಿಕರು ಚಳಿ, ಮಳೆ, ಬಿಸಿಲನ್ನದೇ ತಮ್ಮ ಜೀವನೋಪಯವನ್ನು ನಡೆಸುತ್ತಿದ್ದೂ, ಇಂತವರ ಮುಖದಲ್ಲಿ ಮಂದಹಾಸವನ್ನು ನೋಡುವ ಸಲುವಾಗಿ ಹೊಸ ವರ್ಷ ದಲ್ಲಿ ಇವರ ಜೊತೆಯಲ್ಲಿ ಕೇಕ್ ಕತ್ತರಿಸಿ ಶುಭಾಶಯಗಳನ್ನು ತಿಳಿಸಿ, ಇವರ ಜೀವನ ಸುಖಕರವಾಗಿರಲೆಂದು ಆಶಿಸಿ, ಇಲ್ಲಿ ನೆಲೆಸಿರುವ ನಿರ್ಗತಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲಾ ಬ್ಯಾಗ್ ವಿತರಿಸಿ ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಪೋಷಕರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ರೂವಾರಿಗಳು ಅಧ್ಯಕ್ಷರು ಆದಂತಹ ಮಾನಂ ಶಶಿಕಿರಣ್,ಚಿರಂಜೀವಿ ಫ್ಯಾನ್ಸ್ ಕ್ಲಬ್ ನ ವೀರ, ಹೆಲ್ಪ್ ಸೊಸೈಟಿ ತಂಡದ…
ಪಾವಗಡ: ಕನ್ನಡದಲ್ಲಿ ವೈವಿಧ್ಯಮಯವಾದ ಕತೆ, ಕವನ, ಮಹಾಕಾವ್ಯ ಇತ್ಯಾದಿಗಳ ಮೂಲಕ ರಸ ಸಾಹಿತ್ಯವನ್ನು ಕಟ್ಟಿಕೊಟ್ಟ ರಸಋಷಿ ಕವಿ ಕುವೆಂಪು ಎಂದು ಉಪನ್ಯಾಸಕರಾದ ಆಂಜನೇಯಲು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕವು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆಯ ಕುವೆಂಪು ಗೀತಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವ ವಿಶ್ವಮಾನವನಾಗುವುದು ಹೇಗೆ? ಎಂಬ ಅಂಶಗಳನ್ನು ಕವಿ ತನ್ನ ಸಾಹಿತ್ಯದಲ್ಲಿ ಸ್ಪಷ್ಟವಾಗಿ ತಿಳಿಸಿಕೊಟ್ಟಿದ್ದಾರೆ. ಅವರಲ್ಲಿನ ದೂರದೃಷ್ಟಿ ಮತ್ತು ವೈಚಾರಿಕತೆ ಬರಹಗಳು ಮಾನವನ ಜೀವನವನ್ನೇ ಬದಲಿಸುತ್ತವೆ. ಹಾಗಾಗಿ ಪ್ರತಿಯೊಬ್ಬರು ಕುವೆಂಪುರವನ್ನು ಓದಬೇಕು ಎಂದರು. ಕನ್ನಡ ಉಪನ್ಯಾಸ ಅನಿಲ್ ಕುಮಾರ್ ಮಾತನಾಡಿ, ರಾಷ್ಟಕವಿ ಕುವೆಂಪುರವರು ವಿಶ್ವಮಾನವ ಸಂದೇಶವನ್ನು ಸಾಹಿತ್ಯದ ಮೂಲಕ ನೀಡಿದ್ದಾರೆ. ಅವರ ಪಂಚಮಂತ್ರಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕು ಎಂದರು. ಕಸಾಪ ಹೋಬಳಿ ಅಧ್ಯಕ್ಷ ಹೊ.ಮ.ನಾಗರಾಜು, ಕಾರ್ಯದರ್ಶಿ ಚಂದ್ರಶೇಖರ್ ಮುದ್ರಾಡಿ, ಶಿಕ್ಷಕಿ ವಿದ್ಯಾಶ್ರೀ ಮಾತನಾಡಿದರು. ವಾಸವಿ ವಿದ್ಯಾನಿಕೇತನ ಮತ್ತು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಕುವೆಂಪು ಗೀತಗಳ ಗಾಯನ ಮಾಡಿದರು. ಇದೇ ವೇಳೆ ಶಾಲಾ ಗ್ರಂಥಾಲಯಕ್ಕೆ…
ಚಿಕ್ಕಮಗಳೂರು: ಜಿಲ್ಲೆಯ ತರೀಕರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ಗಜಪಡೆ ದಾಂಧಲೆಯಿಂದ ರೈತರು ಕಂಗೆಟ್ಟಿದ್ದು, ಕಾಡಾನೆಗಳು ಕೃಷಿ ಭೂಮಿಗೆ ದಾಳಿಯಿಟ್ಟು ನಾಶ ಮಾಡುತ್ತಿರುವುದು ರೈತರಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕಾಡಾನೆ ದಾಂಧಲೆಯಿಂದ ಸುಮಾರು ನಾಲ್ಕು ಎಕರೆ ಅಡಿಕೆ, ಬಾಳೆ ನಾಶವಾಗಿದ್ದು, ಹಿಂಡು—ಹಿಂಡಾಗಿ ಬರುವ ಆನೆಗಳು ಕೃಷಿ ಭೂಮಿಯನ್ನು ಧ್ವಂಸ ಮಾಡುತ್ತಿವೆ.ಘಟನೆ ಹಿನ್ನೆಲೆಯಲ್ಲಿ ತಣಿಗೆಬೈಲು ಭದ್ರಾ ವನ್ಯಜೀವಿ ವಿಭಾಗದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಇನ್ನೂ ಆನೆಗಳ ಉಪಟಳ ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು. ನಿರಂತರವಾಗಿ ಆನೆಗಳ ದಾಳಿ ನಡೆಯುತ್ತಿದ್ದರೂ, ಇಲಾಖೆ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ತಕ್ಷಣವೇ ಆನೆ ದಾಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಗಳೂರು: ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ಎಫ್ ಯೋಧರಾಗಿದ್ದಾರೆ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದರು. 142ನೇ ಬಟಾಲಿಯನ್ ಒಡಿಶಾದಲ್ಲಿ ಕರ್ತವ್ಯದಲ್ಲಿದ್ದು, ರಜೆಯ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದರು. ಶನಿವಾರ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರಗೂರು: ವಿಕಲಚೇತನ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸಲು ಹಾಗೂ ಕೌಶಲ್ಯಯುತರನ್ನಾಗಿಸಲು ಅಂಗವಿಕಲ ಮಕ್ಕಳ ಶಿಶು ಕೇಂದ್ರಿಕೃತ ಶೈಕ್ಷಣಿಕ ಯೋಜನೆ ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಹೇಳಿದರು. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ವಿಕಲಚೇತನರ ಗ್ರಾಮ ಸಭೆಯನ್ನು ಶುಕ್ರವಾರ ಹಮ್ಮಿಕೊಂಡಿದ್ದ ವಿಕಲಚೇತನರ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರಿಗೆ ಮೀಸಲಿಟ್ಟಿರುವ ಶೇ.5ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಸಲಹೆ ನೀಡಿದರು. ಡಿಸೆಂಬರ್ನಲ್ಲಿ ತಿಂಗಳಲ್ಲಿ ಅಂಗವಿಕಲರಿಗೆ ಸಮನ್ವಯ ಗ್ರಾಮಸಭೆ ನಡೆಸಬೇಕು. ಗ್ರಾಮ ಪಂಚಾಯಿತಿಗಳ ಅನುದಾನದಲ್ಲಿ ಶೇ 5 ರಷ್ಟು ಮೀಸಲಿಟ್ಟು, ಮಾರ್ಗಸೂಚಿಗಳಂತೆ ಖರ್ಚು ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ–2016 ಹೇಳುತ್ತದೆ ಎಂದು ತಿಳಿಸಿದರು. ನಂತರ ತಾಲ್ಲೂಕು ಎಂಆರ್ಡಬ್ಲೂಯು ದೇವರಾಜು ಮಾತನಾಡಿ, ಪಂಚಾಯಿತಿ ಹಂತದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ವಿಕಲಚೇತನರ ಗ್ರಾಮಸಭೆಗಳಿಗೆ ಕಡ್ಡಾಯವಾಗಿ ಆಹ್ವಾನಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ ಅಧಿಕಾರಿ…
ಹೆಚ್.ಡಿ.ಕೋಟೆ: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ರಾತ್ರಿ ಕಾವಲುಗಾರ ಸಾವನ್ನಪ್ಪಿದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಚ್.ಡಿ.ಕೋಟೆ ಮೇಟಿಕುಪ್ಪೆ ಅರಣ್ಯ ಪ್ರದೇಶದ ಸೊಳ್ಳಾಪುರ ಬಳಿ ಘಟನೆ ನಡೆದಿದೆ. ಮಹದೇವಸ್ವಾಮಿ (36) ಮೃತಪಟ್ಟ ಕಾವಲುಗಾರರಾಗಿದ್ದಾರೆ. ಇವರು ಸುಮಾರು ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಹಂಗಾಮಿ ಕಾವಲುಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನೆ ನಡೆದ ವೇಳೆ ಮಹದೇವಸ್ವಾಮಿ ಹಾಗೂ ಮತ್ತೊಬ್ಬ ವಾಚರ್ ರಾಜೇಶ ಎಂಬವರಿದ್ದರು. ಆದರೆ ರಾಜೇಶ್ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಹದೇವಸ್ವಾಮಿ ಮೃತದೇಹ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ಪಟ್ಟಣದ ಹಿರಣ್ಣಯ್ಯ ಬಯಲು ರಂಗಮಂದಿರದ ಆವರಣದಲ್ಲಿ ಜನವರಿ 2ರಂದು ಮಾದಿಗ ಜನಾಂಗದ ಬೃಹತ್ ಸಮ್ಮೇಳನ ಹಾಗೂ ಒಳ ಮೀಸಲಾತಿ ಹೋರಾಟದ ಸಮಾವೇಶವನ್ನು ನಡೆಯಲಿದ್ದು, ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಮಾವೇಶಕ್ಕೆ ಸುಮಾರು 10 ಸಾವಿರ ಜನ ಭಾಗವಹಿಸಲಿದ್ದು, ಸಮಾವೇಶದಲ್ಲಿ ಸಮಾಜದ ಬಾಂಧವರಿಗೆ ಊಟದ ವ್ಯವಸ್ಥೆ, ನೀರಿನ ವ್ಯವಸ್ಥೆ, ಬೃಹತ್ ವೇದಿಕೆ, ನೆರಳಿಗಾಗಿ ಶಾಮಿಯಾನ ಎಲ್ಲವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಇದರ ನೇತೃತ್ವ ವಹಿಸಿಕೊಂಡಿರುವ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಟಿ.ಕೆ. ಚಿದಾನಂದ್ ರವರು ಮಾತನಾಡಿ, ಈ ಸಮಾವೇಶಕ್ಕೆ ಮಾದಿಗ ಜನಾಂಗದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನಸಂಖ್ಯೆಯ ಬಲವನ್ನ ಪ್ರದರ್ಶಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಧ್ಯಮದ ಮೂಲಕ ಮನವಿ ಮಾಡಿಕೊಂಡರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ : ಕನ್ನಡ ಸಾಹಿತ್ಯಕ್ಕೆ ಹಲವು ಪ್ರಥಮಗಳ ಕೀರ್ತಿ ತಂದು ಕೊಟ್ಟ ಕವಿ ರಾಷ್ಟಕವಿ ಕುವೆಂಪು ರವರು ಎಂದು ಗಡಿನಾಡು ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷ ಪಿ.ಹರಿಕೃಷ್ಣ ತಿಳಿಸಿದರು. ಪೋತಗಾನಹಳ್ಳಿಯ ಕುವೆಂಪು ವೃತ್ತದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನಪೀಠ, ಪಂಪ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಥಮಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ದೊರಕಿಸಿಕೊಟ್ಟ ಕೀರ್ತಿ ಕುವೆಂಪು ರವರದ್ದು. ಆಡುಮುಟ್ಟದ ಸೊಪ್ಪಿಲ್ಲ ಕುವೆಂಪು ಬರೆಯದ ಸಾಹಿತ್ಯ ಬಗೆ ಇಲ್ಲ ಎಂಬಂತೆ ಎಲ್ಲಾ ವಿಧಧ ಕನ್ನಡ ಸಾಹಿತ್ಯವನ್ನು ಬರೆದಿದ್ದಾರೆ. ತಮ್ಮ ಸಾಹಿತ್ಯದಲ್ಲಿ ವೈಚಾರಿಕತೆಗೆ ಹೆಚ್ಚು ಒತ್ತು ನೀಡಿದ್ದಾರೆ. ಜಗತ್ತಿಗೆ ವಿಶ್ವಮಾನವ ಸಂದೇಶವನ್ನು ನೀಡಿದ್ದಾರೆ. ಹಾಗಾಗಿಯೇ ಅವರ ಜನ್ಮ ದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂತಹ ಕವಿಗಳನ್ನು ಪಡೆದ ಕನ್ನಡಿಗರಾದ ನಾವೇ ಧನ್ಯರು ಎಂದು ತಿಳಿಸಿದರು. ವೃತ್ತದಲ್ಲಿರುವ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಾಡಗೀತೆಯ ಮೂಲಕ ಗೌರವ ಸಲ್ಲಿಸಲಾಯಿತು. ಕಸಾಪ ಹೋಬಳಿ ಘಟಕದ ಅಧ್ಯಕ್ಷ ಹೊ.ಮ.ನಾಗರಾಜು, ಕಾರ್ಯದರ್ಶಿ ಚಂದ್ರಶೇಖರ್ ಮುದ್ರಾಡಿ, ಮುಖ್ಯಶಿಕ್ಷಕರಾದ ರಾಮಾಂಜಿನೇಯ…
ಚೀನಾ ಸೇರಿದಂತೆ ಆರು ದೇಶಗಳಿಂದ ಬರುವವರಿಗೆ ಆರ್ಟಿಪಿಸಿಆರ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಲಾಗಿದೆ. RTPCR ಪ್ರಮಾಣಪತ್ರದ ಅವಶ್ಯಕತೆಯು ಚೀನಾ, ಹಾಂಗ್ ಕಾಂಗ್, ಸಿಂಗಾಪುರ್, ಜಪಾನ್, ದಕ್ಷಿಣ ಕೊರಿಯಾ ಮತ್ತು ಥೈಲ್ಯಾಂಡ್ನಿಂದ ಬರುವವರಿಗೆ ಅನ್ವಯಿಸುತ್ತದೆ. ದೆಹಲಿ ಸೇರಿದಂತೆ ವಿಮಾನ ನಿಲ್ದಾಣಗಳಲ್ಲಿ, ಏರ್ ಸುವಿಧಾ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾದ RTPCR ಪರೀಕ್ಷಾ ಫಲಿತಾಂಶಗಳನ್ನು ಪರಿಶೀಲಿಸಲಾಗುತ್ತಿದೆ. ಈ ಷರತ್ತನ್ನು ಹೆಚ್ಚಿನ ದೇಶಗಳಿಗೆ ಅನ್ವಯಿಸಬೇಕೆ ಎಂಬ ಬಗ್ಗೆಯೂ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ರೋಗಲಕ್ಷಣಗಳನ್ನು ಹೊಂದಿರುವವರು ಮತ್ತು ರೋಗವನ್ನು ದೃಢಪಡಿಸಿದವರನ್ನು ಕ್ವಾರಂಟೈನ್ಗೆ ದಾಖಲಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವ್ಯ ತಿಳಿಸಿದ್ದಾರೆ. ಕಳೆದ ಶನಿವಾರದಿಂದ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಆರಂಭವಾಗಿದೆ. ಎರಡು ಪ್ರತಿಶತದಷ್ಟು ಅಂತರರಾಷ್ಟ್ರೀಯ ಪ್ರಯಾಣಿಕರು ಮತ್ತು ಚೀನಾ, ಜಪಾನ್, ಥೈಲ್ಯಾಂಡ್, ಹಾಂಗ್ ಕಾಂಗ್ ಮತ್ತು ದಕ್ಷಿಣ ಕೊರಿಯಾದ ಎಲ್ಲಾ ಪ್ರಯಾಣಿಕರು RTPCR ನಿಂದ ಪರೀಕ್ಷಿಸಲ್ಪಡುತ್ತಾರೆ. ಕಳೆದ ಎರಡು ದಿನಗಳಲ್ಲಿ, ದೃಢಪಡಿಸಿದ ಕೋವಿಡ್ -19 ರೋಗಿಗಳ ಮಾದರಿಗಳನ್ನು ಅನುವಂಶಿಕ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ. ಆನುವಂಶಿಕ ವರ್ಗೀಕರಣದ ಫಲಿತಾಂಶವು ತಿಳಿದುಬಂದಾಗ ಮುಂದಿನ…